ಚಾಮುಂಡಿ ಬೆಟ್ಟದಲ್ಲಿ ರಣವೀರ್; ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕ್ಷಮೆಯಾಚನೆ
ಬಾಲಿವುಡ್ ನಟ ರಣವೀರ್ ಸಿಂಗ್ ಗೋವಾ ಚಲನಚಿತ್ರೋತ್ಸವದಲ್ಲಿ 'ಕಾಂತಾರ' ಚಿತ್ರದ ದೈವಕೋಲದ ದೃಶ್ಯವನ್ನು ಅಣಕಿಸಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದರು. ಈ ಸಂಬಂಧ ಅವರೀಗ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯೊಂದಿಗೆ ಬೇಷರತ್ ಕ್ಷಮೆಯಾಚಿಸಿದ್ದಾರೆ.