ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಚಿತ್ರದುರ್ಗ

ಕೋಣೆಗೆ ಕರೆದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಚಿತ್ರದುರ್ಗದಲ್ಲಿ ಖಾಸಗಿ ಶಾಲೆ ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಖಾಸಗಿ ಶಾಲೆ ಶಿಕ್ಷಕನ ಬಂಧನ

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದ ಶಾಲೆಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೋಣೆಗೆ ಕರೆದು ಶಿಕ್ಷಕ ಹೀನ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಶಾಲೆಯ ಆಡಳಿತ ಮಂಡಳಿಯಿಂದ ಶಿಕ್ಷಕನ ವಿರುದ್ಧ ದೂರು ನೀಡಲಾಗಿದ್ದು, ಪೋಕ್ಸೊ ಪ್ರಕರಣ ದಾಖಲಾಗಿದೆ.

Road Accident: ಓವರ್‌ಟೇಕ್‌ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು

ಓವರ್‌ಟೇಕ್‌ ಮಾಡುವಾಗ ಲಾರಿಗೆ ಕಾರು ಡಿಕ್ಕಿ, ಇಬ್ಬರು ಸಾವು

ಇತ್ತೀಚೆಗೆ ಹಿರಿಯೂರು ಬಳಿಯೇ ಹೆದ್ದಾರಿಯಲ್ಲಿ ಕಂಟೈನರ್‌ ಡಿಕ್ಕಿಯಾಗಿ ಖಾಸಗಿ ಸ್ಲೀಪರ್‌ ಬಸ್‌ ಹೊತ್ತಿ ಉರಿದು ಐದು ಮಂದಿ ಸಜೀವ ದಹನಗೊಂಡಿದ್ದರು. ಈ ಘಟನೆಯ ಕಹಿನೆನಪು ಮಾಸುವ ಮುನ್ನವೇ ಇಲ್ಲಿ ಮತ್ತಷ್ಟು ಅಪಘಾತಗಳು ಸಂಭವಿಸಿವೆ. ಈ ಭಾಗದಲ್ಲಿ ಮುಂಜಾನೆ ಸಾಕಷ್ಟು ಮಂಜು ಕವಿದ ವಾತಾವರಣವಿದ್ದು, ತಡರಾತ್ರಿ ಡ್ರೈವ್‌ ಮಾಡುವ ವಾಹನ ಚಾಲಕರು ಹೆಚ್ಚು ಎಚ್ಚರ ವಹಿಸಲು ಸೂಚಿಸಿದೆ.

Road Accident: ಹಿರಿಯೂರು ಬಳಿ ಇನ್ನೊಂದು ಭೀಕರ ಅಪಘಾತ, ನಾಲ್ವರು ಸಾವು

ಹಿರಿಯೂರು ಬಳಿ ಇನ್ನೊಂದು ಭೀಕರ ಅಪಘಾತ, ನಾಲ್ವರು ಸಾವು

ಕಾರು ಮೈಸೂರು ಕಡೆಯಿಂದ ಹಿರಿಯೂರಿನತ್ತ ಬರುತ್ತಿತ್ತು. ಲಾರಿ ಮೈಸೂರು ಕಡೆಗೆ ತೆರಳುತ್ತಿತ್ತು. ಯುವಕರ ತಂಡ ಹಳ್ಳಿಯೊಂದರಲ್ಲಿ ಊಟ ಮುಗಿಸಿಕೊಂಡು ಸ್ವಿಫ್ಟ್‌ ಡಿಸೈರ್‌ ಕಾರಿನಲ್ಲಿ ಪಟ್ಟಣದ ಕಡೆಗೆ ಬರುವಾಗ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Chitradurga News: ಮದುವೆ ಮಾಡಲಿಲ್ಲ ಎಂದು ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ!

ಮದುವೆ ಮಾಡಲಿಲ್ಲ ಎಂದು ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ!

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತ್ತಿಘಟ್ಟದಲ್ಲಿ ಘಟನೆ ನಡೆದಿದೆ. ಮದುವೆ ವಿಚಾರಕ್ಕೆ ತಂದೆಯೊಂದಿಗೆ ಪುತ್ರ ನಿತ್ಯ ಜಗಳ ಮಾಡುತ್ತಿದ್ದ. ಆದರೆ, ಮದುವೆ ಮಾಡಿಸಲು ಒಪ್ಪದ ಹಿನ್ನೆಲೆಯಲ್ಲಿ ಮಲಗಿದ್ದ ವೇಳೆ ತಂದೆ ತಲೆಗೆ ರಾಡ್‌ನಿಂದ ಹೊಡೆದು ಪುತ್ರ ಹತ್ಯೆ ಮಾಡಿದ್ದಾನೆ. ಈ ಬಗ್ಗೆ ಹೊಸದುರ್ಗ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

Road Accident: ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣ

ಮರಕ್ಕೆ ಬೊಲೆರೊ ಡಿಕ್ಕಿಯಾಗಿ ನಾಲ್ವರು ದುರ್ಮರಣ

ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ಮರಕ್ಕೆ ಡಿಕ್ಕಿಯಾದ ಪರಿಣಾಮ, ಕಲ್ಲವ್ವ ನಾಗತಿಹಳ್ಳಿ ಗ್ರಾಮದ ಗಿರಿರಾಜ್ (46), ಕಿರಣ್ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರುಣ್ (32) ಹಾಗೂ ಹನುಮಂತ (32) ದಾವಣಗೆರೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

K C Veerendra Puppy: ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಆನ್‌ಲೈನ್‌ ಬೆಟ್ಟಿಂಗ್‌ ಪ್ರಕರಣ; ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಅಕ್ರಮ ಬೆಟ್ಟಿಂಗ್‌ ಪ್ರಕರಣದಲ್ಲಿ ಪ್ರಕರಣದಲ್ಲಿ ಶಾಸಕನಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, 150 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದರು. ಸುಮಾರು 30 ಕಡೆ ನಡೆದ ದಾಳಿಯಲ್ಲಿ ನಗದು, ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.

ಚಿತ್ರದುರ್ಗ ದುರಂತ ; ಗಂಭೀರವಾಗಿ ಗಾಯಗೊಂಡಿದ್ದ ಬಸ್‌ ಚಾಲಕ ರಫೀಕ್‌ ಸಾವು

ಗಂಭೀರವಾಗಿ ಗಾಯಗೊಂಡಿದ್ದ ಬಸ್‌ ಚಾಲಕ ರಫೀಕ್‌ ಸಾವು

Chitradurga Bus Accident: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಸೀ ಬರ್ಡ್‌ ಬಸ್‌ ಹೊತ್ತಿ ಉರಿದ ಘಟನೆಯಲ್ಲಿ ಖಾಸಗಿ ಬಸ್ ಚಾಲಕ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ 7 ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಅಪಘಾತದ ವೇಳೆ ತಪ್ಪಿತು ಮತ್ತೊಂದು ಬಸ್‌ ದುರಂತ; ಪವಾಡ ರೀತಿಯಲ್ಲಿ 43 ಶಾಲಾ ಮಕ್ಕಳು ಪಾರು!

ಚಿತ್ರದುರ್ಗದಲ್ಲಿ ತಪ್ಪಿತು ಮತ್ತೊಂದು ಬಸ್‌ ದುರಂತ; 43 ಶಾಲಾ ಮಕ್ಕಳು ಪಾರು!

ಬೆಂಗಳೂರಿನ ಟಿ.ದಾಸರಹಳ್ಳಿಯ ಶಾಲೆಯೊಂದರ ಮಕ್ಕಳು ಬಸ್‌ನಲ್ಲಿ ದಾಂಡೇಲಿಗೆ ಪ್ರವಾಸ ಹೊರಟಿದ್ದರು. ಹಿರಿಯೂರು ಬಳಿ ಕಂಟೈನರ್‌ ಲಾಡಿ ಡಿಕ್ಕಿಯಾದ ವೇಳೆ ಸೀಬರ್ಡ್ ಸ್ಲೀಪರ್‌ ಬಸ್‌, ಹಿಂದೆ ಬರುತ್ತಿದ್ದ ಶಾಲಾ ಮಕ್ಕಳಿದ್ದ ಬಸ್‌ಗೆ ಬಡಿದಿದೆ. ಇದರಿಂದ ಬಸ್‌ ಮುಂಭಾಗ ಜಖಂಗೊಂಡಿದ್ದು, ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ.

Chitradurga Bus Accident: ಚಿತ್ರದುರ್ಗ ಬಸ್‌ ಅಪಘಾತದಲ್ಲಿ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

ಚಿತ್ರದುರ್ಗ ಬಸ್‌ ಅಪಘಾತದಲ್ಲಿ ಇಬ್ಬರು ಮಹಿಳಾ ಟೆಕ್ಕಿಗಳು ಕಣ್ಮರೆ

ಚನ್ನರಾಯಪಟ್ಟಣ ತಾಲೂಕಿನ ಅಂಕನಹಳ್ಳಿಯ ನವ್ಯ ಹಾಗೂ ಚನ್ನರಾಯಪಟ್ಟಣ ನಗರದ ಮಾನಸ ಕಣ್ಮರೆಯಾಗಿದ್ದಾರೆ. ಇಬ್ಬರು ಹಾಸನ ನಗರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಟ್ಟಿಗೆ ಇಂಜಿನಿಯರಿಂಗ್ ಮುಗಿಸಿದ್ದರು. ಬಳಿಕ ಬೆಂಗಳೂರಿನಲ್ಲಿ ಎಂಟೆಕ್ ಮುಗಿಸಿ, ಸಾಫ್ಟ್‌ವೇರ್‌ ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದರು. ಇವರ ದೇಹದ ಅವಶೇಷಗಳಿಗಾಗಿ ಹುಡುಕಾಟ ನಡೆದಿದೆ.

Chitradurga Bus Accident: ಡೀಸೆಲ್ ಟ್ಯಾಂಕ್‌ಗೆ ಲಾರಿ ಡಿಕ್ಕಿ ಹೊಡೆದು ಸ್ಫೋಟ, ಬಸ್‌ ಪ್ರಯಾಣಿಕರ ಪಟ್ಟಿ ಇಲ್ಲಿದೆ

ಬಸ್ಸಿನ ಡೀಸೆಲ್ ಟ್ಯಾಂಕ್‌ಗೇ ಲಾರಿ ಡಿಕ್ಕಿ, ಬಸ್‌ ಯಾನಿಗಳ ಪಟ್ಟಿ ಇಲ್ಲಿದೆ

ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್, ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ ಬಸ್‌ಗೆ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿ, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪ್ಪಳಿಸುವಿಕೆಯಿಂದಾಗಿ ಸ್ಲೀಪರ್ ಕೋಚ್ ಬಸ್ ರಸ್ತೆಯ ಮಧ್ಯೆಯೇ ಬೆಂಕಿ ಹತ್ತಿಕೊಂಡು ಉರಿದಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣ ಎಂದು ಪ್ರಾಥಮಿಕವಾಗಿ ಹೇಳಲಾಗುತ್ತಿದೆ.

Chitradurga Bus Accident: ಚಿತ್ರದುರ್ಗ ಬಸ್‌ ದುರಂತ: ಪಿಎಂ, ಸಿಎಂ, ಡಿಸಿಎಂ ಸಂತಾಪ; ಸಂತ್ರಸ್ತರಿಗೆ ಮೋದಿ 2 ಲಕ್ಷ ರೂ. ಪರಿಹಾರ

ಬಸ್‌ ದುರಂತ: ಪಿಎಂ, ಸಿಎಂ, ಡಿಸಿಎಂ ಸಂತಾಪ; ಮೋದಿ 2 ಲಕ್ಷ ರೂ. ಪರಿಹಾರ

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.

Chitradurga Bus Accident: ಬಸ್‌ ಬೆಂಕಿಗೆ 9 ಬಲಿ, ಸುಟ್ಟುಹೋದವರ ಗುರುತು ಪತ್ತೆಯೇ ಸವಾಲು!

ಬಸ್‌ ಬೆಂಕಿಗೆ 9 ಬಲಿ, ಸುಟ್ಟುಹೋದವರ ಗುರುತು ಪತ್ತೆಯೇ ಸವಾಲು!

ಸದ್ಯದ ಮಾಹಿತಿ ಪ್ರಕಾರ ಲಾರಿ ಚಾಲಕ ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಮೃತ ದೇಹಗಳು ಗುರುತು ಹಿಡಿಯಲಾರದಷ್ಟು ಸುಟ್ಟು ಕರಕಲಾಗಿವೆ. ಬಸ್ಸಿನಿಂದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವುದು ಕಷ್ಟವಾಗಿರುವುದರಿಂದ ಬೆಂಗಳೂರಿನಿಂದ ವಿಧಿವಿಜ್ಞಾನ ಮತ್ತು ಡಿಎನ್‌ಎ (DNA) ತಂಡಗಳನ್ನು ಕರೆಸಲಾಗಿದೆ' ಎಂದು ಐಜಿಪಿ ತಿಳಿಸಿದ್ದಾರೆ.

Karnataka Weather: ಮುಂದಿನ 2 ದಿನ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಗುಡುಗು ಸಹಿತ ಮಳೆ ನಿರೀಕ್ಷೆ!

ಮುಂದಿನ 2 ದಿನ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ!

ಕರ್ನಾಟಕ ಹವಾಮಾನ ವರದಿ: ಮುಂದಿನ ಎರಡು ದಿನಗಳವರೆಗೆ ರಾಜ್ಯದ ಉತ್ತರ ಒಳನಾಡಿನ ಕನಿಷ್ಠ ತಾಪಮಾನದಲ್ಲಿ 2-3°C ಇಳಿಕೆ, ನಂತರ ದೊಡ್ಡ ಬದಲಾವಣೆ ಇಲ್ಲ. ಮುಂದಿನ 5 ದಿನಗಳವರೆಗೆ ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Murugha Mutt seer Case: ಮುರುಘಾ ಶ್ರೀ ವಿರುದ್ಧ ಇದ್ದ ಕೇಸ್‌ ಏನು?; ಇಲ್ಲಿದೆ ಸಂಪೂರ್ಣ ವಿವರ

ಮುರುಘಾ ಶ್ರೀ ವಿರುದ್ಧ ಇದ್ದ ಕೇಸ್‌ ಏನು?; ಇಲ್ಲಿದೆ ಸಂಪೂರ್ಣ ವಿವರ

Chitradurga News: ಮೊದಲ ಪೋಕ್ಸೊ ಪ್ರಕರಣದಲ್ಲಿ ಎ1 ಮುರುಘಾ ಶ್ರೀ, ಎರಡನೇ ಆರೋಪಿ ರಶ್ಮಿ, ನಾಲ್ಕನೇ ಆರೋಪಿ, ಮಠದ ಮ್ಯಾನೇಜರ್ ಪರಮಶಿವಯ್ಯ ನಿರ್ದೋಷಿಗಳು ಎಂದು ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಶ್ರೀಗಳ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.

Murugha Mutt seer Case: ಪೋಕ್ಸೊ ಕೇಸ್‌ನಲ್ಲಿ ಮುರುಘಾ ಶ್ರೀಗಳಿಗೆ ಬಿಗ್‌ ರಿಲೀಫ್‌; ಮೊದಲ ಪ್ರಕರಣದಲ್ಲಿ ಖುಲಾಸೆಗೊಳಿಸಿದ ಚಿತ್ರದುರ್ಗ ಕೋರ್ಟ್

ಪೋಕ್ಸೊ ಕೇಸ್‌ನಲ್ಲಿ ಮುರುಘಾ ಶ್ರೀಗಳನ್ನು ಖುಲಾಸೆಗೊಳಿಸಿದ ಕೋರ್ಟ್

Chitradurga News: ಆರೋಪ ಸಾಬೀತಾಗಿದ್ದರೆ ಮುರುಘಾ ಶ್ರೀಗಳಿಗೆ ಕನಿಷ್ಠ 20 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇತ್ತು. ಮುರುಘಾ ಶರಣರ ವಿರುದ್ಧದ ಎರಡು ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸುದೀರ್ಘ ವಿಚಾರಣೆ ನಡೆದಿದ್ದು, ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದೆ.

Murugha math Sri: ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು ಇಂದು

ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು ಇಂದು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ (POCSO case) ಆರೋಪ ಎದುರಿಸುತ್ತಿರುವ ಮುರುಘಾ ಶರಣರ ಪ್ರಕರಣದ ವಾದ-ಪ್ರತಿವಾದ ಪೂರ್ಣಗೊಂಡಿದೆ. ಶರಣರ ವಿರುದ್ಧದ ಎರಡು ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸುದೀರ್ಘ ವಿಚಾರಣೆ ನಡೆದಿದ್ದು, ವಾದ ಆಲಿಸಿದ ನ್ಯಾಯಾಲಯ ಇಂದು ಪ್ರಕರಣದ ತೀರ್ಪನ್ನು ಪ್ರಕಟಿಸುವುದಾಗಿ ತಿಳಿಸಿದೆ.

Karnataka Weather:‌ ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather Report) ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

Assault Case: ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಮಾಡಿದ ಅಧ್ಯಾಪಕ

ಪೋಷಕರಿಗೆ ಕರೆ ಮಾಡಿದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನುಷ ಹಲ್ಲೆ

Chitrdadurga: ಆ ವಿದ್ಯಾರ್ಥಿಗೆ ಕಾಲಲ್ಲಿ ಒದ್ದು ವಿಕೃತಿ ಮೆರೆದಿದ್ದು, ಆ ಶಿಕ್ಷಕನ ಕ್ರೌರ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಆಕ್ರೋಶದಿಂದ ಪುಟ್ಟ ವಿದ್ಯಾರ್ಥಿ ಮೇಲೆ ಈ ರೀತಿ ಅಮಾನುಷವಾಗಿ ಶಿಕ್ಷಕ ಕ್ರೌರ್ಯ ಮೆರೆದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇದರ ಬೆನ್ನಲ್ಲೇ ಶಿಕ್ಷಕ ವೀರೇಶ್ ನಾಪತ್ತೆಯಾಗಿದ್ದಾನೆ.

chitradurga News: ಒಂದೇ ದಿನ ಇಬ್ಬರು ಯುವತಿಯರನ್ನು ಮದುವೆಯಾದ ವರ ಮಹಾಶಯ

ಒಂದೇ ದಿನ ಇಬ್ಬರು ಯುವತಿಯರನ್ನು ಮದುವೆಯಾದ ವರ ಮಹಾಶಯ

Viral news: ವಧುಗಳಾದ ಶಿಫಾ ಶೈಖ್ (25 ವರ್ಷ) ಮತ್ತು ಜನ್ನತ್ ಮಖಂದರ್ (24 ವರ್ಷ) ಇಬ್ಬರೂ ಚಿತ್ರದುರ್ಗದಲ್ಲೇ ವಾಸಿಸಿದವರು. ಮೂವರೂ ಒಂದೇ ಕಾಲೇಜ್‌ನಲ್ಲಿ ಓದಿದ್ದರು. ಇಬ್ಬರ ಸ್ನೇಹ ಪ್ರೀತಿಯಾಗಿ ಮಾರ್ಪಾಡಾಗಿತ್ತು. ಮೂವರೂ ತಮ್ಮ ಸಂಬಂಧವನ್ನು ಒಂದೇ ಮದುವೆಯಲ್ಲಿ ಸ್ಥಿರಪಡಿಸಲು ನಿರ್ಧರಿಸಿದ್ದರು.

Lokayukta Raid: ಭ್ರಷ್ಟರಿಗೆ ಶಾಕ್‌, ಚಿತ್ರದುರ್ಗದಲ್ಲಿ ಲೋಕಾಯುಕ್ತ ತಂಡಗಳ ದಾಳಿ

ಭ್ರಷ್ಟರಿಗೆ ಶಾಕ್‌, ಚಿತ್ರದುರ್ಗದಲ್ಲಿ ಲೋಕಾಯುಕ್ತ ತಂಡಗಳ ದಾಳಿ

Chitradurga: ಚಿತ್ರದುರ್ಗದ ತರಳಬಾಳು ನಗರದಲ್ಲಿರುವ ಅಧಿಕಾರಿ ಚಂದ್ರಕಾಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಕೃಷಿ ಇಲಾಖೆ ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ. ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗ್ರಾಮದ ಮನೆಯಲ್ಲೂ ಶೋಧ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Veerendra Pappi: ಮತ್ತೆ ಇಡಿ ದಾಳಿ, ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಲಾಕರ್‌ನಿಂದ 44 ಕಿಲೋ ಚಿನ್ನ ವಶ!

ಮತ್ತೆ ಇಡಿ ದಾಳಿ, ಶಾಸಕ ವೀರೇಂದ್ರ ಪಪ್ಪಿ ಲಾಕರ್‌ನಿಂದ 44 ಕಿಲೋ ಚಿನ್ನ ವಶ!

ED Raid: ಅಕ್ರಮ ಆನ್​​ಲೈನ್ ಗೇಮ್ ಕೇಸ್ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿನ್ನೆ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಸಂಬಂಧಿಸಿದ ಹಲವೆಡೆ ಶೋಧ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಬ್ಯಾಂಕ್​ನ 2 ಲಾಕರ್​ನಲ್ಲಿದ್ದ 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.

Chitradurga Accident: ಹಿರಿಯೂರಿನ ಬಳಿ ಭೀಕರ ಅಪಘಾತ; ಕಾರು ಪಲ್ಟಿಯಾಗಿ ಮಗು ಸೇರಿ ಮೂವರ ಸಾವು

ಹಿರಿಯೂರಿನ ಬಳಿ ಭೀಕರ ಅಪಘಾತ; ಕಾರು ಪಲ್ಟಿಯಾಗಿ ಮೂವರ ಸಾವು

Car Accident: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಡಿವೈಎಸ್​​ಪಿ ಶಿವಕುಮಾರ್ ಮತ್ತು ಸಿಪಿಐ ಗುಡ್ಡಪ್ಪ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Caste census: ಸಾಮಾಜಿಕ, ಶೈಕ್ಷಣಿಕ ಗಣತಿಗೆ ಕಾಲ ಮಿತಿ ಬೇಡ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಜಾತಿ ಗಣತಿಗೆ ಕಾಲ ಮಿತಿ ಬೇಡ: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

Immadi siddarameshwara swamiji: ಜಾತಿ ಸಮೀಕ್ಷೆಗೆ ಕಾಲ ಮಿತಿಯನ್ನು ಹಾಕದೇ ರಾಜ್ಯದ 7 ಕೋಟಿ ಜನ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಅವಕಾಶ ನೀಡಬೇಕಿದೆ. ಎಲ್ಲರೂ ಸಮಿಕ್ಷೆಯಲ್ಲಿ ಭಾಗವಹಿಸಿದ್ದಾರೆ ಎಂದು ಖಾತರಿಯಾದ ಮೇಲೆ ಸಮೀಕ್ಷೆಯನ್ನು ಪೂರ್ಣ ಮಾಡುವಂತೆ ಶ್ರೀಗಳು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Man burnt alive: ಚಿತ್ರದುರ್ಗದಲ್ಲಿ ಕಾರು ಆಕಸ್ಮಿಕವಾಗಿ ಹೊತ್ತಿ ಉರಿದು ಯುವಕ ಸಜೀವ ದಹನ

ಚಿತ್ರದುರ್ಗದಲ್ಲಿ ಕಾರು ಆಕಸ್ಮಿಕವಾಗಿ ಹೊತ್ತಿ ಉರಿದು ಯುವಕ ಸಜೀವ ದಹನ

Chitradurga: ಸಿದ್ದೇಶ್ವರ್ ಟಾಟಾ ನೆಕ್ಸಾನ್ ಕಾರಿನಲ್ಲಿ ಹಿರಿಯೂರಿನಿಂದ ಅರಳೀಕಟ್ಟೆಗೆ ಮರಳುತ್ತಿದ್ದರು. ಈ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Loading...