ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಿಕ್ಕಮಗಳೂರು

TD Rajegowda: ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್ : ಶೃಂಗೇರಿ ಚುನಾವಣೆ ಅಂಚೆ ಮತ ಮರುಎಣಿಕೆಗೆ ಹೈಕೋರ್ಟ್ ಆದೇಶ

ಶಾಸಕ ರಾಜೇಗೌಡಗೆ ಶಾಕ್: ಶೃಂಗೇರಿ ಅಂಚೆ ಮತ ಮರುಎಣಿಕೆಗೆ ಹೈಕೋರ್ಟ್ ಆದೇಶ

ಏಪ್ರಿಲ್ 6 ರಂದೇ ಮರು ಎಣಿಕೆಗೆ ಆದೇಶ ನೀಡಿದ್ದ ಹೈಕೋರ್ಟ್, ಬಳಿಕ ಇದಕ್ಕೆ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು ಮತ್ತೆ ಆದೇಶ ಮಾಡಿದೆ

Karnataka SSLC Results: ʼʼನನ್ನ ಅಂಕದ ಹಿಂದೆ ಪೋಷಕರ ತ್ಯಾಗ, ಶಿಕ್ಷಕರ ಪ್ರೋತ್ಸಾಹ ಇದೆʼʼ: 625 ಅಂಕ ಪಡೆದ ಬೃಂದಾ ಮನದಾಳ

625 ಅಂಕ ಪಡೆದ ಬೃಂದಾ ಓದಿನ ತಯಾರಿ ಹೇಗಿತ್ತು?

SSLC Result 2026: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು 7 ಮಂದಿ 625 ಅಂಕಕ್ಕೆ 625 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಪೈಕಿ ಚಿಕ್ಕಮಗಳೂರು ನಗರದ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿನಿ ಬೃಂದಾ ಎಂ. ತಾಪ್ಸೆ ʼವಿಶ್ವವಾಣಿ ಟಿವಿʼ ಪ್ರತಿನಿಧಿ ಶಿವಪ್ರಸಾದ್‌ ಬೋಳಂತೂರು ಜತೆ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾಳೆ.

Karnataka Rains: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ; ಹಲವೆಡೆ ಧರೆಗುರುಳಿದ ಮರ, ವಿದ್ಯುತ್ ಕಂಬಗಳು

ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ; ಹಲವೆಡೆ ಧರೆಗುರುಳಿದ ಮರಗಳು

Karnataka Rains: ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಳೆ ಬೀದರ್‌, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ ಸೇರಿ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ.

Road Accident: ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತರ ವಿವರ ಇಲ್ಲಿದೆ

ಮಂತ್ರಾಲಯದ ಬಳಿ ಭೀಕರ ಅಪಘಾತ, ಮಗು ಸೇರಿ 8 ಮಂದಿ ಮೃತರ ವಿವರ ಇಲ್ಲಿದೆ

ಚಿಕ್ಕಮಗಳೂರು ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಮೃತಪಟ್ಟವರನ್ನು ಚಿಕ್ಕಮಗಳೂರು ಮೂಲದ ಕುಮಾರ್ (50), ದೀಪಿಕಾ, ವೀಣಾ (42), ಸುನೀಲ್ (40), ಪುಟ್ಟಮ್ಮ(55), ಲೋಲಾಕ್ಷಿ, ಯಶೋಧಾ(60) ಹಾಗೂ ಬಾಲಕಿ ಬೆಳ್ಳಿ(5) ಎಂದು ಗುರುತಿಸಲಾಗಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Chikkamagaluru news: ಅಂಬೇಡ್ಕರ್‌ ಜಯಂತಿ ಮೆರವಣಿಗೆಗೆ ನುಗ್ಗಿದ ಕಾರು, ಬಾಲಕಿ ಸಾವು, ಹಲವರಿಗೆ ಗಾಯ

ಅಂಬೇಡ್ಕರ್‌ ಜಯಂತಿ ಮೆರವಣಿಗೆಗೆ ನುಗ್ಗಿದ ಕಾರು, ಬಾಲಕಿ ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಇಂದಾವರ ಗ್ರಾಮದಿಂದ ಬಿಳೆಕಲ್ಲು ಗ್ರಾಮದ ಸಂಬಂಧಿ ಮನೆಗೆ ಹೋಗಿದ್ದ ಸಾನ್ವಿ (7) ಎಂಬ ಬಾಲಕಿ ಕಾರು ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

Girl death: ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಆಟವೇ ಮೃತ್ಯುವಾಯ್ತು! ಜೋಕಾಲಿ ಸೀರೆ ಕುತ್ತಿಗೆಗೆ ಬಿಗಿದು ಬಾಲಕಿ ಸಾವು

ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಳ್ಳಿಯಲ್ಲಿ ದುರ್ಘಟನೆ ನಡೆದಿದೆ. ಸೀರೆಯಿಂದ ಕಟ್ಟಿದ ಜೋಕಾಲಿಯಲ್ಲಿ ಆಟವಾಡುತ್ತಾ ಗಿರಕಿ ಹೊಡೆಯುವಾಗ ಅಥವಾ ಆಕಸ್ಮಿಕವಾಗಿ ಕಾಲು ಜಾರಿದಾಗ, ಸೀರೆಯು ಬಾಲಕಿಯ ಕುತ್ತಿಗೆಗೆ ಬಿಗಿಯಾಗಿ ಸುತ್ತಿಕೊಂಡಿದೆ. ಇದರಿಂದಾಗಿ ಬಾಲಕಿಗೆ ಉಸಿರಾಡಲು ಸಾಧ್ಯವಾಗದೇ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರದಿಂದ ದ್ರೋಹ: ಸಿಎಂ ಅಸಮಾಧಾನ

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೇ ಕೇಂದ್ರ ದ್ರೋಹ: ಸಿಎಂ

Handur-N R Pura bridge inauguration: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರವು 2023-24 ರ ಆಯವ್ಯಯದಲ್ಲಿ 5300 ಕೋಟಿಗಳನ್ನು ಘೋಷಿಸಿತು. ಆದರೆ ಇದುವರೆಗೆ ಈ ಅನುದಾನ ನೀಡಿಲ್ಲ. ಈ ಮೂಲಕ ರಾಜ್ಯದ ಜನರಿಗೆ ಕೇಂದ್ರ ದ್ರೋಹವೆಸಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

NR Pura Bridge: ಮಲೆನಾಡಿನ ಜನರ ದಶಕಗಳ ಕನಸು ನನಸು; ಹಂದೂರು-ಎನ್‌ಆರ್ ಪುರ ಸೇತುವೆ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಹಂದೂರು-ಎನ್‌ಆರ್ ಪುರ ಸೇತುವೆ ಲೋಕಾರ್ಪಣೆ ಮಾಡಿದ ಸಿಎಂ

Handur-N R Pura bridge inauguration: ಭದ್ರಾ ಡ್ಯಾಂ ಹಿನ್ನೀರಿನಿಂದ ಎನ್‌.ಆರ್.ಪುರ ತಾಲೂಕಿನ ಹಲವು ಗ್ರಾಮಗಳು ನೀರಿನಿಂದ ಆವೃತವಾಗಿ ಪಟ್ಟಣದಿಂದ ಸಂಪರ್ಕ ಕಳೆದುಕೊಂಡಿದ್ದವು. ಇದರಿಂದ ಉಂಟಾಗಿದ್ದ ಸಮಸ್ಯೆ ನಿವಾರಿಸಲು 34.86 ಕೋಟಿ ವೆಚ್ಚದಲ್ಲಿ ಭದ್ರಾ ಹಿನ್ನೀರಿನಲ್ಲಿ ಸೇತುವೆ ನಿರ್ಮಿಸಲಾಗಿದೆ. ಇದರಿಂದ ಹೊನ್ನೇಕೊಡಿಗೆ ಭಾಗದ ಜನರ ದಶಕಗಳ ಕನಸು ನನಸಾಗಿದೆ. ಈ ನೂತನ ಸೇತುವೆಗೆ ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನೇ ಇಡಲಾಗಿದೆ.

Sringeri MLA T D Rajegowda Interview: ಶೃಂಗೇರಿ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ

ಶೃಂಗೇರಿ ಕ್ಷೇತ್ರದ ಅಭಿವೃದ್ದಿಯೇ ನನ್ನ ಧ್ಯೇಯ

ರಾಜಕೀಯ ಪಥದಲ್ಲಿ ಹಲವು ತಿರುವುಗಳನ್ನು ಕಂಡಿರುವೆ. ಜೆಡಿಎಸ್‌ನಿಂದ ಹೊರ ಬಂದು, ಕಾಂಗ್ರೆಸ್‌ಗೆ ಸೇರಿ ಜನಸೇವೆ ಮುಂದುವರಿಸಿದೆ. ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಪ್ರಮುಖ ನಾಯಕರ ಮಾರ್ಗದರ್ಶನದಲ್ಲಿ ರಾಜಕೀಯವಾಗಿ ಮತ್ತಷ್ಟು ಬಲ ಪಡೆದುಕೊಂಡೆ. ಶೃಂಗೇರಿ ಕ್ಷೇತ್ರದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು ಸ್ಥಳೀಯ ಜನರ ಜೀವನಮಟ್ಟವನ್ನು ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿವೆ.

Cabinet reshuffle: ಸಂಪುಟ ಪುನಾರಚನೆ ಹೈಕಮಾಂಡ್‌ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಂಪುಟ ಪುನಾರಚನೆ ಹೈಕಮಾಂಡ್‌ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನಾರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನಾರಚನೆ ವಿಳಂಬಕ್ಕೆ ಕಾರಣವಿರಬಹುದು ಎಂದರು.

ನನಸಾದ ಕನಸು ಎನ್.ಆರ್. ಪುರ ಸೇತುವೆ  ಮಲೆನಾಡಿನ ಸಂಪರ್ಕ ಕ್ರಾಂತಿ

ನನಸಾದ ಕನಸು ಎನ್.ಆರ್. ಪುರ ಸೇತುವೆ ಮಲೆನಾಡಿನ ಸಂಪರ್ಕ ಕ್ರಾಂತಿ

NR Pura Bridge: ಕರ್ನಾಟಕದ ಮಲೆನಾಡಿನ ಹೃದಯಭಾಗದಲ್ಲಿರುವ ನರಸಿಂಹರಾಜಪುರ (ಎನ್.ಆರ್. ಪುರ) ಬಳಿ ಇತ್ತೀಚೆಗೆ ಹೊಸ ಸೇತುವೆ ನಿರ್ಮಾಣ ಮಾಡಲಾಗಿದೆ. ಈ ಪ್ರದೇಶದ ಅಭಿವೃದ್ಧಿಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಈ ಸೇತುವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದಿನ ಅವಧಿಯಲ್ಲಿ ಈ ಸೇತುವೆಯ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ಮಾಡಲಾಗಿದ್ದು, ಈಗ ಇದೇ 12ನೆಯ ತಾರೀಕಿಗೆ ಇದರ ಲೋಕಾರ್ಪಣೆ ಆಗುತ್ತಿರುವುದು ವಿಶೇಷ.

Girl missing case: ಮಾಣಿಕ್ಯಧಾರದಲ್ಲಿ ಕೇರಳದ ಹುಡುಗಿ ಶ್ರೀನಂದಾ ಸಾವಿನ ಹಿಂದೆ ಬೇರೊಂದು ಶಂಕೆ

ಮಾಣಿಕ್ಯಧಾರದಲ್ಲಿ ಕೇರಳದ ಹುಡುಗಿ ಶ್ರೀನಂದಾ ಸಾವಿನ ಹಿಂದೆ ಬೇರೊಂದು ಶಂಕೆ

ಬಾಲಕಿ ಶ್ರೀನಂದಾ 2000 ಅಡಿ ಆಳದ ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಶ್ರೀನಂದಾ ಅದು ಹೇಗೆ ಬಿದ್ದಳು ಎನ್ನುವುದೇ ನಿಗೂಢವಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರಬಹುದು ಎನ್ನಲಾಗಿತ್ತು. ಆದರೆ ಇದೀಗ ತಂದೆ, ಪೊಲೀಸರ ಮುಂದೆ ಹೇಳಿರುವ ಒಂದು ಹೇಳಿಕೆ ಶ್ರೀನಂದಾ ಸಾವಿನ ಬಗ್ಗೆ ಮತ್ತೊಂದು ಅನುಮಾನ ಮೂಡಿಸಿದೆ.

Girl missing case: ಮರಳಿ ಬರಲೇ ಇಲ್ಲ ಶ್ರೀನಂದಾ, ಮಾಣಿಕ್ಯಧಾರದ ಪ್ರಪಾತದಲ್ಲಿ ಬಾಲಕಿ ಶವ ಪತ್ತೆ

ಮರಳಿ ಬರಲೇ ಇಲ್ಲ ಶ್ರೀನಂದಾ, ಮಾಣಿಕ್ಯಧಾರದ ಪ್ರಪಾತದಲ್ಲಿ ಬಾಲಕಿ ಶವ ಪತ್ತೆ

ಶ್ರೀನಂದಾ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದಾಳೆಯೇ, ಆತ್ಮಹತ್ಯೆ ಮಾಡಿಕೊಂಡಿರಬಹುದೇ, ಅಥವಾ ಯಾರಾದರೂ ನೂಕಿರಬಹುದೇ, ಆಕೆ ಪ್ರತ್ಯೇಕವಾಗಿದ್ದನ್ನು ಅಥವಾ ಬಿದ್ದುದನ್ನು ಯಾರಾದರೂ ನೋಡಿದ್ದಾರಾ ಎಂಬಿತ್ಯಾದಿಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Girl Missing: ಮುಳ್ಳಯ್ಯನಗಿರಿಯಲ್ಲಿ ಬಾಲಕಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌, ಕಿಡ್ನಾಪ್‌ ಆಗಿರಬಹುದು ಎಂದ ತಾಯಿ

ದತ್ತಪೀಠದಲ್ಲಿ ಬಾಲಕಿ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌, ಅಪಹರಣದ ಶಂಕೆ

ಬಾಲಕಿ ಶ್ರೀನಂದಾ, ನಾಪತ್ತೆಯಾಗುವ ಕೇವಲ ಐದು ನಿಮಿಷಗಳ ಮೊದಲು ತಂದೆಯ ಮೊಬೈಲ್‍ನಲ್ಲಿ ಅತ್ಯಂತ ಖುಷಿಯಿಂದ ರೀಲ್ಸ್ ಮಾಡಿದ್ದಳು. ಆದರೆ, ಜನದಟ್ಟಣೆಯ ನಡುವೆ ಮೆಟ್ಟಿಲುಗಳನ್ನು ಇಳಿದು ಬರುವಾಗ ಅವಳು ಹಠಾತ್ತನೆ ಕಾಣೆಯಾಗಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

Chikkamagaluru: ಬೆಂಗಳೂರಿನಲ್ಲಿ ಮಗ, ದುಬೈನಲ್ಲಿ ಮಗಳು; ಪತಿಯ ಕೊಳೆತ ಶವದೊಂದಿಗೆ 10 ದಿನ ಕಳೆದ ಪತ್ನಿ

ಬೆಂಗಳೂರು, ದುಬೈಯಲ್ಲಿ ಮಗ, ಮಗಳು; ಪತಿಯ ಕೊಳೆತ ಶವದೊಂದಿಗೆ 10 ದಿನ ಪತ್ನಿ!

77 ವರ್ಷದ ಸಿರಿಲ್ ಮೋನಿಸ್ ಅವರು ವಯೋಸಹಜ ಅನಾರೋಗ್ಯದಿಂದ ಮಲಗಿದ್ದಲ್ಲಿಯೇ ಮೃತಪಟ್ಟಿದ್ದರು. ಆದರೆ ಮನೆಯಲ್ಲಿದ್ದ ಮಾನಸಿಕ ಅಸ್ವಸ್ಥ ಪತ್ನಿಗೆ ತನ್ನ ಪತಿ ಮೃತಪಟ್ಟಿದ್ದಾರೆ ಎಂಬ ಅರಿವೇ ಬಂದಿಲ್ಲ. ಇಂಥ ಪರಿಸ್ಥಿತಿಯಲ್ಲಿ ಪತಿ ಬದುಕಿದ್ದಾರೆ, ಮಲಗಿದ್ದಾರೆಂದೇ ಭಾವಿಸಿ ಪತ್ನಿ ಪತಿಯ ಶವದ ಪಕ್ಕದಲ್ಲೇ 10 ದಿನ ಕಳೆದಿದ್ದಾರೆ.

Girl Missing: ಮುಳ್ಳಯ್ಯನಗಿರಿಯಲ್ಲಿ ನಾಪತ್ತೆಯಾದ ಹುಡುಗಿಗಾಗಿ ಡ್ರೋನ್‌ ಹುಡುಕಾಟ

ಮುಳ್ಳಯ್ಯನಗಿರಿಯಲ್ಲಿ ನಾಪತ್ತೆಯಾದ ಹುಡುಗಿಗಾಗಿ ಡ್ರೋನ್‌ ಹುಡುಕಾಟ

ಇಂದು ಬೆಳಗ್ಗೆ ಮತ್ತೆ 50ಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಅರಣ್ಯ ಇಲಾಖೆ ಡ್ರೋನ್ ಮೂಲಕ ಬಾಲಕಿಯ ಪತ್ತೆಗೆ ಮುಂದಾಗಿದ್ದಾರೆ. ಬಾಲಕಿ ನಾಪತ್ತೆಯಾದ ಸ್ಥಳದಿಂದ ಹೋಗಿರಬಹುದಾದ ಮಾರ್ಗದ ಅಂದಾಜಿನಲ್ಲಿ ಜಿಲ್ಲಾಡಳಿತದ ವಿವಿಧ ಇಲಾಖೆಯ ಅಧಿಕಾರಿಗಳು ತಂಡಗಳಾಗಿ ಬಾಲಕಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ.

Woman missing: ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಯುವತಿ ನಾಪತ್ತೆ

ಚಂದ್ರದ್ರೋಣ ಪರ್ವತಕ್ಕೆ ಭೇಟಿ ನೀಡಿದ್ದ ಕೇರಳದ ಯುವತಿ ನಾಪತ್ತೆ

ನಾಪತ್ತೆಯಾದ ಯುವತಿ ನಂದನ, ಕೇರಳದ ಪಾಲಕ್ಕಾಡ್ ಮೂಲದವರು. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಗೆ ಕೇರಳದಿಂದ ಬಂದಿದ್ದ 40 ಜನ ಪ್ರವಾಸಿಗರ ತಂಡ ಹಾಗೂ ಕುಟುಂಬದೊಂದಿಗೆ ನಂದನ ಅವರು ಚಿಕ್ಕಮಗಳೂರಿಗೆ ಬಂದಿದ್ದರು. ಪರ್ವತದ ಸುಂದರ ತಾಣಗಳನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ ಇವರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ.

Chikkamagaluru News: ಎನ್.ಆರ್.ಪುರದಲ್ಲಿ ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್‌ ಆತ್ಮಹತ್ಯೆ

ಎನ್.ಆರ್.ಪುರದಲ್ಲಿ ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್‌ ಆತ್ಮಹತ್ಯೆ

NR Pura Nurse Death Case: ಶಿವಮೊಗ್ಗದ ಪ್ರತಿಷ್ಠಿತ 'ನಾರಾಯಣ ಹೃದಯಾಲಯ' ಆಸ್ಪತ್ರೆಯ ನರ್ಸ್ ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಮುಗಿಸಿ ಮುತ್ತಿನಕೊಪ್ಪದ ಮನೆಗೆ ಮರಳಿದ್ದ ಅವರು, ಮುಡುಬ ಸಮೀಪದ ಸೇತುವೆ ಮೇಲಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

MLA TD Raje Gowda: ಶೃಂಗೇರಿ ಕಾಂಗ್ರೆಸ್‌ ಶಾಸಕ ಟಿ.ಡಿ. ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ; ಅಂಚೆ ಮತಗಳ ಮರು ಎಣಿಕೆಗೆ ಹೈಕೋರ್ಟ್‌ ಆದೇಶ

ಶೃಂಗೇರಿ ಶಾಸಕ ರಾಜೇಗೌಡ ಆಯ್ಕೆ ಪ್ರಶ್ನಿಸಿ ಅರ್ಜಿ; ಮರು ಎಣಿಕೆಗೆ ಆದೇಶ

Sringeri Assembly Constituency Election: ಟಿ.ಡಿ.ರಾಜೇಗೌಡ ಪರ ಹಿರಿಯ ವಕೀಲರು ಹೈಕೋರ್ಟ್ ಆದೇಶಕ್ಕೆ ಎರಡು-ಮೂರು ವಾರಗಳ ತಡೆ ನೀಡಬೇಕು. ಇದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದಿದ್ದಾರೆ. ಇದಕ್ಕೆ ಉಚ್ಚ ನ್ಯಾಯಾಲಯವು ಒಪ್ಪಿದ್ದು, ಆದೇಶಕ್ಕೆ ಎರಡು ವಾರಗಳಿಗೆ ತಡೆ ನೀಡಿದೆ.

Self Harming: ಮದುವೆಯಾಗಲಿಲ್ಲ ಅಂತ ನೊಂದು ತೆಂಗಿನಮರಕ್ಕೆ ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ

ಮದುವೆಯಾಗಲಿಲ್ಲ ಅಂತ ನೊಂದು ಯುವಕ ಆತ್ಮಹತ್ಯೆ

ಮೃತ ಕುಮಾರ್ ಪೋಷಕರ ಬಳಿ ಮದುವೆ ಮಾಡುವಂತೆ ಕೇಳುತ್ತಿದ್ದ. ಆದರೆ, ಪೋಷಕರು ನಿನ್ನ ಅಣ್ಣಂದಿರಿಗೆ ಮದುವೆಗೆ ಆಗಿಲ್ಲ. ಹುಡುಗಿ ಸಿಗುತ್ತಿಲ್ಲ. ಅವರಿಗೆ ಆದ ಮೇಲೆ ನಿನಗೆ ಮಾಡುತ್ತೇವೆ. ಇಲ್ಲ ಅವನ ಜೊತೆಯೇ ಒಟ್ಟಿಗೆ ಮದುವೆ ಮಾಡುತ್ತೇವೆ‌ ಎಂದಿದ್ದರು.

Cyber crime: ಆನ್‌ಲೈನ್‌ ಟ್ರೇಡಿಂಗ್‌ ಗೀಳು; ಸೈಬರ್‌ ವಂಚನೆಗೀಡಾಗಿ 1.28 ಕೋಟಿ ರೂಪಾಯಿ ಕಳೆದುಕೊಂಡ ಭೂಪ!

ಆನ್‌ಲೈನ್‌ ಟ್ರೇಡಿಂಗ್‌ ಗೀಳಿನಿಂದ 1.28 ಕೋಟಿ ರೂಪಾಯಿ ಕಳೆದುಕೊಂಡ!

ಹೆಚ್ಚಿನ ಹಣ ಹಾಕಿದರೆ ಹೆಚ್ಚು ಲಾಭ ಬರುತ್ತೆ ಎಂದು ಅವರು ಕೇಳಿದಾಗೆಲ್ಲ ಹಂತ ಹಂತವಾಗಿ ಹಣ ಹಾಕಿದ್ದರು. ಹೀಗೆ ಬರೋಬ್ಬರಿ 1 ಕೋಟಿ 28 ಲಕ್ಷ ಹಣ ಹೂಡಿಕೆ ಮಾಡಿಸಿಕೊಂಡಿದ್ದರು. ಆದರೆ, ಈ ಬಾರಿ ಲಾಭ ಮಾತ್ರ ಬರಲಿಲ್ಲ. ಹಣ ವಿಥ್ ಡ್ರಾ ಮಾಡಲು ನೋಡಿದ್ದಾರೆ, ಅದೂ ಆಗಿಲ್ಲ. ಬಳಿಕ ತಾನು ಮೋಸ ಹೋಗಿರುವುದು ಅರಿವಾಗಿದೆ.

Self Harming: ಕಿರುಕುಳ ಆರೋಪ, ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಹಾಲು ಉತ್ಪಾದಕರ ಮಹಿಳಾ ಸಂಘದ ಕಾರ್ಯದರ್ಶಿ

ಕಿರುಕುಳ, ಹಾಲು ಉತ್ಪಾದಕರ ಮಹಿಳಾ ಸಂಘ ಕಾರ್ಯದರ್ಶಿ ವಿಡಿಯೋ ಮಾಡಿ ಆತ್ಮಹತ್ಯೆ

2010ರಲ್ಲಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಆರಂಭವಾಗಿತ್ತು. ಅಲ್ಲಿಂದಲೂ ಉಷಾ ಸಂಘದ ಕಾರ್ಯದರ್ಶಿಯಾಗಿದ್ದರು. 2025ರಲ್ಲಿ ಸಂಘಕ್ಕೆ ಹೊಸ ಸದಸ್ಯರು ಸೇರ್ಪಡೆಗೊಂಡ ಬಳಿಕ ಎಲ್ಲಾ ಲೆಕ್ಕಪತ್ರ ಕೇಳಲು ಅವರು ಪ್ರಾರಂಭಿಸಿದ್ದರು. ಆ ವೇಳೆ ಉಷಾ ವಿರುದ್ಧ ಹಣ ದುರ್ಬಳಕೆ ಆರೋಪ ಮಾಡಲಾಗಿತ್ತು.

Love Jihad: ಮೂಡಿಗೆರೆ ಲವ್‌ ಜಿಹಾದ್‌, ಹಿಂದೂ ಹುಡುಗಿಯಿಂದ ಮನೆಯಲ್ಲೇ ನಮಾಜ್!

ಮೂಡಿಗೆರೆ ಲವ್‌ ಜಿಹಾದ್‌, ಹಿಂದೂ ಹುಡುಗಿಯಿಂದ ಮನೆಯಲ್ಲೇ ನಮಾಜ್!

ಅಪ್ರಾಪ್ತ ಹುಡುಗ-ಹುಡುಗಿ ನಡುವಿನ ಪ್ರೇಮ ವಿಚಾರ ಮೂಡಿಗೆರೆ ಪಟ್ಣಣದಲ್ಲಿ ಬೂದಿ ಮುಚ್ಚಿದ ಕೆಂಡದಂತ ವಾತಾವರಣಕ್ಕೆ ಕಾರಣವಾಗಿದೆ. ಅಪ್ರಾಪ್ತ ಬಾಲಕಿಯ ತಂದೆ ಕೂಡ ಅಪ್ರಾಪ್ತ ಪ್ರೇಮಿ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಅಪ್ರಾಪ್ತ ಯುವಕ ಮೂಡಿಗೆರೆ ಮೂವರು ಹಿಂದೂ ಸಂಘಟನೆ ಕಾರ್ಯಕರ್ತರ ಮೇಲೆ ದೂರು ನೀಡಿದ್ದಾನೆ.

Self Harming: ನಾಗಾಲ್ಯಾಂಡ್‌ನ ಯುವತಿ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ನಾಗಾಲ್ಯಾಂಡ್‌ನ ಯುವತಿ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Loading...