ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ಗ್ರಾಮಾಂತರ

ನೆಲಮಂಗಲದಲ್ಲಿ 3 ವರ್ಷದ ಬಾಲಕಿ ಅನುಮಾನಾಸ್ಪದ ಸಾವು; ಮಲ ತಾಯಿಯಿಂದ ಕೊಲೆ ಶಂಕೆ!

ನೆಲಮಂಗಲದಲ್ಲಿ 3 ವರ್ಷದ ಬಾಲಕಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ!

Nelamangala News: ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡಹಳ್ಳಿಯಲ್ಲಿ ಘಟನೆ ನಡೆದಿದೆ. ಬಾಲಕಿಯ ಸಾವಿನ ಹಿಂದೆ ಮಲತಾಯಿಯ ಕೈವಾಡವಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಭಾರತ ರತ್ನ ಪುರಸ್ಕೃತ ವಿಜ್ಞಾನಿ ಪ್ರೊ.ಸಿ.ಎನ್.ಆರ್. ರಾವ್‌ಗೆ  SIR ಶಾಕ್‌; ಹೆಸರಿನಲ್ಲಿರುವ ಹೆಚ್ಚುವರಿ ʼFʼ ಅಕ್ಷರದ ಬಗ್ಗೆ ನೋಟಿಸ್‌

ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ SIR ನೋಟಿಸ್

Prof CNR Rao: ಭಾರತ ರತ್ನ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ SIR ನೋಟಿಸ್ ನೀಡಲಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವೇಳೆ ಅವರ ಹೆಸರು ಪಟ್ಟಿಯಲ್ಲಿರುವ ಹೆಸರಿಗೆ ಹೊಂದಾಣಿಕೆಯಾಗದೇ ಇರುವುದರಿಂದ ನೋಟಿಸ್ ಜಾರಿ ಗೊಳಿಸಲಾಗಿದೆ ಎನ್ನಲಾಗಿದೆ. ಅವರ ಹೆಸರಿನಲ್ಲಿ ಹೆಚ್ಚುವರಿ ಎಫ್ ಇರುವುದರಿಂದ ನೋಟಿಸ್ ನೀಡಲಾಗಿದೆ.

ಬೆಂಗಳೂರಿನಲ್ಲಿ ಸ್ಕೂಟರ್ ಗುಂಡಿಗೆ ಬಿದ್ದು ಮಹಿಳೆಗೆ ಗಂಭೀರ ಗಾಯ; ಚಿಕಿತ್ಸೆಗೆ 2 ಲಕ್ಷ ರೂಪಾಯಿ ಖರ್ಚು

ರಸ್ತೆ ಸರಿಪಡಿಸಿ; ಆಸ್ಪತ್ರೆಯಿಂದ ಮಹಿಳೆ ಮನವಿ

ಸ್ಕೂಟರ್ ಗುಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆಯೊಬ್ಬರು ರಸ್ತೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್-ವರ್ತೂರ್ ರಸ್ತೆಯಲ್ಲಿ ನೆಕ್ಸಸ್ ಮಾಲ್ ಬಳಿಯ ಗುಂಡಿ ಬಳಿ ತನ್ನ ಸ್ಕೂಟರ್ ಬಿದ್ದು ಹಿಮ್ಮಡಿ ಪುಡಿಯಾಗಿದೆ. ಇದರಿಂದ ಚಿಕಿತ್ಸೆಗೆ ಬರೋಬ್ಬರಿ 2 ಲಕ್ಷ ರೂ. ಖರ್ಚಾಗಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಅಧಿಕಾರಿಗಳ ಗಮನ ಸೆಳೆದಿದ್ದಾರೆ.

3 ತಿಂಗಳ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರಿನ ಮಹಿಳೆ

ಅವಳಿ ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆಗೆ ಯತ್ನ

self herming: ಮಹಿಳೆಯೊಬ್ಬರು ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆರಿಗೆ ಬಳಿಕ ಮಹಿಳೆಯ ನಡವಳಿಕೆಯಲ್ಲಿ ಬದಲಾವಣೆಯಾಗಿದ್ದು, ಆಕೆ ಮಕ್ಕಳನ್ನು ನೋಡಿಕೊಳ್ಳಲು ನಿರಾಸಕ್ತಿ ತೋರಿಸಿದ್ದಳು. ಮಕ್ಕಳನ್ನು ಆಶ್ರಮಕ್ಕೆ ಕಳುಹಿಸುವ ಬಗ್ಗೆ ಪದೇ ಪದೇ ಮಾತನಾಡುತ್ತಿದ್ದಳು ಎಂದು ಮನೆಯವರು ಆರೋಪಿಸಿದ್ದಾರೆ.

ಇಸ್ಲಾಂ ಇತರ ಧರ್ಮಗಳಿಗಿಂತ ಶ್ರೇಷ್ಠ ಎಂದ ಸಚಿವ ಬಸವರಾಜ ರಾಯರೆಡ್ಡಿ; ಹಿಂದೂಗಳ ಕ್ಷಮೆಯಾಚಿಸಿ ರಾಜೀನಾಮೆ ನೀಡಲು ಬಿಜೆಪಿ ಆಗ್ರಹ

ವಿವಾದಾತ್ಮಕ ಹೇಳಿಕೆ: ಸಚಿವ ಬಸವರಾಜ ರಾಯರೆಡ್ಡಿ ರಾಜೀನಾಮೆಗೆ ಒತ್ತಾಯ

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯ ರೆಡ್ಡಿ ರಾಜೀನಾಮೆಗೆ ಬಿಜೆಪಿ ಆಗ್ರಹಿಸಿದೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಸ್ಲಾಂ ಇತರ ಧರ್ಮಗಳಿಗಿಂತ ಶ್ರೇಷ್ಠ ಎಂದಿರುವ ಅವರು ಸಮಸ್ತ ಹಿಂದೂ ಸಮುದಾಯದ ಕ್ಷಮೆಯಾಚಿಸಿ ರಾಜೀನಾಮೆ ಸಲ್ಲಿಸುವಂತೆ ರಾಜ್ಯ ವಿರೋಧ ಪಕ್ಷವಾದ ಬಿಜೆಪಿ ಒತ್ತಾಯಿಸಿದೆ.

ನೇಪಾಳ ಪ್ರವಾಹ: ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದ ಕರ್ನಾಟಕದ ಟೆಕ್ಕಿ ನಾಪತ್ತೆ

ನೇಪಾಳದಲ್ಲಿ ಕರ್ನಾಟಕದ ಟೆಕ್ಕಿ ನಾಪತ್ತೆ

Nepal flash floods: ಸುಮಾರು ಹತ್ತು ವರ್ಷಗಳಿಂದ ಆಸ್ಟ್ರೇಲಿಯಾದಲ್ಲಿ ವಾಸಿಸುತ್ತಿದ್ದ ಕರ್ನಾಟಕದ ಟೆಕ್ಕಿ ನೇಪಾಳ ಪ್ರವಾಹದ ವೇಳೆ ನಾಪತ್ತೆಯಾಗಿದ್ದಾರೆ. ಕೊನೆಯ ಬಾರಿ ಅವರು ನೇಪಾಳ- ಚೀನಾ ಗಡಿಯಲ್ಲಿ ಕಾಣಿಸಿಕೊಂಡಿದ್ದರು. ಈಶಾ ಫೌಂಡೇಶನ್ ಆಯೋಜಿಸಿದ್ದ ಪ್ಯಾಕೇಜ್ ಪ್ರವಾಸದಲ್ಲಿ ಮಾನಸ ಸರೋವರಕ್ಕೆ ತೆರಳಿದ್ದ ರಾಕೇಶ್ ನಾಯಕ್ ನಾಪತ್ತೆಯಾಗಿರುವವರು.

ರಾಜೀನಾಮೆಗೆ ವಿಪಕ್ಷಗಳ ಪಟ್ಟು; ದಲಿತ ದಾಳ ಉರುಳಿಸುವ ಮೂಲಕ ಸಚಿವ ನಾಗೇಂದ್ರ ತಿರುಗೇಟು

ದಲಿತನೆನ್ನುವ ಕಾರಣಕ್ಕೆ ನನ್ನನ್ನು ಗುರಿ ಮಾಡಲಾಗಿದೆ: ಸಚಿವ ನಾಗೇಂದ್ರ ಬೇಸರ

ನಾನು ದಲಿತ, ಕಾಂಗ್ರೆಸ್ ಪಕ್ಷಕ್ಕೆ ಸೇರಿದವನು ಎನ್ನುವ ಕಾರಣಕ್ಕೆ ವಿಪಕ್ಷಗಳು ನನ್ನನ್ನು ಗುರಿ ಮಾಡಿವೆ. ದೇಶಾದ್ಯಂತ 126 ಬಿಜೆಪಿ ಸಚಿವರ ವಿರುದ್ಧ ಗಂಭೀರ ಆರೋಪಗಳಿವೆ. ಅವರ ರಾಜೀನಾಮೆಯನ್ನು ಯಾರೂ ಕೇಳುತ್ತಿಲ್ಲ ಎಂದು ಸಚಿವ ಬಿ. ನಾಗೇಂದ್ರ ಅವರು ಬೇಸರ ವ್ಯಕ್ತಪಡಿಸಿದರು. ಬಿಜೆಪಿ ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವುದಕ್ಕೆ ಅವರು ಬಿಜೆಪಿ ನಾಯಕರ ಮೇಲೆ ವಾಗ್ದಾಳಿ ನಡೆಸಿದರು.

ನಾಪತ್ತೆಯಾಗಿ 6 ದಿನ ಕಳೆದರೂ ಟೆಕ್ಕಿ ಅದ್ವೈತ್‌ ಸುಳಿವಿಲ್ಲ: ಶಿವಗಂಗೆ ಬೆಟ್ಟದ ನೆರಳಲ್ಲಿ ನಡೆಯಿತಾ ಹೈಟೆಕ್ ಎಸ್ಕೇಪ್ ಪ್ಲ್ಯಾನ್?

ಆರು ದಿನಗಳಿಂದ ನಾಪತ್ತೆಯಾಗಿರುವ ಇಂದೋರ್ ಟೆಕ್ಕಿ

ಚಾರಣಕ್ಕೆಂದು ಹೋಗಿದ್ದ ಇಂದೋರ್ ವ್ಯಕ್ತಿ ಕಳೆದ ಆರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಬೇಗೂರು ನಿವಾಸಿ, ಇಂದೋರ್ ಮೂಲದ ಟೆಕ್ಕಿ ಅದ್ವೈತ್ ಉಪಾಧ್ಯಾಯ (31) ನಾಪತ್ತೆಯಾದವರು. ಶಿವಗಂಗೆಗೆ ಏಕಾಂಗಿಯಾಗಿ ಚಾರಣ ಹೋಗುವುದಾಗಿ ಅವರು ತಮ್ಮ ಸ್ನೇಹಿತರ ಬಳಿ ತಿಳಿಸಿದ್ದರು. ಆಗಸ್ಟ್ 7 ರಂದು ಅವರು ಚಾರಣಕ್ಕೆ ಹೊರಟ್ಟಿದ್ದು, ಬಳಿಕ ನಾಪತ್ತೆಯಾಗಿದ್ದಾರೆ.

Shivagange Hill: ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ತೆರಳಿದ್ದ ಉದ್ಯಮಿಯ ಮಗ ನಾಪತ್ತೆ; ಪೊಲೀಸರಿಂದ ಶೋಧಕಾರ್ಯ

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ತೆರಳಿದ್ದ ಉದ್ಯಮಿಯ ಮಗ ನಾಪತ್ತೆ!

Techie missing in Shivagange Hill: ಶಿವಗಂಗೆ ಬೆಟ್ಟದ ಕೆಳಗೆ ಯುವ ಟೆಕ್ಕಿಯ ಬುಲೆಟ್ ಬೈಕ್ ಪಾರ್ಕ್ ಮಾಡಲಾಗಿದ್ದು, ಅವರ ಮೊಬೈಲ್ ಬೇರೊಂದು ಕಡೆ ಸ್ವಿಚ್ ಆಫ್ ಆಗಿದೆ. ಇದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಸದ್ಯ ಪೊಲೀಸರು ಯುವಕನಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಶುಲ್ಕ ಕಡಿತ, ಗ್ರಾಹಕರಿಗೆ ರಿಯಾಯಿತಿಯಿಂದ ಆರ್ಥಿಕ ಹೊರೆ:  ಸ್ವಿಗ್ಗಿಗೆ ಬೆಂಗಳೂರಿನ ಹೊಟೇಲ್ ಆಡಳಿತ ಮಂಡಳಿಯಿಂದ ಪತ್ರ

ಸ್ವಿಗ್ಗಿ ಮೇಲೆ ಹೊಟೇಲ್ ಆಡಳಿತ ಮಂಡಳಿ ಅಸಮಾಧಾನ

ದೇಶದ ಸುಪ್ರಸಿದ್ದ ಆಹಾರ ವಿತರಣೆ ಕಂಪೆನಿಗಳಲ್ಲಿ ಒಂದಾದ ಸ್ವಿಗ್ಗಿಯಿಂದಾಗಿ ಹೊಟೇಲ್ ಮತ್ತು ರೆಸ್ಟೋರೆಂಟ್ ಮಾಲೀಕರು ಎದುರಿಸುತ್ತಿರುವ ಹಲವಾರು ಕಾರ್ಯಾಚರಣೆಯ ಸಮಸ್ಯೆಗಳ ಕುರಿತಾಗಿ ಸಿಇಒ ರೋಹಿತ್ ಕಪೂರ್ ಅವರಿಗೆ ಬೆಂಗಳೂರಿನ ಹೊಟೇಲ್ ಆಡಳಿತ ಮಂಡಳಿ ಪತ್ರ ಬರೆದಿದ್ದು, ಬಡ್ತಿ, ಕಮಿಷನ್‌, ರಿಯಾಯಿತಿ ಶುಲ್ಕಗಳು ಸೇರಿದಂತೆ ಹಲವಾರು ಸಮಸ್ಯೆಗಳ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.

ಗಾರ್ಡನ್ ಸಿಟಿ ಬೆಂಗಳೂರಿಗೆ ಇನ್ನಷ್ಟು ಕಳೆ: ತಲೆ ಎತ್ತಲಿವೆ ಲಾಲ್ ಬಾಗ್ ಮಾದರಿಯ ಇನ್ನೂ 3 ಉದ್ಯಾನವನಗಳು

ಲಾಲ್‌ಬಾಗ್ ಮಾದರಿಯ 3 ಉದ್ಯಾನ ಯೋಜನೆ ಅನಾವರಣ

ಉತ್ತರ ಬೆಂಗಳೂರಿನ ಪ್ರಸ್ತಾವಿತ ಸುರಂಗ ಯೋಜನೆಯ ಪರಿಣಾಮ ಸುಮಾರು 900 ಮರಗಳು ನಾಶವಾಗುತ್ತವೆ ಎನ್ನುವ ಕಳವಳ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಲಾಲ್‌ಬಾಗ್ ಮಾದರಿಯ 3 ಉದ್ಯಾನ ಯೋಜನೆಗಳನ್ನು ಅನಾವರಣಗೊಳಿಸಿದರು. ಇದರಲ್ಲಿ ಒಂದು ರಕ್ಷಣಾ ಭೂಮಿಯಲ್ಲಿ ಹಾಗೂ ಮತ್ತೆರಡು ನಗರದೊಳಗಿನ ಅರಣ್ಯ ಭೂಮಿಯಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದರು.

Nelamangala News: ಕರ್ತವ್ಯದ ವೇಳೆಯೇ ಪಿಡಿಒಗಳ ಎಣ್ಣೆ ಪಾರ್ಟಿ; ಕ್ಯಾಮೆರಾ ನೋಡ್ತಿದ್ದಂಗೆ ಕಾಲ್ಕಿತ್ತ ಅಧಿಕಾರಿಗಳು! Watch Video

ಕರ್ತವ್ಯದ ವೇಳೆಯೇ ಪಿಡಿಒಗಳ ಎಣ್ಣೆ ಪಾರ್ಟಿ; ವಿಡಿಯೊ ವೈರಲ್!

ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ಬಳಿಯ ಸಿದ್ದರಬೆಟ್ಟದಲ್ಲಿ ಅಧಿಕಾರಿಗಳು ಮೋಜು ಮಸ್ತಿಯಲ್ಲಿ ತೋಡಗಿರುವುದು ಬೆಳಕಿಗೆ ಬಂದಿದ್ದು, ಈ ಬಗ್ಗೆ ಸ್ಥಳೀಯರು ವಿಡಿಯೊ ಮಾಡುತ್ತಿದ್ದಂತೆ ಸ್ಥಳದಿಂದ ಅಧಿಕಾರಿಗಳು ಪರಾರಿಯಾಗಿದ್ದಾರೆ. ಧಾರ್ಮಿಕ ಸ್ಥಳದಲ್ಲಿ ಅಧಿಕಾರಿಗಳು ಈ ರೀತಿಯ ವರ್ತನೆ ತೋರಿರುವುದು ಸಾರ್ವಜನಿಕರ ಆಕ್ರೋಶಕ್ಕ ಕಾರಣವಾಗಿದೆ.

ಸಾಹಿತ್ಯೋತ್ಸವ– 2026: ವಿದ್ಯಾರಣ್ಯ ಕನ್ನಡ ಕೂಟದಿಂದ  ಶಿಕಾಗೋದಲ್ಲಿ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆ ಸೊಗಡಿನ ಅನಾವರಣ

ವಿದ್ಯಾರಣ್ಯ ಕನ್ನಡ ಕೂಟ ಸಾಹಿತ್ಯೋತ್ಸವ

ವಿದ್ಯಾರಣ್ಯ ಕನ್ನಡ ಕೂಟದ ವತಿಯಿಂದ ಶಿಕಾಗೋದಲ್ಲಿ “ಸಾಹಿತ್ಯೋತ್ಸವ – 2026” ಕಾರ್ಯಕ್ರಮವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಇಂಡಿಯಾ ಹಬ್‌ನಲ್ಲಿ ಇತ್ತೀಚೆಗೆ ನಡೆದ ಈ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ, ಸಂಸ್ಕೃತಿ ಹಾಗೂ ಭಾಷೆಯ ಸೊಗಡನ್ನು ಅನಾವರಣಗೊಳಿಸಲಾಗಿದ್ದು, ಅಪಾರ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಯಿತು.

ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ; 10 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

ಪಿಜಿಯಲ್ಲಿ ಸಿಲಿಂಡರ್‌ ಸ್ಫೋಟ; 10 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

Cylinder Blast: ಬೊಮ್ಮಸಂದ್ರದಲ್ಲಿ ಇಂದು ಮುಂಜಾನೆ ಭೀಕರ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಬೊಮ್ಮಸಂದ್ರದ ನಾಗರಾಜ್ ರೆಡ್ಡಿ ಎಂಬುವರಿಗೆ ಸೇರಿದ ಪಿಜಿಯಲ್ಲಿ (PG) ಈ ಅವಘಡ ನಡೆದಿದೆ.

ದೇವನಹಳ್ಳಿಯಲ್ಲಿ ಭಯಾನಕ ಘಟನೆ: ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದು ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ; ಬಲವಂತವಾಗಿ ಮದ್ಯ ಕುಡಿಸಿದ ಪಾಪಿಗಳು

ದೇವನಹಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

Crime News: ಬಾಲಕಿಯನ್ನು ಅಪಹರಿಸಿ, ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ, ಮರುದಿನ ಬೆಳಗ್ಗೆ ಆಕೆಯ ಮನೆಯ ಬಳಿ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ದೇವಸ್ಥಾನಕ್ಕೆ ಭೇಟಿ ನೀಡುವ ನೆಪದಲ್ಲಿ ಆಕೆಯನ್ನು ಹೊರಗೆ ಕರೆದೊಯ್ಯಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಅಡ್ವಾನ್ಸ್ ನೀಡಿದ್ದು 1 ಲಕ್ಷ, ಕೈಗೆ ಸಿಕ್ಕಿದ್ದು 20 ಸಾವಿರ; ವಂಚಿಸಿದ ಬೆಂಗಳೂರು ಮನೆ ಮಾಲೀಕನ ವಿರುದ್ಧ ಮಹಿಳೆ ಆಕ್ರೋಶ!

ಬೆಂಗಳೂರಿನಲ್ಲಿ ಮಹಿಳೆಗೆ ಅಡ್ವಾನ್ಸ್ ಹಣ ಕಡಿತಗೊಳಿಸಿ ವಂಚನೆ

Viral News: ವರ್ಷಪೂರ್ತಿ ಸರಿಯಾಗಿ ಬಾಡಿಗೆ ಪಾವತಿ ಮಾಡಿದರೂ ಮಾಲೀಕನೊಬ್ಬ ಒಟ್ಟು 1 ಲಕ್ಷ ಹಣದಲ್ಲಿ 80,396 ರೂಪಾಯಿ ಕಡಿತಗೊಳಿಸಿ ತನ್ನ ಕೈಗೆ ಕೇವಲ 20,000 ರೂಪಾಯಿ ನೀಡಿದ್ದಾನೆಂದು ಮಹಿಳೆ ಆಕ್ರೋಶಗೊಂಡಿದ್ದಾಳೆ. ಬೆಂಗಳೂರಿಗೆ ಜೀವನ ಕಟ್ಟಿಕೊಳ್ಳಲು ಬಂದ ಯುವಕ- ಯುವತಿಯರಿಗೆ ಇದೊಂದು ದೊಡ್ಡ ಹೊರೆ ಎಂದು ಅವರು ಬರೆದುಕೊಂಡಿದ್ದಾರೆ.

ಯಶವಂತಪುರ-ನಾಗಸಂದ್ರ ನಡುವೆ ಮೆಟ್ರೊ ಸಂಚಾರ ಸ್ಥಗಿತ

ಯಶವಂತಪುರ-ನಾಗಸಂದ್ರ ನಡುವೆ ಮೆಟ್ರೊ ಸಂಚಾರ ಸ್ಥಗಿತ

ಮೆಟ್ರೊ ಸಂಚಾರ ಶೀಘ್ರದಲ್ಲೇ ಪುನಃ ಆರಂಭಿಸಲು ನಮ್ಮ ತಾಂತ್ರಿಕ ತಂಡಗಳು ತುರ್ತುಗತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ. ರೇಷ್ಮೆ ಸಂಸ್ಥೆ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಮಾತ್ರ ಮೆಟ್ರೊ ರೈಲುಗಳು ಶಾರ್ಟ್-ಲೂಪ್ ಆಗಿ ಸಂಚರಿಸುತ್ತಿವೆ.

ಬೆಂಗಳೂರಿಗರೇ ಎಚ್ಚರ: ರಸ್ತೆ ಬದಿ ವಾಹನ ನಿಲ್ಲಿಸಿ ಹೋದರೆ ಮರಳಿ ಸಿಗದೇ ಇರಬಹುದು! ಜಿಬಿಎಯಿಂದ ಬೃಹತ್ ತೆರವು ಕಾರ್ಯಾಚರಣೆ

ರಸ್ತೆ ಬದಿ ವಾಹನ ತೆರವು ಕಾರ್ಯಾಚರಣೆ ಆರಂಭಿಸಿದ ಜಿಬಿಎ

ತುಂಬಾ ದಿನಗಳಿಂದ ಬೆಂಗಳೂರಿನ ರಸ್ತೆ ಬದಿ ವಾಹನ ನಿಲ್ಲಿಸಿ ಹೋಗಿದ್ದರೆ ನಿಮ್ಮ ವಾಹನ ಇದೆಯೇ ಎಂಬುದನ್ನು ಒಮ್ಮೆ ಖಾತ್ರಿ ಪಡಿಸಿಕೊಳ್ಳಿ. ಇಲ್ಲವಾದರೆ ಮುಂದೆ ವಾಹನಕ್ಕಾಗಿ ಬೀದಿ ಬೀದಿ ಅಲೆದಾಡಬೇಕಾಗಬಹುದು. ಯಾಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಬೆಂಗಳೂರು ಸಂಚಾರಿ ಪೊಲೀಸರು ಜಂಟಿಯಾಗಿ ಬೀದಿ ಬದಿಯ ಅನಾಥ ವಾಹನಗಳ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಸಿಸಿಟಿವಿ ಅಳವಡಿಸಲು ಸಿಎಂ ಆದೇಶ

ರಾಜ್ಯದ ಎಲ್ಲಾ ದೇವಾಲಯದ ಮೇಲೂ ಸಿಎಂ ನಿಗಾ

ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವಂತ ದೇಣಿಗೆ ಕಳ್ಳತನ ಪ್ರಕರಣಗಳು ರಾಜ್ಯದಲ್ಲಿ ನಡೆಯದಿರಲಿ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳ ಮೇಲೆ ನಿಗಾ ಇರಿಸಲು ಸಿಸಿಟಿವಿ ಅಳವಡಿಸುವಂತೆ ಆದೇಶಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕತಾರ್ ನಿವಾಸಿ ಮಹೇಶ್ ಗೌಡಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ

ಸಮಾಜಸೇವೆ, ಜನಕಲ್ಯಾಣ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉತ್ತೇಜನಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಪರಿಗಣಿಸಿ ಕತಾರ್‌ ನಿವಾಸಿ, ಸಮುದಾಯ ಮುಖಂಡ ಹಾಗೂ ಕರ್ನಾಟಕ ಸಂಘ ಕತಾರ್‌ನ ಮಾಜಿ ಅಧ್ಯಕ್ಷರಾದ ಮಹೇಶ್ ಗೌಡ ಅವರಿಗೆ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಅಂಗವಾಗಿ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ನನ್ನನ್ನು ಜೈಲಿಗೆ ಕಳಿಸಬೇಕಾದರೆ ಇನ್ನೂ ನೂರು ಜನ್ಮ ಎತ್ತಿ ಬರಬೇಕು: ಸಿಎಂ ಡಿಕೆಶಿ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಕಿಡಿ

ನನ್ನನ್ನು ಜೈಲಿಗೆ ಕಳಿಸಬೇಕಾದರೆ ಇನ್ನೂ ನೂರು ಜನ್ಮ ಎತ್ತಿ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅನೇಕ ವರ್ಷಗಳಿಂದ ಈ ಭೂಮಿಯ ಮೇಲೆ ಕಣ್ಣಿಟ್ಟಿರುವುದು ಸ್ಪಷ್ಟ. ಅದಕ್ಕಾಗಿಯೇ ಅವರು ಹಂತಹಂತವಾಗಿ ನಿರ್ಧಾರಗಳನ್ನು ಮಾಡುತ್ತಾ ಬಂದರು. ವ್ಯವಸ್ಥಿತವಾಗಿ ಹುನ್ನಾರ ನಡೆಸಿ ರೈತರ ಭೂಮಿ ಕಸಿಯಲು ಅಧಿಕಾರವನ್ನು ದುರುಪಯೋಗ ಮಾಡಿಕೊಂಡರು ಎಂದು ಸಚಿವ ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಅಘಾತಕಾರಿ ಘಟನೆ: ಬೈಕ್ ಸವಾರಿ ಮಾಡುವಾಗ ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡ ವ್ಯಕ್ತಿ!

ಮರದ ಕೊಂಬೆ ಬಿದ್ದು ಬೈಕ್ ಸವಾರ ಗಂಭೀರ: ಸಿಸಿಟಿವಿ ದೃಶ್ಯ ವೈರಲ್!

Viral Video: ಮರದ ಕೊಂಬೆಯೊಂದು ಬಿದ್ದ ಪರಿಣಾಮ 53 ವರ್ಷದ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದು ಕೋಮಾ ಸ್ಥಿತಿಗೆ ತಲುಪಿದ್ದಾರೆ. ಇವರು ಖಾಸಗಿ ಹಣಕಾಸು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಸಾಲದ ಕಂತುಗಳನ್ನು ವಸೂಲಿ ಮಾಡುವುದ್ದಕ್ಕಾಗಿ ಸಂಜೆ 5 ಗಂಟೆಯ ಸುಮಾರಿಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಆದರೆ ಹೆಲ್ಮೆಟ್ ಧರಿಸಿರಿಲಿಲ್ಲ‌. ಈ ವೇಳೆ ರಸ್ತೆ ಬದಿಯ ಮರದಿಂದ ಬೃಹತ್ ಗಾತ್ರದ ಒಣಗಿದ ಕೊಂಬೆ ದಿಢೀರನೆ ಮುರಿದು ನೇರವಾಗಿ ಅವರ ತಲೆಯ ಮೇಲೆಯೇ ಬಿದ್ದಿದೆ...

Viral News: ಮೊದಲ ಬಾರಿ ಬೆಂಗಳೂರಿಗೆ ಬಂದ ಹಳ್ಳಿ ಯುವಕರನ್ನು ದೋಚಿದ ಆಟೋ ಚಾಲಕ; ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ಆಕ್ರೋಶ

ಹಳ್ಳಿ ಜನರನ್ನು ಬೆದರಿಸಿ ದೋಚಿದ ಬೆಂಗಳೂರು ಆಟೋ ಚಾಲಕ

ಬೆಂಗಳೂರಿನ ಆಟೋ ಚಾಲಕನೊಬ್ಬ ಹಳ್ಳಿಯಿಂದ ಮೊದಲ ಬಾರಿಗೆ ನಗರಕ್ಕೆ ಬಂದಿದ್ದ ಯುವಕರನ್ನು ದೋಚಿದ್ದಾನೆ ಎಂದು ಟೆಕ್ಕಿಯೊಬ್ಬ ಸಾಮಾಜಿಕ ಮಾಧ್ಯಮದ ಮೂಲಕ ಹೇಳಿಕೊಂಡಿದ್ದಾರೆ. ಬಸ್ ನಿಲ್ದಾಣಕ್ಕೆ ಹೋಗಲು ತಲಾ 50 ರೂ. ಬಾಡಿಗೆ ಬದಲಿಗೆ ಆತ ಯುವಕರಿಂದ 2,400 ರೂ. ಗಳನ್ನು ಪಡೆದಿದ್ದಾನೆ ಎಂದು ಆರೋಪಿಸಿದ್ದಾರೆ.

ಡಿಕೆಶಿ ಸಿಎಂ ಆಗಿರುವುದನ್ನು ಸಹಿಸಲಾಗದೇ ಬಿಡದಿ ಟೌನ್‌ಶಿಪ್‌ಗೆ ಜೆಡಿಎಸ್, ಬಿಜೆಪಿ ನಾಯಕರ ವಿರೋಧ: ಶಾಸಕ ಬಾಲಕೃಷ್ಣ ಕಿಡಿ

ಡಿಕೆಶಿ ಸಿಎಂ ಆಗಿರುವುದನ್ನು ಬಿಜೆಪಿ, ಜೆಡಿಎಸ್ ನಾಯಕರಿಗೆ ಸಹಿಸಲಾಗುತ್ತಿಲ್ಲ

ಬಿಜೆಪಿ ನಾಯಕರ ನಿಯೋಗ ಬಿಡದಿಗೆ ಭೇಟಿ ನೀಡಿ ಬಿಡದಿ ಟೌನ್ ಶಿಪ್ ವಿರುದ್ಧ ಹೋರಾಟ ಮಾಡಿರುವ ಬಗ್ಗೆ ಮಾಗಡಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಟೌನ್ ಶಿಪ್ ಯೋಜನೆಯನ್ನು ಡಿ.ಕೆ. ಶಿವಕುಮಾರ್ ಸಿಎಂ ಆದ ಬಳಿಕ ಕೈಗೊಂಡ ಯೋಜನೆಯಲ್ಲ. ಈ ವಿಚಾರವಾಗಿ ವಿಜಯೇಂದ್ರ ಅವರ ಜೊತೆಗೆ ಚರ್ಚೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

Loading...