ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ʼಮನದ ಕಡಲುʼ ಚಿತ್ರ ಮಾ.28ಕ್ಕೆ ರಿಲೀಸ್‌

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ಬಹು ನಿರೀಕ್ಷಿತ ʼಮನದ ಕಡಲುʼ ಚಿತ್ರ ಈ ವಾರ ರಾಜ್ಯಾದ್ಯಂತ (ಮಾರ್ಚ್ 28) ಬಿಡುಗಡೆಯಾಗುತ್ತಿದೆ. ಈ ಚಿತ್ರದ ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಯೋಗರಾಜ್ ಭಟ್ ನಿರ್ದೇಶನದ ʼಮನದ ಕಡಲುʼ ಚಿತ್ರ ಮಾ.28ಕ್ಕೆ ರಿಲೀಸ್‌

Profile Siddalinga Swamy Mar 25, 2025 9:07 PM

ಬೆಂಗಳೂರು: E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ ʼಮುಂಗಾರು ಮಳೆʼ ಚಿತ್ರದ ನಂತರ ಇದೇ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ʼಮನದ ಕಡಲುʼ ಚಿತ್ರ (Manada Kadalu Movie) ಈ ವಾರ ರಾಜ್ಯಾದ್ಯಂತ (ಮಾರ್ಚ್ 28) ಬಿಡುಗಡೆಯಾಗುತ್ತಿದೆ. ಜಿ.ಗಂಗಾಧರ್ ಅವರ ಸಹ ನಿರ್ಮಾಣ ಹಾಗೂ ಪ್ರತಾಪ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿರುವ ಈ ಚಿತ್ರ ಈಗಾಗಲೇ ಟೀಸರ್,‌ ಟ್ರೇಲರ್ ಹಾಗೂ ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದೆ. ನಾಯಕನಾಗಿ ಸುಮುಖ ಅಭಿನಯಿಸಿದ್ದಾರೆ. ನಾಯಕಿಯರಾಗಿ ರಾಶಿಕಾ ಶೆಟ್ಟಿ ಹಾಗೂ ಅಂಜಲಿ ಅನೀಶ್ ನಟಿಸಿದ್ದಾರೆ. ರಂಗಾಯಣ ರಘು, ದತ್ತಣ್ಣ, ಶಿವಧ್ವಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳನ್ನು ಜಯಂತ ಕಾಯ್ಕಿಣಿ, ಯೋಗರಾಜ್ ಭಟ್ ಬರೆದಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಶಿವಕುಮಾರ್ ಕಲಾ‌ ನಿರ್ದೇಶನ, ವಿನೋದ್ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಮತ್ತು ಮುರಳಿ, ಕಂಬಿ ರಾಜು , ಗೀತಾ ಸಾಯಿ ಅವರ ನೃತ್ಯ ನಿರ್ದೇಶನವಿರುವ ʼಮನದ ಕಡಲುʼ ಚಿತ್ರಕ್ಕೆ ಯೋಗರಾಜ್ ಭಟ್, ಗಡ್ಡ ವಿಜಿ ಹಾಗೂ ಅಮೋಲ್ ಪಾಟೀಲ್ ಚಿತ್ರಕಥೆ ಬರೆದಿದ್ದಾರೆ.

ಈ ಸುದ್ದಿಯನ್ನೂ ಓದಿ | Junk Jewel Fashion: ಸೀಸನ್‌ ಫಂಕಿ ಲುಕ್‌ಗೆ ಜಂಕ್‌ ಜ್ಯುವೆಲರಿ ಸಾಥ್‌

Manada Kadalu Movie: ಯೋಗರಾಜ್ ಭಟ್ ನಿರ್ದೇಶನದ ʼಮನದ ಕಡಲುʼ ಚಿತ್ರದ ಟ್ರೈಲರ್‌ ಬಿಡುಗಡೆಗೊಳಿಸಿದ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: E.K. ಎಂಟರ್‌ಟೈನರ್ಸ್ ಲಾಂಛನದಲ್ಲಿ ಈ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ ʼಮುಂಗಾರು ಮಳೆʼ ಚಿತ್ರದ ನಂತರ ಇದೇ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ ಚಿತ್ರ ʼಮನದ ಕಡಲುʼ (Manada Kadalu Movie). ಇತ್ತೀಚೆಗೆ ಬಹು ನಿರೀಕ್ಷಿತ ಈ ಚಿತ್ರದ ಟ್ರೈಲರ್ ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿದರು. ಕಳೆದ ನಾಲ್ಕು ವರ್ಷಗಳಿಂದ ಯಶ್ ಅವರು ಯಾವುದೇ ಸಿನಿಮಾ ಸಮಾರಂಭಗಳಲ್ಲಿ ಪಾಲ್ಗೊಂಡಿರಲಿಲ್ಲ‌. ಬಹಳ ದಿನಗಳ ನಂತರ ಯಶ್ ಅವರು ಪಾಲ್ಗೊಂಡಿದ್ದ ಸಿನಿಮಾ ಸಮಾರಂಭವಿದು. ಲುಲು ಮಾಲ್‌ನ ಹೊರಂಗಣದಲ್ಲಿ ನಡೆದ ʼಮನದ ಕಡಲುʼ ಟ್ರೈಲರ್ ಸಮಾರಂಭಕ್ಕೆ ಯಶ್ ಅವರು ಬರುವುದನ್ನು ತಿಳಿದ ಅಭಿಮಾನಿಗಳು ಮನೆಮಂದಿ ಸಹಿತ ಮಧ್ಯಾಹ್ನದಿಂದಲೇ ಮಾಲ್ ಬಳಿ‌ ಜಮಾಯಿಸಿದ್ದರು. ಕಣ್ಣು ಹಾಯಿಸಿದಷ್ಟು ʼಜನರ ಕಡಲುʼ ಅಲ್ಲಿತ್ತು‌. ವರ್ಣರಂಜಿತ ಸಮಾರಂಭದಲ್ಲಿ ಟ್ರೈಲರ್ ಬಿಡುಗಡೆ ಮಾಡಿದ ಯಶ್, ನಂತರ ತಮ್ಮ ಅದ್ಭುತವಾದ ಮಾತುಗಳ ಮೂಲಕ ಚಿತ್ರತಂಡಕ್ಕೆ ಹಾರೈಸಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಾನು ಈ ಸಮಾರಂಭಕ್ಕೆ ಬರಲು ಮೊದಲ ಕಾರಣ‌ ನಿರ್ಮಾಪಕ ಈ. ಕೃಷ್ಣಪ್ಪ ಅವರು ಎಂದು ಮಾತನಾಡಿದ ಯಶ್, ಕೃಷ್ಣಪ್ಪ ಅವರು ನನಗೆ ʼಮೊಗ್ಗಿನ ಮನಸ್ಸುʼ ಚಿತ್ರದಲ್ಲಿ ನಟಿಸಲು ಅವಕಾಶ ನೀಡದೆ ಇದ್ದಿದ್ದರೆ ನಾನು ಇಂದು ನಾಯಕನಾಗುತ್ತಿರಲ್ಲಿಲ್ಲ. ನನ್ನ ಮೊದಲ ಚಿತ್ರದ ನಿರ್ಮಾಪಕರು ಅವರು. ನಿರ್ದೇಶಕ ಯೋಗರಾಜ್ ಭಟ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ಸಹ ನಿರ್ಮಾಪಕ ಗಂಗಾಧರ್ ಹೀಗೆ ಇಲ್ಲಿರುವ ಬಹುತೇಕರು ನನ್ನ ಬೆಳವಣಿಗೆಗೆ ಶ್ರಮ ಪಟ್ಟಿದ್ದಾರೆ. ʼಮನದ ಕಡಲುʼ ಟ್ರೈಲರ್ ಚೆನ್ನಾಗಿದೆ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ. ಕನ್ನಡದಲ್ಲಿ ಹೊಸ ಪ್ರತಿಭೆಗಳು ಬರಬೇಕು. ನಾವು ಯಾರಿಗೂ ಕಡಿಮೆ ಇಲ್ಲದಂತೆ ಬೆಳೆಯಬೇಕು. ಒಳ್ಳೆಯ ಚಿತ್ರಗಳನ್ನು ಕನ್ನಡಿಗರು ಎಂದಿಗೂ ಕೈ ಬಿಡುವುದಿಲ್ಲ ಎಂದರು.

ಕಳೆದ‌ ನಾಲ್ಕು ವರ್ಷಗಳಿಂದ ಯಾವುದೇ ಸಿನಿಮಾ ಸಮಾರಂಭಕ್ಕೆ ಹೋಗದ ಯಶ್ ಅವರು ನಮ್ಮ ಸಮಾರಂಭಕ್ಕೆ ಬಂದು ಚಿತ್ರದ ಟ್ರೈಲರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ. ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಈ. ಕೃಷ್ಣಪ್ಪ. ಯಶ್ ಅವರ ಸ್ವಾಗತಕ್ಕೆ ವಿಶೇಷ ವಿಡಿಯೋ ತುಣುಕು ಸಿದ್ದಪಡಿಸಿದ್ದ ನಿರ್ದೇಶಕ ಯೋಗರಾಜ್ ಭಟ್ ಅವರು ವೇದಿಕೆಯ ಮೇಲೂ ತಮ್ಮ ಪ್ರೀತಿ‌ ತುಂಬಿದ ಮಾತುಗಳಿಂದ ಯಶ್ ಅವರನ್ನು ಆತ್ಮೀಯವಾಗಿ‌ ಸ್ವಾಗತಿಸಿ,ಟ್ರೈಲರ್ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು. ʼಮನದ ಕಡಲುʼ ಈ ತಿಂಗಳ 28 ರಿಂದ ʼಜನರ ಕಡಲಾʼಗಲಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಅಂತಲೂ ಯೋಗರಾಜ್ ಭಟ್ ಹೇಳಿದರು.

ಈ ಸುದ್ದಿಯನ್ನೂ ಓದಿ | Star Summer Fashion Interview: ಸಮ್ಮರ್‌ ಕೂಲ್‌ ಔಟ್‌ಫಿಟ್ಸ್‌ನಲ್ಲಿ ನಟಿ ಜಯಶ್ರೀ ಆರಾಧ್ಯ ಸ್ಟೈಲಿಶ್‌ ಲುಕ್‌

ನಾಯಕ ಸುಮುಖ, ನಾಯಕಿಯರಾದ ರಾಶಿಕಾ ಶೆಟ್ಟಿ, ಅಂಜಲಿ ಅನೀಶ್‌,‌ ಸಹ ನಿರ್ಮಾಪಕ ಜಿ. ಗಂಗಾಧರ್, ಕಾರ್ಯಕಾರಿ ನಿರ್ಮಾಪಕ ಪ್ರತಾಪ್, ಸಂಗೀತ ನಿರ್ದೇಶಕ ವಿ. ಹರಿಕೃಷ್ಣ, ನೃತ್ಯ ನಿರ್ದೇಶಕ ಮುರಳಿ ಮಾಸ್ಟರ್ ಹಾಗೂ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಮುಂತಾದ ಚಿತ್ರತಂಡದ ಸದಸ್ಯರು ʼಮನದ ಕಡಲುʼ ಬಗ್ಗೆ ಮಾತನಾಡಿ, ಯಶ್ ಅವರಿಗೆ ವಿಶೇಷ ಧನ್ಯವಾದ ಹೇಳಿದರು.