ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೆಂಗಳೂರು ನಗರ

Ebola case: ರಾಜ್ಯದಲ್ಲಿ ಪತ್ತೆಯಾದ ಶಂಕಿತ ಎಬೋಲಾ ಪ್ರಕರಣದ ವರದಿ ನೆಗೆಟಿವ್‌: ಸಚಿವ ದಿನೇಶ್‌ ಗುಂಡೂರಾವ್

ರಾಜ್ಯದಲ್ಲಿ ಪತ್ತೆಯಾದ ಶಂಕಿತ ಎಬೋಲಾ ಪ್ರಕರಣದ ವರದಿ ನೆಗೆಟಿವ್‌

ಎಬೋಲಾ ಪ್ರಕರಣದ ಶಂಕೆ ವ್ಯಕ್ತವಾದ ತಕ್ಷಣವೇ ಇಲಾಖೆಯು ಸಾರ್ವಜನಿಕ ಆರೋಗ್ಯ ಮಾರ್ಗಸೂಚಿಗಳ ಅನ್ವಯ ಅತ್ಯಂತ ಕಟ್ಟುನಿಟ್ಟಾದ ಮುನ್ನೆಚ್ಚರಿಕೆ ಕ್ರಮಗಳು ಮತ್ತು ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿದೆ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Cristiano Ronaldo: ಕ್ರಿಶ್ಚಿಯಾನೋ ರೊನಾಲ್ಡೊ ಅವರನ್ನು ಜಾಗತಿಕ ಬ್ರಾಂಡ್ ರಾಯಭಾರಿಯಾಗಿ ನೇಮಿಸಿದ ಡ್ರೀಮಿ ಟೆಕ್ನಾಲಜಿ

ಜಾಗತಿಕ ಬ್ರಾಂಡ್ ರಾಯಭಾರಿಯಾಗಿ ಕ್ರಿಶ್ಚಿಯಾನೋ ರೊನಾಲ್ಡೊ

ಡ್ರೀಮಿ ಜಾಗತಿಕ ಬ್ರ್ಯಾಂಡ್ ಮತ್ತಷ್ಟು ಬಲಪಡಿಸುವ ತಂತ್ರಾತ್ಮಕ ಹೆಜ್ಜೆಯಾಗಿದ್ದು, ಕಂಪನಿಯ ಅಂತರ ರಾಷ್ಟ್ರೀಯ ಪ್ರೌಢಿಮೆಯ ಹೊಸ ಹಂತವನ್ನು ಪ್ರತಿಬಿಂಬಿಸುತ್ತದೆ. ಹೈ-ಸ್ಪೀಡ್ ಮೋಟರ್ ತಂತ್ರಜ್ಞಾನ ಮತ್ತು AI ಆಧಾರಿತ ವ್ಯವಸ್ಥೆಗಳಲ್ಲಿ ವರ್ಷಗಳ ವೇಗದ ವಿಸ್ತರಣೆ ಹಾಗೂ ನಿರಂತರ ಸಾಧನೆಗಳ ನಂತರ, ಡ್ರೀಮಿ ಜಾಗತಿಕ ಮಾನದಂಡವಾಗಿ ತನ್ನ ಸ್ಥಾನವನ್ನು ಬಲಪಡಿಸಿಕೊಂಡಿದೆ.

Caste Census: ಸಿಎಂ ಸಿದ್ದರಾಮಯ್ಯಗೆ ಜಾತಿ ಗಣತಿ ವರದಿ ಸಲ್ಲಿಸಿದ ಹಿಂದುಳಿದ ವರ್ಗಗಳ ಆಯೋಗ; ವರದಿಯಲ್ಲಿ ಏನಿದೆ?

ಸಿಎಂ ಸಿದ್ದರಾಮಯ್ಯಗೆ ಜಾತಿ ಗಣತಿ ವರದಿ ಸಲ್ಲಿಸಿದ ಹಿಂದುಳಿದ ವರ್ಗಗಳ ಆಯೋಗ

Karnataka caste census report: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯ್ಕ್‌ ನೇತೃತ್ವದ ತಂಡವು ಸಿಎಂ ಸಿದ್ದರಾಮಯ್ಯ ಅವರಿಗೆ 300 ಪುಟಗಳ ಜಾತಿ ಗಣತಿ ವರದಿಯನ್ನು ಹಸ್ತಾಂತರಿಸಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆಯುತ್ತಿರುವಾಗಲೇ ಜಾತಿಗಣತಿ ವರದಿ ಸಲ್ಲಿಕೆಯಾಗಿರುವುದು ಮಹತ್ವ ಪಡೆದುಕೊಂಡಿದೆ.

ದ್ರಾವಿಡ ಭಾಷಾ ಅನುವಾದಕರ ಸಂಘದ ಅನುವಾದ ಪ್ರಶಸ್ತಿಗೆ ಅರ್ಜಿ ಆಹ್ವಾನ

ದ್ರಾವಿಡ ಭಾಷಾ ಅನುವಾದಕರ ಸಂಘದ ಅನುವಾದ ಪ್ರಶಸ್ತಿಗೆ ಅರ್ಜಿ ಆಹ್ವಾನ

ದ್ರಾವಿಡ ಭಾಷಾ ಅನುವಾದಕರ ಸಂಘದ ವತಿಯಿಂದ ಅನುವಾದ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದ್ರಾವಿಡ ಭಾಷೆಗಳಾದ ಕನ್ನಡ, ತಮಿಳು, ಮಲಯಾಳಂ ಮತ್ತು ತುಳು ಭಾಷೆಗಳಿಂದ ತೆಲುಗು ಭಾಷೆಗೆ ಅನುವಾದಗೊಂಡ ಕಾದಂಬರಿಗೆ ಈ ಬಾರಿ ಪ್ರಶಸ್ತಿ ನೀಡಲಾಗುತ್ತದೆ.

Karnataka CM Row: ಆ ರೀತಿಯ ಮಾತುಕತೆಯೇ ನಡೆದಿಲ್ಲ; ಸಿಎಂ ಬದಲಾವಣೆ ಚರ್ಚೆಗೆ ಟ್ವಿಸ್ಟ್‌ ನೀಡಿದ ರಣದೀಪ್‌ ಸುರ್ಜೆವಾಲಾ!

ರಾಜ್ಯದ ಸಿಎಂ ಬದಲಾವಣೆ ಚರ್ಚೆಗೆ ಟ್ವಿಸ್ಟ್‌ ನೀಡಿದ ರಣದೀಪ್‌ ಸುರ್ಜೆವಾಲಾ!

Karnataka CM Row: ಶುಕ್ರವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಈ ವೇಳೆ ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಹರಿದಾಡುತ್ತಿತ್ತು. ಆದರೆ, ಇದನ್ನು ಅಲ್ಲಗಳೆದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ್‌ದೀಪ್‌ ಸುರ್ಜೆವಾಲಾ ಅವರು, ಸದ್ಯಕ್ಕೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿಗೆ ಬಂತು 'ಜಂಗಲ್ ಬುಕ್' ಕಾಡು: 'ದಿ ಗ್ಯಾಲೇರಿಯಾ ಮಾಲ್'ನಲ್ಲಿ ಮಕ್ಕಳಿಗಾಗಿ ಭರ್ಜರಿ ಬೇಸಿಗೆ ಸಂಭ್ರಮ

ಬೆಂಗಳೂರಿಗೆ ಬಂತು 'ಜಂಗಲ್ ಬುಕ್' ಕಾಡು; ಮಕ್ಕಳಿಗಾಗಿ ಬೇಸಿಗೆ ಸಂಭ್ರಮ

ಮಕ್ಕಳ ಅಚ್ಚುಮೆಚ್ಚಿನ ಕಾಲ್ಪನಿಕ ಕಥೆ 'ಜಂಗಲ್ ಬುಕ್' ಇದೀಗ ಬೆಂಗಳೂರಿನ ಯಲಹಂಕದಲ್ಲಿರುವ 'ದಿ ಗ್ಯಾಲೇರಿಯಾ ಮಾಲ್' ನಲ್ಲಿ ಜೀವಂತವಾಗಿ ಮೈದಳೆದಿದೆ. ಮೇ 8ರಿಂದ ಜೂನ್ 7 ರವರೆಗೆ ಇಡೀ ಮಾಲ್ ಕಾಡಿನ ರೂಪದಲ್ಲಿ ಕಂಗೊಳಿಸಲಿದ್ದು, ಮಕ್ಕಳಿಗಾಗಿ ಭರಪೂರ ಮನರಂಜನೆ ಮತ್ತು ಕಲಿಕೆಯ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.

Karnataka Congress: ಎಸ್‌ಐಆರ್‌ ಜಾಗೃತಿ ಸಭೆಗೆ ಗೈರು; ನಿಕೇತ್ ರಾಜ್ ಮೌರ್ಯ, ಭಾವನಾ ರಾಮಣ್ಣ ಸೇರಿ 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ಎಸ್‌ಐಆರ್‌ ಸಭೆಗೆ ಗೈರು; 31 ಕೆಪಿಸಿಸಿ ಪದಾಧಿಕಾರಿಗಳಿಗೆ ಗೇಟ್‌ಪಾಸ್‌!

ಮೇ 24 ರಂದು ಬೆಂಗಳೂರಿನ ಹೊರವಲಯದಲ್ಲಿ ಎಸ್‌ಐಆರ್‌ ಕುರಿತು ಜಾಗೃತಿ ಸಭೆಯಲ್ಲಿ ಏರ್ಪಡಿಸಲಾಗಿತ್ತು. ಈ ಸಭೆಗೆ ಹಾಜರಾಗದ ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಶಿಸ್ತು ಕ್ರಮ ಕೈಗೊಂಡಿದ್ದಾರೆ. ಒಟ್ಟು 31 ಪದಾಧಿಕಾರಿಗಳನ್ನು ಕೆಪಿಸಿಸಿ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಮೇ 31ರಂದು ಪರಮ್ ಕಲ್ಚರ್ ವತಿಯಿಂದ 'ಕಲಾ ಸಂವಾದ 5' ಕಾರ್ಯಕ್ರಮ

ಬೆಂಗಳೂರಿನಲ್ಲಿ ಮೇ 31ರಂದು 'ಕಲಾ ಸಂವಾದ 5' ಕಾರ್ಯಕ್ರಮ

'ಪರಮ್ ಕಲ್ಚರ್' ವತಿಯಿಂದ ಮೇ 31ರಂದು ಭಾನುವಾರ ಸಂಜೆ ಬೆಂಗಳೂರಿನ 'ಮೀನಾಕ್ಷಿ ರಂಗಮಂಚ' ಸಭಾಂಗಣದಲ್ಲಿ 'ಕಲಾ ಸಂವಾದ 05' ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂವಾದವು ʼಶಾಸ್ತ್ರದಿಂದ ಪ್ರಯೋಗ: ನಡುವಿನ ಸೃಜನಾತ್ಮಕ ಸೇತುʼ ಎಂಬ ವಿಶಿಷ್ಟ ವಿಷಯದ ಅಡಿಯಲ್ಲಿ ಮೂಡಿಬರಲಿದೆ.

ದೆಹಲಿಯಲ್ಲಿ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಾಗಾರ; ಆರೋಗ್ಯ ಕುರಿತ ವಿಚಾರ ಸಂಕಿರಣದಲ್ಲಿ ಡಾ. ಸಿ.ಎನ್. ಮಂಜುನಾಥ್ ಭಾಗಿ

ದೆಹಲಿಯಲ್ಲಿ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಾಗಾರ

ದಿ ನೇಷನ್ ಫಸ್ಟ್ ಪಾಲಿಸಿ ರಿಸರ್ಚ್ ಅಂಡ್ ಚೇಂಜ್ ಫೌಂಡೇಶನ್ ವತಿಯಿಂದ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್‌ನಲ್ಲಿ ಆಯೋಜಿಸಲಾಗಿತ್ತು. ಆರೋಗ್ಯ ಕುರಿತಾದ ವಿಚಾರ ಸಂಕಿರಣದಲ್ಲಿ ಸಂಸದ ಹಾಗೂ ಹೃದ್ರೋಗ ತಜ್ಞರಾದ ಡಾ. ಸಿಎನ್ ಮಂಜುನಾಥ್ ಅವರು ಭಾಗಿಯಾಗಿದ್ದರು.

ದೆಹಲಿಯಿಂದ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌; ಹೈಕಮಾಂಡ್‌ ಸಭೆ ಬಗ್ಗೆ ಹೇಳಿದ್ದೇನು?

ದೆಹಲಿಯಿಂದ ಬಂದ ಬಳಿಕ ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

Karnataka CM Row: ರಾಜ್ಯದಲ್ಲಿ ಸಿಎಂ ಬದಲಾವಣೆ ವದಂತಿಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನಡುವೆ ನಾಳೆ ಮಹತ್ವದ ಬ್ರೇಕ್‌ಫಾಸ್ಟ್ ಮೀಟಿಂಗ್‌ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ವಿಶೇಷ ಉಪಹಾರ ಕೂಟವನ್ನು ಆಯೋಜಿಸಲಾಗಿದೆ ಎಂದು ತಿಳಿದುಬಂದಿದೆ.

ಉಗಾಂಡಾದಿಂದ ಬೆಂಗಳೂರಿಗೆ ಹಿಂತಿರುಗಿದ 28 ವರ್ಷದ ಮಹಿಳೆಯಲ್ಲಿ ಎಬೋಲಾ ವೈರಸ್ ಪತ್ತೆ? ಆಸ್ಪತ್ರೆಯಲ್ಲಿ ಚಿಕಿತ್ಸೆ

ಉಗಾಂಡಾದಿಂದ ಹಿಂತಿರುಗಿದ ಮಹಿಳೆಯಲ್ಲಿ ಪತ್ತೆಯಾಯ್ತಾ ಎಬೋಲಾ ವೈರಸ್?

Ebola virus detected: ಉಗಾಂಡಾದಿಂದ ಪ್ರಯಾಣಿಸಿದ್ದ ಮಹಿಳೆಯನ್ನು ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ನಿಗಾದಲ್ಲಿಟ್ಟು ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 28 ವರ್ಷದ ಮಹಿಳೆಗೆ ಸೌಮ್ಯವಾದ ದೇಹದ ನೋವು ಇದ್ದರೂ ಎಬೋಲಾ ವೈರಸ್‍ನ ಯಾವುದೇ ತೀವ್ರ ಲಕ್ಷಣಗಳು ಕಂಡುಬಂದಿಲ್ಲ. ಅವರ ಆರೋಗ್ಯ ಪರಿಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರಿ ದುರಂತ; ಟೇಕಾಫ್ ವೇಳೆ ಇಂಡಿಗೋ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಪ್ಪಿದ ಭಾರಿ ದುರಂತ

IndiGo Flight: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ (ಮೇ 26) ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚೆನ್ನೈಗೆ ಹಾರಲು ಸಿದ್ಧವಾಗುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಪ್ರಯಾಣಿಕರು, ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಘಟನೆಗೆ ಕಾರಣ ತಿಳಿದು ಬಂದಿಲ್ಲ.

Bengaluru Rains: ಬೆಂಗಳೂರಿನಲ್ಲಿ ಮಳೆ ಅಬ್ಬರ; ಕೆರೆಗಳಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

ಬೆಂಗಳೂರಿನಲ್ಲಿ ಮಳೆ ಅಬ್ಬರ; ಕೆರೆಗಳಂತಾದ ರಸ್ತೆಗಳು, ಜನಜೀವನ ಅಸ್ತವ್ಯಸ್ತ!

Heavy Rain in Bengaluru: ಬಿರುಗಾಳಿ ಸಹಿತ ಭಾರಿ ಮಳೆಯಿಂದ ಬೆಂಗಳೂರಿನ ಹಲವೆಡೆ ಮರಗಳು ನೆಲಕ್ಕುರುಳಿದ್ದು, ರಸ್ತೆಗಳು ಜಲಾವೃತವಾಗಿವೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಲ್ಲಿ ಬುಧವಾರವೂ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ.

Karnataka CM Row: ದೆಹಲಿಯಿಂದ ಬೆಂಗಳೂರಿಗೆ ಹೊರಟ ಸಿದ್ದರಾಮಯ್ಯ; ರಾಜ್ಯದ ಸಿಎಂ ಬದಲಾಗ್ತಾರಾ?

ದೆಹಲಿಯಿಂದ ಬೆಂಗಳೂರಿಗೆ ಹೊರಟ ಸಿದ್ದರಾಮಯ್ಯ; ಸಿಎಂ ಬದಲಾಗ್ತಾರಾ?

ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಸಭೆ ಬಳಿಕ ಮಾತನಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರು, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾಡುವುದು ಊಹಾಪೋಹಾ ಎಂದು ಹೇಳಿದ್ದರು. ತಾವು ರಾಜ್ಯ ಸಭೆ, ವಿಧಾನ ಪರಿಷತ್‌ ಚುನಾವಣೆ ಬಗ್ಗೆ ಮಾತ್ರ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬೇರೆ ಏನೂ ಚರ್ಚೆಯಾಗಿಲ್ಲ ಎಂದು ಹೇಳಿದ್ದರು.

Bangalore News: ಶಿಕ್ಷಕರು, ಅತಿಥಿ ಶಿಕ್ಷಕರು, ಅಂಗನವಾಡಿ ನೌಕರರ ನೇಮಕಾತಿಗೂ ಒಳಮೀಸಲಾತಿ ಕಡ್ಡಾಯವಾಗಿ ಜಾರಿಗೊಳಿಸಿ: ಡಾ.ಎಸ್.ಸಂಗಮೇಶ್ ಆಗ್ರಹ

ಶಿಕ್ಷಣ, ಉದ್ಯೋಗ ವಲಯದಲ್ಲಿ ಕಡ್ಡಾಯ ಒಳಮೀಸಲಾತಿ ಜಾರಿಗೆ ತರಬೇಕು

ಐಟಿಐ ಕಾಲೇಜುಗಳು, ವಿವಿಧ ವಿಶ್ವವಿದ್ಯಾಲಯಗಳ ಪಿ.ಎಚ್.ಡಿ ಪ್ರವೇಶಾತಿ, ಪಿಯುಸಿ ನಂತರದ 5 ವರ್ಷದ ಎಲ್.ಎಲ್.ಬಿ ಪ್ರವೇಶಾತಿ, ಸರ್ಕಾರಿ ಡಿಗ್ರಿ ಕಾಲೇಜುಗಳ 10,500 ಅತಿಥಿ ಸಹ ಪ್ರಾಧ್ಯಾಪಕರ ನೇಮಕಾತಿ, 52 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ, 5,910 ಅತಿಥಿ ಉಪನ್ಯಾಸಕರ ನೇಮಕಾತಿ, ಅಂಗನವಾಡಿ ಹುದ್ದೆಗಳು, ಆರ್,ಟಿ.ಇ ಮತ್ತು ಆದರ್ಶ ವಿದ್ಯಾಲಯಗಳ ಪ್ರವೇಶಾತಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಒಳಮೀಸಲಾತಿ ಜಾರಿಯಾಗಿಲ್ಲ

ಶಿಕ್ಷಣ ಇಲಾಖೆ ಆದೇಶದ ವಿರುದ್ಧ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ: ಆಯುಕ್ತರಿಗೆ ದೂರು

ಶಿಕ್ಷಣ ಇಲಾಖೆ ಆದೇಶದ ವಿರುದ್ಧ ಪ್ರವೇಶ: ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಶಾಲಾ ಶಿಕ್ಷಣ ಇಲಾಖೆ ಆಯುಕ್ತರು, ನಿರ್ದೇಶಕರು ಮತ್ತಿತರೆ ಅಧಿಕಾರಿಗಳಿಗೆ ದೂರು ಸಲ್ಲಿಸ ಲಾಗಿದೆ. ನಕಲಿ ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿ ಮುಗ್ಧ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಮೋಸ, ವಂಚನೆ ಮಾಡುತ್ತಿದ್ದು, ದೇಶದ ಭದ್ರತೆ ಹಾಗೂ ಏಕತೆಗೆ ಧಕ್ಕೆ ತರುತ್ತಿರುವ ಅನಧಿಕೃತ ವಿದ್ಯಾಸಂಸ್ಥೆಗಳ ವಿರುದ್ದ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Karnataka Weather: ಆರೆಂಜ್‌ ಅಲರ್ಟ್; ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ನಾಳೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆಲಿಕಲ್ಲು ಮಳೆ ಎಚ್ಚರಿಕೆ!

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಮಧ್ಯಾಹ್ನ/ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34°C ಮತ್ತು 22°C ಇರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಟೋ ಓಡಿಸಿ ಬದುಕು ಸಾಗಿಸುವ ಬೆಂಗಳೂರಿನ ಮಹಿಳೆ: ಚಾಲಕಿಯ ಧೈರ್ಯಕ್ಕೆ ಸಲಾಂ

ಬೆಂಗಳೂರು ಆಟೋ ಚಾಲಕಿಯ ಧೈರ್ಯಕ್ಕೆ ಅಮೆಜಾನ್ ಸಿಬ್ಬಂದಿ ಫಿದಾ

Viral News: ಮನೆಯ ನಾಲ್ಕು ಗೋಡೆಗಳಿಗೆ ಸೀಮಿತವಾಗಿರದೆ ತಮಗೆ ಸಾಧ್ಯವಾದ ಕೆಲಸ ಮಾಡಿ ಜೀವನ ನಿಭಾಯಿಸುವ ಅನೇಕ ಮಹಿಳೆಯರಿದ್ದಾರೆ. ಅದರಂತೆ ಬೆಂಗಳೂರಿನ ಮಹಿಳೆಯೊಬ್ಬರು ಆಟೋ ಚಲಾಯಿಸುವ ಮೂಲಕ ಬದುಕು ಕಟ್ಟಿಕೊಂಡಿದ್ದಾರೆ. ಸ್ವಾವಲಂಬಿ ಬದುಕು ಸಾಗಿಸುತ್ತಿರುವ ಆಟೋ ಚಾಲಕಿಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಮಹಿಳಾ ಆಟೋ ಚಾಲಕಿಯ ಕಥೆಯನ್ನು ಅಮೆಜಾನ್ ಉದ್ಯೋಗಿಯೊಬ್ಬರು ಶೇರ್ ಮಾಡಿದ್ದಾರೆ.

Bengaluru Rains: ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ ಆರ್ಭಟ; ನೇರಳೆ ಮಾರ್ಗದ ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರಿನಲ್ಲಿ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಇದರಿಂದ ರಾಜಧಾನಿ ಬೆಂಗಳೂರಿನ ವಿವಿಧೆಡೆ ಮಂಗಳವಾರ ಮಳೆ ಅಬ್ಬರಿಸಿದೆ.

18 ವರ್ಷ ಪೂರೈಸಿದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಅಂಚೆ ಇಲಾಖೆಯಿಂದ ಸಿಕ್ತು ವಿಶೇಷ ಗೌರವ

ಬೆಂಗಳೂರು ಏರ್‌ಪೋರ್ಟ್‌ಗೆ ಅಂಚೆ ಇಲಾಖೆಯಿಂದ ವಿಶೇಷ ಗೌರವ

Kempegowda International Airport: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ವಿಮಾನ ನಿಲ್ದಾಣದ 18ನೇ ವಾರ್ಷಿಕೋತ್ಸವದ ಅಂಗವಾಗಿ ಅಂಚೆ ಇಲಾಖೆಯು ಚಿತ್ರವನ್ನು ಒಳಗೊಂಡ ಶಾಶ್ವತ ಅಂಚೆ ಮೊಹರನ್ನು ಬಿಡುಗಡೆ ಮಾಡಿದ್ದು, ಇದರ ಜತೆಗೆ 'ವಿಶೇಷ ಅಂಚೆ ಲಕೋಟೆ' ಮತ್ತು 'ಸ್ಮರಣಾರ್ಥ ಅಂಚೆ ಕಾರ್ಡ್‌ಗಳನ್ನು' ಬಿಡುಗಡೆಗೊಳಿಸಿದೆ.

Karnataka CM Row: ಕರ್ನಾಟಕ ಸಿಎಂ ಬದಲಾವಣೆ ಚರ್ಚೆ; ದೆಹಲಿ ಸಭೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ನಿರ್ಧಾರ ಏನು?

ಕರ್ನಾಟಕ ಸಿಎಂ ಬದಲಾವಣೆ; ದೆಹಲಿ ಸಭೆಯಲ್ಲಿ ಹೈಕಮಾಂಡ್‌ ನಿರ್ಧಾರ ಏನು?

ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮೀಟಿಂಗ್‌ ನಡೆದಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಸೇರಿ ಪ್ರಮುಖರು ಚರ್ಚೆ ನಡೆಸಿದ್ದಾರೆ.

Hate speech Bill: ಕರ್ನಾಟಕದ ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್‌; ಹೊಸ ಕಾನೂನಿಗೆ ಆಕ್ಷೇಪ

ಕರ್ನಾಟಕದ ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್‌

ಕರ್ನಾಟಕದ ದ್ವೇಷ ಭಾಷಣ ಮಸೂದೆಯಲ್ಲಿನ ವಿಷಯಗಳು ಈಗಾಗಲೇ ಭಾರತೀಯ ನ್ಯಾಯ ಸಂಹಿತೆ 2023 ಮತ್ತು ಇತರ ಕಾನೂನುಗಳಲ್ಲೇ ಇವೆ. ಹೀಗಾಗಿ ಪ್ರತ್ಯೇಕವಾಗಿ ರಾಜ್ಯಗಳು ಕಾನೂನು ಜಾರಿ ಮಾಡುವುದರಿಂದ ಪುನರಾವರ್ತನೆ ಮತ್ತು ಏಕರೂಪತೆಯ ಕೊರತೆ ಉಂಟಾಗಬಹುದು. ಹೀಗಾಗಿ ಹೊಸ ಕಾನೂನಿನ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ದಿನಾಂಕ ಘೋಷಣೆ; ಜೂ. 18ರಂದು 7 ಸ್ಥಾನಗಳಿಗೆ ಎಲೆಕ್ಷನ್​​

ಕರ್ನಾಟಕ ವಿಧಾನ ಪರಿಷತ್​​ ಚುನಾವಣೆ ದಿನಾಂಕ ಘೋಷಣೆ

ರಾಜ್ಯಸಭಾ ಚುನಾವಣೆಯ ಘೋಷಣೆ ಬೆನ್ನಲ್ಲೇ ಕರ್ನಾಟಕದ ವಿಧಾನಪರಿಷತ್ ಎಲೆಕ್ಷನ್​​ಗೂ ದಿನಾಂಕವನ್ನು ಘೋಷಿಸಲಾಗಿದೆ. ಜೂನ್ 26ರಂದು ತೆರವಾಗಲಿರುವ ಪರಿಷತ್​​ನ 7 ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ ನಡೆಯಲಿದೆ. ಬಿಹಾರದ ಒಂಬತ್ತು ಹಾಗೂ ಕರ್ನಾಟಕದ ಏಳು ವಿಧಾನ ಪರಿಷತ್ ಸ್ಥಾನಗಳಿಗೆ ಈ ಚುನಾವಣೆ ನಡೆಯಲಿದೆ.

ತಪ್ಪಿದ ಭಾರೀ ದುರಂತ; ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಬೆಂಗಳೂರಿನಿಂದ ಹೊರಟಿದ್ದ ರೈಲಿನ ಭೋಗಿ

ಚಲಿಸುತ್ತಿದ್ದಾಗಲೇ ಬೇರ್ಪಟ್ಟ ಬೆಂಗಳೂರಿನಿಂದ ಹೊರಟಿದ್ದ ರೈಲಿನ ಭೋಗಿ

ಬೆಂಗಳೂರಿನಿಂದ ಬಿಹಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಭಾರೀ ದುರಂತವೊಂದು ತಪ್ಪಿದೆ. ಮೇ 23 ರಂದು ತಡರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿನ ಎಸ್ಎಂವಿಟಿ ನಿಲ್ದಾಣದಿಂದ (Bengaluru SMVT Station) ಬಿಹಾರಕ್ಕೆ ತೆರಳುತ್ತಿದ್ದ ದಾನಪೂರ್ ವಿಶೇಷ ರೈಲು ( ಸಂಖ್ಯೆ 03252) ಚಲಿಸುತ್ತಿದ್ದಾಗಲೇ ಜಾಯಿಂಟ್‌ ವೀಲ್‌ ಕಟ್ಟಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ.

Loading...