Actor Kiccha Sudeep: ಬೀದಿ ನಾಯಿಗಳ ಕುರಿತು ಸುಪ್ರೀಂ ಆದೇಶ; ದತ್ತು ಪಡೆಯಲು ನಟ ಸುದೀಪ್ ಮನವಿ
Actor Kiccha Sudeep: ಶ್ವಾನಗಳನ್ನು ಆಶ್ರಯ ತಾಣಗಳಲ್ಲಿ ಇಡುವುದು ಅವುಗಳ ಸ್ವಾತಂತ್ರ್ಯ ಹರಣ ಮಾಡಿದ ಹಾಗಾಗುತ್ತದೆ ಎಂದು ಸೂಚ್ಯವಾಗಿ ಹೇಳಿರುವ ನಟ ಸುದೀಪ್ ಅವರು, ಮೂಕ ಜೀವಿಗಳಿಗೆ ನಾವು ಧ್ವನಿ ಆಗೋಣ, ಬೀದಿ ನಾಯಿಗಳನ್ನು ದತ್ತು ಪಡೆಯೋಣ ಎಂದು ಕರೆ ನೀಡಿದ್ದಾರೆ.


ಬೆಂಗಳೂರು: ದೆಹಲಿಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ ಸುಪ್ರೀಂಕೋರ್ಟ್ ಆ.11 ರಂದು ಮಹತ್ವದ ಆದೇಶ ಹೊರಡಿಸಿತ್ತು. ದೇಶದ ರಾಜಧಾನಿಯಲ್ಲಿರುವ ಎಲ್ಲಾ ಬೀದಿನಾಯಿಗಳನ್ನು ಸ್ಥಳಾಂತರಿಸಿ, ಅವುಗಳಿಗೆ ನೆಲೆ ಕಲ್ಪಿಸಲು ಅಲ್ಲಿನ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಈ ಬಗ್ಗೆ ದೇಶದೆಲ್ಲೆಡೆ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಕೆಲವರು ಸುಪ್ರೀಂ ಆದೇಶವನ್ನು ಸ್ವಾಗತಿಸಿದ್ದರೆ, ಮತ್ತೆ ಕೆಲವರು ವಿರೋಧಿಸುತ್ತಿದ್ದಾರೆ. ಇದೀಗ ಈ ಬಗ್ಗೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ (Actor Kiccha Sudeep) ಅವರು ಪ್ರತಿಕ್ರಿಯಿಸಿದ್ದು, ಸುಪ್ರೀಂಕೋರ್ಟ್ ತೀರ್ಪನ್ನು ತಾವು ಪ್ರಶ್ನಿಸುವುದಿಲ್ಲ ಎಂದು ಹೇಳುತ್ತಲೇ, ಮೂಖ ಜೀವಿಗಳಿಗೆ ದನಿಯಾಗಲು ಕರೆ ನೀಡಿದ್ದಾರೆ.
ಈ ಬಗ್ಗೆ ನಟ ಸುದೀಪ್ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ‘ನವದೆಹಲಿಯಲ್ಲಿನ ಬೀದಿ ನಾಯಿಗಳನ್ನು ಸ್ಥಳಾಂತರಗೊಳಿಸುವ ಬಗೆಗಿನ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನಾನು ಏನೂ ಪ್ರಶ್ನೆ ಮಾಡುವುದಿಲ್ಲ. ಅದಕ್ಕೆ ಅದರದ್ದೇ ಆದ ಕಾರಣಗಳು ಇರಬಹುದು. ಆದರೆ ಆ ಆದೇಶವು, ಶ್ವಾನಗಳ ಆರೋಗ್ಯ, ಅವುಗಳ ಜೀವನ ಚಕ್ರದ ಮೇಲಾಗುವ ಬದಲಾವಣೆಗಳ ಮೇಲೆ ಯಾವ ರೀತಿಯ ಪರಿಣಾಮ ಉಂಟು ಮಾಡುತ್ತವೆ ಎಂಬ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ.
ಶ್ವಾನಗಳನ್ನು ಆಶ್ರಯ ತಾಣಗಳಲ್ಲಿ ಇಡುವುದು ಅವುಗಳ ಸ್ವಾತಂತ್ರ್ಯ ಹರಣ ಮಾಡಿದ ಹಾಗಾಗುತ್ತದೆ ಎಂದು ಸೂಚ್ಯವಾಗಿ ಹೇಳಿರುವ ಅವರು, ಬೀದಿ ನಾಯಿಗಳು ಸಾಧಾರಣವಾಗಿದ್ದ ಸಮಾಜದಲ್ಲಿ ನಾನು ಬೆಳೆದಿದ್ದು, ಅಲ್ಲದೆ ನಮ್ಮ ಕುಟುಂಬದವರು ಕೆಲವಾರು ಬೀದಿ ನಾಯಿಗಳನ್ನು ದತ್ತು ಪಡೆದು ಸಾಕುತ್ತಿದ್ದೇವೆ. ಶ್ವಾನಗಳು ನಮಗೆ ನೀಡುವ ಪ್ರೀತಿ ಮತ್ತು ನಿಷ್ಠೆ ಅಪಾರವಾದುದು. ಅವುಗಳು ಬೀದಿಯಲ್ಲಿ ಬೆಳೆಯುವುದನ್ನು ಬಯಸಿದ್ದಲ್ಲ, ಆದರೆ ನಾವುಗಳು ಮನಸ್ಸು ಮಾಡಿದರೆ ಅವುಗಳಿಗೆ ಮನೆ ನೀಡಬಹುದು. ಧ್ವನಿ ಇಲ್ಲದ ಜೀವಿಗಳಿಗೆ ನಾವು ಧ್ವನಿ ಆಗೋಣ, ಬೀದಿ ನಾಯಿಗಳನ್ನು ದತ್ತು ಪಡೆಯೋಣ ಎಂದು ಮನವಿ ಮಾಡಿದ್ದಾರೆ.
The Supreme Court's decision to round up the stray dogs in Delhi NCR and to be kept in shelters permanently isn't something I wanna question as this decision may have its reasons. But it also raises serious concerns about their well-being and the impact on their lives.
— Kichcha Sudeepa (@KicchaSudeep) August 13, 2025
Having… pic.twitter.com/T0fIaiqRiW
ಈ ಸುದ್ದಿಯನ್ನೂ ಓದಿ | Delhi Street Dog: ದೆಹಲಿ ಬೀದಿ ನಾಯಿ ಸ್ಥಳಾಂತರ ಆದೇಶ; ಪರಿಶೀಲನೆ ನಡೆಸುತ್ತೇವೆಂದು ಮುಖ್ಯ ನ್ಯಾಯಮೂರ್ತಿ ಆಶ್ವಾಸನೆ
ಸುದೀಪ್ ಮಾತ್ರವಲ್ಲದೆ ನಟ, ನಿರ್ದೇಶಕ, ನಿರ್ಮಾಪಕ ರಾಜ್ ಬಿ ಶೆಟ್ಟಿ ಅವರು ಸಹ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಶ್ವಾನಗಳ ಜತೆ ಇರುವ ಕೆಲವು ಫೋಟೋಗಳನ್ನು ಹಂಚಿಕೊಂಡಿರುವ ರಾಜ್ ಬಿ ಶೆಟ್ಟಿ, ಇವು ನನಗೆ ನೆಮ್ಮದಿ ನೀಡುವ ಜೀವಿಗಳು. ನನಗೆ ಮಾತ್ರವಲ್ಲ ನನ್ನಂತಹ ಅದೆಷ್ಟೋ ಅಸಂಖ್ಯ ಜನರಿಗೆ ಇವು ನೋವನ್ನು ಗುಣಪಡಿಸುವ ಶಕ್ತಿ ಹೊಂದಿವೆ. ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ. ಸುಪ್ರೀಂಕೋರ್ಟ್ ಈ ಆದೇಶವನ್ನು ಬದಲಾಯಿಸುತ್ತದೆ ಎಂದು ನಾನು ಭಾವಿಸುತ್ತೇನೆ’ ಎಂದು ರಾಜ್ ಬರೆದುಕೊಂಡಿದ್ದಾರೆ. ಇದರ ಜೊತೆಗೆ ರಾಜ್ ಅವರು ವಿಶೇಷ ಮನವಿ ಒಂದನ್ನು ಇಟ್ಟಿದ್ದಾರೆ.