ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ನಗರ

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಂದು ಪತಿಯೂ ಆತ್ಮಹತ್ಯೆ!

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಪತ್ನಿಯ ಕೊಂದು ಪತಿಯೂ ಆತ್ಮಹತ್ಯೆ!

Bengaluru News: ಬೆಂಗಳೂರಿನ ಎಚ್‌ಎಎಲ್‌ ವಿಭೂತಿಪುರದಲ್ಲಿ ಘಟನೆ ನಡೆದಿದೆ. ಪತ್ನಿ ಯಾವಾಗಲೂ ರೀಲ್ಸ್ ನೋಡುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಅದೇ ವಿಚಾರಕ್ಕೆ ನಿನ್ನೆ ತಡರಾತ್ರಿ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿಯನ್ನು ಪತಿ ಕೊಂದಿದ್ದಾನೆ. ಬಳಿಕ ಆತ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಭಾರತ ರತ್ನ ಪುರಸ್ಕೃತ ವಿಜ್ಞಾನಿ ಪ್ರೊ.ಸಿ.ಎನ್.ಆರ್. ರಾವ್‌ಗೆ  SIR ಶಾಕ್‌; ಹೆಸರಿನಲ್ಲಿರುವ ಹೆಚ್ಚುವರಿ ʼFʼ ಅಕ್ಷರದ ಬಗ್ಗೆ ನೋಟಿಸ್‌

ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ SIR ನೋಟಿಸ್

Prof CNR Rao: ಭಾರತ ರತ್ನ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ SIR ನೋಟಿಸ್ ನೀಡಲಾಗಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ವೇಳೆ ಅವರ ಹೆಸರು ಪಟ್ಟಿಯಲ್ಲಿರುವ ಹೆಸರಿಗೆ ಹೊಂದಾಣಿಕೆಯಾಗದೇ ಇರುವುದರಿಂದ ನೋಟಿಸ್ ಜಾರಿ ಗೊಳಿಸಲಾಗಿದೆ ಎನ್ನಲಾಗಿದೆ. ಅವರ ಹೆಸರಿನಲ್ಲಿ ಹೆಚ್ಚುವರಿ ಎಫ್ ಇರುವುದರಿಂದ ನೋಟಿಸ್ ನೀಡಲಾಗಿದೆ.

ʼಅಬಕಾರಿ ಹಗರಣ ಅಲ್ಲವೇ ಅಲ್ಲʼ; ಸತೀಶ್‌ ಜಾರಕಿಹೊಳಿ ಮನೆ ಮೇಲೆ ED ದಾಳಿ ನಡೆದಿದ್ಯಾಕೆ? ಇಲ್ಲಿದೆ ಮಾಹಿತಿ

ಸತೀಶ್‌ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ನಡೆದಿದ್ಯಾಕೆ?

Satish Jarkiholi: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು ಮತ್ತು ಗೋಕಾಕ್‌ನಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಗೆ ಹಲವು ಕಾರಣಗಳನ್ನು ಊಹಿಸಲಾಗಿತ್ತು. ಆದರೆ ಇದೀಗ ಇ.ಡಿ ಮಾಹಿತಿ ನೀಡಿದೆ.

KPSC ಹಗರಣ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡ್ರಾ  IAS ಅಧಿಕಾರಿ ಜ್ಞಾನೇಂದ್ರ ಕುಮಾರ್?

KPSC ಪ್ರಶ್ನೆ ಪತ್ರಿಕೆ ಸೋರಿಕೆ; ತಪ್ಪೊಪ್ಪಿಕೊಂಡ್ರಾ ಜ್ಞಾನೇಂದ್ರ?

KPSC Scam: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಹಲವು ಸ್ಫೋಟಕ ಸಂಗತಿಗಳು ಬಯಲಾಗುತ್ತಿವೆ. ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ತಾನೇ ಮಾಡಿರುವುದಾಗಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ವಾಹನ ಸವಾರರೇ ಗಮನಿಸಿ; ಏರ್‌ಪೋರ್ಟ್, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧ ನಿಯಮ ಸಡಿಲ

ಏರ್‌ಪೋರ್ಟ್, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಲ್ಲಿ ಸಂಚಾರ ನಿರ್ಬಂಧ ಸಡಿಲ

ಸಿಲಿಕಾನ್ ಸಿಟಿಯ ಪ್ರಮುಖ ಫ್ಲೈಓವರ್‌ಗಳಲ್ಲಿ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಸಂಚಾರ ಪೊಲೀಸ್ (BTP) ಇತ್ತೀಚೆಗೆ ಜಾರಿಗೆ ತಂದಿದ್ದ ಕಠಿಣ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಹಿಂದೆ 5 ಕಾರಿಡಾರ್‌ಗಳ ಪೈಕಿ, 4 ಕಾರಿಡಾರ್‌ಗಳಲ್ಲಿ ನಿರ್ಬಂಧವನ್ನು ಅನುಷ್ಠಾನಕ್ಕೆ ತರಲಾಗಿತ್ತು.

Padayatra completes 8th Day: ಪಾದಯಾತ್ರೆ 8ನೇ ದಿನ ಮುಕ್ತಾಯ, 17 ಕಿ.ಮೀ. ನಡಿಗೆ: ಸಂಡೂರಲ್ಲಿ ರಾರಾಜಿಸಿದ ಕೇಸರಿ ಧ್ವಜ

ಸಂಡೂರಲ್ಲಿ ರಾರಾಜಿಸಿದ ಕೇಸರಿ ಧ್ವಜ

ಸಂಡೂರು ಕ್ಷೇತ್ರದ ಹಳೆ ದರೋಜಿ, ಹೊಸ ದರೋಜಿಯಿಂದ ಆರಂಭವಾದ 8ನೇ ದಿನದ ಪಾದ ಯಾತ್ರೆ, ಇಡೀ ದಿನ ಸಂಡೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಮುಂದುವರಿಯಿತು. ಸಂಜೆ ಕುಡುತಿನಿ ಗ್ರಾಮ ದಲ್ಲಿ ಬಹಿರಂಗ ಸಭೆ ನಡೆಯಿತು. ರಾಯಚೂರಿನ ಲಿಂಗಸೂಗೂರಿ ನಿಂದ ಸೆ.1ರಂದು ಆರಂಭವಾದ ಪಾದಯಾತ್ರೆ ಕೊನೆಯ ಹಂತ ತಲುಪಿದೆ.

CM surprise visit to APMC: ಎಪಿಎಂಸಿಗೆ ಸಿಎಂ ಡಿಕೆ ಹಠಾತ್ ಭೇಟಿ: ನಾಲ್ವರು ಅಂಗಡಿ ಮಾಲೀಕರ ಬಂಧನ, 4 ಕೇಸ್ ದಾಖಲು:‌ 29 ಬಾಲಕಾರ್ಮಿಕರ ರಕ್ಷಣೆ

ಎಪಿಎಂಸಿಗೆ ಸಿಎಂ ಡಿಕೆ ಹಠಾತ್ ಭೇಟಿ

ಯಶವಂತಪುರ ಎಪಿಎಂಸಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ಸಿಎಂ, ಅಲ್ಲಿ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲೀಕರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಆಲಿಸಿದರು. ಮಕ್ಕಳಿಂದ ಕೆಲಸ ಮಾಡಿಸುವುದನ್ನು ತಕ್ಷಣದಿಂದಲೇ ನಿಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ; ಬೆಂಗಳೂರು ನಿವಾಸ ಸೇರಿದಂತೆ 15 ಕಡೆ ಶೋಧ

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ

Satish Jarkiholi: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರು ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿದೆ. ಅಬಕಾರಿ ಇಲಾಖೆಯ ಅಧಿಕಾರಿ ಮಂಜುನಾಥ್ ಅವರಿಗೆ ಸಂಬಂಧಿಸಿದ ಅಕ್ರಮಗಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರು, ಬೆಳಗಾವಿ ಸೇರಿ ಹಲವು ಕಡೆ ದಾಳಿ ನಡೆದಿದೆ.

KPSC Recruitment Scam: ಕೆಪಿಎಸ್‌ಸಿ ಕರ್ಮಕಾಂಡ: ಸಿಐಡಿ ತನಿಖೆಯಲ್ಲಿ ಗಂಭೀರ ಅಂಶ ಪತ್ತೆ : 24 ಅಭ್ಯರ್ಥಿಗಳಿಂದ 12 ಕೋಟಿ ರು. ಲಂಚ!

24 ಅಭ್ಯರ್ಥಿಗಳಿಂದ 12 ಕೋಟಿ ರು. ಲಂಚ!

ನೇಮಕಾತಿ ಪರೀಕ್ಷೆ ನಡೆಯುವ ಮುನ್ನವೇ ಆರೋಪಿಗಳ ತಂಡವು ಆಯ್ದ ಅಭ್ಯರ್ಥಿಗಳೊಂದಿಗೆ ಸಂಪರ್ಕ ಸಾಧಿಸಿ, ಅವರಿಗೆ ಪ್ರತ್ಯೇಕ ತರಬೇತಿ ನೀಡಿತ್ತು ಎಂದು ಸಿಐಡಿ ತನಿಖೆಯಲ್ಲಿ ತಿಳಿದು ಬಂದಿದೆ. ಹುದ್ದೆ ಕೊಡಿಸುವ ಭರವಸೆ ನೀಡಿ ಅಭ್ಯರ್ಥಿಗಳಿಂದ ಮುಂಗಡವಾಗಿ ಹಣ ಪಡೆದಿರುವ ಶಂಕೆಯೂ ವ್ಯಕ್ತವಾಗಿದೆ.

ವಿಸಿ ನೇಮಕದಲ್ಲಿ ʼಸ್ತ್ರೀ ಎಂದರೆ ಅಷ್ಟೇ ಸಾಕುʼ ಎಂದ ಸರಕಾರ

ವಿಸಿ ನೇಮಕದಲ್ಲಿ ʼಸ್ತ್ರೀ ಎಂದರೆ ಅಷ್ಟೇ ಸಾಕುʼ ಎಂದ ಸರಕಾರ

ಗದಗ ಜಿಲ್ಲೆಯ ಆರ್ ಡಿಪಿಆರ್ ವಿಶ್ವವಿದ್ಯಾಲಯ, ಹಾವೇರಿಯ ಜಾನಪದ ವಿವಿ ಹಾಗೂ ಹಂಪಿಯ ಕರ್ನಾಟಕ ಕನ್ನಡ ವಿವಿಯ ಕುಲಪತಿ ನೇಮಕ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಇದಕ್ಕಾಗಿ ಅರ್ಹರ ಶೋಧನಾ ಸಮಿತಿಯನ್ನೂ ರಚಿಸಲಾಗಿದ್ದು, ಇವರಲ್ಲಾದರೂ ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮಹಿಳೆಯರಿಗೆ ಅಥವಾ ಕಲ್ಯಾಣ ಕರ್ನಾಟಕ ಭಾಗದ ಮಹಿಳೆಯರಿಗೆ ಅವಕಾಶ ಸಿಗುವುದೇ ಎಂದು ನೋಡಬೇಕಿದೆ.

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ; ಒಬ್ಬ ಆರೋಪಿ ಅರೆಸ್ಟ್‌

ಬೆಂಗಳೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ

ಬೆಂಗಳೂರಿನ ನಗರದ ಗಾಂಧಿನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆಯಲಾಗಿದೆ. ನಕ್ಷತ್ರ ಆಮೆಗಳನ್ನು ಇಟ್ಟುಕೊಂಡರೆ ಅದೃಷ್ಟ ಬರುತ್ತದೆ ಎಂದು ಆರೋಪಿಗಳು ನಂಬಿಸಿ, ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ವಿಶ್ವದ ನಂಬರ್‌ 1 ಚೆಸ್‌ ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ಎದುರು ಚೆಸ್‌ ಆಡಿದ 25 ಯುವ ಪ್ರತಿಭೆ

ವಿಶ್ವದ ನಂಬರ್‌ 1 ಚೆಸ್‌ ಆಟಗಾರನೆದುರು ಚೆಸ್‌ ಆಡಿದ 25 ಯುವ ಪ್ರತಿಭೆ

13ರಿಂದ 19 ವರ್ಷದೊಳಗಿನ ಬೆಂಗಳೂರು ಮತ್ತು ಚೆನ್ನೈನ ಯುವ ಆಟಗಾರರು ವಿಶ್ವ ನಂ.1 ಹಾಗೂ ಐದು ಬಾರಿ ವಿಶ್ವ ಚಾಂಪಿ ಯನ್ ಮ್ಯಾಗ್ನಸ್ ಕಾರ್ಲ್ಸನ್(Magnus Carlsen), ಭಾರತದ ಚೆಸ್ ಐಕಾನ್ ಕೋನೇರು ಹಂಪಿ(Koneru Hampi), ಗ್ರ್ಯಾಂಡ್‌ಮಾಸ್ಟರ್ ವಿದಿತ್ ಗುಜರಾತಿ(Vidit Gujrati) ಮತ್ತು ಪ್ರವೀಣ್ ಮಹದೇವ್ ಥಿಪ್ಸೆ(Praveen Mahadev Thipsay) ಅವರ ಎದುರು ಆಡುವ ಅಪರೂಪದ ಅವಕಾಶ ಪಡೆದರು.

Project Khushi: ಪೊಲೀಸ್ ಸಿಬ್ಬಂದಿ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’ಗೆ ಚಾಲನೆ ನೀಡಿದ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್ ಕುಮಾರ್ ಸಿಂಗ್

ಪೊಲೀಸ್ ಸಿಬ್ಬಂದಿ ಆರೋಗ್ಯ ಸುಧಾರಣೆಗೆ ‘ಪ್ರಾಜೆಕ್ಟ್ ಖುಷಿ’ಗೆ ಚಾಲನೆ

ಹ್ಯಾಪಿಯೆಸ್ಟ್ ಹೆಲ್ತ್, ಟೈಟಾನ್ ಕಂಪನಿ ಲಿಮಿಟೆಡ್ ಮತ್ತು ಬೆಂಗಳೂರು ಇಂದಿರಾನಗರ ರೋಟರಿ ಟ್ರಸ್ಟ್ ಸಹಯೋಗದಲ್ಲಿ ಈ ಯೋಜನೆ ಜಾರಿಯಾಗುತ್ತಿದೆ. ರೋಗಗಳು ಬರುವ ಮುನ್ನವೇ ತಡೆಗಟ್ಟುವ ಆರೋಗ್ಯ ಸೇವೆಗಳಿಗೆ ಬೆಂಬಲ ನೀಡುವುದು ಹಾಗೂ ಪೊಲೀಸ್ ಸಿಬ್ಬಂದಿ ದೀರ್ಘಾವಧಿಯ ಆರೋಗ್ಯ ಕ್ಕಾಗಿ ಸುಸ್ಥಿರ ಜೀವನಶೈಲಿ ಅಳವಡಿಸಿಕೊಳ್ಳಲು ನೆರವಾಗುವುದು ಯೋಜನೆಯ ಉದ್ದೇಶವಾಗಿದೆ.

ಆಹಾರ ಸುರಕ್ಷತಾ ದೂರುಗಳಿಗೆ 24x7 ಸಹಾಯವಾಣಿ ಆರಂಭಿಸಿದ ಖಾಸಗಿ ಕಂಪನಿ

24x7 ಸಹಾಯವಾಣಿ ಆರಂಭಿಸಿದ ಖಾಸಗಿ ಕಂಪನಿ

ಆಪ್‌ನಲ್ಲಿನ ಈ ವಿಭಾಗದ ಮೂಲಕ ಗ್ರಾಹಕರು ತಮ್ಮ ದೂರು ಅಥವಾ ಕಳವಳವನ್ನು ಸಣ್ಣ ಸಂದೇಶದ ರೂಪದಲ್ಲಿ ಹಂಚಿಕೊಳ್ಳಬಹುದು. ಜೊತೆಗೆ, ಸಮಸ್ಯೆಗೆ ಸಂಬಂಧಿಸಿದ ಚಿತ್ರಗಳನ್ನೂ ಅಪ್‌ಲೋಡ್ ಮಾಡಬಹುದು. ದೂರು ದಾಖಲಾದ ನಂತರ, ಅದರ ಸ್ಥಿತಿಯನ್ನು ತಿಳಿದುಕೊಳ್ಳಲು ಗ್ರಾಹಕರಿಗೆ ಟಿಕೆಟ್ ಸಂಖ್ಯೆ ನೀಡಲಾಗುತ್ತದೆ.

Cauvery Water Dispute: ಕರ್ನಾಟಕಕ್ಕೆ ಮತ್ತೆ ಹಿನ್ನಡೆ; ತಮಿಳುನಾಡಿಗೆ 6,000 ಕ್ಯುಸೆಕ್ ಕಾವೇರಿ ನೀರು ಹರಿಸಲು CWMA ನಿರ್ದೇಶನ

ಕರ್ನಾಟಕದಿಂದ 6,000 ಕ್ಯುಸೆಕ್ ಕಾವೇರಿ ನೀರು ಹರಿಸಲು CWMA ನಿರ್ದೇಶನ

ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ.ಹಲ್ದಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸನ್ನು ಎತ್ತಿಹಿಡಿಯಲಾಗಿದೆ. ಅದರಂತೆ ಬುಧವಾರ ಬೆಳಿಗ್ಗೆಯಿಂದ ಅನ್ವಯವಾಗುವಂತೆ ಕರ್ನಾಟಕವು 15 ದಿನ 7.77 ಟಿಎಂಸಿ ಅಡಿ ನೀರನ್ನು ತಮಿಳುನಾಡಿಗೆ ಹರಿಸಬೇಕಿದೆ.

ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ

CM DK Shivakumar: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಬರುವ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡಿ, ಸಮುದಾಯಗಳ ಸಮಸ್ಯೆಗಳನ್ನು ಆಲಿಸಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಪೊಲೀಸ್ ಸಿಬ್ಬಂದಿ ಆರೋಗ್ಯ, ಕ್ಷೇಮಾಭಿವೃದ್ಧಿಗೆ ‘ಪ್ರಾಜೆಕ್ಟ್ ಖುಷಿʼ: ಪ್ರಿಯಾಂಕ್ ಖರ್ಗೆ ಮಾಹಿತಿ

ಪೊಲೀಸ್ ಸಿಬ್ಬಂದಿ ಆರೋಗ್ಯ, ಕ್ಷೇಮಾಭಿವೃದ್ಧಿಗೆ ‘ಪ್ರಾಜೆಕ್ಟ್ ಖುಷಿʼ

Priyank Kharge: ಪೊಲೀಸ್ ಸಿಬ್ಬಂದಿಯ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಕ್ಷೇಮ, ಉತ್ತಮ ಜೀವನಶೈಲಿ ಹಾಗೂ ಒತ್ತಡ ನಿರ್ವಹಣೆಯಂತಹ ಅಂಶಗಳಿಗೂ ಆದ್ಯತೆ ನೀಡುವ ಅಗತ್ಯವಿದೆ. ‘ಪ್ರಾಜೆಕ್ಟ್ ಖುಷಿʼಯಂತಹ ಉಪಕ್ರಮಗಳು ನಮ್ಮ ಪೊಲೀಸ್ ಪಡೆಯನ್ನು ಇನ್ನಷ್ಟು ಸದೃಢ, ಆರೋಗ್ಯಕರ ಹಾಗೂ ಸವಾಲುಗಳನ್ನು ಎದುರಿಸುವಲ್ಲಿ ಸ್ಥಿತಿಸ್ಥಾಪಕವಾಗಿಸಲು ಸಹಕಾರಿಯಾಗಲಿವೆʼ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧ ಹಂತ ಹಂತವಾಗಿ ಜಾರಿ: ಪ್ರಿಯಾಂಕ್ ಖರ್ಗೆ

ಪ್ರಮುಖ ಫ್ಲೈಓವರ್‌ಗಳಲ್ಲಿ ಸಂಚಾರ ನಿರ್ಬಂಧ ಹಂತ ಹಂತವಾಗಿ ಜಾರಿ

Bengaluru flyover restrictions: ಐದು ಪ್ರಮುಖ ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ನಾಲ್ಕರಲ್ಲಿ ಈಗಾಗಲೇ ಸಂಚಾರ ನಿರ್ಬಂಧಗಳನ್ನು ಜಾರಿಗೊಳಿಸಿದ ಬಳಿಕ ಬೆಂಗಳೂರು ಸಂಚಾರ ಪೊಲೀಸರು ಪ್ರಾಥಮಿಕವಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ವೇಳೆ ಬಿಜಿಎಸ್ ಫ್ಲೈಓವರ್, ಪೀಣ್ಯ ಫ್ಲೈಓವರ್ ಮತ್ತು ಡಬಲ್ ಡೆಕ್ಕರ್ ಫ್ಲೈಓವರ್‌ಗಳಲ್ಲಿ ಸಂಚಾರವು ಸುಗಮವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯುತ್ತಿರುವುದು ಕಂಡುಬಂದಿದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Prajwal Revanna Case: ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್‌ ರೇವಣ್ಣ ಎರಡು ದಿನ ಪೊಲೀಸ್‌ ಕಸ್ಟಡಿಗೆ

ಜೈಲಿನಲ್ಲಿ ಮೊಬೈಲ್ ಬಳಕೆ; ಪ್ರಜ್ವಲ್‌ ರೇವಣ್ಣ 2 ದಿನ ಪೊಲೀಸ್‌ ಕಸ್ಟಡಿಗೆ

ಜೈಲಿನಲ್ಲಿ ಮೊಬೈಲ್‌ ಬಳಕೆ ಪ್ರಕರಣದಲ್ಲಿ ಪ್ರತಾಪ್ ಎ1 ಆರೋಪಿ ಹಾಗೂ ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದು, ಇಬ್ಬರನ್ನೂ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಪೊಲೀಸರು ಕೋರಿದ್ದರು. ಇದಕ್ಕೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಅನುಮತಿ ನೀಡಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಸರ್ಕಾರದ ಚಿಂತನೆ: ಚಲುವರಾಯಸ್ವಾಮಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶ ಅಸಂಬದ್ಧ: ಚಲುವರಾಯಸ್ವಾಮಿ

N Chaluvarayaswamy: ಕಳೆದ ಒಂದು ವಾರದಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿದೆ. ಇಂತಹ ಸಂಕಷ್ಟದ ಸ್ಥಿತಿಯಲ್ಲಿ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವುದೂ ನಮಗೆ ಅಸಾಧ್ಯ. ನಾವು 'ಶೂನ್ಯ ನೀರು' ಬಿಡುವ ನಿಟ್ಟಿನಲ್ಲಿ ಸತತ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

Festival Shopping 2026: ಗೌರಿ-ಗಣೇಶನ ಹಬ್ಬಕ್ಕೆ ಶುರುವಾದ ಪೂಜಾ ಸಾಮಗ್ರಿಗಳ ಶಾಪಿಂಗ್

ಗೌರಿ-ಗಣೇಶನ ಹಬ್ಬಕ್ಕೆ ಶುರುವಾದ ಪೂಜಾ ಸಾಮಗ್ರಿಗಳ ಶಾಪಿಂಗ್

ಗೌರಿ-ಗಣೇಶನ ಹಬ್ಬಕ್ಕೆ ಈಗಾಗಲೇ ಪೂಜಾ ಸಾಮಗ್ರಿಗಳ ಶಾಪಿಂಗ್ ಎಲ್ಲೆಡೆ ಭರಾಟೆಯಿಂದ ಸಾಗಿದೆ. ಈಗಾಗಲೇ ಮಾರುಕಟ್ಟೆಗಳಲ್ಲಿ, ಬೀದಿಬದಿಗಳಲ್ಲಿ ಗೌರಿ ಗಣೇಶನ ವಿಗ್ರಹ, ಹಬ್ಬಕ್ಕೆ ಬೇಕಾಗುವ ಸಾಮಗ್ರಿಗಳ ಖರೀದಿಯಲ್ಲಿ ಜನರು ತೊಡಗಿದ್ದಾರೆ. ಯಾವ್ಯಾವ ಬಗೆಯವು ಬೇಡಿಕೆ ಹೆಚ್ಚಿಸಿಕೊಂಡಿವೆ. ಇಲ್ಲಿದೆ ವರದಿ.

ಶೀಘ್ರದಲ್ಲೇ ಇನ್ನೂ 25 ತಾಲೂಕುಗಳು ಬರಪೀಡಿತ ಪ್ರದೇಶಗಳೆಂದು ಘೋಷಣೆ: ಡಿಸಿಎಂ ಡಾ.ಜಿ.ಪರಮೇಶ್ವರ್‌

ಶೀಘ್ರದಲ್ಲೇ ಇನ್ನೂ 25 ತಾಲೂಕುಗಳು ಬರಪೀಡಿತ ಪ್ರದೇಶಗಳೆಂದು ಘೋಷಣೆ: ಡಿಸಿಎಂ

Dr G Parameshwar: ಕರ್ನಾಟಕದಲ್ಲಿ ಎರಡನೇ ಹಂತದ ಬರ ಪರಿಶೀಲನೆ ನಡೆಯುತ್ತಿದೆ. 25 ತಾಲೂಕುಗಳು ಬರ ಪೀಡಿತ ಪ್ರದೇಶಗಳೆಂದು ಘೋಷಣೆಗೆ ಅರ್ಹತೆ ಪಡೆದಿದ್ದು, ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

CM DK Shivakumar: ಸಿಎಂ ಡಿ.ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಧಾನಸೌಧದಲ್ಲೇ ಚಿಕಿತ್ಸೆ

ಸಿಎಂ ಡಿ.ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು; ವಿಧಾನಸೌಧದಲ್ಲೇ ಚಿಕಿತ್ಸೆ

ನಿನ್ನೆಯಿಂದ ವಿಶ್ರಾಂತಿಯಿಲ್ಲದೆ ಸತತ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಸಿಎಂ ಡಿ.ಕೆ. ಶಿವಕುಮಾರ್‌ ಅವರು, ಇಂದು ಮುಂಜಾನೆಯೇ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬೆಳಗಿನಿಂದಲೂ ಸರಣಿ ಸಭೆ ಹಾಗೂ ಓಡಾಟದಲ್ಲಿದ್ದ ಕಾರಣ ದೈಹಿಕ ಬಳಲಿಕೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದುಬಂದಿದೆ.

ರೈತರ ವಿಮೆ ಹಣ ಕಟ್ಟದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ರೈತರ ವಿಮೆ ಹಣ ಕಟ್ಟದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಸಿಎಂ ಸೂಚನೆ

CM DK Shivakumar: ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಮಂಗಳವಾರ ಬೆಳ್ಳಂಬೆಳಗ್ಗೆ ದಿಢೀರ್ ಭೇಟಿ ನೀಡಿದ ಸಿಎಂ ಡಿ.ಕೆ. ಶಿವಕುಮಾರ್‌, ಅಲ್ಲಿಗೆ ಬಂದಿದ್ದ ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ತೆಂಗು ಬೆಳೆಗಾರರು, ವರ್ತಕರು ಹಾಗೂ ಮಂಡಿ ಮಾಲೀಕರ ಜತೆ ಮಾತುಕತೆ ನಡೆಸಿ, ಅವರ ಸಮಸ್ಯೆ ಆಲಿಸಿದರು.

Loading...