Actor Dhruva Sarja: ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ: ನಟ ಧ್ರುವ ಸರ್ಜಾ ಕಿಡಿ
Actor Dhruva Sarja: ನಾನು ಒಬ್ಬ ಕನ್ನಡಿಗನಾಗಿ, ಒಬ್ಬ ಕಲಾವಿದನಾಗಿ ಈ ಒಂದು ಸಂದರ್ಭದಲ್ಲಿ ನಾನು ವಿಷ್ಣು ಸರ್ ಅಭಿಮಾನಿಗಳ ಜತೆ ಪ್ರಾಮಾಣಿಕವಾಗಿ ಇದ್ದೇನೆ. ನಿಮ್ಮ ಮುಂದಿನ ನಡೆಗಾಗಿ ಕಾಯುತ್ತಿದ್ದೇನೆ. ಜೈ ಕನ್ನಡಾಂಬೆ ವಿಷ್ಣು ದಾದಾ ಅಜರಾಮರ ಎಂದು ನಟ ಧ್ರುವ ಸರ್ಜಾ ಅವರು ತಿಳಿಸಿದ್ದಾರೆ.


ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿನ ನಟ ವಿಷ್ಣುವರ್ಧನ್ ಅವರ ಸಮಾಧಿ ತೆರವಿಗೆ ಅಭಿಮಾನಿಗಳು ಹಾಗೂ ಕನ್ನಡ ಚಿತ್ರರಂಗದ ಪ್ರಮುಖರು ಅಸಮಾಧಾನ ಹೊರಹಾಕುತ್ತಿದ್ದಾರೆ. ಈ ಬಗ್ಗೆ ಇದೀಗ ನಟ ಧ್ರುವ ಸರ್ಜಾ (Actor Dhruva Sarja) ಪ್ರತಿಕ್ರಿಯಿಸಿ, ಸಾಧಕನಿಗೂ ಸಾವಿಲ್ಲ ಕಲೆಗೂ ಸಾವಿಲ್ಲ ವಿಷ್ಣು ಅಪ್ಪಾಜಿ ಅಜರಾಮರ ... ಕೋಟ್ಯಾಂತರ ಕನ್ನಡಿಗರ ಹೃದಯದಲ್ಲಿ ಗುಡಿ ಕಟ್ಟಿರುವ ವ್ಯಕ್ತಿಗೆ ಸ್ಮಾರಕ ಏಕೆ ಬೇಕು, ಆದರೂ ಸಹ ಈ ಒಂದು ನಾಡಿನಲ್ಲಿ ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ ಮನಸ್ಸಿಗೆ ಬಹಳಷ್ಟು ನೋವು ಉಂಟಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕೇಳಲು ಸಾಕಷ್ಟು ಪ್ರಶ್ನೆಗಳಿವೆ. ಆದರೆ ಇದೆಲ್ಲದಕ್ಕೂ ಉತ್ತರ ನಾನು ಒಬ್ಬ ಕನ್ನಡಿಗನಾಗಿ, ಒಬ್ಬ ಕಲಾವಿದನಾಗಿ ಈ ಒಂದು ಸಂದರ್ಭದಲ್ಲಿ ನಾನು ವಿಷ್ಣು ಸರ್ ಅಭಿಮಾನಿಗಳ ಜತೆ ಪ್ರಾಮಾಣಿಕವಾಗಿ ಇದ್ದೇನೆ. ನಿಮ್ಮ ಮುಂದಿನ ನಡೆಗಾಗಿ ಕಾಯುತ್ತಿದ್ದೇನೆ. ಜೈ ಕನ್ನಡಾಂಬೆ, ವಿಷ್ಣು ದಾದಾ ಅಜರಾಮರ ಎಂದು ತಿಳಿಸಿದ್ದಾರೆ.
*ಸಾಧಕನಿಗೂ ಸಾವಿಲ್ಲ ಕಲೆಗೂ ಸಾವಿಲ್ಲ ವಿಷ್ಣು ಅಪ್ಪಾಜಿ ಅಜರಾಮರ ... ಕೋಟ್ಯಾಂತರ ಕನ್ನಡಿಗರ ಹೃದಯದಲ್ಲಿ ಗುಡಿ ಕಟ್ಟಿರುವ ವ್ಯಕ್ತಿಗೆ ಸ್ಮಾರಕ ಏಕೆ ಬೇಕು, ಆದರೂ ಸಹ ಈ ಒಂದು ನಾಡಿನಲ್ಲಿ ಇಂಥ ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ ಮನಸ್ಸಿಗೆ ಬಹಳಷ್ಟು ನೋವು ಉಂಟಾಗಿದೆ ಕೇಳಲು ಸಾಕಷ್ಟು ಪ್ರಶ್ನೆಗಳಿವೆ ಆದರೆ ಇದೆಲ್ಲದಕ್ಕೂ ಉತ್ತರ ನಾನು ಒಬ್ಬ… pic.twitter.com/eAql30juK4
— Dhruva Sarja (@DhruvaSarja) August 9, 2025
ದೇವಸ್ಥಾನ ಒಡೆದಷ್ಟೇ ಸಂಕಟವಾಗಿದೆ; ವಿಷ್ಣುವರ್ಧನ್ ಸಮಾಧಿ ತೆರವಿಗೆ ಕಿಚ್ಚ ಸುದೀಪ್ ಆಕ್ರೋಶ
ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ (Dr. Vishnuvardhan) ಅವರ ಸಮಾಧಿ ನೆಲಸಮ ಮಾಡಿರುವ ಬಗ್ಗೆ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಇದೀಗ ಸ್ಯಾಂಡಲ್ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeepa) ಕೂಡ ಪ್ರತಿಕ್ರಿಯಿಸಿದ್ದು, ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನುಗಟ್ಟಲೆಯಿಂದ ನಂಬಿ, ಮೊರೆ ಹೋದಂತಹ ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ತಮಗಾಗಿದೆ ಎಂದಿದ್ದಾರೆ.
ಈ ಬಗ್ಗೆ ಸುದೀಪ್ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸುದೀರ್ಘವಾಗಿ ಬರೆದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನೂಗಟ್ಟಲೆ ಇಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ…
— Kichcha Sudeepa (@KicchaSudeep) August 9, 2025
ʼʼಸಾಹಸ ಸಿಂಹ ವಿಷ್ಣುವರ್ಧನ್ ಅಂದ್ರೆ ಅದು ಎಂದೂ ಮುಗಿಯದ ಒಂದು ಅಭಿಮಾನ, ಗೌರವ. ಮೊನ್ನೆ ರಾತ್ರಿ, ಅವರ ಸ್ಮಾರಕವನ್ನ ಒಡೆದು ಹಾಕಿರುವುದು, ನಾವು ವರ್ಷಾನುಗಟ್ಟಲೆಯಿಂದ ನಂಬಿ, ಮೊರೆ ಹೋದಂತಹ ಒಂದು ದೇವರ ದೇವಸ್ಥಾನವನ್ನುಒಡೆದು ಹಾಕಿದಾಗ ಎಷ್ಟು ನೋವು ಆಗುತ್ತದೋ, ಅಷ್ಟೇ ನೋವು ಮತ್ತು ಸಂಕಟ ನನಗಾಗಿದೆ. ಇದು ಹೈ ಕೋರ್ಟ್ ಆದೇಶ, ನ್ಯಾಯಾಲಯದ ಆದೇಶ ಅಂತಾರೆ. ಆದರೆ ಸರ್ಕಾರಗಳ ಮುಖಾಂತರ, ಸರ್ಕಾರದಲ್ಲಿ ಇರುವ ಸಚಿವರ ಮುಖಾಂತರ, ವಿಷ್ಣು ಸ್ಮಾರಕವನ್ನ ಉಳಿಸಿಕೊಳ್ಳುವುದಕ್ಕೆ ಏನೇನು ಕ್ರಮ ತೆಗೆದುಕೊಳ್ಳಬೇಕು ಎನ್ನುವುದಕ್ಕೆ ನಾವು ತುಂಬಾ ಹೋರಾಟ ಮಾಡಿದ್ದೇವೆ. ಸಂಬಂಧಪಟ್ಟ ಸಚಿವರಿಗೆ ಹೇಳಿದ್ದೇವೆ. ಅದಕ್ಕೆ ಹಣ ಕಾಸು ಬೇಕಾ? ಮತ್ತೇನಾದರೂ ಬೇಕಾ? ಎಲ್ಲದಕ್ಕೂ ನಾವು ಸಿದ್ಧರಿದ್ದೀವಿ ಅಂತ ನಾನೇ ಸ್ವತಃ ಹೇಳಿದ್ದೆ. ಆದರೂ ಸರ್ಕಾರ ಇದರ ಬಗ್ಗೆ ಗಮನ ತೆಗೆದುಕೊಳ್ಳಲಿಲ್ಲವೋ ಅಥವಾ ನ್ಯಾಯಾಲಯಕ್ಕೆ ಸಮಾಧಿ ಮಾಡದೆ, ಭೂಮಿಯಲ್ಲಿ ಹೂಳದೆ, ಚಿತೆ ಇಟ್ಟ ಕಡೆ ಸ್ಮಾರಕ ಅಲ್ಲ, ಆಗಲೇ ಮೈಸೂರಿನಲ್ಲಿ ಒಂದು ಸ್ಮಾರಕ ಇದೆ. ಅದನ್ನೇ ಅಧಿಕೃತ ಸ್ಮಾರಕವಾಗಿ ಅವರನ್ನ ಗೌರವಿಸುದುದಕ್ಕೆ ಇಟ್ಟುಕೊಳ್ಳಿ ಅಂತ ಮಾಹಿತಿ ನೀಡಿ ಹೈ ಕೋರ್ಟ್ ಕೂಡ ಆದೇಶ ಮಾಡಿದೆʼʼ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ: Bengaluru News: ನ್ಯಾಯಾಲಯದ ಆದೇಶದಂತೆ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ವಿ.
ಮುಂದುವರಿದು, ʼʼನಾವು ನ್ಯಾಯಾಲಯದ ವಿರುದ್ಧ ಮಾತನಾಡಲು ಆಗುವುದಿಲ್ಲ. ಮತ್ತೆ ನ್ಯಾಯಾಲಯಕ್ಕೆ ಹೋಗಿ, ಯಾವ ಸಂಸ್ಥೆ ಅಥವಾ ವ್ಯಕ್ತಿ ಆ ಜಾಗವನ್ನು ಖರೀದಿ ಮಾಡಿರುವರೋ ಅವರ ಮನ ಒಲಿಸಿ, ಅವರಿಗೆ ಸಾಹಸ ಸಿಂಹರ ಸ್ಮಾರಕ ಇದ್ದ, ಅಷ್ಟು ಜಾಗವನ್ನಾದರೂ ನಮಗೆ ಉಳಿಸಿ ಕೊಡುವುದಕ್ಕೆ ಮನವಿ ಮಾಡಲು ನಾನು ತಯಾರಿದ್ದೀನಿ. ಸರ್ಕಾರ ಮಧ್ಯ ಪ್ರವೇಶಿಸುವುದರಿಂದ ಇದು ಬಗೆ ಹರಿಯುತ್ತದೆ ಎನ್ನುವುದಾದರೆ, ಸರ್ಕಾರಕ್ಕೂ ಮನವಿ ಮಾಡಲು ತಯಾರಿದ್ದೀನಿ. ನಾನು ವಿಷ್ಣುವರ್ಧನ್ ಅವರ ಒಬ್ಬ ಅಭಿಮಾನಿಯಾಗಿ ಮಾತನಾಡುತ್ತಿದೀನಿ. ಕಿಚ್ಚ ಆಗಿ ಅಲ್ಲ. ಅತಿಯಾದ ನೋವಿದೆʼʼ ಎಂದು ಹೇಳಿದ್ದಾರೆ.
ʼʼವಿಷ್ಣುವರ್ಧನ್ ಅವರಿಗೆ ಆಧ್ಯಾತ್ಮದಲ್ಲಿ ಒಲವಿತ್ತು. ಅವರು ಯಾವಾಗಲೂ ಹೇಳುತ್ತಿದ್ದರು- ನಾನು ರೂಪಕ ಆಗಬೇಕು. ಯಾವುದೋ ಕಟ್ಟಡಕ್ಕೆ ಹೋಗಿ ಸೇರಬಾರದು, ಸ್ಥಾವರಗಳಿಗೆ ಉಳಿಯಬಾರದು. ನಾನು ಪಂಚಭೂತಗಳಲ್ಲಿ ಇರಬೇಕು. ನಾವು ಪ್ರಕೃತಿಗೆ ಸಂಬಂಧಪಟ್ಟವರು ಅಂತ. ಒಂದು ಲೆಕ್ಕದಲ್ಲಿ ಅವರ ಇನ್ನೊಂದು ಆಸೆ ಈಡೇರಿದಂತೆ ಅನಿಸುತಿದೆ. ಆದರೆ ಇದು ಎಲ್ಲ ಸಾಮಾನ್ಯ ಅಭಿಮಾನಿಗಳಿಗೆ, ಜನರಿಗೆ ಅರ್ಥ ಆಗುವುದಿಲ್ಲ. ಪೋಸ್ಟ್ ಹಾಕಲು ಹೇಗೆ ಒಂದು ಪೋಸ್ಟ್ ಬಾಕ್ಸ್ ಬೇಕೋ, ಹಾಗೆ ನಾವು ಗೌರವ ಸಲ್ಲಿಸಲು, ಪೂಜೆ ಮಾಡಲು ಒಂದು ದೇವಸ್ಥಾನ ಬೇಕು, ಸ್ಮಾರಕ ಬೇಕು. ವಿಷ್ಣುವರ್ಧನ್ ಅಂತಹ ಒಬ್ಬ ಮೇರು ನಟರಿಗೆ, ಬೆಂಗಳೂರಿನಂತಹ ರಾಜಧಾನಿಯಲ್ಲಿ ಒಂದು ಅರ್ಧ ಎಕರೆ ಜಾಗ ಕೊಡಲಿಲ್ಲ, ಅವರ ಹೆಸರಿನಲ್ಲಿ, ಒಂದು ಪ್ರಾರ್ಥನೆ ಮಾಡಲು, ಅವರನ್ನು ನೋಡಲು, ಅವರ ಜನ್ಮ ದಿನ ಆಚರಿಸಲು, ನಮ್ಮ ಬಳಿ ಒಂದು ಜಾಗ ಇಲ್ಲ ಅಂದರೆ ಇದು ಅತ್ಯಂತ ಖಂಡನೀಯ ವಿಷಯʼʼ ಎಂದಿದ್ದಾರೆ.
ʼʼನಾನು ಕೇಳ್ಪಟ್ಟೆ, ಬಾಲಕೃಷ್ಣ ಅಂತಹ ಹಿರಿಯ ನಟರ ಸಮಾಧಿಯನ್ನು ಕೂಡ ಒಡೆದು ಹಾಕಿದ್ದಾರೆ. ಅಲ್ಲಿದಂತಹ ಒಂದು ಗಣಪತಿ ದೇವಸ್ಥಾನವೂ ಈಗಲ್ಲಿ ಇಲ್ಲ. ವಿಷ್ಣು ಅವರ ಸ್ಮಾರಕ ಕೂಡ ಅಲ್ಲಿ ಇಲ್ಲ ಅಂದರೆ ಏನು ಅರ್ಥ? ಮನುಷ್ಯನ ಭಾವನೆಗಳಿಗಿಂತ, ಗೌರವಕ್ಕಿಂತ, ಅಭಿಮಾನಕ್ಕಿಂತ, ಈ ಒಂದು ಭೂಮಿ ವ್ಯವಹಾರ ಅಷ್ಟು ದೊಡ್ಡದಾಯಿತಾ? ಹಣ ನಮಗೆ ಅಷ್ಟು ಮುಖ್ಯ ಅಲ್ಲ. ಸರ್ಕಾರ ಮಧ್ಯ ಪ್ರವೇಶ ಮಾಡಬೇಕು. ಇದು ನನ್ನ ವಿನಂತಿ. ನ್ಯಾಯಾಲಯಕ್ಕೆ ಹೋಗುವುದಾದರೆ, ನಾನೂ ಬರಲು ಸಿದ್ಧ. ಸರ್ಕಾರ, ನ್ಯಾಯಾಲಯ ಮತ್ತು ಆ ಭೂಮಿ ಖರೀದಿ ಮಾಡಿರುವವರಲ್ಲಿ ನನ್ನದೊಂದು ಮನವಿ- ನಿಮಗೆ ಏನು ಹಣಕಾಸು ಬೇಕೋ, ಅದನ್ನು ಕೊಡಲು ನಾನು ಮತ್ತು ನನ್ನಂತಹ ಲಕ್ಷಾಂತರ ಜನರು ಮುಂದೆ ಬರುತ್ತೇವೆ. ನಾನೇ ಮುಂದೆ ನಿಂತು ಅದನ್ನು ಮತ್ತೆ ಒಂದು ಸ್ಮಾರಕವಾಗಿ ಮರುಸ್ಥಾಪನೆ ಮಾಡುವುದಕ್ಕೆ ಮುಂದಾಗಿತ್ತೇನೆ. ಅದಕ್ಕೆ ಒಂದು ಅವಕಾಶ ಮಾಡಿ ಕೊಡಿ. ಅವರು ನಮ್ಮ ಎದೆಯ ಒಳಗೆ ಸದಾ ಇರುತ್ತಾರೆ ನಿಜ. ಹಾಗಂತ ಪ್ರಾರ್ಥನೆ, ಗೌರವಕ್ಕೆ ಸಂಕೇತವಾಗಿ ಒಂದು ಸ್ಥಳ ಬೇಕು. ಆ ಪ್ರೀತಿಗೆ, ಪ್ರೇಮಕ್ಕೆ, ಅಭಿಮಾನಕ್ಕೆ ದ್ರೋಹ ಮಾಡಬೇಡಿ ಅಂತ ನಾನು ವಿನಂತಿ ಮಾಡುತ್ತೇನೆʼʼ ಎಂದು ಸುದೀಪ್ ಬರೆದುಕೊಂಡಿದ್ದಾರೆ.