ಗುಂಡಿನ ದಾಳಿ ಬೆನ್ನಲ್ಲೇ ದಿಶಾ ಪಟಾನಿ ತಂದೆ ಹೀಗಂದಿದ್ದೇಕೆ?
ಉತ್ತರ ಪ್ರದೇಶದ ಬರೇಲಿಯಲ್ಲಿ ಸೆಪ್ಟೆಂಬರ್ 10ರಂದು ದಿಶಾ ಪಟಾನಿ ಅವರ ಮನೆಯ ಮೇಲೆ ಗುಂಡಿನ ದಾಳಿ ನಡೆದಿದೆ. ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ ಗ್ಯಾಂಗ್ ಈ ದಾಳಿಗೆ ಹೊಣೆ ಎಂದು ತಿಳಿದು ಬಂದಿದೆ. ದಿಶಾ ಪಟಾನಿಯ ಸಹೋದರಿ ಖುಶ್ಬೂ ಪಟಾನಿ ಧಾರ್ಮಿಕ ನಾಯಕ ಅನಿರುದ್ಧಾಚಾರ್ಯ ಮಹಾರಾಜ್ ಬಗ್ಗೆ ಮಾಡಿದ ಹೇಳಿಕೆ ಈ ದಾಳಿಗೆ ಕಾರಣವೆಂದು ಶಂಕಿಸಲಾಗಿದೆ. ದಿಶಾ ಅವರ ತಂದೆ ಜಗ್ದೀಶ್ ಪಟಾನಿ ಈ ಘಟನೆಗೆ ತೀವ್ರ ಪ್ರತಿಕ್ರಿಯೆ ನೀಡಿದ್ದು, ಇದನ್ನು ರಾಜಕೀಯ ಷಡ್ಯಂತ್ರ ಎಂದು ತಿರಸ್ಕರಿಸಿದ್ದಾರೆ.