ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಚಿತ್ರದುರ್ಗ

ಚಳ್ಳಕೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಸಚಿವ ಡಿ. ಸುಧಾಕರ್‌ ಅಂತ್ಯಸಂಸ್ಕಾರ; ಸಿಎಂ, ಡಿಸಿಎಂ ಸೇರಿ ಪ್ರಮುಖರು ಭಾಗಿ

ಚಳ್ಳಕೆರೆಯಲ್ಲಿ ನೆರವೇರಿದ ಸಚಿವ ಡಿ. ಸುಧಾಕರ್‌ ಅಂತ್ಯಸಂಸ್ಕಾರ

Minister D. Sudhakar's funeral: ಶ್ವಾಸಕೋಶ ಸೋಂಕಿನ ಹಿನ್ನೆಲೆಯಲ್ಲಿ ಸಚಿವ ಡಿ.ಸುಧಾಕರ್‌ ಅವರು ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಚಳ್ಳಕೆರೆಯ ಜೈನಧಾಮದಲ್ಲಿ ಅವರ ಅಂತ್ಯಸಂಸ್ಕಾರ ಸೋಮವಾರ ನೆರವೇರಿದ್ದು, ಈ ವೇಳೆ ಸಾವಿರಾರು ಮಂದಿ ಭಾಗಿಯಾಗಿದ್ದರು.

ಸರ್ಕಾರಿ ಗೌರವದೊಂದಿಗೆ ಚಳ್ಳಕೆರೆಯಲ್ಲಿ ಇಂದು ಸಚಿವ ಸುಧಾಕರ್‌ ಅಂತ್ಯಕ್ರಿಯೆ

ಚಳ್ಳಕೆರೆಯಲ್ಲಿ ಇಂದು ಸಚಿವ ಸುಧಾಕರ್‌ ಅಂತ್ಯಕ್ರಿಯೆ

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (62) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಅವರ ಹುಟ್ಟುರಾದ ಚಿತ್ರದುರ್ಗದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ. ಮೃತರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಸೂಚನೆ ನೀಡಿದೆ.

D Sudhakar Death: ಆತ್ಮೀಯ ಸ್ನೇಹಿತನಿಗೆ ಕಣ್ಣೀರ ವಿದಾಯ; ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿಕೆಶಿ

ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಸಿಎಂ ಡಿಕೆಶಿ

D Sudhakar Death: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸಂಪುಟ ಸಹೋದ್ಯೋಗಿ, ನನ್ನ ಆತ್ಮೀಯ ಸ್ನೇಹಿತ ಡಿ. ಸುಧಾಕರ್ ಅವರು ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Pravasi Prapancha: ನಾಡು ಕಂಡ ಮಾಸ್‌ ಲೀಡರ್‌ ಬಿಎಸ್‌ವೈ ಅಭಿಮಾನೋತ್ಸವ

ಮಾಸ್‌ ಲೀಡರ್‌ ಬಿಎಸ್‌ವೈ ಅಭಿಮಾನೋತ್ಸವ

BSY Abhimanotsava: ರಾಜಕಾರಣಕ್ಕೆ ಬರುವ ಹಾದಿ ಕಷ್ಟವಲ್ಲ. ಆದರೆ ಬಂದ ಬಳಿಕ ಆ ಹಾದಿಯಲ್ಲಿ ಅಭಿವೃದ್ಧಿ ಮಾಡುತ್ತಾ, ಜನರ ಪ್ರೀತಿ ಹಾಗೂ ನಂಬಿಕೆ ಗಳಿಸಿ ಎಷ್ಟು ದೂರ ಕ್ರಮಿಸಲು ಸಾಧ್ಯವೆನ್ನುವುದೇ ಸವಾಲು. ಈ ಸವಾಲನ್ನು ಮೆಟ್ಟಿನಿಂತು, ರಾಜ್ಯವೇ ಮೆಚ್ಚುವಂತೆ ಜನಪರ ಧ್ವನಿಯಾಗಿ ಕರ್ನಾಟಕದ ʼಮಾಸ್ ಲೀಡರ್ʼ ಎಂಬ ಹೆಸರು ಪಡೆದ ಬೂಕನಕೆರೆ ಸಿದ್ದಲಿಂಗಯ್ಯ ಯಡಿಯೂರಪ್ಪ (ಬಿ.ಎಸ್. ಯಡಿಯೂರಪ್ಪ) ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ರಾಜ್ಯದ ಪ್ರವಾಸೋದ್ಯಮಕ್ಕೂ ದಾರಿದೀಪದಂತಿದ್ದ ಅವರ ದೂರದೃಷ್ಟಿ ಈಗಲೂ ಪ್ರಸ್ತುತ.

ಉದ್ಯಮದಿಂದ ರಾಜಕೀಯ: ಸಚಿವ ಡಿ. ಸುಧಾಕರ್‌ ನಡೆದು ಬಂದ ದಾರಿ ಹೇಗಿತ್ತು?

ಸಚಿವ ಡಿ. ಸುಧಾಕರ್‌ ನಡೆದು ಬಂದ ದಾರಿ ಹೇಗಿತ್ತು?

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (62) ಅವರು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.

BSY Abhimanotsava: ಬರಪೀಡಿತ ಜಿಲ್ಲೆಗಳಿಗೆ ನೀರು ನೀಡಿದ ಭಗೀರಥ ಬಿಎಸ್‍ವೈ: ಬಸವರಾಜ ಬೊಮ್ಮಾಯಿ

ಬರಪೀಡಿತ ಜಿಲ್ಲೆಗಳಿಗೆ ನೀರು ನೀಡಿದ ಭಗೀರಥ ಬಿಎಸ್‍ವೈ: ಬೊಮ್ಮಾಯಿ

BSY Abhimanotsava: ಚಿತ್ರದುರ್ಗದಲ್ಲಿ ಶನಿವಾರ ನಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ನೀರಿಲ್ಲದ ಜಿಲ್ಲೆಗಳಿಗೆ ನೀರು ನೀಡಿದ ಭಗೀರಥ ಎಂದು ಬಣ್ಣಿಸಿದ್ದಾರೆ.

BSY Abhimanotsava: ತ್ಯಾಗ, ಪರಿಶ್ರಮ, ಹೋರಾಟಕ್ಕೆ ಮತ್ತೊಂದು ಹೆಸರೇ ಯಡಿಯೂರಪ್ಪ: ಬಿ.ವೈ.ವಿಜಯೇಂದ್ರ

ತ್ಯಾಗ, ಪರಿಶ್ರಮ, ಹೋರಾಟಕ್ಕೆ ಮತ್ತೊಂದು ಹೆಸರೇ ಯಡಿಯೂರಪ್ಪ

ಬಿಎಸ್‍ವೈ ಅವರ ಹೋರಾಟಗಳನ್ನು ನಾನು ಹತ್ತಿರದಿಂದ ನೋಡಿದ್ದೇನೆ. ಅವರು ತಮ್ಮ ಜೀವನದಲ್ಲಿ ಅನೇಕ ಏಳುಬೀಳುಗಳನ್ನು ಕಂಡಿದ್ದಾರೆ. ಜೀವನದುದ್ದಕ್ಕೂ ಯಾವುದೇ ಸವಾಲುಗಳು ಬಂದರೂ ಬೆನ್ನು ತೋರಿಸಿ ಓಡಿ ಹೋದವರಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

BSY Abhimanotsava: ʼಬಿಎಸ್‌ವೈ ಅಭಿಮಾನೋತ್ಸವʼ ಒಂದು ಐತಿಹಾಸಿಕ ಕಾರ್ಯಕ್ರಮ: ಬಿ.ವೈ. ರಾಘವೇಂದ್ರ

ʼಬಿಎಸ್‌ವೈ ಅಭಿಮಾನೋತ್ಸವʼ ಒಂದು ಐತಿಹಾಸಿಕ ಕಾರ್ಯಕ್ರಮ: ಬಿ.ವೈ. ರಾಘವೇಂದ್ರ

BSY Abhimanotsava: ಚಿತ್ರದುರ್ಗದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಮಾಡಿ ಮಾತನಾಡಿದ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವವು ಒಂದು ಐತಿಹಾಸಿಕ ಕಾರ್ಯಕ್ರಮ ಎಂದು ತಿಳಿಸಿದ್ದಾರೆ.

BSY Abhimanotsava: ಸೈಕಲ್‌ ಮೂಲಕ ಹಳ್ಳಿಗಳನ್ನು ಸುತ್ತಿ ಬಿಜೆಪಿ ಕಟ್ಟಿ ಬೆಳೆಸಿದ್ದಾರೆ: ಬಿಎಸ್‌ವೈರನ್ನು ಹಾಡಿ ಹೊಗಳಿದ ಅಮಿತ್‌ ಶಾ

ಅಭಿಮಾನೋತ್ಸವದಲ್ಲಿ ಬಿಎಸ್‌ವೈರನ್ನು ಹಾಡಿ ಹೊಗಳಿದ ಅಮಿತ್‌ ಶಾ

ಬಿ.ಎಸ್‌. ಯಡಿಯೂರಪ್ಪ ಅವರು ಬಸ್ ಸಿಗದಿದ್ದರೆ ಸೈಕಲ್‍ನಲ್ಲೇ ಹಳ್ಳಿಗೆ ತೆರಳಿ ಬಿಜೆಪಿಯನ್ನು ಸದೃಢವಾಗಿ ಕಟ್ಟಿದರು. ಸಾವಿರಾರು ಕಿ.ಮೀ. ಪಾದಯಾತ್ರೆ ಮಾಡಿ ರೈತರ ಪರವಾಗಿ ಹೋರಾಟ ಮಾಡಿದವರು. ಈ ಮೂಲಕ ರೈತ ನಾಯಕರಾಗಿ ಹೊರಹೊಮ್ಮಿದರು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ.

BSY Abhimanotsava: ಬಿಎಸ್‌ವೈ ಅಭಿಮಾನೋತ್ಸವ; ಮಾಜಿ ಸಿಎಂ ಕುರಿತು ಪ್ರಧಾನಿ ಮೋದಿಯಿಂದ ಬಂತು ವಿಶೇಷ ಸಂದೇಶ

ಬಿ.ಎಸ್‌. ಯಡಿಯೂರಪ್ಪಗೆ ಪ್ರಧಾನಿ ಮೋದಿಯಿಂದ ಬಂತು ವಿಶೇಷ ಸಂದೇಶ

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ರಾಜಕೀಯ ಜೀವನ ನಮ್ಮ ಪ್ರಜಾಪ್ರಭುತ್ವದ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ. ಅತ್ಯಂತ ತಳ ಮಟ್ಟದಿಂದ ಬೆಳೆದು ಅವರು ತಮ್ಮ ಸಾಮಾಜಿಕ ಜೀವನವನ್ನು ಹಂತ ಹಂತವಾಗಿ ಕಠಿಣ ನಿರಂತರ ಪರಿಶ್ರಮದ ಮೂಲಕ ಕಟ್ಟಿದರು ಎಂದು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ.

BSY Abhimanotsava: ಬಗರ್‌ ಹುಕುಂ ಹೋರಾಟದ ಮೂಲಕ ಬಡವರಿಗೆ ನ್ಯಾಯ ಕೊಡಿಸಿದ ರಾಜಾಹುಲಿ ಬಿಎಸ್‌ವೈ: ಜೋಶಿ Video

ಹೋರಾಟದ ಮೂಲಕ ಬಡವರಿಗೆ ನ್ಯಾಯ ಕೊಡಿಸಿದ ರಾಜಾಹುಲಿ ಬಿಎಸ್‌ವೈ

ಬಂಗಾಳದಲ್ಲಿ ನಮ್ಮ ವಿಚಾರಧಾರೆಗೆ ಪ್ರಚಂಡ ಗೆಲುವು ಸಿಕ್ಕಿದೆ. ದಕ್ಷಿಣ ಭಾರತದಲ್ಲಿ ಈ ಮೊದಲೂ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು, ಮತ್ತೊಮ್ಮೆ ಬಿಎಸ್‌ವೈ ಅವರ ನೇತೃತ್ವದಲ್ಲಿ ಕರ್ನಾಟಕದಲ್ಲಿ ಬರಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಬಿಎಸ್‌ವೈ ಅಭಿಮಾನೋತ್ಸವದಲ್ಲಿ ಅವರು ಮಾತನಾಡಿದ್ದಾರೆ.

BSY Abhimanotsava: ಅಧಿಕಾರದ ಬೆನ್ನತ್ತಿ ಹೋರಾಟಕ್ಕಿಳಿಯಲಿಲ್ಲ, ನಾಡಿದ ಜನರ ಋಣ ತೀರಿಸಲು ಸಾಧ್ಯವಿಲ್ಲ: ಬಿ.ಎಸ್‌.ಯಡಿಯೂರಪ್ಪ ಭಾವುಕ

ಅಧಿಕಾರದ ಬೆನ್ನತ್ತಿ ಹೋರಾಟಕ್ಕಿಳಿಯಲಿಲ್ಲ: ಬಿಎಸ್‌ವೈ ಭಾವುಕ

B.S. Yediyurappa: ನಿಮ್ಮ ಯಡಿಯೂರಪ್ಪ ಚಿನ್ನದ ಚಮಚವನ್ನು ಬಾಯಿಯಲ್ಲಿ ಇಟ್ಟುಕೊಂಡು ಸಾರ್ವಜನಿಕ ಬದುಕಿಗೆ ಬಂದವನಲ್ಲ. ಸಾಮಾನ್ಯರಲ್ಲಿ ಸಾಮಾನ್ಯನಾಗಿ, ಅನಿರೀಕ್ಷಿತ ತಿರುವುಗಳಾಗಿ ನಾನು ನಾಡಿನ ಜನರ ಸೇವೆಗೆ ಸಮರ್ಪಣೆಗೊಂಡವನು ಎಂದು ಹೇಳುತ್ತಾ, ತಮ್ಮ ಹೋರಾಟದ ಜೀವನವನ್ನು ನೆನೆದು ಮಾಜಿ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿದ್ದಾರೆ.

BSY Abhimanotsava: ಬಿಎಸ್‌ವೈ ರಾಜ್ಯ ಕಂಡ ಏಕಮೇವ ಮಾಸ್‌ ಲೀಡರ್‌: ಬೊಮ್ಮಾಯಿ Video

ಬಿಎಸ್‌ವೈ ರಾಜ್ಯ ಕಂಡ ಏಕಮೇವ ಮಾಸ್‌ ಲೀಡರ್‌: ಬೊಮ್ಮಾಯಿ

ವಿರೋಧ ಪಕ್ಷದಲ್ಲಿದ್ದಾಗ ಯಾವುದಕ್ಕಾಗಿ ಹೋರಾಟ ಮಾಡಿದ್ದರೋ ಆ ಬೇಡಿಕೆಗಳನ್ನು ಅಧಿಕಾರಕ್ಕೆ ಬಂದಮೇಲೆ ಈಡೇರಿಸಲು ಬಿ.ಎಸ್‌.ಯಡಿಯೂರಪ್ಪ ಅವರು ಶ್ರಮಿಸಿದ್ದರು. ವಿಜಯಪುರ, ಶಿಗ್ಗಾಂವಿ, ದಾವಣಗೆರೆಯ ರಾಜನಹಳ್ಳಿಯಲ್ಲಿ ಕೆರೆ ತುಂಬಿಸುವ ಯೋಜನೆ ಸೇರಿ ಹಲವು ಯೋಜನೆಗಳನ್ನು ಕೈಗೊಂಡಿದ್ದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಬಿಎಸ್‍ವೈ ಅದ್ಧೂರಿ ಪುರಪ್ರವೇಶ; ಪುಷ್ಪವೃಷ್ಟಿ, ಪೂರ್ಣಕುಂಭ ಸ್ವಾಗತ, ನೇಗಿಲ ಪ್ರತಿಕೃತಿ ಜತೆ ಭಾಗಿಯಾದ ರೈತರು

ಬಿಎಸ್‍ವೈ ಅದ್ಧೂರಿ ಪುರಪ್ರವೇಶ; ಪುಷ್ಪವೃಷ್ಟಿ, ಪೂರ್ಣಕುಂಭ ಸ್ವಾಗತ

BSY Abhimanotsava: ಬಿಜೆಪಿ ಹಿರಿಯ ನಾಯಕ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಜೀವನವನ್ನು ಗೌರವಿಸುವ ಸಲುವಾಗಿ ನಾಳೆ ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಲಕ್ಷಾಂತರ ಅಭಿಮಾನಿಗಳು ಭಾಗಿಯಾಗುವ ನಿರೀಕ್ಷೆ ಇದೆ.

BSY Abhimanotsava: ಚಿತ್ರದುರ್ಗದಲ್ಲಿ ಬಿಎಸ್‌ವೈ ಪುರಪ್ರವೇಶ; ಬೃಹತ್‌ ಮೆರವಣಿಗೆ ಮೂಲಕ ಅದ್ಧೂರಿ ಸ್ವಾಗತ Video

ಬಿಎಸ್‌ವೈ ಅದ್ಧೂರಿ ಪುರಪ್ರವೇಶ; ಮೆರವಣಿಗೆ ಮೂಲಕ ಸ್ವಾಗತ

BS Yediyurappa Abhimanotsava: ಬಿಜೆಪಿ ಹಿರಿಯ ನಾಯಕ, ರೈತನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು 50 ವರ್ಷ ಯಶಸ್ವಿ ರಾಜಕೀಯ ಜೀವನ ಪೂರೈಸಿದ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ʼಬಿಎಸ್‌ವೈ ಅಭಿಮಾನೋತ್ಸವʼ ಕಾರ್ಯಕ್ರಮವನ್ನು ಚಿತ್ರದುರ್ಗದ ಮಾದಾರ ಚೆನ್ನಯ್ಯ ಮೈದಾನದಲ್ಲಿ ನಾಳೆ ಹಮ್ಮಿಕೊಳ್ಳಲಾಗಿದೆ.

ಉಪ ಚುನಾವಣೆ ವೇಳೆ ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿಯಾಗಿ ಬದಲಾಯಿಸಿದ ಸರ್ಕಾರ: ಬಿ.ವೈ. ವಿಜಯೇಂದ್ರ ವಾಗ್ದಾಳಿ

15 ದಿನ ಬಾಗಲಕೋಟೆಯಲ್ಲಿ ಸಿಎಂ ವಾಸ್ತವ್ಯ ಇದ್ದರೇಕೆ? ವಿಜಯೇಂದ್ರ

BY Vijayendra: ಗೃಹಲಕ್ಷ್ಮಿ ಯೋಜನೆ ಇವತ್ತು ಚುನಾವಣಾ ಲಕ್ಷ್ಮಿಯಾಗಿ ಪರಿವರ್ತನೆಯಾಗಿದೆ. ಇವರು ಬಡವರಿಗೆ ಯೋಜನೆಗಳನ್ನು ನೀಡಲಿ. ಇವರೊಬ್ಬರೇ ಯೋಜನೆಗಳನ್ನು ನೀಡಿಲ್ಲ. ಯಡಿಯೂರಪ್ಪ ಅವರು ಹಿಂದೆ ಭಾಗ್ಯಲಕ್ಷ್ಮಿ, ಸಂಧ್ಯಾ ಸುರಕ್ಷಾ, ಬೈಸಿಕಲ್ ಯೋಜನೆಗಳನ್ನು ನೀಡಿದ್ದರು. ಇನ್ನೂ ಹಲವು ಒಳ್ಳೆಯ ಯೋಜನೆ ಕೊಟ್ಟಿದ್ದಾರೆ. ಆದರೆ ಗೃಹಲಕ್ಷ್ಮಿ ಇವತ್ತು ಚುನಾವಣಾ ಲಕ್ಷ್ಮಿಯಾಗಿರುವುದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೇ 9ರ ಬಿಎಸ್‍ವೈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಮಹತ್ವದ ಬದಲಾವಣೆ; ವಿಜಯೇಂದ್ರ ಕೊಟ್ರು ಬಿಗ್‌ ಅಪ್‌ಡೇಟ್‌

ಬಿಎಸ್‍ವೈ ಅಭಿಮಾನೋತ್ಸವ; ಬೆಳಗ್ಗೆ ಬದಲು ಮಧ್ಯಾಹ್ನದ ಬಳಿಕ ಕಾರ್ಯಕ್ರಮ

BSY Abhimanotsava: ಮೇ 9ರಂದು ಬೆಳಗ್ಗೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೂತನ ಸಿಎಂ ಪ್ರಮಾಣವಚನ ನಡೆಯಲಿದೆ. ಆದ್ದರಿಂದ ಮಾಜಿ ಮುಖ್ಯಮಂತ್ರಿ ಬಿಎಸ್‍ವೈ ಅಭಿಮಾನೋತ್ಸವವು ಬೆಳಗ್ಗೆಯ ಬದಲಾಗಿ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Pralhad Joshi: ಸಿದ್ದರಾಮಯ್ಯ ಸರ್ಕಾರ ಹಲವು ಬಾರಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಿಸಿದ್ದೇಕೆ?: ಪ್ರಲ್ಹಾದ್‌ ಜೋಶಿ ಪ್ರಶ್ನೆ

ಸಿದ್ದರಾಮಯ್ಯ ಸರ್ಕಾರ ಹಲವು ಬಾರಿ ಬೆಲೆ ಹೆಚ್ಚಿಸಿದ್ದೇಕೆ?; ಜೋಶಿ

Pralhad Joshi: ಸಿಎಂ ಸಿದ್ದರಾಮಯ್ಯ ಅವರು ಆಡಳಿತಗಾರರಾಗಿ, ಗ್ಯಾಸ್ ಬೆಲೆ ಹೆಚ್ಚಳದ ಸತ್ಯ ಗೊತ್ತಿದ್ದರೂ ಕೇಂದ್ರವನ್ನು ಟೀಕಿಸುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಇವರು ಅಧಿಕಾರಕ್ಕೆ ಬಂದ ಮೇಲೆ ಹಲವು ಬಾರಿ ಪೆಟ್ರೋಲ್, ಡೀಸೆಲ್ ಮಾತ್ರವಲ್ಲ ಎಲ್ಲದರ ಬೆಲೆಯನ್ನೂ ದುಪ್ಪಟ್ಟು ಹೆಚ್ಚಿಸಿದ್ದೇಕೆ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಪ್ರಶ್ನಿಸಿದ್ದಾರೆ.

D Sudhakar: ಸಚಿವ ಡಿ ಸುಧಾಕರ್‌ ಆರೋಗ್ಯ ಸ್ಥಿತಿ ಗಂಭೀರ, ಶ್ವಾಸಕೋಶ ಕಸಿ ಚಿಕಿತ್ಸೆಗೆ ಸಿದ್ಧತೆ

ಸಚಿವ ಡಿ ಸುಧಾಕರ್‌ ಆರೋಗ್ಯ ಗಂಭೀರ, ಶ್ವಾಸಕೋಶ ಕಸಿ ಚಿಕಿತ್ಸೆಗೆ ಸಿದ್ಧತೆ

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಮೊಣಕಾಲಿನ ಆಪರೇಶನ್‌ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಹಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿ ಸುಧಾಕರ್ ಸದ್ಯ ಶಾವ್ಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಮೊಣಕಾಲ ಶಸ್ತ್ರಚಿಕಿತ್ಸೆ ಬಳಿಕ ಶ್ವಾಸಕೋಶದ ಸೋಂಕು ಉಲ್ಬಣಿಸಿತ್ತು.

Physical Abuse: ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!

ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಿತ ಶಿಕ್ಷಕ ರಾಜಣ್ಣ ಮೇಲೆ ಈ ಆರೋಪ ಬಂದಿದೆ. ಶಿಕ್ಷಕ ಹಾಗು ಗರ್ಭಪಾತ ಮಾಡಿದ ವೈದ್ಯೆ ಶಂಕರ್ ಲಕ್ಷ್ಮಿ ವಿರುದ್ಧ ದೂರು ನೀಡಲಾಗಿದೆ. ಚಳ್ಳಕೆರೆಯ ಲಕ್ಷ್ಮಿ ಶ್ರೀನಿವಾಸ್ ನರ್ಸಿಂಗ್ ಆಸ್ಪತ್ರೆಯ ವೈದ್ಯೆ ಆಗಿದ್ದು, ಮಕ್ಕಳ ರಕ್ಷಣಾಧಿಕಾರಿ ರೇಖಾ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದಾರೆ.

ಬೇಸಿಗೆ ಹೊತ್ತಿಗೆ ಮತ್ತೆ ನೆನಪಾಗುವ ಮಣ್ಣಿನ ಹೂಜಿ

ಬೇಸಿಗೆ ಹೊತ್ತಿಗೆ ಮತ್ತೆ ನೆನಪಾಗುವ ಮಣ್ಣಿನ ಹೂಜಿ

ಕುಂಬಾರರು ತಮ್ಮ ಜೀವನಕ್ಕೆ ಅಗತ್ಯವಿರುವ ರೂಪ ಕೊಟ್ಟುಕೊಳ್ಳಲು ಇನ್ನೂ ಸಾಧ್ಯ ವಾಗಿಲ್ಲ ಎಂಬುದಕ್ಕೆ ತಾಲ್ಲೂಕಿನ ಕೋನಸಾಗರ ಗ್ರಾಮದ ತಿಮ್ಮಣ್ಣ ಕುಂಬಾರನ ಬದುಕು ಸೂಕ್ತ ಉದಾಹರಣೆ. ಮುತ್ತಾತ, ತಾತ ತಂದೆಯವರ ಕಾಲದಿಂದಲೂ ಈ ಕುಟುಂಬಗಳು ತನ್ನ ಕುಲ ಕಸುಬಾಗಿ ಕುಂಬಾರಿಕೆ ನಂಬಿಕೊಂಡು ಜೀವನ ಸಾಗಿಸುತ್ತಿವೆ.

Chitradurga news: ನಾಪತ್ತೆಯಾಗಿದ್ದ ಕಾಂಗ್ರೆಸ್‌ ಮುಖಂಡ ಶವವಾಗಿ ಪತ್ತೆ

ನಾಪತ್ತೆಯಾಗಿದ್ದ ಕಾಂಗ್ರೆಸ್‌ ಮುಖಂಡ ಶವವಾಗಿ ಪತ್ತೆ

ಕಾಂಗ್ರೆಸ್‌ ಮುಖಂಡ (congress leader) ಶಿವಲಿಂಗಪ್ಪ (50) ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಇಂದು ಅವರ ಮೃತದೇಹ (body found) ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆಗೆ ಸಂಬಂಧಿಕರಿಂದ ಆಗ್ರಹ ವ್ಯಕ್ತವಾಗಿದ್ದು, ಚಿತ್ರದುರ್ಗ (Chitradurga news) ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ; ಮನನೊಂದು  ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ; ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಅಪಪ್ರಚಾರಕ್ಕೆ ಬೇಸತ್ತು ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. 23 ವರ್ಷದ ನಿಖಿತಾ ಮೃತ ವಿದ್ಯಾರ್ಥಿನಿ. ಆತ್ಮಹತ್ಯೆಗೂ ಮುನ್ನ ನಿಖಿತಾ ಡೆತ್‌ನೋಟ್‌ ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

Drowned: ರಾಜ್ಯಾದ್ಯಂತ ನಾಲ್ಕು ಅವಘಡ, ಈಜಲು ತೆರಳಿದ ಐವರು ನೀರುಪಾಲು

ರಾಜ್ಯಾದ್ಯಂತ ನಾಲ್ಕು ಅವಘಡ, ಈಜಲು ತೆರಳಿದ ಐವರು ನೀರುಪಾಲು

ರಾಜ್ಯದಲ್ಲಿ ಬೇಸಿಗೆ ರಜೆ ಆರಂಭವಾಗಿದೆ. ಶಾಲಾ ಮಕ್ಕಳು, ವಿದ್ಯಾರ್ಥಿಗಳು ಈಜು ಕಲಿಯಲೋ ಅಥವಾ ರಜೆ ಎಂಜಾಯ್‌ ಮಾಡಲೋ ನೀರಿನ ಆಶ್ರಯಗಳತ್ತ ತೆರಳುತ್ತಿದ್ದಾರೆ. ನಿನ್ನೆ ಒಂದೇ ದಿನ ವಿವಿಧೆಡೆ ಸಂಭವಿಸಿದ ಅವಘಡಗಳಲ್ಲಿ ಐದು ಮಂದಿ ನೀರುಪಾಲಾಗಿದ್ದು, ಪೋಷಕರು ಎಚ್ಚರವಿರಬೇಕಾದ ಪರಿಸ್ಥಿತಿ ಇದೆ.

Loading...