ಶೃಂಗೇರಿ ಶಾಸಕ ಸ್ಥಾನ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂ ಸೂಚನೆ
Supreme Court: ಶೃಂಗೇರಿ ಶಾಸಕರಾಗಿ ಆಯ್ಕೆಯಾದ ಬಿಜೆಪಿಯ ಡಿ.ಎನ್. ಜೀವರಾಜ್ ಅವರಿಗೆ ಸುಪ್ರೀಂ ಕೋರ್ಟ್ನಿಂದ ಮತ್ತೆ ಬಿಗ್ ಶಾಕ್ ಎದುರಾಗಿದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಮುಂದುವರಿಸಲು ಸೂಚನೆ ನೀಡಿ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿಕೆ ಮಾಡಿದೆ. ಆ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲಿದ್ದಾರೆ.