Sanjana Galrani: ಡ್ರಗ್ಸ್ ಕೇಸ್ನಲ್ಲಿ ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ; ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಸಿದ್ಧತೆ
Sanjana Galrani: ಡ್ರಗ್ಸ್ ಕೇಸ್ನಲ್ಲಿ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿಯನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಸಂಜನಾ ಹೊರಗಡೆ ಬಂದಿದ್ದರು. ಹೈಕೋರ್ಟ್ನಲ್ಲಿ ಪ್ರಕರಣ ರದ್ದಾದ ಬಳಿಕ ಇದೀಗ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
![ಡ್ರಗ್ಸ್ ಕೇಸ್ನಲ್ಲಿ ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ](https://cdn-vishwavani-prod.hindverse.com/media/original_images/sanjana_galrani.jpg)
![Profile](https://vishwavani.news/static/img/user.png)
ಬೆಂಗಳೂರು: ಡ್ರಗ್ಸ್ ಕೇಸ್ನಲ್ಲಿ ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಹೈಕೋರ್ಟ್ನಲ್ಲಿ ಪ್ರಕರಣ ರದ್ದಾದ ಬಳಿಕ ನಟಿ ನಿರಾಳರಾಗಿದ್ದರು. ಆದರೆ, ಇದೀಗ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿಗೆ ಹೈಕೋರ್ಟ್ ಈ ಹಿಂದೆ ಬಿಗ್ ರಿಲೀಫ್ ನೀಡಿತ್ತು. ಕೇಸ್ನಲ್ಲಿ ಸಿಸಿಬಿಯಿಂದ ನಟಿಯರು ಸೇರಿ ಡ್ರಗ್ಸ್ ಪೆಡ್ಲರ್ಗಳ ಬಂಧನವಾಗಿತ್ತು. ಆದರೆ, ಎಫ್ಐಆರ್ ರದ್ದು ಕೋರಿ ಸಂಜನಾ ಹೈಕೋರ್ಟ್ ಮೆಟ್ಟಿಲೇರಿದ್ದರು. ನಂತರ ಏಕ ಸದಸ್ಯ ಪೀಠದಿಂದ ಎಫ್ಐಆರ್ ರದ್ದುಗೊಳಿಸಲಾಗಿತ್ತು. ಹೀಗಾಗಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿಸಿಬಿ ಪೊಲೀಸರು ಮುಂದಾಗಿದ್ದಾರೆ.
ಡ್ರಗ್ಸ್ ಕೇಸ್ನಲ್ಲಿ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿಯನ್ನು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಸಂಜನಾ ಹೊರಗಡೆ ಬಂದಿದ್ದರು. ಹೈಕೋರ್ಟ್ನಲ್ಲಿ ಪ್ರಕರಣ ರದ್ದಾದ ಬಳಿಕ ಇದೀಗ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಸರ್ಕಾರದ ಮಟ್ಟದಲ್ಲಿ ಅರ್ಜಿ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾಹಿತಿ ಹಂಚಿಕೊಂಡಿದ್ದು, ನಟಿ ಸಂಜನಾ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಸಿಗುತ್ತಿದ್ದಂತೆ ಸುಪ್ರೀಂಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ | City Lights Movie: ಸಿಟಿ ಲೈಟ್ಸ್ ಚಿತ್ರಕ್ಕೆ ಮುಹೂರ್ತ: ಚಿತ್ರರಂಗಕ್ಕೆ ದುನಿಯಾ ವಿಜಯ್ 2ನೇ ಪುತ್ರಿ ಎಂಟ್ರಿ
ನಾಲ್ಕು ವರ್ಷಗಳ ಹಿಂದೆ ಬಿರುಗಾಳಿ ಎಬ್ಬಿಸಿದ್ದ ಉದ್ಯಮಿಗಳು ಹಾಗೂ ಸೆಲೆಬ್ರಿಟಿಗಳಿದ್ದ ಡ್ರಗ್ಸ್ ಕೇಸ್ನಲ್ಲಿ ನಟಿ ಸಂಜನಾ ಗಲ್ರಾನಿ, ಉದ್ಯಮಿ ಶಿವಪ್ರಕಾಶ್ ಮತ್ತು ಆದಿತ್ಯ ಅಗರವಾಲ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಕಳೆದ ವರ್ಷ ಜೂನ್ನಲ್ಲಿ ಮಹತ್ವದ ಆದೇಶ ನೀಡಿತ್ತು. ಇದರಿಂದಾಗಿ ಸಿಐಡಿ ಪೊಲೀಸರಿಗೆ ತೀವ್ರ ಹಿನ್ನಡೆಯಾಗಿತ್ತು.
ಈ ಸುದ್ದಿಯನ್ನೂ ಓದಿ | Arvind Kejriwal: ಎಸಿಬಿ ನೊಟೀಸ್ಗೆ ಉತ್ತರಿಸದ ಆಪ್ ನಾಯಕರು; ಕೇಜ್ರಿವಾಲ್ಗೆ ಮತ್ತೆ ಕಾದಿದೆಯಾ ಸಂಕಷ್ಟ?
ಮೊದಲನೇ ಆರೋಪಿ ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ, 14ನೇ ಆರೋಪಿ ಸಂಜನಾ ಗಲ್ರಾನಿ ಮತ್ತು 22ನೇ ಆರೋಪಿ ಆದಿತ್ಯ ಅಗರವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರು, '2015, 2018 ಮತ್ತು 2019ರಲ್ಲಿ ನಡೆದಿದೆ ಎನ್ನಲಾದ ಮಾದಕ ದ್ರವ್ಯ ಸೇವನೆ ಸಂಬಂಧ ಅರ್ಜಿದಾರರ ವಿರುದ್ಧ 2020ರಲ್ಲಿ ಪ್ರಕರಣ ದಾಖಲಾಗಿದೆ. ಸಿಆರ್ಪಿಸಿ ಸೆಕ್ಷನ್ 219(1) ಪ್ರಕಾರ ಅರ್ಜಿದಾರರ ವಿರುದ್ಧ ಹಿಂದೆ ಮಾಡಿರುವ ಆರೋಪಗಳಿಗೆ ಈಗ ವಿಚಾರಣೆ ನಡೆಸಲಾಗದು ಮತ್ತು ಹೈಕೋರ್ಟ್ನ ಹಿಂದಿನ ತೀರ್ಪು ಮತ್ತು ನಿಯಮದ ಪ್ರಕಾರ ಪೊಲೀಸರು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಬೇಕಿತ್ತು. ಆದರೆ, ದಾಖಲಿಸಿಲ್ಲ. ಆದ್ದರಿಂದ ಆರೋಪಿಗಳ ವಿರುದ್ಧ ಪ್ರಕರಣ ಮುಂದುವರಿಸಿದರೆ ಅದು ಕಾನೂನು ದುರ್ಬಳಕೆಯಾಗಲಿದೆ ಎಂದು ಹೇಳಿ, ನಟಿ ಸೇರಿ ಮೂವರಿ ಆರೋಪಿಗಳ ವಿರುದ್ಧದ ಕೇಸ್ ಅನ್ನು ರದ್ದುಗೊಳಿಸಿದ್ದರು.