ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಿಕ್ಕಬಳ್ಳಾಪುರ

Chinthamani News: ನಾಯಂದ್ರಹಳ್ಳಿಯಲ್ಲಿ ಎಂ.ಎಸ್.ಡಬ್ಲ್ಯೂ ಗ್ರಾಮೀಣ ಕಲಿಕಾ ಶಿಬಿರಕ್ಕೆ ಚಾಲನೆ

ನಾಯಂದ್ರಹಳ್ಳಿಯಲ್ಲಿ ಎಂ.ಎಸ್.ಡಬ್ಲ್ಯೂ ಗ್ರಾಮೀಣ ಕಲಿಕಾ ಶಿಬಿರಕ್ಕೆ ಚಾಲನೆ

ಸ್ವಸಹಾಯ ಸಂಘಗಳು, ಮಹಿಳಾ ಸಂಘಟನೆಗಳು ಮತ್ತು ಸರ್ಕಾರದ ವಿವಿಧ ಯೋಜನೆಗಳು ಮಹಿಳೆ ಯರ ಜೀವನ ಭದ್ರತೆಯನ್ನು ಬಲಪಡಿಸಲು ಪ್ರಯತ್ನಿಸುತ್ತಿವೆ. ಮಹಿಳೆಯರಿಗೆ ಸ್ವಯಂ ಉದ್ಯೋಗ, ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಆರ್ಥಿಕ ನೆರವು ನೀಡುವ ಮೂಲಕ ಅವರ ಜೀವನ ಮಟ್ಟ ಸುಧಾರಿಸುವ ಪ್ರಯತ್ನಗಳು ನಡೆಯುತ್ತಿವೆ. ಇದನ್ನು ಎಲ್ಲಾ ಮಹಿಳೆಯರು ಉಪಯೋಗಪಡಿಸಿಕೊಂಡು ಮುಂದಕ್ಕೆ ಸಾಗಬೇಕಿದೆ

MLA Subbareddy: ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಇರೋದು ಖಚಿತ ಎಂದ ಶಾಸಕ ಸುಬ್ಬಾರೆಡ್ಡಿ

ಎರಡನೇ ಪಟ್ಟಿಯಲ್ಲಿ ನನ್ನ ಹೆಸರು ಇರೋದು ಖಚಿತ ಎಂದ ಶಾಸಕ ಸುಬ್ಬಾರೆಡ್ಡಿ

ನಾನು ಪಕ್ಷದ ಶಿಸ್ತಿನ ಸಿಪಾಯಿ. ಸತತವಾಗಿ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸಿದ್ದೇನೆ. ಜೊತೆಗೆ ಪಕ್ಷದ ಬಲವರ್ಧನೆಯಲ್ಲೂ ಮುಂದಿದ್ದೇನೆ. ಡಿ.ಕೆ.ಶಿವಕುಮಾರ್‌ʼ ರವರು ಮುಖ್ಯಮಂತ್ರಿಯಾಗುವ ಸಮಯದಲ್ಲಿ ನಾನು ಸಹ ವರಿಷ್ಟರಲ್ಲಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದೆ. ಆಗ ಅವರು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು.

Dr.M.C.Sudhakar: ಡಾ.ಎಂ.ಸಿ.ಸುಧಾಕರ್ ಹಾಗೂ ಜಮೀರ್ ಅಹಮದ್ ಬೆನ್ನಿಗೆ ನಿಂತ ಕೈವಾರ ಗ್ರಾಮದ ಮುಖಂಡರು: ಸೂಕ್ತ ಸ್ಥಾನಮಾನಕ್ಕೆ ಆಗ್ರಹ

ಡಾ.ಎಂ.ಸಿ.ಸುಧಾಕರ್, ಜಮೀರ್ ಅಹಮದ್ ಬೆನ್ನಿಗೆ ನಿಂತ ಮುಖಂಡರು

ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಭಾವಿ ನಾಯಕರಾಗಿರುವ ಬಿ.ಜೆಡ್.ಜಮೀರ್ ಅಹಮದ್ ಖಾನ್ ಅವರು ಇಡೀ ರಾಜ್ಯಾದ್ಯಂತ ಸಂಚರಿಸಿ, ಪಕ್ಷದ ಪರವಾಗಿ ಭರ್ಜರಿ ಪ್ರಚಾರ ನಡೆಸಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಸೂಕ್ತ,ಎಂದು ಹಕ್ಕೊತ್ತಾಯ ಮಾಡಿದರು

Sandalwood Actor Shivraj Kumar: ಸೀಕಲ್ ಗ್ರಾಮಕ್ಕೆ ನಟ ಶಿವಣ್ಣ ದಂಪತಿ ಭೇಟಿ

ಸೀಕಲ್ ಗ್ರಾಮಕ್ಕೆ ನಟ ಶಿವಣ್ಣ ದಂಪತಿ ಭೇಟಿ

ಅಧಿಕ ಮಾಸದಲ್ಲಿ ಲೋಕ ಕಲ್ಯಾಣಕ್ಕಾಗಿ ಚಂಡಿಕಾ ಹೋಮ ಮತ್ತು ಶ್ರೀಸತ್ಯನಾರಾಯಣಸ್ವಾಮಿ ಪೂಜೆ ನೆರವೇರಿಸಲಾಗಿದೆ. ಸಕಾಲಕ್ಕೆ ಮಳೆ ಬೆಳೆ ಸಮಸ್ತ ಜನರು ಸುಖ ಶಾಂತಿ ನೆಮ್ಮದಿಯಿಂದ ಬಾಳಲಿ ಎಂದು ದೇವರನ್ನು ಮೊರೆ ಹೋಗಿದ್ದೇವೆ. ಕಾರ್ಯಕ್ರಮದಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇ ಗೌಡ( Chamundeshwari MLA GT Deve Gowda) ,ನಟ ಶಿವರಾಜ್ ಕುಮಾರ್ ದಂಪತಿ ಮತ್ತು ಖ್ಯಾತ ಜ್ಯೋತಿಷಿ ಆನಂದ್ ಗುರೂಜಿ ಭಾಗವಹಿಸಿದ್ದಾರೆ

Zameer Ahmed Khan: ಜಮೀರ್ ಅಹಮದ್ ಖಾನ್ʼಗೆ ಡಿಸಿಎಂ ನೀಡದಿದ್ದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಷ್ಟ

ಜಮೀರ್ ಅಹಮದ್ ಖಾನ್ʼಗೆ ಡಿಸಿಎಂ ನೀಡದಿದ್ದರೆ ಪಕ್ಷಕ್ಕೆ ನಷ್ಟ

ಸಚಿವ ಸಂಪುಟದಲ್ಲಿ ಜಮೀರ್ ಅಹಮದ್ ಖಾನ್ ಅವರು ವಸತಿ ಮತ್ತು ವಾಕ್ಫ್ ಸಚಿವರಾಗಿ ಉತ್ತಮವಾಗಿ ಕೆಲಸ ಮಾಡುವುದರ ಜೊತೆಗೆ, ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟುವಂತಹ ಕೆಲಸ ಮಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದವರು ಇಂದು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ ಎಂದರೆ, ಅದಕ್ಕೆ ಮೂಲ ಕಾರಣ, ಜಮೀರ್ ಅವರು. ಆದ್ದರಿಂದ ಅವರನ್ನು ಕಡ್ಡಾಯವಾಗಿ ಸಚಿವರನ್ನಾಗಿ ಮಾಡಬೇಕು. ಅವರಿಗೆ ಉತ್ತಮ ಖಾತೆ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಿ ಕೊಡಬೇಕು ಎಂದರು.

Chikkaballapur News: ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ರೈತರಿಗೆ ರಸಗೊಬ್ಬರಗಳನ್ನು ನೀಡಲು ಮುಂದಾಗಬೇಕು: ಯಲುವಹಳ್ಳಿ ಸೊಣ್ಣೇಗೌಡ ಆಗ್ರಹ

ಕೇಂದ್ರ ರಿಯಾಯಿತಿ ದರದಲ್ಲಿ ರಸಗೊಬ್ಬರಗಳನ್ನು ನೀಡಲು ಮುಂದಾಗಬೇಕು

ಪ್ರಸ್ತುತ ರಸಗೊಬ್ಬರಗಳ ಬೆಲೆಯು ಅತ್ಯಂತ ದುಬಾರಿಯಾಗಿರುವುದು ರೈತರಿಗೆ ತೀವ್ರ ತೊಂದರೆ ಯಾಗಿದೆ. ಕೇಂದ್ರ ಸರ್ಕಾರ ಈ ಕೂಡಲೇ ರಸಗೊಬ್ಬರಗಳನ್ನು ರಿಯಾಯ್ತಿ ದರದಲ್ಲಿ ರೈತರಿಗೆ ನೀಡಲು ಕ್ರಮಕೈಗೊಳ್ಳಬೇಕು. ಹನಿ ನೀರಾವರಿ ಯಾಂತ್ರೀಕರಣ ಸಲಕರಣೆಗಳ ಮೇಲೆ ವಿಧಿಸು ತ್ತಿರುವ ಜಿ.ಎಸ್.ಟಿ ತೆರಿಗೆಯನ್ನು ಈ ಕೊಡಲೇ ರದ್ದುಪಡಿಸಬೇಕು ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ ಆಗ್ರಹಿಸಿದರು

Self Harming in Bus: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ತಾಲ್ಲೂಕಿನ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ ನಿರ್ಮಲಾ ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬೆಂಗಳೂರಿನಿದ ಚಿಕ್ಕಬಳ್ಳಾಪುರಕ್ಕೆ ತೆರಳುವ ಬಸ್ ಹತ್ತಿದ್ದರು. ಬಸ್‌ನಲ್ಲಿ ಕುಳಿತುಕೊಳ್ಳುತ್ತಿದ್ದಂತೆ ವಿಷ ಸೇವಿಸಿದ್ದಾರೆ. ಇದನ್ನು ಗಮನಿಸಿದ ಸಹ ಪ್ರಯಾಣಿಕರು ನಿರ್ವಾಹಕ ನಿಗೆ ವಿಷಯ ತಿಲಿಸಿದ್ದಾರೆ. ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ನಿರ್ವಾಹಕ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ.

ಚದಲಪುರ ಗವಿಗಾನಹಳ್ಳಿ ರಸ್ತೆಯಲ್ಲಿರುವ ಗೋದಾಮಿನ ಮೇಲೆ ದಾಳ: ರಸಗೊಬ್ಬರದ ಅಕ್ರಮ ದಾಸ್ತಾನು ಪತ್ತೆ

ಚದಲಪುರ ಗವಿಗಾನಹಳ್ಳಿ ರಸ್ತೆಯಲ್ಲಿರುವ ಗೋದಾಮಿನ ಮೇಲೆ ದಾಳ

ಯೂರಿಯಾ ಸೇರಿದಂತೆ ಯಾವುದೇ ರೀತಿಯ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಕೈಗಾರಿಕಾ ಉದ್ದೇಶಕ್ಕೆ ಬಳಕೆ ಮಾಡುವುದು ಕಾನೂನು ಬಾಹಿರವಾಗಿದ್ದು ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಜರುಗದಂತೆ ಕಟ್ಟೆಚ್ಚರದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಫ್ರೂಟ್ ಐಡಿ ಆಧಾರದ ಮೇಲೆ ನಿಯಮಾ ವಳಿಯಂತೆ ರೈತರಿಗೆ ರಸಗೊಬ್ಬರ ವಿತರಣೆ ಮಾಡಬೇಕು ಎಂದರು

MLA Pradeep Eshwar: 3 ಕೋಟಿ ವೆಚ್ಚದ ನಾಗರಭಾವಿ ದೇವಕೊಂಡಹಳ್ಳಿ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಪ್ರದೀಪ್ ಈಶ್ವರ್ ಅವರಿಂದ ಚಾಲನೆ

ಬಿಎಂಟಿಸಿ ಬಸ್ ಸೌಕರ್ಯ ಒದಗಿಸಲು ಶಾಸಕರ ಅಭಯ

ಅಭಿವೃದ್ದಿ ಕಾಮಗಾರಿಗೆ ಚಾಲನೆ ನೀಡುವ ಮುನ್ನ ಬೆಳಂಬೆಳಗ್ಗೆಯೇ ದಲಿತರೇ ಹೆಚ್ಚಾಗಿ ವಾಸಿಸುವ ನಾಗರಬಾವಿ ಮತ್ತು ದೇವರಕೊಂಡಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿದ್ದ ಶಾಸಕ ಪ್ರದೀಪ್ ಈಶ್ವರ್ ಅವರು ಗ್ರಾಮಗಳಲ್ಲಿ ಸಂಚರಿಸಿ ಜನರಿಂದ ಅಹವಾಲು ಆಲಿಸಿದರು. ಗ್ರಾಮದ ಪ್ರತಿಯೊಂದು ಮನೆ ಮನೆಗೂ ಭೇಟಿ ನೀಡಿದ್ದ ಶಾಸಕರು ಅವರ ಮನೆಯ ಬಳಿಯೇ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು

Chikkaballapur News: ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಿದ ಡಾ.ಕೆ.ಸುಧಾಕರ್

ವಿದ್ಯಾರ್ಥಿಗಳಿಗೆ ಬಂಪರ್ ಕೊಡುಗೆ ನೀಡಿದ ಡಾ.ಕೆ.ಸುಧಾಕರ್

ವಿದ್ಯಾರ್ಥಿಗಳ ಮತ್ತು ಯುವಕರ ಶಿಕ್ಷಣ ಗುಣಮಟ್ಟವನ್ನು ವೃದ್ಧಿಗೊಳಿಸುವ ಮತ್ತು ಶಾಲಾ ಕಾಲೇಜು ಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್, ನೋಟ್ ಪುಸ್ತಕಗಳು, ಮೆರಿಟ್ ಸ್ಕಾಲರ್‌ಶಿಪ್, ಉನ್ನತ ಶಿಕ್ಷಣಕ್ಕೆ ನೆರವು. ಕೋವಿಡ್ ಸಂದರ್ಭದಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆದು ಅವರಿಗೆ ನಿರಂತರ ಪೂರ್ಣಾವಧಿಯ ಶಿಕ್ಷಣದ ಅವಕಾಶಗಳನ್ನು ಕಲ್ಪಿಸಿ ನೈತಿಕ ಬೆಂಬಲ ನೀಡಲಾಗಿದೆ

Shidlaghatta News: ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ನಡೆದ ಶ್ರೀರಾಮ ಶೋಭಾಯಾತ್ರೆ

ಶಿಡ್ಲಘಟ್ಟದಲ್ಲಿ ಅದ್ದೂರಿಯಾಗಿ ನಡೆದ ಶ್ರೀರಾಮ ಶೋಭಾಯಾತ್ರೆ

ಶೋಭಾಯಾತ್ರೆಯಲ್ಲಿ ಮಹಿಳೆಯರು, ಯುವಕರು, ಹಿರಿಯ ನಾಗರಿಕರು ಹಾಗೂ ಮಕ್ಕಳು ಸೇರಿದಂತೆ ಸಾವಿರಾರು ಭಕ್ತರು ಭಾಗವಹಿಸಿ "ಜೈ ಶ್ರೀರಾಮ" ಘೋಷಣೆಗಳನ್ನು ಮೊಳಗಿಸಿದರು. ಮಹಿಳೆಯರು ಪೂರ್ಣಕುಂಭ, ಆರತಿ ಹಾಗೂ ಭಜನೆಗಳ ಮೂಲಕ ಕಾರ್ಯಕ್ರಮಕ್ಕೆ ಮೆರುಗು ತಂದರೆ, ಯುವಕರು ಡೊಳ್ಳು ಕುಣಿತ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಂಭ್ರಮ ಹೆಚ್ಚಿಸಿದರು.

Seekal Ramachandragowda: 2028ಕ್ಕೆ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಎಂಎಲ್‌ಎ ಇರಲಿದ್ದಾರೆ : ಸೀಕಲ್ ರಾಮಚಂದ್ರಗೌಡ ಭರವಸೆ

2028ಕ್ಕೆ ಶಿಡ್ಲಘಟ್ಟ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಎಂಎಲ್‌ಎ

ದೇಶದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯ ವೇದಿಕೆಗಳಲ್ಲಿ ಕೂಡ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರ ವರ್ಚಸ್ಸು ಕೆಲಸ ಮಾಡುತ್ತಿರುವುದನ್ನು ನೋಡಿ ಭಾರತೀಯರು ಬಿಜೆಪಿ ಪಕ್ಷವನ್ನು ಹರಸಿ ಹಾರೈಸಿದ್ದಾರೆ. ಇದೇ ಕಾರಣವಾಗಿ ಮೂರನೇ ಅವಧಿಗೂ ಕೂಡ ಅವರು ಪ್ರಧಾನಿಯಾಗಿ ಮುಂದುವರೆಯುವ ಮೂಲಕ ದೇಶವನ್ನು ಸಂಕಷ್ಟ ದಿಂದ ಪಾರು ಮಾಡಿದ್ದಾರೆ.

Chikkaballapur News: ಪಿಯು ಉಪನ್ಯಾಸಕ ಸಂಘದ ಚುನಾವಣೆ: ಅಧ್ಯಕ್ಷರಾಗಿ ಡಾ.ಸಿ.ಶಂಕರಪ್ಪ ಪ್ರ.ಕಾರ್ಯದರ್ಶಿ ಮಧುಸೂಧನ್ ಆಯ್ಕೆ

ಅಧ್ಯಕ್ಷರಾಗಿ ಡಾ. ಸಿ.ಶಂಕರಪ್ಪ ಪ್ರ.ಕಾರ್ಯದರ್ಶಿ ಮಧುಸೂಧನ್ ಆಯ್ಕೆ

ನಗರದ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಭಾನುವಾರ ನಡೆದ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟು 125 ಮತಗಳ ಪೈಕಿ 119 ಮತಗಳು ಚಲಾವಣೆ ಆಗಿದ್ದವು. ಇದರಲ್ಲಿ ಡಾ.ಬಸವರಾಜ್ ಹೆಚ್.ಚಿಕ್ಕಣಜಿ 49 ಮತಗಳನ್ನು ಪಡೆದರೆ ಡಾ.ಶಂಕರಪ್ಪ ಅವರು 68 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆ ಯಾದರು.

MLA S.N. Subbareddy: ಸರ್ಕಾರಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ : ರೈತರಿಗೆ ಶಾಸಕ ಸುಬ್ಬಾರೆಡ್ಡಿ ಕರೆ

ಸರ್ಕಾರಿ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಿ

ರೈತರನ್ನು ಆರ್ಥಿಕವಾಗಿ ಅಭಿವೃದ್ದಿ ಹೊಂದಲು ಸರ್ಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ರೈತರು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ರಿಯಾಯತಿ ದರದಲ್ಲಿ ಕೃಷಿ ಹಾಗೂ ಕೃಷಿ ಸಂಬAಧಿತ ಇಲಾಖೆಗಳ ಮೂಲಕ ಕೃಷಿ ಯಾಂತ್ರೀಕರಣ, ಹನಿ ನೀರಾವರಿ, ತುಂತುರು ನೀರಾವರಿ, ರಿಯಾಯತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಹೀಗೆ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದೆ.

Gudibande News: ಆಧುನಿಕತೆ, ನಗರೀಕರಣ ಹೆಸರಿನಲ್ಲಿ ಪರಿಸರ ನಾಶ ಸರಿಯಲ್ಲ: ನ್ಯಾ.ಪ್ರೇಮ್ ಕುಮಾರ್

ಆಧುನಿಕತೆ, ನಗರೀಕರಣ ಹೆಸರಿನಲ್ಲಿ ಪರಿಸರ ನಾಶ ಸರಿಯಲ್ಲ

ಪ್ರಪಂಚ ದಿನೇ ದಿನೇ ವೇಗವಾಗಿ ಬೆಳೆಯುತ್ತಿದೆ. ಈ ಹಿಂದೆ ಸಾಕಷ್ಟು ಅರಣ್ಯ ಪ್ರದೇಶವನ್ನು ನಾವು ಕಾಣುತ್ತಿದ್ದೆವು. ಇದೀಗ ಎಲ್ಲಿ ನೋಡಿದರೂ ಕಟ್ಟಡಗಳು ಕಾಣಿಸುತ್ತವೆ. ಪರಿಸರ ನಾಶದಿಂದ ಈಗಾಗಲೇ ನಾವು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಈಗಲಾದರೂ ನಾವು ಎಚ್ಚೆತ್ತುಕೊಂಡು ಪರಿಸರ ಕಾಪಾಡುವ ಕಾರ್ಯಕ್ಕೆ ಮುಂದಾಗಬೇಕು.

World Environment Day: ಕಾಂಗ್ರೆಸ್ ಸರ್ಕಾರದ ವಿರುದ್ಧ ಸೀಕಲ್ ರಾಮಚಂದ್ರಗೌಡ ವಾಗ್ದಾಳಿ; ಜಂಗಮಕೋಟೆ ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ

ಕಾಂಗ್ರೆಸ್ ಸರ್ಕಾರದ ವಿರುದ್ಧ ಸೀಕಲ್ ರಾಮಚಂದ್ರಗೌಡ ವಾಗ್ದಾಳಿ

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ಪ್ರತಿಯೊಂದು ಮನೆಯಲ್ಲೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಉಳಿವಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರ ತಾಯಂದಿರ ಹೆಸರಿನಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.

MLA KH Puttaswamy Gowda: ರೈತನಿಗೆ ಆಸರೆಯಾಗಿ ನಿಲ್ಲಬೇಕು ಎಂಬ ಉದ್ದೇಶದಿಂದ ಇಂದು ಫಲಾನುಭವಿಗಳ ಬೃಹತ್ ಸಮಾವೇಶ : ಶಾಸಕ ಪುಟ್ಟಸ್ವಾಮಿಗೌಡ

ರೈತನಿಗೆ ಆಸರೆಯಾಗಿ ನಿಲ್ಲಬೇಕು ಎಂಬ ಉದ್ದೇಶದಿಂದ ಇಂದು ಸಮಾವೇಶ

ಕೃಷಿ ಚಟುವಟಿಕೆಗಳಿಗೆ ನೆರವಾಗಲು ಸರ್ಕಾರದ ಸಹಾಯಧನದಲ್ಲಿ ಕೃಷಿ ಇಲಾಖಾ ವತಿಯಿಂದ ಟ್ರ‍್ಯಾಕ್ಟರ್, ಉಳಿಮೆ ಯಂತ್ರ,ಕಳೆ ನಾಶಕ ಯಂತ್ರ,ರೈತರ ಬೆಳೆಗಳಿಗೆ ನೆರವಾಗಲು ಹನಿ ನೀರಾವರಿ ಉಪಕರಣಗಳು, ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಕೊಳವೆ ಬಾವಿಗಳಿಂದ ನೀರೆತ್ತಲು ಪಂಪು ಮೋಟಾರು, ಕೇಬಲ್, ಪೈಪು ,ವಿದ್ಯುತ್ ಉಪಕರಣಗಳನ್ನು ನೀಡಲಾಗುತ್ತಿದೆ. ಇದರ ಜೊತೆಗೆ ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸಹಾಯಧನ ನೀಡಲಾಗುತ್ತಿದೆ

Krishna Byre Gowda: ಕಂದಾಯ ಖಾತೆಯಲ್ಲೇ ಕೃಷ್ಣಬೈರೇಗೌಡರನ್ನು ಮುಂದುವರೆಸಲು ಕೃಷಿಕ ಸಮಾಜ ಒತ್ತಾಯ

ಕಂದಾಯ ಖಾತೆಯಲ್ಲೇ ಕೃಷ್ಣಬೈರೇಗೌಡರನ್ನು ಮುಂದುವರೆಸಲು ಒತ್ತಾಯ

ಬಹಳ ವರ್ಷಗಳಿಂದ ಕುಂಠಿತಗೊಂಡಿದ್ದ, ಫೌತಿ ಖಾತೆ, ಪಿ.ನಂಬರ್ ದುರಸ್ತಿ, ಕಂದಾಯ ಗ್ರಾಮ, ಗ್ರಾಮ ಠಾಣೆಗಳ ರಚನೆ, ಬಹಳ ಮುಖ್ಯವಾಗಿ,ರೈತರ ದಾಖಲೆಗಳ ಡಿಜಿಟಲೀಕರಣ ಮುಂತಾದ ಕಾರ್ಯಗಳನ್ನು ಬಹಳ ವ್ಯವಸ್ಥಿತವಾಗಿ ಮಾಡಿರುವುದರಿಂದ ರೈತ ಸಮುದಾಯಕ್ಕೆ ಅನುಕೂಲ ವಾಗಿತ್ತು. ತಮ್ಮ ದಾಖಲೆ ಗಳಿಗಾಗಿ ರೈತರು ಕಚೇರಿಗೆ ಅಲೆಯುವುದನ್ನು ತಪ್ಪಿಸಿ ಬೆರಳ ತುದಿಯಲ್ಲೇ ಎಲ್ಲಾ ದಾಖೆಗಳು ಸಿಗುವಂತೆ ಮಾಡುವಲ್ಲಿ ಕೃಷ್ಣ ಬೈರೇಗೌಡರು ಪ್ರಗತಿ ಸಾಧಿಸಿದ್ದರು.

Gauribidanur News: ತೀರ್ಥಶಾಲೆಯಲ್ಲಿ ಡಾ.ಮಾಸ್ತಿ ಮತ್ತು ಡಾ.ಎಚ್.ನರಸಿಂಹಯ್ಯ ಜಯಂತಿ

ತೀರ್ಥಶಾಲೆಯಲ್ಲಿ ಡಾ.ಮಾಸ್ತಿ ಮತ್ತು ಡಾ.ಎಚ್.ನರಸಿಂಹಯ್ಯ ಜಯಂತಿ

ಡಾ.ಹೆಚ್.ನರಸಿಂಹಯ್ಯನವರ ಸರಳ ಮತ್ತು ಆದರ್ಶ ಜೀವನದ ಮೌಲ್ಯಗಳನ್ನು ನಾವು ಅಳವಡಿಸಿ ಕೊಳ್ಳಬೇಕು. ಸಾಹಿತ್ಯ ವಿಜ್ಞಾನ, ಶಿಕ್ಷಣ ಮತ್ತು ಲಲಿತ ಕಲೆಗಳಿಗೆ ಇವರು ನೀಡಿರುವ ಕೊಡುಗೆ ಅನನ್ಯವಾಗಿದೆ. ಪ್ರತಿಯೊಂದು ಶಾಲಾ ಕಾಲೇಜು, ಸರ್ಕಾರಿ ಕಚೇರಿ ಮತ್ತುಸಂಘ ಸಂಸ್ಥೆಗಳಲ್ಲಿ ಇವರ ಹುಟ್ಟುಹಬ್ಬವನ್ನು ರಾಜ್ಯಮಟ್ಟದಲ್ಲಿ ಆಚರಿಸಬೇಕೆಂದು ಸರ್ಕಾರಕ್ಕೆ ವಿನಂತಿಸಿದರು.

Chikkaballapur News: ಶಿಸ್ತು, ಸಂಯಮಗಳೇ ವಿದ್ಯಾರ್ಥಿ ಜೀವನದ ಯಶಸ್ಸಿಗೆ ಭದ್ರ ಬುನಾದಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ವಿ.ವೆಂಕಟೇಶ್ ಅಭಿಮತ

ಶಿಸ್ತು, ಸಂಯಮಗಳೇ ವಿದ್ಯಾರ್ಥಿ ಜೀವನದ ಯಶಸ್ಸಿಗೆ ಭದ್ರ ಬುನಾದಿ

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರದತ್ತ ಹೆಚ್ಚಿನ ಗಮನ ಹರಿಸು ವುದರ ಜೊತೆಗೆ ಪರ್ಯಾಯ ಅವಕಾಶಗಳನ್ನೂ ಸದುಪಯೋಗಪಡಿಸಿಕೊಳ್ಳಬೇಕು. ಕೇವಲ ಪದವಿ ಪಡೆದರೆ ಸಾಕಾಗುವುದಿಲ್ಲ, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ತಮ್ಮ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು. ಸಾಧನೆ ಮಾಡುವ ಮೂಲಕ ಕಾಲೇಜು ಹಾಗೂ ಜಿಲ್ಲೆಯ ಹೆಸರನ್ನು ಉಜ್ವಲ ಗೊಳಿಸಬೇಕು

MLA B.Z.Zameer Ahmed Khan: ಜಮೀರ್ ಅಹ್ಮದ್ ಖಾನ್ ಅವರಿಗೆ ಡಿಸಿಎಂ ಹುದ್ದೆ ಸೇರಿ: ಐವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಜಮೀರ್ ಅವರಿಗೆ ಡಿಸಿಎಂ ಹುದ್ದೆ ಸೇರಿ: ಐವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ನಗರದ ಜಾಮಿಯಾ ಮಸೀದಿ ಎದುರು ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಬಾಂಧವರು, ನೂತನ ಸಚಿವ ಸಂಪುಟದ ಮೊದಲ ಪಟ್ಟಿಯಲ್ಲಿ ಕೇವಲ ಒಬ್ಬ ಮುಸ್ಲಿಂ ಶಾಸಕರಿಗೆ ಮಾತ್ರ ಸ್ಥಾನ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಜಮೀರ್ ಅಹ್ಮದ್ ಖಾನ್, ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಸೇರಿದಂತೆ ಒಟ್ಟು ಐದು ಮುಸ್ಲಿಂ ಪ್ರತಿನಿಧಿಗಳಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

Calling off the Hunger Strike: ನಿರಾಹಾರ ಉಪವಾಸ ಸತ್ಯಾಗ್ರಹ ನಿರತ ರೈತರ ಮನವೊಲಿಕೆ ಮಾಡಿದ ಜಿಲ್ಲಾಧಿಕಾರಿ

ಹಾಲು ಕುಡಿಸುವ ಮೂಲಕ ಉಪವಾಸ ಸತ್ಯಾಗ್ರಹ ವಾಪಸ್ಸು ಮಾಡುವಲ್ಲಿ ಸಫಲ

ಜಿಲ್ಲಾಡಳಿತ ಭವನದ ಎದುರು ಕೆಐಎಡಿಬಿಗೆ ಭೂಮಿ ಕೊಡಲು ಸಿದ್ಧವಿರುವ 13 ಹಳ್ಳಿಗಳ ರೈತರು ಕಳೆದ 77 ದಿನಗಳಿಂದ ಪ್ರತಿಭಟನೆ ನಡೆಸುತ್ತಾ ಸರಕಾರದ ನಡೆ ಕಾಯುತ್ತಾ ಕೂತಿದ್ದರು. ಜಿಲ್ಲಾಡಳಿತವು ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ, ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಬೇಸರಿಸಿ ಶುಕ್ರವಾರದಿಂದ ನಿರಾಹಾರ ಉಪವಾಸ ಕೈಗೊಂಡಿದ್ದರು.

MLA Pradeep Eshwar: ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯತಿ ಜನತೆಯ ಅಹವಾಲು ಆಲಿಸಿದ ಶಾಸಕ ಪ್ರದೀಪ್ ಈಶ್ವರ್

ಕಮ್ಮಗುಟ್ಟಹಳ್ಳಿ ಗ್ರಾಪಂ ಜನತೆಯ ಅಹವಾಲು ಆಲಿಸಿದ ಶಾಸಕ ಪ್ರದೀಪ್ ಈಶ್ವರ್

ಹಲವು ತಿಂಗಳ ನಂತರ ನಮ್ಮ ಊರಿಗೆ ನಮ್ಮ ಶಾಸಕ(Our MLA for our town) ಕಾರ್ಯ ಕ್ರಮದಡಿ ಶುಕ್ರವಾರ ತಾಲ್ಲೂಕಿನ ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಮಿಲು ಗುರ್ಕಿ, ವಕ್ರಹಳ್ಳಿ ಮತ್ತು ಜೀಗಾನಹಳ್ಳಿ ಗ್ರಾಮಗಳಿಗೆ ೩೬ ಇಲಾಖೆಗಳ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದು ಗ್ರಾಮದ ಜನತೆಯ ಅಹವಾಲು ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ದರು.

ಜಂಗಮಕೋಟೆ ಹೋಬಳಿಯಲ್ಲೇ ಕೈಗಾರಿಕೆ ಸ್ಥಾಪಿಸಬೇಕು ಎಂದು ಉಪವಾಸ ಸತ್ಯಾಗ್ರಹ

ಜಂಗಮಕೋಟೆ ಹೋಬಳಿಯಲ್ಲೇ ಕೈಗಾರಿಕೆ ಸ್ಥಾಪಿಸಬೇಕು ಎಂದು ಉಪವಾಸ ಸತ್ಯಾಗ್ರಹ

76 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಜಿಲ್ಲಾಡಳಿತ ನಮ್ಮ ಬೇಡಿಕೆಗಳಿಗೆ ಸ್ಪಂದನೆ ತೋರಿಲ್ಲ. ನಮ್ಮದು ಬಡವರ ಪರವಾದ ಹೋರಾಟವಾಗಿದೆ. ಇಲ್ಲಿಗೆ ಬಂದರೆ ಯಾವ ಲಾಭವೂ ಆಗುವುದಿಲ್ಲ. ಆದರೆ ರಿಯಲ್ ಎಸ್ಟೇಟ್ ಪರವಾಗಿ ಪ್ರತಿಭಟನೆ ನಡೆಸುತ್ತಿರುವ ಮತ್ತೊಂದು ರೈತಸಂಘದ ವೇದಿಕೆಗೆ ಹತ್ತಾರುಬಾರಿ ಹೋಗಿ ಅಹವಾಲು ಆಲಿಸು ತ್ತಾರೆ. ಅವರಿಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಡುತ್ತಾರೆ

Loading...