ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಚಿಕ್ಕಮಗಳೂರು

ಕುಟುಂಬವನ್ನು ಬೀದಿಗೆ ತಂದಿದ್ದಾರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ: ಶೃಂಗೇರಿ ಶಾಸಕ ರಾಜೇಗೌಡ ಕಣ್ಣೀರು

ನನ್ನ ಕುಟುಂಬವನ್ನು ಬೀದಿಗೆ ತಂದಿದ್ದಾರೆ: ಶಾಸಕ ರಾಜೇಗೌಡ ಕಣ್ಣೀರು

ಶೃಂಗೇರಿ ಕ್ಷೇತ್ರದ ರೈತರ ಕಾರ್ಮಿಕರ ಮತ್ತು ನೆಲವಾಸಿಗಳ ಸಮಸ್ಯೆ ಕುರಿತು ಚರ್ಚಿಸಲು ಆಯೋಜಿಸಿದ್ದ ಕಾಂಗ್ರೆಸ್‌ ಜನಾಂದೋಲನ ಸಮಾವೇಶದಲ್ಲಿ ಶಾಸಕ ಟಿ.ಡಿ. ರಾಜೇಗೌಡ ಮಾತನಾಡಿದ್ದು, ಈ ವೇಳೆ ನಮ್ಮ ಕುಟುಂಬಕ್ಕೆ ವಿನಾಕಾರಣ ತೊಂದರೆ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಜೀವರಾಜ್‌ ವಿರುದ್ಧ ಆರೋಪಿಸಿದ್ದಾರೆ.

ಎಲ್ಲಾ ಸಮಾಜಗಳಿಗೆ ನೆರಳು, ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ: ಬಿ.ವೈ ವಿಜಯೇಂದ್ರ

ಎಲ್ಲಾ ಸಮಾಜಗಳಿಗೆ ಆಶ್ರಯ ನೀಡುವ ಶಕ್ತಿ ವೀರಶೈವ ಲಿಂಗಾಯತ ಸಮಾಜಕ್ಕಿದೆ

ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರಿನ ಶ್ರೀ ರಂಭಾಪುರಿ ವೀರ ಸಿಂಹಾಸನ ಮಹಾಸಂಸ್ಥಾನ ಮಠದಲ್ಲಿ ಜರುಗಿದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ‌ ಮಹಾ ರಥೋತ್ಸವ ಕಾರ್ಯಕ್ರಮದಲ್ಲಿ‌ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದಾರೆ.

ದೇಶದಲ್ಲಿ ಮುಸ್ಲಿಂ ಲೀಗ್ ಸ್ಥಾನವನ್ನು ತುಂಬುತ್ತಿದೆ ಕಾಂಗ್ರೆಸ್ ಪಕ್ಷ: ಜೋಶಿ ಕಿಡಿ

ಮುಸ್ಲಿಂ ಲೀಗ್ ಸ್ಥಾನವನ್ನು ತುಂಬುತ್ತಿದೆ ಕಾಂಗ್ರೆಸ್ ಪಕ್ಷ: ಜೋಶಿ

ಧಾರವಾಡದಲ್ಲಿ ವಿದ್ಯಾರ್ಥಿಗಳ ಹೋರಾಟಕ್ಕೆ ಅನುಮತಿ ಕೊಟ್ಟಿಲ್ಲ. ಆನೆ ದಾಳಿ ಪ್ರಕರಣದಲ್ಲಿ ಶಾಶ್ವತ ಪರಿಹಾರ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆಗೆ ಇಳಿದವರ ಮೇಲೆ ಲಾಠಿ ಪ್ರಹಾರ ಮಾಡುತ್ತಾರೆ. ಇದನ್ನೆಲ್ಲಾ ನೋಡಿದರೆ ಈ ಸರ್ಕಾರ ಹೋರಾಟ ಹತ್ತಿಕ್ಕುವ ಇಂದಿರಾಗಾಂಧಿ ಮನಸ್ಥಿತಿಯಲ್ಲೇ ಇರುವುದು ಸ್ಪಷ್ಟವಾಗಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ.

Chikkamagaluru: ಕಾಡಾನೆ ದಾಳಿಗೆ ಬಲಿ, ಲಾಠಿಚಾರ್ಜ್‌ ಪ್ರಕರಣ: ಚಿಕ್ಕಮಗಳೂರು ಜಿಲ್ಲೆ ಭಾಗಶಃ ಬಂದ್‌

ಕಾಡಾನೆ ದಾಳಿಗೆ ಬಲಿ, ಲಾಠಿಚಾರ್ಜ್‌: ಚಿಕ್ಕಮಗಳೂರು ಜಿಲ್ಲೆ ಭಾಗಶಃ ಬಂದ್‌

ಜನರ ಆಕ್ರೋಶದ ಕಟ್ಟೆ ಒಡೆದ ಪರಿಣಾಮ ಚಿಕ್ಕಮಗಳೂರು ಜಿಲ್ಲೆ ಭಾಗಶಃ ಬಂದ್​​ ಆಗಿದೆ. ನಿನ್ನೆ ನಡೆದ ಘಟನೆ ಖಂಡಿಸಿ ಬಾಳೆಹೊನ್ನೂರಿನ JCI ಸರ್ಕಲ್ ನಲ್ಲಿ ಪ್ರತಿಭಟನೆ ನಡೆದಿದ್ದು, ನೂರಾರು ಜನರು ಭಾಗಿಯಾಗಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಮತ್ತು ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಪಡಿಸಿದ್ದಾರೆ.

Elephant Attack: ಕಾಡಾನೆ ದಾಳಿಗೆ ಮತ್ತೊಂದು ಜೀವ ಬಲಿ, ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ, ಲಾಠಿಚಾರ್ಜ್

ಕಾಡಾನೆ ದಾಳಿಗೆ ಮಹಿಳೆ ಬಲಿ, ರೊಚ್ಚಿಗೆದ್ದ ಜನರಿಂದ ಪ್ರತಿಭಟನೆ, ಲಾಠಿಚಾರ್ಜ್

ಮಹಿಳೆ ಸಾವಿನಿಂದ ಕೆರಳಿದ ಜನರು ಕಡಬಗೆರೆಯಲ್ಲಿ ಅಂಗಡಿ ಮುಂಗಟ್ಟು ಬಂದ್‌ ಮಾಡಿ ರಸ್ತೆಗೆ ಇಳಿದಿದ್ದಾರೆ. ರಸ್ತೆಯಲ್ಲೇ ಶವವಿಟ್ಟು ಆಕ್ರೋಶ ಹೊರಹಾಕಿದರು. ಮೃತರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಕೊಡಬೇಕು ಎಂದು ರಸ್ತೆಯಲ್ಲೇ ಶಾಮಿಯಾನ ಹಾಕಿಕೊಂಡು ಹೋರಾಟ ನಡೆಸಿದರು. ಇದರಿಂದ ಎರಡು ಕಿಲೋ ಮೀಟರ್‌ವರೆಗೂ ಟ್ರಾಫಿಕ್‌ ಜಾಮ್ ಆಗಿತ್ತು. ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಸಾಗ್ತಿದ್ದ ಸವಾರರು ಪರದಾಡಿದರು.

Stone Pelting: ಹಿಂದೂಗಳ ಮನೆ ಮೇಲೆ ನಿರಂತರ ಕಲ್ಲು ತೂರಾಟ, ಪ್ರದೇಶ ಉದ್ವಿಗ್ನ

ಹಿಂದೂಗಳ ಮನೆ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ, ಪ್ರದೇಶ ಉದ್ವಿಗ್ನ

ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಕೆಲ ಮುಸ್ಲಿಂ ಯುವಕರನ್ನು ಬಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊಂದೆಡೆ, ಘರ್ಷಣೆ ವೇಳೆ ಇಬ್ಬರು ಮುಸ್ಲಿಂ ಯುವಕರು ಗಾಯಗೊಂಡಿದ್ದು, ಅವರನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂಬ ಆರೋಪವನ್ನು ಗಾಯಾಳುಗಳು ಮತ್ತು ಸಮುದಾಯದ ಮುಖಂಡರು ಮಾಡುತ್ತಿದ್ದಾರೆ.

Self harming: ಟಿವಿ ನೋಡುವುದು ಕಡಿಮೆ ಮಾಡು ಎಂದಿದ್ದಕ್ಕೆ ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಟಿವಿ ವೀಕ್ಷಣೆ ಕಡಿಮೆ ಮಾಡು ಎಂದಿದ್ದಕ್ಕೆ 7ನೇ ತರಗತಿ ವಿದ್ಯಾರ್ಥಿನಿ ನೇಣು

ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಈ ವೇಳೆ ಸುಪ್ರಿತಾ ಟಿವಿ ನೋಡುತ್ತಿದ್ದಳು. ತಾಯಿ ಊಟ ಹಾಕಿ ಕೊಟ್ಟಾಗ ಸುಪ್ರಿತಾ ಟಿವಿ ನೋಡುತ್ತಾ ತಟ್ಟೆ ಬೀಳಿಸಿ ಅನ್ನವನ್ನು ಚೆಲ್ಲಿದ್ದಳು. ಅದಕ್ಕೆ ತಾಯಿ ಬರೀ ಟಿವಿ ನೋಡು, ಓದಬೇಡ, ಚೆಲ್ಲಿರುವ ಅನ್ನವನ್ನು ಕ್ಲೀನ್ ಮಾಡು ಎಂದು ಹೇಳಿ ಮತ್ತೆ ಕೆಲಸಕ್ಕೆ ಹೋಗಿದ್ದರು.

Woman Missing case: ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಾಭರಣಕ್ಕಾಗಿ ಕೊಲೆಯಾದ ಶಂಕೆ

ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಕ್ಕಾಗಿ ಕೊಲೆ ಶಂಕೆ

ರಾಷ್ಟ್ರೀಯ ಹೆದ್ದಾರಿ 373ರ ಸಮೀಪ ಇರುವ ಕೆರೆಯ ಬಳಿ ಚಪ್ಪಲಿ, ಬಟ್ಟೆ, ವ್ಯಾನಿಟಿ ಬ್ಯಾಗ್ ಹಾಗೂ ಎಲ್ಲವೂ ಪತ್ತೆಯಾಗಿದೆ. ಹಾಗಾಗಿ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಿಯಾಂಕರನ್ನು ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಸುಮಾರು 25 ರಿಂದ 30 ಲಕ್ಷ ರೂ. ಮೌಲ್ಯದ ಒಡವೆ ಆಕೆಯ ಮೈಮೇಲೆ ಮೇಲೆ ಇತ್ತು. ಹಾಗಾಗಿ ಆಕೆಯನ್ನು ಅದಕ್ಕೋಸ್ಕರ ಯಾರಾದರೂ ಕೊಲೆ ಮಾಡಿರಬಹುದು ಎನ್ನುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

Chikkamagaluru news: ಕಡೂರು ಶಾಸಕರ ಪಿಎಯಿಂದ ಕಿರುಕುಳ, ಸರಕಾರಿ ನೌಕರ ಡೆತ್‌ನೋಟ್‌ ಬರೆದಿಟ್ಟು ನಾಪತ್ತೆ

ಶಾಸಕರ ಪಿಎಯಿಂದ ಕಿರುಕುಳ, ಸರಕಾರಿ ನೌಕರ ಡೆತ್‌ನೋಟ್‌ ಬರೆದಿಟ್ಟು ನಾಪತ್ತೆ

ಕಡೂರು ತಾಲೂಕು ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಇಕ್ಬಾಲ್ ನಾಪತ್ತೆಯಾಗಿದ್ದಾರೆ. ಶಾಸಕ ಕೆ.ಎಸ್.ಆನಂದ್ ಅವರ ಆಪ್ತ ಸಹಾಯಕ ಮಂಜುನಾಥ್, ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಶಿವಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಕಲ್ಲೇಶ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದಾರೆ.

Chikkamagaluru: ಹಿಂದೂ ಗೃಹಿಣಿ ಮನೆಯಲ್ಲಿ ಅರೆಬೆತ್ತಲಾಗಿ ಕಂಡುಬಂದ ಮುಸ್ಲಿಂ ಕಾಂಗ್ರೆಸ್‌ ಮುಖಂಡ, ಹಲ್ಲೆ

ಹಿಂದೂ ಗೃಹಿಣಿ ಮನೆಯಲ್ಲಿ ಕಂಡುಬಂದ ಮುಸ್ಲಿಂ ಕಾಂಗ್ರೆಸ್‌ ಮುಖಂಡ, ಹಲ್ಲೆ

ಘಟನೆ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಮನೆಯಲ್ಲಿ ಇದ್ದ ವೇಳೆಯಲ್ಲಿ ಮನೆ ಮೇಲೆ ದಾಳಿ ನಡೆಸಿದ ಅಕ್ಕಪಕ್ಕದ ಹಿಂದೂ ಹುಡುಗರು, ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ನಡೆದಿದೆ.

ನಿರಾಗ್‌ ಫುಡ್ಸ್‌ ಬೆಳೆದು ಬಂದ ದಾರಿ ಗೊತ್ತೆ? ಇಲ್ಲಿದೆ ಸಂಸ್ಥಾಪಕರ ಆಸಕ್ತಿದಾಯಕ ವಿವರ

ನಿರಾಗ್‌ ಫುಡ್ಸ್‌ ಬೆಳೆದು ಬಂದ ದಾರಿ ಗೊತ್ತೆ? ಇಲ್ಲಿದೆ ವಿವರ

ಕಾರ್ಪೊರೇಟ್ ಜಗತ್ತಿನಲ್ಲಿ ಹಲವಾರು ವರ್ಷಗಳನ್ನು ಕಳೆದ ನಂತರ, ನಾನು ಹೆಚ್ಚು ವೈಯಕ್ತಿಕ ಮತ್ತು ಅರ್ಥಪೂರ್ಣವಾದದ್ದನ್ನು ಮಾಡಲು ಬಯಸುವ ಹಂತವನ್ನು ತಲುಪಿದೆ. ಬೆಳೆದ ನಂತರ, ಆಹಾರವು ಯಾವಾಗಲೂ ನನ್ನ ಜೀವನದಲ್ಲಿ ಕೇಂದ್ರವಾಗಿತ್ತು, ವಿಶೇಷವಾಗಿ ನನ್ನ ಅಜ್ಜಿಯ ಅಡುಗೆಮನೆಯಲ್ಲಿ ಬೇಯಿಸಿದ ಸರಳ, ಆರೋಗ್ಯಕರ ಆಹಾರ. ಆ ಸುವಾಸನೆ, ಮತ್ತು ಎಲ್ಲವನ್ನೂ ತಯಾರಿಸುವ ಕಾಳಜಿ ನನ್ನೊಂದಿಗೆ ಉಳಿದುಕೊಂಡಿತು.

Wildfire: ಚಾರ್ಮಾಡಿ ಘಾಟಿಯಲ್ಲಿ ಕಾಳ್ಗಿಚ್ಚು, ಭಾರಿ ಪ್ರಮಾಣದ ಹುಲ್ಲುಗಾವಲು ಬೆಂಕಿಗಾಹುತಿ

ಚಾರ್ಮಾಡಿ ಘಾಟಿಯಲ್ಲಿ ಕಾಳ್ಗಿಚ್ಚು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ

ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಸಂಚರಿಸುವ ವಾಹನ ಸವಾರರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕಿಡಿಗೇಡಿಗಳು ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಬೆಂಕಿ ರೇಖೆ ಮಾಡದೆ ನಿರ್ಲಕ್ಷ ವಹಿಸಿದ್ದರಿಂದ ಈ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ.

Kyasanur Forest Disease: ಮಂಗನ ಕಾಯಿಲೆಗೆ ಮೊದಲ ಬಲಿ, ಮಲೆನಾಡಿನಲ್ಲಿ ಹೆಚ್ಚಿದ ಆತಂಕ

ಮಂಗನ ಕಾಯಿಲೆಗೆ ಮೊದಲ ಬಲಿ, ಮಲೆನಾಡಿನಲ್ಲಿ ಹೆಚ್ಚಿದ ಆತಂಕ

ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ಕೆಎಫ್​ಡಿಯಿಂದಾಗಿ ಒಬ್ಬ ಯುವಕನ ಸಾವು ಸಂಭವಿಸಿದೆ. ಇದು ನೆರೆಯ ಜಿಲ್ಲೆಯಾದ ಚಿಕ್ಕಮಗಳೂರಿನ ಜನರಲ್ಲೂ ಆತಂಕ ಇಮ್ಮಡಿಗೊಳಿಸಿದೆ. ರೋಗ ಹರಡದಂತೆ ತಡೆಯಲು ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ. ಸುಮಾರು 595ಕ್ಕೂ ಹೆಚ್ಚು ಜನರ ರಕ್ತದ ಮಾದರಿಯನ್ನು ಸಂಗ್ರಹಿಸಿ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಮದುವೆಗೂ ಮುನ್ನವೇ ಗರ್ಭಿಣಿಯಾದ ಯುವತಿ; ಹುಟ್ಟಿದಾಕ್ಷಣ ಮಗುವಿನ ಕತ್ತು ಹಿಸುಕಿ ಕೊಂದ ಅಜ್ಜಿ?

ಮದುವೆಗೂ ಮುನ್ನವೇ ಯುವತಿ ಗರ್ಭಿಣಿ; ಮಗುವನ್ನು ಕತ್ತು ಹಿಸುಕಿ ಕೊಂದ ಅಜ್ಜಿ?

Chikkamagaluru News: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಬಾವಿಕೆರೆ ಗ್ರಾಮದಲ್ಲಿ ಘಟನೆ ನಡೆದಿದೆ. ಮಗು ಮೃತಪಟ್ಟ ಬಳಿಕ ಮೃತದೇಹವನ್ನು ನಿರ್ಜನ ಪ್ರದೇಶದಲ್ಲಿ ತಿಪ್ಪೆಯ ಗುಂಡಿಯಲ್ಲಿ ಹೂತು ಹಾಕಲಾಗಿದೆ. ಯುವತಿಯು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದರಿಂದ ಆಕೆಯ ಕುಟುಂಬಸ್ಥರೇ ಹಸುಗೂಸನ್ನು ಕೊಂದಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

Belagavi Rains: ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಭಾರೀ ಮಳೆ; 1 ಗಂಟೆಗೂ ಹೆಚ್ಚು ಕಾಲ ವರ್ಷಧಾರೆ!

ಬೆಳಗಾವಿಯಲ್ಲಿ ಸಂಕ್ರಾಂತಿ ಹಬ್ಬದ ಮುನ್ನಾ ದಿನ ಅಬ್ಬರಿಸಿದ ಮಳೆರಾಯ!

Karnataka Rains: ರಾಜ್ಯದಲ್ಲಿ ಬೆಳಗಾವಿ ಮಾತ್ರವಲ್ಲದೇ ಚಿಕ್ಕಮಗಳೂರು ಜಿಲ್ಲೆಯಲಲ್ಲೂ ಮಂಗಳವಾರ ಮಳೆ ಅಬ್ಬರಿಸಿದೆ. ಬೆಳಗಾವಿಯಲ್ಲಿ ಅಕಾಲಿಕ ಮಳೆಯಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿದ್ದರಿಂದ ವಾಹನ ಸವಾರರು ಹೈರಾಣಾದರು. ರಾಜ್ಯ ವಿವಿಧೆಡೆ ವರ್ಷದ ಮೊದಲ ಮಳೆ ಸಿಂಚನವಾಗಿದೆ.

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದವ ಅರೆಸ್ಟ್‌; ಬಟ್ಟೆ ಬಗ್ಗೆ ಮಾತನಾಡಿದ್ದಕ್ಕೆ ಶಾಸಕಿ ಕಿಡಿ

ನಯನಾ ಮೋಟಮ್ಮಗೆ ಅಶ್ಲೀಲ ಕಮೆಂಟ್‌ ಮಾಡಿದ ಯುವಕ ಅರೆಸ್ಟ್‌

Congress MLA Nayana Motamma: ರಾಜಕೀಯಕ್ಕೆ ಪ್ರವೇಶ ಮಾಡುವ ಮುನ್ನ ಹೇಗಿದ್ದೆ ಅದೇ ರೀತಿ ಈಗಲೂ ಇರಲು ಪ್ರಯತ್ನ ಮಾಡುತ್ತೇನೆ. ನಾನು ನನ್ನ ಜೀವನವನ್ನು ಪಾರದರ್ಶಕವಾಗಿ ನಡೆಸಬೇಕು. ರಾಜಕೀಯವಾಗಿ ಯಾವುದೇ ಮುಚ್ಚುಮರೆ ಇರಬಾರದು. ಆದರೆ, ಪರ್ಸನಲ್ ಆಗಿ ಟಾರ್ಗೆಟ್ ಮಾಡಿ ಕಾಮೆಂಟ್ ‌ಮಾಡುತ್ತಾರೆ ಎಂದು ಶಾಸಕಿ ನಯನಾ ಮೋಟಮ್ಮ ಕಿಡಿಕಾರಿದ್ದಾರೆ.

Murder Case: ಇನ್‌ಸ್ಟಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್‌ ಮಾಡಿ ಕಿರುಕುಳ, ಯುವಕನ ಹತ್ಯೆ

ಇನ್‌ಸ್ಟಗ್ರಾಮ್‌ನಲ್ಲಿ ಯುವತಿಗೆ ಮೆಸೇಜ್‌ ಮಾಡಿ ಕಿರುಕುಳ, ಯುವಕನ ಹತ್ಯೆ

ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೆ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ. ಯುವತಿಗೆ ಈಗಾಗಲೇ ವೇಣು ಎಂಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ‘ಎಂಗೇಜ್ಮೆಂಟ್ ಆಗಿದೆ, ಮೆಸೇಜ್ ಮಾಡಬೇಡ’ ಎಂದು ಯುವತಿ ಮಂಜುನಾಥ್‌ಗೆ ತಿಳಿಸಿದ್ದಳು. ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ.

ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್‌; ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ

ಹೊಸ ವರ್ಷಕ್ಕೆ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿಷೇಧ

Chikkamagaluru Tourism Place: ಹೊಸ ವರ್ಷವನ್ನು ಬರ ಮಾಡಿಕೊಳ್ಳಲು ಎಲ್ಲೆಡೆ ಸಿದ್ಧತೆ ಜೋರಾಗಿದೆ. ಜನರು ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಹೊಸ ವರ್ಷವನ್ನು ಆಚರಿಸಲು ಪ್ಲಾನ್‌ ಮಾಡಿರುತ್ತಾರೆ. ಈಗಾಗಲೇ ರಾಜ್ಯದ ಹಲವಡೆ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದ್ದು, ಆ ಸಾಲಿಗೆ ಚಿಕ್ಕಮಗಳೂರಿನ 22 ಸ್ಥಳಗಳು ಸೇರಿವೆ.

Union Minister of Steel H.D. Kumaraswamy: ಕಾಫಿ ಬೆಳೆ ಸಾಲದ ಬಡ್ಡಿ ದರ ಶೇ.3ಕ್ಕೆ ಇಳಿಸಲು ಯತ್ನ: ಹೆಚ್.ಡಿ.ಕೆ

ಕಾಫಿ ಬೆಳೆ ಸಾಲದ ಬಡ್ಡಿ ದರ ಶೇ.3ಕ್ಕೆ ಇಳಿಸಲು ಯತ್ನ: ಹೆಚ್.ಡಿ.ಕೆ

ಕಾಫಿ ಬೆಳೆಗಾರರ ಫಸಲು ಸಾಲದ ಮೇಲಿನ ಬಡ್ಡಿ ದರವನ್ನು ಶೇ.3ಕ್ಕೆ ಇಳಿಸುವ ನಿಟ್ಟಿನಲ್ಲಿಯೂ ಪ್ರಾಮಾ ಣಿಕ ಪ್ರಯತ್ನ ಕೈಗೊಳ್ಳುವಾಗಿ ಹೇಳಿದ ಕುಮಾರಸ್ವಾಮಿ, ವನ್ಯಜೀವಿಗಳ ದಾಳಿ ತಡೆಗೆ ತಾನು ಮುಖ್ಯ ಮಂತ್ರಿಯಾಗಿದ್ದಾಗ ಜಾರಿಗೆ ತಂದ ರೈಲ್ವೇ ಕಂಬಿ ಅಳವಡಿಕೆ ಯೋಜನೆಯನ್ನು ಈಗಿನ ರಾಜ್ಯ ಸರಕಾರ ಜಾರಿಗೆ ತರುತ್ತಿಲ್ಲ.

ಸರ್ಫೆಸಿ ಕಾಯ್ದೆಗೆ ಪರಿಹಾರ; ದೆಹಲಿಗೆ ಕಾಫಿ ಬೆಳೆಗಾರರ ನಿಯೋಗ ಬರುವಂತೆ ಎಚ್.ಡಿ. ಕುಮಾರಸ್ವಾಮಿ ಸಲಹೆ

ದೆಹಲಿಗೆ ಕಾಫಿ ಬೆಳೆಗಾರರ ನಿಯೋಗ ಬರುವಂತೆ ಎಚ್.ಡಿ. ಕುಮಾರಸ್ವಾಮಿ ಸಲಹೆ

ಸೆಕ್ಯುರಿಟೈಸೇಶನ್ ಮತ್ತು ಹಣಕಾಸು ಆಸ್ತಿಗಳ ಪುನರ್ನಿರ್ಮಾಣ ಮತ್ತು ಭದ್ರತಾ ಹಿತಾಸಕ್ತಿ ಕಾಯ್ದೆ (SARFAESI), ಕಾಫಿ ಬೆಳೆಗಾರರಿಗೆ ಮರಣಶಾಸನವಾಗಿದೆ ಎಂದು ಕಾಫಿ ಬೆಳೆಗಾರರು ಆತಂಕ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ದೆಹಲಿಗೆ ನಿಯೋಗ ಬರುವಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

Balehonnur News: ಯುವ ಪೀಳಿಗೆಯನ್ನು ಮರಳಿ ಕಾಫಿ ಕೖಷಿಯತ್ತ ಕರೆ ತನ್ನಿ, ಜೆನ್ ಜೀ ಪೀಳಿಗೆಗೆ ತಕ್ಕಂತೆ ಮಾರುಕಟ್ಟೆ ರೂಪಿಸಿ: ಕಾಫಿ ತಜ್ಞರ ಕರೆ

ಯುವ ಪೀಳಿಗೆಯನ್ನು ಮರಳಿ ಕಾಫಿ ಕೖಷಿಯತ್ತ ಕರೆ ತನ್ನಿ

ಆರ್ಥಿಕತೆಯ ಬಲದೊಂದಿಗೆ ಕಾಫಿ ಕ್ಷೇತ್ರಕ್ಕೆ ಆಧುನಿಕ ರೀತಿಯ ತಂತ್ರಜ್ಞಾವದ ಪರಿಚಯ ಹೆಚ್ಚಾಗ ಬೇಕಾಗಿದೆ. ಸುಸ್ಥಿರ ಮಾರುಕಟ್ಟೆಯತ್ತ ಬೆಲೆಗಾರರ ಚಿತ್ತ ಹೆಚ್ಚಾಗಬೇಕಾಗಿದೆ ಎಂದು ನುಡಿದ ಚಂಗಪ್ಪ, ಜೆನ್ ಜೀ ಕಾಲಘಟ್ಟದಲ್ಲಿರುವ ಈ ದಿನಗಳಲ್ಲಿ ಪರಿಸರ ಸ್ನೇಹಿ ಕಾಫಿಯನ್ನು ಹಚ್ಚು ಪ್ರಚುರಪಡಿಸಬೇಕು. ಜೆನ್ ಜೀ ಪೀಳಿಗೆಯ ಮನಸ್ಥಿತಿಗೆ ತಕ್ಕಂತೆ ಕಾಫಿಯನ್ನು ಮಾರುಟ್ಟೆಗೆ ಬಿಡುಗಡೆಗೊಳಿಸಬೇಕಾಗಿದೆ

ಭಾರತೀಯ ಕಾಫಿ ಮಾರುಕಟ್ಟೆ ವೃದ್ಧಿಗೆ ಪ್ರಯತ್ನ

ಭಾರತೀಯ ಕಾಫಿ ಮಾರುಕಟ್ಟೆ ವೃದ್ಧಿಗೆ ಪ್ರಯತ್ನ

ಭಾರತದ ಕಾಫಿ ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದಲ್ಲಿ ಜನತೆ, ಉದ್ಯಮಿಗಳ ಮನಗೆದ್ದಿದೆ. ಹೀಗಿರುವಾಗ ಭವಿಷ್ಯದಲ್ಲಿಯೂ ಭಾರತದ ಕಾಫಿಗೆ ಉತ್ತಮ ಮಾರುಕಟ್ಟೆ ದೊರಕುವುದು ನಿಸ್ಸಂಶ ಯ ಎಂದರು. ದೇಶದ ಜಿಡಿಪಿ ಪ್ರಗತಿಯು ಶೇ.6.5 ರಿಂದ 7ಕ್ಕೆ ಹೆಚ್ಚಾಗಿದೆ. 330 ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆಯಲ್ಲಿಯೂ ಪ್ರಗತಿಯಾಗಿದೆ.

ಭಾರತದ ಕಾಫಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ವಿದೇಶಗಳಿಂದ ಮುಕ್ತ ವ್ಯಾಪಾರ ಒಪ್ಪಂದ: ಜೋಶಿ

ಭಾರತದ ಕಾಫಿಗೆ ಹೆಚ್ಚಿದ ಜಾಗತಿಕ ಬೇಡಿಕೆ: ಪ್ರಲ್ಹಾದ್‌ ಜೋಶಿ

ಭಾರತ ಇಂದು 4 ಲಕ್ಷ ಟನ್‌ ಕಾಫಿಯನ್ನು ಉತ್ಪಾದಿಸುತ್ತಿದ್ದು, ಶೇ.70ರಷ್ಟು ಕಾಫಿ ರಫ್ತು ಮಾಡುತ್ತಿದೆ. ಶೇ.30ರಷ್ಟು ಮಾತ್ರ ಸ್ಥಳೀಯವಾಗಿ ಬಳಕೆಯಾಗುತ್ತಿದೆ. ಚಿಕ್ಕಮಗಳೂರು ಕಾಫಿ, ಅರೋಕೋ ಕಾಫಿ ಸೇರಿದಂತೆ ದೇಶದೆಲ್ಲೆಡೆ ಕಾಫಿ ಬೆಳೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ದ್ವೇಷ ಭಾಷಣ ತಡೆ ಕಾಯ್ದೆ; ಜಿಹಾದಿ ಮನಸ್ಥಿತಿಯವರನ್ನು ಮೊದಲು ಜೈಲಿಗೆ ಹಾಕಬೇಕಾಗುತ್ತದೆ ಎಂದ ಜೋಶಿ

ಜಿಹಾದಿ ಮನಸ್ಥಿತಿ ಉಳ್ಳವರನ್ನು ಮೊದಲು ಜೈಲಿಗೆ ಹಾಕಬೇಕಾಗುತ್ತದೆ: ಜೋಶಿ

Pralhad Joshi: ಬಾಳೆಹೊನ್ನೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಬಹಳ ಜನ ಜಿಹಾದಿ ಮನಸ್ಥಿತಿಯಲ್ಲಿ ಭಾಷಣ ಮಾಡುವರು ಇದ್ದಾರೆ. ಸರ್ಕಾರ ಮೊದಲು ಇಂಥವರನ್ನು ಒಳಗೆ ಹಾಕಬೇಕಿದೆ. ರಾಜ್ಯದಲ್ಲಿ ಈ ಮಸೂದೆ ಅನುಷ್ಠಾನ ಆಗುವುದಿಲ್ಲ ಎಂದು ಹೇಳಿದ್ದಾರೆ.

Loading...