Friday, 18th October 2024

BBK 11: ಬಿಗ್ ಬಾಸ್ ಮನೆಯಲ್ಲಿ ಹೊಡೆದಾಟ?: ಜಗದೀಶ್-ರಂಜಿತ್​ರನ್ನು ಮನೆಯಿಂದ ಹೊರ ಹಾಕಿದ ಬಿಗ್ ಬಾಸ್

Ranjith Jagadish Fight

ಶುರುವಾದಾಗಿನಿಂದ ಹೆಚ್ಚು ಜಗಳಗಳಿಂದಲೇ ಸುದ್ದಿಯಲ್ಲಿದ್ದ ಬಿಗ್ ಬಾಸ್ ಕನ್ನಡ ಸೀಸನ್ 11 ನಲ್ಲಿ (Bigg Boss Kannada 11) ಇದೀಗ ಹೊಡೆದಾಟ ನಡೆದಿದೆ ಎಂಬ ಸುದ್ದಿ ವೈರಲ್ ಆಗುತ್ತಿದೆ. ಜಗದೀಶ್ ಮತ್ತು ರಂಜಿತ್ ನಡುವೆ ಹೊಡೆದಾಟ ನಡೆದಿದ್ದು, ಇವರಿಬ್ಬರನ್ನೂ ಬಿಗ್ ಬಾಸ್ ಮನೆಯಿಂದ ಹೊರಹಾಕಲಾಗಿದೆಂತೆ. ನಿನ್ನೆ (ಅ. 15) ಎಪಿಸೋಡ್​​ನಲ್ಲೂ ಕೂಡ ಸ್ಪರ್ಧಿಗಳ ನಡುವೆ ದೊಡ್ಡ ಜಗಳವಾಗಿತ್ತು. ಜಗದೀಶ್ ಮತ್ತು ಉಗ್ರಂ ಮಂಜು ನಡುವೆ ಮಾತಿನ ಚಕಮಕಿ ನಡೆದಿತ್ತು. ಆ ಬಳಿಕ ರಂಜಿತ್ ಮತ್ತು ಜಗದೀಶ್ ನಡುವೆ ನೇರಾನೇರ ಮಾತುಕತೆ ನಡೆದು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಯಾವ ವಿಚಾರಕ್ಕೆ ಜಗಳ?:

ಜಗದೀಶ್‌ ಆರಂಭದಿಂದ ಕೇವಲ ಮನೆಯ ಸ್ಪರ್ಧಿಗಳ ವಿರುದ್ಧ ಮಾತ್ರವಲ್ಲದೆ ಬಿಗ್‌ಬಾಸ್‌ ಕಾರ್ಯಕ್ರಮದ ಬಗ್ಗೆ ಕೂಡ ಹಗುರವಾಗಿ ಮಾತನಾಡಿದ್ದರು. ಅದರಲ್ಲೂ ನಿನ್ನೆ ಬಿಗ್ ಬಾಸ್ ಶೋ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ. ಆದರೆ, ಅವರು ಆಡಿರುವ ಎಲ್ಲ ಮಾತುಗಳು ಏನು ಎಂಬುದು ತಿಳಿದುಬಂದಿಲ್ಲ, ಕೆಲವೊಂದು ಮಾತು ಟೆಲಿಕಾಸ್ಟ್ ಆಗಿದ್ದರೂ ಅದಕ್ಕೆ ಬೀಪ್ ಸೌಂಡ್ ಹಾಕಲಾಗಿದೆ. ಇದಕ್ಕೆ ಇಡೀ ಮನೆಯ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಮನೆಯಲ್ಲಿ ಬೆಂಕಿ ಹತ್ತಿಕೊಂಡಿತ್ತು.

ಜಗದೀಶ್ ಬಿಗ್‌ಬಾಸ್ ಮನೆಗೆ ಬಂದಾಗಿನಿಂದಲೂ ಬೇರೆಯವರನ್ನು ಕೆಣಕುವ ರೀತಿಯಲ್ಲೇ ಮಾತನಾಡುತ್ತಿದ್ದರು. ಎಲ್ಲರಿಗೂ ಏಕವಚದಲ್ಲೇ ಮಾತನಾಡಿಸುತ್ತಿದ್ದರು. ಹೆಣ್ಣು ಮಕ್ಕಳಿಗೂ ಗೌರವ ಕೋಡೋದಿಲ್ಲ ಅಂತ ಎಲ್ಲಾ ಸ್ಪರ್ಧಿಗಳು ಕೂಡ ಹೇಳಿಕೊಂಡಿದ್ದರು. ಬಿಗ್ ಬಾಸ್ ಶೋ ಬಗ್ಗೆ ಜಗದೀಶ್‌ ಅವಹೇಳನ ಮಾಡಿದ್ದಕ್ಕೆ ಉಗ್ರಂ ಮಂಜು ಕೂಡ ಸಿಟ್ಟಾಗಿದ್ದಾರೆ. ಸಿಟ್ಟಿನಲ್ಲಿ ಮಂಜು ಚಪ್ಪಲಿ ಎಸೆದಿದ್ದಾರೆ. ಇದರ ಬೆನ್ನಲ್ಲೇ ಮತ್ತೆ ಜಗದೀಶ್‌ ಗಲಾಟೆ ಮಾಡಿದ್ದಾರೆ. ಈ ಸಮಯದಲ್ಲಿ ರಂಜಿತ್-ಜಗದೀಶ್‌ ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ.

ಕನ್ನಡದ ಬಿಗ್​ಬಾಸ್​ ಇತಿಹಾಸದಲ್ಲಿ ಜಗಳ ಆಡಿಕೊಂಡು ಸ್ಪರ್ಧಿಗಳು ಹೊರಬಿದ್ದ ಮೂರನೇ ಪ್ರಕರಣ ಇದಾಗಿದೆ. ಈ ಹಿಂದೆ ಹುಚ್ಚ ವೆಂಕಟ್, ಸಂಯುಕ್ತಾ ಹೆಗಡೆ​ ಬಿಗ್​ಬಾಸ್ ಮನೆಯಿಂದ ಔಟ್ ಆಗಿದ್ದರು.