ರಾಜ್ಯಾದ್ಯಂತ ಭಾರೀ ಮಳೆ; ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್
ರಾಜ್ಯಾದ್ಯಂತ ಗಾಳಿ ಸಮೇತ ಮಳೆ ಮುಂದುವರಿದಿದೆ. ಮಳೆ ಆರ್ಭಟದಿಂದಾಗಿ ಹಲವೆಡೆ ಅವಾಂತರಗಳು ಸಂಭವಿಸುತ್ತಿದ್ದು, ಧಾರಾಕಾರ ಮಳೆಯಿಂದಾಗಿ ಚಂದ್ರದ್ರೋಣ ಪರ್ವತ ರಸ್ತೆಯ ಮೂರು ಕಡೆಗಳಲ್ಲಿ ಬೃಹತ್ ಗಾತ್ರದ ಮರಗಳು ಧರೆಗುರುಳಿವೆ. ಶೃಂಗೇರಿ ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗಿದ್ದು ತುಂಗಾ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ.