ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೆಂಗಳೂರು ಗ್ರಾಮಾಂತರ

Greater Bengaluru: ಇತಿಹಾಸದ ಪುಟ ಸೇರಿದ ಬಿಬಿಎಂಪಿ, ಇಂದಿನಿಂದ ‘ಗ್ರೇಟರ್‌ ಬೆಂಗಳೂರುʼ‌

ಇತಿಹಾಸದ ಪುಟ ಸೇರಿದ ಬಿಬಿಎಂಪಿ, ಇಂದಿನಿಂದ ‘ಗ್ರೇಟರ್‌ ಬೆಂಗಳೂರುʼ‌

ಇಷ್ಟು ದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಎಂದು ಗುರುತಿಸಲ್ಪಡುತ್ತಿದ್ದದ್ದು ಇದೀಗ ಇತಿಹಾಸದ ಪುಟ ಸೇರಲಿದೆ. ಅದಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಂತಿಮ ಅಧಿಸೂಚನೆ ಪ್ರಕಟವಾಗಲಿದೆ ಹಾಗೂ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿನ ನಾಮಫಲಕಗಳು ಮಂಗಳ ವಾರವೇ ಬದಲಾಗಲಿವೆ.

Crackers Blast: ಗಣೇಶ ವಿಸರ್ಜನೆ ವೇಳೆ ಅವಘಡ; ಬಾಲಕ ಸಾವು, ಪೊಲೀಸ್ ಸಿಬ್ಬಂದಿ ಸೇರಿ 6 ಜನರಿಗೆ ಗಾಯ

ಗಣೇಶ ವಿಸರ್ಜನೆ ವೇಳೆ ಅವಘಡ; ಬಾಲಕ ಸಾವು

ಗಣೇಶ ಮೆರವಣಿಗೆಯಲ್ಲಿ (Ganesha Festival) ಪಟಾಕಿ ಸ್ಫೋಟಗೊಂಡು ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರ ನಗರದಲ್ಲಿ ನಡೆದಿದೆ. ಘಟನೆ ಯಲ್ಲಿ ಪೊಲೀಸ್‌ ಸಿಬ್ಬಂದಿ ಸೇರಿ ಆರು ಮಂದಿಗೆ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ; ಗಣೇಶ ಮೆರೆವಣಿಗೆ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು, ಐವರಿಗೆ ಗಾಯ

ದೊಡ್ಡಬಳ್ಳಾಪುರದಲ್ಲಿ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು!

Doddaballapur Tragedy: ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ದುರ್ಘಟನೆ ನಡೆದಿದೆ. ಗಣೇಶ ವಿಸರ್ಜನೆ ಮೆರವಣಿಗೆ ನಡೆಸಲಾಗುತ್ತಿತ್ತು. ಈ ವೇಳೆ ಲಿಫ್ಟಿಂಗ್ ವಾಹನದಲ್ಲಿದ್ದ ಪಟಾಕಿ ಬಾಕ್ಸ್ ಸ್ಫೋಟಗೊಂಡಿದೆ. ಲಿಫ್ಟಿಂಗ್ ವಾಹನದ ಸೈಲೆನ್ಸರ್ ಬಿಸಿಯಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

DK Shivakumar: ಆರ್. ಅಶೋಕ್‌ಗೆ ಬುದ್ದಿ ಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್‌ ಕಿಡಿ

ಆರ್. ಅಶೋಕ್‌ಗೆ ಬುದ್ದಿ ಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್‌ ಕಿಡಿ

DK Shivakumar: ಧರ್ಮಸ್ಥಳ ಆಸ್ತಿ ಒಡೆಯಲು ಸರ್ಕಾರ ಮುಂದಾಗಿದೆ ಎನ್ನುವ ಆರ್. ಅಶೋಕ್ ಆರೋಪದ ಕುರಿತು ಮಾಗಡಿಯಲ್ಲಿ ಶುಕ್ರವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ʼವಿಪಕ್ಷ ನಾಯಕ ಆರ್. ಅಶೋಕ್‌ಗೆ ಬುದ್ದಿ ಭ್ರಮಣೆಯಾಗಿದೆ. ಧರ್ಮಸ್ಥಳ ಆಸ್ತಿ ಒಡೆಯುವುದು ಅವರ ಪಕ್ಷದ ಆಂತರಿಕ ರಾಜಕಾರಣ. ಇದು ಅವರ ಪಕ್ಷದ ಆಂತರಿಕ ವಿಚಾರ ಎಂದು ಆರೋಪಿಸಿದ್ದಾರೆ.

2ನೇ ಪತ್ನಿಗೆ ಕಿರುಕುಳ, ಕೊಲೆ ಬೆದರಿಕೆ; ಜೈ ಭೀಮ್ ಚಳವಳಿ ರಾಜ್ಯಾಧ್ಯಕ್ಷ ಶಿವಶಂಕರ್ ವಿರುದ್ಧ ಎಫ್‌ಐಆರ್‌

ಜೈ ಭೀಮ್ ಚಳವಳಿ ರಾಜ್ಯಾಧ್ಯಕ್ಷ ಶಿವಶಂಕರ್ ವಿರುದ್ಧ ಎಫ್‌ಐಆರ್‌

Nelamangala News: ತವರು ಮನೆಯಿಂದ ಹಣವನ್ನು ತೆಗೆದುಕೊಂಡು ಬಂದರೆ ಸರಿ, ಇಲ್ಲದಿದ್ದರೆ ನಾನು ಬೇರೆಯವರನ್ನು ಕರೆದುಕೊಂಡು ಬರುತ್ತೇನೆ ಎಂದು ಹೊಡೆದು ಬೈಯುತ್ತಿದ್ದಾನೆ. ಹೀಗಾಗಿ ಗಂಡ ಶಿವಶಂಕರ್ ಕಿರುಕುಳ ನೀಡುತ್ತಿದ್ದಾನೆ ಎಂದು 2ನೇ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Electric Shock: ದೊಡ್ಡಬಳ್ಳಾಪುರದಲ್ಲಿ ವಿದ್ಯುತ್‌ ಶಾಕ್‌, ತಾಯಿ- ಮಗ ಸಾವು, ಮಗಳು ಪಾರು

ದೊಡ್ಡಬಳ್ಳಾಪುರದಲ್ಲಿ ವಿದ್ಯುತ್‌ ಶಾಕ್‌, ತಾಯಿ- ಮಗ ಸಾವು, ಮಗಳು ಪಾರು

ದೊಡ್ಡಬಳ್ಳಾಪುರ ತಾಲೂಕಿನ ಕಾರನಾಳ ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ವಿದ್ಯುತ್ ಅವಘಡದಲ್ಲಿ ತಾಯಿ ಲಲಿತಮ್ಮ (55), ಮಗ ಸಂಜಯ್ (35) ಸಾವನ್ನಪ್ಪಿದ್ದಾರೆ. ವಿದ್ಯುತ್ ಸ್ವರ್ಶದಿಂದ ಸುಟ್ಟಗಾಯಕ್ಕೆ ತುತ್ತಾಗಿರುವ ಮಗಳು ಲಕ್ಷ್ಮೀದೇವಿ(32)ಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Physical abuse: ಮಹಿಳಾ ಇನ್ಸ್‌ಪೆಕ್ಟರ್‌ಗೆ ಲೈಂಗಿಕ ಕಿರುಕುಳ; ನೆಲಮಂಗಲ ಎಆರ್‌ಟಿಒ ವಿರುದ್ಧ ಎಫ್‌ಐಆರ್‌

ಲೈಂಗಿಕ ಕಿರುಕುಳ ಆರೋಪ; ನೆಲಮಂಗಲ ಎಆರ್‌ಟಿಒ ವಿರುದ್ಧ ಎಫ್‌ಐಆರ್‌

Nelamangala News: ನೆಲಮಂಗಲ ಆರ್‌ಟಿಒ ಕಚೇರಿಯಲ್ಲಿ ಮೋಟಾರ್ ವಾಹನ ನಿರೀಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಎಆರ್‌ಟಿಒ ರಾಜಕುಮಾರ್‌ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಚೇರಿಗೆ ಹೋದಾಗ ದೇಹದ ಭಾಗಗಳನ್ನು ಅಸಭ್ಯವಾಗಿ ನೋಡುವುದು ಹಾಗೂ ಕಣ್‌ ಸನ್ನೆ ಮಾಡುತ್ತಿದ್ದರು ಎಂದು ಮಹಿಳಾ ಇನ್ಸ್‌ಪೆಕ್ಟರ್‌ ಆರೋಪಿಸಿದ್ದಾರೆ.

Lockup death: ಚನ್ನಪಟ್ಟಣ ಠಾಣೆಯಲ್ಲಿ ಕಳ್ಳತನ ಆರೋಪಿ ಸಾವು, ಲಾಕಪ್‌ ಡೆತ್ ಆರೋಪ

ಚನ್ನಪಟ್ಟಣ ಠಾಣೆಯಲ್ಲಿ ಕಳ್ಳತನ ಆರೋಪಿ ಸಾವು, ಲಾಕಪ್‌ ಡೆತ್ ಆರೋಪ

Bengaluru: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಳ್ಳತನ ಆರೋಪದಲ್ಲಿ ಪೊಲೀಸರು ರಮೇಶ್​ ಎಂಬಾತನನ್ನು ಬಂಧಿಸಿ ಜೈಲಿನಲ್ಲಿಟ್ಟಿದ್ದರು. ಈತ ಪೊಲೀಸ್​ ಠಾಣೆಯಲ್ಲೇ ಸಾವನ್ನಪ್ಪಿದ್ದು, ಸಾವಿನ ಸುತ್ತ ಅನುಮಾನ ಮೂಡಿದೆ.

Road Accident: ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಅಪಘಾತ, ಇಬ್ಬರ ದುರ್ಮರಣ

ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ ಅಪಘಾತ, ಇಬ್ಬರ ದುರ್ಮರಣ

Bus Accident: ಮಧುರೈನಿಂದ ಬೆಂಗಳೂರಿಗೆ ಬರುತ್ತಿದ್ದ ಈ ಬಸ್‌ನಲ್ಲಿ ಇದ್ದ ಬಹುತೇಕ ಪ್ರಯಾಣಿಕರು ಬೆಂಗಳೂರಿನ ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ಕುಟುಂಬದವರು ಆಗಿದ್ದರು. ಚಾಲಕನಿಗೆ ತಿರುವಿನಲ್ಲಿ ಬಸ್‌ನ ನಿಯಂತ್ರಣ ತಪ್ಪಿದ್ದರಿಂದ, ವಾಹನವು ರಸ್ತೆಯಿಂದ ಜಾರಿ ಹಳ್ಳಕ್ಕೆ ಬಿದ್ದಿದೆ.

Road Accident: ನೆಲಮಂಗಲದಲ್ಲಿ ಲಾರಿ-ಬಸ್‌ ಡಿಕ್ಕಿಯಾಗಿ ಮೂವರ ದುರ್ಮರಣ

ನೆಲಮಂಗಲದಲ್ಲಿ ಲಾರಿ-ಬಸ್‌ ಡಿಕ್ಕಿಯಾಗಿ ಮೂವರ ದುರ್ಮರಣ

Road Accident: ಕುರಿ, ಮೇಕೆ ತುಂಬಿಕೊಂಡು ಮುಧೋಳದಿಂದ ತುಮಕೂರು ಮಾರ್ಗವಾಗಿ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಟಯರ್ ಪಂಚರ್ ಆಗಿದ್ದರಿಂದ ರಸ್ತೆ ಬದಿ ನಿಲ್ಲಿಸಲಾಗಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಕೆಎಸ್​ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bannerghatta: ಬನ್ನೇರುಘಟ್ಟ ಸಫಾರಿಯಲ್ಲಿ ಎಗರಿ ಬಾಲಕನ ಕೈಗೆ ಪರಚಿದ ಚಿರತೆ!

ಬನ್ನೇರುಘಟ್ಟ ಸಫಾರಿಯಲ್ಲಿ ಎಗರಿ ಬಾಲಕನ ಕೈಗೆ ಪರಚಿದ ಚಿರತೆ!

Leopard Attack: ಪೋಷಕರ ಜೊತೆಗೆ ಬಾಲಕ ಸುಹಾಸ್ ಸಫಾರಿಗೆ ತೆರಳಿದ್ದಾಗ ಬಾಲಕನ ಕೈಗೆ ಚಿರತೆ ಪರಚಿದೆ. ಸಫಾರಿ ಜೀಪನ್ನು ಬೆನ್ನಟ್ಟಿ ಬಂದು ಹಾರಿ ಬಾಲಕನ ಕೈಗೆ ಚಿರತೆ ಪರಚಿದೆ. ಮಾಂಸ ಕಿತ್ತು ಬರುವಂತೆ ಪರಚಿದ್ದು, ಸದ್ಯ ಬಾಲಕನಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Nelamangala News: ರಾಜಕೀಯ ದುರುದ್ದೇಶದಿಂದ ಸಂಸದ ಡಾ.ಕೆ. ಸುಧಾಕರ್‌ ವಿರುದ್ಧ ಎಫ್‌ಐಆರ್‌: ರಂಗನಾಥ್ ಬಾಬು ಆರೋಪ

ರಾಜಕೀಯ ದುರುದ್ದೇಶದಿಂದ ಸಂಸದ ಸುಧಾಕರ್‌ ವಿರುದ್ಧ ಎಫ್‌ಐಆರ್‌

Dr K Sudhakar: ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ರಾಜಕೀಯ ದುರುದ್ದೇಶದಿಂದ ಡಾ.ಕೆ. ಸುಧಾಕರ್‌ ಅವರನ್ನು ಎ1 ಆರೋಪಿ ಮಾಡಿದ್ದಾರೆ ಎಂದು ನೆಲಮಂಗಲ ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ರಂಗನಾಥ್‌ ಬಾಬು ಆರೋಪಿಸಿದ್ದಾರೆ.

ಬೊಮ್ಮಸಂದ್ರದಲ್ಲಿ 80 ಸಾವಿರ ಆಸನ ಸಾಮರ್ಥ್ಯದ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಅಸ್ತು

ಬೊಮ್ಮಸಂದ್ರದಲ್ಲಿ ನಿರ್ಮಾಣವಾಗಲಿದೆ ದೇಶದ 2ನೇ ಅತಿ ದೊಡ್ಡ ಕ್ರೀಡಾಂಗಣ

Bommasandra cricket stadium: ಕೆಲವು ತಿಂಗಳಲ್ಲಿ ಯೋಜನೆ ಅನುಷ್ಠಾನಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಲಾಗುತ್ತದೆ. ಕ್ರೀಡಾಂಗಣ ಪೂರ್ಣಗೊಂಡ ನಂತರ, ಇದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ. ಮೋದಿ ಸ್ಟೇಡಿಯಂ 1,32,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿದೆ.

Murder Case: ಸ್ನೇಹಿತನ ಹೆಂಡತಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಪಿ

ಸ್ನೇಹಿತನ ಹೆಂಡತಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪಾಪಿ

ಅಕ್ರಮ ಸಂಬಂಧಕ್ಕೆ ಒಪ್ಪದ ಹಿನ್ನೆಲೆ ಆಕ್ರೋಶಗೊಂಡು ತರಕಾರಿ ಕತ್ತರಿಸುವ ಚಾಕುವಿನಿಂದ ಕುತ್ತಿಗೆ ಸೀಳಿ ಕೊಂದು ಬಳಿಕ ನೇಣಿಗೆ ಶರಣಾಗಿರುವ ಸಾಧ್ಯತೆ ‌ಇದೆ ಎಂದು ಶಂಕಿಸಲಾಗಿದೆ. ಘಟನೆ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Student Murder Case: ಬಾಲಕನ ಕಿಡ್ನಾಪ್ ಮಾಡಿ, ಪೊಲೀಸರಿಗೆ ತಿಳಿಸಿದ್ದಕ್ಕೆ ಕೊಂದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಾಲಕನ ಕಿಡ್ನಾಪ್, ಪೊಲೀಸರಿಗೆ ತಿಳಿಸಿದ್ದಕ್ಕೆ ಕೊಂದು ಸುಟ್ಟುಹಾಕಿದ ಪಾಪಿಗಳು

Kidnap: ಅರಕೆರೆ ಶಾಂತಿನಿಕೇತನ ಲೇಔಟ್​ನಿಂದ ನಿಶ್ಚಿತ್​ ಎಂಬ ವಿದ್ಯಾರ್ಥಿಯನ್ನು (12) ಅಪಹರಿಸಲಾಗಿದ್ದು, ಐದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಆದರೆ ಬಾಲಕನ ತಂದೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಕೋಪಗೊಂಡ ಅಪಹರಣಕಾರರು ಬಾಲಕನನ್ನು ಕೊಂದು ಬಳಿಕ ಸುಟ್ಟು ಹಾಕಿದ್ದಾರೆ.

Actor Darshan: ನಟ ಪ್ರಥಮ್‌ಗೆ ಕೊಲೆ ಬೆದರಿಕೆ, ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು

ನಟ ಪ್ರಥಮ್‌ಗೆ ಕೊಲೆ ಬೆದರಿಕೆ, ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು

Actor Pratham: ಕಳೆದ ಜುಲೈ 22ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್‌ಗೆ ಡ್ಯಾಗರ್‌ನಿಂದ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದರು.

Rameshwaram Cafe: ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಲೆ, ಅದು ಗ್ರಾಹಕರ ತರಲೆ: ಕೆಫೆ ಓನರ್‌ ದೂರು

ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಲೆ, ಅದು ಗ್ರಾಹಕರ ತರಲೆ: ಕೆಫೆ ಓನರ್ ದೂರು

Blackmail: ಗ್ರಾಹಕರು ಆಹಾರ ಮಾಲಿನ್ಯದ ಬಗ್ಗೆ ಸುಳ್ಳು ಆರೋಪ ಹೊರಿಸುತ್ತಿದ್ದು, ಈ ಮೂಲಕ ಬ್ರ್ಯಾಂಡ್‌ ಹೆಸರಿಗೆ ಹಾನಿ ಮಾಡಲು ಹೊರಟಿದ್ದಾರೆ. ಜೊತೆಗೆ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಕೆಫೆಯ ಪ್ರಕಟಣೆ ಆರೋಪಿಸಿದೆ. ಈ ಸಂಬಂಧ ಗ್ರಾಹಕರ ವಿರುದ್ಧ ದೂರು ದಾಖಲಾಗಿದೆ.

Self Harming: ಕಾಲೇಜಿನಲ್ಲಿ ರ‍್ಯಾಗಿಂಗ್‌ಗೆ ಹೆದರಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿ

ರ‍್ಯಾಗಿಂಗ್‌ಗೆ ಹೆದರಿ ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ವಿದ್ಯಾರ್ಥಿ

Self Harming: ನೆಲಮಂಗಲದ ನಂದರಾಮಯ್ಯನ ಪಾಳ್ಯದಲ್ಲಿ ಘಟನೆ ನಡೆದಿದೆ. ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಸೆಲ್ಫಿ ವಿಡಿಯೋ ಮಾಡಿ ಸ್ನೇಹಿತರ ರ‍್ಯಾಗಿಂಗ್ ಬಗ್ಗೆ ಹೇಳಿಕೊಂಡಿದ್ದ ವಿದ್ಯಾರ್ಥಿ, ನನ್ನ ಬೆನ್ನ ಹಿಂದೆ ಕೆಟ್ಟ ಕೆಟ್ಟದಾಗಿ ಮಾತನಾಡುತ್ತಾರೆ ಹೇಳಿದ್ದ. ಬಳಿಕ ಆ ವಿಡಿಯೋವನ್ನು ಕಾಲೇಜು ಗ್ರೂಪ್‌ಗೆ ಹಾಕಿ, ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ.

Assault Case: ರಾಜೀನಾಮೆಗೆ ಒತ್ತಾಯಿಸಿ ಅರೆಬೊಮ್ಮನಹಳ್ಳಿ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ

ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಮೇಲೆ ಹಲ್ಲೆ

Assault Case: ದೊಡ್ಡಬಳ್ಳಾಪುರದ ಉಪವಿಭಾಗಾಧಿಕಾರಿ ಕಚೇರಿ ಬಳಿ ಘಟನೆ ನಡೆದಿದೆ. ನೆಲಮಂಗಲ ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ಮೇಲೆ ಗ್ರಾಪಂ ಸದಸ್ಯರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿದೆ.

Bengaluru North District: 2027ಕ್ಕೆ ಬೆಂಗಳೂರು ಉತ್ತರಕ್ಕೆ ಎತ್ತಿನಹೊಳೆ ನೀರು, ಮೆಟ್ರೋ ಮಂಜೂರು: ಡಿಕೆಶಿ

2027ಕ್ಕೆ ಬೆಂಗಳೂರು ಉತ್ತರಕ್ಕೆ ಎತ್ತಿನಹೊಳೆ ನೀರು, ಮೆಟ್ರೋ: ಡಿಕೆಶಿ

Bengaluru North District: ಹೊಸಕೋಟೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು. "ಈ ಭಾಗಕ್ಕೆ 2027 ರ ಒಳಗೆ ಎತ್ತಿನಹೊಳೆ ನೀರು ನೀಡಬೇಕು ಎಂದು ನಾವು ಶಪಥ ಮಾಡಿದ್ದೇವೆ. ಬೆಂಗಳೂರು ಉತ್ತರ ಭಾಗಕ್ಕೆ ನೀರು ಹರಿಸುವ ಕೆಲಸ ನಾವು ಮಾಡಿಯೇ ಸಿದ್ಧ.‌ ಈ ಭಾಗಕ್ಕೆ ಮೆಟ್ರೋ ಮಾರ್ಗ ತರಲು ಈಗಾಗಲೇ ಡಿಪಿಆರ್ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

A Khata: ಬೆಂಗಳೂರಿಗರಿಗೆ ಸಿಹಿ ಸುದ್ದಿ: ಬಿ-ಖಾತಾಗಳಿಗೆ ಎ-ಖಾತಾ ಕಾನೂನು ಮಾನ್ಯತೆ ಭಾಗ್ಯ

ಬೆಂಗಳೂರಿಗೆ ಸಿಹಿ ಸುದ್ದಿ: ಬಿ ಖಾತಾಗಳಿಗೆ ಎ ಖಾತಾ ಕಾನೂನು ಮಾನ್ಯತೆ ಭಾಗ್ಯ

A Khata: ಕ್ರಮಬದ್ಧವಲ್ಲದ ನಿವೇಶನ ಅಥವಾ ಆಸ್ತಿಗಳಿಗೆ ಬಿಬಿಎಂಪಿಯು 2009 ರಿಂದ ಈಚೆಗೆ ಬಿ-ಖಾತಾ ನೀಡುತ್ತಿತ್ತು. ಬಿ-ಖಾತಾ ನೀಡುವ ಪ್ರಕ್ರಿಯೆಯನ್ನು 2024ರ ಸೆ.30 ರಂದು ಸ್ಥಗಿತಗೊಳಿಸಲಾಗಿತ್ತು. ಹೀಗಾಗಿ 2009 ರಿಂದ 2024ರ ಸೆ.30ರ ನಡುವೆ ನೀಡಿರುವ ಬಿ-ಖಾತಾ ಆಸ್ತಿ ಸಮಸ್ಯೆ ಪರಿಹರಿಸಲು ಸುದೀರ್ಘ ಚರ್ಚೆ ನಡೆಸಲಾಯಿತು.

CM Siddaramaiah: ದೇವನಹಳ್ಳಿ ಭೂಸ್ವಾಧೀನ ಸಂಪೂರ್ಣ ಕೈಬಿಟ್ಟಿದ್ದೇವೆ, ಸ್ವ ಇಚ್ಛೆಯಿಂದ ಕೊಟ್ಟರೆ ಸ್ವಾಧೀನ: ಸಿಎಂ ಸಿದ್ದರಾಮಯ್ಯ

ದೇವನಹಳ್ಳಿ ಭೂಸ್ವಾಧೀನ ರದ್ದು, ಸ್ವಇಚ್ಛೆಯಿಂದ ಕೊಟ್ಟರೆ ಸ್ವಾಧೀನ: ಸಿಎಂ

CM Siddaramaiah: ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದರೂ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು ಎಂದು ತಿಳಿಸಿದ್ದಾರೆ.

Devanahalli Land Protest: ರೈತರ ಮೊರೆಗೆ ಮಣಿದ ಸಿಎಂ ಸಿದ್ದರಾಮಯ್ಯ, ದೇವನಹಳ್ಳಿ ರೈತರ ಭೂಸ್ವಾಧೀನ ಪ್ರಕ್ರಿಯೆ ಸ್ಥಗಿತ

ರೈತರ ಮೊರೆಗೆ ಮಣಿದ ಸಿಎಂ ಸಿದ್ದರಾಮಯ್ಯ, ದೇವನಹಳ್ಳಿ ಭೂಸ್ವಾಧೀನ ರದ್ದು

Devanahalli land protest: ದೇವನಹಳ್ಳಿ ರೈತರ ಹೋರಾಟಕ್ಕೆ ಈ ಮೂಲಕ ಅತಿದೊಡ್ಡ ಜಯ ಸಿಕ್ಕಿದೆ. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ರೈತರ ಜೊತೆಗಿನ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ನಿರ್ಧಾರ ಪ್ರಕಟಿಸಿದ್ದಾರೆ. ಅನೇಕ ಸಂಘಟನೆಗಳು, ಚಿಂತಕರು, ಸಾಹಿತಿಗಳು ರೈತರ ಹೋರಾಟಕ್ಕೆ ಸಾಥ್‌ ನೀಡಿದ್ದರು ಹಾಗೂ ಸಿಎಂಗೆ ಮನವಿ ಮಾಡಿದ್ದರು.

Devanahalli Land Protest: ಕೆಐಎಡಿಬಿಗೆ 1,777 ಎಕರೆ ಜಮೀನು ನೀಡಲು ರೈತರ ಒಪ್ಪಿಗೆ; ಸಿಎಂ ಸಿದ್ದರಾಮಯ್ಯಗೆ ಪತ್ರ

ಕೆಐಎಡಿಬಿಗೆ 1,777 ಎಕರೆ ಜಮೀನು ನೀಡಲು ರೈತರ ಒಪ್ಪಿಗೆ; ಸಿಎಂಗೆ ಪತ್ರ

Devanahalli Land Protest: ದೇವನಹಳ್ಳಿ ತಾಲೂಕು, ಚನ್ನರಾಯಪ್ಪಟಣ ಹೋಬಳಿ ರೈತ ಹೋರಾಟ ಸಮಿತಿಯು ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದೆ. ಚನ್ನರಾಯಪಟ್ಟಣ ಹೋಬಳಿಯ 1777 ಎಕರೆ ಜಮೀನನನ್ನು ಕೆಐಎಡಿಬಿಗೆ ಕೊಡುವುದಕ್ಕೆ 13 ಗ್ರಾಮಗಳ ರೈತರ ಒಪ್ಪಿಗೆಯಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Loading...