ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ನಗರ

ಅಕ್ಟೋಬರ್‌ʼನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಈಶ್ವರ್ ಖಂಡ್ರೆ

ಅಕ್ಟೋಬರ್‌ʼನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಈಶ್ವರ್ ಖಂಡ್ರೆ

ರಾಜ್ಯದ ಬಹುತೇಕ ಗ್ರಾಮ ಪಂಚಾಯತ್‌ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಕೆಲವು ಪಂಚಾಯತ್‌ಗಳ ಮೇಲ್ದರ್ಜೆಯಿಂದಾಗಿ ಕ್ಷೇತ್ರ ಪುನರ್‌ವಿಂಗಡಣೆ ಮಾಡಬೇಕಾಗಿದೆ. ಜುಲೈ, ಆಗಸ್ಟ್ ನಲ್ಲಿ ಈ ಪ್ರಕ್ರಿಯೆ ಮುಗಿಸಿ, ಮೀಸಲು ನಿರ್ಧರಿಸಿ, ರಾಜ್ಯ ಚುನಾವಣೆ ಆಯೋಗಕ್ಕೆ ಸಲ್ಲಿಸಲಾಗುವುದು. ಚುನಾವಣಾ ಆಯೋಗ 45 ದಿನಗ ಳಲ್ಲಿ ಚುನಾವಣೆ ನಡೆಸುತ್ತದೆ

ಜಮೀರ್‌ʼಗೆ ʼಲೋಕಾʼ ಸಂಕಷ್ಟ

ಜಮೀರ್‌ʼಗೆ ʼಲೋಕಾʼ ಸಂಕಷ್ಟ

ಜಮೀರ್ ವಾರ್ಷಿಕ ಆದಾಯಕ್ಕಿಂತ ಸುಮಾರು 25 ಕೋಟಿ ರು. ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಗಳಿಸಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ (ಅಭಿಯೋಜನೆ)ಗೆ ಅನುಮತಿ ನೀಡಿದರೆ, ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಜಮೀರ್ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗುತ್ತದೆ. ಈ ಪ್ರಕರಣ ಈಗ ರಾಜ್ಯಪಾಲರ ಅಂಗಳಕ್ಕೆ ಬಂದಿದೆ ಎಂದು ರಾಜ್ಯ ಗೃಹ ಇಲಾಖೆಯ ಮೂಲಗಳು ತಿಳಿಸಿವೆ

Byrathi Suresh conducts reality check on BMTC bus: ಬಿಎಂಟಿಸಿಯಲ್ಲಿ ಸಂಚರಿಸಿ ಬೈರತಿ ಸುರೇಶ್ ರಿಯಾಲಿಟಿ ಚೆಕ್: ಮಾಸ್ಕ್ ಧರಿಸಿ ಬಸ್ ಸಂಚಾರ ವ್ಯವಸ್ಥೆಯ ಅವಲೋಕನ

ಬಿಎಂಟಿಸಿಯಲ್ಲಿ ಸಂಚರಿಸಿ ಬೈರತಿ ಸುರೇಶ್ ರಿಯಾಲಿಟಿ ಚೆಕ್

ಮಾಸ್ಕ್ ಹಾಕಿ ಪ್ರಯಾಣ ಮಾಡಿದ್ದರಿಂದ ಬಸ್ ನಲ್ಲಿದ್ದ ಪ್ರಯಾಣಿಕರಿಗಾಗಲೀ ಅಥವಾ ಚಾಲಕ, ಕಂಡ ಕ್ಟರ್ ಗೆ ಆಗಲೀ ಇವರು ಸಚಿವರು ಎಂಬುದು ಗಮನಕ್ಕೆ ಬರಲಿಲ್ಲ. ಪ್ರತಿಯೊಂದು ಬಸ್ ಗೂ ನಿಗದಿತ ಹಣ ನೀಡಿ ಪ್ರಯಾಣಿಸಿದ ಸಚಿವರು, ಕೆಲವು ಪ್ರಯಾಣಿಕ ರೊಂದಿಗೆ ಬಸ್ ಸಂಚಾರದ ಬಗ್ಗೆ ವಿಚಾರಿಸಿ ದರು.

ಜನರ ಮನೆ ಬಾಗಿಲಿಗೆ ಸರ್ಕಾರ ಕೊಂಡೊಯ್ಯಲು ಪ್ರಜಾಸೇವೆ ಇಲಾಖೆ: ಸಿಎಂ

ಜನರ ಮನೆ ಬಾಗಿಲಿಗೆ ಸರ್ಕಾರ ಕೊಂಡೊಯ್ಯಲು ಪ್ರಜಾಸೇವೆ ಇಲಾಖೆ: ಸಿಎಂ

CM DK Shivakumar: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಅರಮನೆ ಮೈದಾನದಲ್ಲಿ ಶನಿವಾರ ನಡೆದ ನಮ್ಮಭಿಮಾನದ ಅಭಿನಂದನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್‌, ನನ್ನ ಹಾಗೂ ಪರಮೇಶ್ವರ್ ಅವರ ಮುಂದೆ ಬೇಡಿಕೆಗಳನ್ನು ಇಟ್ಟಿದ್ದೀರಿ. ಅದರ ಬಗ್ಗೆ ನಾವು ಆಲೋಚನೆ ಮಾಡುತ್ತೇವೆ. ಸಮಿತಿಯ ವರದಿ ಬಂದ ಮೇಲೆ ಕ್ಯಾಬಿನೆಟ್ ಅಲ್ಲಿ ಚರ್ಚೆ ನಡೆಸಿ ನಂತರ ನಿಮ್ಮ ಜತೆಯೂ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಹಾಡು ನಿಲ್ಲಿಸಿದ ʻಕೋಗಿಲೆʼ; ಎಸ್‌.ಜಾನಕಿ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

ಎಸ್‌.ಜಾನಕಿ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್‌ ಸೇರಿ ಗಣ್ಯರ ಸಂತಾಪ

Singer S. Janaki: ಖ್ಯಾತ ಗಾಯಕಿ ಎಸ್‌.ಜಾನಕಿ ಅವರು (88) ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಅವರು ಶನಿವಾರ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಇವರು ತೆಲುಗು, ತಮಿಳು, ಕನ್ನಡ, ಮಲಯಾಳಂ ಸೇರಿದಂತೆ 20 ಕ್ಕೂ ಹೆಚ್ಚು ಭಾಷೆಗಳಲ್ಲಿ 48,000 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡುವ ಮೂಲಕ ಸಿನಿರಸಿಕರನ್ನು ರಂಜಿಸಿದ್ದಾರೆ.

VAO Recruitment 2026: 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನೇಮಕಾತಿ ಕುರಿತ ಮಾಹಿತಿ ಇಲ್ಲಿದೆ

572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

village administrative officer recruitment 2026: 572 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ನಟ ಶಿವರಾಜ್ ಕುಮಾರ್ ಜನ್ಮದಿನಕ್ಕೆ ಶುಭ ಕೋರಿದ ಕರ್ನಾಟಕ ಸಂಘ ಕತಾರ್‌ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು

ನಟ ಶಿವರಾಜ್ ಕುಮಾರ್ ಜನ್ಮದಿನಕ್ಕೆ ಶುಭ ಕೋರಿದ ಸುಬ್ರಹ್ಮಣ್ಯ ಹೆಬ್ಬಾಗಿಲು

Shivarajkumar Birthday: ಕರ್ನಾಟಕ ಸಂಘ ಕತಾರ್‌ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು, ಕನ್ನಡಿಗರ ಕಣ್ಮಣಿಯಾಗಿರುವ 'ಹ್ಯಾಟ್ರಿಕ್ ಹೀರೋ' ಡಾ. ಶಿವರಾಜ್ ಕುಮಾರ್ ಅವರ 64ನೇ ಜನ್ಮ ದಿನಾಚರಣೆಯ ಸಂಭ್ರಮಕ್ಕೆ ಶುಭ ಕೋರುತ್ತಾ, ಅವರೊಂದಿಗಿನ ಕಳೆದ ಒಂದು ದಶಕದ ಸವಿ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ಶಿಕ್ಷಕಿಯರು ಸೇರಿ ನಾಲ್ವರ ವಿರುದ್ಧ ಎಫ್‌ಐಆರ್‌

8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ; ನಾಲ್ವರ ವಿರುದ್ಧ ಎಫ್‌ಐಆರ್‌

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮರಸೂರು ಮಡಿವಾಳದಲ್ಲಿ 8ನೇ ತರಗತಿಯ ಮಧುಶ್ರೀ ಆತ್ಮಹತ್ಯೆಗೆ ಶರಣಾಗಿದ್ದಳು. ವಿದ್ಯಾರ್ಥಿನಿಗೆ ಶಾಲೆಯಲ್ಲಿ ಶಿಕ್ಷಕಿಯರು ಮಾನಸಿಕವಾಗಿ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಕೇಸ್‌ ದಾಖಲಾಗಿದೆ.

375 ಕೋಟಿ ಮೌಲ್ಯದ ಮಾದಕ ವಸ್ತುಗಳ ವಶ; ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ ಘೋಷಿಸಿದ ಸಿಎಂ

ಡ್ರಗ್ಸ್‌ ಜಾಲ ಭೇದಿಸಿದ ಪೊಲೀಸರ ತಂಡಕ್ಕೆ 10 ಲಕ್ಷ ನಗದು ಬಹುಮಾನ: ಸಿಎಂ

CM DK Shivakumar: ಡ್ರಗ್ಸ್ ಜಾಲವನ್ನು ಭೇದಿಸಿದ ಪೊಲೀಸ್ ತಂಡಕ್ಕೆ ಸರ್ಕಾರ 10 ಲಕ್ಷದ ನಗದು ಬಹುಮಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಶನಿವಾರ ನಡೆದ ರಾಜ್ಯದ ಜಿಲ್ಲಾ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೊರೆನ್ಸಿಕ್ ವ್ಯಾನ್‌ಗಳು ಹಾಗೂ 75 ಬೊಲೆರೋ ವಾಹನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದಾರೆ.

Kambala at Mysuru Dasara: ಮೈಸೂರು ದಸರಾ ಉತ್ಸವದಲ್ಲಿ ಕಂಬಳ ಸೇರಿಸುವ ಅಗತ್ಯವಿಲ್ಲ ಎಂದ ಎಚ್‌ಡಿಕೆ

ಮೈಸೂರು ದಸರಾದಲ್ಲಿ ಕಂಬಳ ಸೇರಿಸುವ ಅಗತ್ಯವಿಲ್ಲ ಎಂದ ಎಚ್‌ಡಿಕೆ

ಕರಾವಳಿಯ ಕಂಬಳವನ್ನು ಮೈಸೂರು ದಸರಾದಲ್ಲಿ ಆಯೋಜನೆ ಮಾಡುವ ವಿಚಾರವಾಗಿ ಪರ-ವಿರೋಧ ಚರ್ಚೆ ನಡೆಯುತ್ತಿದೆ. ದಸರಾದಲ್ಲಿ ಕಂಬಳ ಆಯೋಜನೆಗೆ ಮೈಸೂರು ಸಂಸದ ಯದುವೀರ್‌ ಒಡೆಯರ್ ಕೂಡ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

GBA elections: ಜಿಬಿಎ ಚುನಾವಣೆ ಮುಂದೂಡಲು ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಅರ್ಜಿ

ಜಿಬಿಎ ಚುನಾವಣೆ ಮುಂದೂಡುವಂತೆ ಸುಪ್ರೀಂಗೆ ರಾಜ್ಯ ಸರ್ಕಾರ ಮನವಿ

ಎಸ್​ಐಆರ್ ಪ್ರಕ್ರಿಯೆ ನಂತರ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 7 ರಂದು ಪ್ರಕಟಿಸಲು ದಿನಾಂಕ ನಿಗದಿಪಡಿಸಲಾಗಿದೆ. ನಿಖರ ಮತದಾರರ ಪಟ್ಟಿಯಿಲ್ಲದೆ ಚುನಾವಣೆ ನಡೆಸುವುದು ಸೂಕ್ತವಲ್ಲ. ಹಾಗಾಗಿ ಡಿಸೆಂಬರ್ 31 ರವರೆಗೆ ಜಿಬಿಎ ಚುನಾವಣೆ ಗಡುವು ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ ಅನ್ನು ಸರ್ಕಾರ ಕೋರಿದೆ.

ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಎಂದ ಸಿಎಂಗೆ ಎಚ್‌ಡಿಕೆ ತೀವ್ರ ತರಾಟೆ

ಪ್ರಗತಿ ಪರಿಶೀಲನಾ ನೆಪದಲ್ಲಿ ಮುಖ್ಯಮಂತ್ರಿ ಜಾಲಿ ಟ್ರಿಪ್: ಎಚ್‌ಡಿಕೆ ಕಿಡಿ

HD Kumaraswamy: ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಡಿ.ಕೆ. ಶಿವಕುಮಾರ್‌ ನಡೆಸಿದ ಪ್ರಗತಿ ಪರಿಶೀಲನೆ ಕೇವಲ ಜಾಲಿಟ್ರಿಪ್ ಮಾತ್ರ. ಹಾಗೆಯೇ ಕೃಷ್ಣಾ, ಗೋದಾವರಿ, ಕಾವೇರಿ ಜೋಡಣೆಗೆ ರಾಜ್ಯದ ಸಮ್ಮತಿ ಇದೆ ಎಂದು ಹೇಳಿರುವ ಮುಖ್ಯಮಂತ್ರಿ ವರ್ತನೆ ಅತ್ಯಂತ ಹೊಣೆಗೇಡಿತನದಿಂದ ಕೂಡಿದೆ. ರಾಜ್ಯದ ನೀರಾವರಿಯ ಸಂಕಷ್ಟಗಳ ಬಗ್ಗೆ ಅವರಿಗೆ ಕನಿಷ್ಠ ಪರಿಜ್ಞಾನವೂ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Mysuru Dasara 2026: ಈ ಬಾರಿ 11 ದಿನಗಳ ವಿಜೃಂಭಣೆಯ ಮೈಸೂರು ದಸರಾ; ಅ.11ಕ್ಕೆ ಉದ್ಘಾಟನೆ, ಅ.21ಕ್ಕೆ ಜಂಬೂ ಸವಾರಿ

ಈ ಬಾರಿ 11 ದಿನಗಳ ವಿಜೃಂಭಣೆಯ ದಸರಾ: ಸಿಎಂ

CM DK Shivakumar: ದಸರಾ ಆಯೋಜನೆ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಕಾರ್ಯಕಾರಿ ಸಮಿತಿ ರಚನೆ ಮಾಡಲಿದ್ದೇನೆ. ಈ ಬಾರಿ ಏರ್ ಶೋ ನಡೆಸಲು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಬೇಕು ಎಂದು ಸಲಹೆ ಬಂದಿದೆ. ಹೀಗಾಗಿ ಈ ವಿಚಾರವಾಗಿ ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಈವರೆಗೂ 435 ಕಿ.ಮೀ. ಉದ್ದದ ಪಾದಚಾರಿ ಮಾರ್ಗ ಒತ್ತುವರಿ ತೆರವು; ಕಾರ್ಯಾಚರಣೆ ಮುಂದುವರಿಯಲಿದೆ ಎಂದ ಸಿಎಂ

ಪಾದಚಾರಿ ಮಾರ್ಗ ಒತ್ತುವರಿ ತೆರವು ಮುಂದುವರೆಯಲಿದೆ: ಡಿ.ಕೆ. ಶಿವಕುಮಾರ್

CM DK Shivakumar: ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಹಾಗೂ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಶುಕ್ರವಾರ ಸಿಎಂ ಡಿ.ಕೆ. ಶಿವಕುಮಾರ್ ನಗರ ಪ್ರದಕ್ಷಿಣೆ ನಡೆಸಿದರು. ಈ ವೇಳೆ ಮಾತನಾಡಿದ ಸಿಎಂ, ಐದೂ ಪಾಲಿಕೆಗಳ ವ್ಯಾಪ್ತಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ: ಬಿ.ವೈ. ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರ್ಕಾರ ಕಿತ್ತೊಗೆಯಲು ಸಮನ್ವಯದಿಂದ ಕೆಲಸ: ಬಿವೈವಿ

BY Vijayendra: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರನ್ನು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಶುಕ್ರವಾರ ಭೇಟಿ ಮಾಡಿದ್ದು, ಈ ವೇಳೆ ಮುಂಬರುವ ಹಿರಿಯೂರು ಹಾಗೂ ಧಾರವಾಡ ಉಪ ಚುನಾವಣೆ ಹಾಗೂ ನಾಲ್ಕು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗಳ ಕುರಿತು ಚರ್ಚಿಸಿದ್ದಾರೆ.

ರಾಜ್ಯದಲ್ಲಿ ಅಕ್ರಮ ವಲಸಿಗರ ರಕ್ಷಣೆಗೆ ಹುನ್ನಾರ; ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

ಶಾಶ್ವತ ನಿವಾಸಿ ಪ್ರಮಾಣಪತ್ರಕ್ಕೆ ಶೋಭಾ ಕರಂದ್ಲಾಜೆ ಆಕ್ಷೇಪ

Shobha Karandlaje: ದೇಶದ ನಾಗರಿಕರಿಗೆ ಪೌರತ್ವ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ವಿದೇಶಿಗ ಯಾರು ಎಂಬ ಪ್ರಮಾಣ ಪತ್ರ ಕೊಡುವ, ವಲಸೆ ಪ್ರಮಾಣಪತ್ರ ನೀಡುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ. ಆದರೆ ರಾಜ್ಯ ಸರ್ಕಾರ ಈಗ ನಿವಾಸಿ ಪ್ರಮಾಣ ಪತ್ರ ನೀಡುತ್ತಿರುವುದು ಏಕೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಬೆಂಗಳೂರಿಗರೇ ಎಚ್ಚರ: ರಸ್ತೆ ಬದಿ ವಾಹನ ನಿಲ್ಲಿಸಿ ಹೋದರೆ ಮರಳಿ ಸಿಗದೇ ಇರಬಹುದು! ಜಿಬಿಎಯಿಂದ ಬೃಹತ್ ತೆರವು ಕಾರ್ಯಾಚರಣೆ

ರಸ್ತೆ ಬದಿ ವಾಹನ ತೆರವು ಕಾರ್ಯಾಚರಣೆ ಆರಂಭಿಸಿದ ಜಿಬಿಎ

ತುಂಬಾ ದಿನಗಳಿಂದ ಬೆಂಗಳೂರಿನ ರಸ್ತೆ ಬದಿ ವಾಹನ ನಿಲ್ಲಿಸಿ ಹೋಗಿದ್ದರೆ ನಿಮ್ಮ ವಾಹನ ಇದೆಯೇ ಎಂಬುದನ್ನು ಒಮ್ಮೆ ಖಾತ್ರಿ ಪಡಿಸಿಕೊಳ್ಳಿ. ಇಲ್ಲವಾದರೆ ಮುಂದೆ ವಾಹನಕ್ಕಾಗಿ ಬೀದಿ ಬೀದಿ ಅಲೆದಾಡಬೇಕಾಗಬಹುದು. ಯಾಕೆಂದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಬೆಂಗಳೂರು ಸಂಚಾರಿ ಪೊಲೀಸರು ಜಂಟಿಯಾಗಿ ಬೀದಿ ಬದಿಯ ಅನಾಥ ವಾಹನಗಳ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ಸಕಲ ನರಸಿಂಹಲು ಚೆಟ್ಟಿ ಜನ್ಮ ಶತಮಾನೋತ್ಸವ; ಪ್ರಭಾತ ಕಲಾವಿದರಿಂದ ಸಂಗೀತ-ನೃತ್ಯ ರೂಪಕ "ರಾಮ ಪ್ರತೀಕ್ಷೆ" ಹಾಗೂ "ರಾಮ ಭಕ್ತಿಸುಧಾ" ಪ್ರದರ್ಶನ

ಸಕಲ ನರಸಿಂಹಲು ಚೆಟ್ಟಿ ಜನ್ಮ ಶತಮಾನೋತ್ಸವ; ಕಲಾವಿದರಿಂದ ಪ್ರದರ್ಶನ

ಪ್ರಿಸ್ಟೀಜ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಸಭಾಂಗಣದಲ್ಲಿ ಶತಮಾನೋತ್ಸವದ ಪ್ರಮುಖ ಆಕರ್ಷಣೆಯಾಗಿ ಪ್ರಭಾತ ಕಲಾವಿದರು ಅಭಿನಯಿಸಿದ ಅದ್ಭುತ ಸಂಗೀತ-ನೃತ್ಯ ರೂಪಕ "ರಾಮ ಪ್ರತೀಕ್ಷೆ" ಹಾಗೂ "ರಾಮ ಭಕ್ತಿಸುಧಾ". ಸಂಗೀತ, ವಾಚನ, ನೃತ್ಯ ಮತ್ತು ನಾಟಕದ ಮನೋಜ್ಞ ಸಂಯೋ ಜನೆಯ ಮೂಲಕ ಸಂಪೂರ್ಣ ರಾಮಾಯಣವನ್ನು ಒಂದೇ ನಿರಂತರ ಪ್ರದರ್ಶನದಲ್ಲಿ ಮನಮೋಹಕ ವಾಗಿ ಅನಾವರಣಗೊಳಿಸಿದರು.

ಶಿಶು ಮಂದಿರ- ಆನ್ ಸಹಯೋಗ: ಪರಿಸರಸ್ನೇಹಿ ಸಾರಿಗೆ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹೊಸ ಬಲ

ಪರಿಸರಸ್ನೇಹಿ ಸಾರಿಗೆ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹೊಸ ಬಲ

ಕೆ.ಆರ್.ಪುರಂ ಹಾಗೂ ಪೂರ್ವ ಬೆಂಗಳೂರಿನ ವಿವಿಧ ಪ್ರದೇಶಗಳಿಂದ ಆಯ್ಕೆಯಾದ 12 ಮಹಿಳಾ ಫಲಾನುಭವಿಗಳಲ್ಲಿ ಹೆಚ್ಚಿನವರು ಒಂಟಿ ತಾಯಂದಿರು ಮತ್ತು ವಿಧವೆಯರಾಗಿದ್ದಾರೆ. ವಾಹನ ಹಸ್ತಾಂ ತರಕ್ಕೂ ಮುನ್ನ ಅವರು ಚಾಲನಾ ಕೌಶಲ್ಯ, ರಸ್ತೆ ಸುರಕ್ಷತೆ ಹಾಗೂ ವಾಹನ ನಿರ್ವಹಣೆಗೆ ಸಂಬಂಧಿಸಿದ ವಿಶೇಷ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಸಿಸಿಟಿವಿ ಅಳವಡಿಸಲು ಸಿಎಂ ಆದೇಶ

ರಾಜ್ಯದ ಎಲ್ಲಾ ದೇವಾಲಯದ ಮೇಲೂ ಸಿಎಂ ನಿಗಾ

ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವಂತ ದೇಣಿಗೆ ಕಳ್ಳತನ ಪ್ರಕರಣಗಳು ರಾಜ್ಯದಲ್ಲಿ ನಡೆಯದಿರಲಿ ಎಂದು ಹೇಳಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳ ಮೇಲೆ ನಿಗಾ ಇರಿಸಲು ಸಿಸಿಟಿವಿ ಅಳವಡಿಸುವಂತೆ ಆದೇಶಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಎಸ್‌ʼಐಆರ್‌ ನಮೂನೆ ಭರ್ತಿ ಮಾಡಲಾಗದೇ ಜನ ಹೈರಾಣ !

ಎಸ್‌ʼಐಆರ್‌ ನಮೂನೆ ಭರ್ತಿ ಮಾಡಲಾಗದೇ ಜನ ಹೈರಾಣ !

ಕಳೆದ ಜೂ.30ರಿಂದ ಬಿಎಲ್ಒಗಳು ಮತ ದಾರರ ಮನೆಗಳಿಗೆ ತೆರಳಿ ನಮೂನೆ ವಿತರಿಸಲು ಆರಂಭಿಸಿ ದ್ದಾರೆ. ಈ ಪ್ರಕ್ರಿಯೆ ಜುಲೈ ಅಂತ್ಯದವ ರೆಗೂ ಮುಂದುವರಿಯಲಿದ್ದು, ಭರ್ತಿ ಮಾಡಿದ ಫಾರ್ಮ್‌ಗಳನ್ನು ಸಂಗ್ರಹಿಸುವ ಕಾರ್ಯ ಜು.5 ರಿಂದ ಆರಂಭವಾಗಿದೆ. ಕೆಲವರು ಈಗಾಗಲೇ ನಮೂನೆ ಹಿಂದಿರುಗಿಸಿದ್ದು, ಬಹಳಷ್ಟು ಮಂದಿ 2002ರ ಅವಧಿಯ ಮತಪಟ್ಟಿಯಲ್ಲಿನ ಅಂಕಿ- ಅಂಶ ತುಂಬಲು ಪರದಾಡು ವಂತಾಗಿದೆ

ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು: ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

ಬಿಜೆಪಿ ಶಾಸಕ ವೇದವ್ಯಾಸ್‌ ಕಾಮತ್‌ ವಿರುದ್ಧದ ಪ್ರಕರಣ ರದ್ದು

Vedavyas Kamath: ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಡಿ. ವೇದವ್ಯಾಸ್ ಕಾಮತ್ ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ರಾಜಕೀಯ ವೈಷಮ್ಯ ಹಾಗೂ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಡೆದ ಮಾತಿನ ಚಕಮಕಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗಿತ್ತು.

ರಾಜ್ಯದಲ್ಲಿ ಮತ್ತೊಂದು ಲವ್‌ ಜಿಹಾದ್‌? ಹಿಂದೂ ಯುವತಿಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ ನವಾಜ್‌

ಹಿಂದೂ ಯುವತಿಯ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ನವಾಜ್‌

Love Jihad: ಬೆಂಗಳೂರಿನಲ್ಲಿ ಲವ್‌ ಜಿಹಾದ್‌ ಹೋಲುವ ಪ್ರಕರಣವೊಂದು ನಡೆದಿದೆ. ಬೆಂಗಳೂರಿನ ವರ್ತೂರು ಮುಖ್ಯ ರಸ್ತೆ ಬಳಿ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಫೈಜರ್‌ನ ‘ಪ್ರಾಜೆಕ್ಟ್ ಆಸ್ಥಾ’ ಮೂಲಕ 10 ಲಕ್ಷಕ್ಕೂ ಅಧಿಕ ರೋಗಿಗಳಿಗೆ ಬೆಂಬಲ

ಫೈಜರ್‌ನ ‘ಪ್ರಾಜೆಕ್ಟ್ ಆಸ್ಥಾ’ ಮೂಲಕ 10 ಲಕ್ಷಕ್ಕೂ ಅಧಿಕ ರೋಗಿಗಳಿಗೆ ಬೆಂಬಲ

ಈ ಉಪಕ್ರಮವು ರೋಗಿಗಳಿಗೆ ಆರೋಗ್ಯ ವ್ಯವಸ್ಥೆಯಲ್ಲಿ ಸೂಕ್ತ ಮಾರ್ಗದರ್ಶನ ಒದಗಿಸುವುದು, ಸರ್ಕಾರಿ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ನೆರವು ನೀಡುವುದು, ಸಮಾಲೋ ಚನಾ ಸೇವೆಗಳನ್ನು ಒದಗಿಸುವುದು ಹಾಗೂ ಚಿಕಿತ್ಸೆಯ ಸಂಪೂರ್ಣ ಅವಧಿಯಲ್ಲಿ ಅವರಿಗೆ ಅಗತ್ಯ ಬೆಂಬಲ ಸೇವೆಗಳ ಸಂಪರ್ಕ ಕಲ್ಪಿಸುವ ಮೂಲಕ ಗುಣಮಟ್ಟದ ಆರೋಗ್ಯ ಸೇವೆಗಳು ಸುಲಭವಾಗಿ ಸಿಗುವಂತೆ ಮಾಡುವತ್ತ ಗಮನಹರಿಸುತ್ತದೆ.

Loading...