ಶಾಸಕ ಲಕ್ಷ್ಮಣ ಸವದಿ ಕಣ್ಣೆದುರೇ ಆಪ್ತ ಹೃದಯಾಘಾತದಿಂದ ಸಾವು
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದ ಕಾರ್ಯಕರ್ತರೊಬ್ಬರ ಮನೆಯ ಗೃಹ ಪ್ರವೇಶಕ್ಕೆ ಲಕ್ಷ್ಮಣ ಸವದಿ ಮತ್ತು ರಾವಸಾಬ ಬೇವನೂರು ಅವರು ತೆರಳಿದ್ದರು. ಮನೆಯ ಒಳಗಡೆ ಒಟ್ಟಿಗೆ ಫೋಟೋಶೂಟ್ ಮುಗಿಸಿ ಹೊರಗಡೆ ಬರುತ್ತಿದ್ದಂತೆ ಶಾಸಕರ ಆಪ್ತನಿಗೆ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.