ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ಗ್ರಾಮಾಂತರ

BESCOM Online Services: ಸಾಫ್ಟ್‌ವೇರ್‌ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್‌ ಸೇವೆ ಅಲಭ್ಯ

ಸಾಫ್ಟ್‌ವೇರ್‌ ಅಳವಡಿಕೆ: 20 ಪಟ್ಟಣಗಳಲ್ಲಿ ಬೆಸ್ಕಾಂ ಆನ್‌ಲೈನ್‌ ಸೇವೆ ಅಲಭ್ಯ

ಐಪಿಡಿಎಸ್‌ ಐಟಿ ಅಪ್ಲಿಕೇಶನ್‌ ಅನ್ನು ಬೆಸ್ಕಾಂ ವ್ಯಾಪ್ತಿಯ 20 ಐಪಿಡಿಎಸ್‌ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ವಿವಿಧ ಪಟ್ಟಣ ಪ್ರದೇಶಗಳಲ್ಲಿ ಜೂನ್‌ 10ರಿಂದ 30ರವರೆಗೆ ಬೆಸ್ಕಾಂನ ಆನ್‌ಲೈನ್‌ ಸೇವೆಗಳು ಲಭ್ಯ ವಿರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಜೆಡಿಎಸ್ ಕಾರ್ಯಕರ್ತರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಸಿಎಂ ಡಿ.ಕೆ. ಶಿವಕುಮಾರ್

ಜೆಡಿಎಸ್ ಕಾರ್ಯಕರ್ತರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಸಿಎಂ ಡಿಕೆಶಿ

ಕನಕಪುರ ಕ್ಷೇತ್ರದಲ್ಲಿ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲಾಗುವುದು. ಲೋಕಸಭೆ ಚುನಾವಣೆಯಲ್ಲಿ ನಮಗೆ ಬೆಂಬಲ ಕೊಡಲಿಲ್ಲ ಎಂದು ಯಾರನ್ನೂ ದೂಷಣೆ ಮಾಡುವುದಿಲ್ಲ. ಏನೋ ಒಮ್ಮೆ ಹೆಚ್ಚು ಕಮ್ಮಿ ಆಗಿ ತಪ್ಪಾಗಿದೆ. ನಮ್ಮ ಮುಖಂಡರು ಯಾರ ವಿರುದ್ಧವೂ ದ್ವೇಷ ಸಾಧಿಸಬಾರದು. ಅವರ ಮನಪರಿವರ್ತನೆ ಆಗಲಿ ಎಂದು ಪ್ರಾರ್ಥಿಸಿ ಎಂದು ಕಾರ್ಯಕರ್ತರಿಗೆ ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

CM DK Shivakumar: ಜೀರೋ ಟ್ರಾಫಿಕ್‌ನಿಂದ ಜನರಿಗೆ ತೊಂದ್ರೆ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ

ಜೀರೋ ಟ್ರಾಫಿಕ್‌ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಸಿಎಂ

ಮೆಟ್ರೋ ರೈಲು ಪ್ರಯಾಣದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಸಿಎಂ ಡಿ.ಕೆ.ಶಿವಕುಮಾರ್‌ ಅವರು, ಇಂದು ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು. ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವ ಬೆಂಗಳೂರಿನ ನಾಗರಿಕರ ಮುಖದಲ್ಲಿನ ನೆಮ್ಮದಿಯನ್ನು ಕಂಡಾಗ, ಸುರಕ್ಷಿತ, ಜನಸ್ನೇಹಿ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ನಮ್ಮ ಕರ್ನಾಟಕದ ಜನತೆಗೆ ಎಷ್ಟು ಮುಖ್ಯ ಎಂಬುದು ಮತ್ತೊಮ್ಮೆ ಮನವರಿಕೆಯಾಯಿತು ಎಂದು ಹೇಳಿದ್ದಾರೆ.

ಮತ್ತೆ ಬೆಲೆ ಏರಿಕೆ; ಜೇಬಿಗೆ ಕತ್ತರಿ ಹಾಕಲಿದೆ ಹೋಟೆಲ್ ಊಟ, ತಿಂಡಿ

ಹೋಟೆಲ್ ಊಟ, ತಿಂಡಿ ಮತ್ತಷ್ಟು ಬೆಲೆ ಏರಿಕೆಗೆ ಸಿದ್ಧತೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಎಲ್‌ಪಿಜಿ ದರ ನಿರಂತರ ಹೆಚ್ಚಳವಾಗುತ್ತಿದೆ. ಇದು ಹೋಟೆಲ್ ತಿಂಡಿ ತಿನಿಸುಗಳ ಮೇಲೆಯೂ ಪರಿಣಾಮ ಬೀರುತ್ತಿದೆ. ಈಗಾಗಲೇ ಹೋಟೆಲ್ ತಿನಿಸುಗಳ ದರ ಹೆಚ್ಚಳದಿಂದ ಕಂಗೆಟ್ಟಿರುವ ಹೋಟೆಲ್ ಗ್ರಾಹಕರಿಗೆ ಮತ್ತೊಮ್ಮೆ ಬರೆ ಎಳೆಯಲು ಹೋಟೆಲ್ ಮಾಲೀಕರು ಸಿದ್ದತೆ ನಡೆಸುತ್ತಿದ್ದಾರೆ. ಇತ್ತೀಚೆಗೆಷ್ಟೇ ಹೋಟೆಲ್ ತಿಂಡಿ, ತಿನಿಸುಗಳ ಬೆಲೆ ಹೆಚ್ಚಿಸಲಾಗಿದ್ದು, ಇದನ್ನು ಇನ್ನಷ್ಟು ಹೆಚ್ಚಿಸುವ ಸಿದ್ಧತೆ ನಡೆಯುತ್ತಿದೆ.

ಕಾಂಗ್ರೆಸ್ ಭವನ ಶಂಕುಸ್ಥಾಪನೆ ನಡೆಯೋದಿಲ್ಲ, ಇಂದು ಸಚಿವರ ಪಟ್ಟಿಬಿಡುಗಡೆ:  ಡಿ.ಕೆ. ಶಿವಕುಮಾರ್

ಇಂದು ಸಚಿವರ ಪಟ್ಟಿ ಪ್ರಕಟ: ಡಿ.ಕೆ. ಶಿವಕುಮಾರ್

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬಳಿಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿರುವ ಸಚಿವರ ಪಟ್ಟಿ ಬುಧವಾರ ಮಧ್ಯಾಹ್ನದೊಳಗೆ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಕೆಲವು ಹೆಸರುಗಳು ಪ್ರಕಟವಾಗಿದ್ದು, ಇದು ಅಧಿಕೃತವಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಭವನ ಶಂಕುಸ್ಥಾಪನೆ ಬುಧವಾರ ಸಂಜೆ ನಡೆಯುವುದಿಲ್ಲ ಎಂದು ಕೂಡ ಅವರು ಸ್ಪಷ್ಟಪಡಿಸಿದ್ದಾರೆ.

CM oath ceremony: ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ ಹಿನ್ನೆಲೆ ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ಡಿಕೆಶಿ ಪ್ರಮಾಣ ವಚನ ಹಿನ್ನೆಲೆ ನೆಲಮಂಗಲದಲ್ಲಿ 10 ಲಕ್ಷ ಲಾಡು ತಯಾರಿ!

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಿರುವ ಸಂತಸದಲ್ಲಿ ತಾಲೂಕಿನ ಪ್ರತಿ ಮನೆಗೂ ಸಿಹಿ ಹಂಚಲು ಉದ್ದೇಶಿಸಲಾಗಿದೆ. ನೆಲಮಂಗಲದಲ್ಲಿ ಲಾಡುಗಳ ತಯಾರಿಕೆಯನ್ನು ಶಾಸಕ ಶ್ರೀನಿವಾಸ್ ಮಂಗಳವಾರ ಪರಿಶೀಲನೆ ನಡೆಸಿದರು. ಪ್ರತಿ ಮನೆಗೆ ಮುಕ್ಕಾಲು ಕೆಜಿ ಸಿಹಿ ಬಾಕ್ಸ್‌ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ವಿದ್ಯಾರ್ಥಿನಿಗೆ  ಫೋರ್ಬ್ಸ್ 30ರ ಪಟ್ಟಿಯಲ್ಲಿ ಸ್ಥಾನ

ಫೋರ್ಬ್ಸ್ 30ರಲ್ಲಿ ಬೆಂಗಳೂರಿನ ವಿದ್ಯಾರ್ಥಿನಿ

30 ವರ್ಷದೊಳಗಿನ ಏಷ್ಯಾ ಫೋರ್ಬ್ಸ್ 30ರ 2025 ಪಟ್ಟಿಯಲ್ಲಿ ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬಳು ಸ್ಥಾನ ಪಡೆದಿದ್ದಾಳೆ. ಸಾಮಾಜಿಕ ಪರಿಣಾಮ ವಿಭಾಗದಲ್ಲಿ ಈ ಸಾಧನೆ ಮಾಡಿರುವುದು 17 ವರ್ಷದ ದಿವಾ ಉತ್ಕರ್ಷ. ಇವರು ಬಸವೇಶ್ವರ ನಗರದ ನ್ಯಾಷನಲ್ ಅಕಾಡೆಮಿ ಫಾರ್ ಲರ್ನಿಂಗ್‌ನಲ್ಲಿ ದ್ವಿತೀಯ ಪಿಯುಸಿ ಮುಗಿಸಿ ಅಮೆರಿಕದಲ್ಲಿ ಕೈಗಾರಿಕಾ ಎಂಜಿನಿಯರಿಂಗ್ ಅಧ್ಯಯನ ಮಾಡುವ ಯೋಜನೆ ಮಾಡಿಕೊಂಡಿದ್ದಾರೆ. ಇವರು ಮಾಡಿರುವ ಸಾಧನೆ ವಿವರ ಇಲ್ಲಿದೆ.

10 ಕಿ.ಮೀ. ಗೆ 700 ರೂ.; ಬೆಂಗಳೂರು ಕ್ಯಾಬ್ ಗಳಿಂದ ಹಗಲು ದರೋಡೆ ಎಂದ ಮಹಿಳೆ

ಬೆಂಗಳೂರಿನ ಕ್ಯಾಬ್ ದರ ಕೇಳಿ ಮಹಿಳೆ ಶಾಕ್

10 ಕಿ.ಮೀ. ಗಿಂತಲೂ ಕಡಿಮೆ ದೂರ ಪ್ರಯಾಣಿಸಲು ಮಹಿಳೆಯೊಬ್ಬರು ಕ್ಯಾಬ್ ಗೆ 700 ರೂ. ಪಾವತಿ ಮಾಡಿದ್ದಾರೆ. ಬಳಿಕ ಇದನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೊಂಡಿದ್ದು, ಇದರಿಂದ ಅನೇಕರು ಶಾಕ್ ಗೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಬ್ ದರ ಈಗ ಚರ್ಚೆಯನ್ನು ಉಂಟು ಮಾಡಿದೆ. ಅನೇಕರು ಇದು ಹಗಲು ದರೋಡೆಯಾಗಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರಿಗೆ ಸಿದ್ದರಾಮಯ್ಯ ಮಾದರಿ: ರಾಜೀನಾಮೆ ಬಳಿಕ ರಾಹುಲ್ ಗಾಂಧಿ ಶ್ಲಾಘನೆ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಅವರನ್ನು ಹೊಗಳಿದ ರಾಹುಲ್ ಗಾಂಧಿ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕರ್ನಾಟಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದ್ದಾರೆ.

5,000 ಕೋಟಿ ರೂ. ಎಲ್ಲಿ ಹೋಗಿದೆ ಎಂದು ಹೇಳುವಿರಾ? ಸಿದ್ದರಾಮಯ್ಯಗೆ ಸುರೇಶ್​​ ಕುಮಾರ್ ಬಹಿರಂಗ ಪತ್ರ

ಸಿದ್ದರಾಮಯ್ಯ ಅವರಿಗೆ ಸುರೇಶ್​​ ಕುಮಾರ್ ಬಹಿರಂಗ ಪತ್ರ

ಗೃಹಲಕ್ಷ್ಮಿ ಯೋಜನೆಗೆ ಮೀಸಲಿರಿಸಿದ್ದ 5,000 ಕೋಟಿ ರೂ. ಎಲ್ಲಿದೆ ಮಾನ್ಯ ಸಿದ್ದರಾಮಯ್ಯನವರೇ? ಎಂದು ಬಿಜೆಪಿ ನಾಯಕ ಸುರೇಶ ಕುಮಾರ್ ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೇಲೆ ಸುರೇಶ್ ಕುಮಾರ್ ಅವರು ಬರೆದಿರುವ ಈ ಪತ್ರ ಸಾಮಾಜಿಕ ವೈರಲ್ ಆಗಿದೆ.

ಪ್ರಧಾನಿ ಮೋದಿ ಆಗಮನದ ವೇಳೆ ಭದ್ರತಾ ಲೋಪ: ಬೆಂಗಳೂರಿನ 6 ಪೊಲೀಸರು ಅಮಾನತು

ಭದ್ರತಾ ಲೋಪ: ಬೆಂಗಳೂರಿನ 6 ಪೊಲೀಸರು ಅಮಾನತು

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ವೇಳೆ ಭದ್ರತಾ ಲೋಪ ಉಂಟಾಗಿರುವ ಹಿನ್ನೆಲೆಯಲ್ಲಿ 6 ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಮೇ 10ರಂದು ಪ್ರಧಾನಿ ಮೋದಿ ಅವರು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಅವರು ತೆರಳುವ ಮಾರ್ಗದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಎರಡು ಜೆಲಾಟಿನ್ ಕಡ್ಡಿಗಳು ಪತ್ತೆಯಾಗಿದ್ದವು.

ಪೌರ ಕಾರ್ಮಿಕರಿಗೆ ಚಹಾ, ಬಿಸ್ಕೆಟ್ ಕೊಟ್ಟು ಎಲ್ಲರ ಹೃದಯ ಗೆದ್ದ ಬೆಂಗಳೂರಿನ ಮಹಿಳೆ

ಆನ್‌ಲೈನ್‌ನಲ್ಲಿ ಎಲ್ಲರ ಹೃದಯ ಗೆದ್ದ ಬೆಂಗಳೂರಿನ ಮಹಿಳೆ

ಮಾಡುವ ಸಣ್ಣದೊಂದು ಸಹಾಯ, ತೋರುವ ಕೊಂಚ ಪ್ರೀತಿ, ಕರುಣೆ ಕೂಡ ಕೆಲವೊಬ್ಬರ ಪಾಲಿಗೆ ದೇವರಾಗಿ ಬಂದರೇನೋ ಎಂದೆನಿಸುವಂತೆ ಮಾಡುತ್ತದೆ. ನಿಸ್ವಾರ್ಥವಾಗಿ ಮಾಡುವ ಇಂತಹ ಕಾರ್ಯಗಳೇ ಮಾನವೀಯತೆಯ ಬಹುದೊಡ್ಡ ಉದಾಹರಣೆಗಳಾಗಿ ಕಾಣುತ್ತವೆ. ಹೀಗೆ ಬೆಂಗಳೂರಿನ ಮಹಿಳೆಯೊಬ್ಬರು ಮಾಡಿದ ಸಣ್ಣ ಕಾರ್ಯ ಈಗ ಸಾಮಾಜಿಕ ಮಾಧ್ಯಮದಲ್ಲಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್‌; ಸರ್ಕಾರದ ನಡೆಗೆ ಸಿಡಿದೆದ್ದ ಬಿಜೆಪಿ

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್‌; ಸರ್ಕಾರದ ನಡೆಗೆ ಬಿಜೆಪಿ ಕಿಡಿ

Karnataka withdraws 2022 uniform order: ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದೆ. ಆದರೆ ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.

ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ; ಆರೋಪಿಗೆ ತಮಿಳುನಾಡು ನಂಟಿನ ಶಂಕೆ

ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ; NIA ತನಿಖೆ

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಉಂಟಾಗಿರುವ ಭದ್ರತಾ ಲೋಪವನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣನೆಗೆ ತೆಗೆದುಕೊಂಡಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಸೇರಿದಂತೆ ಕೇಂದ್ರೀಯ ತನಿಖಾ ಸಂಸ್ಥೆಗಳು ಪ್ರಕರಣದ ಬೆನ್ನತ್ತಿವೆ.

ಹೊಟೇಲ್ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಹೊರೆ; ಮತ್ತೆ ಹೆಚ್ಚಾಗುತ್ತ ತಿಂಡಿ ಬೆಲೆ?

ಬೆಂಗಳೂರಿನಲ್ಲಿ ಹೊಟೇಲ್ ತಿಂಡಿ ತಿನಿಸು ಬೆಲೆ ಏರಿಕೆ

ಊಟ, ತಿಂಡಿಗಾಗಿ ಹೊಟೇಲ್ ಅನ್ನೇ ನೆಚ್ಚಿಕೊಂಡಿದ್ದೀರಾ ? ಹಾಗಿದ್ದರೆ ಬೆಂಗಳೂರು ಹೊಟೇಲ್ ಗಳು ನಿಮಗೆ ಶಾಕ್ ಕೊಡುವುದು ಗ್ಯಾರಂಟಿ. ಬಹುತೇಕ ಎಲ್ಲಾ ಹೊಟೇಲ್ ಗಳಲ್ಲೂ ಚಹಾ, ಕಾಫಿ, ತಿಂಡಿ, ಊಟದ ಬೆಲೆಯನ್ನು ಹೆಚ್ಚಿಸಲಾಗಿದೆ. ಕನಿಷ್ಠ 5 ರೂ. ನಿಂದ 20 ರೂ. ವರೆಗೂ ದರ ಹೆಚ್ಚಳ ಮಾಡಲಾಗಿದ್ದು, ಇದು ಗ್ರಾಹಕರ ಜೇಬಿಗೆ ಕತ್ತರಿ ಹಾಕಲಿದೆ.

ESIC Hospital Doddaballapur: ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ಉದ್ಘಾಟಿಸಿದ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆ ಉದ್ಘಾಟನೆ

ಕಾರ್ಮಿಕರ ಕಲ್ಯಾಣ ಮತ್ತು ಸಾಮಾಜಿಕ ಭದ್ರತೆಯೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಳ್ಳಾರಿಯ ಸುಮಾರು 1.5 ಲಕ್ಷ ಜವಳಿ ಕಾರ್ಮಿಕರಿಗಾಗಿ ₹150 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಇಎಸ್‌ಐಸಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಜನತೆಯ ಬಹುದಿನಗಳ ಕನಸು ನನಸು; ಮೇ 3ರಂದು ಇಎಸ್ಐಸಿ ಆಸ್ಪತ್ರೆಗೆ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ ಚಾಲನೆ

ಮೇ 3ರಂದು ದೊಡ್ಡಬಳ್ಳಾಪುರ ಇಎಸ್ಐಸಿ ಆಸ್ಪತ್ರೆ ಉದ್ಘಾಟನೆ

Dr. Mansukh Mandaviya: ದೊಡ್ಡಬಳ್ಳಾಪುರದಲ್ಲಿ ಸುಸಜ್ಜಿತ 100 ಹಾಸಿಗೆಗಳ ಆಸ್ಪತ್ರೆ ಸಿದ್ದವಾಗಿದ್ದು, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ ಮೇ 3ರಂದು ಉದ್ಘಾಟಿಸಲಿದ್ದಾರೆ. ಜತೆಗೆ ಅದೇ ದಿನ ಬಳ್ಳಾರಿಯಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆಗೆ ವರ್ಚುವಲ್‌ ಆಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Anekal News: ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಮಗಳು ಸಾವು, ಪತಿ ಮೇಲೆ ಸಂಶಯ

ಕೃಷಿ ಹೊಂಡಕ್ಕೆ ಬಿದ್ದು ತಾಯಿ- ಮಗಳು ಸಾವು, ಪತಿ ಮೇಲೆ ಸಂಶಯ

ಲಾವಣ್ಯ ಹಾಗೂ ಮೃತದೇಹ ಕೃಷಿ ಹೊಂಡದಲ್ಲಿ ಸಿಕ್ಕಿದೆ ಎನ್ನುವ ವಿಚಾರ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಓಡೋಡಿ ಬಂದಿದ್ದಾರೆ. ತಾಯಿ-ಮಗಳ ಸಾವು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಗಳು ಆಕಸ್ಮಿಕವಾಗಿ ಸಾವನ್ನಪ್ಪಿಲ್ಲ. ಇದರ ಹಿಂದೆ ಗಂಡನ ಕೈವಾಡವಿದೆ ಎಂದು ಆರೋಪ ಮಾಡಿದ್ದಾರೆ.

Elephant Attack: ಕನಕಪುರ ಬಳಿ ಕಾಡಾನೆ ದಾಳಿಗೆ ರೈತ ಬಲಿ

ಕನಕಪುರ ಬಳಿ ಕಾಡಾನೆ ದಾಳಿಗೆ ರೈತ ಬಲಿ

ಸಂಗಮ ವ್ಯಾಪ್ತಿಯಲ್ಲಿ ಎರಡು ದಿನಗಳ ಹಿಂದೆ, ಮುತ್ತತ್ತಿ ಬಳಿ ಕಾವೇರಿ ನೀರಿನಲ್ಲಿ ವಿಹರಿಸುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆಯೊಂದು ದಾಳಿ ಮಾಡಿತ್ತು. ಇದೀಗ ಕನಕಪುರ (Kanakapura) ತಾಲೂಕಿನ ಸಂಗಮ ಅರಣ್ಯ ವಲಯ ಪ್ರದೇಶದ ವ್ಯಾಪ್ತಿಯ ಚೀಲಂದವಾಡಿಯಲ್ಲಿ ಈ ಘಟನೆ ನಡೆದಿದೆ.

ವಿಶ್ವೇಶ್ವರ ಭಟ್ ಕೃತಿಗಳೆಂದರೆ ಅವು ಅಮೂಲ್ಯ ಜ್ಞಾನ ಭಂಡಾರ: ವಸಂತ್ ಗಿಳಿಯಾರ್

ವಿಶ್ವೇಶ್ವರ ಭಟ್ ಅವರಿಗೆ ರಾಷ್ಟ್ರೀಯ ಸೌರಭ ಸಮ್ಮಾನ್ ಪ್ರಶಸ್ತಿ ಪ್ರದಾನ

Vishweshwar Bhat: ಅತ್ಯಂತ ವೇಗವಾಗಿ ವಿಶ್ವವನ್ನು ಸುತ್ತ ಬಲ್ಲ, ಅಷ್ಟೇ ವೇಗವಾಗಿ ಬರೆಯಬಲ್ಲ ಪರ್ತಕರ್ತರು ವಿಶ್ವೇಶ್ವರ ಭಟ್. ಅವರಂಥವರು ಇನ್ನೊಬ್ಬರಿಲ್ಲ ಎಂದು ಚಿಂತಕ, ಸಂಘಟಕ ವಸಂತ್ ಗಿಳಿಯಾರ್ ಹೇಳಿದರು. ಕುಮಟಾದಲ್ಲಿ ಆಯೋಜಿಸಲಾಗಿದ್ದ ಸಾಧನಾ ಸೌರಭ ಕಾರ್ಯಕ್ರಮದಲ್ಲಿ ಅವರು ವಿಶ್ವೇಶ್ವರ ಭಟ್ ಅವರ ಬರಹದ ಕುರಿತಾಗಿ ಮಾತನಾಡಿದರು.

Body Found: ದೇವನಹಳ್ಳಿಯ ಐಫೋನ್‌ ಫ್ಯಾಕ್ಟರಿ ಟಾಯ್ಲೆಟ್‌ನಲ್ಲಿ ನವಜಾತ ಶಿಶುವಿನ ಶವ ಪತ್ತೆ

ದೇವನಹಳ್ಳಿ ಐಫೋನ್‌ ಫ್ಯಾಕ್ಟರಿ ಟಾಯ್ಲೆಟ್‌ನಲ್ಲಿ ನವಜಾತ ಶಿಶು ಶವ ಪತ್ತೆ

ಶೌಚಾಲಯಕ್ಕೆ ಹೋದಾಗ ಆಕಸ್ಮಿಕವಾಗಿ ಹೊಟ್ಟೆಯಿಂದ ಹೊರಬಂದಿದ್ದ ನವಜಾತ ಶಿಶುವನ್ನು ಗಾಬರಿಯಲ್ಲಿ ತಾಯಿಯೇ ಕೊಂದು ಕಸದ ಬುಟ್ಟಿಗೆ ಎಸೆದಿದ್ದಾಳೆ ಎನ್ನಲಾಗುತ್ತಿದೆ. ಮದುವೆಯಾಗದೇ ಗರ್ಭಿಣಿಯಾಗಿದ್ದರಿಂದ ಮಹಿಳೆ ಭಯಗೊಂಡು ಮಗುವಿನ ಜೀವ ತೆಗೆದಿದ್ದಾಳೆ ಎಂದು ತಿಳಿದುಬಂದಿದ್ದು, ಪೊಲೀಸರು ಈಕೆಯನ್ನು ಪತ್ತೆ ಹಚ್ಚಿದ್ದಾರೆ.

Bengaluru Ring Road: ಬೆಂಗಳೂರಿಗೆ ಬರಲಿದೆ ನಾಲ್ಕನೇ ರಿಂಗ್‌ ರಸ್ತೆ, 12 ಉಪನಗರಗಳಿಗೆ ಸಂಪರ್ಕ ಕೊಂಡಿ

ಬೆಂಗಳೂರಿಗೆ ಬರಲಿದೆ 4ನೇ ರಿಂಗ್‌ ರಸ್ತೆ, 12 ಉಪನಗರಗಳಿಗೆ ಸಂಪರ್ಕ ಕೊಂಡಿ

ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ಈ ಯೋಜನೆಯನ್ನು ಜಾರಿಗೊಳಿಸಲಿದೆ. 210 ಕಿ.ಮೀ ಉದ್ದದ ಈ ಕಾರಿಡಾರ್ ಅನ್ನು 2007 ರಲ್ಲಿಯೇ ಪ್ರಸ್ತಾಪಿಸಲಾಗಿತ್ತು. ಆದರೆ, ಕಾನೂನು ತೊಡಕುಗಳು ಮತ್ತು ಭೂಸ್ವಾಧೀನದ ಸವಾಲುಗಳಿಂದಾಗಿ ನೆನೆಗುದಿಗೆ ಬಿದ್ದಿತ್ತು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ಈ ಯೋಜನೆಗೆ ಈಗ ಮರುಜೀವ ನೀಡಲಾಗಿದೆ.

GBA Election: ಜಿಬಿಎ ಚುನಾವಣೆ ಮತ್ತೆ ಮುಂದೂಡಿಕೆ ಸಾಧ್ಯತೆ, ಆಯೋಗಕ್ಕೆ ಸರಕಾರದ ಪತ್ರ

ಜಿಬಿಎ ಚುನಾವಣೆ ಮತ್ತೆ ಮುಂದೂಡಿಕೆ ಸಾಧ್ಯತೆ, ಆಯೋಗಕ್ಕೆ ಸರಕಾರದ ಪತ್ರ

ಜನಗಣತಿ ಕಾರ್ಯಕ್ಕೆ ಅಧಿಕ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪಂಚ ನಗರ ಪಾಲಿಕೆಗಳಿಗೆ ಚುನಾವಣೆ ನಡೆಸುವ ಕಾಲಾವಧಿಯನ್ನು ಸೆ.30ರವರೆಗೆ ವಿಸ್ತರಿಸಬೇಕೆಂದು ಕೋರಿ ಜಿಬಿಎ ಮುಖ್ಯ ಆಯುಕ್ತ ಎಂ.ಮಹೇಶ್ವರ ರಾವ್‌ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯುಕ್ತರಿಗೆ ಏ.6ರಂದು ಪತ್ರ ಬರೆದಿದ್ದರು.

RCB vs DC: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

bengaluru traffic advisory: ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿಮೆಟ್ರೋ ಮತ್ತು ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನು ಕಲ್ಪಿಸಿದೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ.

Loading...