ದಸರಾ ಆನೆ ಅರ್ಜುನನ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸಿದ ರಾಜ್ಯ ಸರ್ಕಾರ
Forest Department: ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ, ವನ್ಯಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಹಾಗೂ ಸೆರೆಹಿಡಿಯುವ ಆನೆಗಳನ್ನು ಪಳಗಿಸಿ ಆರೈಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಾವುತ/ಸಿಬ್ಬಂದಿಯನ್ನು ಗುರುತಿಸಿ ಅರ್ಜುನ ಆನೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.