ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಳಗಾವಿ

ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಭರ್ತಿ ಮಾಡಿ; ಸಿಎಂಗೆ ತಜ್ಞರ ಸಮಿತಿ ಶಿಫಾರಸು

ಕಲ್ಯಾಣ ಕರ್ನಾಟಕದಲ್ಲಿ 21,381 ಶಿಕ್ಷಕರ ಹುದ್ದೆ ಭರ್ತಿಗೆ ಶಿಫಾರಸು

Kalyana Karnataka: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತರಬೇತಿ ಪಡೆದ ಶಿಕ್ಷಕರ ಲಭ್ಯತೆ ಖಚಿತಪಡಿಸಲು ವರ್ಗಾವಣೆ ನೀತಿಯ ಪರಿಶೀಲನೆ ನಡೆಸುವ ಅಗತ್ಯವಿದೆ. ಮೂಲಭೂತ ಸಾಕ್ಷರತೆ ಮತ್ತು ಗಣಿತಜ್ಞತೆ ಕಾರ್ಯಕ್ರಮದ ಪರಿಣಾಮಕಾರಿ ಮತ್ತು ಫಲಿತಾಂಶಾಧಾರಿತ ಅನುಷ್ಠಾನಕ್ಕೆ ತಂತ್ರ ರೂಪಿಸುವುದು ಸೇರಿ ಹಲವು ಶಿಫಾರಸುಗಳನ್ನು ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿ ಮಾಡಿದೆ.

Laxmi Hebbalkar: ಪಾಲಕರ ಕನಸನ್ನು ನನಸಾಗಿಸುವುದು ಮಕ್ಕಳ ಕರ್ತವ್ಯ: ಲಕ್ಷ್ಮಿ ಹೆಬ್ಬಾಳ್ಕರ್

ಪಾಲಕರ ಕನಸನ್ನು ನನಸಾಗಿಸುವುದು ಮಕ್ಕಳ ಕರ್ತವ್ಯ: ಹೆಬ್ಬಾಳ್ಕರ್

ಮಕ್ಕಳ ವಿದ್ಯಾಭ್ಯಾಸ ಕುಂಠಿತ ಆಗಬಾರದು ಅನ್ನೋದೆ ನನ್ನ ಹಾಗೂ ಇಲಾಖೆಯ ಉದ್ದೇಶ. ಯಾವುದೇ ಮಾರ್ಗದರ್ಶನ ಬೇಕಾದರೆ ನಮ್ಮ ಇಲಾಖೆ ಸದಾ‌ ನೀಡುತ್ತದೆ. ಬಾಲ್ಯದ ಜೀವನ ಒಳ್ಳೆಯ ಜೀವನ, ಎಲ್ಲರೂ ತಮ್ಮ ಜೀವನವನ್ನು ಹಸನಾಗಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ

ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು 2ನೇ ತಿದ್ದುಪಡಿ ವಿಧೇಯಕ ಪಾಸ್‌

Karnataka Winter Session: ಗ್ರೇಟರ್ ಬೆಂಗಳೂರು ಆಡಳಿತ (2ನೇ ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಮಂಗಳವಾರ ಅಂಗೀಕಾರ ದೊರೆಯಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ಸಲಹೆಯಂತೆ ಜಿಬಿಎ ನಾಮನಿರ್ದೇಶಿತ ಸದಸ್ಯತ್ವವನ್ನು ಕೈಬಿಡುತ್ತೇವೆ ಎಂದು ತಿಳಿಸಿದ್ದಾರೆ.

Karnataka Winter Session: ಕುಣಿಗಲ್‌ಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ನಿವಾರಣೆ: ಸಿಎಂ ಭರವಸೆ

ಕುಣಿಗಲ್‌ಗೆ ಅನುದಾನ ನೀಡಿಕೆಯಲ್ಲಿ ತಾರತಮ್ಯ ನಿವಾರಣೆ: ಸಿಎಂ ಭರವಸೆ

ಮಧುಗಿರಿ ತಾಲೂಕಿಗೆ ಹೆಚ್ಚು ಅನುದಾನ ನೀಡಿ, ಕುಣಿಗಲ್ ತಾಲೂಕಿಗೆ ಕಡಿಮೆಯಾಗಿರುವ ಬಗ್ಗೆ ಶಾಸಕರು ತಿಳಿಸಿದ್ದಾರೆ. ಆದರೆ, ಮಧುಗಿರಿಯಲ್ಲಿ ಶೇ. 26 ರಷ್ಟು ಎಸ್‌ಸಿ, ಎಸ್‌ಟಿ ಸಮುದಾಯದವರಿದ್ದು, ಕುಣಿಗಲ್‌ನಲ್ಲಿ ಕೇವಲ ಶೇ. 8 ರಷ್ಟು ಮಾತ್ರ ಎಸ್‌ಸಿ-ಎಸ್‌ಟಿಗೆ ಸೇರಿದ ಸಮುದಾಯಗಳಿವೆ. ಆದ್ದರಿಂದ ಅನುದಾನದ ಹೆಚ್ಚಿನ ಪಾಲು ಮಧುಗಿರಿಗೆ ನೀಡಿರಬಹುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಾಲಹಳ್ಳಿ ಅಂಡರ್‌ ಪಾಸ್ ಕಾಮಗಾರಿ; ವಿಪಕ್ಷ ನಾಯಕರ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ ಎಂದ ಡಿ.ಕೆ. ಶಿವಕುಮಾರ್

ಜಾಲಹಳ್ಳಿ ಅಂಡರ್‌ ಪಾಸ್ ಕಾಮಗಾರಿ; ವಿಪಕ್ಷ ನಾಯಕರೊಂದಿಗೆ ಸಭೆ ಎಂದ ಡಿಕೆಶಿ

DK Shivakumar: ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮುನಿರಾಜು ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಜಾಲಹಳ್ಳಿ ಅಂಡರ್ ಪಾಸ್ ಕಾಮಗಾರಿ ವಿಚಾರವಾಗಿ ವಿರೋಧ ಪಕ್ಷದ ನಾಯಕರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Hate Speech Bill: ರಾಜ್ಯ, ಸಮಾಜದ ಹಿತಕ್ಕೆ ದ್ವೇಷ ಭಾಷಣ ನಿಷೇಧ ಕಾಯ್ದೆ: ಡಿ.ಕೆ. ಶಿವಕುಮಾರ್

ರಾಜ್ಯ, ಸಮಾಜದ ಹಿತಕ್ಕೆ ದ್ವೇಷ ಭಾಷಣ ನಿಷೇಧ ಕಾಯ್ದೆ: ಡಿ.ಕೆ. ಶಿವಕುಮಾರ್

ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಸರ್ಕಿಟ್ ಹೌಸ್ ಬಳಿ ಮಂಗಳವಾರ ಬೆಳಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಕಾನೂನು ಸುವ್ಯವಸ್ಥೆ ಹಾಳು ಮಾಡಬಾರದು ಎಂಬ ದೃಷ್ಟಿಯಿಂದ ದ್ವೇಷ ಭಾಷಣ ನಿಷೇಧ ಕಾಯ್ದೆ ತರಲಾಗುತ್ತಿದೆ ಎಂದು ಅವರು ತಿಳಿಸಿದರು.

Karnataka CM Row: ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದ ಸಿದ್ದರಾಮಯ್ಯ

ಹೈಕಮಾಂಡ್ ಹೇಳುವ ತನಕವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ

CM Siddaramaiah: 2013ರಲ್ಲಿ 2023ರಲ್ಲಿಯೂ ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Karnataka Weather: ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಇಂದು ಬೆಂಗಳೂರಿನಲ್ಲಿ ಮುಂಜಾನೆ ದಟ್ಟ ಮಂಜು, ಉಳಿದೆಡೆ ಒಣ ಹವೆ

ಕರ್ನಾಟಕ ರಾಜ್ಯ ಹವಾಮಾನ: ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಳವಾಗುತ್ತಿದೆ. ಮುಂದಿನ ಎರಡು ದಿನ ಕನಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ. ನಂತರ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಮುಂದಿನ 5 ದಿನ ಹವಾಮಾಣ ಹೇಗಿರಲಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

Karnataka Winter Session: ಚಳಿಗಾಲದ ಅಧಿವೇಶನ ಅವಧಿ ಒಂದು ವಾರ ವಿಸ್ತರಿಸಿ; ಸ್ಪೀಕರ್‌ಗೆ ಆರ್‌.ಅಶೋಕ್‌ ಪತ್ರ

ಚಳಿಗಾಲದ ಅಧಿವೇಶನ ಅವಧಿ ಒಂದು ವಾರ ವಿಸ್ತರಿಸಿ: ಆರ್‌.ಅಶೋಕ್‌ ಆಗ್ರಹ

ಈ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆಯಾಗಬೇಕಾಗಿರುವ ಬಹಳಷ್ಟು ವಿಷಯಗಳು ಬಾಕಿಯಿದೆ. ಹೀಗಾಗಿ ತಾವು ಪ್ರಸ್ತುತ ಅಧಿವೇಶನದ ಅವಧಿಯನ್ನು ಒಂದು ವಾರ ವಿಸ್ತರಿಸಬೇಕು ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ವಿಪಕ್ಷ ನಾಯಕ ಆ.ಅಶೋಕ್‌ ಒತ್ತಾಯಿಸಿದ್ದಾರೆ.

8 ಬಾರಿ ವಿಧಾನಪರಿಷತ್ ಸದಸ್ಯರಾಗುವ ಮೂಲಕ ವಿಶ್ವ ದಾಖಲೆ ಬರೆದ ಬಸವರಾಜ ಹೊರಟ್ಟಿ; ಅಭಿನಂದಿಸಿದ ಸಿದ್ದರಾಮಯ್ಯ

ಸಭಾಪತಿಗಳ ಕುರ್ಚಿಗೆ ಹೊರಟ್ಟಿ ನ್ಯಾಯ ಒದಗಿಸುತ್ತಾರೆ: ಸಿದ್ದರಾಮಯ್ಯ

CM Siddaramaiah: ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಪಕ್ಷಾತೀತವಾಗಿ ಇಂದು ಸನ್ಮಾನಿಸಲಾಗಿದೆ. ಎಲ್ಲ ಪಕ್ಷದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಹೊರಟ್ಟಿ ಅಜಾತಶತ್ರು. ನೇರ ನುಡಿಯ ದಿಟ್ಟ ವ್ಯಕ್ತಿತ್ವದ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Karnataka Weather: ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ ದಾಖಲು; ಕರ್ನಾಟಕದಲ್ಲಿ ನಾಳೆ ಹೇಗಿರಲಿದೆ ಹವಾಮಾನ?

ವಿಜಯಪುರದಲ್ಲಿ ರಾಜ್ಯದಲ್ಲೇ ಕನಿಷ್ಠ ಉಷ್ಣಾಂಶ 7 ಡಿಗ್ರಿ ಸೆ. ದಾಖಲು

ಮುಂದಿನ 2 ದಿನಗಳವರೆಗೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗುವ ಸಾಧ್ಯತೆ ಇದೆ. ಹಾಗೆಯೇ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆ ಇರುವುದಿಲ್ಲ, ನಂತರ 2-3°C ರಷ್ಟು ಕ್ರಮೇಣ ಹೆಚ್ಚಳವಾಗಲಿದೆ.

ಯರಗಟ್ಟಿ ತಾಲೂಕು ಕೇಂದ್ರವಾಗಿ ನಾಲ್ಕು ವರ್ಷ ಕಳೆದರೂ ಬಾರದ ಕಚೇರಿಗಳು

ಯರಗಟ್ಟಿ ತಾಲೂಕು ಕೇಂದ್ರವಾಗಿ ನಾಲ್ಕು ವರ್ಷ ಕಳೆದರೂ ಬಾರದ ಕಚೇರಿಗಳು

ಎರಡು ದಶಕಗಳ ಹೋರಾಟದ ಫಲವಾಗಿ 2018ರಲ್ಲಿ ಸವದತ್ತಿ ತಾಲೂಕಿನಿಂದ ಪ್ರತ್ಯೇಕಗೊಳಿಸಿ ಯರಗಟ್ಟಿ ಹೊಸ ತಾಲೂಕು ಎಂದು ಸರಕಾರ ಘೋಷಿಸಿತ್ತು. ಆದರೆ, ಇಲ್ಲಿಯವರೆಗೂ ಯರಗಟ್ಟಿ ಪಟ್ಟಣದಲ್ಲಿ ಯಾವುದೇ ಇಲಾಖೆಯ ತಾಲೂಕು ಮಟ್ಟದ ಕಚೇರಿಗಳು ಆರಂಭವಾಗಿಲ್ಲ. ಈಗಲೂ ಸರಕಾರದ ಎಲ್ಲ ಇಲಾಖೆಗಳ ದಾಖಲೆಗಳಲ್ಲಿ ಸವದತ್ತಿ ತಾಲೂಕು ಎಂದೇ ಉಲ್ಲೇಖವಿದೆ.

Karnataka CM Row: ನಾನು, ಸಿದ್ದರಾಮಯ್ಯ ಒಂದೇ ಗುಂಪು ಎಂದ ಡಿ.ಕೆ. ಶಿವಕುಮಾರ್‌; ಸಿಎಂ ರೇಸ್‌ನಿಂದ ಹಿಂದೆ ಸರಿದ್ರಾ?

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ: ಡಿ.ಕೆ. ಶಿವಕುಮಾರ್‌

DK Shivakumar: ಡಿನ್ನರ್ ಮೀಟಿಂಗ್ ಮೂಲಕ ಬಲ ಪ್ರದರ್ಶನ ಮಾಡಲಾಗುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಅದರ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ ಎಂದು ತಿಳಿಸಿದ್ದಾರೆ.

DK Shivakumar: ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ? ಡಿನ್ನರ್‌ ಮೀಟ್‌ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್

ಊಟಕ್ಕೆ ಕರೆದರೆ ಇಲ್ಲ ಅನ್ನೋಕಾಗುತ್ತಾ: ಡಿನ್ನರ್‌ ಮೀಟ್‌ ಬಗ್ಗೆ ಡಿಸಿಎಂ

ಬೆಳಗಾವಿ ಹೊರವಲಯದಲ್ಲಿ ನಿನ್ನೆ ರಾತ್ರಿ ಶಾಸಕರ ಜತೆ ಔತಣಕೂಟ ಮಾಡಿದ ಕುರಿತು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಅವರನ್ನು ಪತ್ರಕರ್ತರು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ʼಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆʼ ಎಂದಿದ್ದಾರೆ.

M Chinnaswamy Stadium: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಗ್ರೀನ್‌ ಸಿಗ್ನಲ್‌; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಸಚಿವ ಸಂಪುಟ ಅನುಮತಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಬೇಕು ಎಂದು ನೂತನವಾಗಿ ಕೆಎಸ್‌ಸಿಎ ನೂತನ ಅಧ್ಯಕ್ಷ, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಮತ್ತು ತಂಡದವರು ಮನವಿ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ.

Karnataka Weather: ಡಿ.13ರವರೆಗೆ ಬೆಳಗಾವಿ, ಬಾಗಲಕೋಟೆ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಡಿ.13ರವರೆಗೆ ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿಯ ತೀವ್ರತೆ ಹೆಚ್ಚಾಗುತ್ತಿದೆ. ಕರ್ನಾಟಕದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಗುರುವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಮುಂದಿನ ಎರಡು ದಿನ ರಾಜ್ಯದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಶೀತ ಗಾಳಿ ಬೀಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ತಿಳಿಸಿದೆ.

Karnataka Winter Session: 24,300 ಹುದ್ದೆ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ; ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ ಘೋಷಿಸಿದ ಸಿಎಂ

24,300 ಹುದ್ದೆ ಭರ್ತಿಗೆ ಅನುಮತಿ; ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ

ಒಳಮೀಸಲಾತಿಯ ಬಿಕ್ಕಟ್ಟಿನಿಂದಾಗಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವುಂಟಾಗಿತ್ತು. ಈಗ ಈ ಸಮಸ್ಯೆಗೆ ಬಗೆಹರಿದಿದ್ದು, ಆರ್ಥಿಕ ಇಲಾಖೆಯ ಅನುಮತಿ ಪಡೆದು ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ಯತೀಂದ್ರ ಹೇಳಿಕೆಗೆ ಸಿಎಂ ಉತ್ತರಿಸುತ್ತಾರೆ ಎಂದ ಡಿ.ಕೆ. ಶಿವಕುಮಾರ್

ಯತೀಂದ್ರ ಹೇಳಿಕೆಗೆ ಸಿಎಂ ಉತ್ತರಿಸುತ್ತಾರೆ: ಡಿ.ಕೆ. ಶಿವಕುಮಾರ್

ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದಿರುವ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾಯಕತ್ವ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.

ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಉದ್ಯಾನವನ, ಕಾರಂಜಿ ಉದ್ಘಾಟಿಸಿದ ಸಿಎಂ

ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಉದ್ಯಾನವನ, ಕಾರಂಜಿ ಉದ್ಘಾಟನೆ

Suvarna Vidhana Soudha in Belagavi: ಬೆಳಗಾವಿ ಸುವರ್ಣಸೌಧದ ಆವರಣದ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗಳ ಸುತ್ತಲು ನಿರ್ಮಿಸಿರುವ ಉದ್ಯಾನವನ ಹಾಗೂ ಸೌಂದರ್ಯೀಕರಣವು ಈ ಪ್ರದೇಶಕ್ಕೆ ನೂತನ ಮೆರುಗನ್ನು ನೀಡಿದೆ.

ಅಥಣಿಯ ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳಿಸಲು ಸಿಎಂ ಸೂಚನೆ

ಬಸವೇಶ್ವರ ಏತ ನೀರಾವರಿ ಯೋಜನೆ ಶೀಘ್ರ ಪೂರ್ಣಗೊಳಿಸಿ: ಸಿಎಂ

CM Siddaramaiah: ಅಥಣಿಯ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು. ಈ ಯೋಜನೆಗೆ ಇದುವರೆಗೆ ರೂ. 1158 ಕೋಟಿ ವೆಚ್ಚ ಮಾಡಲಾಗಿದ್ದು, ಶೇ.90ರಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Karnataka Winter Session: ಹೊಸ ಕೈಗಾರಿಕಾ ನೀತಿಯಿಂದ ರಾಜ್ಯದಲ್ಲಿ 93,925 ಉದ್ಯೋಗ ಸೃಷ್ಟಿ: ಎಂ.ಬಿ.ಪಾಟೀಲ್

ಹೊಸ ಕೈಗಾರಿಕಾ ನೀತಿಯಿಂದ ರಾಜ್ಯದಲ್ಲಿ 93,925 ಉದ್ಯೋಗ ಸೃಷ್ಟಿ: ಎಂಬಿಪಿ

MB Patil: ಹೊಸ ಕೈಗಾರಿಕಾ ನೀತಿ 2025–2030ರ ಜಾರಿಗೆ ತಂದ ನಂತರ 93 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಲ್ಲಿ 5,50,805 ಕೋಟಿ ಬಂಡವಾಳ ಹೂಡಿಕೆ ಮತ್ತು 8,76,233 ಉದ್ಯೋಗಾವಕಾಶಗಳ ನಿರೀಕ್ಷೆ ಇದೆ ಎಂದು ವಿಧಾನಪರಿಷತ್‌ನಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದ್ದಾರೆ.

Karnataka Winter Session: ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿ.ಕೆ. ಶಿವಕುಮಾರ್‌

ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿ.ಕೆ. ಶಿವಕುಮಾರ್‌

DK Shivakumar: ನೀರಾವರಿ ಇಲಾಖೆಯ ವಾರ್ಷಿಕ ಬಜೆಟ್‌ 22 ಸಾವಿರ ಕೋಟಿ. ಇದರಲ್ಲಿ ಸುಮಾರು 5 ಸಾವಿರ ಕೋಟಿಯಷ್ಟು ಹೊಸ ಕೆಲಸಗಳನ್ನು ತೆಗೆದುಕೊಳ್ಳಬಹುದಿತ್ತು. ಆದರೆ ಈ ಹಿಂದೆ 25 ಸಾವಿರ ಕೋಟಿ ಮೊತ್ತದ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಯಾರ ಕಾಲದಲ್ಲಿ ಬಜೆಟ್‌ಗೂ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಯಿತು ಎಂದು ಪ್ರಸ್ತಾಪಿಸಿದರೆ ರಾಜಕೀಯ ಎಂದು ಎಲ್ಲರೂ ಮುಗಿಬೀಳುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಟೀಕಿಸಿದ್ದಾರೆ.

Karnataka Weather: ಯೆಲ್ಲೋ ಅಲರ್ಟ್; ಮುಂದಿನ ಮೂರು ದಿನ ಉತ್ತರ ಕರ್ನಾಟಕದ 8 ಜಿಲ್ಲೆಗಳಲ್ಲಿ ಶೀತ ಗಾಳಿ ಎಚ್ಚರಿಕೆ !

ರಾಜ್ಯದಲ್ಲಿ ಮುಂದಿನ 3 ದಿನ ಶೀತ ಗಾಳಿ ಎಚ್ಚರಿಕೆ; ಮಾರ್ಗಸೂಚಿ ಬಿಡುಗಡೆ

ಕರ್ನಾಟಕ ಹವಾಮಾನ ವರದಿ: ರಾಜ್ಯದ ಸಮತಟ್ಟಾದ ಪ್ರದೇಶಗಲ್ಲಿ ಬೀದರ್‌ನಲ್ಲಿ ಬುಧವಾರ ಮುಂಜಾನೆ ಅತಿ ಕನಿಷ್ಠ ತಾಪಮಾನ 9.2 ಡಿಗ್ರಿ ಸೆ. ದಾಖಲಾಗಿದೆ. ಇನ್ನು ಉತ್ತರ ಕರ್ನಾಟಕದಲ್ಲಿ ತೀವ್ರ ಶೀತ ಗಾಳಿ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Karnataka Winter Session: ದ್ವೇಷ ಭಾಷಣ ಮಾಡಿದ್ರೆ ಗರಿಷ್ಠ 10 ವರ್ಷ ಜೈಲು, 1 ಲಕ್ಷ ದಂಡ; ವಿಧಾನಸಭೆಯಲ್ಲಿ ಮಸೂದೆ ಮಂಡನೆ

ದ್ವೇಷ ಭಾಷಣಕ್ಕೆ ಗರಿಷ್ಠ 10 ವರ್ಷ ಜೈಲು, 1 ಲಕ್ಷ ದಂಡ; ಮಸೂದೆ ಮಂಡನೆ

Hate Speech and Hate Crimes (Prevention) Bill: ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ 2025 ಅನ್ನು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಮಂಡಿಸಿದ್ದಾರೆ. ಈ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಇತ್ತೀಚೆಗೆ ಒಪ್ಪಿಗೆ ನೀಡಲಾಗಿತ್ತು.

Loading...