ದರ್ಶನ್ ಪುತ್ರನ ಕಾರು ಅಪಘಾತ: ʻಸುಳ್ಳು ಸುದ್ದಿ ನಂಬಬೇಡಿʼ ಎಂದ ವಿಜಯಲಕ್ಷ್ಮಿ
ನಟ ದರ್ಶನ್ ಪುತ್ರ ವಿನೀಶ್ ಕಾರು ಅಪಘಾತ ನಡೆಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿ ಸಂಪೂರ್ಣ ಸುಳ್ಳು ಎಂದು ವಿಜಯಲಕ್ಷ್ಮಿ ದರ್ಶನ್ ಸ್ಪಷ್ಟಪಡಿಸಿದ್ದಾರೆ. ವಾಹನವನ್ನು ಚಾಲಕನೇ ಚಲಾಯಿಸುತ್ತಿದ್ದು, ಬೈಕ್ ಸವಾರರೇ ಬಂದು ಗುದ್ದಿದ್ದಾರೆ. ಮಾನವೀಯತೆಯಿಂದ ವಿನೀಶ್ ಕಾರಿನಿಂದ ಕೆಳಗಿಳಿದಿದ್ದನ್ನು ತಪ್ಪಾಗಿ ಬಿಂಬಿಸಲಾಗಿದೆ. ಎಂದು ಅವರು ಹೇಳಿದ್ದಾರೆ.