ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ಗ್ರಾಮಾಂತರ

Nelamangala News: ಕರ್ತವ್ಯದ ವೇಳೆಯೇ ಪಿಡಿಒಗಳ ಎಣ್ಣೆ ಪಾರ್ಟಿ; ಕ್ಯಾಮೆರಾ ನೋಡ್ತಿದ್ದಂಗೆ ಕಾಲ್ಕಿತ್ತ ಅಧಿಕಾರಿಗಳು! Watch Video

ಕರ್ತವ್ಯದ ವೇಳೆಯೇ ಪಿಡಿಒಗಳ ಎಣ್ಣೆ ಪಾರ್ಟಿ; ವಿಡಿಯೊ ವೈರಲ್!

ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಸಿದ್ದರಬೆಟ್ಟದಲ್ಲಿ ಅಧಿಕಾರಿಗಳು ಮೋಜು ಮಸ್ತಿಯಲ್ಲಿ ತೋಡಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಸ್ಥಳೀಯರು ವಿಡಿಯೊ ಮಾಡುತ್ತಿದ್ದಂತೆ ಸ್ಥಳದಿಂದ ಅಧಿಕಾರಿಗಳು ಪರಾರಿಯಾಗಿದ್ದಾರೆ. ಧಾರ್ಮಿಕ ಸ್ಥಳದಲ್ಲಿ ಅಧಿಕಾರಿಗಳು ಈ ರೀತಿಯ ವರ್ತನೆ ತೋರಿರುವುದು ಸಾರ್ವಜನಿಕರ ಆಕ್ರೋಶಕ್ಕ ಕಾರಣವಾಗಿದೆ.

ಸಾಹಿತ್ಯೋತ್ಸವ– 2026: ವಿದ್ಯಾರಣ್ಯ ಕನ್ನಡ ಕೂಟದಿಂದ  ಶಿಕಾಗೋದಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆ ಸೊಗಡಿನ ಅನಾವರಣ

ವಿದ್ಯಾರಣ್ಯ ಕನ್ನಡ ಕೂಟ ಸಾಹಿತ್ಯೋತ್ಸವ

ವಿದ್ಯಾರಣ್ಯ ಕನ್ನಡ ಕೂಟದ ವತಿಯಿಂದ ಶಿಕಾಗೋದಲ್ಲಿ “ಸಾಹಿತ್ಯೋತ್ಸವ – 2026” ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಇಂಡಿಯಾ ಹಬ್‌ನಲ್ಲಿ ಇತ್ತೀಚೆಗೆ ನಡೆದ ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯ ಸೊಗಡನ್ನು ಅನಾವರಣಗೊಳಿಸಲಾಗಿದ್ದು, ಅಪಾರ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಯಿತು.

ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ; 10 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ; 10 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

Cylinder Blast: ಬೊಮ್ಮಸಂದ್ರದಲ್ಲಿ ಇಂದು ಮುಂಜಾನೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬುವರಿಗೆ ಸೇರಿದ ಪಿಜಿಯಲ್ಲಿ (PG) ಈ ಅವಘಡ ನಡೆದಿದೆ.

ದೇವನಹಳ್ಳಿಯಲ್ಲಿ ಭಯಾನಕ ಘಟನೆ: ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಬಲವಂತವಾಗಿ ಮದ್ಯ ಕುಡಿಸಿದ ಪಾಪಿಗಳು

ದೇವನಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

Crime News: ಬಾಲಕಿಯನ್ನು ಅಪಹರಿಸಿ, ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ, ಮರುದಿನ ಬೆಳಗ್ಗೆ ಆಕೆಯ ಮನೆಯ ಬಳಿ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ದೇವಸ್ಥಾನಕ್ಕೆ ಭೇಟಿ ನೀಡುವ ನೆಪದಲ್ಲಿ ಆಕೆಯನ್ನು ಹೊರಗೆ ಕರೆದೊಯ್ಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಡ್ವಾನ್ಸ್ ನೀಡಿದ್ದು 1 ಲಕ್ಷ, ಕೈಗೆ ಸಿಕ್ಕಿದ್ದು 20 ಸಾವಿರ; ವಂಚಿಸಿದ ಬೆಂಗಳೂರು ಮನೆ ಮಾಲೀಕನ ವಿರುದ್ಧ ಮಹಿಳೆ ಆಕ್ರೋಶ!

ಬೆಂಗಳೂರಿನಲ್ಲಿ ಮಹಿಳೆಗೆ ಅಡ್ವಾನ್ಸ್ ಹಣ ಕಡಿತಗೊಳಿಸಿ ವಂಚನೆ

Viral News: ವರ್ಷಪೂರ್ತಿ ಸರಿಯಾಗಿ ಬಾಡಿಗೆ ಪಾವತಿ ಮಾಡಿದರೂ ಮಾಲೀಕನೊಬ್ಬ ಒಟ್ಟು 1 ಲಕ್ಷ ಹಣದಲ್ಲಿ 80,396 ರೂಪಾಯಿ ಕಡಿತಗೊಳಿಸಿ ತನ್ನ ಕೈಗೆ ಕೇವಲ 20,000 ರೂಪಾಯಿ ನೀಡಿದ್ದಾನೆಂದು ಮಹಿಳೆ ಆಕ್ರೋಶಗೊಂಡಿದ್ದಾಳೆ. ಬೆಂಗಳೂರಿಗೆ ಜೀವನ ಕಟ್ಟಿಕೊಳ್ಳಲು ಬಂದ ಯುವಕ- ಯುವತಿಯರಿಗೆ ಇದೊಂದು ದೊಡ್ಡ ಹೊರೆ ಎಂದು ಅವರು ಬರೆದುಕೊಂಡಿದ್ದಾರೆ.

ಯಶವಂತಪುರ-ನಾಗಸಂದ್ರ ನಡುವೆ ಮೆಟ್ರೊ ಸಂಚಾರ ಸ್ಥಗಿತ

ಯಶವಂತಪುರ-ನಾಗಸಂದ್ರ ನಡುವೆ ಮೆಟ್ರೊ ಸಂಚಾರ ಸ್ಥಗಿತ

ಮೆಟ್ರೊ ಸಂಚಾರ ಶೀಘ್ರದಲ್ಲೇ ಪುನಃ ಆರಂಭಿಸಲು ನಮ್ಮ ತಾಂತ್ರಿಕ ತಂಡಗಳು ತುರ್ತುಗತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ರೇಷ್ಮೆ ಸಂಸ್ಥೆ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ ಮೆಟ್ರೊ ರೈಲುಗಳು ಶಾರ್ಟ್-ಲೂಪ್ ಆಗಿ ಸಂಚರಿಸುತ್ತಿವೆ.

ಬೆಂಗಳೂರಿಗರೇ ಎಚ್ಚರ: ರಸ್ತೆ ಬದಿ ವಾಹನ ನಿಲ್ಲಿಸಿ ಹೋದರೆ ಮರಳಿ ಸಿಗದೇ ಇರಬಹುದು! ಜಿಬಿಎಯಿಂದ ಬೃಹತ್ ತೆರವು ಕಾರ್ಯಾಚರಣೆ

ರಸ್ತೆ ಬದಿ ವಾಹನ ತೆರವು ಕಾರ್ಯಾಚರಣೆ ಆರಂಭಿಸಿದ ಜಿಬಿಎ

ತುಂಬಾ ದಿನಗಳಿಂದ ಬೆಂಗಳೂರಿನ ರಸ್ತೆ ಬದಿ ವಾಹನ ನಿಲ್ಲಿಸಿ ಹೋಗಿದ್ದರೆ ನಿಮ್ಮ ವಾಹನ ಇದೆಯೇ ಎಂಬುದನ್ನು ಒಮ್ಮೆ ಖಾತ್ರಿ ಪಡಿಸಿಕೊಳ್ಳಿ. ಇಲ್ಲವಾದರೆ ಮುಂದೆ ವಾಹನಕ್ಕಾಗಿ ಬೀದಿ ಬೀದಿ ಅಲೆದಾಡಬೇಕಾಗಬಹುದು. ಯಾಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಬೆಂಗಳೂರು ಸಂಚಾರಿ ಪೊಲೀಸರು ಜಂಟಿಯಾಗಿ ಬೀದಿ ಬದಿಯ ಅನಾಥ ವಾಹನಗಳ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಸಿಸಿಟಿವಿ ಅಳವಡಿಸಲು ಸಿಎಂ ಆದೇಶ

ರಾಜ್ಯದ ಎಲ್ಲಾ ದೇವಾಲಯದ ಮೇಲೂ ಸಿಎಂ ನಿಗಾ

ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವಂತ ದೇಣಿಗೆ ಕಳ್ಳತನ ಪ್ರಕರಣಗಳು ರಾಜ್ಯದಲ್ಲಿ ನಡೆಯದಿರಲಿ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳ ಮೇಲೆ ನಿಗಾ ಇರಿಸಲು ಸಿಸಿಟಿವಿ ಅಳವಡಿಸುವಂತೆ ಆದೇಶಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕತಾರ್ ನಿವಾಸಿ ಮಹೇಶ್ ಗೌಡಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ಸಮಾಜಸೇವೆ, ಜನಕಲ್ಯಾಣ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉತ್ತೇಜನಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಕತಾರ್‌ ನಿವಾಸಿ, ಸಮುದಾಯ ಮುಖಂಡ ಹಾಗೂ ಕರ್ನಾಟಕ ಸಂಘ ಕತಾರ್‌ನ ಮಾಜಿ ಅಧ್ಯಕ್ಷರಾದ ಮಹೇಶ್ ಗೌಡ ಅವರಿಗೆ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನನ್ನನ್ನು ಜೈಲಿಗೆ ಕಳಿಸಬೇಕಾದರೆ ಇನ್ನೂ ನೂರು ಜನ್ಮ ಎತ್ತಿ ಬರಬೇಕು: ಸಿಎಂ ಡಿಕೆಶಿ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಕಿಡಿ

ನನ್ನನ್ನು ಜೈಲಿಗೆ ಕಳಿಸಬೇಕಾದರೆ ಇನ್ನೂ ನೂರು ಜನ್ಮ ಎತ್ತಿ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅನೇಕ ವರ್ಷಗಳಿಂದ ಈ ಭೂಮಿಯ ಮೇಲೆ ಕಣ್ಣಿಟ್ಟಿರುವುದು ಸ್ಪಷ್ಟ. ಅದಕ್ಕಾಗಿಯೇ ಅವರು ಹಂತಹಂತವಾಗಿ ನಿರ್ಧಾರಗಳನ್ನು ಮಾಡುತ್ತಾ ಬಂದರು. ವ್ಯವಸ್ಥಿತವಾಗಿ ಹುನ್ನಾರ ನಡೆಸಿ ರೈತರ ಭೂಮಿ ಕಸಿಯಲು ಅಧಿಕಾರವನ್ನು ದುರುಪಯೋಗ ಮಾಡಿಕೊಂಡರು ಎಂದು ಸಚಿವ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಘಾತಕಾರಿ ಘಟನೆ: ಬೈಕ್ ಸವಾರಿ ಮಾಡುವಾಗ ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ!

ಮರದ ಕೊಂಬೆ ಬಿದ್ದು ಬೈಕ್ ಸವಾರ ಗಂಭೀರ: ಸಿಸಿಟಿವಿ ದೃಶ್ಯ ವೈರಲ್!

Viral Video: ಮರದ ಕೊಂಬೆಯೊಂದು ಬಿದ್ದ ಪರಿಣಾಮ 53 ವರ್ಷದ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು ಕೋಮಾ ಸ್ಥಿತಿಗೆ ತಲುಪಿದ್ದಾರೆ. ಇವರು ಖಾಸಗಿ ಹಣಕಾಸು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಲದ ಕಂತುಗಳನ್ನು ವಸೂಲಿ ಮಾಡುವುದ್ದಕ್ಕಾಗಿ ಸಂಜೆ 5 ಗಂಟೆಯ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಆದರೆ ಹೆಲ್ಮೆಟ್ ಧರಿಸಿರಿಲಿಲ್ಲ‌. ಈ ವೇಳೆ ರಸ್ತೆ ಬದಿಯ ಮರದಿಂದ ಬೃಹತ್ ಗಾತ್ರದ ಒಣಗಿದ ಕೊಂಬೆ ದಿಢೀರನೆ ಮುರಿದು ನೇರವಾಗಿ ಅವರ ತಲೆಯ ಮೇಲೆಯೇ ಬಿದ್ದಿದೆ...

Viral News: ಮೊದಲ ಬಾರಿ ಬೆಂಗಳೂರಿಗೆ ಬಂದ ಹಳ್ಳಿ ಯುವಕರನ್ನು ದೋಚಿದ ಆಟೋ ಚಾಲಕ; ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಆಕ್ರೋಶ

ಹಳ್ಳಿ ಜನರನ್ನು ಬೆದರಿಸಿ ದೋಚಿದ ಬೆಂಗಳೂರು ಆಟೋ ಚಾಲಕ

ಬೆಂಗಳೂರಿನ ಆಟೋ ಚಾಲಕನೊಬ್ಬ ಹಳ್ಳಿಯಿಂದ ಮೊದಲ ಬಾರಿಗೆ ನಗರಕ್ಕೆ ಬಂದಿದ್ದ ಯುವಕರನ್ನು ದೋಚಿದ್ದಾನೆ ಎಂದು ಟೆಕ್ಕಿಯೊಬ್ಬ ಸಾಮಾಜಿಕ ಮಾಧ್ಯಮದ ಮೂಲಕ ಹೇಳಿಕೊಂಡಿದ್ದಾರೆ. ಬಸ್ ನಿಲ್ದಾಣಕ್ಕೆ ಹೋಗಲು ತಲಾ 50 ರೂ. ಬಾಡಿಗೆ ಬದಲಿಗೆ ಆತ ಯುವಕರಿಂದ 2,400 ರೂ. ಗಳನ್ನು ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ.

ಡಿಕೆಶಿ ಸಿಎಂ ಆಗಿರುವುದನ್ನು ಸಹಿಸಲಾಗದೇ ಬಿಡದಿ ಟೌನ್‌ಶಿಪ್‌ಗೆ ಜೆಡಿಎಸ್, ಬಿಜೆಪಿ ನಾಯಕರ ವಿರೋಧ: ಶಾಸಕ ಬಾಲಕೃಷ್ಣ ಕಿಡಿ

ಡಿಕೆಶಿ ಸಿಎಂ ಆಗಿರುವುದನ್ನು ಬಿಜೆಪಿ, ಜೆಡಿಎಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ

ಬಿಜೆಪಿ ನಾಯಕರ ನಿಯೋಗ ಬಿಡದಿಗೆ ಭೇಟಿ ನೀಡಿ ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟ ಮಾಡಿರುವ ಬಗ್ಗೆ ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಟೌನ್ ಶಿಪ್ ಯೋಜನೆಯನ್ನು ಡಿ.ಕೆ. ಶಿವಕುಮಾರ್ ಸಿಎಂ ಆದ ಬಳಿಕ ಕೈಗೊಂಡ ಯೋಜನೆಯಲ್ಲ. ಈ ವಿಚಾರವಾಗಿ ವಿಜಯೇಂದ್ರ ಅವರ ಜೊತೆಗೆ ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

Doddaballapur News: ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು

ದೊಡ್ಡಬಳ್ಳಾಪುರದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳ ಸಾವು

ದೊಡ್ಡಬಳ್ಳಾಪುರದಲ್ಲಿ ದುರ್ಘಟನೆ ನಡೆದಿದೆ. ಶನಿವಾರ ಸಂಜೆ ಮಕ್ಕಳು ಕೃಷಿ ಹೊಂಡದ ಪಕ್ಕದಲ್ಲಿ ಆಟವಾಡುತ್ತಿದ್ದರು. ಈ ವೇಳೆ ಕೃಷಿ ಹೊಂಡಕ್ಕೆ ಆಯತಪ್ಪಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಕೃಷಿ ಹೊಂಡಕ್ಕೆ ಸೂಕ್ತ ರೀತಿಯಲ್ಲಿ ಬೇಲಿ ನಿರ್ಮಿಸದ ಕಾರಣ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

BESCOM Online Services: ಸಾಫ್ಟ್‌ವೇರ್‌ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್‌ ಸೇವೆ ಅಲಭ್ಯ

ಸಾಫ್ಟ್‌ವೇರ್‌ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್‌ ಸೇವೆ ಅಲಭ್ಯ

ಐಪಿಡಿಎಸ್‌ ಐಟಿ ಅಪ್ಲಿಕೇಶನ್‌ ಅನ್ನು ಬೆಸ್ಕಾಂ ವ್ಯಾಪ್ತಿಯ 20 ಐಪಿಡಿಎಸ್‌ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ವಿವಿಧ ಪಟ್ಟಣ ಪ್ರದೇಶಗಳಲ್ಲಿ ಜೂನ್‌ 10ರಿಂದ 30ರವರೆಗೆ ಬೆಸ್ಕಾಂನ ಆನ್‌ಲೈನ್‌ ಸೇವೆಗಳು ಲಭ್ಯ ವಿರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಜೆಡಿಎಸ್ ಕಾರ್ಯಕರ್ತರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಸಿಎಂ ಡಿ.ಕೆ. ಶಿವಕುಮಾರ್

ಜೆಡಿಎಸ್ ಕಾರ್ಯಕರ್ತರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಸಿಎಂ ಡಿಕೆಶಿ

ಕನಕಪುರ ಕ್ಷೇತ್ರದಲ್ಲಿ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲಾಗುವುದು. ಲೋಕಸಭೆ ಚುನಾವಣೆಯಲ್ಲಿ ನಮಗೆ ಬೆಂಬಲ ಕೊಡಲಿಲ್ಲ ಎಂದು ಯಾರನ್ನೂ ದೂಷಣೆ ಮಾಡುವುದಿಲ್ಲ. ಏನೋ ಒಮ್ಮೆ ಹೆಚ್ಚು ಕಮ್ಮಿ ಆಗಿ ತಪ್ಪಾಗಿದೆ. ನಮ್ಮ ಮುಖಂಡರು ಯಾರ ವಿರುದ್ಧವೂ ದ್ವೇಷ ಸಾಧಿಸಬಾರದು. ಅವರ ಮನಪರಿವರ್ತನೆ ಆಗಲಿ ಎಂದು ಪ್ರಾರ್ಥಿಸಿ ಎಂದು ಕಾರ್ಯಕರ್ತರಿಗೆ ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

CM DK Shivakumar: ಜೀರೋ ಟ್ರಾಫಿಕ್‌ನಿಂದ ಜನರಿಗೆ ತೊಂದ್ರೆ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ

ಜೀರೋ ಟ್ರಾಫಿಕ್‌ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಸಿಎಂ

ಮೆಟ್ರೋ ರೈಲು ಪ್ರಯಾಣದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ಇಂದು ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು. ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಬೆಂಗಳೂರಿನ ನಾಗರಿಕರ ಮುಖದಲ್ಲಿನ ನೆಮ್ಮದಿಯನ್ನು ಕಂಡಾಗ, ಸುರಕ್ಷಿತ, ಜನಸ್ನೇಹಿ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ನಮ್ಮ ಕರ್ನಾಟಕದ ಜನತೆಗೆ ಎಷ್ಟು ಮುಖ್ಯ ಎಂಬುದು ಮತ್ತೊಮ್ಮೆ ಮನವರಿಕೆಯಾಯಿತು ಎಂದು ಹೇಳಿದ್ದಾರೆ.

ಮತ್ತೆ ಬೆಲೆ ಏರಿಕೆ; ಜೇಬಿಗೆ ಕತ್ತರಿ ಹಾಕಲಿದೆ ಹೋಟೆಲ್ ಊಟ, ತಿಂಡಿ

ಹೋಟೆಲ್ ಊಟ, ತಿಂಡಿ ಮತ್ತಷ್ಟು ಬೆಲೆ ಏರಿಕೆಗೆ ಸಿದ್ಧತೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ ದರ ನಿರಂತರ ಹೆಚ್ಚಳವಾಗುತ್ತಿದೆ. ಇದು ಹೋಟೆಲ್ ತಿಂಡಿ ತಿನಿಸುಗಳ ಮೇಲೆಯೂ ಪರಿಣಾಮ ಬೀರುತ್ತಿದೆ. ಈಗಾಗಲೇ ಹೋಟೆಲ್ ತಿನಿಸುಗಳ ದರ ಹೆಚ್ಚಳದಿಂದ ಕಂಗೆಟ್ಟಿರುವ ಹೋಟೆಲ್ ಗ್ರಾಹಕರಿಗೆ ಮತ್ತೊಮ್ಮೆ ಬರೆ ಎಳೆಯಲು ಹೋಟೆಲ್ ಮಾಲೀಕರು ಸಿದ್ದತೆ ನಡೆಸುತ್ತಿದ್ದಾರೆ. ಇತ್ತೀಚೆಗೆಷ್ಟೇ ಹೋಟೆಲ್ ತಿಂಡಿ, ತಿನಿಸುಗಳ ಬೆಲೆ ಹೆಚ್ಚಿಸಲಾಗಿದ್ದು, ಇದನ್ನು ಇನ್ನಷ್ಟು ಹೆಚ್ಚಿಸುವ ಸಿದ್ಧತೆ ನಡೆಯುತ್ತಿದೆ.

ಕಾಂಗ್ರೆಸ್ ಭವನ ಶಂಕುಸ್ಥಾಪನೆ ನಡೆಯೋದಿಲ್ಲ, ಇಂದು ಸಚಿವರ ಪಟ್ಟಿಬಿಡುಗಡೆ:  ಡಿ.ಕೆ. ಶಿವಕುಮಾರ್

ಇಂದು ಸಚಿವರ ಪಟ್ಟಿ ಪ್ರಕಟ: ಡಿ.ಕೆ. ಶಿವಕುಮಾರ್

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಸಚಿವರ ಪಟ್ಟಿ ಬುಧವಾರ ಮಧ್ಯಾಹ್ನದೊಳಗೆ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಕೆಲವು ಹೆಸರುಗಳು ಪ್ರಕಟವಾಗಿದ್ದು, ಇದು ಅಧಿಕೃತವಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಭವನ ಶಂಕುಸ್ಥಾಪನೆ ಬುಧವಾರ ಸಂಜೆ ನಡೆಯುವುದಿಲ್ಲ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ.

CM oath ceremony: ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ ಹಿನ್ನೆಲೆ ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ಡಿಕೆಶಿ ಪ್ರಮಾಣ ವಚನ ಹಿನ್ನೆಲೆ ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವ ಸಂತಸದಲ್ಲಿ ತಾಲೂಕಿನ ಪ್ರತಿ ಮನೆಗೂ ಸಿಹಿ ಹಂಚಲು ಉದ್ದೇಶಿಸಲಾಗಿದೆ. ನೆಲಮಂಗಲದಲ್ಲಿ ಲಾಡುಗಳ ತಯಾರಿಕೆಯನ್ನು ಶಾಸಕ ಶ್ರೀನಿವಾಸ್ ಮಂಗಳವಾರ ಪರಿಶೀಲನೆ ನಡೆಸಿದರು. ಪ್ರತಿ ಮನೆಗೆ ಮುಕ್ಕಾಲು ಕೆಜಿ ಸಿಹಿ ಬಾಕ್ಸ್‌ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ವಿದ್ಯಾರ್ಥಿನಿಗೆ  ಫೋರ್ಬ್ಸ್ 30ರ ಪಟ್ಟಿಯಲ್ಲಿ ಸ್ಥಾನ

ಫೋರ್ಬ್ಸ್ 30ರಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ

30 ವರ್ಷದೊಳಗಿನ ಏಷ್ಯಾ ಫೋರ್ಬ್ಸ್ 30ರ 2025 ಪಟ್ಟಿಯಲ್ಲಿ ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬಳು ಸ್ಥಾನ ಪಡೆದಿದ್ದಾಳೆ. ಸಾಮಾಜಿಕ ಪರಿಣಾಮ ವಿಭಾಗದಲ್ಲಿ ಈ ಸಾಧನೆ ಮಾಡಿರುವುದು 17 ವರ್ಷದ ದಿವಾ ಉತ್ಕರ್ಷ. ಇವರು ಬಸವೇಶ್ವರ ನಗರದ ನ್ಯಾಷನಲ್ ಅಕಾಡೆಮಿ ಫಾರ್ ಲರ್ನಿಂಗ್‌ನಲ್ಲಿ ದ್ವಿತೀಯ ಪಿಯುಸಿ ಮುಗಿಸಿ ಅಮೆರಿಕದಲ್ಲಿ ಕೈಗಾರಿಕಾ ಎಂಜಿನಿಯರಿಂಗ್ ಅಧ್ಯಯನ ಮಾಡುವ ಯೋಜನೆ ಮಾಡಿಕೊಂಡಿದ್ದಾರೆ. ಇವರು ಮಾಡಿರುವ ಸಾಧನೆ ವಿವರ ಇಲ್ಲಿದೆ.

10 ಕಿ.ಮೀ. ಗೆ 700 ರೂ.; ಬೆಂಗಳೂರು ಕ್ಯಾಬ್ ಗಳಿಂದ ಹಗಲು ದರೋಡೆ ಎಂದ ಮಹಿಳೆ

ಬೆಂಗಳೂರಿನ ಕ್ಯಾಬ್ ದರ ಕೇಳಿ ಮಹಿಳೆ ಶಾಕ್

10 ಕಿ.ಮೀ. ಗಿಂತಲೂ ಕಡಿಮೆ ದೂರ ಪ್ರಯಾಣಿಸಲು ಮಹಿಳೆಯೊಬ್ಬರು ಕ್ಯಾಬ್ ಗೆ 700 ರೂ. ಪಾವತಿ ಮಾಡಿದ್ದಾರೆ. ಬಳಿಕ ಇದನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದು, ಇದರಿಂದ ಅನೇಕರು ಶಾಕ್ ಗೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಬ್ ದರ ಈಗ ಚರ್ಚೆಯನ್ನು ಉಂಟು ಮಾಡಿದೆ. ಅನೇಕರು ಇದು ಹಗಲು ದರೋಡೆಯಾಗಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮಾದರಿ: ರಾಜೀನಾಮೆ ಬಳಿಕ ರಾಹುಲ್ ಗಾಂಧಿ ಶ್ಲಾಘನೆ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅವರನ್ನು ಹೊಗಳಿದ ರಾಹುಲ್ ಗಾಂಧಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ.

5,000 ಕೋಟಿ ರೂ. ಎಲ್ಲಿ ಹೋಗಿದೆ ಎಂದು ಹೇಳುವಿರಾ? ಸಿದ್ದರಾಮಯ್ಯಗೆ ಸುರೇಶ್​​ ಕುಮಾರ್ ಬಹಿರಂಗ ಪತ್ರ

ಸಿದ್ದರಾಮಯ್ಯ ಅವರಿಗೆ ಸುರೇಶ್​​ ಕುಮಾರ್ ಬಹಿರಂಗ ಪತ್ರ

ಗೃಹಲಕ್ಷ್ಮಿ ಯೋಜನೆಗೆ ಮೀಸಲಿರಿಸಿದ್ದ 5,000 ಕೋಟಿ ರೂ. ಎಲ್ಲಿದೆ ಮಾನ್ಯ ಸಿದ್ದರಾಮಯ್ಯನವರೇ? ಎಂದು ಬಿಜೆಪಿ ನಾಯಕ ಸುರೇಶ ಕುಮಾರ್ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೇಲೆ ಸುರೇಶ್ ಕುಮಾರ್ ಅವರು ಬರೆದಿರುವ ಈ ಪತ್ರ ಸಾಮಾಜಿಕ ವೈರಲ್ ಆಗಿದೆ.

Loading...