ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಳಗಾವಿ

MLA Shashikala Jolle: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನಾಡಿಯ 30ಕ್ಕೂ ಹೆಚ್ಚು ಕಾರ್ಯಕರ್ತರು: ಶಾಸಕಿ ಶಶಿಕಲಾ ಜೊಲ್ಲೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬೆನಾಡಿಯ 30ಕ್ಕೂ ಹೆಚ್ಚು ಕಾರ್ಯಕರ್ತರು

ಕ್ಷೇತ್ರದ ಬೆನಾಡಿ ಗ್ರಾಮದ ದಲಿತ ಸಮಾಜದ ಪ್ರಮುಖ ಮುಖಂಡರಾದ ಬಾಳಾಸೋ ಮಾಳಗೆ, ಮೋಹನ ಕೋರೆ, ಅಜೀತ ಮಾನೆ ಹಾಗೂ ಮಹಾದೇವ ಬೋರೆ ಅವರ ನೇತೃತ್ವದಲ್ಲಿ, ರಾಷ್ಟ್ರವಾದಿ ಕಾಂಗ್ರೆಸ್ (NCP) ಹಾಗೂ ಕಾಂಗ್ರೆಸ್ ಪಕ್ಷದ 30ಕ್ಕೂ ಹೆಚ್ಚು ಸಕ್ರಿಯ ಕಾರ್ಯಕರ್ತರು ಇತ್ತೀಚೆಗೆ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿ ಬಿಜೆಪಿ ಸೇರ್ಪಡೆಯಾದರು.

ಬೆಳಗಾವಿಯಲ್ಲಿ ಹೀನ ಕೃತ್ಯ; ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

ಕೋಚಿಂಗ್ ಸೆಂಟರ್‌ನಲ್ಲಿ ಬಾಲಕಿಯರ ಮೇಲೆ ಶಿಕ್ಷಕನಿಂದಲೇ ಲೈಂಗಿಕ ದೌರ್ಜನ್ಯ!

Belagavi News: ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಚಿಂಗ್ ಸೆಂಟರ್‌ನಲ್ಲಿ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಕೃತ್ಯ ಖಂಡಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಉಗ್ರ ಪ್ರತಿಭಟನೆ ನಡೆಸಿದ್ದಾರೆ.

Belagavi News: ಇನ್ಶೂರೆನ್ಸ್‌ ಹಣದ ಆಸೆಗಾಗಿ ಚಿನ್ನದಂಗಡಿಯಲ್ಲಿ ಕಳ್ಳತನದ ನಾಟಕ; ಮಾಲೀಕ ಅರೆಸ್ಟ್‌

ಇನ್ಶೂರೆನ್ಸ್‌ ಹಣದ ಆಸೆಗಾಗಿ ಚಿನ್ನದಂಗಡಿಯಲ್ಲಿ ಕಳ್ಳತನದ ನಾಟಕ!

ಬೆಳಗಾವಿಯ ಚಿನ್ನದಂಗಡಿಯಲ್ಲಿ ಕಳ್ಳತನವಾಗಿದೆ ಎಂದು ಮಾಲೀಕ ದೂರು ನೀಡಿದ್ದರು. 65.95 ಲಕ್ಷ ರೂ. ಮೌಲ್ಯದ ಚಿನ್ನ ಹಾಗೂ ನಗದು ಹಣ ಕಳ್ಳತನವಾಗಿದೆ ಎಂದು ಖಡೇಬಜಾರ್ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಆದರೆ, ಅಂಗಡಿ ಮಾಲೀಕನೇ ಆರೋಪಿ ಎಂದು ತನಿಖೆ ವೇಳೆ ತಿಳಿದುಬಂದಿದೆ.

Belagavi News: ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಯರಗಟ್ಟಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ಸಹೋದರರ ಬರ್ಬರ ಹತ್ಯೆ

ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿ ಸಹೋದರ ಸಂಬಂಧಿಕರ ನಡುವೆ ನಡೆದ ಜಗಳವು ತೀವ್ರ ಸ್ವರೂಪ ಪಡೆದು, ಸುಮಾರು 6 ಜನರು ಸೇರಿ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿದ್ದಾರೆ.

ಸಚಿವ ಸ್ಥಾನಕ್ಕೆ ಸವದಿ ಪಟ್ಟು, ಲಕ್ಮೀ ನಿರೀಕ್ಷೆ

ಸಚಿವ ಸ್ಥಾನಕ್ಕೆ ಸವದಿ ಪಟ್ಟು, ಲಕ್ಮೀ ನಿರೀಕ್ಷೆ

ರಾಜಕೀಯವಾಗಿ ಪ್ರಬಲ ಜಿಲ್ಲೆಯಾಗಿ ಗುರುತಿಸಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಸದ್ಯ 11 ಕಾಂಗ್ರೆಸ್ ಶಾಸಕರಿದ್ದು, ಈ ಪೈಕಿ ಸತೀಶ್ ಜಾರಕಿಹೊಳಿ ಈಗಾಗಲೇ ಸಚಿವರಾಗಿದ್ದಾರೆ. ಇನ್ನುಳಿದ ಹತ್ತು ಜನರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದ್ದು ಶಾಸಕರ ನಡುವೆ ಪೈಪೋಟಿ ಏರ್ಪಟ್ಟಿದೆ. ಅಥಣಿ ಶಾಸಕ ಲಕ್ಷ್ಮಣ ಸವದಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ರಾಮದುರ್ಗ ಶಾಸಕ ಅಶೋಕ್ ಪಟ್ಟಣ ಈ ಬಾರಿ ಡಿಕೆಶಿ ಸಂಪುಟದಲ್ಲಿ ಸಚಿಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದಾರೆ.

RSS Baithak In Belagavi: ರಾಮ ಮಂದಿರ ಹುಂಡಿ‌ ಹಣ ಕಳ್ಳತನ ಪ್ರಕರಣ; ದುಃಖ ವ್ಯಕ್ತಪಡಿಸಿದ ಆರ್‌ಎಸ್‌ಎಸ್‌

ರಾಮ ಮಂದಿರ ಹುಂಡಿ‌ ಹಣ ಕಳ್ಳತನ; ದುಃಖ ವ್ಯಕ್ತಪಡಿಸಿದ ಆರ್‌ಎಸ್‌ಎಸ್‌

ಬೆಳಗಾವಿ ನಗರದಲ್ಲಿ ಕಳೆದ ಮೂರು ದಿನಗಳಿಂದ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ಭಾನುವಾರ ಮುಕ್ತಾಯವಾಯಿತು. ಈ‌ ಮಹತ್ವದ ಸಭೆಯಲ್ಲಿ ಅಯೋಧ್ಯೇ ರಾಮ ಮಂದಿರದಲ್ಲಿ ಉಂಟಾದ ಹುಂಡಿ ಹಣ ಕಳ್ಳತನ ಪ್ರಕರಣದ ಕುರಿತು ಗಂಭೀರ ಚರ್ಚೆ ಮಾಡಲಾಗಿದೆ.

Belagavi News: ಅಣಬೆ ತಿನ್ನೋ ಮುನ್ನ ಎಚ್ಚರ; ಮಶ್ರೂಮ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಬೆಳಗಾವಿಯಲ್ಲಿ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ಅಸ್ವಸ್ಥ!

ಮಳೆಗಾಲದಲ್ಲಿ ಎಲ್ಲೆಂದರಲ್ಲಿ ಬೆಳೆಯುವ ಅಣಬೆಗಳ ಬಗ್ಗೆ ಜಾಗ್ರತೆ ಇರಬೇಕಾಗುತ್ತದೆ. ಹೊಲಗಳಲ್ಲಿ ಬೆಳೆಯುವ ಅಣಬೆಗಳ ಮೇಲೆ ಕ್ರಿಮಿನಾಶಕಗಳು ಬಿದ್ದಿರುವ ಸಾಧ್ಯತೆ ಹೆಚ್ಚಿರುತ್ತದೆ. ಇನ್ನು ಕೆಲವು ಜಾತಿಯ ಅಣಬೆಗಳು ನೈಸರ್ಗಿಕವಾಗಿಯೇ ವಿಷಕಾರಿಯಾಗಿರುತ್ತವೆ. ಹೀಗಾಗಿ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.

ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಸಿಸಿಟಿವಿ ಅಳವಡಿಸಲು ಸಿಎಂ ಆದೇಶ

ರಾಜ್ಯದ ಎಲ್ಲಾ ದೇವಾಲಯದ ಮೇಲೂ ಸಿಎಂ ನಿಗಾ

ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವಂತ ದೇಣಿಗೆ ಕಳ್ಳತನ ಪ್ರಕರಣಗಳು ರಾಜ್ಯದಲ್ಲಿ ನಡೆಯದಿರಲಿ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳ ಮೇಲೆ ನಿಗಾ ಇರಿಸಲು ಸಿಸಿಟಿವಿ ಅಳವಡಿಸುವಂತೆ ಆದೇಶಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ 1 ಕೋಟಿ ರೂ. ಅನುದಾನ: ಸಿಎಂ ಡಿ.ಕೆ. ಶಿವಕುಮಾರ್‌ ಆದೇಶ

ಕುಡಿಯುವ ನೀರಿಗಾಗಿ ಪ್ರತೀ ವಿಧಾನಸಭೆ ಕ್ಷೇತ್ರಕ್ಕೆ 1 ಕೋಟಿ ರೂ:ಸಿಎಂ

CM DK Shivakumar: ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Karnataka Rains: ರಾಜ್ಯದಲ್ಲಿ ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

ಮುಂದಿನ 3 ದಿನ ಅಬ್ಬರಿಸಲಿದೆ ಮಳೆ; ಪಶ್ಚಿಮ ಘಟ್ಟಗಳಲ್ಲಿ ಭೂಕುಸಿತ ಎಚ್ಚರಿಕೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

Karnataka Weather: ಆರೆಂಜ್‌ ಅಲರ್ಟ್;‌ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

ಆರೆಂಜ್‌ ಅಲರ್ಟ್;‌ ರಾಜ್ಯದಲ್ಲಿ ಮುಂದಿನ 4 ದಿನ ಆರ್ಭಟಿಸಲಿದೆ ಮಳೆ!

Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Kittur News: ಪಟ್ಟಣ ಪಂಚಾಯಿತಿ ವಿರುದ್ಧ ಸುಳ್ಳು ಆರೋಪ; ವೈಯಕ್ತಿಕ ಲಾಭಕ್ಕಾಗಿ ದಯಾಮರಣದ ನಾಟಕವಾಡಿದ ದಂಪತಿ!

ವೈಯಕ್ತಿಕ ಲಾಭಕ್ಕಾಗಿ ದಯಾಮರಣದ ನಾಟಕವಾಡಿದ ದಂಪತಿ!

ಕಿತ್ತೂರು ಪಟ್ಟಣದ ಪಟ್ಟಣದ ನಿವಾಸಿಗಳಾದ ಮಂಜುನಾಥ ರುದ್ರಪ್ಪ ಸವದಿ ಮತ್ತು ಶೃತಿ ಮಂಜುನಾಥ ಸವದಿ ದಂಪತಿ, ನಮಗೆ ಉದ್ದೇಶಪೂರ್ವಕವಾಗಿ ಪಟ್ಟಣ ಪಂಚಾಯತಿ ಅಧಿಕಾರಿಗಳು ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ್ದಾರೆ ಎಂಬ ಗಂಭೀರ ಆರೋಪ ಮಾಡಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದರು. ಆದರೆ, ಇದು ಸುಳ್ಳು ಆರೋಪ ಎಂದು ತಿಳಿದುಬಂದಿದೆ.

Family seeks euthanasia: ಕುಡಿಯುವ ನೀರಿನ ಸಂಪರ್ಕ ಉದ್ದೇಶಪೂರ್ವಕ ಸ್ಥಗಿತಕ್ಕೆ ಖಂಡನೆ: ದಯಾಮರಣ ಕೋರಿದ ಕುಟುಂಬ

ನೀರಿನ ಸಂಪರ್ಕ ಸ್ಥಗಿತ: ದಯಾಮರಣ ಕೋರಿದ ಕುಟುಂಬ

ಪಟ್ಟಣದ ಮಂಜುನಾಥ ರುದ್ರಪ್ಪ ಸವದಿ ಹಾಗೂ ಶೃತಿ ಮಂಜುನಾಥ ಸವದಿ ಅವರ ಕುಟುಂಬಕ್ಕೆ ಪಟ್ಟಣ ಪಂಚಾಯತಿಯಿಂದ ಇದ್ದ ಕುಡಿಯುವ ‌ನೀರಿನ‌ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಉದ್ದೇಶಪೂರ್ವಕವಾಗಿ ಈ ರೀತಿ ಕ್ರಮ ಜರುಗಿಸಿದ್ದಾರೆ ಎಂದು ಕುಟುಂಬದವರು ಅಧಿಕಾರಿಗಳ ವಿರುದ್ಧ ಸಿಡಿದೆದ್ದಿದ್ದಾರೆ.

Belagavi News: ಆರ್‌ಎಸ್‌ಎಸ್‌-ಕಾಂಗ್ರೆಸ್‌ ತಿಕ್ಕಾಟದ ನಡುವೆ ರಾಜ್ಯಕ್ಕೆ ಮೋಹನ್ ಭಾಗವತ್ ಭೇಟಿ; ಜುಲೈ 6ರಂದು ಬೆಳಗಾವಿಗೆ ಆಗಮನ

ಜುಲೈ 6ರಂದು ಮೋಹನ್‌ ಭಾಗವತ್‌ ಬೆಳಗಾವಿಗೆ

Mohan Bhagwat: ಗೃಹ ಸಚಿವಪ್ರಿಯಾಂಕ್‌ ಖರ್ಗೆ ಇತ್ತೀಚೆಗೆ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಆರ್‌ಎಸ್‌ಎಸ್‌ ಕೂಡ ಸರಿಯಾಗಿ ತಿರುಗೇಟು ನೀಡಿತ್ತು. ಹೀಗೆ ಆರ್‌ಎಸ್‌ಎಸ್‌ ಮತ್ತು ಕಾಂಗ್ರೆಸ್‌ ನಡುವಿನ ತಿಕ್ಕಾಟ ತಾರಕಕ್ಕೇರಿರುವ ಮಧ್ಯೆಯೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಜುಲೈ 6ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Karnataka water crisis: ಜಲಾಶಯಗಳಲ್ಲಿ ಡೆಡ್ ಸ್ಟೋರೇಜ್ ಮಟ್ಟ ತಲುಪಿದ ನೀರು; ಎಚ್ಚರಿಕೆಯಿಂದ ಬಳಸಲು ಡಿಸಿಎಂ ಸೂಚನೆ

ಕುಡಿಯುವ ನೀರು ಕೊರತೆಯಾಗದಂತೆ ನಿಗಾ ವಹಿಸಿ: ಡಿಸಿಎಂ ಸೂಚನೆ

Belagavi News: ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ನಡೆದ ಕಂದಾಯ ದಿನಾಚರಣೆ-2026 ಹಾಗೂ ಬೆಳಗಾವಿ ವಿಭಾಗದ ಹವಾಮಾನ ಪರಿಸ್ಥಿತಿ ಹಾಗೂ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ ಅವರು ಮಾತನಾಡಿದ್ದು, ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ.

ಗಾಢ ನಿದ್ದೆಯಲ್ಲಿದ್ದ ಪತ್ನಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪತಿ

ಪತ್ನಿಯನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಪತಿ

ಪತ್ನಿಯ ಚಾರಿತ್ರ್ಯ ಶಂಕೆಯಿದ್ದ ಕಾರಣ ಪತಿಯೊಬ್ಬಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಅಥಣಿ ತಾಲೂಕಿನ ಖಾವತ್‌ಖೋಪ್ ಗ್ರಾಮದ ಮೂಲದ ಶೋಭಾ ಪರಗೊಂಡ ಸರ್ವಾಡ್ ಎಂದು ಗುರುತಿಸಲಾಗಿದೆ.

ಮಗ ಹುಟ್ಟಿದಕ್ಕೆ ಪಾರ್ಟಿ ಕೇಳಿದ ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ವ್ಯಕ್ತಿ

ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ವ್ಯಕ್ತಿ

ಗಂಡು ಮಗು ಹುಟ್ಟಿದೆ ಪಾರ್ಟಿ ಕೊಡಿಸು ಎಂದು ಕೇಳಿದ ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ‌ತಾಲೂಕಿನ ವಣ್ಣೂರ ಗ್ರಾಮದಲ್ಲಿ ನಡೆದಿದೆ.ವಣ್ಣೂರ ಗ್ರಾಮದ ಹನುಮಂತಪ್ಪ ಯಮನಪ್ಪ ಇಟಗಿ ಕೊಲೆಯಾದ ವ್ಯಕ್ತಿ. ಅದೇ ಊರಿನ ವಿಶ್ವನಾಥ ಪೂಜೇರಿ ಕೊಲೆ ಮಾಡಿರುವ ಆರೋಪಿ. ಹನುಮಂತಪ್ಪನನ್ನು ವಿಶ್ವನಾಥ ಕಲ್ಲಿನಿಂದ ಕೊಲೆ ಮಾಡಿದ್ದಾನೆ.

Vishwavani Impact: ಪಿಡಿಒ ಅಮಾನತು: ನೀರು ಪೂರೈಕೆಗೆ ಕ್ರಮ

ಪಿಡಿಒ ಅಮಾನತು: ನೀರು ಪೂರೈಕೆಗೆ ಕ್ರಮ

ಬೀರನೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 80ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಚೇರಿ ಸ್ಪಂದಿಸಿದೆ. ಜೂ.15ರಂದು ಬೀರನೂರು ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ 80ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದ ಕುರಿತು ಜೂ.18ರಂದು ವಿಶ್ವವಾಣಿ ಪತ್ರಿಕೆಯಲ್ಲಿ ಸುದ್ದಿ ಪ್ರಕಟಗೊಂಡಿತ್ತು

ಸಚಿವ ಸತೀಶ್‌ ಜಾರಕಿಹೊಳಿ ಭಾವ ವೈ. ಮಂಜುನಾಥ್‌ ಮನೆ ಮೇಲೆ ಇಡಿ ದಾಳಿ

ಜಾರಕಿಹೊಳಿ ಸಹೋದರಿ ಪತಿ ವೈ. ಮಂಜುನಾಥ್‌ ಮನೆ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಗೆ ಇಡಿ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ ಅವರ ನಿವಾಸ ಸೇರಿದಂತೆ 6 ಕಡೆಗಳಲ್ಲಿ ಇಡಿ ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ. ವೈ.ಮಂಜುನಾಥ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿಯಾಗಿದ್ದು, ಅಬಕಾರಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ: ಜೋಶಿ ವಿಶ್ವಾಸ

2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರುತ್ತದೆ: ಜೋಶಿ

Karnataka Assembly Election: ಬೇರೆ ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮುಂದೆ ಇಲ್ಲೂ ಬಿಜೆಪಿ ಆಡಳಿತ ನಿಶ್ಚಿತ. ನಮ್ಮ ಹೈಕಮಾಂಡ್ ರಾಜ್ಯದಲ್ಲಿನ ಎಲ್ಲ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

Belgaum News: ಗೊಡಚಿಯಲ್ಲಿ ಪರಿಸರ ಜಾಗೃತಿ ಶಿಬಿರ: 50 ಗಿಡಗಳ ವಿತರಣೆ

ಗೊಡಚಿಯಲ್ಲಿ ಪರಿಸರ ಜಾಗೃತಿ ಶಿಬಿರ: 50 ಗಿಡಗಳ ವಿತರಣೆ

ಗಿಡ ನೆಡುವುದು, ಸಾವಯವ ಕೃಷಿ ಅಳವಡಿಸಿಕೊಳ್ಳುವುದು, ಮನೆ ತೋಟ ಬೆಳೆಸುವುದು, ಸಾರ್ವಜನಿಕ ಸಾರಿಗೆ ಬಳಕೆ, ವಾಹನಗಳ ಮಾಲಿನ್ಯ ನಿಯಂತ್ರಣ ಹಾಗೂ ಶಬ್ದ ಮಾಲಿನ್ಯ ತಡೆಗಟ್ಟುವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. “ಇಂದು ನಾವು ಪರಿಸರವನ್ನು ರಕ್ಷಿಸಿದರೆ, ನಾಳೆ ಪರಿಸರ ನಮ್ಮನ್ನು ರಕ್ಷಿಸುತ್ತದೆ

2 ಕೋಟಿ ಇನ್ಷುರೆನ್ಸ್ ಹಣಕ್ಕಾಗಿ ಮಾಜಿ ಸೈನಿಕ ಕೊಲೆ: ಪತ್ನಿ, ಆಕೆಯ ಲವರ್‌ ಸೇರಿ 9 ಮಂದಿ ಬಂಧನ

2 ಕೋಟಿ ಇನ್ಷುರೆನ್ಸ್ ಹಣಕ್ಕಾಗಿ ಮಾಜಿ ಯೋಧನ ಕೊಲೆ

ಇನ್ಶುರೆನ್ಸ್ ಹಣಕ್ಕಾಗಿ ತನ್ನ ಲವರ್ ಜೊತೆ ಹತ್ಯೆ ಪತ್ನಿಯೇ ಮಾಜಿ ಯೋಧನಾಗಿದ್ದ ತನ್ನ ಪತಿಯನ್ನು ಕೊಲೆ ಮಾಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಹುಕ್ಕೇರಿ ತಾಲೂಕಿನ ಘೋಡಗೇರಿಯಲ್ಲಿ ನಡೆದಿದೆ. ಹುಕ್ಕೇರಿ ತಾಲ್ಲೂಕಿನ ಘೋಡಗೇರಿ ಗ್ರಾಮದ ನಿವಾಸಿ ಮಾಜಿ ಸೈನಿಕ ಸಂದೀಪ್ ಮೃತ ಮಾಜಿ ಯೋಧ.

ಶಿವಂ ಅಸೋಸಿಯೇಟ್ಸ್ ವಂಚನೆ ಕೇಸ್‌; ಜೈಲಿನಿಂದ ರಿಲೀಸ್‌ ಆಗುತ್ತಲೇ ʼಓಂ ನಮಃ ಶಿವಾಯʼ ಎಂದ ನೀಲಣ್ಣವರ್‌!

ವಂಚನೆ ಪ್ರಕರಣ; ಶಿವಾನಂದ ನೀಲಣ್ಣವರ್‌ ಜೈಲಿನಿಂದ ರಿಲೀಸ್‌

Shivam Associates Scam: ನ್ಯಾಯಾಲಯವು ಕೆಲ ಕಠಿಣ ಷರತ್ತುಗಳನ್ನು ವಿಧಿಸಿ ಶಿವಾನಂದ ನೀಲಣ್ಣವರ್‌ಗೆ ಬೇಲ್‌ ಮಂಜೂರು ಮಾಡಿದೆ. ಹೆಚ್ಚಿನ ಬಡ್ಡಿ ಆಮಿಷ ತೋರಿ ಬೆಳಗಾವಿಯಲ್ಲಿ ಮಾಜಿ ಸೈನಿಕರು ಹಾಗೂ ಸಾರ್ವಜನಿಕರಿಂದ ಸಾವಿರಾರು ಕೋಡಿ ಹಣ ಸಂಗ್ರಹಿಸಿರುವ ಆರೋಪದಲ್ಲಿ ಮೇ15ರಂದು ಮಾಳಮಾರುತಿ ಪೊಲೀಸರಿಂದ ಶಿವಾನಂದ್ ನೀಲಣ್ಣವರ್ ಬಂಧನವಾಗಿತ್ತು. ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಇದೀಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಗ್ರಾಮಗಳತ್ತ ಲಕ್ಷ್ಮೀ ಹೆಬ್ಬಾಳ್ಕರ್ ಹೆಜ್ಜೆ; ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಸ್ಪಂದನೆ

ಗ್ರಾಮಗಳಿಗೆ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ಪರಿಶೀಲನೆ

Laxmi Hebbalkar: ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ತಮ್ಮ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವುದರ ಜತೆಗೆ ತಾವೇ ಗ್ರಾಮಗಳಿಗೆ ತೆರಳಿ ಅಲ್ಲಿನ ವಾಸ್ತವ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದು, ಜನರ ಅಗತ್ಯಗಳು ಹಾಗೂ ಮೂಲಸೌಕರ್ಯ ಸಮಸ್ಯೆಗಳ ಬಗ್ಗೆ ನೇರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

Loading...