ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಳಗಾವಿ

Belagavi Rains: ಬೈಲಹೊಂಗಲದಲ್ಲಿ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿಹೋದ ಬೈಕ್‌ಗಳು, ಜನಜೀವನ ಅಸ್ತವ್ಯಸ್ತ!

ಬೈಲಹೊಂಗಲದಲ್ಲಿ ಮಳೆ ಆರ್ಭಟ; ನೀರಿನಲ್ಲಿ ಕೊಚ್ಚಿಹೋದ ಬೈಕ್‌ಗಳು

Bailhongal News: ಬೈಲಹೊಂಗಲ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳು ನದಿಗಳಂತಾಗಿ ಹರಿದರೆ, ತಗ್ಗು ಪ್ರದೇಶಗಳು ಜಲಾವೃತಗೊಂಡು ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದರು. ಮಳೆಯ ರಭಸಕ್ಕೆ ನಗರದ ಅನೇಕ ಬಡಾವಣೆಗಳು ಮತ್ತು ಪ್ರಮುಖ ರಸ್ತೆಗಳು ನೀರಿನಿಂದ ಆವೃತಗೊಂಡಿವು.

ಲಕ್ಷ್ಮಣ- ಲಕ್ಷ್ಮೀ: ಇಬ್ಬರಲ್ಲಿ ಯಾರು ಲಕ್ಕಿ?

ಲಕ್ಷ್ಮಣ- ಲಕ್ಷ್ಮೀ: ಇಬ್ಬರಲ್ಲಿ ಯಾರು ಲಕ್ಕಿ?

ಲಕ್ಷ್ಮೀ ಹೆಬ್ಬಾಳಕರ ಹಾಗೂ ಲಕ್ಷ್ಮಣ ಸವದಿ ಹೊರತಾಗಿ ಈ ಬಾರಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿ ರಾಮದುರ್ಗ ಶಾಸಕ ಹಾಗೂ ಸಿದ್ದರಾಮಯ್ಯನವರ ಪರಮಾಪ್ತ ಅಶೋಕ್ ಪಟ್ಟಣ, ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಹಾಗೂ ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ ಇದ್ದಾರೆ. ತಮ್ಮ ಆಪ್ತ ನಾಯಕರ ಮೂಲಕ ಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸಿದ್ದು, ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಅವಕಾಶ ನೀಡುತ್ತದೆ ಎಂಬುದನ್ನು ಕಾದು ನೋಡಬೇಕು.

Hindu girl Self Harming: ಮುಸ್ಲಿಂ ಯುವಕನ ಕಿರುಕುಳ: ಅಪ್ರಾಪ್ತ ಹಿಂದೂ ಬಾಲಕಿ ಆತ್ಮಹತ್ಯೆ

ಮುಸ್ಲಿಂ ಯುವಕನ ಕಿರುಕುಳ: ಅಪ್ರಾಪ್ತ ಹಿಂದೂ ಬಾಲಕಿ ಆತ್ಮಹತ್ಯೆ

ಮನೆ ಕಟ್ಟಡ ಕಟ್ಟುವಲ್ಲಿ ಕೆಲಸ ಮಾಡುತ್ತಿದ್ದ ಪಿರಾಜ್ ಕಾಳೆ ಎಂಬಾತ ಮೃತ ಯುವತಿಗೆ ಪರಿಚಯ ವಾಗಿದ್ದ. ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಇದನ್ನು ಗಮನಿಸಿದ ಮನೆಯವರು ಯುವತಿಯ ಮೊಬೈಲ್ ಕಸಿದಿದ್ದರು. ಆದರೆ ಯುವಕ ಯುವತಿಯ ಮನೆ ಹತ್ತಿರ ಬಂದು ಕಿರುಕುಳ ನೀಡುತ್ತಿದ್ದ ಎಂದು ಪೋಷಕರು ಆರೋಪಿಸಿದ್ದಾರೆ‌.

Belagavi News: ಬೆಳಗಾವಿಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳು ಅರೆಸ್ಟ್‌

ಬೆಳಗಾವಿಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳು ಅರೆಸ್ಟ್‌

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಕೇಸ್‌ನ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್‌ನಿಂದ ಹತ್ಯೆ ಮಾಡಿರುವುದು ಗೊತ್ತಾಗಿತ್ತು. ಬಳಿಕ ಕಂಟ್ರಿ ಪಿಸ್ತೂಲ್ ಮೂಲ ಬೆನ್ನುಬಿದ್ದ ಪೊಲೀಸರು, ಪಿಸ್ತೂಲ್ ತಯಾರಿಸುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೇಲ್ನೋಟಕ್ಕೆ ಪುಸ್ತಕ ಮಾರಾಟ; ಹಿಂಬಾಗಿಲಲ್ಲಿ ಅಕ್ರಮ ಶಸ್ತ್ರಾಸ್ತ್ರ ತಯಾರಿ: ಬೆಳಗಾವಿ, ಉತ್ತರ ಕನ್ನಡದ 13 ಶಂಕಿತರ ಬಂಧನ

ಅಕ್ರಮ ಶಸ್ತ್ರಾಸ್ತ್ರ ತಯಾರಿ: 13 ಮಂದಿಯ ಬಂಧನ

ಅಕ್ರಮ ಶಸ್ತ್ರಾಸ್ತ್ರ ತಯಾರಿಸುತ್ತಿದ್ದ ಆರೋಪದಲ್ಲಿ ಕರ್ನಾಟಕ ಪೊಲೀಸರು ಪುಸ್ತಕ ಮಾರಾಟಗಾರನೊಬ್ಬ ಸೇರಿದಂತೆ ಒಟ್ಟು 13 ಶಂಕಿತರನ್ನು ಬಂಧಿಸಿದ್ದಾರೆ. ಈ ಮೂಲಕ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಂದೂಕು ಸರಬರಾಜು ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಇವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

Basavakalyana News: ಬೀಜ-ರಸಗೊಬ್ಬರ ಖರೀದಿಗೆ ಮುಗಿಬಿದ್ದ ಅನ್ನದಾತರು

ಮಳೆ ಚುರುಕು: ರೈತರ ಮುಖದಲ್ಲಿ ಮಂದಹಾಸ

ತಾಲೂಕಿನ ವಿವಿಧ ಹೋಬಳಿಗಳಲ್ಲಿ ಕೃಷಿ ಇಲಾಖೆ ವತಿಯಿಂದ ಸಬ್ಸಿಡಿ ದರದಲ್ಲಿ ಬೀಜ ವಿತರಣೆ ಕಾರ್ಯ ಭರದಿಂದ ಸಾಗಿದೆ. ಹುಲಸೂರು, ರಾಜೇಶ್ವರ, ಮುಡಬಿ, ಮಂಠಾಳ ಸೇರಿದಂತೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬೆಳಿಗ್ಗೆಯಿಂದಲೇ ರೈತರು ಸರತಿ ಸಾಲಿನಲ್ಲಿ ನಿಂತು ಸೋಯಾಬಿನ್, ತೊಗರಿ, ಹೆಸರು, ಉದ್ದು ಬೀಜಗಳನ್ನು ಖರೀದಿಸುತ್ತಿರುವ ದೃಶ್ಯ ಸಾಮಾನ್ಯ ವಾಗಿದೆ. ಗುಣಮಟ್ಟದ ಬೀಜ ದೊರೆಯುತ್ತಿರುವುದರಿಂದ ರೈತರಲ್ಲಿ ಉತ್ಸಾಹ ಹೆಚ್ಚಾಗಿದೆ.

ಸಿದ್ದರಾಮಯ್ಯ ಆಡಳಿತ ನೆನೆದು ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಪೋಸ್ಟ್

ಸಿದ್ದರಾಮಯ್ಯ ಆಡಳಿತ ನೆನೆದು ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಪೋಸ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಮತ್ತು ವ್ಯಕ್ತಿತ್ವ ನೆನೆದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದಿದ್ದಾರೆ.

CPI Self Harming: ಎಸ್‌ಡಿಆರ್‌ಎಫ್ʼಯ ಸಿಪಿಐ ಶ್ರೀಶೈಲ ಚೌಗಲಾ ನೇಣು ಬಿಗಿದು ಆತ್ಮಹತ್ಯೆ

ಎಸ್‌ಡಿಆರ್‌ಎಫ್ʼಯ ಸಿಪಿಐ ಶ್ರೀಶೈಲ ಚೌಗಲಾ ನೇಣು ಬಿಗಿದು ಆತ್ಮಹತ್ಯೆ

ಚೌಗಲಾ ಅವರು ಮನೆಯ ಕೊಠಡಿಯ ಬಾಗಿಲು ಹಾಕಿಕೊಂಡಿದ್ದ ವೇಳೆ ಅನುಮಾನಗೊಂಡ ಪತ್ನಿ ತಕ್ಷಣವೇ ಎಸ್‌ಡಿಆರ್‌ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಕೊಠಡಿಯ ಬಾಗಿಲು ಮುರಿದು ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟರಲ್ಲೇ ಅವರು ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Belagavi News: ಘಟಪ್ರಭಾ ಎಡದಂಡೆ ಕಾಲುವೆಯ ನೀರು ಸಮರ್ಪಕವಾಗಿ ತಲುಪಲಿ

ಘಟಪ್ರಭಾ ಎಡದಂಡೆ ಕಾಲುವೆಯ ನೀರು ಸಮರ್ಪಕವಾಗಿ ತಲುಪಲಿ

ಘಟಪ್ರಭಾ ಎಡದಂಡೆ ಕಾಲುವೆಯ ರಬಕವಿ ಬನಹಟ್ಟಿ ತಾಲೂಕಿನ ಚಿಮ್ಮಡ ಚೌಕಿಯಿಂದ, ರಾಯಬಾಗ ತಾಲೂಕಿನ ಮುಗಳಖೋಡ ಚೌಕಿಯವರಿಗೆ ನೀರು ಹರಿವಿನ ಬಗ್ಗೆ ಅಧಿಕಾರಿಗಳ ಜೊತೆಗೆ ಮಾಹಿತಿ ಪಡೆದು ಗೇಟ್ ಗಳನ್ನು ಪರಿಶೀಲಿಸಿ , ಈ ಭಾಗದ ರೈತರಿಗೆ ಅಷ್ಟೇ ಅಲ್ಲದೆ ಜಮಖಂಡಿ ಬೀಳಗಿ ತಾಲೂಕಿನ ರೈತರಿಗೂ ಅನುಕೂಲವಾಗಲಿ ಎಂಬ ಸದುದ್ದೇಶ ದಿಂದ ನೀರಿನ ಹರಿವು ಅಗತ್ಯವಿದೆ

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರ ದುರ್ಮರಣ

ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದೆ. ಗೂಡ್ಸ್ ಆಟೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಒಂಬತ್ತು ತಿಂಗಳ ಮಗು ಸೇರಿದಂತೆ ತಂದೆ-ತಾಯಿ ಸ್ಥಳದಲ್ಲೇ ಸಾವನ್ನಪ್ಪಿದೆ. ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23) ಹಾಗೂ ಒಂಬತ್ತು ತಿಂಗಳ ಮಗು ಸಮರ್ಥ ಎಂದು ಗುರುತಿಸಲಾಗಿದೆ.

ಸಾಲಹಳ್ಳಿಯಲ್ಲಿ ಬೆಳಗಾವಿ-ರಾಯಚೂರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ

ಏತ ನೀರಾವರಿ ಕಾಮಗಾರಿಗಳ ವಿಳಂಬಕ್ಕೆ ರೈತರ ಆಕ್ರೋಶ

ಏತ ನೀರಾವರಿ ಕಾಮಗಾರಿಗಳ ವ್ಯಾಪ್ತಿಯ ಗ್ರಾಮಗಳ ರೈತರು, ತಾಲೂಕಿನ ರೈತ ಮುಖಂಡ ರನ್ನು ಒಳಗೊಂಡಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ ರೈತ ಸಮೂಹ ನೀರಾವರಿ ಕಾಮಗಾರಿ ಗಳ ವಿಳಂಬ ನೀತಿಯ ವಿರುದ್ಧ ಸ್ಥಳೀಯ ಜನಪ್ರತಿನಿಧಿಗಳು, ಸರಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Doctor Self harming: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹಿರಿಯ ವೈದ್ಯ ಆತ್ಮಹತ್ಯೆ

ಡಾ.ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯರು. ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸಿ ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ಸಮಾಜದಲ್ಲಿ ಸರಳ ಹಾಗೂ ಸ್ನೇಹಪರ ವ್ಯಕ್ತಿತ್ವ ದಿಂದ ಪರಿಚಿತರಾಗಿದ್ದ ಅವರು, ವೈದ್ಯ ವಲಯದಲ್ಲಿಯೂ ಗೌರವ ಪಡೆದಿದ್ದರು.

ಬೆಳಗಾವಿ ಜೈಲಿನಿಂದ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್; ಸನ್ಮಾನ ಮಾಡಲು ಹೋದವರು ವಶಕ್ಕೆ!

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಜೈಲಿನಿಂದ ರಿಲೀಸ್

ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ನಟೋರಿಯಸ್ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾಗಿದ್ದು, ಗುರುವಾರ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ. ಮಹೇಶ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತರಾಗಿದ್ದ ನಾಗ ಕಳೆದ ಹಲವು ತಿಂಗಳುಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ.

ನಟ ದರ್ಶನ್‌ ಜತೆ ಜೈಲಿನಲ್ಲಿ ಸಿಗರೇಟ್‌ ಸೇದುತ್ತ ವೈರಲ್‌ ಆಗಿದ್ದ ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು; ಜೈಲಿನಿಂದ ಬಿಡುಗಡೆ

ರೌಡಿ ವಿಲ್ಸನ್‌ ಗಾರ್ಡನ್‌ ನಾಗನಿಗೆ ಜಾಮೀನು

Belagavi News: ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದ ಬಂಧಿತ ಆರೋಪಿ, ನಟೋರಿಯಸ್ ರೌಡಿಶೀಟರ್‌ ವಿಲ್ಸನ್ ಗಾರ್ಡನ್ ನಾಗನಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆ ಕೈದಿ ವಾರ್ಡನಲ್ಲಿ ಆರೋಗ್ಯ ತಪಾಸಣೆ ನಡೆಸಿ ಬಿಡುಗಡೆ ಮಾಡಲಾಯಿತು.

Shivam Associates Scam: ಬಹುಕೋಟಿ ವಂಚನೆ ಆರೋಪ; ಶಿವಾನಂದ ನೀಲಣ್ಣವರ್‌ ವಿರುದ್ಧ ಕಾಗವಾಡದಲ್ಲಿ ಕೇಸ್‌ ದಾಖಲು

ಶಿವಾನಂದ ನೀಲಣ್ಣವರ್‌ ವಿರುದ್ಧ ಕಾಗವಾಡದಲ್ಲಿ ಕೇಸ್‌ ದಾಖಲು

ಶಿವಂ ಅಸೋಸಿಯೇಟ್ಸ್‌ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಮೊದಲ ಖಾಸಗಿ ದೂರು ದಾಖಲಾಗಿದೆ. ಶೇ.36 ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ ತನ್ನಿಂದ 5 ಲಕ್ಷ ಹಣ ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಿದ್ದಾರೆ ಎಂದು ದೂರುದಾರ ಆರೋಪಿಸಿದ್ದಾರೆ.

Shivam Associates scam: ಶಿವಂ ಅಸೋಸಿಯೇಟ್ಸ್‌ ಹಗರಣ; ಮಾಲೀಕ ಶಿವಾನಂದ ನೀಲಣ್ಣವರ್‌ 10 ದಿನ ಸಿಐಡಿ ಕಸ್ಟಡಿಗೆ

4,500 ಕೋಟಿ ವಂಚನೆ ಕೇಸ್‌; ಶಿವಾನಂದ ನೀಲಣ್ಣವರ್‌ 10 ದಿನ ಸಿಐಡಿ ಕಸ್ಟಡಿಗೆ

Shivam Associates scam: ಹೆಚ್ಚಿನ ಬಡ್ಡಿ ಆಮಿಷ ತೋರಿ ಬೆಳಗಾವಿಯಲ್ಲಿ ಮಾಜಿ ಸೈನಿಕರು ಹಾಗೂ ಸಾರ್ವಜನಿಕರಿಂದ ಸಾವಿರಾರು ಕೋಡಿ ಹಣ ಸಂಗ್ರಹಿಸಿರುವ ಆರೋಪ ಶಿವಾನಂದ್ ನೀಲಣ್ಣವರ್ ವಿರುದ್ಧ ಕೇಳಿಬಂದಿದೆ. ಶಿವಂ ಅಸೋಸಿಯೇಟ್ಸ್‌ ವಿರುದ್ಧದ 4,500 ಕೋಟಿ ರೂ. ವಂಚನೆ ಆರೋಪ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರವು ಸಿಐಡಿಗೆ ವಹಿಸಿದೆ.

Shivam Associates Scam: 4,500 ಕೋಟಿ ರೂ. ವಂಚನೆ ಆರೋಪ; ಶಿವಂ ಅಸೋಸಿಯೇಟ್ಸ್‌ ಹಗರಣದ ತನಿಖೆ ಸಿಐಡಿಗೆ ವರ್ಗಾವಣೆ

ಬೆಳಗಾವಿ ಶಿವಂ ಅಸೋಸಿಯೇಟ್ಸ್‌ ಹಗರಣದ ತನಿಖೆ ಸಿಐಡಿಗೆ ವರ್ಗಾವಣೆ

ಶಿವಾನಂದ ನೀಲಣ್ಣವರ ವಿರುದ್ಧ ಕೆಪಿಐಡಿ ಆಕ್ಟ್ ಸೆಕ್ಷನ್ 9, ಬಡ್ಸ್ ಆಕ್ಟ್ ಸೆಕ್ಷನ್ 21, (1), (2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಶಿವಂ ಅಸೋಸಿಯೇಟ್ಸ್ ಮೂಲಕ ಯಾವುದೇ ಸೆಬಿ, ಆರ್​​ಬಿಐ, ಸಹಕಾರ ಇಲಾಖೆ ಮಾರ್ಗಸೂಚಿಗಳನ್ನು ಪಾಲಿಸದೇ ಅನಧಿಕೃತವಾಗಿ ಠೇವಣಿಗಳನ್ನು ಸಂಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾಹಿತಿ ನೀಡಿದ್ದಾರೆ.

Belagavi Shivam Associates Case: 4,500 ಕೋಟಿ ರೂ. ವಂಚನೆ ಪ್ರಕರಣ; ಬೆಳಗಾವಿಯ ಶಿವಂ ಅಸೋಸಿಯೇಟ್ಸ್‌ ಮಾಲೀಕ ಶಿವಾನಂದ ನೀಲಣ್ಣವರ್‌ ಅರೆಸ್ಟ್‌

4,500 ಕೋಟಿ ವಂಚನೆ ಪ್ರಕರಣ; ಶಿವಾನಂದ ನೀಲಣ್ಣವರ್‌ ಅರೆಸ್ಟ್‌

Belagavi News: ಶಿವಂ ಅಸೋಸಿಯೇಟ್ಸ್‌ ಮಾಲೀಕನ ಮನೆ, ಕಚೇರಿ ಮೇಲೆ ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ್ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದರು. ಅಂದಾಜು 4,500 ಕೋಟಿ ಹಣ ವಂಚನೆ ಮಾಡಿದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದಾಳಿ ನಡೆಸಿ, ಸುಮಾರು 8 ಗಂಟೆಳ ದಾಖಲೆ ಪರಿಶೀಲನೆ ನಡೆಸಲಾಗಿತ್ತು.

Belgaum Municipal Corporation controversy: ಸರಕಾರದ ಅಂಗಳಕ್ಕೆ ಬೆಳಗಾವಿ ಪಾಲಿಕೆ ವಿವಾದ

ಸರಕಾರದ ಅಂಗಳಕ್ಕೆ ಬೆಳಗಾವಿ ಪಾಲಿಕೆ ವಿವಾದ

ಸದಸ್ಯರ ಆಗ್ರಗಕ್ಕೆ ಧ್ವನಿಗೂಡಿಸಿದ ಮಹಾನಗರ ಪಾಲಿಕೆ ಮೇಯರ್ ಪ್ರೀತಿ ಕಾಮಕರ್ ಅವರು ಈಗಾಗಲೇ ಬೆಳಗಾವಿ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಇದ್ದು ಬೆಳಗಾವಿ ಮಹಾ ನಗರ ಪಾಲಿಕೆಗೆ ನಿರ್ಧಾರ ಕೈಗೊಳ್ಳುವ ಅವಕಾಶ ಇದೆಯಾ ಎಂಬುದನ್ನು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗಮನಕ್ಕೆ ತರಲಾಗುತ್ತದೆ.

Belagavi News: ಜನ್ಮದಿನದಂದೇ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಜನ್ಮದಿನದಂದೇ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಜನ್ಮದಿನದಂದೇ ವಸತಿ ನಿಲಯದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯ ಅಜಂ ನಗರದಲ್ಲಿರುವ ಪರಿಶಿಷ್ಟ ಪಂಗಡಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ‌ನಡೆದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಎಪಿಎಂಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Savadatti News: ಐತಿಹಾಸಿಕ ಗ್ರಾಮದೇವಿ ಜಾತ್ರೆ ಆರಂಭ: ದೇವಿಯರನ್ನು ಕಣ್ತುಂಬಿಕೊಂಡು ಭಂಡಾರದಲ್ಲಿ ಮಿಂದೆದ್ದ ಭಕ್ತ ಸಾಗರ

ಐತಿಹಾಸಿಕ ಗ್ರಾಮದೇವಿ ಜಾತ್ರೆ ಆರಂಭ

ಭಕ್ತರ ದಂಡು "ಉಧೋ ಉಧೋ" ಎಂದು ಜಯಘೋಷ ಎಲ್ಲೆಡೆ ಮೊಳಗಿತ್ತು. ಜೋಗತಿಯರು "ಗ್ರಾಮ ದೇವತೆ ನಿನ್ ಹಾಲಕ್ ಉಧೋ" ಎಂದು ಜೋಗ ಹಾಕಿದರು. ವ್ಯಾಪಾರಸ್ಥರು ಅಂಗಡಿ ಮುಂಗಟ್ಟು ಗಳನ್ನು ಸ್ವಯಂ ಪ್ರೇರಿತ ಬಂದ್ ಮಾಡಿ ಜಾತ್ರೆಯಲ್ಲಿ ಭಾಗಿಯಾದರು. ನಗರದ ಮನೆಮನೆಗಳಿಗೂ ಬಣ್ಣ ಹಚ್ಚಿ, ತಳಿರು ತೋರಣ ಕಟ್ಟಿ ರಸ್ತೆಯಲ್ಲಿ ರಂಗೋಲಿ ಬಿಡಿಸಿ ದೀಪಾಲಂಕಾರ ಅಳವಡಿಸಿ ಶೃಂಗರಿಸ ಲಾಗಿತ್ತು

Election Results 2026: ನಮ್ಮದು ಜನಪರ ಸರ್ಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಹೆಬ್ಬಾಳ್ಕರ್

ನಮ್ಮದು ಜನಪರ ಸರ್ಕಾರ ಎನ್ನುವುದಕ್ಕೆ ಫಲಿತಾಂಶ ಸಾಕ್ಷಿ: ಹೆಬ್ಬಾಳ್ಕರ್

Laxmi Hebbalkar: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಜನರು ನಮ್ಮ ಜನಪರ ಆಡಳಿತವನ್ನು ಸ್ವೀಕರಿಸಿರುವುದಕ್ಕೆ ಸ್ಪಷ್ಟ ಉದಾಹರಣೆ. ಇದು ಕೇವಲ ರಾಜಕೀಯ ಗೆಲುವಲ್ಲ, ಜನ ವಿಶ್ವಾಸದ ಗೆಲುವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

IPL Betting Racket: ಬೆಳಗಾವಿಯಲ್ಲಿ ಐಪಿಎಲ್ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಬುಕ್ಕಿ ಬಂಧನ

ಬೆಳಗಾವಿಯಲ್ಲಿ ಐಪಿಎಲ್ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದ ಬುಕ್ಕಿ ಬಂಧನ

Belagavi News: ರಾಜಸ್ಥಾನ ರಾಯಲ್ಸ್ ಮತ್ತು ಡೆಲ್ಲಿ ಕ್ಯಾಪಿಡಲ್ಸ್ ನಡುವಿನ ಪಂದ್ಯದ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದಾಗ ಬೆಳಗಾವಿಯ ಕ್ಯಾಂಪ್ ಪೊಲೀಸರಿಂದ ಶಾಸ್ತ್ರಿ ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭಾರಿ ದುರಂತ; ಹೊಂಡಕ್ಕೆ ಈಜಲು ತೆರಳಿದ ಇಬ್ಬರು ಬಾಲಕರು ಜಲಸಮಾಧಿ

ಹೊಂಡಕ್ಕೆ ಈಜಲು ತೆರಳಿದ ಇಬ್ಬರು ಬಾಲಕರು ಜಲಸಮಾಧಿ

Belagavi News: ಪ್ರಸಿದ್ಧ ಬೆಳಗಾವಿ ಕಪಿಲೇಶ್ವರ ದೇವಾಲಯ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಶಿವಂ ಪರಶುರಾಮ ಸುಂಡೀಕರ್ (7), ಪರಶುರಾಮ ನಿಲಜಕರ್ (11) ಮೃತರು. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

Loading...