ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಿಕ್ಕಬಳ್ಳಾಪುರ

Chhattisgarh Chief Minister Vishnu Dev Sai: ಸದ್ಗುರುಗಳ ಸೇವೆ ದೇಶಕ್ಕೇ ಮಾದರಿ: ವಿಷ್ಣು ದೇವ್ ಸಾಯಿ: ಅಂತಾರಾಷ್ಟ್ರೀಯ ಮೌಲ್ಯ ಶಿಕ್ಷಣ ಸಮ್ಮೇಳನದಲ್ಲಿ ಛತ್ತೀಸ್‌ಗಢ ಮುಖ್ಯಮಂತ್ರಿ ಭಾಗಿ

ಸದ್ಗುರುಗಳ ಸೇವೆ ದೇಶಕ್ಕೇ ಮಾದರಿ: ವಿಷ್ಣು ದೇವ್ ಸಾಯಿ

ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಪ್ರೀತಿ, ಕರುಣೆ ಮತ್ತು ಸೇವೆಯ ಪರಂಪರೆಯನ್ನು ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಅತ್ಯಂತ ಯಶಸ್ವಿಯಾಗಿ  ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.  ಭಾರತೀಯ ಗುರು-ಶಿಷ್ಯ ಪರಂಪರೆಯ ಮೌಲ್ಯಗಳನ್ನು ಜಗತ್ತಿಗೆ ಪರಿಚಯಿಸುವ ಮಹತ್ತರ ಕಾರ್ಯವನ್ನು ಅವರು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿಂತಾಮಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೆಜಿಗೂ ಹೆಚ್ಚು ಗಾಂಜಾ ಸಹಿತ ಇಬ್ಬರು ಆರೋಪಿಗಳು ವಶಕ್ಕೆ

ಎನ್‌ಎನ್‌ಟಿ ವೃತ್ತದ ಬಳಿ ಗಾಂಜಾ ಮಾರಾಟ ಯತ್ನ

ಬಂಧಿತ ಆರೋಪಿಗಳನ್ನು ಶ್ರೀನಿವಾಸ್ (19 ವರ್ಷ)ಮೂಲತಃ ಬೆಂಗಳೂರು ರೋಜಾ(40 ವರ್ಷ) ಎಂದು ಗುರುತಿಸಲಾಗಿದೆ. ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆ ಗಳ ತಡೆಗೆ ಗಸ್ತು ತಿರುಗುತ್ತಿದ್ದ ಪೊಲೀಸರಿಗೆ, ಬೆಳಿಗ್ಗೆ ಸುಮಾರು 11:30 ರ ವೇಳೆಗೆ ಬಾತ್ಮೀದಾರರಿಂದ ಖಚಿತ ಮಾಹಿತಿ ದೊರೆತಿತ್ತು.

Chikkaballapur News: ಚಿಕ್ಕಬಳ್ಳಾಪುರದಲ್ಲಿ ಕೃಷಿ ಇಲಾಖೆ ದಾಳಿ; 200 ಲೀಟರ್‌ಗೂ ಅಧಿಕ ರಾಸಾಯನಿಕ, ನಕಲಿ ಲೇಬಲ್‌ಗಳು ವಶ

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ಜಾಲ ಭೇದ

ಅಧಿಕಾರಿಗಳ ಮಾಹಿತಿ ಪ್ರಕಾರ, ತಾನೇ ವಿವಿಧ ಕಂಪನಿಗಳ ಲೇಬಲ್‌ಗಳನ್ನು ಮುದ್ರಿಸಿ ಬಾಟಲಿಗಳಿಗೆ ಅಂಟಿಸಿ, ಪ್ಯಾಕಿಂಗ್ ಮಾಡಿ ನೇರವಾಗಿ ರೈತರ ಜಮೀನುಗಳಿಗೆ ತೆರಳಿ ಮಾರಾಟ ನಡೆಸುತ್ತಿದ್ದ. ದಾಳಿ ವೇಳೆ ವಶಪಡಿಸಿಕೊಂಡ ಲೇಬಲ್‌ಗಳಲ್ಲಿ ಜಿಎಸ್‌ಟಿ ಸಂಖ್ಯೆಯೂ ನಕಲಿಯಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ

Chikkaballapur News: ಹೆಣ್ಣು ಮಗು ಎಂಬ ಕಾರಣಕ್ಕೆ 13 ದಿನಗಳ ಮಗುವನ್ನು ಸಂಪ್‌ಗೆ ಎಸೆದು ಕೊಂದ ತಂದೆ!

13 ದಿನಗಳ ಹೆಣ್ಣು ಮಗುವನ್ನು ಸಂಪ್‌ಗೆ ಎಸೆದು ಕೊಂದ ತಂದೆ!

Child murder: ಚಿಕ್ಕಬಳ್ಳಾಪುರ ನಗರದ ಶಾಂತಿನಗರ (ನಕ್ಕಲಕುಂಟೆ) ಪ್ರದೇಶದಲ್ಲಿ ಘಟನೆ ನಡೆದಿದೆ. ತಾಯಿಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಮತ್ತೊಮ್ಮೆ ಹೆಣ್ಣು ಮಗು ಜನಿಸಿದ್ದೇ ಕೃತ್ಯಕ್ಕೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

4237 ಯೂನಿಟ್‌ಗಳ ಜೀವಧಾರೆಯ ದಾಖಲೆ: ಒಂದೇ ದಿನ, ಒಂದೇ ಸ್ಥಳದಲ್ಲಿ ಕರ್ನಾಟಕದ ಹೊಸ ಇತಿಹಾಸ

4237 ಯೂನಿಟ್‌ಗಳ ಜೀವಧಾರೆಯ ದಾಖಲೆ

ನಗರದ ಸಿವಿವಿ ಕ್ಯಾಂಪಸ್‌ನ ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 7.30ರಿಂದ ರಾತ್ರಿ 9 ಗಂಟೆಯ ವರೆಗೆ ನಿರಂತರವಾಗಿ ನಡೆದ ಶಿಬಿರದಲ್ಲಿ ಸಾವಿರಾರು ಯುವಕರು, ಮಹಿಳೆಯರು ಹಾಗೂ ವಿವಿಧ ಸಂಘ-ಸAಸ್ಥೆಗಳ ಸದಸ್ಯರು ಸಾಲುಗಟ್ಟಿ ರಕ್ತದಾನ ಮಾಡಿದರು. ಒಬ್ಬೊಬ್ಬ ರಕ್ತದಾನಿಯ ಕೈಯಿಂದ ಹರಿದ ರಕ್ತದ ಹನಿ, ನಾಳೆ ಯಾರದೋ ಜೀವ ಉಳಿಸುವ ಆಶಾಕಿರಣವಾಗಿ ಪರಿಣಮಿಸಲಿದೆ ಎಂಬ ಮಾನವೀಯ ಸಂದೇಶ ಶಿಬಿರದ ಕೇಂದ್ರಬಿಂದುವಾಗಿತ್ತು.

Chikkaballapur News: ಜು.27-29ರವರೆಗೆ ಕಾಲಜ್ಞಾನಿ ಸದ್ಗುರು ಶ್ರೀಯೋಗಿನಾರೇಯಣ ಗುರುಪೂಜಾ ಸಂಗೀತ ಮಹೋತ್ಸವ

ಕೈವಾರದಲ್ಲಿ 72 ಗಂಟೆಗಳ ಅಖಂಡ ನಾದೋಪಾಸನೆ

ಹರಿ-ಹರ ಕ್ಷೇತ್ರವಾಗಿರುವ ಕೈವಾರವು ಭಕ್ತಿಯ ಆರಾಧನಾ ಕೇಂದ್ರವಾಗಿದ್ದು, ಪ್ರತಿ ನಿತ್ಯ ಭಜನೆ, ಹರಿಕಥೆ, ಸಂಗೀತ ಸೇರಿದಂತೆ ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಕಾಲಜ್ಞಾನಿ ಸದ್ಗುರು ತಾತಯ್ಯನವರ 300ನೇ ಜಯಂತಿ ವರ್ಷಾಚರಣೆ ಅಂಗವಾಗಿ ಗುರುಪೂಜಾ ಮಹೋತ್ಸವವನ್ನು ಇನ್ನಷ್ಟು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ

MLA KH Puttaswamy Gowda: ಬರ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಲಿ: ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ

ಬರ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಲಿ

ಕಳೆದ ಕೆಲವು ವರ್ಷಗಳಲ್ಲಿ ಉತ್ತಮ ಮಳೆಯಾಗಿದ್ದರೂ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾ ಗದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ನಾಲ್ಕೈದು ವರ್ಷಗಳಿಗೊಮ್ಮೆ ಬರ ಕಾಣಿಸಿ ಕೊಳ್ಳುವುದು ಸಾಮಾನ್ಯವಾಗಿದ್ದು, ಅದನ್ನು ಸಮರ್ಥ ವಾಗಿ ಎದುರಿಸಲು ತಾಲೂಕು ಆಡಳಿತ ಸಜ್ಜಾಗಿರಬೇಕು

Gauribidanur News: ವಿಧುರಾಶ್ವತ್ಥದಲ್ಲಿ ದೇಶಿ ಸಾಂಸ್ಕೃತಿಕ ಸಂಭ್ರಮ; ಜಾನಪದ ಕಲೆಗಳ ವೈಭವ ಅನಾವರಣ

ದೇಶಿ ಸಂಸ್ಕೃತಿ ಉಳಿದರೆ ಮಾತ್ರ ನಾಡಿನ ಆತ್ಮ ಉಳಿಯುತ್ತದೆ

ನಮ್ಮ ನಾಡಿನ ಮಣ್ಣಿನ ವಾಸನೆ, ಜೀವನ ಮೌಲ್ಯಗಳು ಹಾಗೂ ಸ್ಥಳೀಯ ಸಂಸ್ಕೃತಿಯ ಜೀವಂತ ಪ್ರತೀಕವೇ ಜಾನಪದ ಕಲೆಗಳಾಗಿವೆ. ಹಬ್ಬ-ಹರಿದಿನಗಳು, ಕೃಷಿ ಚಟುವಟಿಕೆಗಳು ಹಾಗೂ ಶುಭ ಸಮಾ ರಂಭಗಳಲ್ಲಿ ಮೊಳಗುತ್ತಿದ್ದ ಜಾನಪದ ಹಾಡುಗಳು, ಲಾವಣಿ, ಸೋಬಾನೆ ಪದಗಳು, ಡೊಳ್ಳು ಕುಣಿತ, ವೀರಗಾಸೆ, ಗಾಡಿಗೊಂಬೆ, ತಮಟೆ ಮತ್ತು ಕಹಳೆಗಳು ನಮ್ಮ ಇತಿಹಾಸ ಹಾಗೂ ಸಾಮಾಜಿಕ ಮೌಲ್ಯ ಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜೀವಂತ ಪರಂಪರೆಯಾಗಿವೆ

Muddenahalli News: ಸತ್ಯಸಾಯಿ ಗ್ರಾಮದಲ್ಲಿ ಅಂತಾರಾಷ್ಟ್ರೀಯ ಮೌಲ್ಯಾಧಾರಿತ ಶಿಕ್ಷಣ ಸಮ್ಮೇಳನಕ್ಕೆ ಚಾಲನೆ

ಮೌಲ್ಯಾಧಾರಿತ ಶಿಕ್ಷಣವೇ ಮಾನವೀಯ ಸಮಾಜದ ಅಡಿಪಾಯ

ಇಂದು ಶಿಕ್ಷಣ ಸಂಸ್ಥೆಗಳು ಮೌಲ್ಯಗಳಿಂದ ದೂರ ಸಾಗುತ್ತಿರುವಾಗ ಜೈಲುಗಳು ಅಪರಾಧಿಗಳಿಂದ ತುಂಬುತ್ತಿವೆ. ಒಡೆದ ಕುಟುಂಬಗಳು, ನೈತಿಕ ಮೌಲ್ಯಗಳ ಕುಸಿತ ಮತ್ತು ಸಾಮಾಜಿಕ ಅಸ್ಥಿರತೆ ಹೆಚ್ಚು ತ್ತಿರುವ ಈ ಸಂದರ್ಭದಲ್ಲಿ ಜೈಲುಗಳನ್ನು ಹೆಚ್ಚಿಸುವುದಕ್ಕಿಂತ ಶಾಲೆಗಳನ್ನು ಬಲಪಡಿಸುವುದು ಸಮಾಜಕ್ಕೆ ಶಾಶ್ವತ ಪರಿಹಾರ. ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ಮೊದಲು ಉತ್ತಮ ಮನುಷ್ಯರನ್ನು ರೂಪಿಸಬೇಕು

Chikkaballapur News: ಮಂಚೇನಹಳ್ಳಿ ಪಿಎಚ್‌ಸಿಯಲ್ಲಿ ಮೂಲಸೌಕರ್ಯ ಕೊರತೆ ನಿವಾರಣೆಗೆ ಕ್ರಮಕ್ಕೆ ಜಯಕುಮಾರ್ ಆಗ್ರಹ

ಆರೋಗ್ಯ ಕೇಂದ್ರಕ್ಕೆ ಜಯ ಫೌಂಡೇಶನ್‌ನಿಂದ ಫ್ರಿಜ್, ಆಸನಗಳ ಕೊಡುಗೆ

ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಸೇರಿದಂತೆ ಹಲವು ಮೂಲಸೌಕರ್ಯ ಸಮಸ್ಯೆಗಳಿವೆ. ಪ್ರಸ್ತುತ ಒಬ್ಬ ವೈದ್ಯರು ಮಾತ್ರ ಸೇವೆ ಸಲ್ಲಿಸುತ್ತಿರುವುದರಿಂದ ರೋಗಿಗಳು ಗಂಟೆಗಟ್ಟಲೆ ಕಾಯ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಗರ್ಭಿಣಿಯರು ಹಾಗೂ ವೃದ್ಧರಿಗೆ ಸಮರ್ಪಕ ವಾಗಿ ಕುಳಿತುಕೊಳ್ಳುವ ವ್ಯವಸ್ಥೆಯೂ ಇಲ್ಲದ ಕಾರಣ ಆಸನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

NEET exam question paper leak scandal: ನೀಟ್ ಹಗರಣಕ್ಕೆ ಕಾಂಗ್ರೆಸ್ ಆಕ್ರೋಶ: ವಿದ್ಯಾರ್ಥಿಗಳ ಭವಿಷ್ಯ ರಕ್ಷಣೆಗೆ ಹೋರಾಟ ಮುಂದುವರಿಕೆ

722 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಬದ್ಧ

"ವಿದ್ಯಾರ್ಥಿಗಳ ಭವಿಷ್ಯವೇ ದೇಶದ ಭವಿಷ್ಯ. ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯೋಗ ನೀಡುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಮೊದಲ ಹಂತದಲ್ಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಎಸ್‌ಸಿ/ಎಸ್‌ಟಿ ಬ್ಯಾಕ್ಲಾಗ್ ಹುದ್ದೆಗಳನ್ನೂ ಶೀಘ್ರವೇ ಭರ್ತಿ ಮಾಡಲಾಗುವುದು"

"ರೈತರ ನೆರವಿಗೆ ಬೆಳೆ ವಿಮೆ ಕಡ್ಡಾಯ; ನಿರ್ಲಕ್ಷ್ಯ ಸಹಿಸುವುದಿಲ್ಲ": ಬರ ನಿರ್ವಹಣೆ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಡಾ.ಜಿ. ಪರಮೇಶ್ವರ್ ಖಡಕ್ ಎಚ್ಚರಿಕೆ

"ರೈತರ ನೆರವಿಗೆ ಬೆಳೆ ವಿಮೆ ಕಡ್ಡಾಯ; ನಿರ್ಲಕ್ಷ್ಯ ಸಹಿಸುವುದಿಲ್ಲ"

ರಾಜ್ಯದಲ್ಲಿ ಕಳೆದ 150 ವರ್ಷಗಳಲ್ಲೇ ಕಂಡು ಕೇಳರಿಯದ ಬರದ ಪರಿಸ್ಥಿತಿ  ಎದುರಾಗಿದ್ದು, ವಾಡಿಕೆ ಯಷ್ಟು ಮಳೆಯಾಗದ ಕಾರಣ ಬಿತ್ತನೆ ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಎಲ್ಲ ಇಲಾಖೆ ಅಧಿಕಾರಿ ಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

Muddenahalli News: ದೇಶದ ಎಲ್ಲ ರಾಜ್ಯಗಳಿಗೂ ವಿದ್ಯಾರ್ಥಿ ನಿಧಿ ವಿಸ್ತರಣೆಗೆ ಚಿಂತನೆ

ದೇಶದ ಎಲ್ಲ ರಾಜ್ಯಗಳಿಗೂ ವಿದ್ಯಾರ್ಥಿ ನಿಧಿ ವಿಸ್ತರಣೆಗೆ ಚಿಂತನೆ

ಭಾರತ ರಾಷ್ಟ್ರ ನಿರ್ಮಾಣ ವಿದ್ಯಾರ್ಥಿ ನಿಧಿ ಸಮಾವೇಶದ ಸಮಾರೋಪದಲ್ಲಿ ಆಶೀರ್ವಚನ ನೀಡಿದ ಅವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಸಾವಿರಾರು ಮಕ್ಕಳು ಇನ್ನೂ ಈ ಯೋಜನೆಯ ನಿರೀಕ್ಷೆಯಲ್ಲಿದ್ದು, ಅವರಿಗೆ ಶಿಕ್ಷಣದ ನೆರವು ತಲುಪಿಸುವ ಉದ್ದೇಶದಿಂದ ಯೋಜನೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ

Tourism Minister K.J. George: 'ಮಯೂರ ಸನ್‌ರೈಸ್' ರೆಸ್ಟೋರೆಂಟ್ ಲೋಕಾರ್ಪಣೆಗೊಳಿಸಿದ ನಂತರ ಸಚಿವ ಕೆ.ಜೆ. ಜಾರ್ಜ್ ಭರವಸೆ

ನಂದಿಬೆಟ್ಟಕ್ಕೆ ಹೊಸ ಗರಿ; ರೋಪ್‌ವೇಗೆ ವೇಗ ನೀಡಲು ಸರ್ಕಾರದ ಸಂಕಲ್ಪ

ಕರ್ನಾಟಕದ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಗುಣಮಟ್ಟದ ಸೇವೆ, ಸ್ವಚ್ಛತೆ ಹಾಗೂ ಆಧುನಿಕ ಸೌಲಭ್ಯಗಳಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ. ಕೆಎಸ್‌ಟಿಡಿಸಿ 1971ರಿಂದ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದು, ಇಂದು ದೇಶ-ವಿದೇಶಗಳ ಪ್ರವಾಸಿಗ ರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಮಳೆ ಇಲ್ಲದೆ ಬಿತ್ತನೆ ಸ್ಥಗಿತ; ಗಿಡ್ನಹಳ್ಳಿಯಲ್ಲಿ ರೈತರೊಂದಿಗೆ ಡಿಸಿಎಂ ಪರಮೇಶ್ವರ್ ಸಂವಾದ

ಬೆಳೆ ವಿಮೆ ಕಡ್ಡಾಯವಾಗಿ ಮಾಡಿಸಿಕೊಳ್ಳಿ; ಅಧಿಕಾರಿಗಳಿಗೆ ನೋಂದಣಿ ಸೂಚನೆ

ರಾಗಿ ಬಿತ್ತನೆಗಾಗಿ ಜಮೀನನ್ನು ಉಳುಮೆ ಮಾಡಿ ಸಿದ್ಧಪಡಿಸಿದ್ದರೂ ಸಮರ್ಪಕ ಮಳೆಯಾಗದ ಕಾರಣ ಬಿತ್ತನೆ ಸಾಧ್ಯವಾಗಿಲ್ಲ ಎಂದು ರೈತರು ಡಿಸಿಎಂ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ. ಪರಮೇಶ್ವರ್, ರೈತರು ಕಡ್ಡಾಯವಾಗಿ ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಸ್ಥಳದಲ್ಲಿದ್ದ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕೂಡಲೇ ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಕೈಗೊಳ್ಳುವಂತೆ ಸೂಚಿಸಿದರು.

ಮಣ್ಣಿನಲ್ಲೇ ಬದುಕು, ಕಲೆಯಲ್ಲೇ ಭಕ್ತಿ: ಜೀವನೋಪಾಯಕ್ಕೆ ನಾನಾವೇಶ ನಾನಾ ಪ್ರದೇಶ

ಕಾಯಕ ಸಮುದಾಯದ ಚೆದುರಿದ ಬದುಕಿಗೆ ಸಮಾಜದ ಬೆಂಬಲ ಅಗತ್ಯ

ಈಗಾಗಲೇ ನಗರ ಹೊಲಯ ಅಗಲಗುರ್ಕಿಗೆ ಹೋಗುವ ರೈಲ್ವೆ ಟ್ರ್ಯಾಕ್ ಸಮೀಪ ನೆಲೆ ನಿಂತಿರುವ ಇವರು ಗಣಪತಿ  ಹಬ್ಬಕ್ಕೂ ಪೂರ್ವದಲ್ಲಿಯೇ ನರಸಿಂಹ ಅವತಾರ, ವರಾಹ ಅವತಾರ ಗಣಪತಿ, ದರ್ಬಾರ್ ಗಣಪತಿ, ಶಿವ ಗಣಪತಿ, ಆಂಜನೇಯ ಗಣಪತಿ, ರಥಾರೂಢ, ಗರುಡವಾಹನ, ಸಿಂಹಾ ರೂಢ, ಗಜಾರೂಢ, ಬಸವಾರೂಡ, ಇಲಿವಾಹನ, ಸರ್ಪಾರೂಢ, ಕೃಷ್ಣ ಗಣಪತಿ ಸೇರಿದಂತೆ ನೂರಕ್ಕೂ ಹೆಚ್ಚು ವಿನ್ಯಾಸಗಳ ಮಾದರಿಗಳನ್ನು ಸಿದ್ಧಪಡಿಸಿರುವ ಇವರ ಕಲಾನೈಪುಣ್ಯ ನೋಡು ಗರ ಗಮನ ಸೆಳೆಯುತ್ತದೆ.

Gubbi News: ವರುಣನ ಕೃಪೆಗೆ ಕತ್ತೆಗಳ ಮದುವೆ..!!

Gubbi News: ವರುಣನ ಕೃಪೆಗೆ ಕತ್ತೆಗಳ ಮದುವೆ..!!

ಮುಂಗಾರು ಮಳೆ ಕೈ ಕೊಟ್ಟ ಹಿನ್ನಲೆ ಕಂಗೆಟ್ಟ ಈ ಕಚ್ಚೇನಹಳ್ಳಿ ಮತ್ತು ಯರಬಳ್ಳಿ ರೈತರು ಒಂದು ವಾರದ ಮುಂಚೆಯೇ ಕತ್ತೆಗಳ ಮದುವೆಗೆ ಸಜ್ಜಾಗಿದ್ದರು. ಗಂಡು ಕತ್ತೆ ಹಾಗೂ ಹೆಣ್ಣು ಕತ್ತೆಗಳನ್ನು ಕರೆತಂದು ಗಂಡು ಕತ್ತೆಗೆ ಹೊಸ ಪಂಚೆ ಟಾವಲ್ ಹಾಗೂ ಹೆಣ್ಣು ಕತ್ತೆಗೆ ಹೊಸ ಹಸಿರು ಸೀರೆ, ಬಳೆ ಗಳನ್ನು ತೊಡಿಸಿ ವಧು ವರ ರೀತಿಯಲ್ಲಿ ಅಲಂಕರಿಸಿದ್ದರು.

ಮಂತ್ರಿ ಭಾಗ್ಯದ ದಡದಲ್ಲಿ ಪ್ರದೀಪ್ ಈಶ್ವರ್; ದೆಹಲಿಯ ನಿರ್ಧಾರಕ್ಕೆ ಜಿಲ್ಲೆಯ ರಾಜಕೀಯ ಚಿತ್ತ

ಮಂತ್ರಿ ಭಾಗ್ಯದ ದಡದಲ್ಲಿ ಪ್ರದೀಪ್ ಈಶ್ವರ್

ಅಹಿಂದ ವರ್ಗದ ಪ್ರತಿನಿಧಿತ್ವ, ಯುವ ನಾಯಕತ್ವಕ್ಕೆ ಆದ್ಯತೆ ಹಾಗೂ ಸಾಮಾ ಜಿಕ ಸಮತೋಲನದ ಲೆಕ್ಕಾಚಾರಗಳಲ್ಲಿ ಪ್ರದೀಪ್ ಈಶ್ವರ್ ಹೆಸರು ಪರಿಗಣನೆಯಲ್ಲಿದೆ ಎನ್ನಲಾಗುತ್ತಿದೆ. ಆದರೆ, ಇದೇ ವೇಳೆ ಜಿಲ್ಲೆಯ ಕಾಂಗ್ರೆಸ್‌ನ ಕೆಲ ಹಿರಿಯ ನಾಯಕರ ಅಸಮಾಧಾನ ಮತ್ತು ಆಂತರಿಕ ವಿರೋಧವೂ ಅವರ ಹಾದಿಯಲ್ಲಿ ಪ್ರಮುಖ ಸವಾಲಾಗಿ ಪರಿಣಮಿಸಿದೆ ಎಂಬ ರಾಜಕೀಯ ವಲಯದ ಚರ್ಚೆಗಳಿವೆ.

MLA B N Ravikumar: ಜನಪರ ಯೋಜನೆಗಳ ಮಾಹಿತಿ ಜನರಿಗೆ ತಲುಪಿದಾಗಲೇ ಸಾರ್ಥಕತೆ: ಶಾಸಕ ಬಿ.ಎನ್. ರವಿಕುಮಾರ್

ಜನಪರ ಯೋಜನೆಗಳ ಮಾಹಿತಿ ಜನರಿಗೆ ತಲುಪಿದಾಗಲೇ ಸಾರ್ಥಕತೆ

ಕೇಂದ್ರ ಸರ್ಕಾರದ ಜನಪರ ಯೋಜನೆಗಳು ಆರ್ಥಿಕವಾಗಿ ಹಿಂದುಳಿದ ಹಾಗೂ ದುರ್ಬಲ ವರ್ಗದ ಜನರ ಜೀವನಮಟ್ಟ ಸುಧಾರಿಸುವ ಉದ್ದೇಶ ಹೊಂದಿವೆ. ಆದ್ದರಿಂದ ಅಧಿಕಾರಿಗಳು ಯೋಜನೆಗಳ ಮಾಹಿತಿ ಯನ್ನು ಗ್ರಾಮಮಟ್ಟಕ್ಕೂ ತಲುಪಿಸಿ ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಸೌಲಭ್ಯ ದೊರೆಯುವಂತೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು

Gauribidanur News: ರಾಯರೇಕಲಹಳ್ಳಿಯಲ್ಲಿ ಭಕ್ತಿ ಸಂಭ್ರಮದ ದೀಪೋತ್ಸವ; ಗ್ರಾಮದೇವತೆಗಳಿಗೆ ವಿಶೇಷ ಪೂಜೆ

ರಾಯರೇಕಲಹಳ್ಳಿಯಲ್ಲಿ ಭಕ್ತಿ ಸಂಭ್ರಮದ ದೀಪೋತ್ಸವ

ಹಿಂದಿನ ದಿನಗಳಲ್ಲಿ ಪ್ಲೇಗ್, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳಿಂದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಸಂದರ್ಭದಲ್ಲಿ ಗ್ರಾಮದ ಶಕ್ತಿ ದೇವತೆಗಳ ಮೊರೆ ಹೋಗಿ ಭಕ್ತಿಯಿಂದ ಪೂಜೆ ಸಲ್ಲಿಸುತ್ತಿದ್ದರು. ಇಂತಹ ಆಚರಣೆಗಳು ಸಮಾಜದಲ್ಲಿ ನಂಬಿಕೆ, ಒಗ್ಗಟ್ಟು ಹಾಗೂ ಧಾರ್ಮಿಕ ಪರಂಪರೆಯನ್ನು ಉಳಿಸಿಕೊಂಡು ಬಂದಿವೆ

Farmers Protest for 128th day: 128ನೇ ದಿನಕ್ಕೂ ಮುಂದುವರಿದ ಜಂಗಮಕೋಟೆ ರೈತರ ಹೋರಾಟ; ಸರ್ಕಾರಕ್ಕೆ 'ಪಿಂಡ ಪ್ರದಾನ' ಮಾಡಿ ಆಕ್ರೋಶ

128ನೇ ದಿನಕ್ಕೂ ಮುಂದುವರಿದ ಜಂಗಮಕೋಟೆ ರೈತರ ಹೋರಾಟ

ಜಂಗಮಕೋಟೆ ಹೋಬಳಿ ವ್ಯಾಪ್ತಿಯ 13 ಗ್ರಾಮಗಳ ಫಲವತ್ತಾದ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕೆ ಸ್ಥಾಪನೆಗಾಗಿ ಸ್ವಾಧೀನಪಡಿಸಿಕೊಳ್ಳಬಾರದು. ಕೃಷಿಗೆ ಯೋಗ್ಯವಲ್ಲದ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪಿಸಲು ನಮ್ಮ ವಿರೋಧವಿಲ್ಲ. ಆದರೆ ಅನ್ನ ಬೆಳೆಯುವ ಫಲವತ್ತಾದ ಭೂಮಿಯನ್ನು ಉಳಿಸಬೇಕು ಎಂದು ರೈತರು ಒತ್ತಾಯಿಸಿದರು.

Student Protest: ವಿದ್ಯಾರ್ಥಿನಿಯರಿಗೆ ಮೂರು ದಿನ ಅನ್ನ ನೀಡಿಲ್ಲವೆಂಬ ಆರೋಪ; ಡಾ. ಲಲಿತಾ ಮನೋಹರನ್ ಫಾರ್ಮಸಿ ಕಾಲೇಜಿನ ವಿರುದ್ಧ ಪ್ರತಿಭಟನೆ

ಡಾ. ಲಲಿತಾ ಮನೋಹರನ್ ಫಾರ್ಮಸಿ ಕಾಲೇಜಿನ ವಿರುದ್ಧ ಪ್ರತಿಭಟನೆ

ಇಂಟಕ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನೀಂದ್ರ ಮಾತನಾಡಿ, ಕುಡಿದು ಬಂದು ವಿದ್ಯಾರ್ಥಿ ಗಳೊಂದಿಗೆ ಅನುಚಿತವಾಗಿ ವರ್ತಿಸಿದರೆಂದು ಆರೋಪಿಸಲಾಗಿರುವ ಉಪನ್ಯಾಸಕರನ್ನು ಕೂಡಲೇ ಅಮಾನತುಗೊಳಿಸಬೇಕು. ಮೊಬೈಲ್ ಇಟ್ಟುಕೊಂಡಿದ್ದಾರೆ ಎಂಬ ಕಾರಣಕ್ಕೆ ವಿದ್ಯಾರ್ಥಿನಿಯರಿಗೆ ಊಟ ನೀಡದೆ ಕಿರುಕುಳ ನೀಡಿರುವ ಸಿಬ್ಬಂದಿಯ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Shops caught burnt: ಶಾರ್ಟ್ ಸರ್ಕ್ಯೂಟ್‌ಗೆ ಲಕ್ಷಾಂತರ ನಷ್ಟ: ಮೊಬೈಲ್, ಎಲೆಕ್ಟ್ರಾನಿಕ್ಸ್, ಟೀ ಶಾಪ್ ಭಸ್ಮ!

ಶಾರ್ಟ್ ಸರ್ಕ್ಯೂಟ್‌ಗೆ ಮೊಬೈಲ್, ಎಲೆಕ್ಟ್ರಾನಿಕ್ಸ್, ಟೀ ಶಾಪ್ ಭಸ್ಮ!

ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದ ಶಿರೀಶ್, ಶಶಿಕುಮಾರ್ ಮತ್ತು ಸುರೇಶ್ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿ,ಟೀ ಅಂಗಡಿ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಮಕ್ಕಳ ಹಕ್ಕುಗಳ ರಕ್ಷಣೆಗೆ ರಾಜಿ ಇಲ್ಲ: ಗುಣಮಟ್ಟದ ಸೇವೆ ಕಡ್ಡಾಯ: ಸಂತೋಷ್ ಕುಮಾರ್ ಎಚ್ಚರಿಕೆ

ಮಕ್ಕಳ ಹಕ್ಕುಗಳ ರಕ್ಷಣೆಗೆ ರಾಜಿ ಇಲ್ಲ: ಗುಣಮಟ್ಟದ ಸೇವೆ ಕಡ್ಡಾಯ

ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳು, ವಿದ್ಯಾರ್ಥಿ ನಿಲಯಗಳು, ಆರೋಗ್ಯ ಸಂಸ್ಥೆಗಳು ಹಾಗೂ ಮಕ್ಕಳ ಆರೈಕೆ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಮಕ್ಕಳಿಗೆ ಶಿಕ್ಷಣ, ಆರೋಗ್ಯ, ಪೌಷ್ಟಿಕ ಆಹಾರ, ಸುರಕ್ಷಿತ ವಾತಾವರಣ ಹಾಗೂ ಗುಣಮಟ್ಟದ ಸೇವೆಗಳು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯಕ್ಕೆ ಒಳಗಾಗಬಾರದು ಎಂದರು

Loading...