ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಳಗಾವಿ

T20 World Cup final: ಟಿ20 ವಿಶ್ವಕಪ್ ಫೈನಲ್‌; ಟೀಂ ಇಂಡಿಯಾ ಗೆಲುವಿಗಾಗಿ ಬೆಳಗಾವಿ ಸೇರಿ ರಾಜ್ಯದ ವಿವಿಧೆಡೆ ದೇವಸ್ಥಾನಗಳಲ್ಲಿ ಅಭಿಮಾನಿಗಳ ಪೂಜೆ

ಟೀಂ ಇಂಡಿಯಾ ಗೆಲುವಿಗಾಗಿ ರಾಜ್ಯದ ವಿವಿಧೆಡೆ ಅಭಿಮಾನಿಗಳ ಪೂಜೆ

ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ ಟೀಂ ಇಂಡಿಯಾ ಗೆಲುವಿಗಾಗಿ ದೇಶಾದ್ಯಂತ ದೇವಸ್ಥಾನಗಳಲ್ಲಿ ಅಭಿಮಾನಿಗಳು ಪೂಜೆ ಸಲ್ಲಿಸಿದ್ದಾರೆ. ಅದೇ ರೀತಿ ರಾಜ್ಯದ ಬೆಳಗಾವಿ, ಮೈಸೂರು ಸೇರಿ ವಿವಿಧೆಡೆ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿದೆ.

ಶಕ್ತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣ, ಸ್ವಾಭಿಮಾನದ ಸಂಕೇತ: ಹೆಬ್ಬಾಳ್ಕರ್

ಶಕ್ತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣದ ಸಂಕೇತ: ಹೆಬ್ಬಾಳ್ಕರ್

Laxmi Hebbalkar: ಗ್ರಾಮೀಣ ಮಹಿಳೆಯರ ಸಶಕ್ತೀಕರಣಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೊಡುಗೆ ಬಹಳ ದೊಡ್ಡದಿದೆ. ಗ್ರಾಮೀಣ ಜನರ ಆರ್ಥಿಕ ಸಬಲೀಕರಣಕ್ಕೆ ಕೂಡ ಬಸ್‌ಗಳ ಕೊಡುಗೆ ಮಹತ್ವದ್ದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

BDCC Bank: 120 ಕೋಟಿ ಸಾಲದ ಸುತ್ತ ಅನುಮಾನದ ಹುತ್ತ

120 ಕೋಟಿ ಸಾಲದ ಸುತ್ತ ಅನುಮಾನದ ಹುತ್ತ

ಗುತ್ತಿಗೆದಾರ ಜಯಶೀಲ ಶೆಟ್ಟಿ ಎಂಬುವವರಿಗೆ ಸೇರಿದ್ದ ಬೆಳಗಾವಿ ಹೃದಯಭಾಗ ಶ್ರೀನಗರ ದಲ್ಲಿರುವ 5.1 ಎಕರೆ ಜಮೀನಿನ ಪೈಕಿ 4 ಎಕರೆಗೆ ಬಿಡಿಸಿಸಿ ಬ್ಯಾಂಕ್ 120 ಕೋಟಿ ರು.ಸಾಲ ನೀಡಿದೆ. ಆದರೆ ಬ್ಯಾಂಕ್ ಆಡಳಿತ ಮಂಡಳಿ ಸಮರ್ಪಕ ದಾಖಲೆ ಪರಿಶೀಲನೆ ನಡೆಸದೆ ದೊಡ್ಡ ಮೊತ್ತದಲ್ಲಿ ಸಾಲ ನೀಡಲಾಗಿದೆ ಎಂದು ಕೆಲ ಮುಖಂಡರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ದೇವರೇ ನನ್ನ ಅತ್ತೆ ಸಾಯಲಿ; ಬೆಳಗಾವಿಯ ಹುಲಿಕಾಂತೇಶ್ವರನಿಗೆ ಸೊಸೆಯಿಂದ ಹರಕೆ ಚೀಟಿ!

ನನ್ನ ಅತ್ತೆ ಸಾಯಲಿ; ಬೆಳಗಾವಿಯ ಹುಲಿಕಾಂತೇಶ್ವರನಿಗೆ ವಿಚಿತ್ರ ಹರಕೆ ಚೀಟಿ!

ಬೆಳಗಾವಿ ಜಿಲ್ಲೆಯ ಮುಗಳಖೋಡ ಪಟ್ಟಣ ಸಮೀಪದ ಖಣದಾಳ ಗ್ರಾಮದ ಹುಲಿಕಾಂತೇಶ್ವರ ದೇವರ ಹುಂಡಿಯಲ್ಲಿ ವಿಚಿತ್ರ ಹರಕೆ ಚೀಟಿ ಪತ್ತೆಯಾಗಿದೆ. 'ದೇವರೇ ನನ್ನ ಕಷ್ಟ ದೂರ ಮಾಡಿ, ಮುಂದಿನ ಜಾತ್ರೆಯೊಳಗೆ ನನ್ನ ಅತ್ತೆ ಸಾಯಲಿ' ಎಂದು ಹರಕೆ ಚೀಟಿಯಲ್ಲಿ ಬರೆಯಲಾಗಿದೆ. ಸದ್ಯ ಈ ಚೀಟಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

Green Glass Bangle manufacturing unit: ಹಸಿರು ಗಾಜಿನ ಬಳೆ ತಯಾರಿಕಾ ಘಟಕ ಸ್ಥಾಪನೆಗೆ ಯೋಜನೆ

ಹಸಿರು ಗಾಜಿನ ಬಳೆ ತಯಾರಿಕಾ ಘಟಕ ಸ್ಥಾಪನೆಗೆ ಯೋಜನೆ

ಮಹಿಳೆಯರ ಸಿಂಗಾರಕ್ಕೆ ಅವಿಭಾಜ್ಯವಾಗಿರುವ ಅಖಂಡ ಹಸಿರು ಬಳೆಗಳ ಉತ್ಪಾದನೆಯಲ್ಲಿ ಮುರಗೋಡ ಗ್ರಾಮವು ವಿಶೇಷ ಸ್ಥಾನ ಹೊಂದಿದೆ. ಆದರೆ ಕಟ್ಟಿಗೆ ಕೊರತೆ ಹಾಗೂ ಹೆಚ್ಚುತ್ತಿರುವ ವೆಚ್ಚದಿಂದ ಈ ಉದ್ಯಮ ಸಂಕಷ್ಟಕ್ಕೆ ಸಿಲುಕಿತ್ತು. ಈ ಹಿನ್ನೆಲೆ ಸುಮಾರು 9.95 ಕೋಟಿ ರು. ವೆಚ್ಚ ದಲ್ಲಿ ‘ಮುರಗೋಡ ಬಳೆ ತಯಾರಿಕಾ ಫೌಂಡೇಷನ್’ ಮೂಲಕ ಅತ್ಯಾಧುನಿಕ ಗ್ಯಾಸ್ ಆಧಾರಿತ ಬಳೆ ತಯಾರಿಕಾ ಘಟಕ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ.

Road Accident: ಬೈಕ್‌ಗೆ ಡಿಕ್ಕಿಯಾದ ಲಾರಿ, ಒಂದೇ ಕುಟುಂಬದ ಮೂವರು ಸಾವು

ಬೈಕ್‌ಗೆ ಡಿಕ್ಕಿಯಾದ ಲಾರಿ, ಒಂದೇ ಕುಟುಂಬದ ಮೂವರು ಸಾವು

ಮೃತರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣಕ್ಕೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಳಗಾವಿಯಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಸಾವು

ಬೆಳಗಾವಿಯಲ್ಲಿ ಲಾರಿ-ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರ ಸಾವು

Belagavi accident: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದೆ. ಜಮಖಂಡಿ-ಮೀರಜ್‌ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಲಾರಿ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿ, ಮೂವರು ಮೃತಪಟ್ಟಿದ್ದಾರೆ. ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಎಂ ಬದಲಾವಣೆ ವಿಚಾರ: ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದ ಲಕ್ಷ್ಮಿ ಹೆಬ್ಬಾಳ್ಕರ್‌

ಸಿಎಂ ಬದಲಾವಣೆ: ಹೈಕಮಾಂಡ್‌ ನಿರ್ಧಾರಕ್ಕೆ ಬದ್ಧ ಎಂದ ಹೆಬ್ಬಾಳ್ಕರ್‌

Laxmi Hebbalkar: ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌, ಮುಖ್ಯಮಂತ್ರಿ ಬದಲಾವಣೆ ಕುರಿತಂತೆ ಹೈಕಮಾಂಡ್‌ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ. ರಾಜ್ಯದಲ್ಲಿ ಈ ಬಗ್ಗೆ ಚರ್ಚಿಸಿದರೆ ಅಕ್ಷಮ್ಯ ಅಪರಾಧ ಆಗುತ್ತದೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿಯಡಿ 2 ಸಾವಿರ ಕೊಟ್ಟು ಹೆಂಡದ ಮೂಲಕ 10 ಸಾವಿರ ಕಿತ್ತುಕೊಳ್ಳುವ ಸರ್ಕಾರ: ವಿಜಯೇಂದ್ರ ಕಿಡಿ

2 ಸಾವಿರ ಕೊಟ್ಟು 10 ಸಾವಿರ ಕಿತ್ತುಕೊಳ್ಳುವ ಸರ್ಕಾರ: ವಿಜಯೇಂದ್ರ ಕಿಡಿ

BY Vijayendra: ರಾಜ್ಯದಲ್ಲಿ 500 ಮೀಟರ್‌ಗೆ ಒಂದು ಮೆಡಿಕಲ್ ಶಾಪ್ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ; ಆದರೆ, 500 ಮೀಟರಿಗೆ ಒಂದು ಹೆಂಡದಂಗಡಿ ಸಿಗುತ್ತಿದೆ. ರಾಜ್ಯದ ದಿನಸಿ ಅಂಗಡಿಗಳಲ್ಲಿ ಹೆಂಡ ಮಾರಾಟ ಮಾಡುತ್ತಿರುವುದು ಈ ನಾಲಾಯಕ್ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.

ಮದುವೆ ದಿನವೇ ಅಂಗಾಂಗ ದಾನ; ಅಥಣಿಯಲ್ಲೊಂದು‌ ಮಾದರಿ ಜೋಡಿ

Organ Donation: ಅಥಣಿಯಲ್ಲಿ ಮದುವೆ ದಿನವೇ ಅಂಗಾಂಗ ದಾನ ಮಾಡಿದ ನವಜೋಡಿ

Belagavi News: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಸಿದ್ದೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಬುಧವಾರ (ಫೆಬ್ರವರಿ 11) ನಡೆದ ವಿವಾಹ ಸಮಾರಂಭದಲ್ಲಿ ನವಜೋಡಿಯು ದೇಹ ದಾನ ಮಾಡುವ ಮೂಲಕ ಮಾದರಿ ಎನಿಸಿಕೊಂಡಿದೆ. ವಾಗೇಶ್ ಹಾಗೂ ಕೋಮಲ್ ಅಂಗಾಂಗ ಮಾಡಿದವರು.

ಲಕ್ಷ್ಮೀ ಹೆಬ್ಬಾಳಕರ್‌ಗೆ ಚಿನ್ನದ ಸರ ಉಡುಗೊರೆ ನೀಡಿದ ಗ್ರಾಮಸ್ಥರು; ಜನರ ಪ್ರೀತಿಗೆ ಸಚಿವೆ ಭಾವುಕ

ಲಕ್ಷ್ಮೀ ಹೆಬ್ಬಾಳಕರ್‌ಗೆ ಚಿನ್ನದ ಸರ ಉಡುಗೊರೆ ನೀಡಿದ ಗ್ರಾಮಸ್ಥರು

Lakshmi Hebbalkar: ಬೆಳಗಾವಿ ಜಿಲ್ಲೆಯ ಕೊಂಡಸ್ಕೊಪ್ಪ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಠ್ಠಲ ಬೀರ ದೇವರ ಮತ್ತು ಬಾಗುಬಾಯಿ ದೇವಸ್ಥಾನ ಉದ್ಘಾಟಿಸಿದರು. ಈ ವೇಳೆ ಗ್ರಾಮಸ್ಥರು ಚಿನ್ನದ ಸರ ತೊಡಿಸಿ ಸನ್ಮಾನಿಸಿದರು.

ಮಹಿಳಾ ಅಧಿಕಾರಿ ಮನೆಯಲ್ಲಿ ಸೀಕ್ರೆಟ್‌ ಕ್ಯಾಮೆರಾ ಇಟ್ಟು ಖಾಸಗಿ ವಿಡಿಯೊ ಚಿತ್ರೀಕರಣ; ಬ್ಲ್ಯಾಕ್‌ಮೇಲ್‌ ಮಾಡಿದ 3 ಯೂಟ್ಯೂಬರ್‌ಗಳ ಅರೆಸ್ಟ್‌

ಮಹಿಳಾ ಅಧಿಕಾರಿಯ ಖಾಸಗಿ ವಿಡಿಯೊ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್‌

ಮನೆಯಲ್ಲಿ ಮಹಿಳಾ ಅಧಿಕಾರಿಯು ಸ್ನೇಹಿತನೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ವಿಡಿಯೊ ಮಾಡಿಕೊಂಡಿದ್ದ ಯೂಟ್ಯೂಬರ್‌ಗಳು, ಅವುಗಳನ್ನು ತೋರಿಸಿ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಹೀಗಾಗಿ ಅಧಿಕಾರಿ ನೀಡಿದ ದೂರಿನ ಮೇರೆಗೆ ಮೂವರ ಬಂಧನವಾಗಿದೆ.

ಉಸಿರಾಟ ತೊಂದರೆ; ಆಕ್ಸಿಜನ್ ಸಿಲಿಂಡರ್‌ ಸಮೇತ ತೆರಳಿ ಪತ್ನಿಗೆ ಮಾಯಕ್ಕ ದೇವಿ ದರ್ಶನ ಮಾಡಿಸಿದ ಪತಿ

ಆಕ್ಸಿಜನ್ ಸಿಲಿಂಡರ್‌ ಸಮೇತ ತೆರಳಿ ಪತ್ನಿಗೆ ದೇವಿಯ ದರ್ಶನ ಮಾಡಿಸಿದ ಪತಿ

ಪತ್ನಿಗೆ ಉಸಿರಾಟ ತೊಂದರೆ ಇದ್ದರೂ ಆಕ್ಸಿಜನ್ ಸಿಲಿಂಡರ್ ಜತೆಗೆ ಮಹಾರಾಷ್ಟ್ರದ ಪಂಢರಪುರದ ದಂಪತಿ 176 ಕಿ.ಮೀಟರ್ ಸಂಚರಿಸಿ, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕ ದೇವಿ ದರ್ಶನ ಪಡೆದ ಘಟನೆ ಬುಧವಾರ ನಡೆದಿದೆ.

ವಂಟಮೂರಿ ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

ವಂಟಮೂರಿ ಮಹಿಳೆಗೆ ಹಲ್ಲೆ ಕೇಸ್‌; 12 ಆರೋಪಿಗಳಿಗೆ 5 ವರ್ಷ ಜೈಲು ಶಿಕ್ಷೆ

Vantamuri case: 2023ರ ಡಿಸೆಂಬರ್ 10ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಅಮಾನವೀಯ ಘಟನೆ ನಡೆದಿತ್ತು. ಯುವಕನೊಬ್ಬ ತಾನು ಪ್ರೀತಿಸಿದ್ದ ಯುವತಿಯೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬಸ್ಥರು, ಆತನ ಮನೆ ಮೇಲೆ ದಾಳಿ ನಡೆಸಿದ್ದರು. ಆತನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಗೆ ಕೋರ್ಟ್‌ ಶಿಕ್ಷೆ ವಿಧಿಸಿದೆ.

Murder Case: ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ!

ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಶವದ ಮೇಲೆ ಕಾಲಿಟ್ಟು ನಿಂತ!

10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ ಕೊಲ್ಹಾಪುರಕ್ಕೆ ಓಡಿಹೋಗಿದ್ದ. ಈ ವೇಳೆ ಆರೋಪಿ ಈರಯ್ಯನಿಗೆ 18 ವರ್ಷ ವಯಸ್ಸು. ಹಲವು ವರ್ಷಗಳ ಬಳಿಕ ಈರಯ್ಯನ ತಾಯಿಯನ್ನ ಕೊಲ್ಹಾಪುರದಲ್ಲಿ ಬಿಟ್ಟು ಗ್ರಾಮಕ್ಕೆ ನಾಲ್ಕು ದಿನಗಳ ಹಿಂದೆಯಷ್ಟೇ ಬಸಪ್ಪ ಬಂದಿದ್ದ. ಇದೇ ವಿಚಾರವಾಗಿ ದ್ವೇಷ ಸಾಧಿಸುತ್ತಿದ್ದ ಆರೋಪಿ ಈರಯ್ಯ ಆತನನ್ನು ಕೊಲೆ ಮಾಡಿದ್ದಾನೆ.

ರಾಜ್ಯದಲ್ಲಿ ದೂರು ದಾಖಲಿಸಲು ಮುಂದಾದ ಸಂದೀಪ್‌ ಪಾಟೀಲ್

ರಾಜ್ಯದಲ್ಲಿ ದೂರು ದಾಖಲಿಸಲು ಮುಂದಾದ ಸಂದೀಪ್‌ ಪಾಟೀಲ್

400 ಕೋಟಿ ರು. ಹಣ ಇದ್ದ ಜೋಡಿ ಕಂಟೇನರ್ ಹೈಜಾಕ್ ಪ್ರಕರಣದ ಮೂಲ ಹುಡುಕುವುದೇ ಪೊಲೀಸ ರಿಗೆ ಸವಾಲಿನ ಕೆಲಸವಾಗಿದೆ. ಚೋರ್ಲಾ ಘಾಟ್‌ನಲ್ಲಿ ದರೋಡೆ ಆಗಿದ್ದು ಒಂದು ಭಾಗವಾಗಿದ್ದರೆ ಕಂಟೇನರ್‌ನಲ್ಲಿ ಹಣವನ್ನು ಯಾವ ಜಾಗದಲ್ಲಿ ತುಂಬಿಸಲಾಯಿತು ಎಂಬುವುದೇ ಯಕ್ಷಪ್ರಶ್ನೆಯಾಗಿದೆ. ಮೂಲಗಳ ಪ್ರಕಾರ, 2025ರ ಸಪ್ಟೆಂಬರ್‌ನಲ್ಲಿ ಗೋವಾದಲ್ಲಿ ಎರಡು ಕಂಟೇನರ್‌ ನಲ್ಲಿ 2 ಸಾವಿರ ಮುಖಬೆಲೆಯ ನೋಟು ತುಂಬಿಸಲಾಗಿದೆ.

Ramadurga News: ವ್ಹಿಬಿ-ಜಿ-ರಾಮ್‌ಜಿ ಯೋಜನೆ ಜಾಗೃತಿ ಅಭಿಯಾನ: ಡಾ.ಕೆ.ವ್ಹಿ.ಪಾಟೀಲ

ವ್ಹಿಬಿ-ಜಿ-ರಾಮ್‌ಜಿ ಯೋಜನೆ ಜಾಗೃತಿ ಅಭಿಯಾನ: ಡಾ.ಕೆ.ವ್ಹಿ.ಪಾಟೀಲ

ಕಾಂಗ್ರೆಸ್ ಪಕ್ಷ ಯೋಜನೆಯ ಕುರಿತು ಅಪಪ್ರಚಾರ ಮಾಡುತ್ತಿದೆ. ಮಾರ್ಪಾಡುಗಳು ಜನಪರ ವಾಗಿದ್ದರೂ ರಾಜಕೀಯ ಮಾಡುವುದು ಸರಿಯಲ್ಲ. ಅದರಲ್ಲಿರುವ ಉತ್ತಮ ಅಂಶಗಳನ್ನು ಜನತೆಗೆ ತಿಳಿಸುವ ಸಲುವಾಗಿ ಗೊಡಚಿಯಿಂದ ರಾಮದುರ್ಗ ವರೆಗೆ ಮಧ್ಯದಲ್ಲಿ ಬರುವ ಗ್ರಾಮ ಪಂಚಾಯತಿ ಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪಾದಯಾತ್ರೆ ರಾಮದುರ್ಗ ತಪುಪಿದ ನಂತರ ತುರನೂರ ಹತ್ತಿರ ಇರುವ ವಿಶ್ವೇಶ್ವರಯ್ಯ ಕಲ್ಯಾಣ ಮಂಟಪದ ಹತ್ತಿರ ಇರುವ ಬಿಜೆಪಿ ತಾಲೂಕಾ ಘಟಕದ ಕಾರ್ಯಾಲಯದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ

Ramadurga News: ಜನರ ಬಾಳಿಗೆ ಬೆಳಕಾದ ಧರ್ಮಸ್ಥಳ ಸಂಸ್ಥೆ ಕಾರ್ಯ ಯೋಜನೆ

ಜನರ ಬಾಳಿಗೆ ಬೆಳಕಾದ ಧರ್ಮಸ್ಥಳ ಸಂಸ್ಥೆ ಕಾರ್ಯ ಯೋಜನೆ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಆರ್ಥಿಕ ಸಹಾಯ, ನಿರ್ಗತಿಕರಿಗೆ ಮಾಶಾಸನ, ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೇರಿದಂತೆ ನೂರಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು, ಲಕ್ಷಾಂತರ ಜನರ ಬಾಳಿಗೆ ಬೆಳಕಾಗಿದ್ದಾರೆ. ಕ್ಷೇತ್ರದ ಕಾರ್ಯ ಯೋಜನೆ ಇನ್ನಷ್ಟು ವಿಸ್ತಾರವಾಗಲಿ

400 ಕೋಟಿ ರು. ದರೋಡೆಯಲ್ಲಿ ಬೆಳಗಾವಿ ಪೊಲೀಸರು ಭಾಗಿ ?

400 ಕೋಟಿ ರು. ದರೋಡೆಯಲ್ಲಿ ಬೆಳಗಾವಿ ಪೊಲೀಸರು ಭಾಗಿ ?

ಸಂಭಾಷಣೆ ಪ್ರಕಾರ ದರೋಡೆ ಪ್ರಕರಣ ಗುಜರಾತ್ ಮೂಲದ ರಾಜಕಾರಣಿಗೆ ಗೊತ್ತಾಗಿದೆ. ಇಷ್ಟೊಂದು ಹಣ ನಾಪತ್ತೆ ಆಗಲು ಹೇಗೆ ಸಾಧ್ಯ? ಇದರ ಹಿಂದೆ ಕರ್ನಾಟಕ ಪೊಲೀಸರು ಇದ್ದಾರೆ ಎಂದು ಮಾತನಾಡಿದ್ದಾರೆ. ಚೋರ್ಲಾ ಘಾಟ್‌ನಲ್ಲಿ ಸಂಭವಿಸಿದ್ದ ದರೋಡೆ ಪ್ರಕರಣದಲ್ಲಿ ಬೆಳಗಾವಿ ಪೊಲೀಸರ ಕೈವಾಡ ಕುರಿತು ಹೊರಬಿದ್ದಿರುವ ಸಂಭಾಷಣೆ ಸಾಕಷ್ಟು ಕುತೂಹಲ ಹುಟ್ಟುಹಾಕಿದೆ.

Savadatti News: ಸವದತ್ತಿಯಲ್ಲಿ ಹೆಚ್ಚಾದ ಗೂಳಿಗಳ ಹಾವಳಿ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಸವದತ್ತಿಯಲ್ಲಿ ಹೆಚ್ಚಾದ ಗೂಳಿಗಳ ಹಾವಳಿ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ

ಸವದತ್ತಿ‌ ಪಟ್ಟಣದಲ್ಲಿ ಗೂಳಿಗಳ ಹಾವಳಿ ಹೆಚ್ಚಾಗಿದ್ದು ಮಹಿಳೆಯರು, ಮಕ್ಕಳು, ವೃದ್ಧರು, ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಬೈಕ್‌ ಸವಾರರು ಓಡಾಡಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಪುರಸಭೆ ಅಧಿಕಾರಿಗಳು ಹಾಗೂ ಸ್ಥಳೀಯ ಆಡಳಿತ ಮುನ್ನೆಚ್ಚರಿಕೆ ವಹಿಸಿ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

400 ಕೋ. ದರೋಡೆ: ಅಂತೆ, ಕಂತೆಗಳ ಸದ್ದು

400 ಕೋ. ದರೋಡೆ ಅಂತೆ, ಕಂತೆಗಳ ಸದ್ದು

400 ಕೋಟಿ ರು. ಹಣ ಇದ್ದ ಕಂಟೇನರ್ ದರೋಡೆ ಪ್ರಕರಣ ಅಂತೆ ಕಂತೆಗಳ ಮೇಲೆ ಸಾಗಿದೆ. ಈ ನಡುವೆ ಅಪಹರಣ ಪ್ರಕರಣ ಬಂಧನಕ್ಕೆ ಒಳಗಾದ ವಿರಾಟ್ ಗಾಂಧಿ ಹಾಗೂ ಜಯೇಶ್ ಮಧ್ಯೆ ನಡೆದ ವಾಟ್ಸಪ್ ಕರೆ ಸಂಭಾಷಣೆ ವೈರಲ್ ಆಗಿದೆ. ಸಂಭಾಷಣೆ ಪ್ರಕಾರ ಹಣ ಗುಜರಾತ್ ಮೂಲದ ರಾಜಕಾರಣಿಗೆ ಸೇರಿದ್ದು ಎಂದು ಹೇಳಲಾಗುತ್ತಿದ್ದು, ಬಾಲಾಜಿ ಟ್ರಸ್ಟ್ ಹೆಸರು ತಳುಕು ಹಾಕಿಕೊಂಡಿದೆ.

ಸಿನಿಮೀಯ ರೀತಿಯ 400 ಕೋಟಿ ರುಪಾಯಿ ದರೋಡೆ ಬಗ್ಗೆ ಸ್ಫೋಟಕ ಮಾಹಿತಿ ಲಭ್ಯ: ರಕ್ಷಕರೇ ಭಕ್ಷಕರಾದ್ರಾ?

400 ಕೋಟಿ ರುಪಾಯಿ ದರೋಡೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

Robbery Case: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರುಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ 2 ಕಂಟೇನರ್‌ ಹೈಜಾಕ್‌ಗೆ ಸಂಬಂಧಿಸಿ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಕರ್ನಾಟಕ ಪೊಲೀಸರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆಡಿಯೊ ವೈರಲ್‌ ಆಗಿದೆ.

ಬೆಳಗಾವಿಯಲ್ಲಿ ನಡೀತು ದೇಶದಲ್ಲಿಯೇ ಅತ್ಯಂತ ದೊಡ್ಡ ದರೋಡೆ; 400 ಕೋಟಿ  ರಾಬರಿ!

ಬೆಳಗಾವಿಯಲ್ಲಿ ನಡೀತು ದೇಶದಲ್ಲಿಯೇ ಅತ್ಯಂತ ದೊಡ್ಡ ದರೋಡೆ!

Maharashtra Robbery Case: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನ ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್;  ಬೃಹತ್‌ ಅಕ್ರಮ ಜಾಲ ಬಯಲು

ಗಲ್ಫ್ ದೇಶಗಳಿಂದ ಕರ್ನಾಟಕಕ್ಕೆ ಕಳ್ಳಸಾಗಣೆಯಾಗುತ್ತಿದೆ ಡೀಸೆಲ್!

ಚಿನ್ನದಂತೆ ಗಲ್ಫ್‌ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್‌ ಸ್ಮಗ್ಲಿಂಗ್‌ ಮಾಡ್ತಿದ್ದ ಅಕ್ರಮ ಜಾಲವೊಂದು ಇದೀಗ ಸಿಕ್ಕಿ ಬಿದ್ದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕೋಟ್ಯಂತರ ರೂಪಾಯಿ ತೆರಿಗೆ ನಷ್ಟ ಉಂಟುಮಾಡುತ್ತಿದ್ದ ಈ ಅಕ್ರಮವನ್ನು ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆ ಪೊಲೀಸರು ಈ ಜಾಲವನ್ನು ಕಾರ್ಯಾಚರಣೆ ಮೂಲಕ ಬಯಲಿಗೆಳೆದಿದ್ದಾರೆ.

Loading...