Thursday, 26th September 2024

Kannada New Movie: ಮಡೆನೂರ್ ಮನು ಅಭಿನಯದ “ಕೇದಾರ್ ನಾಥ್ ಕುರಿಫಾರಂ” ಚಿತ್ರ ಈ ವಾರ ತೆರೆಗೆ

Kannada New Movie

ಬೆಂಗಳೂರು: ಜೆ.ಕೆ. ಮೂವೀಸ್ ಲಾಂಛನದಲ್ಲಿ ಕೆ.ಎಂ. ನಟರಾಜ್ ಅವರು ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು (Madenoor Manu) ನಾಯಕನಾಗಿ ನಟಿಸಿರುವ “ಕೇದಾರ್ ನಾಥ್ ಕುರಿಫಾರಂ” ಚಿತ್ರ (Kedar Nath Kuripharam Movie) ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಟ್ರೇಲರ್ ಹಾಗೂ ಹಾಡುಗಳ ಮೂಲಕ ಈ ಚಿತ್ರ (Kannada New Movie) ಈಗಾಗಲೇ ಜನಪ್ರಿಯವಾಗಿದೆ.

ಗ್ರಾಮೀಣ ಸೊಗಡಿನ ಹಾಗೂ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ ರಾಜೇಶ್ ಸಾಲುಂಡಿ ಕಥೆ, ಸಂಭಾಷಣೆ ಬರೆದಿದ್ದು, ಚಿತ್ರಕಥೆಯನ್ನು ನಿರ್ದೇಶಕ ಶೀನು ಸಾಗರ್ ಅವರೆ ಬರೆದಿದ್ದಾರೆ.

ಈ ಸುದ್ದಿಯನ್ನೂ ಓದಿ | KWIN city: ರಾಜ್ಯದ ಅಭಿವೃದ್ಧಿಯೇ ಕ್ವಿನ್ ಸಿಟಿ ಯೋಜನೆಯ ಮೂಲ ಆಶಯ: ಡಿಸಿಎಂ ಡಿ.ಕೆ.ಶಿವಕುಮಾರ್

ರಾಕೇಶ್ ತಿಲಕ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಸನ್ನಿ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಮಡೆನೂರ್ ಮನು, ಶಿವಾನಿ, ಕರಿಸುಬ್ಬು, ಟೆನ್ನಿಸ್ ಕೃಷ್ಣ, ಮುತ್ತು ಮುಂತಾದವರಿದ್ದಾರೆ.