Sunday, 8th September 2024

ನವೆಂಬರ್ 18 ರಂದು ತೆರೆಗೆ ’ಆವರ್ತ’

ಬೆಂಗಳೂರು: ವೇಮಗಲ್ ಜಗನ್ನಾಥ್ ರಾವ್ ನಿರ್ದೇಶನದ ಚಿತ್ರ ‘ಆವರ್ತ’ ಚಿತ್ರದ ಹಾಡುಗಳನ್ನು ನಟಿ ತಾರಾ ಅನುರಾಧಾ ಬಿಡುಗಡೆ ಮಾಡಿದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೇಲರ್ ಅನಾವರಣಗೊಳಿಸಿದರು.

ನನ್ನ ಮೊದಲ ಚಿತ್ರ ‘ತುಳಸಿದಳ’. ಆ ಚಿತ್ರದಲ್ಲಿ ವೇಮಗಲ್ ಜಗನ್ನಾಥ್ ರಾವ್ ಅವರು ಅವಕಾಶ ನೀಡಿದ್ದರು. ನನ್ನ ಗುರುಗಳು ನಿರ್ದೇಶಿಸಿರುವ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿರುವುದಕ್ಕೆ ಖುಷಿಯಾಗಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ತಾರಾ ಅನುರಾಧ ಶುಭ ಕೋರಿದರು.

‘ಯುವಕನೊಬ್ಬನಿಗೆ ಕಥೆ ಬರೆಯುವ ಹವ್ಯಾಸ. ಕಾಲ್ಪನಿಕ ಕಥೆ ಬರೆಯುವ ಬಯಕೆ ಯಿಲ್ಲದ ಆತನಿಗೆ ನೈಜಘಟನೆ ಕುರಿತು ಕಥೆ ಬರೆಯುವ ಆಸಕ್ತಿ. ಆ ಸಮಯದಲ್ಲಿ ಆತನಿಗೊಂದು ಮೆಸೇಜ್ ಬರುತ್ತದೆ. ಆತ ಆ ಸ್ಥಳಕ್ಕೆ ಹೋದಾಗ ಏನೆಲ್ಲಾ ಆಗುತ್ತದೆ?’ ಎಂಬುದು ಚಿತ್ರದ ಕಥೆ ಎನ್ನುವ ನಿರ್ದೇಶಕ ಜಗನ್ನಾಥರಾವ್, ನ.18 ರಂದು ಚಿತ್ರವನ್ನು ತೆರೆಗೆ ತರುವುದಾಗಿ ತಿಳಿಸಿದರು.

ಕಥೆಗಾರನ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕ ಜಯ್ ಚಂದ್ರ ಹೇಳಿದರು. ಸಿಒಡಿ ಅಧಿಕಾರಿ ಪಾತ್ರಧಾರಿಯಾಗಿ ಧನ್ವಿತ್ ಇದ್ದಾರೆ. ನಯನಾ ಈ ಚಿತ್ರದ ನಾಯಕಿ.

ಮೂರು ಸಾಹಸ ಸನ್ನಿವೇಶಗಳು ಚೆನ್ನಾಗಿವೆ ಎಂದು ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ತಿಳಿಸಿದರು.

error: Content is protected !!