ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸಿನಿಮಾ

Hansika Motwani: ಡಿವೋರ್ಸ್ ಬಗ್ಗೆ ಕೊನೆಗೂ ಮುಕ್ತವಾಗಿ ಮಾತನಾಡಿದ ಹನ್ಸಿಕಾ ಮೋಟ್ವಾನಿ

ಡಿವೋರ್ಸ್ ಬಗ್ಗೆ ಕೊನೆಗೂ ಮುಕ್ತವಾಗಿ ಮಾತನಾಡಿದ ಹನ್ಸಿಕಾ ಮೋಟ್ವಾನಿ

Hansika Motwani: ಅದ್ದೂರಿಯಾಗಿ ಮದುವೆಯಾದ ಹನ್ಸಿಕಾ ತಮ್ಮ ಕೈ ಹಿಡಿದ ಸೊಹೇಲ್ ಖತುರಿಯಾ ಅವರ ಕೈಯನ್ನು ಈ ವರ್ಷದ ಆರಂಭದಲ್ಲಿಯೇ ಬಿಟ್ಟಿದ್ದಾರೆ. ಮುಂಬೈನ ಬಾಂದ್ರಾದ ಕೌಟುಂಬಿಕ ನ್ಯಾಯಾಲಯವು ಮಾರ್ಚ್ 11 ರಂದು ಪರಸ್ಪರ ಒಪ್ಪಿಗೆಯ ಮೂಲಕ ದಂಪತಿಗೆ ವಿಚ್ಛೇದನ ನೀಡಿತು. ಈ ಬಗ್ಗೆ ಹೆಚ್ಚಾಗಿ ಏನೂ ಹೇಳದ ನಟಿ ಹನ್ಸಿಕಾ ವಿವರಗಳನ್ನು ಖಾಸಗಿಯಾಗಿಡಲು ಆಯ್ಕೆ ಮಾಡಿಕೊಂಡಿದ್ದಾರೆ.

ʻಹುಚ್ಚʼ ಸಿನಿಮಾ ಹೀರೋ ಥರ ಹೊಸ ಧಾರಾವಾಹಿಯಲ್ಲಿ ಮಿಂಚಲು ರೆಡಿಯಾದ ʻರಾಮಾಚಾರಿʼ ನಟ ರಿತ್ವಿಕ್ ಕೃಪಾಕರ್

'ಹುಚ್ಚ' ಸುದೀಪ್‌ ಥರ ಮಾಸ್ ಅವತಾರದಲ್ಲಿ ಮಿಂಚಲಿದ್ದಾರೆ ʻರಾಮಾಚಾರಿʼ ನಟ

'ರಾಮಾಚಾರಿ' ಧಾರಾವಾಹಿಯ ಮೂಲಕ ಮನೆಮಾತಾಗಿದ್ದ ನಟ ರಿತ್ವಿಕ್ ಕೃಪಾಕರ್, ಈಗ ಏಕಕಾಲದಲ್ಲಿ ಕಿರುತೆರೆ ಮತ್ತು ಹಿರಿತೆರೆಗೆ ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಜೂನ್ ಕೊನೆಯ ವಾರದಲ್ಲಿ ಜನಪ್ರಿಯ ವಾಹಿನಿಯೊಂದರಲ್ಲಿ ರಿತ್ವಿಕ್‌ ಅವರ ಹೊಸ ಧಾರಾವಾಹಿ ಆರಂಭವಾಗಲಿದ್ದು, ಇಲ್ಲಿ ಅವರು 'ಹುಚ್ಚ' ಚಿತ್ರದ ಸುದೀಪ್ ಮಾದರಿಯ ರಗಡ್ ಲೋಕಲ್ ಹುಡುಗನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Rishab Shetty: ‘ಕಾಂತಾರದಲ್ಲಿ ನಟಿಸುವ ಆಸೆ ಇರಲಿಲ್ಲʼ; ರಿಷಬ್‌ ಶೆಟ್ಟಿ

‘ಕಾಂತಾರದಲ್ಲಿ ನಟಿಸುವ ಆಸೆ ಇರಲಿಲ್ಲʼ; ರಿಷಬ್‌ ಶೆಟ್ಟಿ

Rishab Shetty: ಮೊದಲ ಬಾರಿ ನಾನು 'ಕಾಂತಾರ' ಕಥೆ ಬರೆದಾಗ ನಿರ್ದೇಶನ ಮಾತ್ರ ಸಾಕು, ನಟಿಸೋದು ಬೇಡ ಎಂದುಕೊಂಡಿದ್ದೆ ಎಂದು ರಿಷಬ್ ಶೆಟ್ಟಿ ಅವರು ಐಎನ್​​ಸಿಎ 2026 ಅವಾರ್ಡ್ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ. ಅತ್ಯುತ್ತಮ ನಿರ್ದೇಶಕ ಮತ್ತು ಅತ್ಯುತ್ತಮ ಸಿನಿಮಾ ಪ್ರಶಸ್ತಿಗಳನ್ನು ‘ಕಾಂತಾರ: ಚಾಪ್ಟರ್ 1’ ಬಾಚಿಕೊಂಡಿತು. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಸ್ವೀಕರಿಸಿ ರಿಷಬ್ ಶೆಟ್ಟಿ ಮಾತನಾಡಲೇಬೇಕು ಎಂದು ನಿರೂಪಕರಾದ ರಾಣಾ ದಗ್ಗುಬಾಟಿ ಹಾಗೂ ಕರಣ್ ಜೋಹರ್ ಒತ್ತಾಯ ಮಾಡಿದ್ದಾರೆ. ಈ ವೇಳೆ ಹೇಳಿಕೆ ನೀಡಿದ್ದು ಹೀಗೆ.

ಸುಕೇಶ್ ಚಂದ್ರಶೇಖರ್ ಅಕ್ರಮ ಹಣ ವರ್ಗಾವಣೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್; 'ಮಾಫಿ ಸಾಕ್ಷಿ'ಯಾಗಲು ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಿರ್ಧಾರ

ಸುಕೇಶ್ ಕೇಸ್‌ನಲ್ಲಿ ಟ್ವಿಸ್ಟ್: ಮಾಫಿ ಸಾಕ್ಷಿಯಾಗಲು ಜಾಕ್ವೆಲಿನ್ ನಿರ್ಧಾರ

ವಂಚಕ ಸುಕೇಶ್ ಚಂದ್ರಶೇಖರ್ ವಿರುದ್ಧದ 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ 'ಮಾಫಿ ಸಾಕ್ಷಿ' (Approver) ಆಗಲು ನಿರ್ಧರಿಸಿದ್ದಾರೆ. ತಮ್ಮ ಮೇಲಿನ ಕ್ರಿಮಿನಲ್ ಆರೋಪಗಳಿಂದ ಮುಕ್ತಿ ಪಡೆಯಲು ಜಾಕ್ವೆಲಿನ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ʻಟಾಕ್ಸಿಕ್‌ʼ ಸಿನಿಮಾದಲ್ಲಿ ತಂದೆ - ಮಗನ ಸೇಡಿನ ಸ್ಟೋರಿ;  ಸಿಂಪಲ್‌ ಆಗಿ ಕಥೆ ಎಳೆಯನ್ನ ಬಾಯಿಬಿಟ್ಟ ʻರಾಯʼ ಯಶ್‌!

ʻಟಾಕ್ಸಿಕ್ʼ ಕಥೆ ರಿವೀಲ್ ಮಾಡಿದ ಯಶ್! ಇದು ರಾಯ- ಟಿಕೆಟ್‌ ರಿವೆಂಜ್‌ ಸ್ಟೋರಿ

ಸಿನಿಮಾಕಾನ್ 2026ರಲ್ಲಿ ಭಾಗಿಯಾಗಿರುವ ನಟ ಯಶ್ ಅವರು, ಅಲ್ಲಿ ನೀಡಿದ ಸಂದರ್ಶನದಲ್ಲಿ 'ಟಾಕ್ಸಿಕ್' ಚಿತ್ರದ ಕಥೆಯ ಎಳೆಯನ್ನು ಬಹಿರಂಗಪಡಿಸಿದ್ದಾರೆ. ಇದೊಂದು ತಂದೆ ಮತ್ತು ಮಗನ ನಡುವಿನ ಸೇಡಿನ ಕಥೆಯಾಗಿದ್ದು, ಗೋವಾದ ಹಿನ್ನೆಲೆಯಲ್ಲಿ ನಡೆಯುವ ಕಾಲ್ಪನಿಕ ಗ್ಯಾಂಗ್‌ಸ್ಟರ್ ಕಥೆಯಾಗಿದೆ ಎಂದು ಯಶ್ ತಿಳಿಸಿದ್ದಾರೆ.

ಸಿನಿಮಾಕಾನ್ ವೇದಿಕೆಯಲ್ಲಿ 'ಟಾಕ್ಸಿಕ್' ಚಿತ್ರದ 9 ನಿಮಿಷಗಳ ಪ್ರಿವ್ಯೂ ಪ್ರದರ್ಶನ; ಹಾಲಿವುಡ್ ಮಟ್ಟದಲ್ಲಿ ಯಶ್ ಸಿನಿಮಾ ಹವಾ!

'ಟಾಕ್ಸಿಕ್' ಚಿತ್ರದ 9 ನಿಮಿಷಗಳ ಪ್ರಿವ್ಯೂ ಪ್ರದರ್ಶನ; ನೋಡಿದವರು ಏನಂದ್ರು?

ಲಾಸ್ ವೇಗಾಸ್‌ನಲ್ಲಿ ನಡೆದ 'ಸಿನಿಮಾಕಾನ್ 2026' ವೇದಿಕೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಟಾಕ್ಸಿಕ್' ಚಿತ್ರದ 9 ನಿಮಿಷಗಳ ವಿಶೇಷ ಪ್ರಿವ್ಯೂ ಪ್ರದರ್ಶಿಸಲಾಗಿದೆ. ಗೀತು ಮೋಹನ್ ದಾಸ್ ನಿರ್ದೇಶನದ ಈ ಚಿತ್ರವು 1940 ರಿಂದ 1970 ರ ಕಾಲಘಟ್ಟದ ಕಥೆಯನ್ನು ಹೊಂದಿದ್ದು, ಜೂನ್ 4 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ಈ ಚಿತ್ರದ ಆಕ್ಷನ್ ಮತ್ತು ಮಾಸ್ ಅಪೀಲ್ ಅಂತರಾಷ್ಟ್ರೀಯ ಮಟ್ಟದ ವೀಕ್ಷಕರನ್ನು ಬೆರಗುಗೊಳಿಸಿದೆ.

ʻಕಾಲಿಗೆ ಟ್ರೀಟ್‌ಮೆಂಟ್‌ ತೆಗೆದುಕೊಳ್ಳೋಕೆ ಟೈಮಿಲ್ಲ, ಡೇಟಿಂಗ್‌ ಯಾವಾಗ ಮಾಡಲಿ?ʼ; ವದಂತಿ ಹಬ್ಬಿಸಿದವರಿಗೆ ಮೃಣಾಲ್‌ ಠಾಕೂರ್‌ ತಿರುಗೇಟು!

ʻಕಾಲಿನ ಚಿಕಿತ್ಸೆಗೇ ಟೈಮಿಲ್ಲ, ಡೇಟಿಂಗ್ ಯಾವಾಗ ಮಾಡ್ಲಿʼ- ಮೃಣಾಲ್ ಠಾಕೂರ್

ನಟಿ ಮೃಣಾಲ್ ಠಾಕೂರ್ ಅವರು ತಮಿಳು ನಟ ಧನುಷ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ತಮಗೆ ಕಾಲಿನ ಲಿಗಮೆಂಟ್ ಹರಿದಿದ್ದು, ಚಿಕಿತ್ಸೆ ಪಡೆಯಲೂ ಸಮಯವಿಲ್ಲದಿರುವಾಗ ಡೇಟಿಂಗ್ ಮಾಡಲು ಎಲ್ಲಿಂದ ಟೈಮ್ ಸಿಗುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.

ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಕೇಸ್‌ ದಾಖಲು!

ರಾಮಾಯಣದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ಪ್ರಕಾಶ್ ರಾಜ್‌ ಮೇಲೆ ಕೇಸ್ ದಾಖಲು

Prakash Raj Controversy: ರಾಮಾಯಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ನಟ ಪ್ರಕಾಶ್ ರಾಜ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ ಎಂಬ ಮಾಹಿತಿ ಕೇಳಿಬಂದಿದೆ. ಕಾರ್ಯಕ್ರಮವೊಂದರಲ್ಲಿ ರಾಮನನ್ನು 'ಉತ್ತರ ಭಾರತೀಯ' ಎಂದು ಕರೆದಿದ್ದಲ್ಲದೆ, ರಾಮಾಯಣದ ಘಟನೆಗಳನ್ನು ಜಿಎಸ್‌ಟಿ ಮತ್ತು ಡಿಸ್ಕೌಂಟ್‌ಗೆ ಹೋಲಿಸಿ ಪ್ರಕಾಶ್‌ ರಾಜ್‌ ವ್ಯಂಗ್ಯವಾಡಿದ್ದರು.

ದರ್ಶನ್‌ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಸುಳ್ಳು ಹೇಳಿದ್ರಾ? ತೂಗುದೀಪ ಮಾಜಿ ಅಕೌಂಟೆಂಟ್ ದೀಪಕ್ ಗಂಗಾಧರ್‌ ಬಿಚ್ಚಿಟ್ಟ ರಹಸ್ಯವೇನು?

ʻಪ್ರೇಮ ಬರಹʼ ವಿವಾದ: ಮಲ್ಲಿಕಾರ್ಜುನ್ ಮೇಲೆ ಅಕೌಂಟೆಂಟ್ ಮಾಡಿದ ಆರೋಪವೇನು?

ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ಅವರು 'ಪ್ರೇಮ ಬರಹ' ಚಿತ್ರದ ಲೆಕ್ಕಾಚಾರದಲ್ಲಿ ಅಕೌಂಟೆಂಟ್ ತಪ್ಪು ಮಾಡಿದ್ದಾರೆ ಎಂಬ ಹೇಳಿಕೆಯನ್ನು ಮಾಜಿ ಅಕೌಂಟೆಂಟ್ ದೀಪಕ್ ಗಂಗಾಧರ್ ತೀವ್ರವಾಗಿ ಖಂಡಿಸಿದ್ದಾರೆ. ತೂಗುದೀಪ ಸಂಸ್ಥೆಯಲ್ಲಿ ಮಲ್ಲಿಕಾರ್ಜುನ್ ಅವರು ಹೇಳಿದಂತೆಯೇ ತಾವು ಲೆಕ್ಕ ಬರೆದಿರುವುದಾಗಿ ದೀಪಕ್ ಸ್ಪಷ್ಟಪಡಿಸಿದ್ದಾರೆ.

Ranbir Kapoor: ರಾಮನ ಪಾತ್ರಕ್ಕೆ ರಣಬೀರ್ ಕಪೂರ್ ಮಾತ್ರ ಸೂಕ್ತ ವ್ಯಕ್ತಿ; ನಮಿತ್ ಮಲ್ಹೋತ್ರಾ

ರಾಮನ ಪಾತ್ರಕ್ಕೆ ರಣಬೀರ್ ಕಪೂರ್ ಮಾತ್ರ ಸೂಕ್ತ ವ್ಯಕ್ತಿ; ನಮಿತ್ ಮಲ್ಹೋತ್ರಾ

Namit Malhotra: 'ರಾಮಾಯಣ' ಚಿತ್ರದ ನಿರ್ದೇಶಕ ನಮಿತ್ ಮಲ್ಹೋತ್ರಾ , ನಟ ರಣಬೀರ್ ಕಪೂರ್ (Ranbir Kapoor) ಅವರನ್ನು ನಮ್ಮ ಪೀಳಿಗೆಯ ಅತ್ಯುತ್ತಮ ನಟ ಎಂದು ಕರೆದಿದ್ದಾರೆ. ಎರಡು ಭಾಗಗಳ ಮಹಾಕಾವ್ಯ ಚಿತ್ರದಲ್ಲಿ ರಾಮನ ಪಾತ್ರವನ್ನು ಚಿತ್ರಿಸಲು ಇವರಿಗಿಂತ ಉತ್ತಮ ವ್ಯಕ್ತಿ ಯಾರೂ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ನಿರ್ದೇಶಕರು ತಮ್ಮ ಭಾವನೆಗಳನ್ನು ಹೃದಯಸ್ಪರ್ಶಿಯಾಗಿ ಹಂಚಿಕೊಂಡಿದ್ದಾರೆ, ರಣಬೀರ್, ನಿತೇಶ್ ತಿವಾರಿ ಮತ್ತು ನ್ಯೂಯಾರ್ಕ್‌ನಿಂದ ಬಂದ ತಮ್ಮ ಫೋಟೋವನ್ನು ಸಹ ಹಂಚಿಕೊಂಡರು.

Prakash Raj: ರಾಮ ವಲಸೆ ಕಾರ್ಮಿಕ, ರಾವಣನ ತೋಟದ ಹಣ್ಣು ಕಿತ್ತು ತಿಂದ: ಪ್ರಕಾಶ್‌ ರಾಜ್‌ ಹೊಸ ರಾಮಾಯಣ

ರಾಮ ವಲಸೆ ಕಾರ್ಮಿಕ, ರಾವಣನ ತೋಟದ ಹಣ್ಣು ತಿಂದ: ಪ್ರಕಾಶ್‌ ರಾಜ್‌ ವಿವಾದ

ಶ್ರೀ ರಾಮ ಮತ್ತು ಲಕ್ಷ್ಮಣರನ್ನು ಉತ್ತರ ಭಾರತದಿಂದ ವಲಸೆ ಬಂದ ಕಾರ್ಮಿಕರಿಗೆ ಪ್ರಕಾಶ್ ರಾಜ್ ಹೋಲಿಸಿದ್ದಾರೆ. ಉತ್ತರ ಭಾರತದ ಕಾರ್ಮಿಕರಾದ ರಾಮ ಹಾಗೂ ಲಕ್ಷ್ಮಣರು ದಕ್ಷಿಣ ಭಾರತದ ರಾವಣದ ಮಾಲಿಕತ್ವದ ಜಮೀನಿಗೆ ಪ್ರವೇಶಿಸಿ, ಅಲ್ಲಿನ ಹಣ್ಣುಗಳನ್ನು ಕದ್ದು ತಿಂದರು ಎಂದಿದ್ದಾರೆ. ಇದು ಕೆಲವರಿಗೆ ಕೋಪ ತರಿಸಿದೆ.

Rohit Shetty: ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್‌

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್‌

Rohit Shetty: ಎರಡು ತಿಂಗಳ ಹಿಂದೆ ಮುಂಬೈನಲ್ಲಿರುವ ಚಲನಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ಮನೆಯ ಮೇಲೆ ಗುಂಡು ಹಾರಿಸಿದ್ದ ಎನ್ನಲಾದ ಶೂಟರ್‌ನನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮತ್ತು ಮುಂಬೈ ಪೊಲೀಸ್ ಅಪರಾಧ ವಿಭಾಗದ ಜಂಟಿ ತಂಡ ಗುರುವಾರ ಬಂಧಿಸಿದೆ.

Dhurandhar The Revenge OTT: 'ಧುರಂಧರ್ 2' ಒಟಿಟಿಗೆ? ಸ್ಟ್ರೀಮಿಂಗ್‌ ಎಲ್ಲಿ? ಯಾವಾಗ?

Dhurandhar: 'ಧುರಂಧರ್ 2' ಒಟಿಟಿಗೆ? ಸ್ಟ್ರೀಮಿಂಗ್‌ ಎಲ್ಲಿ? ಯಾವಾಗ?

Dhurandhar The Revenge OTT: ಧುರಂಧರ್ ದಿ ರಿವೆಂಜ್ ಬಿಡುಗಡೆ ಆಗಿ ತಿಂಗಳುಗಳು ಕಳೆದಿವೆ. ಚಿತ್ರದ ಅದ್ಭುತ ಪ್ರದರ್ಶನ ಮುಂದುವರಿದಿದ್ದು, ಭಾರತೀಯ ಚಲನಚಿತ್ರೋದ್ಯಮವನ್ನು ಬೆರಗುಗೊಳಿಸಿದೆ. ಆದಿತ್ಯ ಧರ್ ಅವರ ಅಭಿಮಾನಿಗಳು ರಣವೀರ್ ಸಿಂಗ್ ಅಭಿನಯದ ಈ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗುವುದನ್ನು ಕಾತುರದಿಂದ ಕಾಯುತ್ತಿದ್ದಾರೆ. ಧುರಂಧರ್ 2 ನೆಟ್‌ಫ್ಲಿಕ್ಸ್‌ನಲ್ಲಿ ಅಲ್ಲ, ಜಿಯೋಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ ಎಂದು ಈಗಾಗಲೇ ವೈರಲ್‌ ಆಗುತ್ತಿದೆ.

Deepika Padukone: 8 ಗಂಟೆ ಕೆಲಸದ ಶಿಫ್ಟ್ ವಿಚಾರ; ದೀಪಿಕಾಗೆ ಸಾಥ್‌ ಕೊಟ್ಟ ಕಂಗನಾ ರಣಾವತ್

8 ಗಂಟೆ ಕೆಲಸದ ಶಿಫ್ಟ್ ವಿಚಾರ; ದೀಪಿಕಾಗೆ ಸಾಥ್‌ ಕೊಟ್ಟ ಕಂಗನಾ

Deepika Padukone: ದೀಪಿಕಾ ಪಡುಕೋಣೆ ನಾನು ದಿನಕ್ಕೆ 8 ಗಂಟೆಗಳು ಮಾತ್ರ ಕೆಲಸ ಮಾಡೋದು ಅಂತ ಹೇಳಿಕೆ ನೀಡಿದ್ದರು. ಇದು ಭಾರಿ ಚರ್ಚೆಗೆ ಕಾರಣವಾಗಿತ್ತು. ಚಲನಚಿತ್ರೋದ್ಯಮದಾದ್ಯಂತ ಚರ್ಚೆಗೆ ಕಾರಣವಾದ ಒಂದು ವರ್ಷದ ನಂತರ, ನಟಿ-ಸಂಸದ ಕಂಗನಾ ರನೌತ್ ಅವರಿಗೆ ಬೆಂಬಲ ನೀಡಿದ್ದಾರೆ. ಈಗ ಈ ವಿಷಯದ ಕುರಿತು ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಅವರು ದೀಪಿಕಾ ಪರವಾಗಿ ಧ್ವನಿ ಎತ್ತಿದ್ದಾರೆ.

Priyanka Chopra: ವಿಶ್ವ ಸುಂದರಿ ಪ್ರಶಸ್ತಿ ಗೆದ್ದಂದಿನಿಂದ ತಾಯ್ತನದವರೆಗಿನ ಸುಂದರ ಪ್ರಯಾಣದ ನೆನಪು ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ

ಜೀವನದ ಸುಂದರ ಪ್ರಯಾಣದ ನೆನಪು ಹಂಚಿಕೊಂಡ ಪ್ರಿಯಾಂಕಾ ಚೋಪ್ರಾ

Priyanka Chopra: ಪ್ರಿಯಾಂಕಾ ಚೋಪ್ರಾ ತಮ್ಮ ಹಳೆಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಕೇವಲ 18 ನೇ ವಯಸ್ಸಿನಲ್ಲಿ ವಿಶ್ವ ಸುಂದರಿ ಪಟ್ಟದಿಂದ ನಟನೆವರೆಗಿನ ತನ್ನ ಪ್ರಯಾಣವನ್ನ ನೆನಪಿಸಿಕೊಂಡಿದ್ದಾರೆ. ಏಪ್ರಿಲ್ 16 ರ ತಮ್ಮ ಇನ್‌ಸ್ಟಾಗ್ರಾಮ್ಪೋ ಸ್ಟ್‌ನಲ್ಲಿ, ನಟಿ ತಮ್ಮ ಜೀವನದ ವಿವಿಧ ಹಂತಗಳನ್ನು ಸೆರೆಹಿಡಿಯುವ ಚಿತ್ರಗಳ ಸರಣಿಯನ್ನು ಹಂಚಿಕೊಂಡಿದ್ದಾರೆ.

16 ವರ್ಷದ ಹಿಂದಿನ ಕೇಸ್‌ನಲ್ಲಿ ನಟಿ ತಮನ್ನಾಗೆ ಹಿನ್ನಡೆ; ಪವರ್ ಸೋಪ್ ವಿರುದ್ಧದ ಕೇಸ್‌ ವಜಾ ಮಾಡಿದ ಮದ್ರಾಸ್ ಹೈಕೋರ್ಟ್

ನಟಿ ತಮನ್ನಾಗೆ ಮದ್ರಾಸ್ ಹೈಕೋರ್ಟ್ ಶಾಕ್: ಪವರ್ ಸೋಪ್ಸ್ ವಿರುದ್ಧದ ಕೇಸ್ ವಜಾ

16 ವರ್ಷಗಳ ಹಳೆಯ ಕಾನೂನು ಹೋರಾಟದಲ್ಲಿ ನಟಿ ತಮನ್ನಾ ಭಾಟಿಯಾ ಅವರಿಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಪವರ್ ಸೋಪ್ಸ್ ಕಂಪನಿಯು ಒಪ್ಪಂದದ ಅವಧಿ ಮುಗಿದ ನಂತರವೂ ತನ್ನ ಫೋಟೋಗಳನ್ನು ಅನಧಿಕೃತವಾಗಿ ಬಳಸಿಕೊಂಡಿದೆ ಎಂದು ಆರೋಪಿಸಿ ತಮನ್ನಾ 1 ಕೋಟಿ ರೂ. ಪರಿಹಾರ ಕೋರಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

Daisy Shah: ಅಸಭ್ಯವಾಗಿ ನನ್ನನ್ನು ಮುಟ್ಟಿದರು; ಕಹಿ ಅನುಭವ ಬಿಚ್ಚಿಟ್ಟ ನಟಿ ಡೈಸಿ ಶಾ

ಅಸಭ್ಯವಾಗಿ ನನ್ನನ್ನು ಮುಟ್ಟಿದರು; ಕಹಿ ಅನುಭವ ಬಿಚ್ಚಿಟ್ಟ ನಟಿ ಡೈಸಿ ಶಾ

Daisy Shah: ಇತ್ತೀಚೆಗೆ ಮುಂಬೈನಲ್ಲಿ ನಡೆದ ನಟರ ಸಭೆಯಲ್ಲಿ ನಟಿ ಡೈಸಿ ಶಾ ತಮ್ಮ ವೃತ್ತಿಜೀವನದ ಆರಂಭಿಕ ಘಟನೆಯನ್ನು ಮೆಲುಕು ಹಾಕಿದರು. ಜೈ ಹೋ (2014) ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆಗೆ ಬಾಲಿವುಡ್‌ಗೆ ಪದಾರ್ಪಣೆ ಮಾಡಿದ ನಟಿ ಡೈಸಿ ಶಾ , ಸಂದರ್ಶನವೊಂದರಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡರು. ದಕ್ಷಿಣದ ನಿರ್ದೇಶಕರೊಬ್ಬರು ನನಗೆ ಕೆಟ್ಟದಾಗಿ ಮುಟ್ಟಿದರು ಎಂದು ಹೇಳಿದ್ದಾರೆ.

ʻಬಿಗ್‌ ಬಾಸ್ʼ ವಿನ್ನರ್ ಗಿಲ್ಲಿ ನಟನ ಹೊಸ ಸಿನಿಮಾದಲ್ಲಿ ನಾಯಕಿ ಆಗ್ತಾರಾ ಯಶಸ್ವಿನಿ? ಹೊರಬಿತ್ತು ಗುಡ್‌ ನ್ಯೂಸ್

‌'ಬಿಗ್ ಬಾಸ್' ವಿನ್ನರ್ ಗಿಲ್ಲಿ ನಟನ ಸಿನಿಮಾಗೆ ನಾಯಕಿಯಾಗ್ತಾರಾ ಯಶಸ್ವಿನಿ?

ʻಬಿಗ್‌ ಬಾಸ್ʼ ಗಿಲ್ಲಿ ನಟನ ಚಿತ್ರದಲ್ಲಿ ಅಭಿನಯಿಸುವ ಕುರಿತು ಯಶಸ್ವಿನಿ ಕೆ. ಸ್ವಾಮಿ ಅವರು ವಿಶ್ವವಾಣಿ ಟಿವಿಯ ಸಂದರ್ಶನದಲ್ಲಿ ಆಸಕ್ತಿದಾಯಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಬಿಗ್ ಬಾಸ್‌ಗೂ ಮುನ್ನವೇ ಸಿನಿಮಾವೊಂದರ ಮಾತುಕತೆ ನಡೆದಿತ್ತು, ಪಾತ್ರ ಚೆನ್ನಾಗಿದ್ದರೆ ಗಿಲ್ಲಿ ಜೊತೆ ನಟಿಸಲು ನಾನು ಸಿದ್ಧ ಎಂದು ಅವರು ತಿಳಿಸಿದ್ದಾರೆ.

ʻದಳಪತಿʼ ವಿಜಯ್‌ ‌ʻಜನ ನಾಯಗನ್‌ʼ ಲೀಕ್: ಸೈಬರ್ ಕ್ರೈಂ ಪೊಲೀಸರ ಬಲೆಗೆ ಬಿದ್ದ ಪ್ರಕರಣದ ಮಾಸ್ಟರ್‌ ಮೈಂಡ್‌, ಈ ಸಿನಿಮಾ ಪೈರಸಿ ಆಗಿದ್ದೇಗೆ?

ʻಜನ ನಾಯಗನ್ʼ ಲೀಕ್ ಪ್ರಕರಣ: ಸೈಬರ್ ಪೊಲೀಸರ ಬಲೆಗೆ ಬಿದ್ದ ಮಾಸ್ಟರ್‌ಮೈಂಡ್

ʻಜನ ನಾಯಗನ್‌ʼ ಸಿನಿಮಾ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸೈಬರ್ ಕ್ರೈಂ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಎಡಿಟಿಂಗ್ ಸ್ಟುಡಿಯೋವೊಂದರಲ್ಲಿ ಫ್ರೀಲ್ಯಾನ್ಸ್ ಸಹಾಯಕ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೇ ಚಿತ್ರದ ಪ್ರಮುಖ ದೃಶ್ಯಗಳನ್ನು ಅನಧಿಕೃತವಾಗಿ ಕಾಪಿ ಮಾಡಿ ಹಂಚಿಕೊಂಡಿರುವುದು ಪತ್ತೆಯಾಗಿದೆ.

ʻಸರಿಗಮಪ ಲಿಟಲ್ ಚಾಂಪ್ಸ್ʼ ಶೋ ಆರಂಭಕ್ಕೆ ಮುಹೂರ್ತ ಫಿಕ್ಸ್: ಜೀ ಕನ್ನಡದಲ್ಲಿ ಪುಟಾಣಿಗಳ ಸ್ವರ ಸಂಭ್ರಮ

ʻಸರಿಗಮಪ ಲಿಟಲ್ ಚಾಂಪ್ಸ್ʼ ಆರಂಭಕ್ಕೆ ದಿನಗಣನೆ; ಮತ್ತೆ ಶುರು ಸಂಗೀತದ ಸುಧೆ

ʻಸರಿಗಮಪ ಲಿಟಲ್ ಚಾಂಪ್ಸ್ʼ ಹೊಸ ಆವೃತ್ತಿಯು ಏಪ್ರಿಲ್ 18ರಿಂದ ಜೀ ಕನ್ನಡ ವಾಹಿನಿಯಲ್ಲಿ ಅದ್ಧೂರಿಯಾಗಿ ಚಾಲನೆಗೊಳ್ಳಲಿದೆ. 3ರಿಂದ 15 ವರ್ಷದೊಳಗಿನ ಅಪ್ರತಿಮ ಪ್ರತಿಭೆಗಳನ್ನು ಗುರುತಿಸುವ ಈ ರಿಯಾಲಿಟಿ ಶೋನಲ್ಲಿ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಮತ್ತು ಅರ್ಜುನ್ ಜನ್ಯ ತೀರ್ಪುಗಾರರಾಗಿ ಪುಟಾಣಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

Mallikarjun: ʻಪ್ರೇಮ ಬರಹʼ ಚಿತ್ರದ ವಿವಾದದ ಬಗ್ಗೆ ಕೊನೆಗೂ ಬಾಯಿಬಿಟ್ಟ ದರ್ಶನ್‌ ಮ್ಯಾನೇಜರ್;‌ ಅಂದು ಅರ್ಜುನ್‌ ಸರ್ಜಾರನ್ನು ಭೇಟಿಯಾದಾಗ ಆಗಿದ್ದೇನು?

Arjun Sarja: ʻಪ್ರೇಮ ಬರಹʼ ವಿವಾದದ ಬಗ್ಗೆ ದರ್ಶನ್‌ ಮ್ಯಾನೇಜರ್ ಏನಂದ್ರು?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸೂಚನೆಯಂತೆ ಅರ್ಜುನ್ ಸರ್ಜಾ ನಿರ್ಮಾಣದ 'ಪ್ರೇಮ ಬರಹ' ಚಿತ್ರವನ್ನು ವಿತರಿಸಿದ್ದ ಮಲ್ಲಿಕಾರ್ಜುನ್, ಆ ಸಂದರ್ಭದಲ್ಲಿ ಉಂಟಾದ ಲೆಕ್ಕದ ವ್ಯತ್ಯಾಸಗಳ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಚಿತ್ರದ ಲೆಕ್ಕಾಚಾರದಲ್ಲಿ ಸುಮಾರು 1 ಲಕ್ಷ ರೂ. ವ್ಯತ್ಯಾಸವಾಗಿದ್ದರಿಂದ ಅರ್ಜುನ್ ಸರ್ಜಾ ಅಸಮಾಧಾನಗೊಂಡಿದ್ದರು ಎಂದು ಮಲ್ಲಿಕಾರ್ಜುನ್‌ ತಿಳಿಸಿದ್ದಾರೆ.

ನಾಪತ್ತೆಯಾಗಿದ್ದ ದರ್ಶನ್‌ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ದಿಢೀರ್‌ ಪ್ರತ್ಯಕ್ಷ; 8 ಕೋಟಿ ರೂಪಾಯಿ ಸಾಲ, 7 ವರ್ಷ ಅಜ್ಞಾತವಾಸ, ಹೊರಬಿತ್ತು ರೋಚಕ ಮಾಹಿತಿ

7 ವರ್ಷ ಅಜ್ಞಾತವಾಸದಿಂದ ವಾಪಸ್‌ ಬಂದ ದರ್ಶನ್ ಮ್ಯಾನೇಜರ್ ಮಲ್ಲಿಕಾರ್ಜುನ್

Darshan Manager Mallikarjun Missing Case: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ 7 ವರ್ಷಗಳ ಅಜ್ಞಾತವಾಸದ ನಂತರ ಪ್ರತ್ಯಕ್ಷವಾಗಿ ಅಚ್ಚರಿಯ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಉದ್ಯಮದಲ್ಲಿ ಆದ 8 ಕೋಟಿ ರೂ. ಸಾಲದಿಂದಾಗಿ ಆತ್ಮಹತ್ಯೆಗೆ ನಿರ್ಧರಿಸಿದ್ದ ಅವರು, ನಂತರ ನಾಪತ್ತೆ ಆಗಿದ್ದರು. ಇದೀಗ ವಾಪಸ್‌ ಬಂದು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ʻಈ ಫೋಟೋದಲ್ಲಿರುವ ಸುಂದರ ಮಹಿಳೆ ನಾನಲ್ಲʼ;‌ ಡಿಸಿಎಂ ಪವನ್‌ ಕಲ್ಯಾಣ್‌ 3ನೇ ಪತ್ನಿ ಅನ್ನಾ ಹೀಗ್ಯಾಕೆ ಹೇಳಿದ್ರು?

'ಆ ಸುಂದರ ಮಹಿಳೆ ನಾನಲ್ಲ'; ಫೇಕ್ ಫೋಟೋ ಬಗ್ಗೆ ಪವನ್‌ ಪತ್ನಿ ಸ್ಪಷ್ಟನೆ

Anna Konidela Fake Photo Clarification: ಪವನ್ ಕಲ್ಯಾಣ್ ಅವರ ಪತ್ನಿ ಅನ್ನಾ ಕೊನಿಡೇಲಾ ಅವರು ದಶಕಗಳಿಂದ ಇಂಟರ್‌ನೆಟ್‌ನಲ್ಲಿ ತಮ್ಮ ಹೆಸರಿನಲ್ಲಿ ಚಲಾವಣೆಯಾಗುತ್ತಿದ್ದ ಫೋಟೋದ ಸತ್ಯಾಸತ್ಯತೆಯನ್ನು ಬಹಿರಂಗಪಡಿಸಿದ್ದಾರೆ. ಪವನ್ ಕಲ್ಯಾಣ್ ಪಕ್ಕದಲ್ಲಿ ಕುಳಿತಿರುವ ವಿದೇಶಿ ಯುವತಿಯ ಫೋಟೋ ತನ್ನದಲ್ಲ, ಅದು 'ತೀನ್ ಮಾರ್' ಸಿನಿಮಾ ನಟಿ ಡಾನಾ ಮಾರ್ಕ್ಸ್ ಅವರದ್ದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Varun Tej: ಶೂಟಿಂಗ್ ವೇಳೆ ವರುಣ್ ತೇಜ್‌ಗೆ ಪೆಟ್ಟು, ಸರ್ಜರಿ ಬಗ್ಗೆ ಸಹೋದರಿ ಏನಂದ್ರು?

ಶೂಟಿಂಗ್ ವೇಳೆ ವರುಣ್ ತೇಜ್‌ಗೆ ಪೆಟ್ಟು, ಸರ್ಜರಿ ಬಗ್ಗೆ ಸಹೋದರಿ ಏನಂದ್ರು?

Varun Tej: ವರುಣ್ ತೇಜ್ ಸದ್ಯ 'ಬರಿ' ಎಂಬ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಿತ್ರೀಕರಣದ ಭಾಗವಾಗಿ ವಾಲಿಬಾಲ್ ಆಟದ ದೃಶ್ಯಗಳಿಗಾಗಿ ವರುಣ್ ತೇಜ್ ವಿಶೇಷವಾಗಿ ಅಭ್ಯಾಸ ಮಾಡುತ್ತಿದ್ದರು. ಈ ಸಮಯದಲ್ಲಿ ಅವರ ಮೊಣಕಾಲಿಗೆ ತೀವ್ರ ಗಾಯವಾಗಿದೆ ಎಂದು ತಿಳಿದುಬಂದಿದೆ. ಇದೀಗ ಚಿತ್ರದ ತಯಾರಿಯಿಂದ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಮತ್ತು ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ.

Loading...