Anant Nag: ಪದ್ಮಭೂಷಣ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಅನಂತನಾಗ್
ಪದ್ಮಭೂಷಣ ಪ್ರಶಸ್ತಿ ಪಡೆದ ಬಳಿಕ ರಾಷ್ಟ್ರಪತಿಗಳು ನೀಡಿದ್ದ ಪುರಸ್ಕೃತರ ಗೌರವಾರ್ಥ ಹೈ ಟೀ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಟ ಅನಂತ ನಾಗ್ (Anant Nag) ಅವರನ್ನು ಭೇಟಿಯಾಗಿ ಸ್ವಲ್ಪ ಕಾಲ ಉಭಯ ಕುಶಲೋಪರಿ ನಡೆಸಿದರು.

ಪಿಎಂ ಮೋದಿ ಅವರಿಂದ ಅನಂತ್ ಭೇಟಿ

ನವದೆಹಲಿ: ಪದ್ಮಭೂಷಣ ಸಮಾರಂಭದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ನೀಡಿದ ಹೈ ಟೀ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ಹಿರಿಯ ನಟ ಅನಂತನಾಗ್ (Anant Nag) ಅವರನ್ನು ಮಾತನಾಡಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಸಂದರ್ಭದಲ್ಲಿ ಪ್ರಧಾನಿಯವರು ಅನಂತ್ ಅಭಿನಯದ ಸಿನಿಮಾಗಳ ಹೆಸರುಗಳನ್ನು ನೆನಪಿಸಿಕೊಂಡು ಅವರ ಜೊತೆಗೆ ಸಂಭಾಷಿಸಿದರು.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 27ರಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್ ನಾಗ್ (Anant Nag), ರಿಕಿ ಕೇಜ್ (Ricky Kej), ಪ್ರಶಾಂತ್ ಪ್ರಕಾಶ್, ವೆಂಕಪ್ಪ ಅಂಬಾಜಿ ಸುಗಟೇಕರ್ ಸೇರಿದಂತೆ ದೇಶಾದ್ಯಂತದ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ ಮಾಡಿದ್ದರು.
ಅನಂತ್ ನಾಗ್ ಕನ್ನಡ ಚಲನಚಿತ್ರ ರಂಗದ ಹಿರಿಯ ನಟರಾಗಿ ಅನಂತ್ ನಾಗ್ ಖ್ಯಾತಿ ಗಳಿಸಿದ್ದಾರೆ. ಕಳೆದ 5 ದಶಕಗಳಲ್ಲಿ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗೆ ಮತ್ತು ತಮ್ಮ ಬಹುಮುಖ ಪ್ರತಿಭೆಗೆ ಹೆಸರುವಾಸಿಯಾಗಿದ್ದಾರೆ. ಸಿನಿಮಾ ರಂಗದಲ್ಲಿ ಸಾಧನೆಗೆ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.
ಮೃತ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ
ಉಡುಪಿ: ಝೀ ಕನ್ನಡ ವಾಹಿನಿಯ ಹಾಸ್ಯ ಕಾರ್ಯಕ್ರಮ ʼಕಾಮಿಡಿ ಕಿಲಾಡಿ ಸೀಸನ್ 3ʼರ ವಿನ್ನರ್ ನಟ ರಾಕೇಶ್ ಪೂಜಾರಿ (Rakesh Poojary) ಹೃದಯಾಘಾತದಿಂದ ನಿಧನರಾಗಿ ಸುಮಾರು 21 ದಿನಗಳ ಬಳಿಕ ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ರಿಷಬ್ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಇದ್ದರು. ರಿಷಬ್ ನಟಿಸಿ, ನಿರ್ದೇಶಿಸುತ್ತಿರುವ ಬಹು ನಿರೀಕ್ಷಿತ 'ಕಾಂತಾರ ಚಾಪ್ಟರ್ 1' (Kantara Chapter 1) ಚಿತ್ರದಲ್ಲಿ ರಾಕೇಶ್ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ರಾಕೇಶ್ ಮೃತಪಟ್ಟ ಸಮಯದಲ್ಲಿ ಅವರ ಮನೆಗೆ ಭೇಟಿ ನೀಡಲು ರಿಷಬ್ ಶೆಟ್ಟಿಗೆ ಸಾಧ್ಯವಾಗಿರಲಿಲ್ಲ. ಇದೇ ಕಾರಣಕ್ಕೆ ಹಲವರು ಡಿವೈನ್ ಸ್ಟಾರ್ ನಡೆಯನ್ನು ಟೀಕಿಸಿದ್ದರು.
ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ ಮನೆ ಇದೆ. ಜೂ. 2ರಂದು ಅಲ್ಲಿಗೆ ತೆರಳಿದ ರಿಷಬ್ ಶೆಟ್ಟಿ ದಂಪತಿ ರಾಕೇಶ್ ತಂಗಿ ಮತ್ತು ತಾಯಿಗೆ ಸಾಂತ್ವನ ಹೇಳಿದ್ದಾರೆ. ಜತೆಗೆ ರಾಕೇಶ್ ಕುಟುಂಬಕ್ಕೆ ಎಲ್ಲ ರೀತಿಯ ನೆರವು ನೀಡುವುದಾಗಿ ರಿಷಬ್ ಶೆಟ್ಟಿ ಭರವಸೆ ನೀಡಿದ್ದಾರೆ.
ಇದನ್ನು ಓದಿ: Padma Award: ಹಿರಿಯ ನಟ ಅನಂತ್ ನಾಗ್ ಸೇರಿ 68 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ