ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಿತ್ರದುರ್ಗ

ಬೇಸಿಗೆ ಹೊತ್ತಿಗೆ ಮತ್ತೆ ನೆನಪಾಗುವ ಮಣ್ಣಿನ ಹೂಜಿ

ಬೇಸಿಗೆ ಹೊತ್ತಿಗೆ ಮತ್ತೆ ನೆನಪಾಗುವ ಮಣ್ಣಿನ ಹೂಜಿ

ಕುಂಬಾರರು ತಮ್ಮ ಜೀವನಕ್ಕೆ ಅಗತ್ಯವಿರುವ ರೂಪ ಕೊಟ್ಟುಕೊಳ್ಳಲು ಇನ್ನೂ ಸಾಧ್ಯ ವಾಗಿಲ್ಲ ಎಂಬುದಕ್ಕೆ ತಾಲ್ಲೂಕಿನ ಕೋನಸಾಗರ ಗ್ರಾಮದ ತಿಮ್ಮಣ್ಣ ಕುಂಬಾರನ ಬದುಕು ಸೂಕ್ತ ಉದಾಹರಣೆ. ಮುತ್ತಾತ, ತಾತ ತಂದೆಯವರ ಕಾಲದಿಂದಲೂ ಈ ಕುಟುಂಬಗಳು ತನ್ನ ಕುಲ ಕಸುಬಾಗಿ ಕುಂಬಾರಿಕೆ ನಂಬಿಕೊಂಡು ಜೀವನ ಸಾಗಿಸುತ್ತಿವೆ.

Chitradurga news: ನಾಪತ್ತೆಯಾಗಿದ್ದ ಕಾಂಗ್ರೆಸ್‌ ಮುಖಂಡ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಕಾಂಗ್ರೆಸ್‌ ಮುಖಂಡ ಶವವಾಗಿ ಪತ್ತೆ

ಕಾಂಗ್ರೆಸ್‌ ಮುಖಂಡ (congress leader) ಶಿವಲಿಂಗಪ್ಪ (50) ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಅವರ ಮೃತದೇಹ (body found) ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆಗೆ ಸಂಬಂಧಿಕರಿಂದ ಆಗ್ರಹ ವ್ಯಕ್ತವಾಗಿದ್ದು, ಚಿತ್ರದುರ್ಗ (Chitradurga news) ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ; ಮನನೊಂದು  ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ; ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಅಪಪ್ರಚಾರಕ್ಕೆ ಬೇಸತ್ತು ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. 23 ವರ್ಷದ ನಿಖಿತಾ ಮೃತ ವಿದ್ಯಾರ್ಥಿನಿ. ಆತ್ಮಹತ್ಯೆಗೂ ಮುನ್ನ ನಿಖಿತಾ ಡೆತ್‌ನೋಟ್‌ ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

Drowned: ರಾಜ್ಯಾದ್ಯಂತ ನಾಲ್ಕು ಅವಘಡ, ಈಜಲು ತೆರಳಿದ ಐವರು ನೀರುಪಾಲು

ರಾಜ್ಯಾದ್ಯಂತ ನಾಲ್ಕು ಅವಘಡ, ಈಜಲು ತೆರಳಿದ ಐವರು ನೀರುಪಾಲು

ರಾಜ್ಯದಲ್ಲಿ ಬೇಸಿಗೆ ರಜೆ ಆರಂಭವಾಗಿದೆ. ಶಾಲಾ ಮಕ್ಕಳು, ವಿದ್ಯಾರ್ಥಿಗಳು ಈಜು ಕಲಿಯಲೋ ಅಥವಾ ರಜೆ ಎಂಜಾಯ್‌ ಮಾಡಲೋ ನೀರಿನ ಆಶ್ರಯಗಳತ್ತ ತೆರಳುತ್ತಿದ್ದಾರೆ. ನಿನ್ನೆ ಒಂದೇ ದಿನ ವಿವಿಧೆಡೆ ಸಂಭವಿಸಿದ ಅವಘಡಗಳಲ್ಲಿ ಐದು ಮಂದಿ ನೀರುಪಾಲಾಗಿದ್ದು, ಪೋಷಕರು ಎಚ್ಚರವಿರಬೇಕಾದ ಪರಿಸ್ಥಿತಿ ಇದೆ.

BESCOM: ಪೂರ್ವ ಮುಂಗಾರು ಮಳೆ ಅಬ್ಬರ; ವಿದ್ಯುತ್ ಸುರಕ್ಷತಾ ಕ್ರಮ ಅನುಸರಿಸಲು ಬೆಸ್ಕಾಂ ಮನವಿ

ಭಾರಿ ಮಳೆ; ವಿದ್ಯುತ್ ಸುರಕ್ಷತಾ ಕ್ರಮ ಅನುಸರಿಸಲು ಬೆಸ್ಕಾಂ ಮನವಿ

BESCOM: ಗಾಳಿ-ಮಳೆ ಸಂದರ್ಭದಲ್ಲಿ ಕರೆಗಳ ಒತ್ತಡದಿಂದ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912 ಕೆಲವೊಮ್ಮೆ ಲಭ್ಯವಾಗುವುದಿಲ್ಲ, ಹೀಗಾಗಿ ಬೆಸ್ಕಾಂ ವಾಟ್ಸ್ ಆಪ್ ಸಂಖ್ಯೆಗಳಿಗೆ ವಿದ್ಯುತ್ ಸಮಸ್ಯೆ ಕುರಿತ ಸಂದೇಶಗಳನ್ನು ಕಳುಹಿಸಲು ಬೆಸ್ಕಾಂ ಮನವಿ ಮಾಡಿದೆ. ಈ ಕುರಿತ ವಿವರ ಇಲ್ಲಿದೆ.

Acid Attack: ಮಾಜಿ ಪತ್ನಿ, 4 ವರ್ಷದ ಮಗುವಿನ ಮೇಲೂ ಆ್ಯಸಿಡ್ ಎರಚಿದ ಪಾತಕಿ

ಮಾಜಿ ಪತ್ನಿ, 4 ವರ್ಷದ ಮಗುವಿನ ಮೇಲೂ ಆ್ಯಸಿಡ್ ಎರಚಿದ ಪಾತಕಿ

ಕಳೆದ ಹಲವು ವರ್ಷಗಳಿಂದ ಪತಿ ಸುಹೇಲ್ ಹಾಗೂ ಪತ್ನಿ ತಾಸೀನಾ ನಡುವೆ ಜಗಳ ನಡೆಯುತ್ತಿತ್ತು. ಪದೇ ಪದೇ ಗಲಾಟೆ ಹಿನ್ನೆಲೆಯಲ್ಲಿ ಪತಿ ಪತ್ನಿ ಇಬ್ಬರೂ ಮುಸ್ಲಿಂ ಧಾರ್ಮಿಕ ಪದ್ಧತಿಯಂತೆ ವಿಚ್ಛೇದನ ಪಡೆದಿದ್ದರು. ಆಗಾಗ ಗಲಾಟೆ ಮಾಡುತ್ತಿರುವ ಆರೋಪದ ಮೇಲೆ ಸುಹೇಲ್ ವಿರುದ್ಧ ಮಾಜಿ ಪತ್ನಿ ತಾಸೀನಾ ಕೇಸ್ ದಾಖಲು ಮಾಡಿದ್ದಳು.

ಚಿತ್ರದುರ್ಗದ ಬಳಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

ಭೀಕರ ಅಪಘಾತ; ಮೂವರು ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

Road Accident: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

Sri Thipperudraswamy Rathotsava: ಶ್ರೀ ತಿಪ್ಪೇರುದ್ರಸ್ವಾಮಿ ರಥೋತ್ಸವ ಇಂದು

ಶ್ರೀ ತಿಪ್ಪೇರುದ್ರಸ್ವಾಮಿ ರಥೋತ್ಸವ ಇಂದು

ಊರ ಮಧ್ಯದಲ್ಲಿರುವ ಮಠವೇ ಒಳಮಠ, ಊರ ಒಳಗೆ ಈ ಮಠವಿರುವದರಿಂದ ಒಳಮಠ ವೆಂದು ಕರೆಯುವ ವಾಡಿಕೆ. ಈ ಮಠಕ್ಕೆ ಹಿರೇಮಠ, ದರ್ಬಾಟ ಮಠವೆಂತಲೂ ಕರೆಯಲಾಗು ತ್ತಿದೆ. ಶ್ರೀಗಳ ಜೀವಿತ ಕಾಲದಲ್ಲಿ ಈ ಮಠದಲ್ಲಿಯೇ ಇದ್ದು ರಾಜ- ಮಹಾರಾಜರಿಗೆ, ಭಕ್ತಾದಿಗಳಿಗೆ ದರ್ಶನ ನೀಡುವುದಲ್ಲದೆ ಅವರ ಕಷ್ಟ-ಸುಖಗಳನ್ನು ವಿಚಾರಿಸುತ್ತಿದ್ದರು. ಅವುಗಳಿಗೆ ಪರಿಹಾರ ವನ್ನು ಸೂಚಿಸಿ, ಆಶೀರ್ವದಿಸು ತ್ತಿದ್ದರು. ಹೀಗಾಗಿ ಈ ಮಠವನ್ನು ದರ್ಬಾರು ಮಠವೆಂದು ಕರೆಯುವ ವಾಡಿಕೆಗೆ ಕಾರಣವಾಗಿದೆ.

Road Accident: ಲಾರಿಗೆ ಕಾರು ಡಿಕ್ಕಿ, ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ಸಾವು, ಇಬ್ಬರು ಗಂಭೀರ

ಮಂತ್ರಾಲಯದಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ, ಮೂವರು ದು‌ರ್ಮರಣ

ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿದ್ದರು. ರಾಯರ ದರ್ಶನ ಮುಗಿಸಿ ಮಂತ್ರಾಲಯದಿಂದ ಕುಣಿಗಲ್‌ಗೆ ಹಿಂದಿರುಗುವ ವೇಳೆ ಅಪಘಾತ ಸಂಭವಿಸಿದೆ. ಕಾರಿನ ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

100 ರುಪಾಯಿ ಸ್ಕ್ರೀನ್ ಗಾರ್ಡ್ ವಿಚಾರಕ್ಕೆ ಹರಿಯಿತು ನೆತ್ತರು: ಚಿತ್ರದುರ್ಗದಲ್ಲಿ ಮೊಬೈಲ್ ಅಂಗಡಿ ಮಾಲಕನಿಗೆ ಇರಿದ ಆರೋಪಿ

ಸ್ಕ್ರೀನ್ ಗಾರ್ಡ್ ವಿಚಾರದಲ್ಲಿ ಜಗಳ: ಅಂಗಡಿ ಮಾಲೀಕನಿಗೆ ಇರಿತ

Mobile screen guard dispute: ಚಿತ್ರದುರ್ಗ ಜಿಲ್ಲೆಯಲ್ಲಿ ಸ್ಕ್ರೀನ್ ಗಾರ್ಡ್ ಬದಲಾವಣೆ ವಿಚಾರದಲ್ಲಿ ಜಗಳ ನಡೆದು ವ್ಯಕ್ತಿಯೊಬ್ಬ ಮೊಬೈಲ್ ಅಂಗಡಿ ಮಾಲೀಕನಿಗೆ ಚಾಕುವಿನಿಂದ ಇರಿದಿದ್ದಾನೆ. ಅಂಗಡಿ ಮಾಲಕ ಬೇರೆ ಮಾದರಿಯ ಸ್ಕ್ರೀನ್ ಗಾರ್ಡ್‌ಗೆ ಹೆಚ್ಚುವರಿಯಾಗಿ 100 ರುಪಾಯಿ ಕೇಳಿದ್ದಾರೆ ಎನ್ನಲಾಗಿದ್ದು, ನಂತರ ಜಗಳ ಆರಂಭವಾಗಿದೆ. ಆರೋಪಿಯು ಮಾಲಕನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ.

Student Self Harming: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

ಚಿತ್ರದುರ್ಗ ತಾಲೂಕಿನ ಭರಮಸಾಗರದ ಡಿವಿಎಸ್ ಶಾಲೆಯಲ್ಲಿ ದುರಂತ ನಡೆದಿದೆ. ಚಿತ್ರದುರ್ಗದ ಕರಿಯಣ್ಣನಹಳ್ಳಿ ನಿವಾಸಿಯಾಗಿರುವ ವಿದ್ಯಾರ್ಥಿ ಕೊಟ್ರೇಶ್ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕೋಣೆಗೆ ಕರೆದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಚಿತ್ರದುರ್ಗದಲ್ಲಿ ಖಾಸಗಿ ಶಾಲೆ ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಖಾಸಗಿ ಶಾಲೆ ಶಿಕ್ಷಕನ ಬಂಧನ

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೋಣೆಗೆ ಕರೆದು ಶಿಕ್ಷಕ ಹೀನ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿಯಿಂದ ಶಿಕ್ಷಕನ ವಿರುದ್ಧ ದೂರು ನೀಡಲಾಗಿದ್ದು, ಪೋಕ್ಸೊ ಪ್ರಕರಣ ದಾಖಲಾಗಿದೆ.

Road Accident: ಓವರ್‌ಟೇಕ್‌ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು

ಓವರ್‌ಟೇಕ್‌ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು

ಇತ್ತೀಚೆಗೆ ಹಿರಿಯೂರು ಬಳಿಯೇ ಹೆದ್ದಾರಿಯಲ್ಲಿ ಕಂಟೈನರ್‌ ಡಿಕ್ಕಿಯಾಗಿ ಖಾಸಗಿ ಸ್ಲೀಪರ್‌ ಬಸ್‌ ಹೊತ್ತಿ ಉರಿದು ಐದು ಮಂದಿ ಸಜೀವ ದಹನಗೊಂಡಿದ್ದರು. ಈ ಘಟನೆಯ ಕಹಿನೆನಪು ಮಾಸುವ ಮುನ್ನವೇ ಇಲ್ಲಿ ಮತ್ತಷ್ಟು ಅಪಘಾತಗಳು ಸಂಭವಿಸಿವೆ. ಈ ಭಾಗದಲ್ಲಿ ಮುಂಜಾನೆ ಸಾಕಷ್ಟು ಮಂಜು ಕವಿದ ವಾತಾವರಣವಿದ್ದು, ತಡರಾತ್ರಿ ಡ್ರೈವ್‌ ಮಾಡುವ ವಾಹನ ಚಾಲಕರು ಹೆಚ್ಚು ಎಚ್ಚರ ವಹಿಸಲು ಸೂಚಿಸಿದೆ.

Road Accident: ಹಿರಿಯೂರು ಬಳಿ ಇನ್ನೊಂದು ಭೀಕರ ಅಪಘಾತ, ನಾಲ್ವರು ಸಾವು

ಹಿರಿಯೂರು ಬಳಿ ಇನ್ನೊಂದು ಭೀಕರ ಅಪಘಾತ, ನಾಲ್ವರು ಸಾವು

ಕಾರು ಮೈಸೂರು ಕಡೆಯಿಂದ ಹಿರಿಯೂರಿನತ್ತ ಬರುತ್ತಿತ್ತು. ಲಾರಿ ಮೈಸೂರು ಕಡೆಗೆ ತೆರಳುತ್ತಿತ್ತು. ಯುವಕರ ತಂಡ ಹಳ್ಳಿಯೊಂದರಲ್ಲಿ ಊಟ ಮುಗಿಸಿಕೊಂಡು ಸ್ವಿಫ್ಟ್‌ ಡಿಸೈರ್‌ ಕಾರಿನಲ್ಲಿ ಪಟ್ಟಣದ ಕಡೆಗೆ ಬರುವಾಗ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Chitradurga News: ಮದುವೆ ಮಾಡಲಿಲ್ಲ ಎಂದು ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ!

ಮದುವೆ ಮಾಡಲಿಲ್ಲ ಎಂದು ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ!

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತ್ತಿಘಟ್ಟದಲ್ಲಿ ಘಟನೆ ನಡೆದಿದೆ. ಮದುವೆ ವಿಚಾರಕ್ಕೆ ತಂದೆಯೊಂದಿಗೆ ಪುತ್ರ ನಿತ್ಯ ಜಗಳ ಮಾಡುತ್ತಿದ್ದ. ಆದರೆ, ಮದುವೆ ಮಾಡಿಸಲು ಒಪ್ಪದ ಹಿನ್ನೆಲೆಯಲ್ಲಿ ಮಲಗಿದ್ದ ವೇಳೆ ತಂದೆ ತಲೆಗೆ ರಾಡ್‌ನಿಂದ ಹೊಡೆದು ಪುತ್ರ ಹತ್ಯೆ ಮಾಡಿದ್ದಾನೆ. ಈ ಬಗ್ಗೆ ಹೊಸದುರ್ಗ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Road Accident: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣ

ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣ

ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ಮರಕ್ಕೆ ಡಿಕ್ಕಿಯಾದ ಪರಿಣಾಮ, ಕಲ್ಲವ್ವ ನಾಗತಿಹಳ್ಳಿ ಗ್ರಾಮದ ಗಿರಿರಾಜ್ (46), ಕಿರಣ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರುಣ್ (32) ಹಾಗೂ ಹನುಮಂತ (32) ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

K C Veerendra Puppy: ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಪ್ರಕರಣದಲ್ಲಿ ಶಾಸಕನಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದರು. ಸುಮಾರು 30 ಕಡೆ ನಡೆದ ದಾಳಿಯಲ್ಲಿ ನಗದು, ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.

ಚಿತ್ರದುರ್ಗ ದುರಂತ ; ಗಂಭೀರವಾಗಿ ಗಾಯಗೊಂಡಿದ್ದ ಬಸ್‌ ಚಾಲಕ ರಫೀಕ್‌ ಸಾವು

ಗಂಭೀರವಾಗಿ ಗಾಯಗೊಂಡಿದ್ದ ಬಸ್‌ ಚಾಲಕ ರಫೀಕ್‌ ಸಾವು

Chitradurga Bus Accident: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಸೀ ಬರ್ಡ್‌ ಬಸ್‌ ಹೊತ್ತಿ ಉರಿದ ಘಟನೆಯಲ್ಲಿ ಖಾಸಗಿ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಅಪಘಾತದ ವೇಳೆ ತಪ್ಪಿತು ಮತ್ತೊಂದು ಬಸ್‌ ದುರಂತ; ಪವಾಡ ರೀತಿಯಲ್ಲಿ 43 ಶಾಲಾ ಮಕ್ಕಳು ಪಾರು!

ಚಿತ್ರದುರ್ಗದಲ್ಲಿ ತಪ್ಪಿತು ಮತ್ತೊಂದು ಬಸ್‌ ದುರಂತ; 43 ಶಾಲಾ ಮಕ್ಕಳು ಪಾರು!

ಬೆಂಗಳೂರಿನ ಟಿ.ದಾಸರಹಳ್ಳಿಯ ಶಾಲೆಯೊಂದರ ಮಕ್ಕಳು ಬಸ್‌ನಲ್ಲಿ ದಾಂಡೇಲಿಗೆ ಪ್ರವಾಸ ಹೊರಟಿದ್ದರು. ಹಿರಿಯೂರು ಬಳಿ ಕಂಟೈನರ್‌ ಲಾಡಿ ಡಿಕ್ಕಿಯಾದ ವೇಳೆ ಸೀಬರ್ಡ್ ಸ್ಲೀಪರ್‌ ಬಸ್‌, ಹಿಂದೆ ಬರುತ್ತಿದ್ದ ಶಾಲಾ ಮಕ್ಕಳಿದ್ದ ಬಸ್‌ಗೆ ಬಡಿದಿದೆ. ಇದರಿಂದ ಬಸ್‌ ಮುಂಭಾಗ ಜಖಂಗೊಂಡಿದ್ದು, ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ.

Chitradurga Bus Accident: ಚಿತ್ರದುರ್ಗ ಬಸ್‌ ಅಪಘಾತದಲ್ಲಿ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

ಚಿತ್ರದುರ್ಗ ಬಸ್‌ ಅಪಘಾತದಲ್ಲಿ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು. ಇವರ ದೇಹದ ಅವಶೇಷಗಳಿಗಾಗಿ ಹುಡುಕಾಟ ನಡೆದಿದೆ.

Chitradurga Bus Accident: ಡೀಸೆಲ್ ಟ್ಯಾಂಕ್‌ಗೆ ಲಾರಿ ಡಿಕ್ಕಿ ಹೊಡೆದು ಸ್ಫೋಟ, ಬಸ್‌ ಪ್ರಯಾಣಿಕರ ಪಟ್ಟಿ ಇಲ್ಲಿದೆ

ಬಸ್ಸಿನ ಡೀಸೆಲ್ ಟ್ಯಾಂಕ್‌ಗೇ ಲಾರಿ ಡಿಕ್ಕಿ, ಬಸ್‌ ಯಾನಿಗಳ ಪಟ್ಟಿ ಇಲ್ಲಿದೆ

ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್, ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ ಬಸ್‌ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪ್ಪಳಿಸುವಿಕೆಯಿಂದಾಗಿ ಸ್ಲೀಪರ್ ಕೋಚ್ ಬಸ್ ರಸ್ತೆಯ ಮಧ್ಯೆಯೇ ಬೆಂಕಿ ಹತ್ತಿಕೊಂಡು ಉರಿದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದೆ.

Chitradurga Bus Accident: ಚಿತ್ರದುರ್ಗ ಬಸ್‌ ದುರಂತ: ಪಿಎಂ, ಸಿಎಂ, ಡಿಸಿಎಂ ಸಂತಾಪ; ಸಂತ್ರಸ್ತರಿಗೆ ಮೋದಿ 2 ಲಕ್ಷ ರೂ. ಪರಿಹಾರ

ಬಸ್‌ ದುರಂತ: ಪಿಎಂ, ಸಿಎಂ, ಡಿಸಿಎಂ ಸಂತಾಪ; ಮೋದಿ 2 ಲಕ್ಷ ರೂ. ಪರಿಹಾರ

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

Chitradurga Bus Accident: ಬಸ್‌ ಬೆಂಕಿಗೆ 9 ಬಲಿ, ಸುಟ್ಟುಹೋದವರ ಗುರುತು ಪತ್ತೆಯೇ ಸವಾಲು!

ಬಸ್‌ ಬೆಂಕಿಗೆ 9 ಬಲಿ, ಸುಟ್ಟುಹೋದವರ ಗುರುತು ಪತ್ತೆಯೇ ಸವಾಲು!

ಸದ್ಯದ ಮಾಹಿತಿ ಪ್ರಕಾರ ಲಾರಿ ಚಾಲಕ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಮೃತ ದೇಹಗಳು ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿವೆ. ಬಸ್ಸಿನಿಂದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವುದು ಕಷ್ಟವಾಗಿರುವುದರಿಂದ ಬೆಂಗಳೂರಿನಿಂದ ವಿಧಿವಿಜ್ಞಾನ ಮತ್ತು ಡಿಎನ್‌ಎ (DNA) ತಂಡಗಳನ್ನು ಕರೆಸಲಾಗಿದೆ' ಎಂದು ಐಜಿಪಿ ತಿಳಿಸಿದ್ದಾರೆ.

Karnataka Weather: ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ!

ಮುಂದಿನ 2 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ ಎರಡು ದಿನಗಳವರೆಗೆ ರಾಜ್ಯದ ಉತ್ತರ ಒಳನಾಡಿನ ಕನಿಷ್ಠ ತಾಪಮಾನದಲ್ಲಿ 2-3°C ಇಳಿಕೆ, ನಂತರ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳವರೆಗೆ ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Loading...