ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಚಾಮರಾಜನಗರ
Monkey Massacre: ಹುಲಿ ಹತ್ಯೆ ಬಳಿಕ ಗುಂಡ್ಲುಪೇಟೆಯಲ್ಲಿ 20ಕ್ಕೂ ಅಧಿಕ ಕೋತಿಗಳ ಮಾರಣಹೋಮ

ಹುಲಿ ಹತ್ಯೆ ಬಳಿಕ ಗುಂಡ್ಲುಪೇಟೆಯಲ್ಲಿ 20ಕ್ಕೂ ಅಧಿಕ ಕೋತಿಗಳ ಮಾರಣಹೋಮ

Monkey Massacre: ದಾರಿಹೋಕರು ಚೀಲವನ್ನು ಬಿಚ್ಚಿ ನೋಡಿದ ವೇಳೆ 20ಕ್ಕೂ ಅಧಿಕ ಕೋತಿಗಳ ಕಳೇಬರಗಳು ಪತ್ತೆಯಾಗಿವೆ. ಮೇಲ್ನೋಟಕ್ಕೆ ವಿಷಪ್ರಾಶನ ಮಾಡಿರುವ, ಇಲ್ಲವೇ ಹೊಡೆದು ಕೊಂದಿರುವ ಶಂಕೆ ವ್ಯಕ್ತವಾಗಿದೆ. ಕೋತಿಗಳ ಮೃತದೇಹಗಳು ಸಿಕ್ಕ ಪ್ರದೇಶ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದ ವ್ಯಾಪ್ತಿಗೆ ಬರುತ್ತದೆ.

Tigers death: ಹುಲಿಗಳ ಸಾವು, ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ

ಹುಲಿಗಳ ಸಾವು, ಕರ್ತವ್ಯ ಲೋಪ ಎಸಗಿದ 3 ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ

Tigers Death: ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಕರ್ತವ್ಯ ಲೋಪ ಮೇಲ್ನೋಟಕ್ಕೆ ಕಂಡು ಬಂದಿತ್ತು. ಅದರಂತೆ ಅರಣ್ಯ ಇಲಾಖೆಯು ಮಲೆ ಮಹದೇಶ್ವರ ವನ್ಯಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ವೈ, ಹನೂರು ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗಜಾನನ ಹೆಗಡೆ ಮತ್ತು ವಲಯ ಅರಣ್ಯಾಧಿಕಾರಿ ಮಾದೇಶ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯ ರಜೆಯ ಮೇಲೆ ತೆರಳುವಂತೆ ಆದೇಶಿಸಿದೆ.

Tiger Death: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಹತ್ಯೆ: ವಿಷವಿಕ್ಕಿದ ಮೂವರ ಬಂಧನ

ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಹತ್ಯೆ: ವಿಷವಿಕ್ಕಿದ ಮೂವರ ಬಂಧನ

Tiger Death: ಹಸುವಿನ ಕಳೇಬರದಲ್ಲಿ ವಿಷ ಹಾಕಿ ಹುಲಿಗಳ ಸಾವಿಗೆ ಕಾರಣರಾದ ಕೋನಪ್ಪ ಬಿನ್ ಸೊಣ್ಣೆಗೌಡ, ಮಾದರಾಜು ಬಿನ್ ಶಿವಣ್ಣ ನಾಗರಾಜ ಬಿನ್ ಪೂಜಾರಿಗೌಡ ಇವರನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಲಾಗುತ್ತಿದೆ. ಇವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Tigers death: ಮಲೆ ಮಹದೇಶ್ವರ ಹುಲಿಗಳ ಸಾವು, ತನಿಖೆಗೆ ಎಸ್‌ಐಟಿ ರಚಿಸಿದ ಕೇಂದ್ರ

ಮಲೆ ಮಹದೇಶ್ವರ ಹುಲಿಗಳ ಸಾವು, ತನಿಖೆಗೆ ಎಸ್‌ಐಟಿ ರಚಿಸಿದ ಕೇಂದ್ರ

Tiger Death: ಮಲೆ ಮಹದೇಶ್ವರ ಬೆಟ್ಟದಲ್ಲಿ ಸಂಭವಿಸಿದ ಐದು ಹುಲಿಗಳ ಸಾವು ಕುರಿತು ತನಿಖೆ ನಡೆಸಲು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಇಬ್ಬರು ಸದಸ್ಯರ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಎಸ್‌ಐಟಿ ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಸಿ ಎರಡು ವಾರಗಳ ಅವಧಿಯಲ್ಲಿ ವರದಿಯನ್ನು ಸಲ್ಲಿಸಬೇಕಿದೆ.

Tigers Death: ಬಂಡಿಪುರದಲ್ಲಿ ಮತ್ತೊಂದು ಹುಲಿ ಶವ ಪತ್ತೆ

ಬಂಡಿಪುರದಲ್ಲಿ ಮತ್ತೊಂದು ಹುಲಿ ಶವ ಪತ್ತೆ

Tiger Death: ಬಂಡೀಪುರ ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಮತ್ತೊಂದು ಹುಲಿ ಅಸಹಜವಾಗಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. 4ರಿಂದ 5 ವರ್ಷ ವಯಸ್ಸಿನ ಹೆಣ್ಣು ಹುಲಿ ಸಾವನ್ನಪ್ಪಿದ್ದು, ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಕಳೇಬರ ಪತ್ತೆಯಾಗಿದೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ.

Tiger Death: ಮಲೆ ಮಹದೇಶ್ವರ ಬೆಟ್ಟದಲ್ಲಿ ಒಂದೇ ದಿನ 5 ಹುಲಿ ಸಾವು, ವಿಷಪ್ರಾಶನ ಶಂಕೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಒಂದೇ ದಿನ 5 ಹುಲಿ ಸಾವು, ವಿಷಪ್ರಾಶನ ಶಂಕೆ

Tiger death: ಹುಲಿಗಳ ಸಾವು ಪ್ರಕರಣದ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರೆ ತ್ವರಿತ ಕ್ರಮ ಕೈಗೊಂಡಿದ್ದು, ಹುಲಿಗಳ ಅಸಹಜ ಸಾವಿನ‌ ಕುರಿತು ತನಿಖೆಗೆ ಉನ್ನತ ಮಟ್ಟದ ತನಿಖಾ ತಂಡ ರಚಿಸಿದ್ದಾರೆ. ಹುಲಿ ಕಳೇಬರ ಸಿಕ್ಕ ಪ್ರದೇಶದಿಂದ 500 ಮೀ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಕ್ಷ್ಯ ಸಂಗ್ರಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Tiger Attack: ಚಾಮರಾಜನಗರದಲ್ಲಿ ಒಂದೇ ತಿಂಗಳಲ್ಲಿ 2ನೇ ಬಲಿ ಪಡೆದ ನರಭಕ್ಷಕ ಹುಲಿ

ಚಾಮರಾಜನಗರದಲ್ಲಿ ಒಂದೇ ತಿಂಗಳಲ್ಲಿ 2ನೇ ಬಲಿ ಪಡೆದ ನರಭಕ್ಷಕ ಹುಲಿ

Tiger Attack: ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿ ಪ್ರಕರಣ ಹೆಚ್ಚುತ್ತಿರುವುದರಿಂದ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ಹುಲಿ ನರಭಕ್ಷಕನಾಗಿ ಪರಿವರ್ತಿತವಾಗಿದೆ ಎಂದು ತರ್ಕಿಸಲಾಗಿದ್ದು, ಈ ಹುಲಿಯನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಾಡಂಚಿನ ಜನ ಆಗ್ರಹಿಸಿದ್ದಾರೆ.

ಜಿಲ್ಲೆ ಜನ ಮರೆತಿಲ್ಲ ಆಕ್ಸಿಜನ್ ದುರಂತ, ಕೊಟ್ಟ ಭರವಸೆ ಮರೆಯಿತೆ ಸರಕಾರ?

ಕೊಟ್ಟ ಭರವಸೆ ಮರೆಯಿತೆ ಸರಕಾರ?

ಕೊರೊನಾ ಎರಡನೇ ಅಲೆ 201ರ ಮೇ 9 ರ ರಾತ್ರಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಸಿಗದೇ 36 ಮಂದಿ ಅಸುನೀಗಿದ್ದರು. ಅದರಲ್ಲೂ ಎಲ್ಲಾ ಬಡ ಕುಟುಂಬಗಳು, ಕೆಲವರು ಸಂಸಾರದ ಹೊಣೆ ಹೊತ್ತವರು,ಇನ್ನು ಕೆಲವರು ಕುಟುಂಬದ ಆಧಾರಸ್ತಂಭವಾದವರು, ಈ ವೇಳೆ ಮೃತಪಟ್ಟ ಒಂದೊಂದು ಕುಟುಂಬವೂ ಒಂದೊಂದು ದಾರುಣ ಕಥೆಯನ್ನೇ ಹೇಳುತ್ತವೆ.

Karnataka Rain: ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

ರಾಜ್ಯದಲ್ಲಿ ಮಳೆಯ ಆರ್ಭಟ, ಮಕ್ಕಳೂ ಸೇರಿ ಒಂದೇ ದಿನ 8 ಮಂದಿ ಸಾವು

Karnataka Rain News: ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು, ತುಂಬಿ ಹರಿಯುವ ಹಳ್ಳದಲ್ಲಿ ಎತ್ತಿನ ಬಂಡಿ ಮಗುಚಿ ಬಿದ್ದು, ಕರೆಂಟ್ ಶಾಕ್​ ಹೊಡೆದು, ಕಾವೇರಿ ನದಿಯಲ್ಲಿ ಈಜಲು ಇಳಿದು- ಹೀಗೆ ಎಂಟು ಮಂದಿ ನಾನಾ ಕಡೆ ಸಾವಿಗೀಡಾಗಿದ್ದಾರೆ.

KV Prabhakar: ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪ್ರಭಾಕರ್

ಜೀವನೋತ್ಸಾಹಕ್ಕೆ ಪ್ರಕೃತಿಗಿಂತ ದೊಡ್ಡ ಗುರು ಬೇಕಿಲ್ಲ: ಕೆ.ವಿ.ಪ್ರಭಾಕರ್

KV Prabhakar: ಕತ್ತಲಾದ ಮೇಲೆ ಮತ್ತೆ ಬೆಳಕು ಆಗಲೇ ಬೇಕು ಎನ್ನುವುದು ಪ್ರಕೃತಿಯ ನಿಯಮ. ಹಾಗೆಯೇ ಮನುಷ್ಯ ಜೀವನದಲ್ಲೂ ಕಷ್ಟದ ಸಂದರ್ಭಗಳು ಬರಬಹುದು, ಆ ಸಂದರ್ಭಗಳೂ ಅಳಿಸಿ ಹೋಗುತ್ತವೆ ಎನ್ನುವುದರ ಸಂಕೇತ ಇದು ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್ ತಿಳಿಸಿದ್ದಾರೆ.

Sri Guruswamy passes away: ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಲಿಂಗೈಕ್ಯ

Sri Guruswamy passes away: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸಾಲೂರು ಬೃಹನ್ಮಠದ ಹಿರಿಯ ಶ್ರೀ ಗುರುಸ್ವಾಮೀಜಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶ್ರೀಗಳು ಚಿಕಿತ್ಸೆ ಸ್ಪಂದಿಸದ ಹಿನ್ನೆಲೆ ಮಠಕ್ಕೆ ಕರೆತಂದಿದ್ದರು. ಇಂದು ಮುಂಜಾನೆ ಗುರುಸ್ವಾಮೀಜಿ ನಿಧನರಾಗಿದ್ದಾರೆ.

Car Accident: ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ; ಪಿಎಸ್‌ಐ, ಚಾಲಕನಿಗೆ ಗಂಭೀರ ಗಾಯ

ಬಿಳಿಗಿರಿರಂಗನ ಬೆಟ್ಟದಲ್ಲಿ ಸಚಿವ ವೆಂಕಟೇಶ್ ಎಸ್ಕಾರ್ಟ್ ವಾಹನ ಪಲ್ಟಿ

Car Accident: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಚಾಲಕ ಮತ್ತು ಪಿಎಸ್‌ಐ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಬೆಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Bomb Threat: 3 ಗಂಟೆಯೊಳಗೆ ಬ್ಲಾಸ್ಟ್‌! ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್‌ ಬೆದರಿಕೆ

3 ಗಂಟೆಯೊಳಗೆ ಸ್ಫೋಟ- ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್‌ ಬೆದರಿಕೆ

Bomb Threat to DC Office: ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್‌ ಬೆದರಿಕೆ ಬಂದಿದೆ. ಕಚೇರಿಯನ್ನು ಇಂದು ಮಧ್ಯಾಹ್ನ 3ಗಂಟೆಯೊಳಗೆ ಬಾಂಬ್‌ ಇಟ್ಟು ಸ್ಫೋಟಿಸುವುದಾಗಿ ಬೆದರಿಕೆ ಸಂದೇಶವೊಂದು ಬಂದಿದೆ, ಇದರ ಬೆನ್ನಲ್ಲೇ ಪೊಲೀಸರು ಹೈ ಅಲರ್ಟ್‌ ಆಗಿದ್ದಾರೆ.

Harassment Case: ಮಹಿಳಾ ಪಿಎಸ್ಐಯಿಂದ ಕಿರುಕುಳ; ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ

ಮಹಿಳಾ ಪಿಎಸ್ಐಯಿಂದ ಯುವಕನಿಗೆ ಬೆದರಿಕೆ

ಮಹಿಳಾ ಪಿಎಸ್ಐ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ಮದ್ಯದಲ್ಲಿ ಡೊಮ್ಯಾಕ್ಸ್ ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ. ಯುವಕನಿಗೆ ಕೊಳ್ಳೇಗಾಲ ಠಾಣೆಯ ಪಿಎಸ್ಐ ಸುಮಾರು ಒಂದು ವರ್ಷಗಳಿಂದ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

CM Siddaramaiah: ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಸಿಎಂ ಆಗಿದ್ದೇನೆ: ಸಿಎಂ: ಸಿದ್ದರಾಮಯ್ಯ

ಚಾಮರಾಜನಗರಕ್ಕೆ 20 ಸಾರಿ ಬಂದು, ಎರಡು ಬಾರಿ ಸಿಎಂ ಆಗಿದ್ದೇನೆ: ಸಿಎಂ

CM Siddaramaiah: ನೀವು ನನಗೂ ಚಪ್ಪಾಳೆ ತಟ್ಟೋದು, ಸಾಮಾಜಿಕ ನ್ಯಾಯದ ವಿರೋಧಿ ಆಗಿರುವ ಬಿಜೆಪಿಯವರ ಮಾತಿಗೂ ಚಪ್ಪಾಳೆ ತಟ್ಟೋದನ್ನು ನಿಲ್ಲಿಸಿ. ನಮ್ಮ ಪರವಾಗಿ ಇರುವವರು ಯಾರು ಎಂದು ತಿಳಿದು ಆಶೀರ್ವಾದ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

DK Shivakumar: ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ನಮ್ಮ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

ಚಾಮರಾಜನಗರದ ಹಿಂದುಳಿದ ಜಿಲ್ಲೆ ಹಣೆಪಟ್ಟಿ ತೆಗೆಯಲು ಸರ್ಕಾರ ಬದ್ಧ: ಡಿಕೆಶಿ

DK Shivakumar: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ ಎಂದು ತಿಳಿಸಿದ್ದಾರೆ.

Male Mahadeshwara Hills: ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆ

ಮಲೆ ಮಹದೇಶ್ವರ ಲಾಡು ಪ್ರಸಾದಕ್ಕೆ ನಂದಿನಿ ತುಪ್ಪ ಬಳಕೆ

Male Mahadeshwara Hills: ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ, ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸಲು ತೀರ್ಮಾನಿಸಲಾಗಿದೆ.

Male Mahadeshwara Hills: ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

ಮಲೆ ಮಹದೇಶ್ವರ ಬೆಟ್ಟ ಇನ್ನುಮುಂದೆ ಪಾನ ಮುಕ್ತ: ಸಿಎಂ ಘೋಷಣೆ

Male Mahadeshwara Hills: ಇಲ್ಲಿಯವರೆಗೂ ಮಹದೇಶ್ವರ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

Cabinet meeting: ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ; 3647 ಕೋಟಿ ರೂ. ಕಾಮಗಾರಿಗಳಿಗೆ ಸಂಪುಟ ಒಪ್ಪಿಗೆ

ಮೈಸೂರಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ನೀಡಲು ಸಂಪುಟ ಒಪ್ಪಿಗೆ

Cabinet meeting: ಬೆಂಗಳೂರು ಕೇಂದ್ರಿತ ಆಡಳಿತ ಮಾದರಿಗೆ ಬದಲಾಗಿ ಕರ್ನಾಟಕದ ವಿಕೇಂದ್ರೀಕೃತ ಆಡಳಿತ ಮಾದರಿಯನ್ನು ಅಳವಡಿಸಿಕೊಳ್ಳಲು ಉದ್ದೇಶಿಸಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Cabinet meeting: ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಬೇಕು; ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ

ಉಗ್ರರ ದಾಳಿ ಕುರಿತು ಕ್ಯಾಬಿನೆಟ್‌ ಸಭೆಯಲ್ಲಿ ಖಂಡನಾ ನಿರ್ಣಯ

Cabinet meeting: ಉಗ್ರರ ದಾಳಿ ಕುರಿತು ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಗಿದೆ. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಲು ಸಚಿವ ಸಂಪುಟ ನಿರ್ಧರಿಸಿದೆ.

CM Siddaramaiah: ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸಿಎಂ ಸೂಚನೆ

ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಸಿಎಂ ಸೂಚನೆ

CM Siddaramaiah: ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ, ಪಕ್ಷ ಕೊಡುತ್ತದೆ ಎಂದು ತಿಳಿಸಿದ್ದಾರೆ.

Self Harming: ಕೌಟುಂಬಿಕ ಕಲಹ, ಮಕ್ಕಳನ್ನು ಬಾವಿಗೆ ನೂಕಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹ, ಮಕ್ಕಳನ್ನು ಬಾವಿಗೆ ನೂಕಿ ತಾಯಿ ಆತ್ಮಹತ್ಯೆ

ಮೊದಲು ಮಕ್ಕಳನ್ನು ( Children) ಬಾವಿಗೆ ತಳ್ಳಿ ಬಳಿಕ ಸುಶೀಲಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಮೀನಿನ ಮಾಲೀಕ ಬಾವಿಗೆ ನೀರು ತರಲು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮಲೆಮಹದೇಶ್ವರ ಬೆಟ್ಟ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ಮಾಡಿದ್ದಾರೆ. ಮಲೆ ಮಹದೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Male Mahadeshwar hills: ಮಲೆ ಮಹದೇಶ್ವರ ದೇಗುಲದ ಗೋಪುರ ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

ಮಾದಪ್ಪನ ದೇವಸ್ಥಾನದ ಗೋಪುರವನ್ನು ಏರಿ ಆತ್ಮಹತ್ಯೆಗೆ ಯತ್ನಿಸಿದ ಭೂಪ!

Male Mahadeshwar hills: ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಇನ್ನು ಆ ವ್ಯಕ್ತಿಯನ್ನು ಪ್ರಾಧಿಕಾರದ ಸಿಬ್ಬಂದಿ ರಕ್ಷಿಸಿದ್ದಾರೆ. ಇನ್ನು ಈ ಘಟನೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ.

Pramoda Devi Wadiyar: ಮೈಸೂರು ರಾಜರಿಗೆ ಸೇರಿದ 4,500 ಎಕರೆ ಭೂಮಿ ಖಾತೆ ಮಾಡಿಕೊಡಲು ಪ್ರಮೋದಾದೇವಿ ಪತ್ರ

ಮೈಸೂರು ರಾಜರ ಆಸ್ತಿ ಖಾತೆ ಮಾಡಿಕೊಡಲು ಪ್ರಮೋದಾದೇವಿ ಪತ್ರ

Pramoda Devi Wadiyar: 4500 ಎಕರೆಗೂ ಹೆಚ್ಚು ಭೂಮಿ ಮೈಸೂರು ಮಹಾರಾಜರ ಸ್ವತ್ತು ಎಂದು ಪ್ರಮೋದಾದೇವಿ ಒಡೆಯರ್ ಪತ್ರ ಬರೆದಿದ್ದಾರೆ. ಈ ಭೂಮಿಯಲ್ಲಿ ದುರಸ್ತಿ, ಕಂದಾಯ ಗ್ರಾಮವಾಗಿ ಪರಿವರ್ತನೆ ಹಾಗೂ ಇನ್ನಿತರೆ ವಹಿವಾಟು ಮಾಡದಂತೆ ರಾಜಮಾತೆ ಪ್ರಮೋದಾದೇವಿ ತರಕಾರು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.