ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರು ನಗರ

Kidnap case: ಕನ್ನಡದ ನಿರ್ದೇಶಕನ ಕಿಡ್ನಾಪ್, ಹಲ್ಲೆ; ನಟಿ ಐಶ್ವರ್ಯಾ ಸೇರಿ 11 ಮಂದಿ ಆರೆಸ್ಟ್

ಕನ್ನಡದ ನಿರ್ದೇಶಕನ ಕಿಡ್ನಾಪ್, ಹಲ್ಲೆ; ನಟಿ ಸೇರಿ 11 ಮಂದಿ ಆರೆಸ್ಟ್

ಕಿಡ್ನ್ಯಾಪ್‌ಗೆ ಒಳಗಾದವರು ಅನೀಶ್ ಎಂಬ ಯುವ ನಿರ್ದೇಶಕ. ಈ ಹಿಂದೆ ‘ಭರವಸೆಯೇ ಜೀವನ’ ಸೇರಿದಂತೆ ಕೆಲ ಕಿರುಚಿತ್ರಗಳನ್ನು ನಿರ್ದೇಶಿಸಿದ್ದರು. ಆರೋಪಿಗಳು ಅನೀಶ್ ಅವರನ್ನು ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದಾರೆ. ಬಳಿಕ ಅವರನ್ನು ಬ್ಯಾಡರಹಳ್ಳಿಯಲ್ಲಿರುವ ಮನೆಯೊಂದರಲ್ಲಿ ಇರಿಸಿ, ಕ್ರಿಕೆಟ್ ಸ್ಟಂಪ್ ಹಾಗೂ ಹಾಕಿ ಸ್ಟಿಕ್ ಬಳಸಿ ಹಲ್ಲೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ನಟಿ ಸೇರಿದಂತೆ ಒಟ್ಟು 11 ಮಂದಿಯನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿದೆ.

ಸಾಮರ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆಯಲ್ಲಿನ ದೇಶದ್ರೋಹ ಚಟುವಟಿಕೆ ಆರೋಪ: ತನಿಖೆಗೆ ಪ್ರೌಢ ಶಿಕ್ಷಣ ಇಲಾಖೆ ಆದೇಶ

ದೇಶ ದ್ರೋಹ ಚಟುವಟಿಕೆ ಆರೋಪ: ತನಿಖೆಗೆ ಆದೇಶ

ಎಚ್.ಬಿ.ಆರ್ ಬಡಾವಣೆಯ ಅಬ್ದುಲ್ ರೆಹಮಾನ್ ಬಿನ್ ಅಬ್ದುಲ್ ಸಲಾಂ ಎಂಬುವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಸಲ್ಲಿಕೆ ಯಾಗಿರುವ ದೂರಿನ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

Rowdy Sheeter murder case: ತಾಯಿಯ ಕಣ್ಣೆದುರೇ ರೌಡಿಶೀಟರ್‌ ಮಗನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ತಾಯಿಯ ಕಣ್ಣೆದುರೇ ರೌಡಿಶೀಟರ್‌ ಮಗನ ಕೊಚ್ಚಿ ಕೊಲೆ

ಕೊಲೆಯಾದ ಪವನ್ ಕುಮಾರ್ ಹಿಂದೆ ಮರ್ಡರ್ ಪ್ರಕರಣವೊಂದರಲ್ಲಿ A5 ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ. ಕಳೆದ ಮೇ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದ. ಮಗ ಇನ್ನು ಕೆಟ್ಟ ಹಾದಿ ಹಿಡಿಯೋದು ಬೇಡ. ಒಳ್ಳೆಯವನಾಗಿ ಬದಲಾಗಲಿ ಎಂಬ ಕಾರಣಕ್ಕೆ ಒಂದೂವರೆ ತಿಂಗಳ ಹಿಂದಷ್ಟೇ ಮನೆ ಸಮೀಪವೇ ಕುಟುಂಬದವರು ಅವನಿಗೆ ಬೇಕರಿ ಉದ್ಯಮ ನಡೆಸಲು ಅಂಗಡಿ ತೆರೆದು ಕೊಟ್ಟಿದ್ದರು.

Ranya Rao: ಒಂದೇ ವರ್ಷದಲ್ಲಿ ನಟಿ ರನ್ಯಾಳಿಂದ 127 ಕೆ.ಜಿ. ಚಿನ್ನ ಕಳ್ಳ ಸಾಗಣೆ! ಚಾರ್ಜ್‌ಶೀಟ್‌ನಲ್ಲಿ ಬಹಿರಂಗ

ಒಂದೇ ವರ್ಷದಲ್ಲಿ ನಟಿ ರನ್ಯಾಳಿಂದ 127 ಕೆ.ಜಿ. ಚಿನ್ನ ಕಳ್ಳ ಸಾಗಣೆ!

ಪ್ರಮುಖ ಆರೋಪಿ ರನ್ಯಾ ರಾವ್‌ ಅವರು 2025ರ ಮಾ.3ರಂದು 12.56 ಕೋಟಿ ರು. ಮೌಲ್ಯದ 14 ಕೆ.ಜಿ. ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಣೆ ಮಾಡುವಾಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯದ(ಡಿಆರ್‌ಐ) ಅಧಿಕಾರಿಗಳ ಬಲೆಗೆ ಬಿದ್ದಿದ್ದರು. ಬಳಿಕ ಆಕೆಯ ಮನೆಯ ದಾಳಿ ನಡೆಸಿ ಶೋಧಿಸಿದಾಗ 2.06 ಕೋಟಿ ರು. ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ರು. ನಗದು ಪತ್ತೆಯಾಗಿತ್ತು.

Road Accident: ಬುಲೆಟ್‌ ಬೈಕ್‌ನಲ್ಲಿ ತ್ರಿಬಲ್‌ ರೈಡ್‌, ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು

ಬುಲೆಟ್‌ ಬೈಕ್‌ನಲ್ಲಿ ತ್ರಿಬಲ್‌ ರೈಡ್‌, ಮರಕ್ಕೆ ಡಿಕ್ಕಿಯಾಗಿ ಇಬ್ಬರ ಸಾವು

ಮಂಗಳವಾರ (ಫೆ.24) ರಾತ್ರಿ 1 ಗಂಟೆ ಸುಮಾರಿಗೆ ಬುಲೆಟ್ ಬೈಕ್‌ನಲ್ಲಿ ಯುವಕರು ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡಿಂಗ್ ಹೊರಟಿದ್ದರು. ಈ ವೇಳೆ ಮರಕ್ಕೆ ಡಿಕ್ಕಿಯಾಗಿ ಬೈಕ್ ಪಲ್ಟಿಯಾಗಿದೆ. ಪರಿಣಾಮ ಬುಲೆಟ್ ಬೈಕ್ ಓಡಿಸುತ್ತಿದ್ದ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಯುವಕ ಯಶವಂತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

Self Harming: ಸಿಬಿಐ ತನಿಖೆ ಭಯದಿಂದ ಬಿಬಿಎಂಪಿ ನಿವೃತ್ತ ಅಧಿಕಾರಿ ಆತ್ಮಹತ್ಯೆ?

ಸಿಬಿಐ ತನಿಖೆ ಭಯದಿಂದ ಬಿಬಿಎಂಪಿ ನಿವೃತ್ತ ಅಧಿಕಾರಿ ಆತ್ಮಹತ್ಯೆ?

ತನಿಖೆ ನಡೆಸಿದಾಗ, ಪರಮೇಶ್ವರಯ್ಯ ಅವರ ಆಸ್ತಿ ಮೌಲ್ಯದಲ್ಲಿ ಗಣನೀಯ ಏರಿಕೆ ಕಂಡುಬಂದಿತ್ತು. 2012ರಲ್ಲಿ 29.64 ಲಕ್ಷ ರೂಪಾಯಿ ಇದ್ದ ಅವರ ಆಸ್ತಿ, 2021ರ ವೇಳೆಗೆ ಬರೋಬ್ಬರಿ 5.85 ಕೋಟಿ ರೂ.ಗೆ ಏರಿಕೆಯಾಗಿತ್ತು. ಬೆಂಗಳೂರು, ತುಮಕೂರಿನಲ್ಲಿ ನಿವೇಶನಗಳು, ಕೋರಮಂಗಲದಲ್ಲಿ ಸೈಟ್, ಮನೆ ಮತ್ತು ಅಪಾರ್ಟ್‌ಮೆಂಟ್‌ಗಳನ್ನು ಹೊಂದಿದ್ದು ಸಹ ಪತ್ತೆಯಾಗಿತ್ತು. ತನಿಖೆ ವೇಳೆ ಪರಮೇಶ್ವರಯ್ಯ ಭ್ರಷ್ಟಾಚಾರ ನಡೆಸಿರುವುದು ದೃಢಪಟ್ಟಿತ್ತು.

ಸಿ.ಜೆ. ರಾಯ್‌ ಆತ್ಮಹತ್ಯೆಗೆ ಕಾರಣ ರಿವೀಲ್‌; ರಿಯಲ್‌ ಎಸ್ಟೇಟ್‌ ಉದ್ಯಮಿಗೆ ಮುಳುವಾಯ್ತಾ ಹವಾಲಾ ಹಣ?

ರಿಯಲ್‌ ಎಸ್ಟೇಟ್‌ ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆಗೆ ಕಾರಣ ರಿವೀಲ್‌

C.J. Roy's Death Case: ಸಿ.ಜೆ.ರಾಯ್ ವ್ಯವಹಾರದಲ್ಲಿ 500 ಕೋಟಿ ರೂ.‌ ಮಿಸ್ ಮ್ಯಾಚ್ ಆಗಿತ್ತು. ಹೀಗಾಗಿ ತನಿಖೆ ನಡೆಸಿದ್ದ ಐಟಿ ಇಲಾಖೆ ಈ ಹಣದ ಲೆಕ್ಕ ಕೇಳಿತ್ತು. ಈ ಹಣದ ಮೂಲದ ಬಗ್ಗೆ ಮಾಹಿತಿ ನೀಡಲಾಗದೆ ಉದ್ಯಮಿ ಸಂಕಷ್ಟಕ್ಕೊಳಗಾಗಿದ್ದರು ಎಂದು ತಿಳಿದುಬಂದಿದೆ.

ಕಾಂಕ್ರೀಟ್ ಡೆಮಿನಾರ್ - 2026ರಲ್ಲಿ ಮೂಲಸೌಕರ್ಯ ಉದ್ಯಮದ ಭವಿಷ್ಯದ ಅನ್ವೇಷಣೆ

ಕಾಂಕ್ರೀಟ್ ಡೆಮಿನಾರ್ʼನಲ್ಲಿ ಉದ್ಯಮದ ಭವಿಷ್ಯದ ಅನ್ವೇಷಣೆ

ಇದು ಉದ್ಯಮದ ನಾಯಕರು, ನಿರ್ಮಾಣ ಮತ್ತು ಮೂಲಸೌಕರ್ಯ ಕಂಪನಿಗಳು, ಡೆವಲ ಪರ್ಗಳು, ಎಂಜಿನಿಯರಿಂಗ್ ಸಲಹೆಗಾರರು, ತಂತ್ರಜ್ಞರು, ನೀತಿ ನಿರೂಪಕರು ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ನಿರ್ಮಾಣ ವಲಯದಲ್ಲಿ ನಾವೀನ್ಯತೆ, ಸುಸ್ಥಿರತೆ ಮತ್ತು ಶ್ರೇಷ್ಠತೆಯನ್ನು ಹೆಚ್ಚಿಸಲು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸುತ್ತದೆ.

BESCOM Recruitment: ಬೆಸ್ಕಾಂನಲ್ಲಿದೆ ಉದ್ಯೋಗಾವಕಾಶ; ಬಿಇ, ಡಿಪ್ಲೊಮಾ, ಪದವೀಧರರು ಅಪ್ಲೈ ಮಾಡಿ

ಬೆಸ್ಕಾಂನ 520 ಅಪ್ರೆಂಟಿಸ್ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಒಂದು ವರ್ಷದ ಅವಧಿಗೆ ಒಟ್ಟು 520 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಂತ್ರಿಕ, ಪದವೀಧರ ಹಾಗೂ ಡಿಪ್ಲೊಮಾ ಅರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಮೆರಿಟ್ ಆಧಾರದ ಮೇಲೆ ನಡೆಯಲಿದೆ. ಅರ್ಜಿ ಸಲ್ಲಿಕೆ ಫೆಬ್ರವರಿ 12ರಿಂದ ಆರಂಭವಾಗಿದ್ದು, ಮಾರ್ಚ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ bescom.karnataka.gov.inಗೆ ಭೇಟಿ ನೀಡಬಹುದು.

ಉರ್ದುವಿನಲ್ಲಿ ಸರ್ಕಾರಿ ಕಾರ್ಯಕ್ರಮದ ಆಹ್ವಾನ ಪತ್ರಿಕೆ; ರಾಜ್ಯ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

ಉರ್ದುವಿನಲ್ಲಿ ಆಹ್ವಾನ ಪತ್ರಿಕೆ; ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ

ಹಿಮೋಫಿಲಿಯಾ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಮತ್ತು ಉಚಿತ ಅಂಬುಲೆನ್ಸ್ ಸೇವೆಗೆ ಚಾಲನೆ ನೀಡುವ ಮಹತ್ವದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉರ್ದು ಭಾಷೆಯಲ್ಲೂ ಮುದ್ರಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳು ಹಾಗೂ ವಿಪಕ್ಷಗಳು ಆಕ್ರೋಶ ಹೊರಹಾಕಿವೆ.

ಬೆಂಗಳೂರಿನಲ್ಲಿ ಖಾಸಗಿ ಬಸ್ ಕಂಡಕ್ಟರ್‌ನಿಂದ ಯುವ ಜೋಡಿಗೆ ಬೆದರಿಕೆ: ನೈತಿಕ ಪೋಲಿಸ್‌ಗಿರಿಗೆ ಬೇಸರ ಹೊರಹಾಕಿದ ಯುವಕ

ಖಾಸಗಿ ಬಸ್‌ನಲ್ಲಿ ಯುವಜೋಡಿಗೆ ಕಂಡಕ್ಟರ್‌ ಕಿರುಕುಳ

ಸಿಲಿಕಾನ್ ಸಿಟಿ ಬೆಂಗಳೂರಿನಿಂದ ಪ್ರಯಾಣಿಸುತ್ತಿದ್ದ ಯುವ ಜೋಡಿಗೆ ಬಸ್ ಕಂಡಕ್ಟರ್ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಯುವಕ ಮತ್ತು ಯುವತಿ ಒಂದೇ ಬರ್ತ್‌ ಬುಕ್‌ ಮಾಡಿದ್ದು, ಅವರು ಪ್ರತ್ಯೇಕವಾಗಿ ಸೀಟ್‌ನಲ್ಲಿ ಕುಳಿತು ಕೊಳ್ಳಬೇಕೆಂದು ಕಂಡಕ್ಟರ್ ಒತ್ತಾಯಿಸಿದ್ದು ಪೊಲೀಸರಿಗೆ ಕರೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಯುವಕ ರೆಡ್ಡಿಟ್‌ನಲ್ಲಿ ಬರೆದುಕೊಂಡಿದ್ದಾನೆ.

ಬೆಂಗಳೂರಿನಲ್ಲಿ ಘೋರ ದುರಂತ: ಐವಿ ಡ್ರಿಪ್ ತೆಗೆಯುವಾಗ  6 ತಿಂಗಳ ಮಗುವಿನ ಬೆರಳನ್ನೇ ಕತ್ತರಿಸಿದ ನರ್ಸ್

6 ತಿಂಗಳ ಮಗುವಿನ ಬೆರಳನ್ನೇ ಕತ್ತರಿಸಿದ ನರ್ಸ್

ಜ್ವರಕ್ಕೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಗುವಿಗೆ ಹಾಕಿದ್ದ ಐವಿ ಡ್ರಿಪ್ ತೆಗೆಯುವಾಗ ನರ್ಸ್ ಒಬ್ಬರು ಮಗುವಿನ ಕಿರು ಬೆರಳನ್ನೇ ಕತ್ತರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಗುವಿಗೆ ತಕ್ಷಣ ತುರ್ತು ಚಿಕಿತ್ಸೆ ನೀಡಲಾಯಿತು ಆದರೂ ಮಗು ಬೆರಳನ್ನು ಕಳೆದುಕೊಂಡಿದೆ. ಈ ಕುರಿತು ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

‘ಉತ್ಥಾನ' ಪ್ರಬಂಧ ಸ್ಪರ್ಧೆ-2025 ಫಲಿತಾಂಶ ಪ್ರಕಟ; ಪೂಜಾ ಮಹಾದೇವ ಸಾರವಾಡಗೆ ಪ್ರಥಮ ಬಹುಮಾನ

‘ಉತ್ಥಾನ' ಪ್ರಬಂಧ ಸ್ಪರ್ಧೆ-2025; ಪೂಜಾ ಮಹಾದೇವ ಸಾರವಾಡ ಪ್ರಥಮ

ಉತ್ಥಾನ ಮಾಸಪತ್ರಿಕೆಯಿಂದ ಕಾಲೇಜು ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವಾರ್ಷಿಕ ಪ್ರಬಂಧ ಸ್ಪರ್ಧೆ–2025 ಆಯೋಜಿಸಲಾಗಿತ್ತು. ಶತಮಾನ ಪೂರೈಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘ: ವಿಚಾರ, ವಿಶೇಷತೆ ಮತ್ತು ಕೊಡುಗೆ – ಎಂಬ ವಿಷಯದ ಕುರಿತು ನಡೆದ ಈ ಪ್ರಬಂಧ ಸ್ಪರ್ಧೆಯ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ.

ವಾಟರ್ ಬ್ಲಾಸ್ಟರ್ ಬ್ರ್ಯಾಂಡ್ SPYRA, ಹೋಳಿ ಹಬ್ಬದ ಮುನ್ನ ಭಾರತದಲ್ಲಿ Instamart ಮೂಲಕ ಪ್ರವೇಶ

ಹೋಳಿ ಹಬ್ಬದ ಮುನ್ನ ಭಾರತದಲ್ಲಿ Instamart ಮೂಲಕ ಪ್ರವೇಶ

ಇನ್‌ಸ್ಟಾಮಾರ್ಟ್‌, ಹೋಳಿ ಹಬ್ಬಕ್ಕೂ ಮುನ್ನವೇ ವಾಟರ್‌ ಬ್ಲಾಸ್ಟರ್‌ ಸ್ಪೈರ ಬ್ರ್ಯಾಂಡ್ ಅನ್ನು ಭಾರತದಲ್ಲಿ ಪರಿಚಯಿಸುತ್ತಿದೆ. ಇದರ ಮೂಲಕ ವಿಶ್ವದ ಅತ್ಯಂತ ಶಕ್ತಿಶಾಲಿ ವಾಟರ್ ಬ್ಲಾಸ್ಟರ್‌ ಗಳಲ್ಲಿ ಒಂದನ್ನು ಹಬ್ಬದ ಸಂಭ್ರಮಕ್ಕೆ ಸರಿಯಾದ ಸಮಯ ದಲ್ಲಿ ಗ್ರಾಹಕರಿಗೆ ತಲುಪಿಸ ಲಾಗುತ್ತಿದೆ.

ಜಯನಗರದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಉತ್ಸವ; ‘ಲಕ್ಷ ಪುಷ್ಪಾರ್ಚನೆ’ಯಲ್ಲಿ ಸಹಸ್ರಾರು ಭಕ್ತರು ಭಾಗಿ

ಶ್ರೀ ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ; ಸಹಸ್ರಾರು ಭಕ್ತರು ಭಾಗಿ

ಬೆಂಗಳೂರಿನ ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳವರ 431ನೇ ವರ್ಧಂತಿ ಉತ್ಸವದ (ಜನ್ಮದಿನೋತ್ಸವ) ಪ್ರಯುಕ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಅಷ್ಟೋತ್ತರ ಪಾರಾಯಣದೊಂದಿಗೆ ಫಲಪಂಚಾಮೃತ ಅಭಿಷೇಕ ಮತ್ತು "ಲಕ್ಷ ಪುಷ್ಪಾರ್ಚನೆ" ನೆರವೇರಿತು.

ಫೋರ್ಟಿಸ್ ಆಸ್ಪತ್ರೆಯಲ್ಲಿ 35ನೇ ವರ್ಷದ ಸಂಭ್ರಮಾಚರಣೆ: 35 ಗಂಟೆಗಳ ಮೆಗಾ ಸಿಪಿಆರ್ ಮ್ಯಾರಥಾನ್ ಮತ್ತು ಸಾರ್ವಜನಿಕ ಆರೋಗ್ಯ ಕಾರ್ಯಕ್ರಮಗಳಿಗೆ ಚಾಲನೆ

ಫೋರ್ಟಿಸ್ ಆಸ್ಪತ್ರೆಯಲ್ಲಿ 35ನೇ ವರ್ಷದ ಸಂಭ್ರಮಾಚರಣೆ

ಫೋರ್ಟಿಸ್ ಕನ್ನಿಂಗ್‌ಹ್ಯಾಮ್ ರಸ್ತೆಯು ವಿವಿಧ ವಿಭಾಗಗಳಲ್ಲಿ ಚಿಕಿತ್ಸೆ ಪಡೆದು ಜೀವನ ಬದಲಾದ ರೋಗಿಗಳ ಸ್ಫೂರ್ತಿದಾಯಕ ಕಥೆಗಳ ಮೂಲಕ ತನ್ನ ಪ್ರಯಾಣವನ್ನು ಸ್ಮರಿಸಿತು. ಈ ಸಂಜೆಯ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಆರಂಭಿಕ ವರ್ಷಗಳಿಂದಲೂ ಒಡನಾಟ ಹೊಂದಿ ರುವ ವೈದ್ಯರು ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ದೇಶ ವಿರೋಧಿ ಕಾರ್ಯಕ್ರಮ ಆರೋಪ; ಅಜೀಂ ಪ್ರೇಮ್‌ಜಿ‌ ವಿಶ್ವವಿದ್ಯಾಲಯ ನಾಮಫಲಕಕ್ಕೆ ‌ಮಸಿ ‌ಬಳಿದು ಎಬಿವಿಪಿ ಕಾರ್ಯಕರ್ತರ ಆಕ್ರೋಶ

ಅಜೀಂ ಪ್ರೇಮ್‌ಜಿ‌ ವಿವಿ ನಾಮಫಲಕಕ್ಕೆ ‌ಮಸಿ ‌ಬಳಿದು ಎಬಿವಿಪಿ ಆಕ್ರೋಶ

ದೇಶ ವಿರೋಧಿ ಕಾರ್ಯಕ್ರಮ ಆಯೋಜಿಸಿರುವ ಅಜೀಂ ಪ್ರೇಮ್‌ಜಿ‌ ವಿಶ್ವವಿದ್ಯಾಲಯದ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿನ ವಿವಿ ಆವರಣಕ್ಕೆ ನುಗ್ಗಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಾಮಫಲಕಕ್ಕೆ ಮಸಿ ‌ಬಳಿದ ಕಾರ್ಯಕರ್ತರನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಪಮುಖ್ಯಮಂತ್ರಿಗಳೇ ನಿಮ್ಮ 3ನೇ ಮಗನ ಬೈಕಿಗೆ ಇನ್ಶೂರೆನ್ಸ್ ಇಲ್ಲ, ತಲೆಗೆ ಹೆಲ್ಮೆಟ್ ಕೂಡ ಇಲ್ಲ: ನಲಪಾಡ್‌ ಎಡವಟ್ಟು, ಡಿಕೆಶಿಗೆ ಜೆಡಿಎಸ್‌ ತರಾಟೆ

ಬೈಕ್‌ ರ‍್ಯಾಲಿಯಲ್ಲಿ ನಲಪಾಡ್‌ ಎಡವಟ್ಟು; ಡಿಕೆಶಿಗೆ ಜೆಡಿಎಸ್‌ ತರಾಟೆ

Congress Bike Rally: ಮನರೇಗಾ ಉಳಿಸಿ ಪ್ರತಿಭಟನಾ ಸಮಾವೇಶದ ಭಾಗವಾಗಿ ಚಿಕ್ಕಬಳ್ಳಾಪುರದಲ್ಲಿ ನಡೆದ ಕಾಂಗ್ರೆಸ್‌ ಬೈಕ್‌ ರ‍್ಯಾಲಿಯಲ್ಲಿ ತಲೆಗೆ ಹೆಲ್ಮೆಟ್ ಧರಸಿದೆ, ಇನ್ಶೂರೆನ್ಸ್ ಇಲ್ಲದ ಬೈಕ್‌ ಓಡಿಸಿದ ಯುವ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಹ್ಯಾರಿಸ್‌ ನಲಪಾಡ್‌ ವಿರುದ್ಧ ಜೆಡಿಎಸ್‌ ಟೀಕೆ ವ್ಯಕ್ತಪಡಿಸಿದೆ.

ಶಿವಮೊಗ್ಗ ವಿದ್ಯಾರ್ಥಿ ಕೊಲೆ ಪ್ರಕರಣ; ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸುವ ಭರವಸೆ ನೀಡಿದ ಸಿಎಂ

ಶಿವಮೊಗ್ಗ ವಿದ್ಯಾರ್ಥಿ ಕೊಲೆ ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಸಿಎಂ ಸೂಚನೆ

ಶಿವಮೊಗ್ಗದಲ್ಲಿ ವಿದ್ಯಾರ್ಥಿಯ ಕೊಲೆಯಲ್ಲಿ ಭಾಗಿಯಾದವರು ಇನ್ನೂ ಚಿಕ್ಕಪ್ರಾಯದ ಹುಡುಗರು ಎಂದು ಕೇಳಿ ದಿಗ್ಭ್ರಮೆಯಾಯಿತು. ಚೆನ್ನಾಗಿ ಓದಿ, ಭವಿಷ್ಯ ರೂಪಿಸಿಕೊಂಡು, ಕುಟುಂಬಕ್ಕೆ ಆಸರೆಯಾಗಬೇಕಿದ್ದ ಮಕ್ಕಳು ದುಶ್ಚಟಗಳಿಗೆ ಬಲಿಯಾಗಿ, ಹೀಗೆ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Dharwad Protest: ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ತುರ್ತು ಕ್ರಮ ವಹಿಸಲಿ: ಎಚ್‌.ಡಿ.ಕುಮಾರಸ್ವಾಮಿ ಒತ್ತಾಯ

ಖಾಲಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ತುರ್ತು ಕ್ರಮ ವಹಿಸಲಿ: ಎಚ್‌ಡಿಕೆ

ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ ಎಂಬುದನ್ನು ಸರ್ಕಾರ ಮರೆಯಬಾರದು. ಈ ಹೊತ್ತಿಗೇ ಆಡಳಿಗಾರರು ಎಚ್ಚೆತ್ತು ಬಜೆಟ್‌ನಲ್ಲಿ ಪ್ರತ್ಯೇಕ ಹಣ ಇರಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಬೇಕಿತ್ತು. ವರ್ಗಾವಣೆ ದಂಧೆಯಲ್ಲಿ ಸರ್ಕಾರ ಮುಳುಗಿದ್ದರ ಹಿನ್ನೆಲೆಯಲ್ಲಿ ಈಗ ಆಡಳಿತದ ಮೇಲೆ ನೇರವಾಗಿ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

Dharwad Protest: ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ ವಾಗ್ದಾನ

ಮುಂಬರುವ ವರ್ಷಗಳಲ್ಲಿ ಹೆಚ್ಚಿನ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ

Dharwad Protest: ಧಾರವಾಡದಲ್ಲಿ ಮಂಗಳವಾರ ನಡೆದ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಉದ್ಯೋಗದ ನಿರೀಕ್ಷೆಯಲ್ಲಿರುವ ಯುವ ಜನರನ್ನು ಉಜ್ವಲ ಭವಿಷ್ಯದ ಕಡೆ ಯೋಚಿಸಲು ಪ್ರೇರೇಪಿಸುವ ಬದಲು, ಅವರ ಮೂಲಕ ಅಶಾಂತಿಯನ್ನು ಉಂಟುಮಾಡಲು ಹೊರಟಿರುವ ವಿಪಕ್ಷ ನಾಯಕರ ನಡೆ ಖಂಡನೀಯ ಎಂದು ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

BJP Karnataka: ಫೆ. 26ರಂದು ಬಿಜೆಪಿಯ ಎಲ್ಲ ಜಿಲ್ಲಾ ತಂಡಗಳಿಗೆ ಪ್ರಶಿಕ್ಷಣ ಕಾರ್ಯಾಗಾರ: ಪಿ. ರಾಜೀವ್

ಫೆ. 26ರಂದು ಬಿಜೆಪಿಯ ಎಲ್ಲ ಜಿಲ್ಲಾ ತಂಡಗಳಿಗೆ ಪ್ರಶಿಕ್ಷಣ ಕಾರ್ಯಾಗಾರ

P Rajeev: ಫೆ. 26ರಂದು ಕರ್ನಾಟಕದ ಎಲ್ಲ ಜಿಲ್ಲಾ ತಂಡಗಳಿಗೆ ಪ್ರಶಿಕ್ಷಣ ಕಾರ್ಯಾಗಾರ ನಡೆಯಲಿದೆ. ಸುಮಾರು 2 ಲಕ್ಷಕ್ಕೂ ಹೆಚ್ಚು ಪದಾಧಿಕಾರಿಗಳಿಗೆ ಪ್ರಶಿಕ್ಷಣ ನೀಡಲಿದ್ದೇವೆ ಎಂದು ಪ್ರಶಿಕ್ಷಣ ಅಭಿಯಾನದ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.

ಬೆಲವಾಲ್ ಫೌಂಡೇಶನ್ ನಿಂದ ಒಂದು ಕೋಟಿ ವೃಕ್ಷಾರೋಪಣಾ ಅಭಿಯಾನ

ಒಂದು ಕೋಟಿ ವೃಕ್ಷಾರೋಪಣಾ ಅಭಿಯಾನ

ಪ್ರತಿಯೊಬ್ಬರೂ ಒಂದು ಗಿಡ ನೆಡಿ. ಆರೋಗ್ಯಕರ ಜೀವನ ಮತ್ತು ಶುದ್ಧ ಗಾಳಿಯಲ್ಲಿ ಉಸಿರಾಡುವ ಹಕ್ಕಿಗಾಗಿ ತಾಯಿ ಭೂಮಿ ಹಾಗೂ ಪರಿಸರವನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಯೋಜನೆ ಅತ್ಯಂತ ಮಹತ್ವ ಪಡೆದುಕೊಂಡಿದೆ. ವರದಿಯ ಪ್ರಕಾರ, ಮಾರ್ಚ್ 2024ರ ವೇಳೆಗೆ ಕರ್ನಾಟಕದಲ್ಲಿ ಒಟ್ಟು 86,308.44 ಹೆಕ್ಟೇರ್ ಅರಣ್ಯ ಭೂಮಿಯನ್ನು ಅತಿಕ್ರಮಿಸ ಲಾಗಿದೆ.

ದಲಿತ ಸಿಎಂ ವಿಚಾರ ಪ್ರಸ್ತಾಪ; ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪಗೆ ಮಾಹಿತಿ ಸಿಕ್ಕಿರಬಹುದು ಎಂದ ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪಗೆ ಮಾಹಿತಿ ಸಿಕ್ಕಿರಬಹುದು: ಡಿಕೆಶಿ

Karnataka CM row: ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಸಚಿವರ ಹೇಳಿಕೆಗಳ ಬಗ್ಗೆ ನೀವು ಮೌನವಾಗಿದ್ದೀರಿ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, “ಸಚಿವರುಗಳನ್ನು ನಿಯಂತ್ರಣ ಮಾಡಬೇಕಿರುವುದು ಮುಖ್ಯಮಂತ್ರಿಗಳು. ಶಾಸಕರನ್ನು ಅವರೇ ನಿಯಂತ್ರಿಸಬೇಕು. ಪಕ್ಷದ ವಿಚಾರವಾಗಿ ದೆಹಲಿಗೆ ಮಾಹಿತಿ ನೀಡುವ ವಿಚಾರ ನಾನು ಮಾಡುತ್ತಿದ್ದೇನೆ ತಿಳಿಸಿದ್ದಾರೆ.

Loading...