ʻನಾವು ವೈರಿಗಳಲ್ಲ, ನಿಮ್ಮ ಭವಿಷ್ಯಕ್ಕಾಗಿ ಬನ್ನಿʼ; ನಟ ಕಿಶೋರ್ ಮನವಿ
ನೀಟ್ ಪರೀಕ್ಷೆಯ ಸಾಲು ಸಾಲು ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸ್ಥಳೀಯ ಕನ್ನಡ ಮಕ್ಕಳ ಭಾಗವಹಿಸುವಿಕೆ ಕಡಿಮೆಯಿರುವುದಕ್ಕೆ ನಟ ಕಿಶೋರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮದೇ ಸ್ವಂತ ಭವಿಷ್ಯದ ರಕ್ಷಣೆಗಾಗಿ ಹೋರಾಟಕ್ಕೆ ಧುಮುಕಬೇಕೆಂದು ವಿಡಿಯೋ ಮೂಲಕ ಆಹ್ವಾನಿಸಿದ್ದಾರೆ.