ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vishnuvardhan Memorial: ಸಿಎಂ ಭೇಟಿಯಾದ ಭಾರತಿ ವಿಷ್ಣುವರ್ಧನ್; ವಿಷ್ಣು ಸ್ಮಾರಕಕ್ಕೆ ಭೂಮಿ, ಕರ್ನಾಟಕ ರತ್ನ ಪ್ರಶಸ್ತಿಗೆ ಮನವಿ

Bharathi Vishnuvardhan: ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‌ ಸಮಾಧಿ ತೆರವು ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಹೀಗಾಗಿ ಆ ಜಾಗದಲ್ಲಿ ಮತ್ತೆ ವಿಷ್ಣು ಸ್ಮಾರಕ ನಿರ್ಮಿಸಲು ಭೂಮಿ ಮಂಜೂರು ಮಾಡಲು ಸರ್ಕಾರಕ್ಕೆ ಭಾರತಿ ವಿಷ್ಣುವರ್ಧನ್‌ ಅವರು ಮನವಿ ಮಾಡಿದ್ದಾರೆ.

ವಿಷ್ಣು ಸ್ಮಾರಕಕ್ಕಾಗಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಭಾರತಿ ವಿಷ್ಣುವರ್ಧನ್

-

Prabhakara R Prabhakara R Sep 3, 2025 2:02 PM

ಬೆಂಗಳೂರು: ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಮತ್ತು ನಟ ಅನಿರುದ್ಧ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಬುಧವಾರ ಭೇಟಿಯಾಗಿ, ವಿಷ್ಣು ಸ್ಮಾರಕ (Vishnuvardhan Memorial) ನಿರ್ಮಾಣಕ್ಕೆ 10 ಗುಂಟೆ ಜಾಗ ಒದಗಿಸಬೇಕು ಹಾಗೂ ವಿಷ್ಣುವರ್ಧನ್ ಅವರಿಗೆ 'ಕರ್ನಾಟಕ ರತ್ನʼ ಪ್ರಶಸ್ತಿ ನೀಡಬೇಕೆಂದು ಮನವಿ ಮಾಡಿದರು.

ಅಭಿಮಾನ್‌ ಸ್ಟುಡಿಯೋದಲ್ಲಿದ್ದ ವಿಷ್ಣುವರ್ಧನ್‌ ಸಮಾಧಿ ತೆರವು ಮಾಡಿದ ಹಿನ್ನೆಲೆಯಲ್ಲಿ ಅಭಿಮಾನಿಗಳು ತೀವ್ರ ಆಕ್ರೋಶ ಹೊರಹಾಕಿದ್ದರು. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಹೀಗಾಗಿ ಆ ಜಾಗದಲ್ಲಿ ಮತ್ತೆ ವಿಷ್ಣು ಸ್ಮಾರಕ ನಿರ್ಮಿಸಲು ಭೂಮಿ ಮಂಜೂರು ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಮನವಿ ಪತ್ರದಲ್ಲಿ ಏನಿದೇ?

ಮಾನ್ಯರೆ, ಪ್ರಮುಖವಾಗಿ ಮೈಸೂರು ನಗರದಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನಿರ್ಮಿಸಿ ಕನ್ನಡದ ಹೃದಯದಲ್ಲಿ ವಿಷ್ಣುವರ್ಧನ್ ಅವರ ನೆನಪನ್ನು ಶಾಶ್ವತವಾಗಿ ಉಳಿಸಿರುವ ಕರ್ನಾಟಕ ಸರ್ಕಾರಕ್ಕೆ, ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇದು ಲಕ್ಷಾಂತರ ಅಭಿಮಾನಿಗಳ ಹೆಮ್ಮೆಯ ವಿಷಯವಾಗಿದೆ. ಆದರೆ, ಬೆಂಗಳೂರು ನಗರದಲ್ಲಿಯೂ ಸ್ಮಾರಕದ ಅಗತ್ಯವಿದೆ ಎಂಬ ಅಭಿಮಾನಿಗಳ ದೀರ್ಘಕಾಲದ ಬೇಡಿಕೆಯನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇವೆ.

ಡಾ.ವಿಷ್ಣುವರ್ಧನ್ ಅವರು ಬದುಕನ್ನು ರೂಪಿಸಿಕೊಂಡಿದ್ದೇ ಬೆಂಗಳೂರಿನಲ್ಲಿ. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಏಕೆಂದರೆ, ಇಲ್ಲಿಯೇ ಡಾ.ವಿಷ್ಣುವರ್ಧನ್ ಅವರ ಅಗ್ನಿಸ್ಪರ್ಶ (ಅಂತ್ಯಕ್ರಿಯೆ) ನೇರವೇರಿದ್ದು. ಲಕ್ಷಾಂತರ ಅಭಿಮಾನಿಗಳು ಆಗಮಿಸಿ ತಮ್ಮ ಪ್ರೀತಿಯ ಕಲಾವಿದನಿಗೆ ಕಂಬನಿ ಮಿಡಿದಿದ್ದರು.

ಈ ಸುದ್ದಿಯನ್ನೂ ಓದಿ | Kiccha Sudeep Birthday: ಬರ್ತ್‌ಡೇಗೆ ಅಭಿಮಾನಿಗಳಿಂದ ಕಿಚ್ಚ ಸುದೀಪ್‌ ಕೇಳಿದ ಆ 2 ಗಿಫ್ಟ್‌ ಯಾವುದು?

ಅಭಿಮಾನ್ ಸ್ಟುಡಿಯೋ ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನಾವು ಮನವಿ ಮಾಡಿಕೊಳ್ಳುವುದು ಏನೆಂದರೆ, ಅಭಿಮಾನ್ ಸ್ಟುಡಿಯೋ ವ್ಯಾಪ್ತಿಯಲ್ಲಿ ಕನಿಷ್ಠ 10 ಗುಂಟೆ ಜಾಗವನ್ನು ಮೀಸಲಿಟ್ಟು- ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಅನುಮತಿ ನೀಡಬೇಕೆಂದು ಕೋರುತ್ತೇವೆ. ಇದರಿಂದ ಅಭಿಮಾನಿಗಳ ಭಾವನೆಗಳಿಗೆ ನ್ಯಾಯವನ್ನು ದೊರಕಿಸುವ ಜತೆಗೆ- ಒಂದು ಶಾಶ್ವತ ಸಾಂಸ್ಕೃತಿಕ ಸ್ಮಾರಕವಾಗಿ ಉಳಿದು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಭಾರತಿ ವಿಷ್ಣುವರ್ಧನ್ ಮನವಿ ಮಾಡಿದ್ದಾರೆ.