Monday, 16th September 2024

‘ಕಂಠಿ’ ಸಿನಿಮಾ ನಿರ್ದೇಶಕ ಭರತ್ ಇನ್ನಿಲ್ಲ

ಬೆಂಗಳೂರು: ರೋರಿಂಗ್​ ಸ್ಟಾರ್​ ಶ್ರೀಮುರುಳಿ ನಟನೆಯ ಕಂಠಿ ಸಿನಿಮಾ ನಿರ್ದೇಶಕ ಭರತ್ ಕೊನೆಯುಸಿರೆಳೆದಿದ್ದಾರೆ.

ಬಹು ದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ನಿರ್ದೇಶಕ ಭರತ್​ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಡಿ.24ರ ರಾತ್ರಿ ನಿಧನರಾಗಿದ್ದಾರೆ.

ಶ್ರೀಮುರುಳಿ ಅಭಿನಯದ ಕಂಠಿ ಹಾಗೂ ರವಿಚಂದ್ರನ್​ ಪುತ್ರ ಮನೋರಂಜನ್ ನಟನೆಯ ಸಾಹೇಬ ಚಿತ್ರಕ್ಕೂ‌ ಭರತ್​ ನಿರ್ದೇಶನ ಮಾಡಿದ್ದರು. ಭರತ್​ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಯುವ ನಿರ್ದೇಶಕನ ಅಕಾಲಿಕ ಮರಣಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದ್ದು, ದುಃಖಿತ ಕುಟುಂಬಕ್ಕೆ ಸಾಂತ್ವಾನ ಹೇಳಿದೆ.

Leave a Reply

Your email address will not be published. Required fields are marked *