ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಬೆಳಗಾವಿ
Self Harming: ಬೆಳಗಾವಿ ಪಿಜಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ; ಯುವತಿ ಸಾವಿಗೆ ಕಾರಣವಾಯ್ತಾ ಲವ್ ಬ್ರೇಕಪ್?

ಬೆಳಗಾವಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ

Self Harming: ಎಂಬಿಎ ಪದವಿ ಓದಿದ್ದ ಯುವತಿ ಕಳೆದ ಮೂರು ತಿಂಗಳಿನಿಂದ ಬೆಳಗಾವಿ ನಗರದ ಪಿಜಿಯಲ್ಲಿದ್ದಕೊಂಡು, ಖಾಸಗಿ ಕಂಪನಿಯಲ್ಲಿ ತರಬೇತಿ ಪಡೆಯುತ್ತಿದ್ದಳು. ಮಂಗಳವಾರ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Self Harming: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ಫೇಲ್‌ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

Self Harming: ವಿದ್ಯಾರ್ಥಿನಿ ಸೋಮವಾರ ಎಸ್‌ಎಸ್‌ಎಲ್‌ಸಿ ಎರಡನೇ ವಿಷಯದ ಪರೀಕ್ಷೆ ಬರೆದು ಬಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗುವ ಭಯದಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Infant murder Case: ಅಕ್ರಮ ಸಂಬಂಧ, ಯುಟ್ಯೂಬ್‌ ನೋಡಿ ಹೆರಿಗೆ, ತಿಪ್ಪೆಗೆಸೆದು ಹಸುಳೆ ಕೊಲೆ; ಜೋಡಿ ಆರೆಸ್ಟ್

ಅಕ್ರಮ ಸಂಬಂಧ, ಯುಟ್ಯೂಬ್‌ ನೋಡಿ ಹೆರಿಗೆ, ಹಸುಳೆ ಕೊಲೆ; ಜೋಡಿ ಆರೆಸ್ಟ್

ನವಮಾಸದ ಬಳಿಕ ಪ್ರಸವ ವೇದನೆ ಶುರುವಾದಾಗ ಪ್ರಿಯಕರ ಮಹಾಬಳೇಶ್​ಗೆ ವಿಡಿಯೋ ಕಾಲ್ ಮಾಡಿ ಹೇಳಿಕೊಂಡಿದ್ದಾಳೆ. ಆತ ಹೇಳಿದಂತೆ ಯುಟ್ಯೂಬ್‌ ವಿಡಿಯೋ ನೋಡಿಕೊಂಡು ಮಗುವಿಗೆ ಜನ್ಮ ಮಾಡಿಕೊಂಡಿದ್ದಾಳೆ. ಇದಾದ ಬಳಿಕ ಮಗು ಅತ್ತರೆ ಗೊತ್ತಾಗುತ್ತದೆ ಎಂದು ಬಾಯಿ ಮೂಗು ಹಿಡಿದು ಡಬ್ಬದಲ್ಲಿ ಹಾಕಿದ್ದಾಳೆ. ಈ ವೇಳೆ ತಲೆಗೆ ಬಲವಾಗಿ ಪೆಟ್ಟು ಬಿದ್ದು ಮಗು ಸಾವನ್ನಪ್ಪಿದೆ.

MES leader arrested: ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟ ಎಂಇಎಸ್ ಮುಖಂಡ ಬಂಧನ

ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟ ಎಂಇಎಸ್ ಮುಖಂಡ ಬಂಧನ

MES leader arrested: ಕರ್ನಾಟಕದಲ್ಲಿರುವ ಕನ್ನಡ ಸಂಘಟನೆಗಳು ನಾಲಾಯಕ್ ಎಂದು ವಿವಾದಾತ್ಮಕ ಹೇಳಿಕೆ ಕೊಟ್ಟು, ಕನ್ನಡಿಗರು ಮತ್ತು ಮರಾಠಿಗರ ನಡುವಿನ ಸೌಹಾರ್ದತೆ ಕದಡಲು ಯತ್ನಿಸಿದ ಆರೋಪದಡಿ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ.

Lakshmi Hebbalkar: ಪ್ರತಿ ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ: ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

ಪ್ರತಿ ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ: ಲಕ್ಷ್ಮೀ ಹೆಬ್ಬಾಳ್ಕರ್

Lakshmi Hebbalkar: ಮುಂದಿನ ಮಾರ್ಚ್‌ನಲ್ಲಿ ಪ್ರತಿಯೊಂದು ಜಿಲ್ಲೆಯಲ್ಲೂ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲು ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ. ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ಸೋಮವಾರ ನಡೆದ 3,000 ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಮಾತನಾಡಿದರು.

Gruha Arogya scheme: ಏಪ್ರಿಲ್‌ನಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ: ಸಚಿವ ದಿನೇಶ್ ಗುಂಡೂರಾವ್

ಏಪ್ರಿಲ್‌ನಲ್ಲಿ ಗೃಹ ಆರೋಗ್ಯ ಯೋಜನೆ ಜಾರಿ: ದಿನೇಶ್ ಗುಂಡೂರಾವ್

Gruha Arogya scheme: ಈಗಾಗಲೇ ಗೃಹ ಆರೋಗ್ಯ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಹೇಳಿದ್ದಾರೆ.

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್! 6ನೇ ಗ್ಯಾರಂಟಿ ಬಗ್ಗೆ ಸಿಎಂ ನಿರ್ಧಾರ;  ಸಚಿವೆ ಹೆಬ್ಬಾಳಕರ್ ಏನಂದ್ರು?

ಅಂಗನವಾಡಿ ಕಾರ್ಯಕರ್ತೆಯರಿಗಾಗಿಯೇ ಸರ್ಕಾರದಿಂದ 6ನೇ ಗ್ಯಾರಂಟಿ

ಅಂಗನವಾಡಿ ಕಾರ್ಯಕರ್ತೆಯರಿಗಾಗಿಯೇ ಸರ್ಕಾರದಿಂದ 6ನೇ ಗ್ಯಾರಂಟಿ ಯೋಜನೆ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್(Lakshmi Hebbalkar) ಹೇಳಿದ್ದಾರೆ. ಇದೇ ವೇಳೆ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಮೂರು ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಹಾಗೂ ವಿಭಾಗೀಯ ಮಟ್ಟದ ಸ್ತ್ರೀ ಶಕ್ತಿ ಗುಂಪುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಾಗುವುದು ಎಂದರು.

Karnataka Bandh: ಇತ್ತ ಕರ್ನಾಟಕ ಬಂದ್‌, ಅತ್ತ ಕನ್ನಡಿಗರನ್ನು ಬೆದರಿಸಿದವನಿಗೆ ಎಂಇಎಸ್‌ ಸನ್ಮಾನ!

ಕರ್ನಾಟಕ ಬಂದ್‌ ನಡುವೆಯೇ ಕನ್ನಡಿಗರನ್ನು ಬೆದರಿಸಿದವನಿಗೆ ಎಂಇಎಸ್‌ ಸನ್ಮಾನ!

ಸರ್ಕಾರಿ ನೌಕರನಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ತಿಪ್ಪಣ್ಣ ‌ಡೋಕ್ರೆಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದರು. ಇಂದು ಹಿಂಡಲಗಾ ಜೈಲಿನಿಂದ ತಿಪ್ಪಣ್ಣ ಡೋಕ್ರೆ ಹೊರಬಂದಿದ್ದು, ಎಂಇಎಸ್ ಮುಖಂಡ ‌ಶುಭಂ ಶಳ್ಕೆ ಹಾಗೂ ಕಾರ್ಯಕರ್ತರು ಆತನಿಗೆ ಸನ್ಮಾನ ಮಾಡಿದ್ದಾನೆ.

Ramdurg news: ಜಗದ್ಗುರು ರೇಣುಕಾಚಾರ್ಯ ಗುರುಕುಲ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

ವಿದ್ಯಾರ್ಥಿ ಗಳಿಗೆ ನಾಡಿನ ಸಂಸ್ಕಾರ, ಸಂಸ್ಕೃತಿಯ ಬೋಧನೆಗೆ ಸಹಕಾರಿ

ತಾಲೂಕಿನ ಗೊಡಚಿ ಗ್ರಾಮದ ಹತ್ತಿರ ನಿರ್ಮಿಸಲಿರುವ ಶ್ರೀ ಜಗದ್ಗುರು ರೇಣುಕಾ ಚಾರ್ಯ ಗುರುಕುಲ ನಿರ್ಮಾಣಕ್ಕೆ ಕಟಕೋಳ ಎಂ.ಚಂದರಗಿಯ ಶ್ರೀ ವೀರಭದ್ರ ಶಿವಯೋಗಿ ಶಿವಾ ಚಾರ್ಯ ಸ್ವಾಮೀಜಿ ಭೂಮಿಪೂಜೆ ಸಲ್ಲಿಸುವ ಮೂಲಕ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗುರುಕುಲ ನಿರ್ಮಾಣದಿಂದ ಈ ಭಾಗದಲ್ಲಿ ಹಲವು ವಿದ್ಯಾರ್ಥಿ ಗಳಿಗೆ ನಾಡಿನ ಸಂಸ್ಕಾರ, ಸಂಸ್ಕೃತಿಯ ಬೋಧನೆಗೆ ಸಹಕಾರಿಯಾಗಲಿದೆ

Ramdurg Crime News: ಜೇನುಹುಳು ದಾಳಿಗೆ ವ್ಯಕ್ತಿ ಬಲಿ

ಜೇನುಹುಳು ದಾಳಿಗೆ ವ್ಯಕ್ತಿ ಬಲಿ

ಮರ ಕಡಿಯುವ ಸಂದರ್ಭದಲ್ಲಿ ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಬಲಿಯಾದ ಘಟನೆ ತಾಲೂಕಿನ ಚೆನ್ನಾ ಪೂರ ಗ್ರಾಮದ ತೋಟದಲ್ಲಿ ನಡೆದಿದೆ. ಘಟನೆಯಲ್ಲಿ ಬಾಗಲಕೋಟ ಜಿಲ್ಲೆ ಲೋಕಾಪೂರ ಗ್ರಾಮದ ನಿವಾಸಿ ಶರೀಫ ಮೈಬುಸಾಬ ಅತ್ತಾರ (47) ಮೃತ ದುರ್ದೈವಿಯಾಗಿದ್ದು, ಮರ ಕಡಿಯುವ ಸಂದರ್ಭ ದಲ್ಲಿ ಹೆಜ್ಜೇನು ಗೂಡು ಕಾಣಿಸಿದೆ.

Belagavi news: ಬೆಳಗಾವಿಯಲ್ಲಿ ದೇವಾಲಯಕ್ಕೆ ಕಲ್ಲು ಎಸೆದ ಯುವಕ, ವಾತಾವರಣ  ಉದ್ವಿಗ್ನ

ಬೆಳಗಾವಿಯಲ್ಲಿ ದೇವಾಲಯಕ್ಕೆ ಕಲ್ಲು ಎಸೆದ ಯುವಕ, ವಾತಾವರಣ ಉದ್ವಿಗ್ನ

ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಎರಡೂ ಸಮುದಾಯದ ಜನರು ಪೊಲೀಸ್ ಠಾಣೆ ಮುಂದೆ ಜಮಾಯಿಸಿದರು. ಯುವಕನನ್ನು ತಮಗೆ ಒಪ್ಪಿಸುವಂತೆ ಹಿಂದೂ ಯುವಕರ ಪಡೆ ಒತ್ತಾಯಿಸಿತು. ಇದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

Belagavi Accident: ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಕಾರು ಅಪ್ಪಚ್ಚಿ; ಪವಾಡಸದೃಶವಾಗಿ ಇಬ್ಬರು ಪಾರು

ಬೆಳಗಾವಿಯಲ್ಲಿ ಕಾಂಕ್ರೀಟ್ ಮಿಕ್ಸರ್ ವಾಹನ ಉರುಳಿ ಕಾರು ಅಪ್ಪಚ್ಚಿ

Belagavi Accident: ಬೆಳಗಾವಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಕಾಂಕ್ರೀಟ್ ಮಿಕ್ಸರ್ ವಾಹ‌ನ ಉರುಳಿದ್ದರಿಂದ ವ್ಯಾಗನರ್‌ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಕಾರಿನೊಳಗೆ ಸಿಲುಕಿದ್ದ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ.

Maha Kumbh Mela: ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ಸಂತ್ರಸ್ತರ ಕುಟುಂಬಕ್ಕೆ ಬಂತು ಪರಿಹಾರದ ಹಣ

ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರ ಕುಟುಂಬಕ್ಕೆ ಬಂತು ಪರಿಹಾರ

ಪರಿಹಾರದ ಮೊತ್ತವನ್ನು ನೇರವಾಗಿ ಮೃತರ ಕುಟುಂಬಗಳಾದ ಜ್ಯೋತಿ ಹತ್ತರವಾಡ, ಮೇಘಾ ಹತ್ತರವಾಡ, ಮಹಾದೇವಿ ಬಾವನೂರ ಮತ್ತು ಅರುಣ್ ಕೋಪರ್ಡೆ ಅವರ ಖಾತೆಗಳಿಗೆ ಜಮಾ ಮಾಡಲಾಗಿದೆ. ಮಹಾಕುಂಭದ ಪ್ರಮುಖ ಸ್ನಾನದ ದಿನವಾದ ಮೌನಿ ಅಮಾವಾಸ್ಯೆಯಂದು ಸಂಗಮ ಘಾಟ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಭಕ್ತರು ಸಾವನ್ನಪ್ಪಿದ್ದರು.

ಗಡಿಭಾಗದ ಅಮಾಯಕ ಮರಾಠಿಗರಿಗೆ, ಕನ್ನಡ ಭಾಷಿಕರಿಗೆ ಕಿರಿಕ್

ಮರಾಠಿಯಲ್ಲೇ ದಾಖಲೆಗಾಗಿ ಕ್ಯಾತೆ

ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಬೆಳಗಾವಿ ಜಿಲ್ಲೆ ಅತ್ಯಂತ ಸೂಕ್ಷ್ಮ ಪ್ರದೇಶ. ಭಾಷೆ ವಿಷಯದಲ್ಲಿ ಹೊತ್ತಿಕೊಳ್ಳುವ ಸಣ್ಣ ಕಿಡಿಯೂ ಇಲ್ಲಿ ಎರಡು ರಾಜ್ಯಗಳ ಸ್ವಾಸ್ಥ್ಯ ಹಾಳು ಮಾಡುತ್ತವೆ. ಅನೇಕ ಬಾರಿ ಎಂಇಎಸ್ ಹಾಗೂ ಶಿವಸೇನೆ ಮಾಡುವ ಅವಾಂತರ ಹಾಗೂ ಪುಂಡಾಟಕ್ಕೆ ಅಮಾಯಕ ಮರಾಠಿ ಹಾಗೂ ಕನ್ನಡ ಭಾಷಿಕರು ತೊಂದರೆಗೆ ಒಳಗಾಗುತ್ತಾರೆ. ಈ ಮಧ್ಯೆ ಅಧಿಕಾರಿಗಳ ದ್ವಂದ್ವ ನಿರ್ಧಾ ರಕ್ಕೆ ಮತ್ತೊಮ್ಮೆ ಬೆಳಗಾವಿ ಹೊತ್ತಿ ಉರಿಯುವಂತಾಗಿದೆ.

Assault Case: ಎಂಇಎಸ್‌ ಪುಂಡಾಟ, ಕಂಡಕ್ಟರ್‌ ಬಳಿಕ ಗ್ರಾಮ ಪಂಚಾಯತ್‌ ಕಾರ್ಯದರ್ಶಿಗೆ ಹಲ್ಲೆ

ಎಂಇಎಸ್‌ ಪುಂಡಾಟ, ಕಂಡಕ್ಟರ್‌ ಬಳಿಕ ಗ್ರಾಮ ಪಂಚಾಯತ್‌ ಕಾರ್ಯದರ್ಶಿಗೆ ಹಲ್ಲೆ

ಬೆಳಗಾವಿ ತಾಲೂಕಿನ ಗೋಜಗಾ ಸಮೀಪ ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಅಂಬೇವಾಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚೇತನ್ ಪಾಟೀಲ್, ಹಾಲಿ ಅಧ್ಯಕ್ಷರ ಪುತ್ರ ವಿಕ್ರಮ್ ಯಳ್ಳೂರಕರ್ ಅವರ ಗ್ಯಾಂಗ್ ಹಲ್ಲೆ ಮಾಡಿದೆ ಎನ್ನಲಾಗಿದೆ.

Murder Case: ಪ್ರೇಯಸಿಯೊಂದಿಗೆ ಮದುವೆಗೆ ಹಠ; ಮಗನನ್ನೇ ಕೊಲೆಗೈದ ತಂದೆ, ಅಣ್ಣ!

ಪ್ರೇಯಸಿಯೊಂದಿಗೆ ಮದುವೆಗೆ ಹಠ; ಮಗನನ್ನೇ ಕೊಲೆಗೈದ ತಂದೆ, ಅಣ್ಣ!

Murder Case: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಚಿಕ್ಕನಂದಿಹಳ್ಳಿಯಲ್ಲಿ ಘಟನೆ ನಡೆದಿದೆ. ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಹಠ ಹಿಡಿದಿದ್ದ. ಪ್ರಾರಂಭದಲ್ಲಿ ಪೋಷಕರು ವಿರೋಧಿಸಿದ್ದರೂ ನಂತರ ವಿವಾಹಕ್ಕೆ ಒಪ್ಪಿದ್ದರು. ಆದರೆ, ನಿತ್ಯ ಕುಡಿದು ಬಂದು ಗಲಾಟೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ತಂದೆ, ಅಣ್ಣ ಸೇರಿ ಹಲ್ಲೆ ಮಾಡಿ ಕೊಂದಿದ್ದಾರೆ.

Kidnap Case: ನರ್ಸಿಂಗ್ ಓದುತ್ತಿದ್ದ ಯುವತಿ ನಾಪತ್ತೆ, ಯುವಕನ ಮೇಲೆ ಅಪಹರಣ ಕೇಸ್

ನರ್ಸಿಂಗ್ ಓದುತ್ತಿದ್ದ ಯುವತಿ ನಾಪತ್ತೆ, ಯುವಕನ ಮೇಲೆ ಅಪಹರಣ ಕೇಸ್

ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಾರೆ ಕೆಲಸ ಮಾಡ್ತಿದ್ದ ಸದ್ರುದ್ದೀನ್ ಬೇಪಾರಿ ಎಂಬಾತನ ವಿರುದ್ಧ ಯುವತಿ ಕುಟುಂಬದವರು ಅಪಹರಣದ ಆರೋಪ ಹೊರಿಸಿದ್ದಾರೆ. 17 ದಿನಗಳ ಹಿಂದೆ ಹಿಂದೂ ಹುಡುಗಿಯನ್ನು ಸದ್ರುದ್ದೀನ್ ಎಂಬಾತ ಅಪಹರಿಸಿ ಕರೆದೊಯ್ದಿದ್ದಾನೆ ಎಂದು ದೂರಲಾಗಿದೆ.

Self Harming: ಗಂಡನ ಕಿರುಕುಳ; ಮೂವರು ಮಕ್ಕಳೊಂದಿಗೆ ಕೃಷ್ಣಾನದಿಗೆ ಹಾರಿ ತಾಯಿ‌ ಆತ್ಮಹತ್ಯೆ

ಮೂವರು ಮಕ್ಕಳೊಂದಿಗೆ ಕೃಷ್ಣಾನದಿಗೆ ಹಾರಿ ತಾಯಿ‌ ಆತ್ಮಹತ್ಯೆ

Self Harming: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಘಟನೆ ನಡೆದಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಂಡ ದಿನನಿತ್ಯ ಗಲಾಟೆ ಮಾಡುತ್ತಿದ್ದ ಕಾರಣಕ್ಕೆ ಮಹಿಳೆ ತನ್ನ ಮೂರು ಮಕ್ಕಳ ಜತೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Murder Case: ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!

ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಯುವಕ!

Murder Case: ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ಭೀಕರ ಘಟನೆ ನಡೆದಿದೆ. ಚಿಕ್ಕಮ್ಮನ ಮನೆಗೆ ಹೋಗಿದ್ದ ಯುವಕನ ಜತೆ ಸೇರಿ ವಿಷ ಸೇವಿಸಿದ್ದಳು. ಬಳಿಕ ಯುವತಿಯ ಕತ್ತು ಸೀಳಿ ಕೊಲೆಗೈದ ಯುವಕ ತಾನೂ ಅತ್ಮಹತ್ಯೆ ಮಾಡಿಕೊಂಡಿದ್ದಾನೆ.

Kidnap Case: ಉದ್ಯಮಿ ಕಿಡ್ನಾಪಿಂಗ್‌ ಕೇಸ್‌ನಲ್ಲಿ ಸತೀಶ್‌ ಜಾರಕಿಹೊಳಿ ಆಪ್ತೆಯೇ ಕಿಂಗ್‌ಪಿನ್‌; ಕೊನೆಗೂ ಖಾಕಿ ಬಲೆಗೆ ಬಿದ್ದ ನಾಯಕಿ

ಉದ್ಯಮಿ ಕಿಡ್ನಾಪಿಂಗ್‌ ಕೇಸ್‌; ಸತೀಶ್‌ ಜಾರಕಿಹೊಳಿ ಆಪ್ತೆ ಅರೆಸ್ಟ್‌

ಫೆಬ್ರವರಿ 14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ ಅವರ ಕಿಡ್ನಾಪ್ ಆಗಿತ್ತು. ಆರೋಪಿಗಳು ಕಿಡ್ನಾಪ್ ಮಾಡಿ ಐದು ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನಾಪ್ ಪ್ರಕರಣ ದಾಖಲಾದ 24ಗಂಟೆಯಲ್ಲಿ ಬಸವರಾಜ ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದರು. ಇದೀಗ ಪ್ರಕರಣದ ಕಿಂಗ್‌ಪಿನ್‌ ಗೋಕಾಕ್‌ನ ಕಾಂಗ್ರೆಸ್‌ ಘಟಕದ ಬ್ಲಾಕ್‌ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿ ಅರೆಸ್ಟ್‌ ಆಗಿದ್ದಾರೆ.

Raju Kage: ಕಾಗವಾಡ ಶಾಸಕ ರಾಜು ಕಾಗೆ ಪುತ್ರಿ ನಿಧನ

ಕಾಗವಾಡ ಶಾಸಕ ರಾಜು ಕಾಗೆ ಪುತ್ರಿ ನಿಧನ

ಬೆಳಗಾವಿ ಜಿಲ್ಲೆಯ ಕಾಗವಾಡ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಅನಾರೋಗ್ಯ ಹಿನ್ನೆಲೆಯಲ್ಲಿ ಶನಿವಾರ (ಮಾ. 1) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ನೇರ್ಲಿ ಗ್ರಾಮದ ಡಾ. ಅನಿಲ ಪಾಟೀಲ ಅವರನ್ನು ವರಿಸಿದ್ದ ರಾಜು ಕಾಗೆ ಅವರ ಪುತ್ರಿ ಕೃತಿಕಾ ರಾಜು ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

Belagavi News: ಹೆಲ್ಮೆಟ್ ಕೇಳಿದ್ದಕ್ಕೆ ಅಟ್ರಾಸಿಟಿ ಕೇಸ್ ಹಾಕುವುದಾಗಿ ಧಮ್ಕಿ; ಸಚಿವ ಸತೀಶ್ ಜಾರಕಿಹೊಳಿ ಹೆಸರಲ್ಲಿ ಪುಂಡಾಟ

ಹೆಲ್ಮೆಟ್ ಕೇಳಿದ್ದಕ್ಕೆ ಅಟ್ರಾಸಿಟಿ ಕೇಸ್ ಹಾಕುವುದಾಗಿ ಧಮ್ಕಿ

ಹೆಲ್ಮೆಟ್‌ ಧರಿಸದ ಬೈಕ್‌ ಸವಾರನನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್‌ ಮೇಲೆ ಧಮ್ಕಿ ಹಾಕಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಅಲ್ಲದೆ ಸಚಿವ ಸತೀಶ್ ಜಾರಕಿಹೊಳಿ ಹೆಸರು ಹೇಳಿ ಪುಂಡಾಟ ಮೆರೆಯಲಾಗಿದೆ. ಸದ್ಯ ಘಟನೆಯ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಹಡಿದಾಡುತ್ತಿದೆ.

ಕೆರೂರ ರಸ್ತೆಗಳಲ್ಲ, ಮೃತ್ಯೂ ಕೂಪಗಳು, ಚರಂಡಿಗಳು, ತಿಪ್ಪೆಗಳು ರೋಗದ ಕಾರ್ಖಾನೆ

ಆಡಳಿತ ವ್ಯವಸ್ಥೆಯ ಜಾಣ ಕುರುಡು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ತ್ಯಾಜ್ಯ

ಪಟ್ಟಣದಲ್ಲಿ ಸಾಕಷ್ಟು ಪೌರ ಕಾರ್ಮಿಕರಿದ್ದು ಸರಿಯಾದ ನಿರ್ವಹಣೆಯಿಲ್ಲದೆ ಪರದಾಡು ವಂತಾಗಿದೆ. ಪಟ್ಟಣದಲ್ಲಿ ಆಡಳಿತವ್ಯವಸ್ಥೆ ಮಂಕಾಗಿದ್ದು ಸರಿಯಾದ ನಿರ್ವಹಣೆ ಅತೀ ಅವಶ್ಯ ಕವಾಗಿದ್ದು ಅಧಿಕಾರಿಗಳ ಜಾಣ ಕುರುಡನ್ನು ಮೇಲಧಿಕಾರಿಗಳು ಸೂಕ್ತ ಕ್ರಮ ಕೈ ಗೊಂಡು ಸ್ವಚ್ಚ ನಗರ ನಿರ್ಮಾಣ ಮಾಡಬೇಕಿದೆ

Vishwavani Impact: ಕಂಡಕ್ಟರ್ ಮೇಲೆ ಮರಾಠಿ ಪುಂಡರ ಹಲ್ಲೆ ಪ್ರಕರಣ; ಕರ್ತವ್ಯಲೋಪ ಹಿನ್ನೆಲೆ ಮಾರಿಹಾಳ ಠಾಣೆ ಇನ್ಸ್ಪೆಕ್ಟರ್ ವರ್ಗಾವಣೆ

ಕರ್ತವ್ಯಲೋಪ ಹಿನ್ನೆಲೆ ಮಾರಿಹಾಳ ಠಾಣೆ ಇನ್ಸ್ಪೆಕ್ಟರ್ ವರ್ಗಾವಣೆ

Vishwavani Impact: ನಿರ್ವಾಹಕ ಮಹಾದೇವ ಹುಕ್ಕೇರಿ ಬಸ್ ಸಮೇತವಾಗಿ ಮಾರಿಹಾಳ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಲು‌ ಮುಂದಾಗಿದ್ದರು. ಆದರೆ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ದೂರು ದಾಖಲಿಸಿಕೊಳ್ಳದೆ ವಾಪಸ್ ಕಳುಹಿಸಿದ್ದರು. ಹೀಗಾಗಿ ಠಾಣಾಧಿಕಾರಿ ವಿರುದ್ಧ ಮೇಲಧಿಕಾರಿಗಳು ಶಿಸ್ತುಕ್ರಮ ಕೈಗೊಂಡಿದ್ದಾರೆ.