ದರ್ಶನ್ಗೆ ಸಹ ಕೈದಿಗಳಿಂದ ನಿಂದನೆ; ಜಾಮೀನು ಅರ್ಜಿಯಲ್ಲಿ ದಾಸನ ಅಳಲು
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ಸಹ ಕೈದಿಗಳಿಂದ ನಿಂದನೆ ಮತ್ತು ಜೀವ ಬೆದರಿಕೆ ಉಂಟಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಜಾಮೀನು ಅರ್ಜಿಯಲ್ಲಿ ನೋವು ತೋಡಿಕೊಂಡಿದ್ದಾರೆ. ಮೂಲಭೂತ ಸೌಕರ್ಯಗಳಲ್ಲಿ ತಾರತಮ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅವರು ಜಾಮೀನು ಕೋರಿದ್ದಾರೆ.