ಕಾಲ್ತುಳಿತ ಕೇಸ್: ವಿಚಾರಣೆಗೆ ಹಾಜರಾಗಲು ಅಲ್ಲು ಅರ್ಜುನ್ಗೆ ಕೋರ್ಟ್ ಸೂಚನೆ
'ಪುಷ್ಪ 2' ಚಿತ್ರದ ಪ್ರೀಮಿಯರ್ ಶೋ ವೇಳೆ ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರಿಗೆ ನಾಂಪಲ್ಲಿ ನ್ಯಾಯಾಲಯ ಬಿಗ್ ಶಾಕ್ ನೀಡಿದೆ. ವರ್ಚುವಲ್ ಮೂಲಕ ಹಾಜರಾಗಲು ಅಲ್ಲು ಅರ್ಜುನ್ ಕೋರಿದ್ದ ಮನವಿಯನ್ನು ತಿರಸ್ಕರಿಸಿರುವ ಕೋರ್ಟ್, ಜುಲೈ 6 ರಂದು ಖುದ್ದಾಗಿ ಹಾಜರಾಗಲು ಆದೇಶಿಸಿದೆ.