ಬೆಳಗಾವಿಯಲ್ಲಿ 44 ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆ ವಿತರಣೆ
Belagavi News: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಕೆ.ಎಚ್. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗಾವಿ ಗ್ರಾಮೀಣ ಭಾಗದ 2025-26ನೇ ಸಾಲಿನ ವಿಶೇಷ ಚೇತನ ಮಕ್ಕಳಿಗೆ ಸಾಧನ ಸಲಕರಣೆಗಳ ವಿತರಣಾ ಸಮಾರಂಭ ಜರುಗಿತು.
ರೈತರ ಜಮೀನುಗಳಿಗೆ ಶಾಸಕ ಅಶೋಕ ಪಟ್ಟಣ ಭೇಟಿ ನೀಡುತ್ತಿದ್ದಂತೆ ಸ್ಥಳೀಯ ರೈತರು ಸರಿಯಾಗಿ ಮಳೆಯಾಗದೆ ಬೆಳೆಗಳು ಒಣಗಿ ಹಾನಿಯಾಗಿವೆ. ಸರಕಾರದ ಮಟ್ಟದಲ್ಲಿ ತಾಲೂಕಿನ ಪರಸ್ಥಿತಿ ಗಮನಕ್ಕೆ ತರಬೇಕು. ರೈತರು ಬಿತ್ತನೆ ಬೀಜ-ಗೊಬ್ಬರ ಕೃಷಿ ಚಟುವಟಿಕೆಗಳಿಗೆ ಮಾಡಿದ ವೆಚ್ಚವಾದರೂ ದೊರೆಯು ವಂತೆ ಬೆಳೆಹಾನಿ ದೊರೆಯುವಂತೆ ಸೂಕ್ತ ಬೆಳೆಹಾನಿ ದೊರೆಯುವಂತಾಗಲು ಕ್ರಮ ತೆಗೆದುಕೊಳ್ಳಬೇಕು
ರಾಮದುರ್ಗ ತಾಲೂಕಿಗೆ ಆಗಮಿಸಿದ ಬಿಜೆಪಿ ಬರ ಅಧ್ಯಯನ ತಂಡ ಕೆ.ಚಂದರಗಿ ಹತ್ತಿರ ರೈತರ ಜಮೀನುಗಳಲ್ಲಿ ಅನಾವೃಷ್ಠಿಯಿಂದ ಹಾನಿಗೊಳಗಾದ ಹೆಸರು ಬೆಳೆ, ಶೇಂಗಾ ಬೆಳೆ ವೀಕ್ಷಣೆ ಮಾಡಿದರು. ನಂತರ ಕಟಕೋಳ ಹತ್ತಿರ ಸಿದ್ದರಾಯಜ್ಜನವರ ಮಠದ ಹತ್ತಿರದ ಜಮೀನೊಂದರದಲ್ಲಿ ಒಣಗಿದ ಗೋವಿನ ಜೋಳ ಬೆಳೆಯನ್ನು ವೀಕ್ಷಣೆ ಮಾಡಿದರು.
Sadguru Sri Madhusudan Sai: ಕೇವಲ ಗರ್ಭಿಣಿಯರಿಗಷ್ಟೇ ಪೌಷ್ಟಿಕಾಂಶದ ಪುಡಿಯನ್ನು ಕೊಟ್ಟರೆ ಹೆಚ್ಚು ಪ್ರಯೋಜನವಾಗುವುದಿಲ್ಲ. 13ನೇ ವಯಸ್ಸಿನಿಂದಲೇ ಬೆಳಗಾವಿ ಜಿಲ್ಲೆಯ ಎಲ್ಲ ಹೆಣ್ಣುಮಕ್ಕಳಿಗೆ ಈ ಸೂತ್ರಾಧಾರಿತ ಪುಡಿ ಸಿಗುವಂತೆ ಆಗಬೇಕು. ಆಗ ಅವರ ಇಡೀ ಜೀವನ ಚೆನ್ನಾಗಿರುತ್ತದೆ. ಆರೋಗ್ಯವಂತ ಮಹಿಳೆಯರು ಆರೋಗ್ಯವಂತ ಮಕ್ಕಳಿಗೆ ಜನ್ಮನೀಡುತ್ತಾರೆ. ಅರೋಗ್ಯವಂತ ಸಮಾಜ ರೂಪುಗೊಳ್ಳುತ್ತದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದ್ದಾರೆ.
Belagavi News: ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಅವರು ಒಂದೇ ಹೆರಿಗೆ ವೇಳೆ ಮೂವರು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಜರುಗಿದೆ. ವೈದ್ಯರ ತಂಡದ ಯಶಸ್ವಿ ಪ್ರಯತ್ನದಿಂದ ಹೆರಿಗೆ ಸುಗಮವಾಗಿ ನೆರವೇರಿದ್ದು, ತಾಯಿ ಹಾಗೂ ಮೂವರು ನವಜಾತ ಶಿಶುಗಳು ಆರೋಗ್ಯವಾಗಿದ್ದಾರೆ.
ವಿಶ್ವವಾಣಿಯಲ್ಲಿ ಹೆಸ್ಕಾಂ ಸಿಬ್ಬಂದಿಯ ಪಿತೂರಿ: ಪಂಪ್ʼಸೆಟ್ಗಳಿಗೆ ದೊರೆಯದ ವಿದ್ಯುತ್ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಗ್ರಾಮಸ್ಥರು ಹಾಗೂ ಹೆಸ್ಕಾಂ ಉಪ ಕೇಂದ್ರದ ಶಾಖಾಧಿಕಾರಿ ಮಾರುತಿ ಹಟ್ಟಿ ಆರೋಪದ ಬೆನ್ನಲ್ಲೆ ಗ್ರಾಮಕ್ಕೆ ಆಗಮಿಸಿದ ಹಿಂದೆ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಸಿಬ್ಬಂದಿಗಳು ತಮ್ಮ ಮೇಲೆ ವಿನಾಕಾರಣ ಆರೋಪವಿದೆ.
ಕ್ಷೇತ್ರದ ಬೆನಾಡಿ ಗ್ರಾಮದ ದಲಿತ ಸಮಾಜದ ಪ್ರಮುಖ ಮುಖಂಡರಾದ ಬಾಳಾಸೋ ಮಾಳಗೆ, ಮೋಹನ ಕೋರೆ, ಅಜೀತ ಮಾನೆ ಹಾಗೂ ಮಹಾದೇವ ಬೋರೆ ಅವರ ನೇತೃತ್ವದಲ್ಲಿ, ರಾಷ್ಟ್ರವಾದಿ ಕಾಂಗ್ರೆಸ್ (NCP) ಹಾಗೂ ಕಾಂಗ್ರೆಸ್ ಪಕ್ಷದ 30ಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಇತ್ತೀಚೆಗೆ ಕಾಂಗ್ರೆಸ್ಗೆ ಗುಡ್ಬೈ ಹೇಳಿ ಬಿಜೆಪಿ ಸೇರ್ಪಡೆಯಾದರು.
ರಾಜಕೀಯವಾಗಿ ಪ್ರಬಲ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 11 ಕಾಂಗ್ರೆಸ್ ಶಾಸಕರಿದ್ದು, ಈ ಪೈಕಿ ಸತೀಶ್ ಜಾರಕಿಹೊಳಿ ಈಗಾಗಲೇ ಸಚಿವರಾಗಿದ್ದಾರೆ. ಇನ್ನುಳಿದ ಹತ್ತು ಜನರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದ್ದು ಶಾಸಕರ ನಡುವೆ ಪೈಪೋಟಿ ಏರ್ಪಟ್ಟಿದೆ. ಅಥಣಿ ಶಾಸಕ ಲಕ್ಷ್ಮಣ ಸವದಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಈ ಬಾರಿ ಡಿಕೆಶಿ ಸಂಪುಟದಲ್ಲಿ ಸಚಿಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದಾರೆ.
ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವಂತ ದೇಣಿಗೆ ಕಳ್ಳತನ ಪ್ರಕರಣಗಳು ರಾಜ್ಯದಲ್ಲಿ ನಡೆಯದಿರಲಿ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳ ಮೇಲೆ ನಿಗಾ ಇರಿಸಲು ಸಿಸಿಟಿವಿ ಅಳವಡಿಸುವಂತೆ ಆದೇಶಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕಿತ್ತೂರು ಪಟ್ಟಣದ ಪಟ್ಟಣದ ನಿವಾಸಿಗಳಾದ ಮಂಜುನಾಥ ರುದ್ರಪ್ಪ ಸವದಿ ಮತ್ತು ಶೃತಿ ಮಂಜುನಾಥ ಸವದಿ ದಂಪತಿ, ನಮಗೆ ಉದ್ದೇಶಪೂರ್ವಕವಾಗಿ ಪಟ್ಟಣ ಪಂಚಾಯತಿ ಅಧಿಕಾರಿಗಳು ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದರು. ಆದರೆ, ಇದು ಸುಳ್ಳು ಆರೋಪ ಎಂದು ತಿಳಿದುಬಂದಿದೆ.
Mohan Bhagwat: ಗೃಹ ಸಚಿವಪ್ರಿಯಾಂಕ್ ಖರ್ಗೆ ಇತ್ತೀಚೆಗೆ ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಆರ್ಎಸ್ಎಸ್ ಕೂಡ ಸರಿಯಾಗಿ ತಿರುಗೇಟು ನೀಡಿತ್ತು. ಹೀಗೆ ಆರ್ಎಸ್ಎಸ್ ಮತ್ತು ಕಾಂಗ್ರೆಸ್ ನಡುವಿನ ತಿಕ್ಕಾಟ ತಾರಕಕ್ಕೇರಿರುವ ಮಧ್ಯೆಯೇ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಜುಲೈ 6ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಪತ್ನಿಯ ಚಾರಿತ್ರ್ಯ ಶಂಕೆಯಿದ್ದ ಕಾರಣ ಪತಿಯೊಬ್ಬಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಥಣಿ ತಾಲೂಕಿನ ಖಾವತ್ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಎಂದು ಗುರುತಿಸಲಾಗಿದೆ.