ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಚಿಕ್ಕಮಗಳೂರು
CT Ravi: ಕಾಂಗ್ರೆಸ್ ಎಂದರೆ ಬ್ರಹ್ಮಾಂಡ ಭ್ರಷ್ಟಾಚಾರ, ಇದು ಬೆಲೆ ಏರಿಕೆಯ ಸರ್ಕಾರ: ಸಿ.ಟಿ.ರವಿ

ಕಾಂಗ್ರೆಸ್ ಬೆಲೆ ಏರಿಕೆಯ ಸರ್ಕಾರ: ಸಿ.ಟಿ.ರವಿ

CT Ravi: ಕಾಂಗ್ರೆಸ್ ಎಂದರೆ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಇದು ಬೆಲೆ ಏರಿಕೆಯ ಸರ್ಕಾರ. ಬಸ್ ದರ, ವಿದ್ಯುತ್ ದರ, ಹಾಲಿನ ದರ, ನೀರಿನ ದರ, ಕಸದ ದರ, ಡೀಸೆಲ್- ಪೆಟ್ರೋಲ್, ಮೆಟ್ರೋ ದರ ಏರಿಸಿದ ಸರ್ಕಾರ ಇದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

Bus Accident: ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಾರಿಗೆ ಬಸ್ ಪ್ರಪಾತಕ್ಕೆ ಉರುಳಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಸಾರಿಗೆ ಬಸ್ ಪ್ರಪಾತಕ್ಕೆ ಉರುಳಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Bus Accident: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಅಪಘಾತ ನಡೆದಿದೆ. ಭಾರಿ ಮಳೆಯಿಂದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

Mass Murder Case: ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ರತ್ನಾಕರ ಮನೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದುರ್ಘಟನೆಯ ಹಿಂದಿರುವ ಕಾರಣಗಳನ್ನು ಪೊಲೀಸರು ಶೋಧಿಸುತ್ತಿದ್ದಾರೆ.

Drowned: ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಈಜುಕೊಳ ದುರಂತ, ಒಬ್ಬ ಸಾವು

ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಈಜುಕೊಳ ದುರಂತ, ಒಬ್ಬ ಸಾವು

ನಿಶಾಂತ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಸ್ನೇಹಿತನ ಜೊತೆ ತೆರಳಿದ್ದರು. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಹಾರುವ ವೇಳೆ ತಲೆ ಟ್ವಿಸ್ಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೀರಿಗೆ ಹಾರಿದ ಸುಶಾಂತ್ ಅಲುಗಾಡದೇ ಇದ್ದಾಗ ಕೂಡಲೇ ಮೇಲಕ್ಕೆತ್ತಿದ್ದಾರೆ.

Self Harming: ಹಲ್ಲು ಕಳೆದುಕೊಂಡು ನೊಂದ ವಿದ್ಯಾರ್ಥಿ ಆತ್ಮಹತ್ಯೆ

ಹಲ್ಲು ಕಳೆದುಕೊಂಡು ನೊಂದ ವಿದ್ಯಾರ್ಥಿ ಆತ್ಮಹತ್ಯೆ

ಅಪಘಾತದಲ್ಲಿ 17 ಹಲ್ಲುಗಳನ್ನು ಈತ ಕಳೆದುಕೊಂಡಿದ್ದ. ಸದಾ ಆಸ್ಪತ್ರೆಗೆ ಹೋಗಿ ಬರುವುದರಿಂದ ಮನನೊಂದಿದ್ದ ಈ ಯುವಕ, ಜೀವನದಲ್ಲಿ ಉಂಟಾದ ಶಾರೀರಿಕ ಮತ್ತು ಮಾನಸಿಕ ಸಂಕಷ್ಟವನ್ನು ಎದುರಿಸಲಾಗದೆ ಆತ್ಮಹತ್ಯೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

Karnataka Rain: ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸಾವು

ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸಾವು

Karnataka Rain: ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಘಟನೆ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ಮಹಿಳೆ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Murder Case: ತಾಯಿಯನ್ನು ಬೈದಿದ್ದಕ್ಕೆ ಸೋದರ ಮಾವನನ್ನೇ ಮುಗಿಸಿದ ಮಗ!

ತಾಯಿಯನ್ನು ಬೈದಿದ್ದಕ್ಕೆ ಸೋದರ ಮಾವನನ್ನೇ ಮುಗಿಸಿದ ಮಗ!

Murder Case: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ಕೊಲೆ ಪ್ರಕರಣ ನಡೆದಿದೆ. ಆಸ್ತಿಗಾಗಿ ಅಕ್ಕ ಮತ್ತು ತಮ್ಮನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಕೆಟ್ಟ ಪದಗಳಿಂದ ಬೈದ ಹಿನ್ನೆಲೆಯಲ್ಲಿ ಸೋದರ ಮಾವನನ್ನೇ ಮಗ ಹತ್ಯೆ ಮಾಡಿದ್ದಾನೆ.

Wild Animal Attacks: ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಶಾಸಕರು ಗಟ್ಟಿ ಧ್ವನಿ ಎತ್ತಬೇಕಿದೆ

ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಶಾಸಕರು ಗಟ್ಟಿ ಧ್ವನಿ ಎತ್ತಬೇಕಿದೆ

Wild Animal Attacks: ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತವಾಗಿ ಪರಿಹಾರ ಕಲ್ಪಿಸುವ ವಿಚಾರದಲ್ಲಿ ಶಾಸಕರು ಸದನದಲ್ಲಿ, ಸರಕಾರದಲ್ಲಿ ಗಟ್ಟಿ ಧ್ವನಿಯಲ್ಲಿ ಮಾತಾಡಬೇಕಿದೆ. ರೈತರು-ಕೃಷಿ ಕಾರ್ಮಿಕರ ಮೇಲೆ ಆನೆಗಳು ಸೇರಿ ಇನ್ನಿತರ ಕಾಡು ಪ್ರಾಣಿಗಳು ದಾಳಿ ಮಾಡದಂತೆ ಸರಕಾರ ಅರಣ್ಯಗಳಿಗೆ ಭದ್ರ ಬೇಲಿ ಮಾಡಿ ಜನರನ್ನು, ಬೆಳೆಯನ್ನು ರಕ್ಷಿಸಲಿ ಎಂದುಬುವುದು ಮಲೆನಾಡು ಜನರ ಒತ್ತಾಯವಾಗಿದೆ.

Money doubling scam: ಹಣ ಡಬ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಕಾರು ಚಾಲಕ ಅರೆಸ್ಟ್

ಹಣ ಡಬ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಕಾರು ಚಾಲಕ ಅರೆಸ್ಟ್

Money doubling scam: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ದುಪ್ಪಟ್ಟು ಮಾಡುವುದಾಗಿ ಹೇಳಿ ಹಲವರಿಗೆ ವಂಚಿಸಿದ್ದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತ ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯ ನಿವಾಸಿಯಾಗಿದ್ದು, ಈ ಹಿಂದೆ ರನ್ಯಾ ರಾವ್ ಕಾರು ಚಾಲಕನಾಗಿದ್ದ ಎನ್ನಲಾಗಿದೆ.

Tourism Alert: ಪ್ರವಾಸಿಗರ ಗಮನಕ್ಕೆ: ಈ ವಾರಾಂತ್ಯದಲ್ಲಿ ದತ್ತಪೀಠಕ್ಕೆ ಬರಬೇಡಿ

ಪ್ರವಾಸಿಗರ ಗಮನಕ್ಕೆ: ಈ ವಾರಾಂತ್ಯದಲ್ಲಿ ದತ್ತಪೀಠಕ್ಕೆ ಬರಬೇಡಿ

ಬೆಂಗಳೂರಿನಿಂದ ವೀಕೆಂಡ್‌ನಲ್ಲಿ ಸಾವಿರಾರು ಪ್ರವಾಸಿಗರು ಚಿಕ್ಕಮಗಳೂರಿನ ಹಿಲ್‌ ಸ್ಟೇಶನ್‌ಗಳಿಗೆ ಲಗ್ಗೆಯಿಡುತ್ತಾರೆ. ಆದರೆ ಈ ವಾರಾಂತ್ಯದಲ್ಲಿ ಇಲ್ಲಿಗೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಕಾರಣ ಇಲ್ಲಿನ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ‌ನಡೆಯುತ್ತಿರುವ ಉರೂಸ್ ಕಾರ್ಯಕ್ರಮ.

HD Deve Gowda: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ವೇಗ ನೀಡಲು ಎಚ್.ಡಿ.ದೇವೇಗೌಡ ಆಗ್ರಹ

ಕರ್ನಾಟಕದ ರೈಲ್ವೇ ಯೋಜನೆಗಳಿಗೆ ವೇಗ ನೀಡಿ: ಎಚ್.ಡಿ. ದೇವೇಗೌಡ

HD Deve Gowda: ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಅದಾಗ್ಯೂ ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೈಲ್ವೇ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು 800 ಕೋಟಿ ರೂ.ಯಿಂದ 7,000 ಕೋಟಿ ರೂ.ಗೂ ಮೀರಿ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.

Areca nut problem: ಅಡಿಕೆ ಬೆಳೆಗಾರರ ಮೇಲೆ ಇ-ವೇ ಬಿಲ್ ಪ್ರಹಾರ!

ಅಡಿಕೆ ಬೆಳೆಗಾರರ ಮೇಲೆ ಇ-ವೇ ಬಿಲ್ ಪ್ರಹಾರ!

Areca nut problem: ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ವಾಹನಗಳಲ್ಲಿ ಸಾಗಿಸಿ ಮಾರುಕಟ್ಟೆಗೆ ತರಬೇಕಾದರೆ, ಸಾಗಾಣೆ ಮಾಡುವ ಮೊದಲು ಆನ್‌ಲೈನಲ್ಲಿ ಇ-ವೇ ಬಿಲ್ (E-Way Bill) ನಮೂದಿಸುವುದು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ಸಾಮಾನ್ಯ ರೈತರಿಗೆ ಯಾವುದೇ ಮಾಹಿತಿ, ಅರಿವು ನೀಡದೆ ಕಾನೂನು ಜಾರಿ ಮಾಡಿರುವುದು ಅಡಿಕೆ ಬೆಳೆಗಾರರಲ್ಲಿ ಆತಂಕ ಮತ್ತು ಆಕ್ರೋಶ ಸೃಷ್ಟಿಸಿದೆ.

Weather Forecast: ಇಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿ ರಾಜ್ಯದ ಹಲವೆಡೆ ಮಳೆ!

ಇಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿ ರಾಜ್ಯದ ಹಲವೆಡೆ ಮಳೆ

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ಆಕಾಶ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು/ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Drowned: ಹಂಪಿಯಲ್ಲಿ ಈಜಲು ನದಿಗೆ ಹಾರಿದ್ದ ವೈದ್ಯೆ ಶವವಾಗಿ ಪತ್ತೆ

ಹಂಪಿಯಲ್ಲಿ ಈಜಲು ನದಿಗೆ ಹಾರಿದ್ದ ವೈದ್ಯೆ ಶವವಾಗಿ ಪತ್ತೆ

ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು. ಇದೇ ಸಂದರ್ಭದಲ್ಲಿ ಅನನ್ಯಾ ರಾವ್ ಸುಮಾರು 25 ಅಡಿ ಎತ್ತರದ ಬಂಡೆಯಿಂದ ನೀರಿಗೆ ಹಾರಿ ಈಜಲು ಬಯಸಿದರು. ಬಂಡೆಯಿಂದ ನೀರಿಗೆ ಹಾರಿದ ಅನನ್ಯಾ ಸ್ವಲ್ಪ ಸಮಯದವರೆಗೆ ನೀರಿನಲ್ಲಿ ಈಜುತ್ತಿದ್ದರು.

Murder Case: ಕುಡಿಯಬೇಡ ಎಂದು ಬುದ್ಧಿ ಹೇಳಿದ ಅತ್ತೆಗೆ ಸುತ್ತಿಗೆಯಿಂದ ಹೊಡೆದು ಕೊಂದು ಅಳಿಯ ಆತ್ಮಹತ್ಯೆ

ಕುಡಿಯಬೇಡ ಎಂದ ಅತ್ತೆಗೆ ಸುತ್ತಿಗೆಯಿಂದ ಹೊಡೆದು ಕೊಂದು ಅಳಿಯ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲು ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಕುಡಿಯಬೇಡ ಎಂದು ಉಪದೇಶ ನೀಡಿದ ಅತ್ತೆಯನ್ನು ಕೊಂದು ಅಳಿಯ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತೆ ಯಮುನಾ (65) ಳನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿದ ಬಳಿಕ ಅಳಿಯ ಶಶಿಧರ್ (48) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Tractor accident: ಚಿಕ್ಕಮಗಳೂರಲ್ಲಿ ಟ್ರ್ಯಾಕ್ಟರ್‌ ಪಲ್ಟಿಯಾಗಿ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

ಟ್ರ್ಯಾಕ್ಟರ್‌ ಪಲ್ಟಿಯಾಗಿ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರಿಗೆ ಗಂಭೀರ ಗಾಯ

Tractor accident: ಚಿಕ್ಕಮಗಳೂರು ಕೊಪ್ಪ ತಾಲೂಕಿನ ತೀರ್ಥಕೆರೆ ಬಳಿ ಭಾನುವಾರ ರಾತ್ರಿ ಅಪಘಾತ ನಡೆದಿದೆ. 40 ಕಾರ್ಮಿಕರು ಕೆಲಸ ಮುಗಿಸಿಕೊಂಡು ಟ್ರ್ಯಾಕ್ಟರ್‌ನಲ್ಲಿ ವಾಪಸ್‌ ಊರಿಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್‌ ಪಲ್ಟಿಯಾಗಿದ್ದು, ಈ ವೇಳೆ 10ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಗಾಯಗೊಂಡಿದ್ದಾರೆ.

Narasimharajapura News: ನರಸಿಂಹರಾಜಪುರದಲ್ಲಿ ಎಂ.ಶ್ರೀನಿವಾಸ್ ವೃತ್ತ ಉದ್ಘಾಟನೆ

ನರಸಿಂಹರಾಜಪುರದಲ್ಲಿ ಎಂ. ಶ್ರೀನಿವಾಸ್ ವೃತ್ತ ಉದ್ಘಾಟನೆ

Narasimharajapura News: ನರಸಿಂಹರಾಜಪುರ ಪಟ್ಟಣದ ಪ್ರವಾಸಿ ಮಂದಿರದ ಸಮೀಪ ಶುಕ್ರವಾರ ಸಂಜೆ ಎಂ. ಶ್ರೀನಿವಾಸ್ ವೃತ್ತವನ್ನು ಶಿವಮೊಗ್ಗ ಭದ್ರಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಪಿ. ಅಂಶುಮಂತ್ ಉದ್ಘಾಟಿಸಿ, ಬಳಿಕ ಮಾತನಾಡಿದರು. ಈ ಕುರಿತ ವಿವರ ಇಲ್ಲಿದೆ.

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ; ಫಲಿತಾಂಶ ಪ್ರಕಟ

Essay Competition Winners: ʼಸದಾತನʼ ದಿಂದ ಶಾಲಾ ಶಿಕ್ಷಕರಿಗಾಗಿ ನಡೆಸಲಾದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ 964 ಶಿಕ್ಷಕರು ಭಾಗವಹಿಸಿದ್ದು, ಸ್ಪರ್ಧೆಯ ಫಲಿತಾಂಶ ಪ್ರಕಟಿಸಲಾಗಿದೆ. ಈ ಕುರಿತ ವಿವರ ಇಲ್ಲಿದೆ.

Mango Pachcha Movie: ಸುದೀಪ್ ಸೋದರಳಿಯ ಸಂಚಿತ್ ಸಂಜೀವ್ ನಟನೆಯ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

ಸುದೀಪ್ ಸೋದರಳಿಯನ 'ಮ್ಯಾಂಗೋ ಪಚ್ಚ' ಚಿತ್ರದ ಪ್ರೋಮೋ ರಿಲೀಸ್

Mango Pachcha Movie: ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್‌ ಅಭಿನಯದ ಚೊಚ್ಚಲ ಸಿನಿಮಾಗೆ 'ಮ್ಯಾಂಗೋ ಪಚ್ಚ' ಎಂದು ಟೈಟಲ್ ಇಡಲಾಗಿದೆ. ಚಿತ್ರದ ಪ್ರೋಮೋ ರಿಲೀಸ್‌ ಆಗಿದೆ. ಈ ಕುರಿತ ವಿವರ ಇಲ್ಲಿದೆ.

Yadgir Accident: ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

ಯಾದಗಿರಿಯಲ್ಲಿ ಬೈಕ್‌ಗೆ ಬಸ್‌ ಡಿಕ್ಕಿಯಾಗಿ ಒಂದೇ ಕುಂಟುಂಬದ ಮೂವರ ದುರ್ಮರಣ

Yadgir Accident: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಂಥಣಿ ಬಳಿ ಬುಧವಾರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ.

Mr Rani Movie: ‘ಲಕ್ಷ್ಮಿ ನಿವಾಸ’ ಖ್ಯಾತಿಯ ದೀಪಕ್ ಸುಬ್ರಹ್ಮಣ್ಯ ಅಭಿನಯದ ‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

‘ಮಿಸ್ಟರ್‌ ರಾಣಿ’ ಚಿತ್ರ ಫೆ.7ಕ್ಕೆ ರಿಲೀಸ್‌

Mr Rani Movie: ʼಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಜಯಂತ್‌ ಪಾತ್ರದ ಮೂಲಕ ಖ್ಯಾತಿ ಗಳಿಸಿದ ದೀಪಕ್ ಸುಬ್ರಹ್ಮಣ್ಯ ಪ್ರಮುಖ ಪಾತ್ರದಲ್ಲಿ ನಟಿಸಿರುವ ‘ಮಿಸ್ಟರ್ ರಾಣಿ’ ಚಿತ್ರ ಫೆ.7 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿ.ಕೆ.ಶಿವಕುಮಾರ್ ತರಾಟೆ

ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ- ಡಿಕೆಶಿ ಕಿಡಿ

ಪ್ರಪಂಚದಲ್ಲಿ ಹಲವಾರು ಧಾರ್ಮಿಕ ಆಚರಣೆ, ನಂಬಿಕೆಗಳಿವೆ.‌ ನಾನು ನನ್ನ ದೇವರನ್ನು ನಂಬುತ್ತೇನೆ. ಕೆಲವರು ಹಸ್ತ ನೋಡಿಕೊಳುತ್ತಾರೆ, ಇನ್ನೂ ಕೆಲವರು ನೀರು, ಆಕಾಶ, ಸೂರ್ಯನನ್ನು ನಂಬುತ್ತಾರೆ. ಇದರಲ್ಲಿ ಸರಿ ತಪ್ಪು ಎಂಬುದಿಲ್ಲ, ಅವರವರ ನಂಬಿಕೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

MAMCOS Election: ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

ಮ್ಯಾಮ್‌‌ಕೋಸ್ ಚುನಾವಣೆ; ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಭರ್ಜರಿ ಜಯ

MAMCOS Election: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಂಘವಾದ ಮ್ಯಾಮ್‌ಕೋಸ್‌ನ ಆಡಳಿತ ಅಧಿಕಾರ ನಿರೀಕ್ಷೆಯಂತೆ ಮತ್ತೆ ಬಿಜೆಪಿಯ ಸಹಕಾರ ಭಾರತಿಗೆ ಲಭಿಸಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಮುಖಭಂಗ ಅನುಭವಿಸಿದೆ.

Gold Price Today: ಸ್ವರ್ಣಪ್ರಿಯರಿಗೆ ಮತ್ತೆ ಶಾಕ್‌! ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ.