ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಚಿತ್ರದುರ್ಗ

chitradurga News: ಒಂದೇ ದಿನ ಇಬ್ಬರು ಯುವತಿಯರನ್ನು ಮದುವೆಯಾದ ವರ ಮಹಾಶಯ

ಒಂದೇ ದಿನ ಇಬ್ಬರು ಯುವತಿಯರನ್ನು ಮದುವೆಯಾದ ವರ ಮಹಾಶಯ

Viral news: ವಧುಗಳಾದ ಶಿಫಾ ಶೈಖ್ (25 ವರ್ಷ) ಮತ್ತು ಜನ್ನತ್ ಮಖಂದರ್ (24 ವರ್ಷ) ಇಬ್ಬರೂ ಚಿತ್ರದುರ್ಗದಲ್ಲೇ ವಾಸಿಸಿದವರು. ಮೂವರೂ ಒಂದೇ ಕಾಲೇಜ್‌ನಲ್ಲಿ ಓದಿದ್ದರು. ಇಬ್ಬರ ಸ್ನೇಹ ಪ್ರೀತಿಯಾಗಿ ಮಾರ್ಪಾಡಾಗಿತ್ತು. ಮೂವರೂ ತಮ್ಮ ಸಂಬಂಧವನ್ನು ಒಂದೇ ಮದುವೆಯಲ್ಲಿ ಸ್ಥಿರಪಡಿಸಲು ನಿರ್ಧರಿಸಿದ್ದರು.

Lokayukta Raid: ಭ್ರಷ್ಟರಿಗೆ ಶಾಕ್‌, ಚಿತ್ರದುರ್ಗದಲ್ಲಿ ಲೋಕಾಯುಕ್ತ ತಂಡಗಳ ದಾಳಿ

ಭ್ರಷ್ಟರಿಗೆ ಶಾಕ್‌, ಚಿತ್ರದುರ್ಗದಲ್ಲಿ ಲೋಕಾಯುಕ್ತ ತಂಡಗಳ ದಾಳಿ

Chitradurga: ಚಿತ್ರದುರ್ಗದ ತರಳಬಾಳು ನಗರದಲ್ಲಿರುವ ಅಧಿಕಾರಿ ಚಂದ್ರಕಾಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಕೃಷಿ ಇಲಾಖೆ ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ. ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗ್ರಾಮದ ಮನೆಯಲ್ಲೂ ಶೋಧ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Veerendra Pappi: ಮತ್ತೆ ಇಡಿ ದಾಳಿ, ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಲಾಕರ್‌ನಿಂದ 44 ಕಿಲೋ ಚಿನ್ನ ವಶ!

ಮತ್ತೆ ಇಡಿ ದಾಳಿ, ಶಾಸಕ ವೀರೇಂದ್ರ ಪಪ್ಪಿ ಲಾಕರ್‌ನಿಂದ 44 ಕಿಲೋ ಚಿನ್ನ ವಶ!

ED Raid: ಅಕ್ರಮ ಆನ್​​ಲೈನ್ ಗೇಮ್ ಕೇಸ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿನ್ನೆ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಹಲವೆಡೆ ಶೋಧ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬ್ಯಾಂಕ್​ನ 2 ಲಾಕರ್​ನಲ್ಲಿದ್ದ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

Chitradurga Accident: ಹಿರಿಯೂರಿನ ಬಳಿ ಭೀಕರ ಅಪಘಾತ; ಕಾರು ಪಲ್ಟಿಯಾಗಿ ಮಗು ಸೇರಿ ಮೂವರ ಸಾವು

ಹಿರಿಯೂರಿನ ಬಳಿ ಭೀಕರ ಅಪಘಾತ; ಕಾರು ಪಲ್ಟಿಯಾಗಿ ಮೂವರ ಸಾವು

Car Accident: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಡಿವೈಎಸ್​​ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Caste census: ಸಾಮಾಜಿಕ, ಶೈಕ್ಷಣಿಕ ಗಣತಿಗೆ ಕಾಲ ಮಿತಿ ಬೇಡ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಜಾತಿ ಗಣತಿಗೆ ಕಾಲ ಮಿತಿ ಬೇಡ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Immadi siddarameshwara swamiji: ಜಾತಿ ಸಮೀಕ್ಷೆಗೆ ಕಾಲ ಮಿತಿಯನ್ನು ಹಾಕದೇ ರಾಜ್ಯದ 7 ಕೋಟಿ ಜನ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಅವಕಾಶ ನೀಡಬೇಕಿದೆ. ಎಲ್ಲರೂ ಸಮಿಕ್ಷೆಯಲ್ಲಿ ಭಾಗವಹಿಸಿದ್ದಾರೆ ಎಂದು ಖಾತರಿಯಾದ ಮೇಲೆ ಸಮೀಕ್ಷೆಯನ್ನು ಪೂರ್ಣ ಮಾಡುವಂತೆ ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Man burnt alive: ಚಿತ್ರದುರ್ಗದಲ್ಲಿ ಕಾರು ಆಕಸ್ಮಿಕವಾಗಿ ಹೊತ್ತಿ ಉರಿದು ಯುವಕ ಸಜೀವ ದಹನ

ಚಿತ್ರದುರ್ಗದಲ್ಲಿ ಕಾರು ಆಕಸ್ಮಿಕವಾಗಿ ಹೊತ್ತಿ ಉರಿದು ಯುವಕ ಸಜೀವ ದಹನ

Chitradurga: ಸಿದ್ದೇಶ್ವರ್ ಟಾಟಾ ನೆಕ್ಸಾನ್ ಕಾರಿನಲ್ಲಿ ಹಿರಿಯೂರಿನಿಂದ ಅರಳೀಕಟ್ಟೆಗೆ ಮರಳುತ್ತಿದ್ದರು. ಈ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Chitradurga News: ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ, ಪ್ರಜಾಪ್ರಭುತ್ವದ ಅರಿವು ಅಗತ್ಯ

ಪ್ರಜಾಪ್ರಭುತ್ವದ ದಿನಾಚರಣೆ: ಮತದಾನ ಮತ್ತು ಪರಿಸರ ಪ್ರತಿಜ್ಞೆ

ರಾಜ್ಯ ಸರಕಾರವು 'ನಮ್ಮ ಮತ ನಮ್ಮ ಹಕ್ಕು' ಘೋಷಣೆಯಡಿ ಪ್ರಜಾಪ್ರಭುತ್ವವನ್ನು ಆಚರಿಸುವ ಮೂಲಕ ನಾವೆಲ್ಲರೂ ಒಟ್ಟಿಗೆ ಇರೋಣ. ಪ್ರಜಾಪ್ರಭುತ್ವವು ಯುವಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ, ನಾಗರಿಕ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಹಾಗೂ ಸಂವಿಧಾನಿಕ ಮೌಲ್ಯಗಳನ್ನು ಬಲಪಡಿಸುವ ಉದ್ದೇಶವನ್ನು ಹೊಂದಿದೆ ಜೊತೆಗೆ ನಮ್ಮ ಭೂಮಿ, ಪರಿಸರವೂ ಪ್ರಭುತ್ವದ ಭಾಗವಾಗಿದೆ

Veerendra Puppy: ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್;  2 ಚೀಲ ಚಿನ್ನಾಭರಣ ವಶಕ್ಕೆ ಪಡೆದರಾ ಅಧಿಕಾರಿಗಳು?

ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್; ಮೂರನೇ ಬಾರಿ ದಾಳಿ

ಆನ್‌ಲೈನ್ ಬೆಟ್ಟಿಂಗ್ ಹಾಗೂ ಮನಿ ಗೇಮಿಂಗ್ ಹಗರಣದಲ್ಲಿ (Veerendra Puppy) ಬಂಧನದಲ್ಲಿರುವ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)ಗೆ ಇಡಿ ಮತ್ತೆ ಶಾಕ್‌ ನೀಡಿದೆ. ಶಾಸಕರಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ನಿನ್ನೆ 3ನೇ ಸಲ ದಾಳಿ ಮಾಡಿದೆ.

ವಿಶ್ವದರ್ಜೆಯ ಐವಿಎಫ್ ಚಿಕಿತ್ಸೆ ಇನ್ನು ಚಿತ್ರದುರ್ಗದಲ್ಲೇ: ಮಿಲನ್ ಫರ್ಟಿಲಿಟಿ ಮತ್ತು ಶ್ರೀ ಸಾಯಿ ನಾರಾಯಣ ಆಸ್ಪತ್ರೆಯಿಂದ ಮಹತ್ವದ ಹೆಜ್ಜೆ

ಮಿಲನ್ ಫರ್ಟಿಲಿಟಿ ಮತ್ತು ಶ್ರೀ ಸಾಯಿ ನಾರಾಯಣ ಆಸ್ಪತ್ರೆಯಿಂದ ಮಹತ್ವದ ಹೆಜ್ಜೆ

ಶ್ರೀ ಸಾಯಿ ನಾರಾಯಣ ಆಸ್ಪತ್ರೆಯು ಅಗತ್ಯವಾದ ವೈದ್ಯ ಕೀಯ ಮೂಲಸೌಕರ್ಯ, ಸಮಾಲೋಚನೆಗೆ ಬೇಕಾದ ಸ್ಥಳಾವಕಾಶ ಮತ್ತು ಪ್ರಯೋಗಾಲಯದ ಸೌಲಭ್ಯ ಗಳನ್ನು ಒದಗಿಸಲಿದೆ. ಈ ಎರಡು ಸಂಸ್ಥೆ ಗಳು ಒಟ್ಟಾಗಿ, ಚಿತ್ರದುರ್ಗ ಮತ್ತು ಸುತ್ತಮುತ್ತಲಿನ ಜಿಲ್ಲೆ ಗಳ ಕುಟುಂಬಗಳಿಗೆ ನೈತಿಕ, ಸುಲಭವಾಗಿ ತಲು ಪಬಲ್ಲ ಮತ್ತು ಉತ್ತಮ ಗುಣಮಟ್ಟದ ಸಂತಾನೋ ತ್ಪತ್ತಿ ಆರೋಗ್ಯ ಸೇವೆಯನ್ನು ಒದಗಿಸುವ ಗುರಿ ಯನ್ನು ಹೊಂದಿವೆ.

Veerendra Puppy: ಆನ್‌ಲೈನ್‌ ಬೆಟ್ಟಿಂಗ್‌ನಿಂದ 2000 ಕೋಟಿ ರೂ. ಸಂಗ್ರಹಿಸಿದ ವೀರೇಂದ್ರ ಪಪ್ಪಿ, ಮತ್ತೆ 55 ಕೋಟಿ ವಶ

ಆನ್‌ಲೈನ್‌ ಬೆಟ್ಟಿಂಗ್‌ನಿಂದ 2000 ಕೋಟಿ ರೂ. ಸಂಗ್ರಹಿಸಿದ ವೀರೇಂದ್ರ ಪಪ್ಪಿ!

ED Raid: ಶಾಸಕ ವೀರೇಂದ್ರಗೆ ಸಂಬಂಧಿಸಿದಂತೆ ಆಸ್ತಿಯನ್ನು ಇಡಿ ಅಧಿಕಾರಿಗಳು ಶೋಧ ನಡೆಸಿದ್ದು, ಸದ್ಯ ವೀರೇಂದ್ರಗೆ ಸೇರಿದ ಬ್ಯಾಂಕ್ ಅಕೌಂಟ್‌ಗಳಲ್ಲಿದ್ದ 55 ಕೋಟಿ ರೂಪಾಯಿಯನ್ನು ಜಪ್ತಿ ಮಾಡಿದ್ದಾರೆ. ಒಟ್ಟು 9 ಬ್ಯಾಂಕ್ ಖಾತೆಗಳು, ಒಂದು ಡಿಮ್ಯಾಟ್ ಅಕೌಂಟ್ ಹಾಗೂ 262 ಮ್ಯೂಲ್ ಖಾತೆಗಳಲ್ಲಿದ್ದ ಅಂದಾಜು 55 ಕೋಟಿ ರೂ. ಜಪ್ತಿ ಮಾಡಿದ್ದಾರೆ.

KC Veerendra Pappi: ಶಾಸಕ ವಿರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ; ಆರು ಐಷಾರಾಮಿ ಕಾರುಗಳು ವಶಕ್ಕೆ

ಶಾಸಕ ವಿರೇಂದ್ರ ಪಪ್ಪಿ ಮನೆ ಮೇಲೆ ಮತ್ತೆ ಇಡಿ ದಾಳಿ

ವಿದೇಶಿ ಕರೆನ್ಸಿ ಹಾಗು ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಸದ್ಯ ಜಾರಿ ನಿರ್ದೇಶನಾಲಯ (ED) ವಶದಲ್ಲಿರುವ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಇಡಿ ಅಧಿಕಾರಿಗಳು ಮತ್ತೆ ದಾಳಿಯನ್ನು ನಡೆಸಿದ್ದು, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ.

KV Prabhakar: ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆ.ವಿ. ಪ್ರಭಾಕರ್‌

ಮನುಸ್ಮೃತಿಯ ಘರ್ ವಾಪ್ಸಿಯನ್ನು ಸಂವಿಧಾನ ತಡೆದು ನಿಲ್ಲಿಸಿದೆ: ಕೆವಿಪಿ

KV Prabhakar: ಸುದ್ದಿ ಮಾಧ್ಯಮದ ಆತ್ಮ ಆಗಿರುವ ʼವಾಕ್ ಸ್ವಾತಂತ್ರ್ಯ ಮತ್ತು ಜಾತ್ಯತೀತತೆ ಹಾಗೂ ಸಾಮಾಜಿಕ ನ್ಯಾಯʼ ವೇ ಅಂಬೇಡ್ಕರ್ ದೃಷ್ಟಿಕೋನದ ಆತ್ಮವೂ ಆಗಿದೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ಮೌಲ್ಯವೂ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

KC Veerendra Puppy: ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅರೆಸ್ಟ್;‌ ಇಡಿಯಿಂದ 12 ಕೋಟಿ ನಗದು, 6 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ

ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅರೆಸ್ಟ್;‌ 12 ಕೋಟಿ ನಗದು ಜಪ್ತಿ

illegal betting case: ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಶುಕ್ರವಾರ ಬಂದಿಸಿ, ಸಿಕ್ಕಿಂನ ರಾಜಧಾನಿ ಗ್ಯಾಂಗ್ಟಕ್‌ನಲ್ಲಿನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಬೆಂಗಳೂರಿನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಟ್ರಾನ್ಸಿಟ್ ರಿಮಾಂಡ್ ಪಡೆಯಲಾಯಿತು ಎಂದು ಇಡಿ ತಿಳಿಸಿದೆ.

K.C.Veerendra Puppy: ಅಕ್ರಮ ಹಣ ವರ್ಗಾವಣೆ ಕೇಸ್‌; ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇಡಿ ವಶಕ್ಕೆ

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇಡಿ ವಶಕ್ಕೆ

ED Raid: ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್‌ಗಳಿಗೆ ಅಕ್ರಮ ಹಣ ವರ್ಗಾವಣೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಇಡಿ ದಾಳಿ ನಡೆಸಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಶಾಸಕನಿಗೆ ಸೇರಿದ 16 ಕಡೆ ಇಡಿ ದಾಳಿ ಮಾಡಿದೆ.

K. C. Veerendra Puppy: ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಾಗೂ ಸಹೋದರರ ನಿವಾಸದ ಮೇಲೆ ಇಡಿ ದಾಳಿ

ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಹಾಗೂ ಸಹೋದರರ ನಿವಾಸದ ಮೇಲೆ ಇಡಿ ದಾಳಿ

ED raid: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ 4 ಮನೆಗಳ ಮೇಲೆ ಇಡಿ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಕೆ.ಸಿ. ವೀರೇಂದ್ರ, ಕೆ.ಸಿ. ನಾಗರಾಜ, ಕೆ.ಸಿ. ತಿಪ್ಪೇಸ್ವಾಮಿ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Varshita Murder Case: ಯುವತಿಯನ್ನು ಕೊಂದು ಸುಟ್ಟು ಹಾಕಿದ ಕ್ರೂರಿ ಸೆರೆ, ಕ್ಯಾನ್ಸರ್‌ 3ನೇ ಹಂತದಲ್ಲಿರುವ ಆರೋಪಿ

ಯುವತಿಯನ್ನು ಕೊಂದು ಸುಟ್ಟು ಹಾಕಿದ ಆರೋಪಿಗೆ ಕ್ಯಾನ್ಸರ್‌ 3ನೇ ಹಂತ

Chitradurga: ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕ ಚೇತನ್​ ವರ್ಷಿತಾ ಜತೆ ಸಂಪರ್ಕದಲ್ಲಿದ್ದ. ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ಮಾಡಿದ್ದು, ಈ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಬೇರೊಬ್ಬನ ಜೊತೆ ವರ್ಷಿತಾ ಸಂಬಂಧ ಬೆಳೆಸಿದ್ದಕ್ಕಾಗಿ ಕೋಪಗೊಂಡು ಕೊಲೆ ಮಾಡಿದ್ದೇನೆ ಎಂದಿದ್ದಾನೆ.

Murder case: ಚಿತ್ರದುರ್ಗದಲ್ಲಿ ಪೈಶಾಚಿಕ ಕೃತ್ಯ: ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಸುಟ್ಟು ಹಾಕಿದ ದುರುಳರು

ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ, ಕೊಂದು ಸುಟ್ಟ ದುರುಳರು

Chitradurga: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಕೋವೇರಹಟ್ಟಿ ಮೂಲದ 19 ವರ್ಷದ ವರ್ಷಿತಾ ಎಂಬಾಕೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವರ್ಷಿತಾ ಚಿತ್ರದುರ್ಗ ನಗರದ ಬಾಲಕಿಯರ ವಸತಿ ಶಾಲೆಯ ಪದವಿ ವಿದ್ಯಾರ್ಥಿನಿಯಾಗಿದ್ದು, ಈಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಬೆಂಕಿಯಿಟ್ಟಿರುವ ಶಂಕೆ ವ್ಯಕ್ತವಾಗಿದೆ.

Road Accident: ಚಳ್ಳಕೆರೆಯಲ್ಲಿ ಕಾರು-ಬೈಕ್ ಡಿಕ್ಕಿಯಾಗಿ ಅಣ್ಣ-ತಂಗಿ ದಾರುಣ ಸಾವು

ಚಳ್ಳಕೆರೆಯಲ್ಲಿ ಕಾರು-ಬೈಕ್ ಡಿಕ್ಕಿಯಾಗಿ ಅಣ್ಣ-ತಂಗಿ ದಾರುಣ ಸಾವು

Challakere News: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬೈಕ್‍ನಲ್ಲಿದ್ದ ಅಣ್ಣ-ತಂಗಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಚಾಲಕನಿಗೂ ಗಾಯಗಳಾಗಿವೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Lokayukta Raid: ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

Chitradurga: ಇಬ್ಬರು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ಲೋಕಾಯುಕ್ತ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ದಾಖಲೆಗಳ ಪರಿಶೀಲನೆ ಮುಂದುವರಿದಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ವರದಿ ಸಿದ್ಧಪಡಿಸಲಾಗುತ್ತಿದೆ. ಚಿತ್ರದುರ್ಗ, ಚಿಕ್ಕಬಳ್ಳಾಪುರದಲ್ಲಿ ದಾಳಿಗಳು ನಡೆದಿವೆ.

Murder Case: ಅನೈತಿಕ ಸಂಬಂಧದಿಂದ ಕೊಲೆ, ಕಾಂಗ್ರೆಸ್‌ ಶಾಸಕರ ಚಾಲಕನ ಬಂಧನ

ಅನೈತಿಕ ಸಂಬಂಧದಿಂದ ಕೊಲೆ, ಕಾಂಗ್ರೆಸ್‌ ಶಾಸಕರ ಚಾಲಕನ ಬಂಧನ

Chitradurga news: ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಶವಂತ್‌, ಚಿತ್ರದುರ್ಗ ಶಾಸಕ ಬಿಜಿ ಗೋವಿಂದಪ್ಪ ಅವರ ಕಾರು ಚಾಲಕನಾಗಿದ್ದಾನೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಲಿಂಗದಳ್ಳಿ ಮತ್ತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ಪ್ರಕರಣ ನಡೆದಿದೆ.

Self Harming: ಮಗಳನ್ನು ಪತ್ತೆ ಹಚ್ಚಲು ಪೊಲೀಸರ ನಿರ್ಲಕ್ಷ್ಯ; ವಿಷ ಸೇವಿಸಿದ ತಂದೆ ಸಾವು

ಮಗಳನ್ನು ಪತ್ತೆ ಹಚ್ಚಲು ಪೊಲೀಸರ ನಿರ್ಲಕ್ಷ್ಯ; ವಿಷ ಸೇವಿಸಿದ ತಂದೆ ಸಾವು

Self Harming: ಪುತ್ರಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ಅಜ್ಜಯ್ಯ ಠಾಣೆಗೆ ದೂರು ನೀಡಲು ತೆರಳಿದ್ದಾರೆ. ಒಂದು ಬಾರಿ ಪುತ್ರಿಯನ್ನು ಭೇಟಿ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ ಪೊಲೀಸರು ದೂರು ತೆಗೆದುಕೊಳ್ಳದೆ ಅವರನ್ನು ಅಲೆದಾಡಿಸಿದ್ದಾರೆ.

Self Harming: ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಹೋಮ್‌ ಗಾರ್ಡ್ ಆತ್ಮಹತ್ಯೆ

ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನೊಂದು ಹೋಮ್‌ ಗಾರ್ಡ್ ಆತ್ಮಹತ್ಯೆ

Self Harming: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜೆ.ಬಿ ಹಳ್ಳಿಯಲ್ಲಿ ಘಟನೆ ನಡೆದಿದೆ. ಇತ್ತೀಚೆಗೆ ಮೂರು ಕಡೆಯಲ್ಲಿ ಯುವಕ, ಹೆಣ್ಣು ನೋಡಿಕೊಂಡು ಬಂದಿದ್ದರು. ಅವರಲ್ಲಿ ಯಾರೂ ಒಪ್ಪದ ಹಿನ್ನೆಲೆಯಲ್ಲಿ ಮನನೊಂದು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

Road Accident: ಬೆಂಗಳೂರು, ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: ಬಸ್‌ ಡಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರ ಸಾವು

ಬೆಂಗಳೂರು, ಚಿತ್ರದುರ್ಗದಲ್ಲಿ ಬಸ್‌ ಡಿಕ್ಕಿಯಾಗಿ ಇಬ್ಬರು ಬೈಕ್‌ ಸವಾರರ ಸಾವು

Road Accident: ಬೆಂಗಳೂರಿನ ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಬಸ್ಸಿಗೆ ವೇಗವಾಗಿ ಬಂದ ಬೈಕ್‌ ಡಿಕ್ಕಿಯಾಗಿದೆ. ಚಿತ್ರದುರ್ಗದಲ್ಲಿ ಬೈಕ್‌ಗೆ ಡಿಕ್ಕಿಯಾದ ಬಳಿಕ ಖಾಸಗಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಎರಡೂ ಘಟನೆಗಳಲ್ಲಿ ಬೈಕ್‌ ಸವಾರರು ಮೃತಪಟ್ಟಿದ್ದಾರೆ.

Second Marriage: 2ನೇ ಮದುವೆಯಾಗುತ್ತಿದ್ದ ಪತಿಗೆ ಮಂಟಪದಲ್ಲೇ ಚಪ್ಪಲಿಯಿಂದ ಬಾರಿಸಿದ ಪತ್ನಿ!

2ನೇ ಮದುವೆಯಾಗುತ್ತಿದ್ದ ಪತಿಗೆ ಮಂಟಪದಲ್ಲೇ ಚಪ್ಪಲಿಯಿಂದ ಬಾರಿಸಿದ ಪತ್ನಿ!

Chitradurga News: ಚಿತ್ರದುರ್ಗ ನಗರದಲ್ಲಿ ಈ ಘಟನೆ ನಡೆದಿದೆ. ಗಂಡ ಎರಡನೇ ಮದುವೆಯಾಗುತ್ತಿರುವ ವಿಷಯ ತಿಳಿದು ಮೊದಲ ಪತ್ನಿ ಕುಟುಂಬಸ್ಥರು ಮದುವೆ ಮಂಟಪಕ್ಕೇ ತೆರಳಿ ಮದುವೆ ನಿಲ್ಲಿಸಿದ್ದಾರೆ. ಈ ವೇಳೆ ಗಂಡನಿಗೆ ಪತ್ನಿ ಧರ್ಮದೇಟು ನೀಡಿದ್ದಾಳೆ.

Loading...