ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರು ಗ್ರಾಮಾಂತರ

ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ದತ್ತಾ ಸರಾಫ್ ನೇಮಕ

ಬ್ರಾಹ್ಮಣ ಮಹಾಸಂಘದ ಬೆಂ. ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ದತ್ತಾ ಸರಾಫ್

Bengaluru News: ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಕರ್ನಾಟಕ ರಾಜ್ಯ ಘಟಕದ ವತಿಯಿಂದ ಸಂಘಟನೆಯ ವಿಸ್ತರಣೆ ಹಾಗೂ ಸಮಾಜದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ದತ್ತಾ ಸರಾಫ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ ಎಂದು ಸಂಘ ತಿಳಿಸಿದೆ.

Bengaluru Crime News: ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದರು. ಇದೇ ವೇಳೆ ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಹಿಟ್‌ & ರನ್‌ಗೆ ವ್ಯಕ್ತಿ ಬಲಿ, 11 ಗಂಟೆ ರಸ್ತೆಯಲ್ಲೇ ಬಿದ್ದಿತ್ತು ಶವ

ಹಿಟ್‌ & ರನ್‌ಗೆ ವ್ಯಕ್ತಿ ಬಲಿ, 11 ಗಂಟೆ ರಸ್ತೆಯಲ್ಲೇ ಬಿದ್ದಿತ್ತು ಶವ

ಬೆಂಗಳೂರು – ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹಳೆಯ ಚಂದಾಪುರ ಸಮೀಪ ಬುಧವಾರ ಬೆಳಗ್ಗೆ 9:00ರ ಸಮಯದಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿತ್ತು. ಅದಾದ ನಂತರ ವ್ಯಕ್ತಿ ಅಲ್ಲಿಯೇ ಕೆಳಗೆ ಬಿದ್ದು, ಸಾವನ್ನಪ್ಪಿದ್ದರು. ರಾತ್ರಿ 9:00ರ ವರೆಗೂ ಅವರ ಶವ ಅಲ್ಲೇ ಬಿದ್ದಿತ್ತು ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಎಂದರೆ 3 ಸಿ: ಕೈ ಪಕ್ಷಕ್ಕೆ ಹೊಸ ವ್ಯಾಖ್ಯಾನ ನೀಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ

ಕಾಂಗ್ರೆಸ್ ಕಾಲದಲ್ಲಿ ಎಷ್ಟು ಸಾರಿ ಹೆಸರು ಬದಲಿಸಿಲ್ಲ? ಛಲವಾದಿ ಪ್ರಶ್ನೆ

Chalavadi Narayanaswamy: ಕಾಂಗ್ರೆಸ್ ಎಂದರೆ 3 ಸಿ. ಅಂದರೆ, ಕರಪ್ಶನ್ ಅಂದರೆ ಭ್ರಷ್ಟಾಚಾರ. ಕಾಂಗ್ರೆಸ್‌ ನಾಯಕರು ಭ್ರಷ್ಟಾಚಾರದಲ್ಲಿ ನಿಪುಣರು. ಮೋದಿ ಅವರ ಸರ್ಕಾರ 12 ವರ್ಷ ಪೂರೈಸುತ್ತಿದ್ದು, ಈ 12 ವರ್ಷಗಳಲ್ಲಿ ಭ್ರಷ್ಟಾಚಾರದ ಆರೋಪಗಳಿಲ್ಲ. ಕಾಂಗ್ರೆಸ್ಸೆಂದರೆ ಕಮಿಷನ್; ಟೆಂಡರ್ ಹಾಕು ಕಮಿಷನ್ ಹೊಡಿ ಎಂಬ ನೀತಿ. ಅದಾದ ಮೇಲೆ ಕನ್ನಿಂಗ್, ಕಮ್ಯುನಲ್, ಕಾಸ್ಟಿಸಂ, ಓಲೈಕೆಗಳು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

Bus fire accident: ಮತ್ತೊಂದು ಖಾಸಗಿ ಬಸ್‌ ಧಗಧಗ, ನೆಲಮಂಗಲದಲ್ಲಿ 40 ಪ್ರಯಾಣಿಕರಿದ್ದ ಬಸ್‌ ಬೆಂಕಿಗಾಹುತಿ

ನೆಲಮಂಗಲದಲ್ಲಿ 40 ಪ್ರಯಾಣಿಕರಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ

ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಜನಾ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್ ಹೊತ್ತಿ ಉರಿದಿದೆ. ಬಸ್‌ನಲ್ಲಿ 40 ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹನುಮಂತಪುರ ಗೇಟ್ ಸಮೀಪ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾಗಿದೆ.

Kaveri Water: ಬೆಂಗಳೂರು ಜನತೆಯ ಗಮನಕ್ಕೆ : ಈ ಏರಿಯಾಗಳಲ್ಲಿ ಇಂದು ನಾಳೆ ಕಾವೇರಿ ನೀರು ಪೂರೈಕೆ ಇಲ್ಲ

ಬೆಂಗಳೂರು ಜನತೆ ಗಮನಕ್ಕೆ: ಈ ಏರಿಯಾಗಳಲ್ಲಿ ಇಂದು ನಾಳೆ ಕಾವೇರಿ ನೀರು ಇಲ್ಲ

ಬೆಂಗಳೂರು ನೀರು ಸರಬರಾಜು ಮತ್ತು ಮಂಡಳಿಯ ವತಿಯಿಂದ ಸರಬರಾಜು ವತಿಯಿಂದ ನಿರ್ಮಾಣ 1200ಎಂಎಂ, 900 ಎಂಎಂ ಹಾಗೂ 700ಎಂಎಂ ವ್ಯಾಸದ ನೀರು ಸರಬರಾಜು ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯಲಿದೆ. ಈ ಕಾರಣದಿಂದ ಫೆಬ್ರವರಿ 5 ಗುರುವಾರದಂದು ಬೆಳಗ್ಗೆ 6ರಿಂದ ಫೆಬ್ರವರಿ 6 ಶುಕ್ರವಾರ ಬೆಳಗ್ಗೆ 6 ಗಂಟೆವರೆಗೆ ಒಟ್ಟು 24 ಗಂಟೆ ಹಲವೆಡೆ ನೀರು ಸ್ಥಗಿತಗೊಳಿಸಲಾಗುತ್ತಿದೆ.

ಬೆಂಗಳೂರಿನ ಹೊಸ ಕಚೇರಿ ತೆರೆಯಲು ಮುಂದಾದ ಗೂಗಲ್‌ನ ಪೋಷಕ ಕಂಪೆನಿ ಆಲ್ಫಾಬೆಟ್

ಬೆಂಗಳೂರಿನಲ್ಲಿ ಕಚೇರಿ ತೆರೆಯಲು ಆಲ್ಫಾಬೆಟ್ ನಿರ್ಧಾರ

ಗೂಗಲ್‌ ನಲ್ಲಿ ಕೆಲಸ ಗಿಟ್ಟಿಸಿಕೊಳ್ಳುವ ಆಸೆ ಇರುವವರಿಗೆ ಒಂದು ಶುಭ ಸುದ್ದಿ. ಗೂಗಲ್‌ನ ಪೋಷಕ ಕಂಪೆನಿ ಆಲ್ಫಾಬೆಟ್ ಇದೀಗ ಬೆಂಗಳೂರಿನಲ್ಲಿ ಹೊಸ ಕಚೇರಿ ತೆರೆಯಲು ಮುಂದಾಗಿದೆ. ಇದಕ್ಕಾಗಿ ವೈಟ್‌ಫೀಲ್ಡ್ ಟೆಕ್ ಕಾರಿಡಾರ್‌ನಲ್ಲಿ ಮೂರು ಕಟ್ಟಡಗಳನ್ನು ಗುತ್ತಿಗೆ ಪಡೆಯಲು ನಿರ್ಧರಿಸಿದೆ. ಒಂದು ಕಟ್ಟಡವು ಶೀಘ್ರದಲ್ಲೇ ಕಾರ್ಯಾರಂಭಿಸಲಿದೆ ಎನ್ನಲಾಗಿದೆ.

Foxconn tax issue: ಫಾಕ್ಸ್‌ಕಾನ್ ಕಂಪನಿಗೆ ನೀಡಿದ್ದ ಗ್ರಾಪಂ ತೆರಿಗೆ ನೋಟೀಸ್ ರದ್ದು: ಜಿಪಂ ಸಿಇಒ ಸ್ಪಷ್ಟನೆ

ಫಾಕ್ಸ್‌ಕಾನ್ ಕಂಪನಿಗೆ ನೀಡಿದ್ದ ಗ್ರಾಪಂ ತೆರಿಗೆ ನೋಟೀಸ್ ರದ್ದು

ಫಾಕ್ಸ್‌ಕಾನ್ ಕಂಪನಿಗೆ ತೆರಿಗೆ ಪಾವತಿಸಲು ಸೂಚಿಸಿ ಎಂಟು ಸಲ ನೋಟಿಸ್ ನೀಡಲಾಗಿತ್ತು. ಆದರೆ ಅದು ಯಾವುದಕ್ಕೂ ಉತ್ತರಿಸಿಲ್ಲ. ಈಗ ಆ ಪ್ರದೇಶವನ್ನು ಎಸ್ಐಆರ್ ಎಂದು ಘೋಷಿಸಿರುವುದರಿಂದ ಗ್ರಾಪಂ ಕಡೆಯಿಂದ ನೋಟೀಸ್ ನೀಡುವ ಪ್ರಮೇಯವೇ ಉದ್ಭವಿಸದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಸಿಇಒ ಕೆ.ಎನ್ ಅನುರಾಧ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರದ ಶನಿ ಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಕಿದ್ದಕ್ಕೆ ಮುಸ್ಲಿಂ ಯುವಕ ಕಿರಿಕ್‌; ವಿಡಿಯೊ ವೈರಲ್‌

ಶನೈಶ್ಚರ ದೇಗುಲದಲ್ಲಿ ಸುಪ್ರಭಾತ ಹಾಕಿದ್ದಕ್ಕೆ ಮುಸ್ಲಿಂ ಯುವಕ ಕಿರಿಕ್‌

Doddaballapur News: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿರುವ ಶನಿಮಹಾತ್ಮ ದೇವಸ್ಥಾನದಲ್ಲಿ ಬೆಳಗ್ಗೆ ಸುಪ್ರಭಾತ ಹಾಕಲಾಗಿತ್ತು. ಇದಕ್ಕೆ ಮುಸ್ಲಿಂ ಯುವಕ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಇದೇ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ ಯುವಕರ ನಡುವೆ ಮಾತಿನ ಚಕಮಕಿ ನಡೆದಿದೆ.

Labourers death: ಶೆಡ್‌ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ನಿಗೂಢ ರೀತಿಯಲ್ಲಿ ಸಾವು

ಶೆಡ್‌ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ನಿಗೂಢ ರೀತಿಯಲ್ಲಿ ಸಾವು

ಕೋಕಾಕೋಲಾ ವೇರ್ ಹೌಸ್‌ನಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ರಾತ್ರಿ ಶೆಡ್ ಕಿಟಕಿ ಬಾಗಿಲು ಕ್ಲೋಸ್ ಮಾಡಿ ಅಡುಗೆ ಮಾಡಿದ್ದರು. ತಡರಾತ್ರಿ ಉಸಿರುಗಟ್ಟಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಾಕಿಂಗ್‌ಗೆ ಹೋಗುತ್ತಿದ್ದ ಬಾಣಂತಿ ಮೇಲೆ ಸಾಕು ನಾಯಿ ದಾಳಿ!

ಬೆಂಗಳೂರಿನ ಟೆಕ್ಕಿ ಮೇಲೆ ನಾಯಿ ದಾಳಿ

ಸಾಫ್ಟ್‌ವೇರ್ ಎಂಜಿನಿಯರ್ ಮಹಿಳೆಯ ಮೇಲೆ ನೆರೆ ಮನೆಯವರ ಸಾಕು ನಾಯಿಯೊಂದು ದಾಳಿ ನಡೆಸಿರುವ ಘಟನೆ ಜನವರಿ 26ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಮಹಿಳೆ ವಾಕಿಂಗ್ ಗೆ ಹೋಗುತ್ತಿದ್ದಾಗ ಮಹಿಳೆ ಮೇಲೆ ನಾಯಿ ದಾಳಿ ನಡೆಸಿದ್ದು, ಇದರಿಂದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೂವರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚಿಸಿದ ಕಿಲೇಡಿ; ಗಂಡಂದಿರಿಂದ ದೂರು

ಮೂವರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚಿಸಿದ ಕಿಲೇಡಿ

Doddaballapur News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕಿನ ಅಣಬೆ ಗ್ರಾಮದ ಮಹಿಳೆಯೊಬ್ಬಳು ಮೂವರ ಜತೆ ಮದುವೆಯಾಗಿ, ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ದೊಡ್ಡಬಳ್ಳಾಪುರ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

Road Accident: ತುಮಕೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ತುಮಕೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಾರುತಿ ಎರಿಟಿಗಾ ಕಾರಿನಲ್ಲಿ ಬರುವಾಗ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿ ಸವಾಲು

ಕುಮಾರಸ್ವಾಮಿಯನ್ನು ಚರ್ಚೆಗೆ ಕರೆದ ಡಿಸಿಎಂ

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಬೇಕಾದರೆ ಚರ್ಚೆಗೆ ಬರಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸವಾಲು ಹಾಕಿದ್ದಾರೆ. ಇದಕ್ಕಾಗಿ ಮಾಧ್ಯಮಗಳೇ ಚರ್ಚೆಗೆ ದಿನಾಂಕ ನಿಗದಿ ಮಾಡಿ 3 ದಿನ ಮುಂಚಿತವಾಗಿ ನನಗೆ ಮಾಹಿತಿ ನೀಡಲಿ. ಚರ್ಚೆಗೆ ಬರುತ್ತೇನೆ ಎನ್ನುವವರನ್ನು ಬೇಡ ಎನ್ನಲು ಆಗುತ್ತದೆಯೇ ಎಂದು ಅವರು ಪ್ರಶ್ನಿಸಿದರು.

ಟಾಟಾ ಏಸ್-ಸ್ಕೂಟರ್‌ ಮುಖಾಮುಖಿ ಡಿಕ್ಕಿಯಾಗಿ ತಾಯಿ-ಮಗ ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ಟಾಟಾ ಏಸ್-ಸ್ಕೂಟರ್‌ ಡಿಕ್ಕಿಯಾಗಿ ತಾಯಿ-ಮಗ ಸಾವು

ಡಿ ಮಾರ್ಟ್‌ನಿಂದ ದಿನಸಿ ಸಾಮಗ್ರಿ ಖರೀದಿಸಿ ತಾಯಿ-ಮಗ ಡಿಯೋ ಸ್ಕೂಟರ್‌ನಲ್ಲಿ ಮನೆಯತ್ತ ಸಾಗುತ್ತಿದ್ದಾಗ ಎದುರಿಗೆ ಬಂದ ಟಾಟಾ ಏಸ್‌ ಡಿಕ್ಕಿಯಾಗಿದೆ. ಇದರಿಂದ ಸ್ಥಳದಲ್ಲೇ ತಾಯಿ-ಮಗ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಯಾಗಿ ಬಳಸಬಹುದು ಎಂದ ಹೈಕೋರ್ಟ್

ಬೈಕ್‌ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆ

ದ್ವಿಚಕ್ರ ವಾಹನಗಳನ್ನು ಟ್ಯಾಕ್ಸಿಯಾಗಿ ಬಳಸಬಹುದು ಎಂದು ಹೈಕೋರ್ಟ್ ಹೇಳಿದ್ದು, ಇದರಿಂದ ರಾಜ್ಯದಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆಯುಂಟಾದಂತಾಗಿದೆ. ರಾಜ್ಯ ಸರ್ಕಾರದ ಆದೇಶವನ್ನು ಈ ಹಿಂದೆ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಆದರೆ ಇದೀಗ ಅದನ್ನು ಹೈಕೋರ್ಟ್ ರದ್ದುಗೊಳಿಸಿದೆ.

Devanahalli Accident: ದೇವನಹಳ್ಳಿಯಲ್ಲಿ ಭೀಕರ ಹಿಟ್‌ ಆ್ಯಂಡ್‌ ರನ್‌; ಮೂವರು ಯುವಕರ ದುರ್ಮರಣ

ದೇವನಹಳ್ಳಿಯಲ್ಲಿ ಭೀಕರ ಹಿಟ್‌ ಆ್ಯಂಡ್‌ ರನ್‌; ಮೂವರು ಯುವಕರ ದುರ್ಮರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್‌ಗೆ ಟಿಪ್ಪರ್‌ ಡಿಕ್ಕಿಯಾಗಿದ್ದರಿಂದ ಮೂವರು ಯುವಕರು ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್‌ ಚಾಲಕ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Puneeth Kerehalli: ಬನ್ನೇರುಘಟ್ಟದಲ್ಲಿ ಪುನೀತ್‌ ಕೆರೆಹಳ್ಳಿ ಆರೆಸ್ಟ್‌, ಯಾವ ಪ್ರಕರಣ?

ಬನ್ನೇರುಘಟ್ಟದಲ್ಲಿ ಪುನೀತ್‌ ಕೆರೆಹಳ್ಳಿ ಆರೆಸ್ಟ್‌, ಯಾವ ಪ್ರಕರಣ?

ಬೆಂಗಳೂರು ಗ್ರಾಮಾಂತರ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಪುನೀತ್ ಕೆರೆಹಳ್ಳಿಯ ಬಂಧನ ಸುದ್ದಿ ತಿಳಿದ ಬಳಿಕ, ಅವರ ಬೆಂಬಲಿಗರು ಠಾಣೆಯ ಬಳಿ ಜಮಾಯಿಸಲು ಯತ್ನಿಸಿದರೂ, ಪೊಲೀಸರು ಅವರನ್ನು ಒಳಗೆ ಬಿಡದೆ ನಿಯಂತ್ರಿಸಿದರು.

ಬೆಂಗಳೂರಿನಲ್ಲಿ ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ

ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ಡೆಂಟಲ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರಿನ ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಲೇಜಿನಲ್ಲಿ ಲೆಕ್ಚರರ್‌ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಲೆಕ್ಚರರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿನಿಯ ಪೋಷಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ.

Road Accident: ಕಾರಿಗೆ ಬೊಲೆರೋ ಡಿಕ್ಕಿ, ಇಬ್ಬರು ಯುವಕರ ದುರ್ಮರಣ

ಕಾರಿಗೆ ಬೊಲೆರೋ ಡಿಕ್ಕಿ, ಇಬ್ಬರು ಯುವಕರ ದುರ್ಮರಣ

ಚನ್ನರಾಯಪಟ್ಟಣದ ಮೂಲದ ಗಗನ್ ಮಾದನಾಯಕನಹಳ್ಳಿ ಖಾಸಗಿ ಬಾರ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ದರ್ಶನ್ ಕೂಡ ಕೋಳಿ ಸಪ್ಲೈ ಮಾಡುವ ವಾಹನದ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದ. ಎಲೆಕ್ಟ್ರಾನಿಕ್ ಸಿಟಿ ಬಳಿ ಸ್ನೇಹಿತನ ರೂಂಗೆಂದು ಮೂವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಬೊಲೆರೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಮಾಗಡಿಯಲ್ಲಿ ಶ್ರೀನಿವಾಸ ಕಲ್ಯಾಣ; ರಾಜ್ಯಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸಿದೆ ಎಂದ ಡಿ.ಕೆ. ಶಿವಕುಮಾರ್

ಮಾಗಡಿ ಶ್ರೀನಿವಾಸ ಕಲ್ಯಾಣದಲ್ಲಿ ಡಿ.ಕೆ. ಶಿವಕುಮಾರ್ ದಂಪತಿ ಭಾಗಿ

ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕ ಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು‌ ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

Road Accident: ಬೆಂಗಳೂರಿನಲ್ಲಿ ಭೀಕರ ಅಪಘಾತ, ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

ಬೆಂಗಳೂರಿನಲ್ಲಿ ಭೀಕರ ಅಪಘಾತ, ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು

ದಾಸರಹಳ್ಳಿಯಲ್ಲಿ ಗೌರಿಬಿದನೂರು ಮೂಲದ ಕುಟುಂಬ ವಾಸವಿತ್ತು. ಮೃತ ಹರೀಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಮೀನು ನೋಡಿಕೊಂಡು ವಾಪಸ್ ಆಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಕಾರಿನಲ್ಲಿ ಇದ್ದ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾಗೆ ಗಂಭೀರವಾದ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ ಆರೋಪ; ಬ್ರಹ್ಮಾನಂದ ಗುರೂಜಿ ವಿರುದ್ಧ ಎಫ್‌ಐಆರ್‌

ಮಹಿಳೆಗೆ ಕಿರುಕುಳ; ಬ್ರಹ್ಮಾನಂದ ಗುರೂಜಿ ವಿರುದ್ಧ ಎಫ್‌ಐಆರ್‌

Brahmananda Guruji Case: ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ಮಹಿಳಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೈಟ್‌ ಕೊಡಿಸುವುದಾಗಿ ಮಂಚಕ್ಕೆ ಕರೆದ ಸ್ವಾಮೀಜಿ; ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯಿಂದ ದೂರು

ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ; ಬ್ರಹ್ಮಾನಂದ ಗುರೂಜಿ ವಿರುದ್ಧ ದೂರು

Brahmananda Guruji: ಕಡಿಮೆ ಬೆಲೆಗೆ ಸೈಟ್ ಕೊಡಿಸುವುದಾಗಿ ಮಹಿಳೆಯಿಂದ 5 ಲಕ್ಷ ಹಣವನ್ನು ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ, ಒಂದು ವರ್ಷವಾದರೂ ಸೈಟ್‌ ನೀಡದ ಹಿನ್ನೆಲೆಯಲ್ಲಿ ಹಣ ವಾಪಸ್‌ ಕೇಳಿದಾಗ ಮಹಿಳೆಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Loading...