ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಂಗಳೂರು ಗ್ರಾಮಾಂತರ

Road Accident: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಲಿ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಸಾಫ್ಟ್‌ವೇರ್‌ ಇಂಜಿನಿಯರ್‌ ಬಲಿ

Pothole: ಎತ್ತಿನಹೊಳೆ ಯೋಜನೆಗಾಗಿ ಪೈಪ್ ಹಾಕುವ ಕೆಲಸದ ನಂತರ, ರಸ್ತೆಯನ್ನು ವೈಜ್ಞಾನಿಕವಾಗಿ ಸರಿಪಡಿಸಿಲ್ಲ. ಎಪಿಎಂಸಿ ಮಾರುಕಟ್ಟೆಯನ್ನು ತಲುಪಲು ಟ್ರಕ್‌ಗಳು ನಿಯಮಿತವಾಗಿ ಈ ರಸ್ತೆಯನ್ನು ಬಳಸುವುದರಿಂದ ಗುಂಡಿಗಳು ರೂಪುಗೊಂಡಿವೆ. ಕಳೆದ ಒಂದು ವರ್ಷದಿಂದ, ಆಲೂರು ಬಿಡಿಎ ಹಂತ 2 ದಲ್ಲಿ ಸುಮಾರು 10 ಜನರು ಗಾಯಗೊಂಡಿದ್ದಾರೆ.

Purushottama Bharathi Swamiji: ಶೃಂಗೇರಿ ಶಾಖಾ ಮಠದ ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ ಇನ್ನಿಲ್ಲ

ಶೃಂಗೇರಿ ಶಾಖಾ ಮಠದ ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ ಇನ್ನಿಲ್ಲ

Sringeri shakha matha: ಶ್ರೀ ಪುರುಷೋತ್ತಮ ಭಾರತೀ ಸ್ವಾಮೀಜಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾ ಮಠದ ಪೀಠಾಧ್ಯಕ್ಷರಾಗಿದ್ದರು. ಸ್ವಾಮೀಜಿಗಳು ಅಲ್ಪ ಕಾಲದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.

CM Siddaramaiah: ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

ನಂದಿ ಬೆಟ್ಟದಲ್ಲಿ 2 ಭಾರತೀಯ ಮೀಸಲು ಪಡೆ ಆರಂಭ: ಸಿಎಂ ಸಿದ್ದರಾಮಯ್ಯ

Nandi Hills: ನಂದಿ ಬೆಟ್ಟದಲ್ಲಿ ಎರಡು ಭಾರತೀಯ ಮೀಸಲು ಪಡೆ ಆರಂಭಕ್ಕೆ ಒಪ್ಪಿಗೆ ನೀಡಲಾಗಿದೆ. ನಾಗರೀಕರಿಗಾಗಿ ಮನೆ ಮನೆಗೆ ಪೊಲೀಸ್ ಜಾರಿ ಮಾಡಿದ್ದೇವೆ. ಎಸ್‌ಸಿ, ಎಸ್‌ಟಿ ಜನರ ರಕ್ಷಣೆಗೆ ಡಿಸಿಆರ್‌ಎ ಠಾಣೆ ತೆರೆದಿದ್ದೇವೆ. ನಿವೃತ್ತ ಪೊಲೀಸ್ ಅಧಿಕಾರಿ ಸಿಬ್ಬಂದಿಗಾಗಿ 10 ಕೋಟಿ ರೂಪಾಯಿ ಮೀಸಲು ಇಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

Self Harming: ವರದಕ್ಷಿಣೆಗಾಗಿ ಗಂಡನ ಮನೆಯವರಿಂದ ಕಿರುಕುಳ; ವಿಡಿಯೋ ಮಾಡಿ ಉಪನ್ಯಾಸಕಿ ಆತ್ಮಹತ್ಯೆ

ವರದಕ್ಷಿಣೆ ಕಿರುಕುಳ; ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿ

Doddaballapur News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಬಳಿಯಿರುವ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, ಯುವತಿಯ ಗಂಡ, ಮಾವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Nelamangala News: ಕಣೇಗೌಡನಹಳ್ಳಿ ಗ್ರಾಪಂ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಎನ್. ಶ್ರೀನಿವಾಸ್

ಕಣೇಗೌಡನಹಳ್ಳಿ ಗ್ರಾಪಂ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಎನ್. ಶ್ರೀನಿವಾಸ್

Kanegowdanahalli Gram Panchayat: ಕಣೇಗೌಡನಹಳ್ಳಿ ​ಗ್ರಾಮ ಪಂಚಾಯಿತಿಯ ಹೊಸ ಕಟ್ಟಡವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮತ್ತು ನೆಲಮಂಗಲ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ನಿರ್ಮಿಸಲಾಗಿದೆ. ನೂತನ ಕಟ್ಟಡವನ್ನು ಶಾಸಕ ಎನ್.ಶ್ರೀನಿವಾಸ್‌ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ.

Murder Case: ಎರಡು ಅಮಾನುಷ ಘಟನೆ; ಹೆತ್ತ ತಾಯಿಯನ್ನೇ ಕತ್ತು ಸೀಳಿ ಕೊಂದ ಇಬ್ಬರು ಪುತ್ರರು!

ಎರಡು ಅಮಾನುಷ ಘಟನೆ; ಹೆತ್ತ ತಾಯಿಯನ್ನೇ ಕತ್ತು ಸೀಳಿ ಕೊಂದ ಇಬ್ಬರು ಪುತ್ರರು!

Murder Case: ಜಮೀನು ಮಾರಾಟ ಮಾಡಿ ಬಂದ ಹಣ ಕೊಡಲಿಲ್ಲ ಎಂದು ಮಗ ತಾಯಿಯ ಕತ್ತು ಕೊಯ್ದ ಘಟನೆ ರಾಮನಗರದಲ್ಲಿ ನಡೆದಿದ್ದರೆ, ಕುಡಿಯಲು ಹಣ ಕೊಡಲಿಲ್ಲ ಎಂದು ಬಾಗಲಕೋಟೆಯಲ್ಲಿ ಮಗ ತಾಯಿಯ ಕುತ್ತಿಗೆ ನರ ಕತ್ತರಿಸಿದ್ದಾನೆ. ಇಬ್ಬರೂ ಪಾಪಿಗಳನ್ನು ಬಂಧಿಸಲಾಗಿದೆ.

Deepavali Festival: ದೀಪಾವಳಿಗೆ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ, ಬೆಳಗಾವಿಗೆ ವಿಶೇಷ ರೈಲು

ದೀಪಾವಳಿಗೆ ಮಂಗಳೂರು, ಹುಬ್ಬಳ್ಳಿ, ಬೆಳಗಾವಿಗೆ ವಿಶೇಷ ರೈಲು

Special Trains: ದೀಪಾವಳಿ ಹಬ್ಬ ಹಾಗೂ ಮುಂದಿನ ವಾರಾಂತ್ಯಗಳು ಒಟ್ಟಿಗೆ ಬಂದಿರುವುದರಿಂದ ಈ ಬಾರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿಯ ವಿಶೇಷ ಬಸ್ಸುಗಳ ಜೊತೆಗೆ ರೈಲ್ವೆ ಇಲಾಖೆಯೂ ಹೆಚ್ಚಿನ ರೈಲುಗಳನ್ನು ರಾಜಧಾನಿಯಿಂದ ಮಂಗಳೂರು, ಬೆಳಗಾವಿ, ಹುಬ್ಬಳ್ಳಿಗೆ ಹೊರಡಿಸಿದೆ.

Caste Census:  ಜಾತಿ ಗಣತಿ ಮಾಡುತ್ತಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಜಾತಿ ಗಣತಿ ಮಾಡುತ್ತಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ

ಕರ್ನಾಟಕದಲ್ಲಿ (Bengaluru news) ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಈ ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ಸಮೀಕ್ಷಕರಾಗಿ ಆಯೋಜಿಸಿಲಾಗಿದೆ. ಈ ಹಿನ್ನೆಲೆ ಸಮೀಕ್ಷೆಗೆಂದು ಹೋದ ವೇಳೆ ಶಿಕ್ಷಕರೊಬ್ಬರು ಹೃದಯಾಘಾತಕ್ಕೆ (heart attack) ಒಳಗಾಗಿರುವ ಘಟನೆ ನಡೆದಿದೆ.

‌Bigg Boss Kannada 12: ಬಿಗ್‌ ಬಾಸ್‌ ಶೂಟಿಂಗ್‌ ಮತ್ತೆ ಆರಂಭ, ಹೊಸ ಪ್ರೊಮೊ ರಿಲೀಸ್

ಬಿಗ್‌ ಬಾಸ್‌ ಶೂಟಿಂಗ್‌ ಮತ್ತೆ ಆರಂಭ, ಹೊಸ ಪ್ರೊಮೊ ರಿಲೀಸ್

Jollywood: ಬಿಗ್ ಬಾಸ್ ಮನೆಗೆ ಸಂಪರ್ಕ ಕಲ್ಪಿಸುವ ಜಾಲಿವುಡ್‌ನ ಗೇಟ್ ಸಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸಮ್ಮುಖದಲ್ಲಿ ಓಪನ್ ಮಾಡಲಾಗಿದೆ. ಬಿಗ್ ಬಾಸ್ ಮನೆಗೆ ಎಲ್ಲಾ 17 ಸ್ಪರ್ಧಿಗಳು ಶಿಫ್ಟ್ ಆಗಿದ್ದಾರೆ. ಇದರ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿ, ಬಿಗ್‌ ಬಾಸ್‌ನ ಹೊಸ ಪ್ರೋಮೋ ರಿಲೀಸ್ ಮಾಡಿದೆ.

Bigg Boss Kannada 12: ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಸ್ಥಿಕೆ, ಜಾಲಿವುಡ್‌ ಬೀಗಮುದ್ರೆ ಓಪನ್‌, ಥ್ಯಾಂಕ್ಸ್‌ ಹೇಳಿದ ಕಿಚ್ಚ

ಡಿಕೆಶಿ ಮಧ್ಯಸ್ಥಿಕೆ, ಜಾಲಿವುಡ್‌ ಲಾಕ್ ಓಪನ್‌, ‌ಥ್ಯಾಂಕ್ಸ್‌ ಹೇಳಿದ ಕಿಚ್ಚ

DK Shivakumar: 'ಬಿಗ್ ಬಾಸ್ ಚಿತ್ರೀಕರಣ ನಡೆಯುತ್ತಿರುವ ಬಿಡದಿಯಲ್ಲಿರುವ ಜಾಲಿವುಡ್ ಅವರಣದ ಸೀಲ್ ತೆಗೆದುಹಾಕಲು ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ' ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. ಉಪ ಮುಖ್ಯಮಂತ್ರಿಗಳಿಗೆ ಕಿಚ್ಚ ಸುದೀಪ್‌ ಧನ್ಯವಾದ ತಿಳಿಸಿದ್ದಾರೆ.

Bigg Boss Kannada 12: ಬಿಗ್‌ಬಾಸ್‌ಗೂ ನನಗೂ ಸಂಬಂಧವಿಲ್ಲ, ಉಲ್ಲಂಘನೆ ಸರಿಮಾಡಲು ಅವಕಾಶ ಕೊಡಿ: ಡಿಕೆ ಶಿವಕುಮಾರ್

ಬಿಗ್‌ಬಾಸ್‌ಗೂ ನನಗೂ ಸಂಬಂಧವಿಲ್ಲ, ತಪ್ಪು ಸರಿಪಡಿಸಲು ಅವಕಾಶ ಕೊಡಿ: ಡಿಕೆಶಿ

DK Shivakumar: ಜನರಿಗೆ ಮನರಂಜನೆ ನೀಡಲು ಕೋಟ್ಯಂತರ ರೂಪಾಯಿ ಖರ್ಚು ಮಾಡಿರುತ್ತಾರೆ. ಏನಾದ್ರೂ ತಪ್ಪಾಗಿದ್ದರೂ ಅವಕಾಶ ಕೊಡಲು ಹೇಳಿದ್ದೇನೆ. ಮಾಲಿನ್ಯ ನಿಯಂತ್ರಣ ಮಂಡಳಿಯವರಿಗೆ ಫೋನ್ ಮಾಡಿದೆ. ಆಗಲೇ ನನಗೆ ವಿಷಯ ಗೊತ್ತಾಗಿದ್ದು, ಎಂಟರ್ ಟೈನ್ ಮೆಂಟ್ ನಮಗೆ ಬೇಕು ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

Bigg Boss Kannada 12: ಬಿಗ್‌ ಬಾಸ್‌ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್‌ ಅರ್ಜಿ

ಬಿಗ್‌ ಬಾಸ್‌ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Jollywood Studios: ಬಿಗ್ ಬಾಸ್ ಕಾರ್ಯಕ್ರಮ ಶುರುವಾಗುವ ಸಮಯದಲ್ಲಿ ಆದೇಶ ಹೊರಡಿಸಲಾಗಿದೆ. ತಮ್ಮ ಅಹವಾಲು ಆಲಿಸದೆ ತರಾತುರಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಅರ್ಜಿದಾರರ ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶ ಇದರ ಹಿಂದಿದೆ ಎಂದು ಅರ್ಜಿಯಲ್ಲಿ ವೆಲ್ಸ್ ಸ್ಟುಡಿಯೋ ಆರೋಪಿಸಿದೆ.

Bigg Boss Kannada 12: ಬಿಗ್‌ ಬಾಸ್‌ ಶೂಟಿಂಗ್‌ ಸ್ಥಗಿತ, ಕೋರ್ಟ್‌ ಮೊರೆ ಹೋಗಲು ಆಯೋಜಕರ ನಿರ್ಧಾರ

ಬಿಗ್‌ ಬಾಸ್‌ ಶೂಟಿಂಗ್‌ ಸ್ಥಗಿತ, ಕೋರ್ಟ್‌ ಮೊರೆ ಹೋಗಲು ಆಯೋಜಕರ ನಿರ್ಧಾರ

Ramanagara: ಬಿಗ್ ಬಾಸ್ ಆಯೋಜಕರ ಮುಂದಿನ ನಡೆ ಏನು ಎಂಬುದು ಈಗ ಕುತೂಹಲಕರವಾಗಿದೆ. ಅಗತ್ಯ ಪರವಾನಗಿಗಳನ್ನು ಪಡೆದುಕೊಂಡು ಜಾಲಿವುಡ್ ಸ್ಟುಡಿಯೋದಲ್ಲಿಯೇ ಶೂಟಿಂಗ್ ಮುಂದುವರೆಸಲಾಗುತ್ತದಾ ಅಥವಾ ಬೇರೆ ಕಡೆ ಶಿಫ್ಟ್ ಮಾಡಲಾಗುತ್ತದೆಯೇ ಎಂಬುದೀಗ ಪ್ರಶ್ನೆಯಾಗಿದೆ. ಸ್ಟುಡಿಯೋಗೆ ಬೀಗಮುದ್ರೆ ಹಾಕಿದ್ದರಿಂದ ಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.

ಪರಿಸರ ಕಾಯಿದೆ ಉಲ್ಲಂಘಿಸಿದ್ದಕ್ಕೆ ಬಿಗ್‌ ಬಾಸ್‌ ಮುಚ್ಚಲು ನೋಟಿಸ್: ಈಶ್ವರ ಖಂಡ್ರೆ‌

ಪರಿಸರ ಕಾಯಿದೆ ಉಲ್ಲಂಘಿಸಿದ್ದಕ್ಕೆ ಬಿಗ್‌ ಬಾಸ್‌ ಮುಚ್ಚಲು ನೋಟಿಸ್: ಖಂಡ್ರೆ‌

Eshwar Khandre: ರಾಮನಗರ ಜಿಲ್ಲೆಯ ಬಿಡದಿ ಬಳಿ ಇರುವ ಜಾಲಿವುಡ್ ಸ್ಟುಡಿಯೋ ಸಂಸ್ಥೆಗೆ ಜಲ ಕಾಯಿದೆ ಹಾಗೂ ವಾಯು ಕಾಯಿದೆಯಡಿ ಅಗತ್ಯ ಅನುಮತಿಗಳನ್ನು ಪಡೆಯದೆ ಕಾರ್ಯಾಚರಣೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

Bigg Boss Kannada 12: ಬಿಗ್‌ ಬಾಸ್‌ ಶೋಗೆ ಬಿಗ್‌ ಸಂಕಷ್ಟ, ಪ್ರತಿಭಟನೆ, ಪೊಲೀಸ್‌ ಅನುಮತಿಯೂ ಇಲ್ಲ

ಬಿಗ್‌ ಬಾಸ್‌ ಶೋಗೆ ಬಿಗ್‌ ಸಂಕಷ್ಟ, ಪ್ರತಿಭಟನೆ, ಪೊಲೀಸ್‌ ಅನುಮತಿಯೂ ಇಲ್ಲ

Bigg Boss Kannada: ಇದೀಗ ಪೊಲೀಸ್ ಇಲಾಖೆಯಿಂದಲೂ ಅನುಮತಿ ಪಡೆಯದೇ ಬಿಗ್ ಬಾಸ್ ನಡೆಸುತ್ತಿದ್ದಾರೆ ಎನ್ನುವ ಆರೋಪವೂ ಕೇಳಿ ಬಂದಿದೆ. ಪ್ರಮುಖವಾಗಿ ಬಿಗ್ ಬಾಸ್ ಶೋ ನಡೆಸಲು ಪೊಲೀಸರು ನೀಡುವ ಅನುಮತಿ ಕಡ್ಡಾಯವಾಗಿದೆ. ಆದರೆ ಶೋ ನಡೆಸಲು ಪೊಲೀಸರ ಯಾವುದೇ ಅನುಮತಿ ಪಡೆದಿಲ್ಲ.

Child Death: ಬೆಂಗಳೂರಿನಲ್ಲಿ ಘೋರ ದುರಂತ, ಕಾರಿನಡಿಗೆ ಸಿಲುಕಿ ಮಗು ಸಾವು

ಬೆಂಗಳೂರಿನಲ್ಲಿ ಘೋರ ದುರಂತ, ಕಾರಿನಡಿಗೆ ಸಿಲುಕಿ ಮಗು ಸಾವು

Bengaluru: ಮನೆಯ ಹೊರಗಡೆ ಮಗು ಮಹಮ್ಮದ್ ಆಟ ಆಡುತ್ತಿದ್ದ. ಮನೆಯ ಮಾಲಿಕ ಕಾರು ರಿವರ್ಸ್ ತೆಗೆದುಕೊಳ್ಳುವಾಗ ಮಗುವಿನ ಮೇಲೆ ಕಾರು ಹರಿದು ಮಗು ಸಾವನ್ನಪ್ಪಿದೆ. ಕಾರಿನಡಿ ಮಗುವಿದ್ದದ್ದು ಮಾಲಿಕನಿಗೆ ಕಂಡುಬರದೆ ಇದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

Caste Census: ಇಂದಿನಿಂದ ಬೆಂಗಳೂರಿನಲ್ಲಿ ಜಾತಿ ಗಣತಿ, ತಪ್ಪದೇ ಮಾಹಿತಿ ನೀಡಿ

ಇಂದಿನಿಂದ ಬೆಂಗಳೂರಿನಲ್ಲಿ ಜಾತಿ ಗಣತಿ, ತಪ್ಪದೇ ಮಾಹಿತಿ ನೀಡಿ

Bengaluru: ಇಂದಿನಿಂದ ಗ್ರೇಟರ್‌ ಬೆಂಗಳೂರು ಪ್ರದೇಶದ (ಜಿಬಿಎ) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಆರಂಭವಾಗಲಿದೆ. ಜಿಬಿಎ ವ್ಯಾಪ್ತಿಯ ಐದು ಪಾಲಿಕೆ ಸಿಬ್ಬಂದಿಗಳಿಂದ ಸಮೀಕ್ಷೆ ನಡೆಯಲಿದೆ. ಬೆಸ್ಕಾಂ ಕನೆಕ್ಷನ್ ಆಧಾರದ ಮೇರೆಗೆ ಮನೆ ಮನೆ ಸರ್ವೇ ನಡೆಸಲು ಪಾಲಿಕೆ ಸಿಬ್ಬಂದಿ ಸಜ್ಜಾಗಿದ್ದಾರೆ.

Nelamangala News: ದಾಸನಪುರದಲ್ಲಿ 12 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಆರ್. ವಿಶ್ವನಾಥ್ ಚಾಲನೆ

ದಾಸನಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವಿಶ್ವನಾಥ್ ಚಾಲನೆ

Nelamangala News: ನೆಲಮಂಗಲ ನಗರ ಸಮೀಪದ ದಾಸನಪುರ ಹೋಬಳಿಯ ವಿವಿಧೆಡೆ ರಸ್ತೆ ಹಾಗೂ ಒಳಚರಂಡಿ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಕಿತ್ತನಹಳ್ಳಿ ಗ್ರಾಮದಲ್ಲಿ ಹೈ ಮಾಸ್ಟ್‌ ಲೈಟ್‌ಗಳ ಉದ್ಘಾಟನೆ ಸೇರಿದಂತೆ 12 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಚಾಲನೆ ನೀಡಿದರು.

Bus Ticket Price: ದಸರಾ ದುಬಾರಿ: ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ, ಖಾಸಗಿ ಬಸ್ಸುಗಳಲ್ಲೂ ಏರಿಕೆ

ದಸರಾ ದುಬಾರಿ: ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಹೆಚ್ಚಳ, ಖಾಸಗಿಯೂ ಏರಿಕೆ

ಕೆಎಸ್ಆರ್ಟಿಸಿ ನಿಗಮವು ದಸರಾ ಸಂದರ್ಭದಲ್ಲಿ ಬೇರೆ ಡಿಪೋಗಳಿಂದ ಹೆಚ್ಚುವರಿ ಬಸ್ಸುಗಳನ್ನು ಪಡೆದು ಪ್ರಯಾಣಿಕರಿಗೆ ಸೇವೆ ನೀಡುತ್ತದೆ. ಬೆಂಗಳೂರು ಟು ಮೈಸೂರು ಹೋಗುವಾಗ ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಇರುತ್ತದೆ. ಮೈಸೂರಿನಿಂದ ವಾಪಸ್ಸು ಬರುವಾಗ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುತ್ತದೆ. ಈ ನಷ್ಟವನ್ನು ಸರಿದೂಗಿಸಲು ಈ ದರ ಏರಿಕೆ ಮಾಡಲಾಗಿದೆ.

ಆನೇಕಲ್‌ನಲ್ಲಿ ಅಮಾನವೀಯ ಕೃತ್ಯ; ವರದಕ್ಷಿಣೆಗಾಗಿ ಮಹಿಳೆಯ ಕೂದಲು ಹಿಡಿದು, ಒದ್ದು ಮನಸೋ ಇಚ್ಛೆ ಹಲ್ಲೆ!

ವರದಕ್ಷಿಣೆಗಾಗಿ ಪತ್ನಿ ಕೂದಲು ಹಿಡಿದು ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಪತಿ!

Assault Case: ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ ನೀಡಿರುವ ಗಂಡನ ಮನೆಯರು, ಆಕೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಆನೇಕಲ್‌ನ ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Drowned: ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರ ಸಾವು

ಬೆಂಗಳೂರಿನಲ್ಲಿ ಘೋರ ದುರಂತ, ಕೆರೆಯಲ್ಲಿ ಮುಳುಗಿ ಇಬ್ಬರ ಸಾವು

Bengaluru: ಮೀನಿಗೆ ಬಲೆ ಹಾಕಲು ಇಬ್ಬರು ತೆಪ್ಪದಲ್ಲಿ ಕೆರೆಯ ಮಧ್ಯೆ ತೆರಳಿದ್ದಾರೆ. ಕೆರೆಯ ಮಧ್ಯದಲ್ಲಿ ತೆಪ್ಪದ ಹುಟ್ಟು ಕೈ ತಪ್ಪಿ ಕೆರೆಗೆ ಬಿದ್ದಿತ್ತು. ಈ ವೇಳೆ ಆನಂದ ನೀರಿಗೆ ಧುಮುಕಿ ತೆಪ್ಪವನ್ನು ಹಿಡಿದುಕೊಂಡಿದ್ದ. ಆನಂದನನ್ನು ಮೇಲೆ ಎತ್ತಲು ಅನಂತ ಸಹ ನೀರಿಗೆ ಧುಮುಕಿದ್ದಾನೆ. ಈ ವೇಳೆ ಆನಂದ್ ಮತ್ತು ಅನಂತ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Nelamangala News: ನೆಲಮಂಗಲದಲ್ಲಿ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ನೆಲಮಂಗಲದಲ್ಲಿ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

Worker dies: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಗೆಜ್ಜೆಗದಹಳ್ಳಿಯಲ್ಲಿ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (38) ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Harassment: ಜ್ಞಾನಭಾರತಿಯಲ್ಲಿ ಅಮಾನುಷ ಘಟನೆ, ಅತಿಥಿ ಉಪನ್ಯಾಸಕಿಗೆ ಐವರು ಲೆಕ್ಚರರ್‌ಗಳಿಂದ ಲೈಂಗಿಕ ಕಿರುಕುಳ

ಜ್ಞಾನಭಾರತಿಯಲ್ಲಿ ಉಪನ್ಯಾಸಕಿಗೆ ಐವರು ಲೆಕ್ಚರರ್‌ಗಳಿಂದ ಲೈಂಗಿಕ ಕಿರುಕುಳ

Bengaluru University: ಐವರು ಉಪನ್ಯಾಸಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. FIR ದಾಖಲಾದ ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ. ಮಕ್ಕಳಿಗೆ ಪಾಠ ಮಾಡುವ ಉಪನ್ಯಾಸಕರೇ ಕುಡಿದು ಮತ್ತರಾಗಿ ಬೇಕಾಬಿಟ್ಟಿ ವರ್ತಿಸಿದ, ಡ್ಯಾನ್ಸ್ ಮಾಡುವ ವಿಡಿಯೋ ವೈರಲ್ ಆಗಿವೆ.

Devanahalli toll plaza: ನಾನು ಕನ್ನಡ ಮಾತನಾಡಲ್ಲ; ದೇವನಹಳ್ಳಿ ಟೋಲ್‌ಗೇಟ್‌ ಮ್ಯಾನೇಜರ್‌ ದರ್ಪ!

ನಾನು ಕನ್ನಡ ಮಾತನಾಡಲ್ಲ; ದೇವನಹಳ್ಳಿ ಟೋಲ್‌ಗೇಟ್‌ ಮ್ಯಾನೇಜರ್‌ ದರ್ಪ!

Language row: ಟೋಲ್‌ಗೇಟ್‌ ಮ್ಯಾನೇಜರ್‌ ಕನ್ನಡ ಮಾತನಾಡಲು ನಿರಾಕರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮ್ಯಾನೇಜರ್‌ ತೆಲುಗು ಭಾಷಿಕನಾಗಿದ್ದು, ಟೋಲ್‌ಗೇಟ್‌ನಲ್ಲಿ ಕೆಲಸಕ್ಕೆ ಬಂದು ಒಂದು ವರ್ಷವಾದರೂ ಮ್ಯಾನೇಜರ್ ಕನ್ನಡ ಕಲಿಯಲು ಸಹ ಆಸಕ್ತಿ ತೋರಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ.

Loading...