ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಚಿಕ್ಕಮಗಳೂರು
Students Rescue: ಗೂಗಲ್‌ ಮ್ಯಾಪ್‌ ನಂಬಿ ಚಾರಣಕ್ಕೆ ಹೋಗಿ ದಾರಿ ತಪ್ಪಿದ ವಿದ್ಯಾರ್ಥಿಗಳ ರಕ್ಷಣೆ

ಗೂಗಲ್‌ ಮ್ಯಾಪ್‌ ನಂಬಿ ಚಾರಣಕ್ಕೆ ಹೋಗಿ ದಾರಿ ತಪ್ಪಿದ ವಿದ್ಯಾರ್ಥಿಗಳ ರಕ್ಷಣೆ

students rescue: ಚಿತ್ರದುರ್ಗದ ಕಾಲೇಜು ವಿದ್ಯಾರ್ಥಿಗಳು ಪಶ್ಚಿಮ ಘಟ್ಟದ ದಟ್ಟ ಕಾಡಿನಲ್ಲಿ ಗೂಗಲ್‌ ಮ್ಯಾಪ್‌ ನಂಬಿ ಚಾರಣಕ್ಕಿಳಿದು ತೊಂದರೆಗೆ ಸಿಕ್ಕಿಹಾಕಿಕೊಂಡಿದ್ದರು. ಸ್ಥಳೀಯರು ಹಾಗೂ ಪೊಲೀಸರು ಅವರನ್ನು ರಕ್ಷಣೆ ಮಾಡಿದ್ದಾರೆ. ಗೈಡ್‌ ಇಲ್ಲದೆ ಇಂಥ ಚಾರಣಕ್ಕೆ ತೊಡಗದಂತೆ ಅರಣ್ಯ ಇಲಾಖೆ ಸೂಚಿಸಿದೆ.

Arecanut Leaf Spot Disease: ಅಡಿಕೆ ಎಲೆ ಚುಕ್ಕಿ ರೋಗ ಕೋವಿಡ್‌ನಂತೆ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

ಅಡಿಕೆ ಎಲೆ ಚುಕ್ಕಿ ರೋಗ ಹರಡುತ್ತಿದ್ದರೂ ಯಾರೂ ಮಾತಾಡ್ತಾ ಇಲ್ಲ ಯಾಕೆ!?

Arecanut Leaf Spot Disease: ಮೋಡ-ಬಿಸಿಲಿನ ಆಟ, ಆಗಾಗ ಆರ್ಭಟಿಸುವ ಮಳೆ, ಹೆಚ್ಚಿದ ವಾತಾವರಣದ ತೇವಾಂಶಗಳಿಂದ ಅಡಿಕೆ ಎಲೆ ಚುಕ್ಕಿ ರೋಗದ ಸೋಂಕು ಮುಂಗಾರು ಪೂರ್ವದಲ್ಲೇ ಕರೋನಾದಂತೆ ನಿಧಾನವಾಗಿ ಹರಡುತ್ತಿದೆ. ಇದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

Karnataka Rain: ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮಳೆ ಅನಾಹುತಕ್ಕೆ ನಾಲ್ವರು ಬಲಿ, ಇಂದು 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ಮುಂಗಾರು ಕರ್ನಾಟಕ ಪ್ರವೇಶಿಸಿದ ಒಂದೇ ದಿನದಲ್ಲಿ ರಾಜ್ಯದ ವಿವಿಧೆಡೆ ಮಳೆ ಆರ್ಭಟ ತೀವ್ರಗೊಂಡಿದೆ. ಕರಾವಳಿ, ಮಲೆನಾಡು ಹಾಗೂ ಕೊಡಗಿನ ವ್ಯಾಪ್ತಿಯಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಬೆಂಗಳೂರು ಮಹಾನಗರ ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಭಾರಿ ಮಳೆ ಆಗುತ್ತಿದೆ.

Murder Case: ಪ್ರೀತಿಸಿ ಮದುವೆಯಾದ ಪತಿಯನ್ನೇ ಪ್ರಿಯಕರನ ಮೂಲಕ ಕೊಲೆ ಮಾಡಿಸಿದ ಪತ್ನಿ

ಪ್ರೀತಿಸಿ ಮದುವೆಯಾದ ಪತಿಯನ್ನೇ ಪ್ರಿಯಕರನ ಮೂಲಕ ಕೊಲ್ಲಿಸಿದ ಪತ್ನಿ

Murder Case: ಕೊಲೆಯಾದ ವ್ಯಕ್ತಿಯನ್ನು ಎನ್ ಆರ್ ಪುರ ಪಟ್ಟಣದ ಸುದರ್ಶನ್ ಎಂದು ಗುರುತಿಸಲಾಗಿದೆ. 10 ವರ್ಷಗಳ ಹಿಂದೆ ಕಮಲ ಎಂಬಾಕೆ ಸುದರ್ಶನ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಳು. ಆದರೆ ನಂತರ ಈ ಕಮಲಾ, ಶಿವರಾಜ್ ಎಂಬಾತನ ಜೊತೆಗೆ ಅನೈತಿಕ ಸಂಬಂಧ ಶುರು ಮಾಡಿದ್ದಳು.

Laxmi Hebbalkar: ಕಾಂಗ್ರೆಸ್‌ ಯೋಜನೆಯನ್ನು ಕಾಪಿ ಹೊಡೆಯುತ್ತಿದೆ ಬಿಜೆಪಿ: ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯ

ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ: ಲಕ್ಷ್ಮೀ ಹೆಬ್ಬಾಳ್ಕರ್

ರಾಜಕೀಯವಾಗಿ ಇಂದಿರಾಗಾಂಧಿ ಅವರಿಗೆ ಪುನರ್ಜನ್ಮ ನೀಡಿದ್ದು ಚಿಕ್ಕಮಗಳೂರು ಜಿಲ್ಲೆ, ಐವತ್ತು ವರ್ಷಗಳ ಹಿಂದೆ ಅಂಗನವಾಡಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಇದೇ ವರ್ಷದ ಅಕ್ಟೋಬರ್‌ನಲ್ಲಿ ಬೆಂಗಳೂರು ಅಥವಾ ಮೈಸೂರಿನಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಆಚರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Karnataka Rain: ರಾಜ್ಯಾದ್ಯಂತ ಪ್ರತಾಪ ತೋರಿಸಿದ ಮಳೆ, ವಿವಿಧಡೆ 8 ಮಂದಿ ಸಾವು

ರಾಜ್ಯಾದ್ಯಂತ ಪ್ರತಾಪ ತೋರಿಸಿದ ಮಳೆ, ವಿವಿಧಡೆ 8 ಮಂದಿ ಸಾವು

ಕೊಪ್ಪಳದಲ್ಲೇ ಸಿಡಿಲಿನ ಹೊಡೆತಕ್ಕೆ ಇಬ್ಬರು, ಬಳ್ಳಾರಿಯಲ್ಲಿ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಒಬ್ಬರು, ವಿಜಯಪುರದಲ್ಲೂ ಸಹ ಓರ್ವ ವ್ಯಕ್ತಿ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗದಗದಲ್ಲಿ ಮಳೆ ನೀರಿಗೆ ಬೈಕ್ ಸವಾರ ಕೊಚ್ಚಿಕೊಂಡು ಹೋಗಿದ್ದಾನೆ. ಮತ್ತೊಂದಡೆ ಗೋಕಾಕ್​ನಲ್ಲಿ ವ್ಯಕ್ತಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದಾನೆ.

Crime News: ಮತ್ತೊಮ್ಮೆ ಗೋವಿನ ಮೇಲೆ ವಿಕೃತಿ, ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

ಮತ್ತೊಮ್ಮೆ ಗೋವಿನ ಮೇಲೆ ವಿಕೃತಿ, ಹಸುವಿನ ಕೆಚ್ಚಲು ಕತ್ತರಿಸಿ ಕ್ರೌರ್ಯ

ಚಿಕ್ಕಮಗಳೂರಿನ ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಅವರಿಗೆ ಸೇರಿದ 20 ಹಸುಗಳನ್ನು ಬೇರೆ ಕಡೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆದರೆ ಆ ಪ್ರಯತ್ನ ವಿಫಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಇದರಿಂದಾಗಿ ಹಸು ಸಾವನ್ನಪ್ಪಿದೆ.

Sri Kshetra Horanadu: ಶ್ರೀ ಕ್ಷೇತ್ರ ಹೊರನಾಡಿನಲ್ಲಿ 5ನೇ ಧರ್ಮಕರ್ತ ಡಿ.ಬಿ. ವೆಂಕಟಸುಬ್ಬಾ ಜೋಯಿಸ್ ದಂಪತಿ ಪುತ್ಥಳಿ ಅನಾವರಣ

ಹೊರನಾಡಿನಲ್ಲಿ ಡಿ.ಬಿ. ವೆಂಕಟಸುಬ್ಬಾ ಜೋಯಿಸ್ ದಂಪತಿ ಪುತ್ಥಳಿ ಅನಾವರಣ

Sri Kshetra Horanadu: ಶ್ರೀ ಕ್ಷೇತ್ರ ಹೊರನಾಡು ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂಣೇಶ್ವರಿ ದೇವಸ್ಥಾನದಲ್ಲಿ ಕ್ಷೇತ್ರದ 5ನೇ ಧರ್ಮಕರ್ತರಾದ ದಿ. ಡಿ.ಬಿ. ವೆಂಕಟಸುಬ್ಬಾ ಜೋಯಿಸ್ ಮತ್ತು ದಿ. ನರಸಮ್ಮ ವೆಂಕಟಸುಬ್ಬಾ ಜೋಯಿಸ್ ಅವರ ಕಂಚಿನ ಪುತ್ಥಳಿಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್ ಅವರು ಅನಾವರಣ ಮಾಡಿದರು.

Sri Kshetra Horanadu: ಉಗ್ರರ ನಿಗ್ರಹಕ್ಕೆ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಿಂದ ಭಾರತೀಯ ಸೇನೆಗೆ 10 ಲಕ್ಷ ದೇಣಿಗೆ

ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಿಂದ ಭಾರತೀಯ ಸೇನೆಗೆ 10 ಲಕ್ಷ ದೇಣಿಗೆ

Sri Kshetra Horanadu: ಶ್ರೀ ಕ್ಷೇತ್ರ ಹೊರನಾಡಿನ 5ನೇ ಧರ್ಮಕರ್ತರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಧರ್ಮಕರ್ತ ಭೀಮೇಶ್ವರ ಜೋಶಿ ಅವರು, ಕೇಂದ್ರ ಸಚಿವ ಗಜೇಂದ್ರ ಸಿಂಗ್ ಅವರಿಗೆ 10 ಲಕ್ಷ ರೂ.ಗಳ ಚೆಕ್ ಅನ್ನು ಹಸ್ತಾಂತರಿಸಿದ್ದಾರೆ.

Suhas Shetty Murder Case: ಸುಹಾಸ್ ಹತ್ಯೆ, ಪಹಲ್ಗಾಮ್‌ ದಾಳಿ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್

ಸುಹಾಸ್ ಹತ್ಯೆ, ಪಹಲ್ಗಾಮ್‌ ದಾಳಿ ಖಂಡಿಸಿ ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್

Suhas Shetty Murder Case: ಬಂಧಿತ ಇಬ್ಬರು ಹಿಂದೂಗಳಾದ ನಾಗರಾಜ್ ಮತ್ತು ರಂಜಿತ್ ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದವರು. ಹೀಗಾಗಿ ಕಾಫಿನಾಡಿನಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಪಕ್ಕದ ದಕ್ಷಿಣ ಕನ್ನಡದಿಂದ ಬರುವ ಪ್ರತಿ ವಾಹನಗಳ ಮೇಲೆ ಕಣ್ಣಿಟ್ಟಿದ್ದು, ಕೊಟ್ಟಿಗೆಹಾರ ಗೇಟ್‌ನಲ್ಲಿ ಬರುವ ಪ್ರತಿ ವಾಹನ ತಪಾಸಣೆ ನಡೆಸುತ್ತಿದ್ದಾರೆ.

Havyaka Special Award: ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ; ನಾಳೆ ಸಂಸ್ಥಾಪನೋತ್ಸವದಲ್ಲಿ ಪ್ರಶಸ್ತಿ ಪ್ರದಾನ

ಹವ್ಯಕ ವಿಶೇಷ ಪ್ರಶಸ್ತಿ ಪ್ರಕಟ; ನಾಳೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

Havyaka Special Award: ಏಪ್ರಿಲ್ 27 ಭಾನುವಾರದಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಹವ್ಯಕ ಭವನದಲ್ಲಿ ಆಯೋಜಿಸಿರುವ 82ನೇ ವರ್ಷದ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಶ್ರೀ ಅಖಿಲ ಹವ್ಯಕ ಮಹಾಸಭೆ ತಿಳಿಸಿದೆ.

Begane Ramaiah: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಬೇಗಾನೆ ರಾಮಯ್ಯ ನಿಧನ

Begane Ramaiah: ಮಾಜಿ ಸಚಿವ ಬೇಗಾನೆ ರಾಮಯ್ಯ ಅವರು, ಇಂದಿರಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಇವರು 1972ರಲ್ಲಿ ನರಸಿಂಹರಾಜಪುರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 1978ರಲ್ಲಿ ಶೃಂಗೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಮೊದಲ ಪ್ರಯತ್ನದಲ್ಲೇ ಗೆದ್ದಿದ್ದರು.

CT Ravi: ಕಾಂಗ್ರೆಸ್ ಎಂದರೆ ಬ್ರಹ್ಮಾಂಡ ಭ್ರಷ್ಟಾಚಾರ, ಇದು ಬೆಲೆ ಏರಿಕೆಯ ಸರ್ಕಾರ: ಸಿ.ಟಿ.ರವಿ

ಕಾಂಗ್ರೆಸ್ ಬೆಲೆ ಏರಿಕೆಯ ಸರ್ಕಾರ: ಸಿ.ಟಿ.ರವಿ

CT Ravi: ಕಾಂಗ್ರೆಸ್ ಎಂದರೆ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಇದು ಬೆಲೆ ಏರಿಕೆಯ ಸರ್ಕಾರ. ಬಸ್ ದರ, ವಿದ್ಯುತ್ ದರ, ಹಾಲಿನ ದರ, ನೀರಿನ ದರ, ಕಸದ ದರ, ಡೀಸೆಲ್- ಪೆಟ್ರೋಲ್, ಮೆಟ್ರೋ ದರ ಏರಿಸಿದ ಸರ್ಕಾರ ಇದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ.

Bus Accident: ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಾರಿಗೆ ಬಸ್ ಪ್ರಪಾತಕ್ಕೆ ಉರುಳಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಸಾರಿಗೆ ಬಸ್ ಪ್ರಪಾತಕ್ಕೆ ಉರುಳಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Bus Accident: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಜಲದುರ್ಗಾ ಬಳಿ ಅಪಘಾತ ನಡೆದಿದೆ. ಭಾರಿ ಮಳೆಯಿಂದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿರುವ ಮನೆಯ ಮೇಲೆ ಬಿದ್ದು 30 ಅಡಿ ಪ್ರಪಾತಕ್ಕೆ ಉರುಳಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ.

Mass Murder Case: ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ರತ್ನಾಕರ ಮನೆಯ ಹಿಂಭಾಗದ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ದುರ್ಘಟನೆಯ ಹಿಂದಿರುವ ಕಾರಣಗಳನ್ನು ಪೊಲೀಸರು ಶೋಧಿಸುತ್ತಿದ್ದಾರೆ.

Drowned: ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಈಜುಕೊಳ ದುರಂತ, ಒಬ್ಬ ಸಾವು

ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ಈಜುಕೊಳ ದುರಂತ, ಒಬ್ಬ ಸಾವು

ನಿಶಾಂತ್ ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಸ್ನೇಹಿತನ ಜೊತೆ ತೆರಳಿದ್ದರು. ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್‌ನಲ್ಲಿ ಸ್ವಿಮ್ಮಿಂಗ್ ಪೂಲ್‌ಗೆ ಹಾರುವ ವೇಳೆ ತಲೆ ಟ್ವಿಸ್ಟ್ ಆಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ನೀರಿಗೆ ಹಾರಿದ ಸುಶಾಂತ್ ಅಲುಗಾಡದೇ ಇದ್ದಾಗ ಕೂಡಲೇ ಮೇಲಕ್ಕೆತ್ತಿದ್ದಾರೆ.

Self Harming: ಹಲ್ಲು ಕಳೆದುಕೊಂಡು ನೊಂದ ವಿದ್ಯಾರ್ಥಿ ಆತ್ಮಹತ್ಯೆ

ಹಲ್ಲು ಕಳೆದುಕೊಂಡು ನೊಂದ ವಿದ್ಯಾರ್ಥಿ ಆತ್ಮಹತ್ಯೆ

ಅಪಘಾತದಲ್ಲಿ 17 ಹಲ್ಲುಗಳನ್ನು ಈತ ಕಳೆದುಕೊಂಡಿದ್ದ. ಸದಾ ಆಸ್ಪತ್ರೆಗೆ ಹೋಗಿ ಬರುವುದರಿಂದ ಮನನೊಂದಿದ್ದ ಈ ಯುವಕ, ಜೀವನದಲ್ಲಿ ಉಂಟಾದ ಶಾರೀರಿಕ ಮತ್ತು ಮಾನಸಿಕ ಸಂಕಷ್ಟವನ್ನು ಎದುರಿಸಲಾಗದೆ ಆತ್ಮಹತ್ಯೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

Karnataka Rain: ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸಾವು

ಚಿಕ್ಕಮಗಳೂರಲ್ಲಿ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸಾವು

Karnataka Rain: ಚಿಕ್ಕಮಗಳೂರು ತಾಲೂಕಿನ ಕುರುಬರಹಳ್ಳಿಯಲ್ಲಿ ಘಟನೆ ನಡೆದಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಬೇಲೂರು ತಾಲೂಕಿನ ಹೆಬ್ಬಾಳ ತಿಮ್ಮನಹಳ್ಳಿಯ ಮಹಿಳೆ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Murder Case: ತಾಯಿಯನ್ನು ಬೈದಿದ್ದಕ್ಕೆ ಸೋದರ ಮಾವನನ್ನೇ ಮುಗಿಸಿದ ಮಗ!

ತಾಯಿಯನ್ನು ಬೈದಿದ್ದಕ್ಕೆ ಸೋದರ ಮಾವನನ್ನೇ ಮುಗಿಸಿದ ಮಗ!

Murder Case: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ಕೊಲೆ ಪ್ರಕರಣ ನಡೆದಿದೆ. ಆಸ್ತಿಗಾಗಿ ಅಕ್ಕ ಮತ್ತು ತಮ್ಮನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಕೆಟ್ಟ ಪದಗಳಿಂದ ಬೈದ ಹಿನ್ನೆಲೆಯಲ್ಲಿ ಸೋದರ ಮಾವನನ್ನೇ ಮಗ ಹತ್ಯೆ ಮಾಡಿದ್ದಾನೆ.

Wild Animal Attacks: ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಶಾಸಕರು ಗಟ್ಟಿ ಧ್ವನಿ ಎತ್ತಬೇಕಿದೆ

ಕಾಡು ಪ್ರಾಣಿಗಳ ಹಾವಳಿ ಬಗ್ಗೆ ಶಾಸಕರು ಗಟ್ಟಿ ಧ್ವನಿ ಎತ್ತಬೇಕಿದೆ

Wild Animal Attacks: ಕಾಡು ಪ್ರಾಣಿಗಳ ಹಾವಳಿ ತಡೆಗೆ ಶಾಶ್ವತವಾಗಿ ಪರಿಹಾರ ಕಲ್ಪಿಸುವ ವಿಚಾರದಲ್ಲಿ ಶಾಸಕರು ಸದನದಲ್ಲಿ, ಸರಕಾರದಲ್ಲಿ ಗಟ್ಟಿ ಧ್ವನಿಯಲ್ಲಿ ಮಾತಾಡಬೇಕಿದೆ. ರೈತರು-ಕೃಷಿ ಕಾರ್ಮಿಕರ ಮೇಲೆ ಆನೆಗಳು ಸೇರಿ ಇನ್ನಿತರ ಕಾಡು ಪ್ರಾಣಿಗಳು ದಾಳಿ ಮಾಡದಂತೆ ಸರಕಾರ ಅರಣ್ಯಗಳಿಗೆ ಭದ್ರ ಬೇಲಿ ಮಾಡಿ ಜನರನ್ನು, ಬೆಳೆಯನ್ನು ರಕ್ಷಿಸಲಿ ಎಂದುಬುವುದು ಮಲೆನಾಡು ಜನರ ಒತ್ತಾಯವಾಗಿದೆ.

Money doubling scam: ಹಣ ಡಬ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಕಾರು ಚಾಲಕ ಅರೆಸ್ಟ್

ಹಣ ಡಬ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ಕಾರು ಚಾಲಕ ಅರೆಸ್ಟ್

Money doubling scam: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ದುಪ್ಪಟ್ಟು ಮಾಡುವುದಾಗಿ ಹೇಳಿ ಹಲವರಿಗೆ ವಂಚಿಸಿದ್ದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಈತ ಚಿಕ್ಕಮಗಳೂರಿನ ಹೊಸಮನೆ ಬಡಾವಣೆಯ ನಿವಾಸಿಯಾಗಿದ್ದು, ಈ ಹಿಂದೆ ರನ್ಯಾ ರಾವ್ ಕಾರು ಚಾಲಕನಾಗಿದ್ದ ಎನ್ನಲಾಗಿದೆ.

Tourism Alert: ಪ್ರವಾಸಿಗರ ಗಮನಕ್ಕೆ: ಈ ವಾರಾಂತ್ಯದಲ್ಲಿ ದತ್ತಪೀಠಕ್ಕೆ ಬರಬೇಡಿ

ಪ್ರವಾಸಿಗರ ಗಮನಕ್ಕೆ: ಈ ವಾರಾಂತ್ಯದಲ್ಲಿ ದತ್ತಪೀಠಕ್ಕೆ ಬರಬೇಡಿ

ಬೆಂಗಳೂರಿನಿಂದ ವೀಕೆಂಡ್‌ನಲ್ಲಿ ಸಾವಿರಾರು ಪ್ರವಾಸಿಗರು ಚಿಕ್ಕಮಗಳೂರಿನ ಹಿಲ್‌ ಸ್ಟೇಶನ್‌ಗಳಿಗೆ ಲಗ್ಗೆಯಿಡುತ್ತಾರೆ. ಆದರೆ ಈ ವಾರಾಂತ್ಯದಲ್ಲಿ ಇಲ್ಲಿಗೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಕಾರಣ ಇಲ್ಲಿನ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ‌ನಡೆಯುತ್ತಿರುವ ಉರೂಸ್ ಕಾರ್ಯಕ್ರಮ.

HD Deve Gowda: ಕರ್ನಾಟಕದ ರೈಲ್ವೆ ಯೋಜನೆಗಳಿಗೆ ವೇಗ ನೀಡಲು ಎಚ್.ಡಿ.ದೇವೇಗೌಡ ಆಗ್ರಹ

ಕರ್ನಾಟಕದ ರೈಲ್ವೇ ಯೋಜನೆಗಳಿಗೆ ವೇಗ ನೀಡಿ: ಎಚ್.ಡಿ. ದೇವೇಗೌಡ

HD Deve Gowda: ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೈಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಅದಾಗ್ಯೂ ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೈಲ್ವೇ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು 800 ಕೋಟಿ ರೂ.ಯಿಂದ 7,000 ಕೋಟಿ ರೂ.ಗೂ ಮೀರಿ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ತಿಳಿಸಿದ್ದಾರೆ.

Areca nut problem: ಅಡಿಕೆ ಬೆಳೆಗಾರರ ಮೇಲೆ ಇ-ವೇ ಬಿಲ್ ಪ್ರಹಾರ!

ಅಡಿಕೆ ಬೆಳೆಗಾರರ ಮೇಲೆ ಇ-ವೇ ಬಿಲ್ ಪ್ರಹಾರ!

Areca nut problem: ಅಡಿಕೆ ಬೆಳೆಗಾರರು ತಾವು ಬೆಳೆದ ಅಡಿಕೆಯನ್ನು ವಾಹನಗಳಲ್ಲಿ ಸಾಗಿಸಿ ಮಾರುಕಟ್ಟೆಗೆ ತರಬೇಕಾದರೆ, ಸಾಗಾಣೆ ಮಾಡುವ ಮೊದಲು ಆನ್‌ಲೈನಲ್ಲಿ ಇ-ವೇ ಬಿಲ್ (E-Way Bill) ನಮೂದಿಸುವುದು ಕಡ್ಡಾಯ ಮಾಡಲಾಗಿದೆ. ಈ ಬಗ್ಗೆ ಸಾಮಾನ್ಯ ರೈತರಿಗೆ ಯಾವುದೇ ಮಾಹಿತಿ, ಅರಿವು ನೀಡದೆ ಕಾನೂನು ಜಾರಿ ಮಾಡಿರುವುದು ಅಡಿಕೆ ಬೆಳೆಗಾರರಲ್ಲಿ ಆತಂಕ ಮತ್ತು ಆಕ್ರೋಶ ಸೃಷ್ಟಿಸಿದೆ.