ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಸಿನಿಮಾ

Yash: ಹರೀಶ್​​ ರಾಯ್ ಅಂತಿಮ ದರ್ಶನ ಪಡೆದ ಯಶ್: ನಟನ ಪುತ್ರನಿಗೆ ಹಣ ಸಹಾಯ ಮಾಡಿದ ರಾಕಿಂಗ್‌ ಸ್ಟಾರ್‌

ಹರೀಶ್​​ ರಾಯ್ ಅಂತಿಮ ದರ್ಶನ ಪಡೆದ ರಾಕಿಂಗ್‌ ಸ್ಟಾರ್‌ ಯಶ್

ಹರೀಶ್ ರಾಯ್ ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ (KGF Movie) ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್‌ಗೆ (Cancer) ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಯಶ್‌ ಅವರು ಚಾಚಾ ಹರೀಶ್ ರಾಯ್ (Harish Rai) ಅಂತಿಮ ದರ್ಶನ ಪಡೆದಿದ್ದಾರೆ.

Twinkle Khanna: ಇಂದಿನ ಯುವ ಪೀಳಿಗೆಗೆ ಸಂಗಾತಿಯನ್ನ ಚೇಂಜ್‌ ಮಾಡೋದು ಬಟ್ಟೆ ಬದಲಿಸಿದಷ್ಟೇ ಸುಲಭ; ಟ್ವಿಂಕಲ್ ಖನ್ನಾ

ಇಂದಿನ ಯುವ ಪೀಳಿಗೆ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ನಟಿ ಟ್ವಿಂಕಲ್ ಖನ್ನಾ!

"ಟು ಮಚ್ ವಿತ್ ಕಾಜೋಲ್ ಅಂಡ್ ಟ್ವಿಂಕಲ್" ಇತ್ತೀಚಿನ ಸಂಚಿಕೆಯಲ್ಲಿ,ಫರಾ ಖಾನ್ ಮತ್ತು ಅನನ್ಯಾ ಪಾಂಡೆ ಅವರ ಕಾರ್ಯಕ್ರಮದಲ್ಲಿ ಅತಿಥಿಗಳಾದರು. ಕಾರ್ಯಕ್ರಮದಲ್ಲಿ ಹೆಚ್ಚಾಗಿ ಸಾಮಾಜಿಕ ಸಮಸ್ಯೆಗಳನ್ನು ಹಾಸ್ಯಮಯ ರೀತಿಯಲ್ಲಿ ಚರ್ಚಿಸಿದ್ದಾರೆ. ಇತ್ತೀಚಿನ ಎಪಿಸೋಡ್‌ನಲ್ಲಿ ಸಂಬಂಧಗಳು ಮತ್ತು ವ್ಯವಹಾರಗಳ ಕುರಿತು ಚರ್ಚೆ ನಡೆದಿದ್ದು, ಇದು ಸಾಮಾಜಿಕ ಮಾಧ್ಯಮದಲ್ಲಿ ಸಖತ್‌ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಕಾರ್ಯಕ್ರಮವು ಇಂತಹ ವಿವಾದಾತ್ಮಕ ವಿಷಯವನ್ನು ಚರ್ಚಿಸುತ್ತಿರೋದು ಇದೇ ಮೊದಲಲ್ಲ. ಮದುವೆ, ಸಂಬಂಧಗಳಿಂದ ಹಿಡಿದು ವಿವಾಹೇತರ ಸಂಬಂಧಗಳವರೆಗೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ.

Harsh Rai Death: ಭೂಗತ ಲೋಕದ ನಂಟು ಹೊಂದಿದ್ದ ಹರೀಶ್‌ ಆಚಾರಿ, ರಾಯ್‌ ಆಗಿದ್ದು ಹೇಗೆ?

ಭೂಗತ ಲೋಕದ ನಂಟು ಹೊಂದಿದ್ದ ಹರೀಶ್‌ ಆಚಾರಿ, ರಾಯ್‌ ಆಗಿದ್ದು ಹೇಗೆ?

Harish rai no more: ಹರೀಶ್‌ ರಾಯ್‌ ಅವರು ಕರಾವಳಿಯ ಉಡುಪಿಯವರು. ಅವರ ಮೊದಲ ಹೆಸರು ಹರೀಶ್‌ ಆಚಾರಿ. ಅಪ್ಪನಿಗೆ ಹೆದರಿ ಭಯದಿಂದ ಊರು ಬಿಟ್ಟು ಬಾಂಬೆಗೆ ಓಡಿ ಹೋದ ಅವರು 2 ವರ್ಷ ಅಲ್ಲೇ ಇದ್ದರು. ಮುಂಬಯಿಯಲ್ಲಿ ಅವರ ಮೇಲೆ ಕೆಲವು ಕೇಸ್​ಗಳು ಇದ್ದವು. ಕೆಲವು ರೌಡಿಗಳನ್ನು ಎದುರು ಹಾಕಿಕೊಂಡಿದ್ದರು. ಭೂಗತ ಜಗತ್ತಿನ ಪರಿಚಯವೂ ಆಗಿತ್ತು. ಬೆಂಗಳೂರಿಗೆ ಬಂದ ನಂತರ ಉಪೇಂದ್ರ ಪರಿಚಯದಿಂದ ಸಿನಿಮಾ ಇಂಡಸ್ಟ್ರಿಗೆ ಬರುವಂತಾಯಿತು.

Harish Rai Death: ʼಕೆಜಿಎಫ್ ಚಾಚಾʼ ಹರೀಶ್ ರಾಯ್ ನಿಧನ, ಕ್ಯಾನ್ಸರ್‌ಗೆ ನಟ ಬಲಿ

ʼಕೆಜಿಎಫ್ ಚಾಚಾʼ ಹರೀಶ್ ರಾಯ್ ನಿಧನ, ಕ್ಯಾನ್ಸರ್‌ಗೆ ನಟ ಬಲಿ

Harish Rai no more: ʼಓಂʼ ಸಿನಿಮಾದಲ್ಲಿ ಖಳನಟನಾಗಿ ಮಿಂಚಿದ್ದ ಹರೀಶ್ ರಾಯ್, ಜೋಡಿ ಹಕ್ಕಿ, ಚಕ್ರವರ್ತಿ, ಕಾಶಿ, ಸಂಜು ವೆಡ್ಸ್ ಗೀತ, ನಲ್ಲ,ತಾಯವ್ವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಥೈರಾಯ್ಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಕೆಜಿಎಫ್ ಚಿತ್ರದ ನಂತರ ಕ್ಯಾನ್ಸರ್ ಕಾಯಿಲೆ ಕಾಣಿಸಿಕೊಂಡಿದ್ದು, ಮೂರ್ನಾಲ್ಕು ವರ್ಷದಿಂದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಮರಳಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

Afro Tapaang: ಗಿಲ್ಲಿಯ ʻದೊಡ್ಡವ್ವʼಸಾಂಗ್‌ಗೆ ಶಿವಣ್ಣ, ರಾಜ್ ಬಿ ಶೆಟ್ಟಿ, ಉಪೇಂದ್ರ ಸ್ಟೆಪ್ಸ್ ಹಾಕಿದ್ರೆ ಹೇಗಿರತ್ತೆ? ಟ್ರೆಂಡ್‌ ಆಗ್ತಿದೆ AFRO ಟಪಾಂಗ್‌!

ಗಿಲ್ಲಿ ʻದೊಡ್ಡವ್ವʼ ಸಾಂಗ್‌ಗೆ ಶಿವಣ್ಣ ಸ್ಟೆಪ್ಸ್ ಹಾಕಿದ್ರೆ ಹೇಗಿರತ್ತೆ?

ಈಗಂತೂ ಸಿಕ್ಕಾಪಟ್ಟೆ ಟ್ರೆಂಡಿಂಗ್​ನಲ್ಲಿರೋ ಡೈಲಾಗ್​ ಅಂದ್ರೆ ಚಿಕ್ಕವ್ವ ಚಿಕ್ಕವ್ವ ದ್ವಾಸೆ ಕೊಡು.. ದೊಡ್ಡವ್ವ ದೊಡ್ಡವ್ವ ಚಟ್ನಿ ಕೊಡು..ಅಶ್ವಿನಿ ಗೌಡ ಮತ್ತು ಜಾನ್ವಿ ಅವರನ್ನು ಉದ್ದೇಶಿಸಿ ‘ದೊಡ್ಡವ್ವ ದೊಡ್ಡವ್ವ ದೋಸೆ ಕೊಡು, ಚಿಕ್ಕವ್ವ ಚಿಕ್ಕವ್ವ ಚಕ್ಲಿ ಕೊಡು’ ಎಂದು ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿ ಡೈಲಾಗ್ ಹೇಳಿದ್ದರು. ಈ ಸಾಂಗ್‌ವನ್ನು ಸಾಕಷ್ಟು ಮಂದಿ ರೀಲ್ಸ್‌ ಮಾಡಿ ಶೇರ್‌ ಕೂಡ ಮಾಡಿದ್ದಾರೆ. ಆದರೀಗ ಮತ್ತೆ ಏಕೆ ಸುದ್ದಿಯಲ್ಲಿದೆ ಗೊತ್ತಾ?

Prabhas: ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ; ಪ್ರಭಾಸ್‌ ‘ದಿ ರಾಜಾಸಾಬ್’ ಬಿಗ್‌ ಅಪ್‌ಡೇಟ್‌

ವದಂತಿಗಳಿಗೆ ತೆರೆ ಎಳೆದ ಚಿತ್ರತಂಡ; ‘ದಿ ರಾಜಾಸಾಬ್’ ಬಿಗ್‌ ಅಪ್‌ಡೇಟ್‌

ಈ ಚಿತ್ರಕ್ಕೆ ಕಾರ್ತಿಕ್ ಪಲನಿ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಥಮನ್ ಎಸ್. ಸಂಗೀತ ನೀಡುತ್ತಿದ್ದಾರೆ. ಈ ಸಿನಿಮಾದಲ್ಲಿ ಹಾರರ್, ಕಾಮಿಡಿ ಜತೆಗೆ ಲವ್ ಸ್ಟೋರಿಯೂ ಸಹ ಇರಲಿದೆ. ಈಗಾಗಲೇ ಬೃಹತ್ ಸೆಟ್ಗಳಲ್ಲಿ ‘ದಿ ರಾಜಾ ಸಾಬ್’ ಸಿನಿಮಾವನ್ನು ಶೂಟ್ ಮಾಡಲಾಗಿದೆ.

Thalaivar 173: ತಲೈವಾ-173 ಸಿನಿಮಾಗಾಗಿ ಒಂದಾದ ರಜನಿಕಾಂತ್-ಕಮಲ್ ಹಾಸನ್

ತಲೈವಾ-173 ಸಿನಿಮಾಗಾಗಿ ಒಂದಾದ ರಜನಿಕಾಂತ್-ಕಮಲ್ ಹಾಸನ್

Rajinikanth and Kamal Haasan Movie: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಉಳಗನಾಯಗನ್ ಕಮಲ್ ಹಾಸನ್ ಸಿನಿಪ್ರೇಮಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ತಲೈವಾ 173ನೇ ಸಿನಿಮಾ‌ ಘೋಷಣೆಯಾಗಿದೆ. ಈ ಚಿತ್ರವನ್ನು ಕಮಲ್ ಹಾಸನ್ ನಿರ್ಮಾಣ ಮಾಡುತ್ತಿದ್ದಾರೆ. ಕಮಲ್ ಹಾಸನ್ ತಮ್ಮದೇ ನಿರ್ಮಾಣ ಸಂಸ್ಥೆಯಾದ ರಾಜ್‌ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ ಕಂಪನಿ ಮೂಲಕ ರಜನಿಕಾಂತ್ ಚಿತ್ರ ನಿರ್ಮಾಣ ಮಾಡಲಿದ್ದಾರೆ. ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ಖುಷ್ಬು ಸುಂದರ್ ಅವರ ಪತಿ ಸಿ. ಸುಂದರ್ ತಲೈವಾ ಅವರ 173ನೇ ಚಿತ್ರ ನಿರ್ದೇಶನ ಮಾಡಲಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Gathavibhava Movie: ಸಿಂಪಲ್ ಸುನಿ ʼಗತವೈಭವʼ ದಲ್ಲಿ ದುಷ್ಯಂತ್ ಸಿನಿವೈಭವ

ಸಿಂಪಲ್ ಸುನಿ ʼಗತವೈಭವʼ ದಲ್ಲಿ ದುಷ್ಯಂತ್ ಸಿನಿವೈಭವ

Sandalwood News: ʼಗತವೈಭವʼ ಸಿನಿಮಾ ಮೂಲಕ ಸಿಂಪಲ್ ಸುನಿ ಅವರು ಮತ್ತೊಬ್ಬ ಯುವ ನಟನನ್ನು ಕನ್ನಡ ಪ್ರೇಕ್ಷಕರಿಗೆ ಮಡಿಲಿಗೆ ಹಾಕುತ್ತಿದ್ದಾರೆ. ಅವರೇ ದುಷ್ಯಂತ್. ʼಗತವೈಭವʼ ಸಂಪೂರ್ಣ ಪ್ರೇಮಕಥೆ. ಫ್ಯಾಂಟಸಿ ಹಾಗೂ ಸನಾತನ ಧರ್ಮದ ಕಥೆಯನ್ನು ಈ ಸಿನಿಮಾದಲ್ಲಿ ಸುನಿ ಅವರು ಕಟ್ಟಿಕೊಟ್ಟಿದ್ದಾರೆ. ಚಿತ್ರದಲ್ಲಿ ದುಷ್ಯಂತ್‌ಗೆ ಜೋಡಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ. ಸೇರ್ವೇಗಾರ ಸಿಲ್ವರ್ ಸ್ಕ್ರೀನ್ಸ್ ಮತ್ತು ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಕ್ ಹಾಗೂ ಸಿಂಪಲ್ ಸುನಿ ಚಿತ್ರ ನಿರ್ಮಾಣ ಮಾಡ್ತಿದ್ದಾರೆ.

Yajamana Movie: 25 ವರ್ಷಗಳ ನಂತರ ಡಾ. ವಿಷ್ಣುವರ್ಧನ್ ಅಭಿನಯದ ʼಯಜಮಾನʼ ರೀ ರಿಲೀಸ್‌!

ರೀರಿಲೀಸ್‌ ಆಗ್ತಿದೆ ವಿಷ್ಣು ಅಭಿನಯದ ʼಯಜಮಾನʼ-ಯಾವಾಗ ಗೊತ್ತಾ?

Dr Vishnuvardhan: ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್. ಶೇಷಾದ್ರಿ - ರಾಧಾ ಭಾರತಿ ನಿರ್ದೇಶನದ ʼಯಜಮಾನʼ ಚಿತ್ರ ಇದೇ ನವೆಂಬರ್ 7ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗುತ್ತಿದೆ. ಜನಮೆಚ್ಚಿದ ಈ ಚಿತ್ರ‌ ಆಧುನಿಕ ತಂತ್ರಜ್ಞಾನದಿಂದ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್.ಡಿ. ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿತ್ತು. ಈ ಕುರಿತ ವಿವರ ಇಲ್ಲಿದೆ.

BRAT Movie: ಯಶಸ್ಸಿನ ಹಾದಿಯಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರ

ಯಶಸ್ಸಿನ ಹಾದಿಯಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರ

Darling Krishna Starrer BRAT Movie: ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ʼಬ್ರ್ಯಾಟ್ʼ ಚಿತ್ರ ಕೂಡ ಸೇರಿದೆ. ಕಳೆದ ವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಚಿತ್ರದ ನಿರ್ದೇಶಕ ಶಶಾಂಕ್‌ ಮಾತನಾಡಿ, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಾಧ್ಯಮಗಳ ಮುಂದೆ ಅಭಿಮಾನಿಯನ್ನು ಅವಮಾನಿಸಿದ ಇಳಯರಾಜ ಸಹೋದರ; ನೆಟ್ಟಿಗರಿಂದ ತೀವ್ರ ಆಕ್ರೋಶ!

ಅಭಿಮಾನಿಯನ್ನು ಅವಮಾನಿಸಿದ ಇಳಯರಾಜ ಸಹೋದರ; ನೆಟ್ಟಿಗರಿಂದ ತೀವ್ರ ಆಕ್ರೋಶ!

ಚಲನಚಿತ್ರ ನಿರ್ಮಾಪಕ ಗಂಗೈ ಅಮರನ್ (Gangai Amaran) ಅಭಿಮಾನಿಯೊಬ್ಬರನ್ನು ಮಾತಿನ ಮೂಲಕ ಖಂಡಿಸುತ್ತಿರುವ ವೀಡಿಯೊ ವೈರಲ್‌ (video) ಆಗಿದೆ. ವಿಡಿಯೊ ವೈರಲ್‌ ಆದ ಬೆನ್ನಲ್ಲೇ ಕೆಲವು ವಿವಾದಗಳು ಸೃಷ್ಟಿಯಾಗಿದೆ.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅವರಲ್ಲಿ ಹಲವರು ಗಂಗೈ ಅಮರನ್ ಅವರನ್ನು ತೀವ್ರವಾಗಿ ಟೀಕಿಸಿದರು.

ರಿಲೀಸ್‌ ಆಗಿ ಸಖತ್‌ ಸೌಂಡ್‌ ಮಾಡಿದ್ದ ಸೌತ್‌ ಮೂವಿ ಈ ಒಟಿಟಿಯಲ್ಲಿ ಟ್ರೆಂಡಿಂಗ್‌! ಯಾವ ಮೂವಿ?

ರಿಲೀಸ್‌ ಆಗಿ ಸಖತ್‌ ಸೌಂಡ್‌ ಮಾಡಿದ್ದ ಮೂವಿ ಈ ಒಟಿಟಿಯಲ್ಲಿ ಟ್ರೆಂಡಿಂಗ್‌!

ಹೆಚ್ಚಿನ ಚಲನಚಿತ್ರಗಳು ಅಥವಾ ವೆಬ್ ಸರಣಿಗಳು OTT ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗುತ್ತವೆ. ಪ್ರೇಕ್ಷಕರಿಗೆ ಮನೆಯಲ್ಲಿ ಮನರಂಜನೆಯನ್ನು ಒದಗಿಸುತ್ತವೆ. ನೆಟ್‌ಫ್ಲಿಕ್ಸ್, ಪ್ರೈಮ್ ವಿಡಿಯೋ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಚಲನಚಿತ್ರಗಳಿಗಾಗಿ ಕಾಯುವುದು ಚಿತ್ರಮಂದಿರಗಳಲ್ಲಿ ಅವುಗಳಿಗಾಗಿ ಕಾಯುವಷ್ಟೇ ರೋಮಾಂಚನಕಾರಿಯಾಗಿದೆ. ಇದೀಗ ಈ ಒಂದು ಸೌತ್‌ ಸಿನಿಮಾ ಒಟಿಟಿ ಪ್ಲ್ಯಾಟ್‌ಫಾರ್ಮನಲ್ಲಿ ಸಖತ್‌ ಟ್ರೆಂಡಿಂಗ್‌ ಇದೆ.

Darshan: ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್​ಫ್ರೇಮ್; ಮುಂದಿನ ವಿಚಾರಣೆ ಹೇಗಿರಲಿದೆ? ಲಾಯರ್ ಫಸ್ಟ್ ರಿಯಾಕ್ಷನ್

ದರ್ಶನ್ & ಗ್ಯಾಂಗ್ ವಿರುದ್ಧ ಚಾರ್ಜ್​ಫ್ರೇಮ್; ಲಾಯರ್ ಫಸ್ಟ್ ರಿಯಾಕ್ಷನ್

ದರ್ಶನ್‌ (Actor Darshan) ಸೇರಿದಂತೆ ಆರೋಪಿಗಳ ವಿಚಾರಣೆಯನ್ನು ನವೆಂಬರ್‌ 10ಕ್ಕೆ ಮುಂದೂಡಿದೆ. ಜೈಲು ಸೇರಿರುವ ದರ್ಶನ್‌ ಸೇರಿದಂತೆ ಆರೋಪಿಗಳು ನವೆಂಬರ್‌ 3ರಂದು ಬೆಂಗಳೂರು 64ನೇ ಸಿಸಿಎಚ್ ಕೋರ್ಟ್‌ಗೆ ಹಾಜರಾದರು. ದೋಷಾರೋಪಣೆ ನಿಗದಿ ವೇಳೆ ದರ್ಶನ್‌ ಸೇರಿದಂತೆ ಎಲ್ಲ ಆರೋಪಿಗಳ ತಪ್ಪೊಪ್ಪಿಕೊಳ್ಳದ ಕಾರಣ ವಿಚಾರಣೆಯನ್ನು ಕೋರ್ಟ್‌ ನವೆಂಬರ್‌ 10ಕ್ಕೆ ಮುಂದೂಡಿದೆ.

Aishwarya Rangarajan: ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಐಶ್ವರ್ಯ ರಂಗರಾಜನ್;  ಫೋಟೋಸ್‌ ವೈರಲ್‌

ವೈವಾಹಿಕ ಜೀವನಕ್ಕೆ ಕಾಲಿಟ್ಟ ಗಾಯಕಿ ಐಶ್ವರ್ಯ ರಂಗರಾಜನ್

ಜೀ ಕನ್ನಡ ವಾಹಿನಿಯ ಸ್ಪರ್ಧಿಗಳು ಸಿಕ್ಕಾಪಟ್ಟೆ ಜನಪ್ರಿಯತೆ ಗಳಿಸಿದ್ದನ್ನು ಪ್ರತಿ ಸೀಸನ್ ನಲ್ಲಿ ನೋಡುತ್ತಿದ್ದೇವೆ. ಅದೇ ರೀತಿ ತನ್ನ ಹಾಡುಗಳು ಮೂಲಕ ಮೆಚ್ಚುಗೆ ಪಡೆದಿದ್ದ ಗಾಯಕಿ ಐಶ್ವರ್ಯ ರಂಗರಾಜನ್. ಐಶ್ವರ್ಯ ರಂಗರಾಜನ್ ಇದೀಗ ತಮ್ಮ ಬಹುಕಾಲದ ಗೆಳೆಯ, ಪ್ರೀತಿಸಿದ ಹುಡುಗ ಸಾಯಿ ಸ್ವರೂಪ್ ಜೊತೆ ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರ ಮದುವೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

Movie ticket price: ಮಲ್ಟಿಪ್ಲೆಕ್ಸ್‌ಗಳ ಪರ ಸುಪ್ರೀಂ ತೀರ್ಪು, ಟಿಕೆಟ್‌ ದರದ ಬಗ್ಗೆ ಕೋರ್ಟ್‌ ಅಸಮಾಧಾನ

ಮಲ್ಟಿಪ್ಲೆಕ್ಸ್‌ಗಳ ಪರ ಸುಪ್ರೀಂ ತೀರ್ಪು, ಟಿಕೆಟ್‌ ದರದ ಬಗ್ಗೆ ಅಸಮಾಧಾನ

Supreme Court: ಸಿನಿಮಾ ಟಿಕೆಟ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬುಕ್‌ಮೈಶೋನಂತಹ ಆನ್‌ಲೈನ್ ಆ್ಯಪ್ಗಳ ಮೂಲಕ ಮಾರಾಟ ಮಾಡಲಾಗುತ್ತಿವೆ. ಈ ರೀತಿ ಬುಕ್ ಮಾಡುವಾಗ ಅವರ ಖಾತೆಗಳನ್ನು ಮತ್ತು ಖರೀದಿದಾರರ ಗುರುತನ್ನು ಟ್ರ್ಯಾಕ್ ಮಾಡಲು ಸಾಧ್ಯವಿಲ್ಲ. ಗ್ರಾಹಕರ ವಿವರ ಅವರ ಬಳಿ ಇರುತ್ತವೆ. ನಾವು ಯಾವುದೇ ವಿವರಗಳು ಅಥವಾ ಐಡಿಗಳ ವಿವರ ಇಟ್ಟುಕೊಳ್ಳುವುದಿಲ್ಲ. ಟಿಕೆಟ್ ಖರೀದಿಸಲು ಯಾರೂ ಈಗ ಕೌಂಟರ್‌ಗೆ ಹೋಗುವುದಿಲ್ಲ ಎಂದು ಮಲ್ಟಿಪ್ಲೆಕ್ಸ್‌ ಪರ ಮುಕುಲ್ ರೋಹಟ್ಗಿ‌ ಅವರು ನ್ಯಾಯಮೂರ್ತಿಗಳ ಎದುರು ವಾದ ಮಂಡಿಸಿದರು. ಈ ವಾದವನ್ನು ಸುಪ್ರೀಂ ಕೋರ್ಟ್‌ ನ್ಯಾಪೀಠ ಒಪ್ಪಿಕೊಂಡಿದ್ದು, ಮಲ್ಟಿಪ್ಲೆಕ್ಸ್‌ಗಳ ಪರ ತೀರ್ಪು ನೀಡಿದೆ.

Full Meals Movie: ಲಿಖಿತ್‌ ಶೆಟ್ಟಿ ಅಭಿನಯದ 'ಫುಲ್ ಮೀಲ್ಸ್' ಚಿತ್ರದ ಟ್ರೇಲರ್‌ ಔಟ್‌

ಲಿಖಿತ್‌ ಶೆಟ್ಟಿ ಅಭಿನಯದ 'ಫುಲ್ ಮೀಲ್ಸ್' ಚಿತ್ರದ ಟ್ರೇಲರ್‌ ಔಟ್‌

Sandalwood News: ಲಿಖಿತ್‌ ಶೆಟ್ಟಿ, ಖುಷೀ ರವಿ, ತೇಜಸ್ವಿನಿ ಶರ್ಮ ಮುಖ್ಯ ಭೂಮಿಕೆಯಲ್ಲಿರುವ 'ಫುಲ್ ಮೀಲ್ಸ್ʼ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ. ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ 'ಫುಲ್ ಮೀಲ್ಸ್' ಸಿನಿಮಾ ಇದೇ ತಿಂಗಳು ನವೆಂಬರ್ 21ಕ್ಕೆ ಬಿಡುಗಡೆಯಾಗಲಿದ್ದು, ಸಿನಿಮಾದ ಟ್ರೈಲರ್ 3ರಂದು, ಡಿ.ಜಿ.ಕೆ. ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

Aaryan OTT : ಶ್ರದ್ಧಾ ಶ್ರೀನಾಥ್ ನಟನೆಯ ʻಆರ್ಯನ್ʼ ಸಿನಿಮಾ ಈ ಒಟಿಟಿಗೆ ಎಂಟ್ರಿ!

ಶ್ರದ್ಧಾ ಶ್ರೀನಾಥ್ ನಟನೆಯ ʻಆರ್ಯನ್ʼ ಸಿನಿಮಾ ಈ ಒಟಿಟಿಗೆ ಎಂಟ್ರಿ!

ಈ ತಿಂಗಳು ಬಿಡುಗಡೆಯಾಗಿರುವ ಪ್ರಮುಖ ತಮಿಳು ಚಿತ್ರಗಳಲ್ಲಿ ಇದೂ ಒಂದು. ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ 'ರಾಟ್ಸಾಸನ್' ನಂತರ, ವಿಷ್ಣು ವಿಶಾಲ್ (Vishnu Vishal) 'ಆರ್ಯನ್' ಸಿನಿಮಾದೊಂದಿಗೆ ಮತ್ತೆ ಕಮ್‌ಬ್ಯಾಕ್‌ ಆಗಿದ್ದಾರೆ. ಕನ್ನಡದ ನಟಿ ಶ್ರದ್ಧಾ ಶ್ರೀನಾಥ್ (Shraddha Srinath) ಅಭಿನಯದ ಆರ್ಯನ್ ಚಿತ್ರ ಒಟಿಟಿ ಮಾಹಿತಿ ಹೊರ ಬಂದಿದೆ.

Darshan: ನಟ ದರ್ಶನ್‌ ಗ್ಯಾಂಗ್‌ಗೆ ಢವ ಢವ; ಇಂದು ಕೇಸ್ ಚಾರ್ಜ್​ಫ್ರೇಮ್ ಸಲ್ಲಿಕೆ

ನಟ ದರ್ಶನ್‌ ಗ್ಯಾಂಗ್‌ಗೆ ಢವ ಢವ; ಇಂದು ಕೇಸ್ ಚಾರ್ಜ್​ಫ್ರೇಮ್ ಸಲ್ಲಿಕೆ

ನಿನ್ನೆಯಷ್ಟೇ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi ) ಇನ್‌ಸ್ಟಾದಲ್ಲಿ ಪ್ರಿಯ ಕಮಲದ ಹೂ ಹಿಡಿದ ಫೋಟೋ ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ, ನಮಗೆ ಕಾಣದೇ ಇರುವುದು ಬಹಳಷ್ಟಿದೆ, ಆದ್ದರಿಂದ ಯಾವಾಗಲೂ ರಕ್ಷಣೆಗಾಗಿ ಪ್ರಾರ್ಥಿಸಿ ಎಂಬ ಸಂದೇಶದೊಂದಿಗೆ ಸ್ಟೋರಿ ಪೋಸ್ಟ್ ಮಾಡಿದ್ದರು. . ಇಂದು ಕೋರ್ಟ್​ನಲ್ಲಿ (Court) ಕೊಲೆ ಕೇಸ್​ ಸಂಬಂಧ ವಿಚಾರಣೆ ನಡೆಯಲಿದ್ದು, ಕೊಲೆ ಪ್ರಕರಣದ ಆರೋಪಿಗಳ ಮೇಲೆ ದೋಷಾರೋಪ ನಿಗದಿಯಾಗಲಿದೆ ಎನ್ನಲಾಗಿದೆ.

45 Movie: ಬಹು ನಿರೀಕ್ಷಿತ ಮಲ್ಟಿಸ್ಟಾರರ್ '45' ಚಿತ್ರದ 'AFRO ಟಪಾಂಗ್' ಪ್ರಮೋಷನ್ ಸಾಂಗ್ ಬಿಡುಗಡೆ

ಮಲ್ಟಿಸ್ಟಾರರ್ '45' ಚಿತ್ರದ 'AFRO ಟಪಾಂಗ್‌' ಪ್ರಮೋಷನ್ ಸಾಂಗ್ ಬಿಡುಗಡೆ

Afro Tapaang song: ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಪ್ರಮೋಷನ್ ಸಾಂಗ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಹಾಡಿನಲ್ಲಿ ಉಗಾಂಡ ದೇಶದ ಹೆಸರಾಂತ ಜಿಟೊ ಕಿಡ್ಸ್ ಜತೆಗೆ ಚಿತ್ರದ ನಾಯಕರಾದ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.

Peddi Movie: ರಾಮ್ ಚರಣ್ 'ಪೆದ್ದಿ'ಯಲ್ಲಿ ಅಚ್ಚಿಯಮ್ಮನಾಗಿ ಕಾಣಿಸಿಕೊಂಡ ಜಾನ್ವಿ ಕಪೂರ್

ರಾಮ್ ಚರಣ್ 'ಪೆದ್ದಿ'ಯಲ್ಲಿ ಅಚ್ಚಿಯಮ್ಮನಾಗಿ ಕಾಣಿಸಿಕೊಂಡ ಜಾನ್ವಿ ಕಪೂರ್

First look of Janhvi Kapoor in Peddi Movie: ಅಚ್ಚಿಯಮ್ಮ ಪಾತ್ರದಲ್ಲಿ ಜಾನ್ವಿ‌ ಅಭಿನಯಿಸುತ್ತಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಜಾನ್ವಿ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಜೀಪಿನ ಮೇಲೆ ನಿಂತು ತಲೆಯ ಮೇಲೆ ಕೈಗಳನ್ನು ಎತ್ತಿ‌ಹಿಡಿದು ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ.

Duniya vijay: ದುನಿಯಾ ವಿಜಯ್ - ರಚಿತರಾಮ್ ನಟನೆಯ ʻಲ್ಯಾಂಡ್ ಲಾರ್ಡ್ʼ ಟೀಸರ್ ಔಟ್‌; ರಿಲೀಸ್‌ ಡೇಟ್‌ ಅನೌನ್ಸ್‌

ʻಲ್ಯಾಂಡ್​ಲಾರ್ಡ್’ ಟೀಸರ್​ನಲ್ಲಿ ದುನಿಯಾ ವಿಜಯ್ ರಗಡ್‌ ಅವತಾರ!

ಸಾರಥಿ ಫಿಲಂಸ್ ಲಾಂಛನದಲ್ಲಿ ಕೆ.ವಿ. ಸತ್ಯಪ್ರಕಾಶ್ - ಹೇಮಂತ್ ಗೌಡ ಕೆ.ಎಸ್ ನಿರ್ಮಿಸಿರುವ, ಜಡೇಶ್ ಕೆ.ಹಂಪಿ (K Hampi) ನಿರ್ದೇಶನದ ಹಾಗೂ ದುನಿಯಾ ವಿಜಯ್, ರಚಿತರಾಮ್ ಅಭಿನಯದ 'ಲ್ಯಾಂಡ್ ಲಾರ್ಡ್' ಚಿತ್ರದ ಸರ್ವೈವರ್ ಟೀಸರ್ ಬಿಡುಗಡೆ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನೆರವೇರಿತು.

BBK 12: ಕಾವು ಜೊತೆ ಸೂರಜ್‌ ಡ್ಯಾನ್ಸ್‌ ಹೇಗಿತ್ತು ಗೊತ್ತಾ? ಕಿಚ್ಚನ ಮುಂದೆ ಅಸಲಿ ಕಹಾನಿ ಬಿಚ್ಚಿಟ್ಟ ಗಿಲ್ಲಿ

ಕಾವು ಜೊತೆ ಸೂರಜ್‌ ಡ್ಯಾನ್ಸ್‌ ಹೇಗಿತ್ತು ಗೊತ್ತಾ? ಗಿಲ್ಲಿ ಹೇಳಿದ್ದೇನು?

ಬಿಗ್‌ ಬಾಸ್‌ ಮನೆಯಲ್ಲಿ ಕಾವ್ಯ ಹಾಗೂ ಗಿಲ್ಲಿ ಜೋಡಿಯೇ ಪ್ರಮುಖ ಹೈಲೈಟ್‌. ಇದೀಗ ಹೊಸ ಪ್ರೋಮೋ ಔಟ್‌ ಆಗಿದೆ. ಕಳೆದ ವಾರ ಸೂರಜ್‌ ಮತ್ತು ಕಾವ್ಯ ಡ್ಯಾನ್ಸ್‌ ಪ್ರ್ಯಾಕ್ಟಿಸ್‌ ಕಂಡು ಗಿಲ್ಲಿ ಸಖತ್‌ ಉರಿದುಕೊಂಡಿದ್ದರು. ಸೈಡ್‌ನಲ್ಲಿ ನಿಂತು ಹಾಗೇ ನೋಡ್ತಾ ನಿಂತಿದ್ದರು. ಈ ಬಗ್ಗೆ ಕಿಚ್ಚ ಇದೀಗ ಕಾಲೆಳೆದಿದ್ದಾರೆ. ಈ ನಡುವೆ ಅಶ್ವಿನಿ ಅವರಿಗೆ ಗಿಲ್ಲಿ ಕೌಂಟರ್‌ ಕೊಟ್ಟು ʻಅಶ್ವಿನಿ ಗೌಡ ಅವರು, ನನ್ನ ಹಿಂದೆ ಇವರು ಯಾಕೆ ಬಿದ್ದಿದ್ದಾರೆ ಗೊತ್ತಿಲ್ಲ. ನಾನು ಈಗಾಗಲೇ ಕಮಿಟ್‌ ಆಗಿರುವೆʼ ಎಂದು ಕಾಲೆಳೆದಿದ್ದಾರೆ.

BBK 12: ಸುದೀಪ್‌ ತೀರ್ಮಾನವೇ ಸರಿ ಇಲ್ವಾ? ಕಿಚ್ಚನ ಪಂಚಾಯ್ತಿ ಬಗ್ಗೆ ಕೇಳಿ ಬರ್ತಿದೆ ಅಪಸ್ವರ

ಸುದೀಪ್‌ ತೀರ್ಮಾನವೇ ಸರಿ ಇಲ್ವಾ? ಪಂಚಾಯ್ತಿ ಬಗ್ಗೆ ಕೇಳಿ ಬರ್ತಿದೆ ಅಪಸ್ವರ

ಶನಿವಾರ ಬಂತು ಅಂದರೆ ಸಾಕು ಕಿಚ್ಚನ ಪಂಚಾಯ್ತಿಗೆ (Bigg Boss Kannada 12) ಕಾದು ಕುಳಿತಿರುತ್ತಾರೆ ವೀಕ್ಷಕರು. ಅದರಲ್ಲೂ ಕಿಚ್ಚನ ಕ್ಲಾಸ್‌ಗೆ ಹಲವರು ಕಾದು ಕುಳಿತಿರುತ್ತಾರೆ. ಆದರೀಗ ಕಿಚ್ಚನ ಪಂಚಾಯ್ತಿಯೇ ನೋಡುಗರಿಗೆ ಬೇಸರ ತರಿಸಿದೆ. ಕಿಚ್ಚನ ಪಂಚಾಯಿತಿ ನೋಡಿ ಸ್ವಲ್ಪ ನಿರಾಶೆ ಆಯ್ತು ಅಂತ ಸೋಷಿಯಲ್‌ ಮೀಡಿಯಾದಲ್ಲಿ ಕಮೆಂಟ್‌ ಮಾಡ್ತಾ ಇದ್ದಾರೆ ವೀಕ್ಷಕರು. ಹಾಗಾದ್ರೆ ನೋಡುಗರ ಅಭಿಪ್ರಾಯವಾದ್ರೂ ಏನು? ಕಿಚ್ಚ ತಪ್ಪಿದ್ದೆಲ್ಲಿ? ಜನ ನಿರೀಕ್ಷೆ ಮಾಡಿದ್ದಾದರೂ ಏನು?

ಪೀಟರ್‌ ಸಿನಿಮಾದ ಟೀಸರ್‌ ಔಟ್‌- ಹೊಸ ಅವತಾರದಲ್ಲಿ ರಾಜೇಶ್‌ ಧ್ರುವ!

ಪೀಟರ್‌ ಸಿನಿಮಾದ ಟೀಸರ್‌ ಔಟ್‌- ಹೊಸ ಅವತಾರದಲ್ಲಿ ರಾಜೇಶ್‌ ಧ್ರುವ!

ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಛಾಪು ಮೂಡಿಸಿರುವ ನಟ ರಾಜೇಶ್‌ ಧ್ರುವ ಹೀರೋ ಆಗಿರುವ ಅಭಿನಯಿಸಿರುವ ಹೊಸ ಸಿನಿಮಾ‌ ಪೀಟರ್. ಈಗಾಗಲೆ ಪೋಸ್ಟರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಕುತೂಹಲಕಾರಿ ಟೀಸರ್ ಬಿಡುಗಡೆಯಾಗಿದೆ. ನಟ ರಾಜೇಶ್‍ ಧ್ರುವ, ಕಳೆದ ವರ್ಷ 'ಬಾಲಾಜಿ ಫೋಟೋ ಸ್ಟುಡಿಯೋ' ಎಂಬ ಚಿತ್ರವನ್ನು (Cinema) ನಿರ್ದೇಶಿಸವುದರ ಜೊತೆಗೆ, ಅದರಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು.

Loading...