ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರು ಗ್ರಾಮಾಂತರ

ಟಾಟಾ ಏಸ್-ಸ್ಕೂಟರ್‌ ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಟಾಟಾ ಏಸ್-ಸ್ಕೂಟರ್‌ ಡಿಕ್ಕಿಯಾಗಿ ತಾಯಿ-ಮಗ ಸಾವು

ಡಿ ಮಾರ್ಟ್‌ನಿಂದ ದಿನಸಿ ಸಾಮಗ್ರಿ ಖರೀದಿಸಿ ತಾಯಿ-ಮಗ ಡಿಯೋ ಸ್ಕೂಟರ್‌ನಲ್ಲಿ ಮನೆಯತ್ತ ಸಾಗುತ್ತಿದ್ದಾಗ ಎದುರಿಗೆ ಬಂದ ಟಾಟಾ ಏಸ್‌ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲೇ ತಾಯಿ-ಮಗ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿತ್ತಿದ್ದಾರೆ.

ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಯಾಗಿ ಬಳಸಬಹುದು ಎಂದ ಹೈಕೋರ್ಟ್

ಬೈಕ್‌ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ

ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಯಾಗಿ ಬಳಸಬಹುದು ಎಂದು ಹೈಕೋರ್ಟ್ ಹೇಳಿದ್ದು, ಇದರಿಂದ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾದಂತಾಗಿದೆ. ರಾಜ್ಯ ಸರ್ಕಾರದ ಆದೇಶವನ್ನು ಈ ಹಿಂದೆ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಆದರೆ ಇದೀಗ ಅದನ್ನು ಹೈಕೋರ್ಟ್ ರದ್ದುಗೊಳಿಸಿದೆ.

Devanahalli Accident: ದೇವನಹಳ್ಳಿಯಲ್ಲಿ ಭೀಕರ ಹಿಟ್‌ ಆ್ಯಂಡ್‌ ರನ್‌; ಮೂವರು ಯುವಕರ ದುರ್ಮರಣ

ದೇವನಹಳ್ಳಿಯಲ್ಲಿ ಭೀಕರ ಹಿಟ್‌ ಆ್ಯಂಡ್‌ ರನ್‌; ಮೂವರು ಯುವಕರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿದ್ದರಿಂದ ಮೂವರು ಯುವಕರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್‌ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Puneeth Kerehalli: ಬನ್ನೇರುಘಟ್ಟದಲ್ಲಿ ಪುನೀತ್‌ ಕೆರೆಹಳ್ಳಿ ಆರೆಸ್ಟ್‌, ಯಾವ ಪ್ರಕರಣ?

ಬನ್ನೇರುಘಟ್ಟದಲ್ಲಿ ಪುನೀತ್‌ ಕೆರೆಹಳ್ಳಿ ಆರೆಸ್ಟ್‌, ಯಾವ ಪ್ರಕರಣ?

ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಅವರ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗೆ ಬಿಡದೆ ನಿಯಂತ್ರಿಸಿದರು.

ಬೆಂಗಳೂರಿನಲ್ಲಿ ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ಡೆಂಟಲ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನಲ್ಲಿ ಲೆಕ್ಚರರ್‌ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಲೆಕ್ಚರರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿಯ ಪೋಷಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ.

Road Accident: ಕಾರಿಗೆ ಬೊಲೆರೋ ಡಿಕ್ಕಿ, ಇಬ್ಬರು ಯುವಕರ ದುರ್ಮರಣ

ಕಾರಿಗೆ ಬೊಲೆರೋ ಡಿಕ್ಕಿ, ಇಬ್ಬರು ಯುವಕರ ದುರ್ಮರಣ

ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ದರ್ಶನ್ ಕೂಡ ಕೋಳಿ ಸಪ್ಲೈ ಮಾಡುವ ವಾಹನದ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಸ್ನೇಹಿತನ ರೂಂಗೆಂದು ಮೂವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೊಲೆರೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಮಾಗಡಿಯಲ್ಲಿ ಶ್ರೀನಿವಾಸ ಕಲ್ಯಾಣ; ರಾಜ್ಯಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸಿದೆ ಎಂದ ಡಿ.ಕೆ. ಶಿವಕುಮಾರ್

ಮಾಗಡಿ ಶ್ರೀನಿವಾಸ ಕಲ್ಯಾಣದಲ್ಲಿ ಡಿ.ಕೆ. ಶಿವಕುಮಾರ್ ದಂಪತಿ ಭಾಗಿ

ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕ ಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು‌ ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

Road Accident: ಬೆಂಗಳೂರಿನಲ್ಲಿ ಭೀಕರ ಅಪಘಾತ, ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

ಬೆಂಗಳೂರಿನಲ್ಲಿ ಭೀಕರ ಅಪಘಾತ, ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

ದಾಸರಹಳ್ಳಿಯಲ್ಲಿ ಗೌರಿಬಿದನೂರು ಮೂಲದ ಕುಟುಂಬ ವಾಸವಿತ್ತು. ಮೃತ ಹರೀಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಮೀನು ನೋಡಿಕೊಂಡು ವಾಪಸ್ ಆಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾಗೆ ಗಂಭೀರವಾದ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ ಆರೋಪ; ಬ್ರಹ್ಮಾನಂದ ಗುರೂಜಿ ವಿರುದ್ಧ ಎಫ್‌ಐಆರ್‌

ಮಹಿಳೆಗೆ ಕಿರುಕುಳ; ಬ್ರಹ್ಮಾನಂದ ಗುರೂಜಿ ವಿರುದ್ಧ ಎಫ್‌ಐಆರ್‌

Brahmananda Guruji Case: ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೈಟ್‌ ಕೊಡಿಸುವುದಾಗಿ ಮಂಚಕ್ಕೆ ಕರೆದ ಸ್ವಾಮೀಜಿ; ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯಿಂದ ದೂರು

ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ; ಬ್ರಹ್ಮಾನಂದ ಗುರೂಜಿ ವಿರುದ್ಧ ದೂರು

Brahmananda Guruji: ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಮಹಿಳೆಯಿಂದ 5 ಲಕ್ಷ ಹಣವನ್ನು ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ, ಒಂದು ವರ್ಷವಾದರೂ ಸೈಟ್‌ ನೀಡದ ಹಿನ್ನೆಲೆಯಲ್ಲಿ ಹಣ ವಾಪಸ್‌ ಕೇಳಿದಾಗ ಮಹಿಳೆಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕ್ಕಿ ಕೇಜ್ ಬೆಂಗಳೂರು ನಿವಾಸದಲ್ಲಿ ಕಳ್ಳತನ; ವಿಡಿಯೊ ವೈರಲ್‌

ರಿಕ್ಕಿ ಕೇಜ್ ನಿವಾಸಕ್ಕೆ ಕನ್ನ ಹಾಕಿದ ಜೊಮ್ಯಾಟೊ ಡೆಲಿವರಿ ಬಾಯ್‌!

Grammy Winner Ricky Kej: ರಿಕಿ ಕೇಜ್ ಒಬ್ಬ ಭಾರತೀಯ ಸಂಗೀತ ಸಂಯೋಜಕ, ಪರಿಸರವಾದಿ ಮತ್ತು ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತರು. ರಿಕಿ ಕೇಜ್ 1981 ರಲ್ಲಿ ಅಮೆರಿಕದ ಉತ್ತರ ಕೆರೊಲಿನಾದಲ್ಲಿ ಜನಿಸಿದರು. ಅವರು ಎಂಟು ವರ್ಷದವರಾಗಿದ್ದಾಗ ಅವರ ಕುಟುಂಬ ಬೆಂಗಳೂರಿಗೆ ಸ್ಥಳಾಂತರಗೊಂಡಿತು.

Road Accident: ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಮಾಜಿ ಸಚಿವ ಹೆಚ್‌ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

HM Revanna Son: ಸಚಿವ ಹೆಚ್ಎಂ ರೇವಣ್ಣ ಮಾಧ್ಯಮಗಳೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ್ದು, ನನ್ನ ಮಗನ ಕಾರು ಅಪಘಾತ ಆಗಿರುವುದು ನಿಜ. ಕಾರು ಓಡಿಸುತ್ತಿದ್ದದ್ದು ನನ್ನ ಮಗ ಅಲ್ಲ, ಡ್ರೈವರ್. ಓವರ್ಟೇಕ್ ಮಾಡುವಾಗ ಈ ಅಪಘಾತ ಆಗಿದೆ. ಮೃತ ಯುವಕನ ಕುಟುಂಬಸ್ಥರು ನನಗೆ ಪರಿಚಯ, ಕುಟುಂಬದವರ ಜೊತೆಗೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.

Bengaluru Weather: ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ! ಏನಿದರ ಕಾರಣ?

ಈ ಚಳಿಗಾಲದಲ್ಲಿ ಬೆಂಗಳೂರು ಗಡಗಡ! 10 ವರ್ಷದ ನಂತರ ಕನಿಷ್ಠ ತಾಪಮಾನ!

ಕಳೆದ ವಾರದಿಂದ ಸುಮಾರು 16 ಡಿಗ್ರಿ ಸೆಲ್ಸಿಯಸ್‌ನಲ್ಲಿದ್ದ ಬೆಂಗಳೂರಿನಲ್ಲಿ ಮುಂದಿನ ವಾರದ ವೇಳೆಗೆ ಕನಿಷ್ಠ ತಾಪಮಾನ (bengaluru weather) ಸುಮಾರು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಬಹುದು. ತಾಪಮಾನ 12 ಡಿಗ್ರಿಗೆ ಇಳಿದರೆ, 2016ರ ನಂತರ ಬೆಂಗಳೂರು ಕಂಡ ಅತೀ ಶೀತಲ ಡಿಸೆಂಬರ್‌ ಎನಿಸಲಿದೆ. ಮಂಜಿನೊಂದಿಗೆ ನಗರದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವಿರುತ್ತದೆ ಎಂದು ಹವಾಮಾನ ಇಲಾಖೆ ಹೇಳುತ್ತದೆ.

Road Accident: ದೇವನಹಳ್ಳಿಯಲ್ಲಿ ಬಸ್ಸಿಗೆ ಕಾರು ಡಿಕ್ಕಿ, ಮೂವರು ಸಾವು

Road Accident: ದೇವನಹಳ್ಳಿಯಲ್ಲಿ ಬಸ್ಸಿಗೆ ಕಾರು ಡಿಕ್ಕಿ, ಮೂವರು ಸಾವು

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಎಸ್​ಆರ್​ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅತಿವೇಗದ ಚಾಲನೆ ಈ ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

BJP Protest: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ; ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

ನೆಲಮಂಗಲದಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಪ್ರತಿಭಟನೆ

Nelamangala News: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರವನ್ನು ಆಗ್ರಹಿಸಿ, ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ವತಿಯಿಂದ ನೆಲಮಂಗಲದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ಗ್ರಾಮಾಂತರ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ. ಭೃಂಗೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

‌DK Shivakumar: ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮ: ತಜ್ಞರ ಸಮಿತಿ ರಚನೆಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರಿನ ವಾಯು ಮಾಲಿನ್ಯ ನಿಯಂತ್ರಣ: ತಜ್ಞರ ಸಮಿತಿ ರಚನೆಗೆ ಡಿಸಿಎಂ ಸೂಚನೆ

Bengaluru Air Pollution: ಬೆಂಗಳೂರು ಭವಿಷ್ಯದಲ್ಲಿ ತೀವ್ರ ಮಾಲಿನ್ಯದ ಬಿಕ್ಕಟ್ಟನ್ನು ಎದುರಿಸುವ ಸಾಧ್ಯತೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ ದಿನೇಶ್ ಗೂಳಿಗೌಡ ಅವರು ಡಿಸಿಎಂಗೆ ಪತ್ರ ಬರೆದಿದ್ದರು. ಪತ್ರಕ್ಕೆ ಧನಾತ್ಮಕವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ಮುಖ್ಯ ಕಾರ್ಯದರ್ಶಿಗಳ ಮೂಲಕ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಿದ್ದು, ತುರ್ತು ಮಾರ್ಗೋಪಾಯಗಳನ್ನು ಕಂಡುಹಿಡಿಯಲು ತಜ್ಞರ ತಂಡವನ್ನು ರಚಿಸುವಂತೆ ಆದೇಶಿಸಿದ್ದಾರೆ.

Murder Case: ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

ಯುವತಿಯನ್ನು ಪ್ರೀತಿಸಿದ್ದಕ್ಕೆ ಯುವಕನ ಬಲಿ, ನಡುರಸ್ತೆಯಲ್ಲಿ ಕೊಚ್ಚಿ ಕೊಲೆ

Doddaballapuara news: ಯುವತಿಯೊಬ್ಬಳನ್ನು ಈತ ಪ್ರೀತಿ ಮಾಡುತ್ತಿದ್ದ ವಿಚಾರಕ್ಕೆ ಈ ಮೊದಲು ಗಲಾಟೆ ಸಹ ಆಗಿತ್ತು. ಕೆಲವರು ನಿನ್ನನ್ನು ನೋಡಿಕೊಳ್ಳುವುದಾಗಿ ಈತನಿಗೆ ಧಮಕಿ ಹಾಕಿದ್ದರು. ಬಳಿಕ ಇಬ್ಬರೂ ಬೇರೆ ಬೇರೆಯಾಗಿದ್ದರು. ಇತ್ತೀಚೆಗೆ ಮತ್ತೆ ಇಬ್ಬರೂ ಜೊತೆಯಲ್ಲಿರುವ ಬಗ್ಗೆ ಮಾಹಿತಿ ಇತ್ತು. ಇದೇ ವಿಚಾರಕ್ಕೆ ಕೊಲೆ ಮಾಡಿರುವ ಸಂಶಯ ಇದೆ ಎಂದು ಮೃತ ಯುವಕನ ಚಿಕ್ಕಮ್ಮ ಅನಿತಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಬಾಡಿಗೆ ನಿಯಮ ಬದಲಾವಣೆ: ಹೊಸ ರೂಲ್ಸ್‌ನಲ್ಲಿ ಏನೆಲ್ಲ ಇದೆ?

ಭದ್ರತೆ ಪಾವತಿ: ಏನಿದೆ ಹೊಸ ಬಾಡಿಗೆ ನಿಯಮ?

ಮನೆ, ಕಚೇರಿ ಬಾಡಿಗೆ ಕೊಡುವವರು ಭದ್ರತೆ ಮೊತ್ತವಾಗಿ ಸಾವಿರದಿಂದ ಲಕ್ಷಾಂತರ ರೂಪಾಯಿ ಕೇಳುವುದು ವಾಡಿಕೆ. ಆದರೆ ಅದಕ್ಕೆ ಈಗ ಬೆಂಗಳೂರು ಮತ್ತು ಮುಂಬೈ ನಗರಗಲ್ಲಿ ಕಡಿವಾಣ ಹಾಕಲಾಗುತ್ತಿದೆ. ಬಾಡಿಗೆ ನೀಡುವವರು ತೆಗೆದುಕೊಳ್ಳಬೇಕಾದ ಭದ್ರತೆ ಪಾವತಿಯಲ್ಲಿ ಹೊಸ ಬದಲಾವಣೆಗಳನ್ನು ಮಾಡಲಾಗಿದೆ. ಅದು ಏನು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

Road Accident: ಭೀಕರ ಅಪಘಾತ, ಮಂತ್ರಾಲಯಕ್ಕೆ ತೆರಳುತ್ತಿದ್ದ ಕುಟುಂಬದ ಐವರು ಸಾವು

ಭೀಕರ ಅಪಘಾತ, ಮಂತ್ರಾಲಯಕ್ಕೆ ತೆರಳುತ್ತಿದ್ದ ಕುಟುಂಬದ ಐವರು ಸಾವು

ರಾಷ್ಟ್ರೀಯ ಹೆದ್ದಾರಿ 167ರಲ್ಲಿ ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ಗ್ರಾಮದ ಕೋಟೆಕಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ವಿಶಾಖಪಟ್ಟಣಂನಿಂದ ಆದೋನಿ ಕಡೆಗೆ ಹೊರಟಿದ್ದ ಫಾರ್ಚುನರ್ ಕಾರು ಹಾಗೂ ಬೆಂಗಳೂರಿನಿಂದ ಮಂತ್ರಾಲಯ ಕಡೆಗೆ ಹೊರಟಿದ್ದ ಸ್ವಿಫ್ಟ್​ ಕಾರು ಡಿಕ್ಕಿ ಹೊಡೆದಿವೆ. ಭೀಕರ ಅಪಘಾತದಿಂದ ಫಾರ್ಚುನರ್ ಮತ್ತು ಸ್ವಿಫ್ಟ್ ಕಾರ್ ಸಂಪೂರ್ಣ ಜಖಂಗೊಂಡಿದೆ.

Murder Case: ತಾಯಿ ಇಲ್ಲದ ಬಾಲಕಿಯ ಕತ್ತು ಹಿಸುಕಿ ಹತ್ಯೆ

ತಾಯಿ ಇಲ್ಲದ ಬಾಲಕಿಯ ಕತ್ತು ಹಿಸುಕಿ ಹತ್ಯೆ

Bengaluru crime news: ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ನಂತರ ಹುಡುಕಾಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಹತ್ಯೆಯ ಹಿಂದಿನ ನಿಖರ ಕಾರಣ ಗೊತ್ತಾಗಿಲ್ಲ. ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ.

ಪುರುಷರ ಜೂನಿಯರ್ ಹಾಕಿ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಜೂ. ಹಾಕಿ ವಿಶ್ವಕಪ್‌ ಟ್ರೋಫಿ ಅನಾವರಣಗೊಳಿಸಿದ ಸಿದ್ದರಾಮಯ್ಯ

Hockey Men’s Junior World Cup 2025: ಜೂನಿಯರ್‌ ಹಾಕಿ ವಿಶ್ವಕಪ್‌ ಪಂದ್ಯಾವಳಿ ತಮಿಳುನಾಡಿನಲ್ಲಿ ಇದೇ ಶುಕ್ರವಾರದಿಂದ (ನವೆಂಬರ್‌ 28) ಡಿಸೆಂಬರ್‌ 10ರ ವರೆಗೆ ನಡೆಯಲಿದೆ. ತಮಿಳುನಾಡಿನ ಮದುರೈ ಮತ್ತು ಚೆನ್ನೈ ನಗರಗಳು ಆತಿಥ್ಯ ವಹಿಸುತ್ತಿದ್ದು, ಒಟ್ಟು 24 ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಭದ್ರತಾ ಕಾಳಜಿಯಿಂದಾಗಿ ಪಾಕಿಸ್ತಾನ ಕೊನೆಯ ಹಂತದಲ್ಲಿ ಪಂದ್ಯಾವಳಿಯಿಂದ ಹಿಂದೆ ಸರಿದಿತ್ತು.

Laxmi Hebbalkar: ರಾಜ್ಯದ ಜನತೆಗೆ ಗುಡ್‌ನ್ಯೂಸ್‌; ಗ್ಯಾರಂಟಿ ಬಳಿಕ ಮತ್ತೆ 3 ದೊಡ್ಡ ಯೋಜನೆ ಘೋಷಿಸಿದ ಸರ್ಕಾರ

ಅಂಗನವಾಡಿ ಸುವರ್ಣ ಮಹೋತ್ಸವ ಮುಂದಿನ 50 ವರ್ಷಕ್ಕೆ ಪೀಠಿಕೆ: ಹೆಬ್ಬಾಳ್ಕರ್

ದೇಶವನ್ನು ಕಟ್ಟಿದ್ದು ಕಾಂಗ್ರೆಸ್. ಇಂದು ವಿಶ್ವದ ಹಿರಿಯಣ್ಣ ಆಗುವ ಮಟ್ಟಕ್ಕೆ ಭಾರತ ಬೆಳೆದಿದೆ. ಪಕ್ಷದ ನೀತಿ, ಸಿದ್ದಾಂತ, ಯೋಜನೆಗಳೇ ದೇಶದ ಅಭಿವೃದ್ಧಿಗೆ ಪೂರಕ. ಕಾಂಗ್ರೆಸ್ ಎಂದರೆ ಜನರ ಪರ, ಮಹಿಳೆಯರ ಪರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Bengaluru news: ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

ಜರ್ಮನಿಯಿಂದ ಬಂದ ಯುವಕನ ಜೀವ ತೆಗೆದ ನೆಲಮಂಗಲದ ಫ್ಲೆಕ್ಸ್

Death by Flex: ಜರ್ಮನಿಯಲ್ಲಿ ಅಧ್ಯಯನ ಮಾಡುತ್ತಿದ್ದು, ಸ್ನೇಹಿತನ ಮದುವೆಯ ಸಂಭ್ರಮದಲ್ಲಿ ಭಾಗಿಯಾಗಲು ಬೆಂಗಳೂರಿನ ನೆಲಮಂಗಲಕ್ಕೆ ಬಂದಿದ್ದ ಯುವಕಮನ್ನು ಅಕ್ರಮ ಫ್ಲೆಕ್ಸ್‌ ಬಲಿ ಪಡೆದುಕೊಂಡಿದೆ. ನಿಯಮ ಮೀರಿ ರಾರಾಜಿಸುತ್ತಿರುವ ಫ್ಲೆಕ್ಸ್-‌ ಬ್ಯಾನರ್‌ಗಳ ತೆರವಿಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

Murder Case: ಹಣ ದುಪ್ಪಟ್ಟು ಆಮಿಷಕ್ಕೆ ಬಲಿಯಾದ ಇಂಜಿನಿಯರ್‌, ʼದೃಶ್ಯʼ ಸಿನಿಮಾ ಮಾದರಿಯಲ್ಲಿ ಹತ್ಯೆ!

ಹಣ ದುಪ್ಪಟ್ಟು ಆಮಿಷಕ್ಕೆ ಇಂಜಿನಿಯರ್‌ ಬಲಿ, ʼದೃಶ್ಯʼ ಸಿನಿಮಾದಂತೆ ಹತ್ಯೆ!

Bengaluru crime news: ಆಂಧ್ರಪ್ರದೇಶದ ಕುಪ್ಪಂ ಮೂಲದ ಶ್ರೀನಾಥ್ (30) ಕೊಲೆಯಾದ ವ್ಯಕ್ತಿ. ಹಣ ಡಬಲ್ ಮಾಡಿಕೊಡುವುದಾಗಿ ಹಂತಕ ಪ್ರಭಾಕರ್, ಶ್ರೀನಾಥ್‌ಗೆ ಹೇಳಿದ್ದಾನೆ. ಈ ವೇಳೆ ಸೋದರ ಸಂಬಂಧಿತರಿಂದ ಶ್ರೀನಾಥ್ 40,00,000 ಪಡೆದುಕೊಂಡು ಪ್ರಭಾಕರ್‌ಗೆ ಹಣ ಕೊಟ್ಟಿದ್ದಾನೆ. ಇತ್ತೀಚಿಗೆ ಹಣ ವಾಪಸ್ ಕೊಡುವಂತೆ ಶ್ರೀನಾಥ್ ಪ್ರಭಾಕರ್‌ಗೆ ಕೇಳಿದ್ದಾನೆ. ಆಗ ಶ್ರೀನಾಥ್ ಕೊಲೆಗೆ ಮಾಸ್ಟರ್ ಪ್ಲಾನ್ ಮಾಡಿದ್ದಾನೆ.

Loading...